ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರುಷರಸ ಸೋಂಕಿದಲ್ಲಿ ಲೋಹಕ್ಕಿದಿರೆಡೆ ಉಂಟೆ ? ಸಿಂಧುವೊಳಕೊಂಡ ದ್ರವ್ಯಕ್ಕೆ ಋತುಕಾಲ ವೈಶಾಖಮಾಸಂಗಳಲ್ಲಿ ಜಲವಿಂಗಲು ಮತ್ತೆ ಕಂಡೆಹೆವೆನಲುಂಟೆ ? ಸರ್ವಸಂಗಪರಿತ್ಯಾಗವ ಮಾಡಿದ ಯೋಗಿ ತಂದೆ ತಾಯಿ ಸಹೋದರ ಬಂಧುಗಳೆಂದು ಪಕ್ಷವ ಅಂಗೀಕರಿಸಿದಡೆ ತ್ರಿಭಂಗಿಯ ಭುಂಜಿಸಿದವ ಮರವೆಯ ಸುರಾಪಾನವ ಅಂಗೀಕರಿಸಿದವ, ಆತ ಲಿಂಗಾಂಗಿಯಲ್ಲ. ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗಕ್ಕೆ ಸಲ್ಲ.
--------------
ಪ್ರಸಾದಿ ಭೋಗಣ್ಣ
ಋತುಕಾಲ ತಪ್ಪಿದ ಕೋಗಿಲೆಯಂತೆ ನುಡಿಯದಂತಿರ್ದಳಲ್ಲಾ! ಪರಿಮಳ ತಪ್ಪಿದ ಭ್ರಮರನಂತೆ ಸುಳಿಸುಳಿಗೊಳುತಿರ್ದಳಲ್ಲಾ! ಫಲವು ತಪ್ಪಿದ ಬಂಜೆ ಬನದೊಳಗಣ ಅರಗಿಳಿಯಂತಿರ್ದಳಲ್ಲಾ! ಧುರಭಾರದ ಜವ್ವನದಲ್ಲಿ ತೋರಣದೆಲೆಯಂತೆ ಮಹಾಲಿಂಗ ಗಜೇಶ್ವರನ ನೆರೆವ ಭರದಿಂದ ಅಳಿಕಾವೃದ್ಧೆಯಾಗಿರ್ದಳಲ್ಲಾ!
--------------
ಗಜೇಶ ಮಸಣಯ್ಯ
-->