ಅಥವಾ

ಒಟ್ಟು 21 ಕಡೆಗಳಲ್ಲಿ , 11 ವಚನಕಾರರು , 16 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀರುದ್ರಾಕ್ಷಿಯ ಹಸ್ತ ತೋಳು ಉರ ಕಂಠ ಮೊದಲಾದ ಸ್ಥಾನಂಗಳಲ್ಲಿ ಧರಿಸಿ, ಶಿವಾರ್ಚನೆಯ ಮಾಡುವುದು ಸದಾಚಾರ, ಅದೇ ಸದ್ಯೋನ್ಮುಕ್ತಿ. ಅದು ಕಾರಣ, ಆ ಮಹಾರುದ್ರಾಕ್ಷಿಯ ಧರಿಸಿ, ಎನ್ನ ಭವಂ ನಾಸ್ತಿಯಾತಿತ್ತು. ಮಹಾಲಿಂಗ ಕಲ್ಲೇಶ್ವರಾ, ರುದ್ರಾಕ್ಷಿಯಿಂದೆ ಕೃತಾರ್ಥನಾದೆನು.
--------------
ಹಾವಿನಹಾಳ ಕಲ್ಲಯ್ಯ
ಪರಶಿವನ ಜ್ಞಾನಚಕ್ಷುವಿನಲ್ಲಿ ಉದಯವಾದ ರುದ್ರಾಕ್ಷೆಯ ಹಸ್ತ ತೋಳು ಉರ ಕಂಠ ಕರ್ಣ ಮಸ್ತಕದಲ್ಲಿ ಧರಿಸಿದ ಶಿವಶರಣನೇ ರುದ್ರನು. ಆ ರುದ್ರಾಕ್ಷೆಯ ಜಪಿಸಿದಾತನೇ ಸದ್ಯೋನ್ಮುಕ್ತನು. ಇದು ಕಾರಣ, ಅಜ ಹರ ಸುರ ಮನು ಮುನೀಶ್ವರರು ಶ್ರೀವಿಭೂತಿ ರುದ್ರಾಕ್ಷೆಯನೆ ಧರಿಸಿ ಶಿವಲಿಂಗಾರ್ಚನೆಯ ಮಾಡುತ್ತಿಪ್ಪರು. ಪ್ರಮಥಗಣ ರುದ್ರಗಣ ಮುಖ್ಯವಾದ ಗಣಾದ್ಥೀಶ್ವರರು ವಿಭೂತಿ ರುದ್ರಾಕ್ಷೆಯನೆ ಧರಿಸಿ, ಪ್ರಣವ ಪಂಚಾಕ್ಷರಿಯನೆ ಜಪಿಸಿ, ಪ್ರಣವ ಸ್ವರೂಪಿಗಳಾಗುತ್ತಿಪ್ಪರು. ನೋಡಿದವರು ಮುಟ್ಟಿದವರು ಧರಿಸಿದವರು ಜಪಿಸಿದವರೆಲ್ಲ ಸಕಲ ಪ್ರಪಂಚನಳಿದು ಪರಶಿವ ಸ್ವರೂಪರಪ್ಪುದು ತಪ್ಪದು ನೋಡಾ. ಇದು ಕಾರಣ, ನಾನು ವಿಭೂತಿ ರುದ್ರಾಕ್ಷೆಯನೆ ಧರಿಸಿ, ಶಿವಲಿಂಗಾರ್ಚನೆಯನೆ ಮಾಡಿ ಪ್ರಣವ ಪಂಚಾಕ್ಷರಿಯನೆ ಜಪಿಸುತ್ತಿದ್ದೆನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಧರಿಸಿರೊ ಶ್ರೀ ರುದ್ರಾಕ್ಷಿಯ ಬಾಹು ಉರ ಕಂಠ ಕರ್ಣ ಮಸ್ತಕದಲ್ಲಿ ಒಲಿದು. ಪದ : ಹರನಕ್ಷಿ ಜಲದಲ್ಲುದಯವಾಗಿ ಮುನಿ ವರ ವಿಶ್ವಾಮಿತ್ರ ಗೌತಮ ವಶಿಷ್ಠರ ನೆರೆ ಮುಕ್ತರ ಮಾಡಿ ಕೈಲಾಸಪದದೊಳ ಗಿರಿಸುವ ಭಸಿತ ರುದ್ರಾಕ್ಷಿಯನೊಲಿದು. | 1 | ನೆತ್ತಿಯೊಳಗೆ ತ್ರಯ ಶಿಖಿಗೇಕ ಮೇಣ್ ಚಿತ್ತಸಮಸ್ತಕೆ ಧಾರಣಗಳು ಅದ ರೊತ್ತಿಲಿ ಕರ್ಣಕುಂಡಲಕೆ ಏಕೈ ಕೆಂದು ವಿಸ್ತರಿಸಿ ರುದ್ರಾಕ್ಷಿಯನೊಲಿದು. | 2 | ಕೊರಳೊಳು ಬತ್ತೀಸ ಉರದೊಳು ಮಹಾ ಸರ ಅಷ್ಟಶತಮಾಲೆಯನುವೆ ನೀವು ಕರಕಂಕಣಕೆ ದಶಬಾಹುಪೂರಕೆ ನೆರೆ ಷೋಡಶ ರುದ್ರಕ್ಷಿಯನೊಲಿದು. | 3 | ಕರದಂಘ್ರಿಮಾಲೆಗೆ ದಶವೇಕ ಮಹಾಜಪ ಸರ [ಕೂಡಿಕೊಂಡು ಲೇಸೆಂದು] ಮೇಣ್ ವಿರಚಿಸಿ ಶಿವಪೂಜೆಯನು ಮಾಡೆ ಕರ್ಮ ಗಿರಿಗೊಜ್ರವೆನಿಪ ರುದ್ರಾಕ್ಷಿಯನೊಲಿದು. | 4 | ಇನಿತು ತೆರದ ರುದ್ರಾಕ್ಷಿಯ ಮಹಾ ಘನವೆಂಬಲ್ಲಿ ಮುಕ್ತಿಯ ಸಾರ ತ್ರಿಣಯ ಸದ್ಗುರು ಪಡುವಿಡಿ ಸಿದ್ಧಮಲ್ಲನಾ ನೆನವ ತೋರುವ ತತ್ವಚಿಂತಾಮಣಿಯನೊಲಿದು. | 5 |
--------------
ಹೇಮಗಲ್ಲ ಹಂಪ
ಕೂಡಿದ ಧನವೆಲ್ಲವನು ಗುರುಲಿಂಗಜಂಗಮಕ್ಕೆ ವಂಚನೆಯ ಮಾಡಿ ಒಳಗಿಟ್ಟುಕೊಂಡು, ನೆಲನ ತೋಡಿ ಬಚ್ಚಿಟ್ಟುಕೊಂಡು. ಹಲವು ತೆರದ ಆಭರಣಂಗಳ ಮಾಡಿಸಿ, ಕರ ಚರಣ ಉರ ಕರ್ಣಂಗಳೊಳಗಿಟ್ಟುಕೊಂಡು, ಮತ್ತಿಷ್ಟು ಬದುಕಾಗಲೆಂದು ತನ್ನ ಕೈಯೊಳಗಿನ ಇಷ್ಟಲಿಂಗಕ್ಕೆ ಅಷ್ಟವಿಧಾರ್ಚನೆಯಂ ಮಾಡುವ ಲಿಂಗಪೂಜಕನ ಪರಿ ಎಂತೆಂದೊಡೆ; ಆ ಭಕ್ತನು ಪಂಚಾಬ್ಥಿಷೇಕದಿಂದ ಲಿಂಗಕ್ಕೆ ಮಜ್ಜನವ ನೀಡಿದಡೆ ಲಿಂಗದ ಚಿತ್ತದಲ್ಲಿ ಸುಣ್ಣ ನೀರನೆತ್ತಿ ಬಾಜಿಸಿದಂತಾಯಿತ್ತಯ್ಯಾ ! ಆ ಭಕ್ತನು ವಿಭೂತಿಯ ಧರಿಸಿದಡೆ ಲಿಂಗದ ಚಿತ್ತದಲ್ಲಿ ಬೂದಿಯ ಬೊಕ್ಕಣವ ಕಟ್ಟಿ ಬಾಜಿಸಿದಂತಾಯಿತ್ತಯ್ಯಾ ! ಆ ಭಕ್ತನು ಗಂಧವ ಧರಿಸಿದರೆ ಲಿಂಗದ ಚಿತ್ತದಲ್ಲಿ ಚಂಡಿಟ್ಟು ಬಾಜಿಸಿದಂತಾಯಿತ್ತಯ್ಯಾ ! ಆ ಭಕ್ತನು ಅಕ್ಷತೆಯನೇರಿಸಿದರೆ ಲಿಂಗದ ಚಿತ್ತದಲ್ಲಿ ಕಲ್ಲು ಹೊರಿಸಿ ಬಾದ್ಥಿಸಿದಂತಾಯಿತ್ತಯ್ಯಾ ! ಆ ಭಕ್ತನು ಪುಷ್ಪವ ಧರಿಸಿದರೆ ಲಿಂಗದ ಚಿತ್ತದಲ್ಲಿ ಬೆನ್ನ ಮೇಲೆ ಹೇರು ಹೊರಿಸಿದಂತಾಯಿತ್ತಯ್ಯಾ ! ಆ ಭಕ್ತನು ಧೂಪವ ಬೀಸಿದರೆ ಲಿಂಗದ ಚಿತ್ತದಲ್ಲಿ ಅರವನಿಕ್ಕಿ ಬಾದ್ಥಿಸಿದಂತಾಯಿತ್ತಯ್ಯಾ ! ಆ ಭಕ್ತನು ದೀಪಾರತಿಯನೆತ್ತಿದರೆ ಲಿಂಗದ ಚಿತ್ತದಲ್ಲಿ ಪಂಜುಗಳ್ಳರು ಬಂದು ಮೋರೆಯ ಸುಟ್ಟು ಬಾ[ದ್ಥಿ]ಸಿದಂತಾಯಿತ್ತಯ್ಯಾ ! ಆ ಭಕ್ತನು ಸ್ತೋತ್ರಮಂತ್ರವ ನುಡಿದರೆ ಲಿಂಗದ ಚಿತ್ತದಲ್ಲಿ ಕರ್ಣದೊಳಗೆ ತೊಣಚಿ ಹೊಕ್ಕು ಗೋಳಿಟ್ಟು ಬಾದ್ಥಿಸಿದಂತಾಯಿತ್ತಯ್ಯಾ ! ಇಂತಪ್ಪ ಲಿಂಗಬಾಧಕರನು ಲಿಂಗಪೂಜಕರೆನಬಹುದೆ ? ಆತನ ಅಂಗಳವ ಮೆಟ್ಟಬಹುದೆ ? ಇದರ ಇಂಗಿತವ ನಿಜಭಾವವುಳ್ಳ ಶರಣರು ನೀವೇ ತಿಳಿದು ನೋಡಿರೆಂದಾತ ನಮ್ಮ ಅಂಬಿಗರ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಪ್ರಾಣ ಅಪಾನ ವ್ಯಾನ ಉದಾನ ಸಮಾನ ನಾಗ ಕೂರ್ಮ ಕ್ರಕರ ದೇವದತ್ತ ಧನಂಜಯ - ಇಂತೀ ದಶವಾಯುಗಳು. ಅಲ್ಲಿ ಪ್ರಾಣವಾಯು ಇಂದ್ರನೀಲವರ್ಣ ಕಂಡದ ಅಧೋ ಭಾಗೆಯಲ್ಲಿರ್ದ ಹೃದಯ ಪಾದ ನಾಬ್ಥಿ ನಾಶಿಕವಧರಂಗಳಲ್ಲಿ ಉಚ್ಛಾ ್ವಸ ನಿಶ್ವಾಸಂಗಳಿಂದ ಚರಿಸುತ್ತಿಹುದು. ಅಪಾನವಾಯು ಇಂದ್ರಗೋಪವರ್ಣ, ವಾಯು ಶಿಶ್ನ ಉರ ಜಾನು ಪಾದ ಜಂಘೆ ನಾಬ್ಥಿಮೂಲ ಜಠರದಲ್ಲಿರ್ದು ಮಲ ಮೂತ್ರಂಗಳ ಪೊರಮಡಿಸುತ್ತಿಹುದು. ವ್ಯಾನವಾಯು ಗೋಕ್ಷೀರವರ್ಣ, ಕರ್ಣ ಅಕ್ಷಿ ಘ್ರಾಣ ಗಂಡಾಗ್ರ ಗುಲ್ಫಂಗಳಲ್ಲಿ ವರ್ತಿಸುತ್ತ ಹಿಡಿವುದು ಬಿಡುವುದು ಇವು ಮೊದಲಾದ ವ್ಯಾಪಾರಂಗಳ ಮಾಡುತ್ತಿಹುದು. ಉದಾನವಾಯು ಎಳೆಮಿಂಚಿನವರ್ಣ, ಹಸ್ತಪಾದಾ ಸರ್ವಸಂದುಗಳಲ್ಲಿರ್ದು ಸಂದು ಸಂದುಗಳಿಗೆ ಪಟುತ್ವಮಂ ಪುಟ್ಟಿಸುತ್ತಿಹುದು. ಸಮಾನವಾಯು ಶುದ್ಧ ಸ್ಫಟಿಕವರ್ಣ, ದೇಹ ಮಧ್ಯದಲ್ಲಿರ್ದು ಸರ್ವ ಸಂದುಗಳಲ್ಲಿ ವ್ಯಾಪಿಸಿಕೊಂಡು, ಕೊಂಡಂತಹ ಅನ್ನರಸವ ಸರ್ವಾಂಗಕ್ಕೆ ಸಮಾನವಂ ಮಾಡಿ ಅಷ್ಟಕೋಟಿ ರೋಮನಾಳಂಗಳಿಗೂ ಹಂಚಿಕ್ಕಿ ಅಂಗವಂ ಪೋಷಿಸುತ್ತಿಹುದು. ನಾಗವಾಯು ಬಾಲಸೂರ್ಯನ ವರ್ಣ, ಕಂಠಸ್ಥಾನದ್ಲರ್ದು ವದ್ರ್ಥಿ ನಿರೋಧಂಗಳಿಂದುದ್ಗಾರಮಂ ಮಾಡಿಸುತ್ತಿಹುದು. ಕೂರ್ಮವಾಯು ಕುಂದೇಂದುವಿನ ವರ್ಣ, ನೇತ್ರಮೂಲದಲ್ಲಿರ್ದು ಉನ್ಮೀಲನ ನಿಮೀಲನಾಡಿಗಳನು ಮಾಡುತ್ತಿಹುದು. ಕೃಕರವಾಯು ನೀಲವರ್ಣ ಕಾಯದಲ್ಲಿರ್ದು ಕ್ಷುಧಾ ಧರ್ಮಂಗಳಂ ಮಾಡುತ್ತಿಹುದು. ದೇವದತ್ತವಾಯು ಸ್ಫಟಿಕವರ್ಣ, ತಾಳಮೂಲದಲ್ಲಿರ್ದು ಅಗುಳಿಕೆಯಾರಡಿಗಳಂ ಪುಟ್ಟಿಸ್ಕ್ತುಹುದು. ಧನಂಜಯವಾಯು ಸಪ್ತ ಜಾಂಬೂನದ ವರ್ಣ, ಶೋಕರಾಗಂಗಳ ಪುಟ್ಟಿಸಿ ಹಾಡಿಸ್ಕ್ತುಹುದು. ಇಂತೀ ದಶವಾಯುಗಳ ದೇಹವನುದ್ಧರಿಸುತ್ತಿಹವು. ಈ ವಾಯುವನೇರಿ ಜೀವನು ಈಡಾಪಿಂಗಳ ಮಾರ್ಗದಲ್ಲಿ ವ್ಯವಹರಿಸುತ್ತಿಹನು. ಈ ವಾಯುಗ್ಕಯನರಿದು ಯೋಗಿಸುವುದೇ ಯೋಗ. ಕಪಿಲಸಿದ್ಧಮಲ್ಲಿಕಾರ್ಜುನನೆಂಬ ನಿಜವನೈದುವದೇ ಮಾರ್ಗವು
--------------
ಸಿದ್ಧರಾಮೇಶ್ವರ
ಆದಿಯನಾದಿ ಆಚಾರವ ಕಾಣದೆ, ಸಮಮಾನದ ಲಿಂಗದ ಘನವ ತಿಳಿಯದೆ, ದಾಸಿಯ ಸಂಗಂಗೆಯ್ವ ಜಂಗಮಾಚಾರ್ಯಜ್ಞಾನಪುರುಷರು ಚಿತ್ತೈಸಿ, ಶೈವಾರಾದನೆಯ ಸ್ಥಲದಂತೆ ನಡೆದು, ಗಳಹಿಕೊಂಡು ಇಪ್ಪಿರಿ. ಅಂಗದನಿತ ದಾಸೆಗೆ, ಪಂತಿಯ ಗಡಣದ ಹಸುವಿನಾಸೆಗೆ, ಕಾಂಚಾಣದ ಪಂತಿಯಾಸೆಗೆ, ಸ್ಥಲ ಜಂಗಮಸ್ಥಲವಾಸಿಯ ಗಡಣದಾಸೆಗೆ, ಪಂತಿ ಪಾದಾರ್ಚನೆಯ ಹಿರಿಯತನದ ಗಡಣ ಗಮಕದಾಸೆಗೆ, ಕೃತಿಯ ದ್ವೆ ೈತವ ನಟಿಸುವ ಪಂಚಮಹಾಪಾತಕದೇವರ ದೇವತ್ವದ ಬಲ್ಲರು ಕೇಳಿರಣ್ಣ. ನಾ ದೇವತಾದೇವನೆಂಬುದೊಂದು ಸಮದೇವತ್ವದ ಗಳಹುವಿರಿ. ಅಂಗದಲ್ಲಿ ಸೋವಿ ಮಾತ್ರವೆಂಬ ಸ್ತ್ರೀಯ ಆಲಿಂಗನಂಗೈದು ಗಳಹುವಿರಿ. ಶ್ರುತಿಃ ಅರ್ಧವಣಿ ಕಥಃ ಸೋವಿ ವಚಃ ಬಾದಿನಿ ಪರ್ವಣಃ | ಪಾಪಿಷ್ಟಾ ದುಷ್ಟದ್ರೋಹಿ ಚಾ ಪಾಪಿಷ್ಟ ಗುರುದ್ರೋಹಿ ಚಾ | ಗುರುಶಿವಚ್ಚೇದನ ತತ್ ಗುರುಷಾಮಾ ಚಿ ಅಪಹಿನ್ | ಗುರುಬಂಧನ ಗ್ರಾಹಿ ಚಃ | ಇಂತೆಂದುದಾಗಿ, ಸೋವಿಮಾತ್ರವೆಂದು ವಾಗದ್ವೈತವನುಂಟುಮಾಡಿ ಕಂಡು, ತಮ್ಮ ಸ್ವಯ ಇಚ್ಛೆಯ ಭಾವಕ್ಕೆ ಗಳಹಿಕೊಂಡು, ಹಿರಿಯರ ಮರೆಯಲ್ಲಿ ಕುಳಿತು, ಒಡಲ ಹೊರೆವ ಶೂಕರನಂತೆ, ತುಡುಗುಣಿತನಕ್ಕೆ ಗಡಣಿಸಿಕೊಂಡು ಹಿರಿಯರೆಂಬಿರಿ. ಶಿವಾಚಾರ ಃ ಗಿರಿಜಾನಾಥಂಗೆ ಗೌರಿ ತ್ರಿವಿಧವಿಧಮೇಕಾರ್ಥಕಲ್ಯಾಣ, ಗಿರಿಜಾಧಾರಿಯಲ್ಲಿ ಶಿವನ ದೇವತ್ವ ಕೆಟ್ಟಿತ್ತೆ ಪಾತಕರಿರಾ? ಸೋವಿಯ ಆಲಿಂಗನಂಗೈದು, ಚುಂಬನ ಕರ ಉರ ಜಘನ ಯೋನಿಚಕ್ರವ ಕೂಡಿ ನೆರೆದ ಬಳಿಕ, ಪ್ರಾತಃಕಾಲದಲ್ಲಿ ಹನ್ನೆರಡು ಜಂಗಮದೇವರಿಗೆ ಹನ್ನೆರಡು ಸುವರ್ಣಗಾಣಿಕೆಯನಿಕ್ಕಿ, ಹನ್ನೆರಡು ದ್ವಿವಸ್ತ್ರ, ಹನ್ನೆರಡು ತೆಂಗಿನಕಾಯಿಂದ ಹನ್ನೆರಡು ಜಂಗಮದೇವರಿಗೆ ಈ ಪರಿಯಾರ್ಥ ಅರ್ಚನೆಯ ಮಾಡಿದರೆ, ನವಭೋಗದೊಳಗಣ ತ್ರಿವಿಧ ಭಾಗೆಯ ಕಲೆಯಿರಣ್ಣ. ಅರಿದು ಮಾಡಿ ಮರದಂತೆ, ಬೆಬ್ಬನೆ ಬೆರೆತುಕೊಂಡಿರುವಾತ ಹಿರಿಯನಲ್ಲ. ಆತ ಗುರುವಲ್ಲ ಲಿಂಗವಲ್ಲ ಜಂಗಮವಲ್ಲ ಪಾದೋದಕ ಪ್ರಸಾದದೊಳಗಲ್ಲ. ಅವ ಅಮೇಧ್ಯ ಸುರ ಭುಂಜಕನು. ಇಂತೆಂಬ ಶ್ರುತಿಯ ಮೀರಿ ಆಚರಿಸುವ, ಬ್ರಹ್ಮರಾಕ್ಷಸ. ನವಕೋಟಿ ಯೋನಿಚಕ್ರದಲ್ಲಿ ರಾಟಾಳದ ಘಟದಂತೆ ತಿರುಗುವನು. ಆದಿಯ ವಚನದ ಸಮ್ಮತವಿದು, ಸೋವಿಯ ಸಂಗ ಆಲಿಂಗನಂಗೈವಿರಿ. ಸೋವಿಯ ಸಂಗ ಆಲಿಂಗನಂಗೈದವ, ಶತಕೋಟಿ ಶೂಕರಯೋನಿಯಲ್ಲಿ ಬಪ್ಪನು. ನವಕೋಟಿ ಗಾರ್ಧಭಯೋನಿಯಲ್ಲಿ ಬಪ್ಪನು. ಶತಕೋಟಿ ಕುಕ್ಕುಟಯೋನಿಯಲ್ಲಿ ಬಪ್ಪನು. ಸಚರಾಚರಯೋನಿ ಯೋನಿನವಕೋಟಿ ತಪ್ಪದು. ಅವಂಗೆ ಜನ್ಮ ಜನ್ಮಾಂತರದಲ್ಲಿ ಬಪ್ಪುದು ತಪ್ಪದು. ಇಂತಿದನರಿದು ಮರೆದೆಡೆ, ದೇವ ಮತ್ರ್ಯ ತಪರ್ಲೋಕಕ್ಕೆ ಸಲ್ಲಸಲ್ಲ, ಅಲ್ಲ ನಿಲ್ಲು, ಮಾಣು, ಹೊರಗಯ್ಯ. ನಿಮ್ಮಾಣೆ, ನಿಮ್ಮ ಪ್ರಮಥರಾಣೆ, ಹೊಯ್ಯೋ ಡಂಗುರವ, ದೇವರಾಯ ಸೊಡ್ಡಳಾ.
--------------
ಸೊಡ್ಡಳ ಬಾಚರಸ
ಸದ್ಯೋಜಾತ ವಾಮದೇವ ಅಘೋರ ತತ್ಪುರುಷ ಈಶಾನ್ಯವೆಂಬ ಪರಶಿವನ ಪಂಚಮುಖವೆ ಪಂಚಕಳಸವೆಂದಿಕ್ಕಿ, ಹಸೆ-ಹಂದರದ ನಡುವೆ, ಶಿವಗಣಂಗಳ ಮಧ್ಯದಲ್ಲಿ ದೀಕ್ಷವನಿತ್ತು, ದೀಕ್ಷವೆಂಬೆರಡಕ್ಷರದ ವರ್ಮವನರುಹಿದ. ದೀಕಾರವೆ ಲಿಂಗಸಂಬಂಧವೆಂದು, ಕ್ಷಕಾರವೆ ಮಲತ್ರಯಂಗಳ ಕಳೆವುದೆಂದು ಅರುಹಿದ. ಸಾಕ್ಷಿ :``ದೀಯತೇ ಲಿಂಗಸಂಬಂಧಃ ಕ್ಷೀಯತೇ ಚ ಮಲತ್ರಯಂ | ದೀಯತೇ ಕ್ಷೀಯತೇ ಚೈವ ಶಿವದೀಕ್ಷಾಭಿಧೀಯತೇ ||'' ಎಂದುದಾಗಿ, ದೀಕ್ಷದ ವರ್ಮವನರುಹಿ, ಅರುಹೆಂಬ ಸೂತ್ರವ ಹಿಡಿಸಿ, ಮರವೆಂಬ ಮಾಯವ ಕಳೆದು, ಹಸ್ತಮಸ್ತಕ ಸಂಯೋಗ ಮಾಡಿ, ನೆತ್ತಿಯೊಳಿಹ ಪರಬ್ರಹ್ಮವಸ್ತುವ ಇಂತೆನ್ನ ಕರ ಉರ ಶಿರ ಮನ ಜ್ಞಾನದೊಳು ನೆಲೆಗೊಳಿಸಿ, ಪ್ರಣವಮಂತ್ರವ ಕರ್ಣದಲ್ಲಿ ಹೇಳಿ, ಮಾಂಸಪಿಂಡವ ಕಳೆದು ಮಂತ್ರಪಿಂಡವ ಮಾಡಿದ ಗುರು ಪರಮಾತ್ಮನಲ್ಲದೆ ನರನೆನಬಹುದೇ ? ಎನಲಾಗದು. ಎಂದರೆ ಕುಂಭೀ ನಾಯಕ ನರಕದಲ್ಲಿಕ್ಕುವ ನಮ್ಮ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಸದ್‍ಭಕ್ತನ ಸತ್ಕ್ರಿಯವೆ ಗುರುವೆನಿಸಿ, ಮಂಗಳ ಅಂಗಪೀಠದ ಮುಹೂರ್ತಗೊಂಡ ಹರರೂಪವೇ ಲಿಂಗವೆನಿಸಿ, ಲಿಂಗನ ಪೂಜಿಸುವ ಸದಾಚಾರವೇ ಜಂಗಮವೆನಿಸಿ, ಪಾದ್ಯದಲ್ಲಿ ಪಾದೋದಕವಾಗಿ, ಜಿಹ್ವೆಯಲ್ಲಿ ಪ್ರಸಾದವಾಗಿ, ಲಲಾಟದಲ್ಲಿ ವಿಭೂತಿಧಾರಣವಾಗಿ, ಉರ, ಸಿರ, ಕಂಠದಲ್ಲಿ ಶಿವಾಕ್ಷಿಮಣಿಯೆನಿಸಿ, ಶ್ರೋತ್ರದಲ್ಲಿ ಮಂತ್ರವಾಗಿ ಇಂತು ಇವು ಬಾಹ್ಯ ಅಷ್ಟಾವರಣದ ಕ್ರಮವೆನಿಸಿತ್ತು. ಇನ್ನು ಅಂತರಂಗದಿ ಆತ್ಮನ ಅರುವೆ ಗುರುವೆನಿಸಿತ್ತು. ಪ್ರಾಣವೆ ಲಿಂಗವಾಗಿ ತೋರಿತ್ತು. ಪರಿಪೂರ್ಣ ಪರವಸ್ತುವಿನ ಜ್ಞಾನವೆ ಜಂಗಮವೆನಿಸಿತ್ತು. ಜಿಹ್ವಾಗ್ರವೇ ಪಾದೋದಕವಾಗಿ, ನಾಶಿಕವೆ ಪ್ರಸಾದವಾಗಿ, ತ್ವಕ್ಕಿನಲ್ಲಿ ಶ್ರೀವಿಭೂತಿ, ನೇತ್ರದಲ್ಲಿ ಪರಾಕ್ಷಮಣಿ, ಕರ್ಣದ್ವಾರದೊಳು ಮೊಳಗುವ ಮಂತ್ರದಿಂದೆ ಕೂಡಿಕೊಂಡ ಈ ಪರಿಯೇ ಅಂತರಾತ್ಮಷ್ಟಾವರಣವೆನಿಸಿತು. ನೀನೊಂದು ಇದ್ದು ಇಂತುಪರಿಯಲ್ಲಿ ಪೂಜೆ ಪೂಜಕ ಪೂಜ್ಯನೆನಿಸಿ ಮೆರೆದಿಯಲ್ಲಾ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಅಜ್ಞಾನ ವಶೀಕೃತರಾದವರು ಷಡುದರುಶನಂಗಳಲ್ಲಿ ಹೊಕ್ಕು ಪರದೈವಂಗಳ ಲಾಂಛನ ಮುದ್ರೆಯಪ್ಪ ಶಂಖ ಚಕ್ರ ಅಂಕುಶ ಪಾಶ ಗದಾದಿಯಾದವರಿಂದ ಶ್ರೇಷೊ*ೀಪದೇಶವೆಂದು ಕರ ಬಾಹು ಭುಜ ಉರ ಲಲಾಟ ಮೊದಲಾದ ಅವಯವಂಗಳಲ್ಲಿ ರಚಿಸಲ್ಪಟ್ಟವರಾಗಿ ದಹನಾಂಕ ಲೇಖನವಾದವರು ಷಡುದರ್ಶನ ಬ್ರಾಹ್ಮಣರಲ್ಲ. ಅದಂತೆಂದಡೆ: ಯಮಸ್ಮೈತಿಯಲ್ಲಿ :ನಾಂಕಯೇತ್ತಸ್ಯ ದೇಹೇಷು ದೇವತಾಯುಧಲಾಂಛನಂ ದಹನಾಲ್ಲೇಖನಾದ್ವಿಪ್ರಃ ಪಾತ್ಯಯಂತಿ ಲಕ್ಷಣಾತ್_ ಎಂದುದಾಗಿ ಯಜ್ಞವೈಭವ ಕಾಂಡದಲ್ಲಿ_ ಕೇನ ಚಿಹ್ನಾಂಕಿತೋ ಮತ್ರ್ಯೋ ನ ಸಾಕ್ಷೀ ಸರ್ವತೋ ಭವೇತ್ ಶ್ರೌತಾರ್ಥೇಷು ಸದಾಚಾರೇ ನಾಧಿಕಾರೀ ಚಲಾಂಕಿತಃ_ಎಂದುದಾಗಿ ಇಂತಪ್ಪ ಪಾಷಂಡಿ ಪತಿತ ನರಕ ಜೀವಿಗಳಿಗೆ ಶಾಸ್ತ್ರಾರ್ಥಾದಿಯಾದ ಸದಾಚಾರಂಗಳಲ್ಲಿ ದೈವಕರ್ಮಂಗಳಲ್ಲಿ ಅಧಿಕಾರತ್ವವಿಲ್ಲವಾಗಿ ನರಕವನೈದುವರು ಕಾಣಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಶೀಲವಂತರು, ಶೀಲವಂತರು ಎಂಬರು ಶೀಲವಂತಿಕೆಯನಾರು ಬಲ್ಲರು ಹೇಳಾ ? ನೆಲಕೆ ಶೀಲ ಶೀಲವೆಂಬೆನೆ ? ಹೊಲೆ ಹದಿನೆಂಟುಜಾತಿ ನಡೆ ನುಡಿವುದಕ್ಕೆ ಒಂದೆಯಾಯಿತ್ತು . ಜಲಕೆ ಶೀಲವೆಂಬೆನೆ ? ವಿೂನ ಮೊಸಳೆಗಳು ಖಗಮೃಗಂಗಳು ನಿಂದೆಂಜಲು. ಬೆಳೆಗೆ ಶೀಲವೆಂಬೆನೆ ? ಎತ್ತು ಕತ್ತೆ ತಿಂದು ಮಿಕ್ಕ ಎಂಜಲು. ಹೊನ್ನಿಗೆ ಶೀಲವೆಂಬೆನೆ ? ಉರ ಹೊರೆಯಾಗಿಪ್ಪುದು. ಹೆಣ್ಣಿಗೆ ಶೀಲವೆಂಬೆನೆ ? ಕಣ್ಣುಗೆಡಿಸಿ ಕಾಡುತಿಪ್ಪುದು. ಇನ್ನಾವುದು ಶೀಲ ಹೇಳಿರಣ್ಣಾ ? ಇದಕ್ಕೆ ಒಳಗಾದವರೆಲ್ಲ ದುಃಶೀಲರು. ಇದ ಹಿಡಿದು ಹಿಡಿಯದೆ, ಬಿಟ್ಟು ಬಿಡದೆ. ತನ್ನ ಮನಕ್ಕೆ ಶೀಲವಾಗಿಪ್ಪುದೆ ಅಚ್ಚಶೀಲ ಕಾಣಾ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಹಸ್ತ ತೋಳು ಉರ ಕಂಠ ಕರ್ಣ ಮಸ್ತಕದಲ್ಲಿ ರುದ್ರಾಕ್ಷಿಯ ಧರಿಸಿಪ್ಪ ಸದ್ಭಕ್ತನೆ ರುದ್ರನು ನೋಡಾ. ಅದೆಂತೆಂದಡೆ; ಹಸ್ತೇ ಚೋರಸಿ ಕಂಠೇ ವಾ ಮಸ್ತಕೇ ವಾಪಿ ಧಾರಯೇತ್ ಮುಚ್ಯತೇ ಸರ್ವಪಾಪೇಭ್ಯಃ ಸ ರುದ್ರೋ ನಾತ್ರ ಸಂಶಯಃ ಇಂತೆಂದುದಾಗಿ, ಸಮಸ್ತ ಪಾಪಂಗಳ ಕಳೆದು, ಕೂಡಲಸಂಗಯ್ಯ ತನ್ನಂತೆ ಮಾಡುವನು
--------------
ಬಸವಣ್ಣ
ಸುಜ್ಞಾನಸ್ವರೂಪ ಶಿಷ್ಯನ ಮುಂದೆ ತೋರುವ ಪರಮಶಾಂತ ಪರಿಪೂರ್ಣಯ್ಯನಿಂದ, ಘನಮಹದೈಶ್ವರ್ಯ ಕರುಣಕಟಾಕ್ಷವೆಂಬ ಚಿದ್ರುದ್ರಾಕ್ಷಿಯು ಸಗುಣ ನಿರ್ಗುಣ ನಿಜ ಸಮರಸಾನಂದದೊಳಗೆಸಗೆಗೈದ ಬಳಿಕ, ಆನು ಅನ್ಯವಾದಾಭರಣಂಗಳನರಿಯದೆ ಅಪ್ರತಿಮಲಿಂಗಸನ್ನಿಹಿತನಾಗಿರ್ದು, ಕರದ್ವಂದ್ವ, ದ್ವಯತೋಳು, ಉರ, ಶಿಖೆಯು, ಮಸ್ತಕ, ಕರ್ಣದಲ್ಲಿ ಧರಿಸಿ ಗುರುನಿರಂಜನ ಚನ್ನಬಸವಲಿಂಗದಲ್ಲಿ ಪರಮಪರಿಣಾಮದಲ್ಲಿ ಓಲಾಡುತಿರ್ದೆನು.
--------------
ದೇಶಿಕೇಂದ್ರ ಸಂಗನಬಸವಯ್ಯ
ಶಿರದೊಳು ಧರಿಸಲು ಕೋಟಿ ಫಲ ಕರ್ಣದೊಳು ಧರಿಸಲು ದಶಕೋಟಿ ಫಲ ಕೊರಳೊಳು ಧರಿಸಲು ಶತಕೋಟಿ ಫಲ. ಬಾಹುವಿನೊಳು ಧರಿಸಲು ಸಾವಿರ ಫಲವೆಂದಿಹುದು ದೃಷ್ಟ. ಸಾಕ್ಷಿ : ``ಶಿರಸಾ ಧಾರಣಾತ್ಕೋಟಿ ಕರ್ಣಯೋರ್ದಶಕೋಟಿ ಚ | ಶತಂ ಕೋಟಿ ಗಳೇ ಬದ್ಧಂ ಸಾಹಸ್ರಂ ಬಾಹುಧಾರಣಾತ್ ||'' ಎಂದುದಾಗಿ, ಹಸ್ತ ಬಾಹು ಉರ ಕಂಠ ಕರ್ಣ ಮಸ್ತಕದಲ್ಲಿ ಶ್ರೀ ರುದ್ರಾಕ್ಷಿಯ ಧರಿಸಿ ನಿತ್ಯ ಮುಕ್ತನಾಗಿದ್ದೆನು ಕಾಣಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಗುರು ಕರುಣಾಕರ ಪರಶಿವ ಪರಮ ಗುರು ಭವಹರ ಚಿನ್ಮಯ ಚಿದ್ರೂಪ ಗುರುವೆ ನಿರಂಜನ ನಿರ್ಮಳ ನಿಃಖಳಗುರುವೆ ಸುರತುರವೆ. ಪದ :ವಹ್ನಿ ವಿಪಿನ ತರು ಕಾಷ*ವ ಸುಡುವಂ ತೆನ್ನ ಭವದ ಗೊಂಡಾರಣ್ಯವ ನೆನ್ನಯ ಗುರುಕರುಣಗ್ನಿಯಲ್ಲಿ ಉರುಹಿ ಮುನ್ನಿನ ಸುಕೃತದ ದೆಸೆಯಲಿ ಗುರುಕೃಪೆ ಅನ್ಯಥಾ ಭಾಗ್ಯವ ಪಡೆದೆನು ಪರುಷದ ಸನ್ನಿಧಿಯಲಿಹ ಲೋಹ ಪರಿಗು ಸಯುಕ್ತ. | 1 | ಅಂಗಾತ್ಮನ ಪ್ರಾಣನ ಭವಿತನಗಳ ಹಿಂಗಿಸಿ ಅವಿರಳ ಪರಬ್ರಹ್ಮದ ಮಹಾ ಲಿಂಗವ ಕರ ಉರ ಶಿರ ಮನ ಭಾವದಲ್ಲಿ ಸಂಗವ ಮಾಡಿಯೆ ಪ್ರಕೃತಿ ವಿಕೃತಿ ವಿಷ ಯಂಗಳನೆಲ್ಲವ ತೊರಸಿ ಗಣಂಗಳ ಡಿಂಗರಿಗನ ಮಾಡಿದೆನ್ನಯ ಗುರುಮಹಿಮೆ. | 2 | ದುರ್ಲಿಖಿತಂಗಳ ತೊಡೆದು ವಿಭೂತಿ ಧರಿಸ ಕಲಿಸಿ ಫಣಿಯೊಳು ರುದ್ರಾಕ್ಷಿಯ ಸರಮಾಲೆಯ ತೊಡಕಲಿಸಿ ಷಡ ಕ್ಷರಿಯ ಸ್ಮರಿಸ ಕಲಿಸಿ `ಶಿವಧ್ಯಾನವ ಹಿಂಗದ ಲಿರು ನೀ ಕಂದಾ' ಯೆಂದು ಅಭಯಕರ ಶಿರದೊಳು ಮಡುಗಿಯೆ ಸಲುಹಿದ ಗುರು ನಿತ್ಯ. | 3 | ರಂಬಿಸಿ ನಿಲ್ಲದಳುವಿಂಗೆ ಕಂದೆಗೆ ಮೇಣ್ ರಂಭೆ ಸ್ತನವನೂಡಿಯೆ ಸಲಹುವ ತೆರ ಹಂಬಲಿಸಿ ಭಯಪಡುತಿಹಗೆ ಸೂರ್ಯ ನೀನೆ ಶಂಭು ಚರಣತೀರ್ಥಪ್ರಸಾದವ ನುಂಬಕಲಿಸಿಯೆ ಅನ್ಯಹಾರದ ಬೆಂಬಳಿಗಳ ಕೆಡಿಸಿದೆನ್ನಯ ಗುರು ಮಹಿಮೆ. | 4 | ಮಾಡಕಲಿಸಿದ ಲಿಂಗದ ಸೇವೆಯ ಸದಾ ನೀಡಕಲಿಸಿದ ಜಂಗಮಕಮೃತಾನ್ನವ ಬೇಡಕಲಿಸಿ ಮುಕ್ತಿಯ ಫಲಪದವ ಗೂಡಕಲಿಸಿ ಶಿವಾನಂದದಾ ಲೀಲೆಯೊ ಳಾಡಕಲಿಸಿ ನಿಜ ನಿತ್ಯ ನಿರ್ಮಳನ ಮಾಡಿದ ಗುರುವರ ಸಿದ್ಧಮಲ್ಲೇಶಾ | 5 |
--------------
ಹೇಮಗಲ್ಲ ಹಂಪ
ಅರಿದೆನೆಂಬ ಅರಿವಿಂಗೆ ಅರಿಯಬಾರದ ಅವಿರಳ ಲಿಂಗವ ಕರ ಕಕ್ಷ ಉರ ಸಜ್ಜೆ ಉತ್ತುಮಾಂಗ ಮುಖಪೀಠವಮಳೋಕ್ಯವೆಂಬಾರಂಗ ಸಂಗಸಮರಸದಲ್ಲಿಪ್ಪ ಪರಮ ಶರಣಂಗೆ ನರನೆಂಬ ನಾಯಮನುಜರನೇನೆಂಬೆನಯ್ಯಾ. ನಿರವಯಗಮಿತರಂತಿರಲಿ ; ಪರಶಿವನಂಗದಲ್ಲುದಯವಾದ ಶರಣಂಗೆ ಪರಶಿವನೆನ್ನ ಬೇಕಲ್ಲದೆ ಅಂತಿತೆನ್ನಬಾರದು ಕಾಣಾ ಗುರುನಿರಂಜನ ಚನ್ನಬಸವಲಿಂಗ ಸಾಕ್ಷಿಯಾಗಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಇನ್ನಷ್ಟು ... -->