ಅಥವಾ

ಒಟ್ಟು 20 ಕಡೆಗಳಲ್ಲಿ , 10 ವಚನಕಾರರು , 16 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಗೆ ಇಂದ್ರನೀಲಲಿಂಗ, ಬ್ರಹ್ಮಂಗೆ ಶೈಲಲಿಂಗ, ಶಕ್ರಂಗೆ ಮಣಿಮಯಲಿಂಗ, ಸೂರ್ಯಂಗೆ ತಾಮ್ರಲಿಂಗ, ಸೋಮಂಗೆ ಮೌಕ್ತಿಕಲಿಂಗ, ಕುಬೇರಂಗೆ ಹೇಮಲಿಂಗ, ನಾಗರ್ಕಳಿಗೆ ಪವಳದ ಲಿಂಗ, ಅಷ್ಟವಸುಗಳಿಗೆ ಕಂಚಿನ ಲಿಂಗ, ವರುಣಂಗೆ ರತ್ನದ ಲಿಂಗ, ನೈರುತ್ಯಂಗೆ ಪರುಷದ ಲಿಂಗ, ವಾಯವ್ಯಗೆ ಹಿತ್ತಾಳಿಯ ಲಿಂಗ, ಕಾಮಂಗೆ ಕುಸುಮ ಲಿಂಗ, ಋಷಿಗಳಿಗೆ ಪರ್ವತದ ಲಿಂಗ, ಅಸುರರಿಗೆ ಕಬ್ಬುನದ ಲಿಂಗ, ದಶರಥಗೆ ಸುವರ್ಣದ ಲಿಂಗ, ಅಶ್ವಿನಿಗೆ ಕರಪಾತ್ರೆಯ ಲಿಂಗ, ಅಂತಕಂಗೆ ಪರಿಪರಿಯ ಲಿಂಗ, ಗಾಯತ್ರಿಗೆ ಮರಕತದ ಲಿಂಗ, ಚಾಮುಂಡಿಗೆ ವಜ್ರದ ಲಿಂಗ, ಭೂದೇವಿಗೆ ಪಚ್ಚದ ಲಿಂಗ, ದುರ್ಗಿಗೆ ಕನಕದ ಲಿಂಗ, ಸಪ್ತಮಾತೃಕೆಯರಿಗೆ ಮಳಲ ಲಿಂಗ, ಇದೆಂತೆಂದಡೆ: ಇಂದ್ರನೀಲಮಯಂ ಲಿಂಗಂ ವಿಷ್ಣುಃ ಪೂಜಯತೇ ಸದಾ ವಿಷ್ಣುತ್ವಂ ಪ್ರಾಪ್ಯತೇ ತೇನ ಸಾದ್ಭುತೈಕಂ ಸನಾತನಂ ಬ್ರಹ್ಮಾ ಪೂಜಯತೇ ನಿತ್ಯಂ ಲಿಂಗಂ ಶೈಲಮಯಂ ಶುಭಂ ತಸ್ಯ ಸಂಪೂಜನಾದೇವ ಪ್ರಾಪ್ತಂ ಬ್ರಹ್ಮತ್ವಮುತ್ತಮಂ ಶಕ್ರೋ[s]ಪಿ ದೇವ ರಾಜೇಂದ್ರೋ ಲಿಂಗಂ ಮೃಣ್ಮಯಂ ಶುಭಂ ಭಕ್ತ್ಯಾ ಪೂಜಯತೇ ನಿತ್ಯಂ ತೇನ ಶಕ್ರತ್ವಮಾಪ್ನುಯಾತ್ ತಾಮ್ರಲಿಂಗಂ ಸದಾಕಾಲಂ ಭಕ್ತ್ಯಾ ದೇವೋ ದಿವಾಕರಃ ತ್ರಿಕಾಲಂ ಯಜತೇ ತೇನ ಪ್ರಾಪ್ತಂ ಸೂರ್ಯತ್ವಮುತ್ತಮಂ ಮುಕ್ತಾಫಲಮಯಂ ಲಿಂಗಂ ಸೋಮಃ ಪೂಜಯತೇ ಸದಾ ತೇನ ಸೋಮೇನ ಸಂಪ್ರಾಪ್ತಂ ಸೋಮತ್ವಂ ಸತತೋಜ್ವಲಂ ಲಿಂಗ ಹೇಮಮಯಂ ಕಾಂತಂ ಧನದೋ[s]ರ್ಚಯತೇ ಸದಾ ತೇನ ಸಾಧನತೋ ದೇವಃ ಧನದತ್ವಮವಾಪ್ತವಾನ್ ವಸವಃ ಕಾಂಸ್ಯಕಂ ಲಿಂಗಂ ಪೂಜ್ಯ ಕಾಮಾನವಾಪ್ನುಯಾತ್ ನಾಗಾಃ ಪ್ರವಾಳಜಂ ಲಿಂಗಂ ಪೂಜ್ಯ ರಾಜ್ಯಾನಿ ಲೇಬ್ಥಿರೇ ಲಿಂಗಂ ರತ್ನಮಯಂ ಚಾರು ವರುಣೋಡಿರ್ಚಯತೇ ಸದಾ ತೇನ ತದ್ವರುಣತ್ವಂ ಹಿ ಪ್ರಾಪ್ತಂ ಭದ್ರಸಮನ್ವಿತಂ ಲಿಂಗಮಧ್ಯೇ ಜಗತ್ಸರ್ವಂ ಸರ್ವಂ ಲಿಂಗೇ ಪ್ರತಿಷ್ಠಿತಂ ತಸ್ಮಾತ್ ಸಂಪೂಜಯೇಲ್ಲಿಂಗಂ ಯದಿ ಚೇತ್ಸಿದ್ಧಿಮಾತ್ಮನಃ ಐವಂ ದೇವಾಶ್ಚ ಗಂಧರ್ವಾ ಯಕ್ಷೋರಗರಾಕ್ಷಸಾಃ ಪೂಜಯಂತಿ ಸದಾಕಾಲಮೀಶಾನಂ ಸುರನಾಯಕಂ ಬ್ರಹ್ಮಾವಿಷ್ಣುಸ್ತಥಾ ಶಕ್ರೋ ಲೋಕಪಾಲಾಶ್ಚ ದೇವತಾಃ ಲಿಂಗಾರ್ಚನರತಾ ಹ್ಯೇತೇ ಮಾನುಷೇಷು ಚ ಕಾ ಕಥಾ ? ಇಂತೆಂದುದಾಗಿ ಸುರಪ ಹರಿ ವಿರಂಚಿ ಗಂಧರ್ವ ಯಕ್ಷ ರಾಕ್ಷಸ ಋಷಿ ದೇವತೆಗಳೆಲ್ಲರೂ ಲಿಂಗವ ಪೂಜಿಸಿ ಇಷ್ಟಕಾಮ್ಯಸಿದ್ಧಿಯ ಪಡೆದು ಭವಭಾರಿಗಳಾದರು. ಸೌರಾಷ್ಟ್ರ ಸೋಮೇಶ್ವರನ ಶರಣರು ಫಲಪದಂಗಳ ಮೀರಿ ಅರಿಕೆಯರತು ಬಯಕೆ ಬರತು ಹುಟ್ಟುಗೆಟ್ಟು ಭವಹಿಂಗಿ ಅಭಂಗರಾದರು
--------------
ಆದಯ್ಯ
ನರರು ಸುರರು ನವಕೋಟಿಯುಗಗಳ ಪ್ರಳಯಕ್ಕೆ ಒಳಗಾಗಿ ಹೋದರು, ಒಳಗಾಗಿ ಹೋಹಲ್ಲಿ ಸುರಪತಿಗೆ ಪರಮಾಯು ನೋಡಿರೆ ! ಅಂಥ ಸುರಪತಿ ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ, ಚಿಟ್ಟಜನೆಂಬ ಋಷಿಗೆ ಒಂದು ಚಿಟ್ಟು ಸಡಿಲಿತ್ತು ನೋಡಿರೆ ! ಅಂಥ ಚಿಟ್ಟನೆಂಬ ಋಷಿ ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ ಚಿಪ್ಪಜನೆಂಬ ಋಷಿಗೆ ಒಂದು ಚಿಪ್ಪು ಸಡಿಲಿತ್ತು ನೋಡಿರೆ ! ಅಂಥ ಚಿಪ್ಪಜನೆಂಬ ಋಷಿ ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ ಡೊಂಕಜನೆಂಬ ಋಷಿಗೆ ಒಂದು ಡೊಂಕು ಸಡಿಲಿತ್ತು ನೋಡಿರೆ ! ಅಂಥ ಡೊಂಕಜನೆಂಬ ಋಷಿ ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ ರೋಮಜನೆಂಬ ಋಷಿಗೆ ಒಂದು ರೋಮ ಸಡಿಲಿತ್ತು ನೋಡಿರೆ ! ಅಂಥ ರೋಮಜನೆಂಬ ಋಷಿ ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ ಆದಿಬ್ರಹ್ಮಂಗೆ ಆಯುಷ್ಯವು ನೂರಾಯಿತ್ತು ನೋಡಿರೆ ! ಅಂಥ ಆದಿಬ್ರಹ್ಮ ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ ಆದಿನಾರಾಯಣಂಗೆ ಒಂದು ದಿನವಾಯಿತ್ತು ನೋಡಿರೆ ! ಅಂಥ ಆದಿ ನಾರಾಯಣ ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ ರುದ್ರಂಗೆ ಕಣ್ಣೆವೆ ಹಳಚಿತ್ತು ನೋಡಿರೆ ! ಅಂಥ ರುದ್ರರು ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ ಫಣಿಮುಖರೊಂದು ಕೋಟಿ, ಪಂಚಮುಖರೊಂದು ಕೋಟಿ, ಷಣ್ಮಮುಖರೊಂದು ಕೋಟಿ, ಸಪ್ತಮುಖರೊಂದು ಕೋಟಿ ಅಷ್ಟಮೂಖರೊಂದು ಕೋಟಿ, ನವಮುಖರೊಂದು ಕೋಟಿ ದಶಮುಖರೊಂದು ಕೋಟಿ_ ಇಂತಿವರೆಲ್ಲರ ಕೀರೀಟದಾಭರಣಂಗಳು ಬಿದ್ದವು ನೋಡಿರೆ ! ಅಂಥ ಸಪ್ತಕೋಟಿಗಳು ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ ನಂದಿವಾಹನರೊಂದು ಕೋಟಿ, ಭೃಂಗಿ ಪ್ರಿಯರೊಂದು ಕೋಟಿ ಚಂದ್ರಪ್ರಿಯರೊಂದು ಕೋಟಿ_ ಇಂತೀ ತ್ರಿಕೋಟಿಗಳ ತಲೆಗಳು ಬಾಗಿದವು ನೋಡಿರೆ ! ಅಂಥ ತ್ರಿಕೋಟಿಗಳ ತಲೆಗಳು ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ ಕೂಡಲಚೆನ್ನಸಂಗಯ್ಯಾ ನಮ್ಮ ಬಸವಣ್ಣನೀ ಸುದ್ದಿಯನೇನೆಂದುವರಿಯನು
--------------
ಚನ್ನಬಸವಣ್ಣ
ಶ್ರೀಗುರುಲಿಂಗಜಂಗಮದ ಚರಣ ಸೋಂಕಿನಿಂ ಪವಿತ್ರವಾದ ಚಿದ್ಭಸಿತವ ಧರಿಸಿದವರಿಗೆ ಬಹುಜನ್ಮ ಪಾಪದೋಷವ ತೊಡವುದಯ್ಯ. ಶ್ರೀ ವಿಭೂತಿಯ ಧರಿಸಿದವರಿಗೆ ಅಜ್ಞಾನದ ಪಾಶವ ಹರಿವುದಯ್ಯ. ಶ್ರೀ ವಿಭೂತಿಯ ಧರಿಸಿದವರಿಗೆ ಸಮಸ್ತ ಜನವಶ್ಯ ರಾಜವಶ್ಯವ ಕೊಡುವುದಯ್ಯ. ಶ್ರೀ ವಿಭೂತಿಯ ಧರಿಸಿದವರಿಗೆ ಸದಾಚಾರ ಸದ್ಭಕ್ತಿಸಾರದುನ್ನತಿಯ ಬೆಳಗ ತೋರುವುದಯ್ಯ. ಶ್ರೀ ವಿಭೂತಿಯ ಧರಿಸಿದವರಿಗೆ ಜನನ-ಮರಣದ ಭಯವ ತೊಡವುದಯ್ಯ. ಶಿವನಿಂದ ಅಗಸ್ತ್ಯ, ಕಸ್ಯಪ, ಜಮದಗ್ನಿ, ಗೌತಮ, ವಶಿಷ್ಠ ಮೊದಲಾದ ಋಷಿ ಸಮೂಹಗಳೆಲ್ಲ ಶ್ರೀ ವಿಭೂತಿಯ ಪಡೆದು ಧರಿಸಿ, ಸದ್ಭಕ್ತಿಪಥವ ಸೇರಿದರಯ್ಯ. ನಮ್ಮ ಶರಣಗಣಂಗಳು ಆ ಶಿವನ ಚಿತ್ಕಾಂತಿಯ ಬಹಿಷ್ಕರಿಸಿ, ಶ್ರೀಗುರುಲಿಂಗಜಂಗಮದ ಚಿದ್ಬೆಳಗನೆ ಹೆಪ್ಪಹಾಕಿ, ಚಿದಾಂಡವೆಂಬ ಘಟ್ಟಿಯ ಮಾಡಿ, ನಿಷ್ಕಲ ನಿಶ್ಶೂನ್ಯಮೂರ್ತಿಯ ಚರಣಜಲವ ವೇದ್ಥಿಸಿ, ಮಹಾಮಂತ್ರವ ಸ್ಥಾಪಿಸಿ, ಶ್ರೀಗುರುಲಿಂಗಜಂಗಮದ ಸ್ಪರ್ಶದಿಂದ ತತ್ವಸ್ಥಾನಂಗಳಲ್ಲಿ ಶಿವಲೋಕದ ಶಿವಗಣಂಗಳು, ರುದ್ರಲೋಕದ ರುದ್ರಗಣಂಗಳು, ನಾಗಲೋಕದ ನಾಗಗಣಂಗಳು, ದೇವಲೋಕದ ದೇವಗಣಂಗಳು, ಶಾಂಭವಲೋಕದ ಶಾಂಭವಗಣಂಗಳು, ಮತ್ರ್ಯಲೋಕದ ಮಹಾಗಣಂಗಳೆಲ್ಲ ಧರಿಸಿ ಜ್ಯೋತಿರ್ಮಯವಾದರು ನೋಡ. ಶ್ರೀಗುರುಲಿಂಗಜಂಗಮದ ಚಿತ್ಪ್ರಭಾಭೂತಿಯೆ ಸರ್ವಾಚಾರಸಂಪದಕ್ಕೆ ಮೋಕ್ಷದ ಕಣಿ ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಓಂ ನಮಃ ಶಿವಾಯ ಎಂಬುದೆ ಋಷಿ, ಓಂ ನಮಃ ಶಿವಾಯ ಎಂಬುದೆ ಮಂತ್ರ, ಓಂ ನಮಃ ಶಿವಾಯ ಓಂ ನಮಃ ಶಿವಾಯ ಎಂದೆನೆ ಸದ್ಯೋನ್ಮುಕ್ತಿ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ವಶಿಷ*ಗೋತ್ರದಲ್ಲಿ ಹುಟ್ಟಿದವನು ವಶಿಷ*ಗೋತ್ರದವನೆಂಬಂತೆ, ಭಾರದ್ವಾಜಗೋತ್ರದಲ್ಲಿ ಹುಟ್ಟಿದವನು ಭಾರದ್ವಾಜಗೋತ್ರದವನೆಂಬಂತೆ, ಕಾಶ್ಯಪಗೋತ್ರದಲ್ಲಿ ಹುಟ್ಟಿದವನು ಕಾಶ್ಯಪಗೋತ್ರದವನೆಂಬಂತೆ, ವಿಶ್ವಾಮಿತ್ರಗೋತ್ರದಲ್ಲಿ ಹುಟ್ಟಿದವನು ವಿಶ್ವಾಮಿತ್ರಗೋತ್ರದವನೆಂಬಂತೆ ಆ ಪರಿ ಆವಾವ ಗೋತ್ರದಲ್ಲಿ ಆವಾವ ಋಷಿಗಳ ವಂಶದಲ್ಲಿ ಜನಿಸಿದವನು ಆ ಗೋತ್ರ, ಆ ಸಂತತಿ, ಆ ಸುತನು ಎಂಬುದು ಉಪಚರ್ಯವೆ ? ಅಸತ್ಯವೇ ಹೇಳಿರಣ್ಣಾ ? ಅದು ತಾತ್ಪರ್ಯ, ಅದು ಸತ್ಯ. ಆ ಪರಿ ಬ್ರಾಹ್ಮಣನ ಮಗ ಬ್ರಾಹ್ಮಣನು, ಕ್ಷತ್ರಿಯನ ಮಗ ಕ್ಷತ್ರಿಯನು, ವೈಶ್ಯನ ಮಗ ವೈಶ್ಯನು, ಶೂದ್ರನ ಶೂದ್ರನು, ಆ ಪರಿ ತಪ್ಪದು. ದಿಟ ದಿಟ ವಿಚಾರಿಸಿ ನೋಡಿರೆ. ಅದು ಹೇಗೆಂದಡೆ ಶ್ರುತಿ: `ಮಹಾಬ್ರಾಹ್ಮಣಮೀಶಾನಂ' ಎಂದುದಾಗಿ ಮತ್ತಂ `ವಿರೂಪಾಕ್ಷಂ ದ್ವಿಜೋತ್ತಮಂ' ಎಂದುದಾಗಿ ಮಹಾಬ್ರಾಹ್ಮಣನೇ ಮಹಾದೇವನು. ಇದಕ್ಕೆ ಮತ್ತೆ ಶಿವರಹಸ್ಯದಲ್ಲಿ ಗುರುದೇವೋ ಮಹಾದೇವೋ ಗುರುದೇವಸ್ಸದಾಶಿವಃ ಗುರುದೇವಃ ಪರಂ ತತ್ತ್ವಂ ತಸ್ಮೈ ಶ್ರೀಗುರುವೇ ನಮಃ ಎಂದುದಾಗಿ, ಮಹಾದೇವನೇ ಶ್ರೀಗುರು ಕಾಣಿರಣ್ಣಾ. ಆ ಶ್ರೀಗುರುವಿನ ಕರಕಮಲದಲ್ಲಿ ಉದ್ಭವಿಸಿದ ತಚ್ಛಿಷ್ಯನೇ ಮಹಾಬ್ರಾಹ್ಮಣನು, ಇಂತೆಂಬುದು ಹುಸಿಯಲ್ಲ. ಜಾತಿ ಅಜಾತಿ ಎಂದು ಅಷ್ಟಾದಶಜಾತಿಯೊಳಗೆ ಇಕ್ಕಲಾಗದು. ಅಷ್ಟಾದಶಜಾತಿಯೊಳಗೊಂದೂ ಭಾವಿಸಲಾಗದು. ಆ ಮಹಿಮನೇ ಸತ್ಕುಲಜನು. ಇದಕ್ಕೆ ಮತ್ತುಂ `ಬ್ರಹ್ಮಣಾ ಚರತೀ ಬ್ರಾಹ್ಮಣಃ' ಎಂದುದಾಗಿ ಆ ಮಹಾಮಹಿಮನು ಬ್ರಹ್ಮವ ಆಚರಿಸುವನಾಗಿ ಬ್ರಾಹ್ಮಣ ಮತ್ತಂ ಕೂರ್ಮಪುರಾಣದಲಿ `ಸ ಏವ ಭಸ್ಮಜ್ಯೋತಿಃ' ಎಂದುದಾಗಿ ವಿಭೂತಿಯ ಧರಿಸಿಪ್ಪವನಾಗಿ ಆ ಮಹಾತ್ಮನೇ ಜ್ಯೋತಿರ್ಲಿಂಗವು. ಮತ್ತಂ ಶಿವಧರ್ಮದಲ್ಲಿ `ರುದ್ರಾಕ್ಷಂ ಧಾರಯೇನ್ನಿತ್ಯಂ ರುದ್ರಸ್ಸಾಕ್ಷಾದಿವ ಸ್ಮøತಃ' ಎಂದುದಾಗಿ ರುದ್ರಾಕ್ಷಿಯಂ ಧರಿಸಿಪ್ಪª ತಾನಾಗಿ ಆ ಮಹಾಮಹಿಮನೇ ರುದ್ರನು. ಮತ್ತಂ ಕಾಳಿಕಾಗಮದಲ್ಲಿ `ತಸ್ಮಿನ್ವೇದಾಶ್ಚ ಶಾಸ್ತ್ರಾಣಿ ಮಂತ್ರಃ ಪಂಚಾಕ್ಷರೀ ತಥಾ ಎಂದುದಾಗಿ, ಶ್ರೀ ಪಂಚಾಕ್ಷರಿಯ ಜಪಿಸುವನಾಗಿ ಆ ಮಹಿಮನೇ ವೇದವಿತ ಶಾಸ್ತ್ರಜ್ಞನು. ಮತ್ತಂ ಲೈಂಗೇ ಮೂಢನಾಮಪ್ಯಯುಕ್ತಾನಾಂ ಪಾಪಿನಾಂ ಚಾಭಿಚಾರಿಣಾಂ ಯಮಲೋಕೋ ನ ವಿದ್ಯೇತ ಸದಾ ವೈ ಲಿಂಗಧಾರಣಾತ್ ಎಂದುದಾಗಿ ಲಿಂಗವ ಧರಿಸಿಪ್ಪನಾಗಿ ಆ ಮಹಾಮಹಿಮನೇ ಲಿಂಗದೇಹಿ, ಲಿಂಗಕಾಯನು, ಲಿಂಗಪ್ರಾಣನು ಶಿವಲಿಂಗಾರ್ಚನೆಯಂ ಮಾಡುವನಾಗಿ, ಆ ಮಹಾಮಹಿಮನೇ ಶಿವನು ಮತ್ತಂ ಆದಿತ್ಯಪುರಾಣೇ ಅಕೃತ್ವಾ ಪೂಜನಂ ಶಂಭೋರ್ಯೋ ಭುಂಕ್ತೇ ಪಾಪಕೃದ್ದ್ವಿಜಃ ಕುಣಪಂ ಚ ಮಲಂ ಚೈವ ಸಮಶ್ನಾತಿ ದಿನೇ ದಿನೇ ಎಂದುದಾಗಿ ಶಿವಲಿಂಗಕ್ಕೆ ಅರ್ಪಿಸದೇ ಕೊಳ್ಳನಾಗಿ ಆ ಮಹಾಮಹಿಮನೇ ರುದ್ರನು. ಮತ್ತಂ ಶಾಂಕರಸಂಹಿತೆಯಲ್ಲಿ ತಿಲಷೋಡಶಭಾಗಂ ತು ತೃಣಾಗ್ರಾಂಬುಕಣೋಪಮಂ ಪಾದೋದಕಪ್ರಸಾದಾನಾಂ ಸೇವನಾನ್ ಮೋಕ್ಷಮಾಪ್ನುಯಾತ್ ಎಂದುದಾಗಿ ಪಾದೋದಕ ಪ್ರಸಾದವಂ ಕೊಂಬನಾಗಿ ಆ ಮಹಾತ್ಮರು ತಾನೇ ಲಿಂಗೈಕ್ಯನು. ಇನ್ನು ನಾನಾವೇದಶಾಸ್ತ್ರಪುರಾಣಾಗಮಂಗಳ ಸಮ್ಮತ ದೃಷ್ಟವಾಕ್ಯಂಗಳನು ವಿಚಾರಿಸಿ ನೋಡಿದಡೆಯೂ ಶಿವಭಕ್ತನೇ ಕುಲಜನು, ಶಿವಭಕ್ತನೇ ಉತ್ತಮನು. ಇಂತಹ ಶಿವಭಕ್ತನನು ಜಾತಿವಿಜಾತಿ ಎಂದು ಭಾವಿಸಿದಡೆ, ಮತ್ರ್ಯನೆಂದು ಭಾವಿಸಿದಡೆ ನರಕ ತಪ್ಪದು. ವಶಿಷ* ಪುರಾಣದಲ್ಲಿ ಕೇಳಿರೆ: ಮತ್ರ್ಯವನ್ಮನುತೇ ಯಸ್ತು ಶಿವನಿಷ*ಂ ದ್ವಿಜಂ ನರಃ ಕುಂಭೀಪಾಕೇ ತು ಪತತಿ ನರಕೇ ಕಾಲಮಕ್ಷಯಂ ಎಂದುದಾಗಿ ಇದು ಕಾರಣ ಅಷ್ಟಾದಶವಿದ್ಯಂಗಳನು ವಿಚಾರಿಸಿ ತಿಳಿದು ನೋಡಿದಡೆ ಋಷಿಪುತ್ರನ ಋಷಿ ಎಂಬಂತೆ ಶ್ರೀಗುರುಪುತ್ರನನು ಶ್ರೀಗುರು ಎಂಬುದಯ್ಯಾ. ಆ ಮಹಾಮಹಿಮನ ದರ್ಶನವ ಮಾಡಿ ಪಾದೋದಕ ಪ್ರಸಾದವ ಕೊಂಡು ಮುಕ್ತರಪ್ಪುದಯ್ಯಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಪರಾರ್ಥಪೂಜೆಯನಾಯಿತ್ತಾದೊಡೆ, ಅಲ್ಲಿಂದ ಮೇಲೆ ಕೇಳು:`ಗ್ರಾಮಾದೌ ಸ್ಥಾಪಿತೇ ಲಿಂಗೇ ಯದ್ವಾದೈವಾದಿ ನಿರ್ಮಿತೇ ಪರಾರ್ಥಮಿತಿಜ್ಞೇಯಂ ಸರ್ವಪ್ರಾಣಿತಾವಹಿ' ಇಂತೆಂದು ಆವುದಾನೊಂದು ಕಾರಣದಿಂದ ದೇವ ಋಷಿ ದಾನವ ಮಾನವಾದಿಗಳಿಂದ ನಿರ್ಮಿಸಿ, ಗ್ರಾಮಗಿರಿ ಗಂಹರವನ ಮೊದಲಾದವ ರಲ್ಲಿ ಪ್ರತಿಷಿ*ತವಾದ ಶಿವಲಿಂಗಪೂಜೆ ಪರಾರ್ಥ ಪೂಜೆ ಎಂದು ಅರಿಯ ಬೇಕಾದುದು. ಆ ಪೂಜೆಯಲ್ಲಿ ಪ್ರಾಣಿಗಳಿಗೆಯೂ ಹಿತವ ಮಾಡುವಂಥಾದು `ಶಿವದ್ವಿಜೇನ ಕರ್ತನ್ಯಂ ದ್ವಿಧಾ ಪೂಜೇತಿ ಬೋಧಿತಾ' ಎಂದು ಈ ಕ್ರಮದಿಂದ ಹೇಳಲ್ಪಟ್ಟಎರಡು ಪ್ರಕಾರದ ಪೂಜೆ ಶಿವಬ್ರಾಹ್ಮಣನಿಂದವೆ ಮಾಡಲ್ತಕ್ಕಂಥಾದು ಶಾಂತವೀರೇಶ್ವರಾ.
--------------
ಶಾಂತವೀರೇಶ್ವರ
ಜಲಕುಂಭಚಂದ್ರವತ್ತೆಂಬ ಯಥಾ ನ್ಯಾಯವನರುಹಿಸಿ ಕುಂಭ ಹಲವಾದಡೆ ಚಂದ್ರನೊಬ್ಬನೊ? ಇಬ್ಬರೊ? ಬಲ್ಲರೆ, ನೀವು ಹೇಳಿರೆ. ಆ ಭೂಮಿಯಲ್ಲಿ ಅಡಿಗೊಂದೊಂದು ಸ್ಥಲವಾಗಿ ಸ್ಥಲಕ್ಕೊಂದು ಬಣ್ಣವಪ್ಪ ಮೃತ್ತಿಕೆಯ ತಂದು ಘಟವಂ ಮಾಡಿ ಆ ಘಟವ, ಬಹುವಿಧಮಂ ಕೂಡಿ ದಗ್ಧವ ಮಾಡಿ ಏಕಶಾಯಿಯಂ ಮಾಡೆ, ಉಪಯೋಗಕ್ಕೆ ಸಂದುದೊ ಘಟವು? ಇಂತೀ ಪರಿಯಲ್ಲಿ ತಿಳಿದು ಕೇಳಿರೆ. ಇಂತು ಗುರುಕಾರುಣ್ಯವುಳ್ಳ ದೇಹಕ್ಕೆ ವರ್ಣಾಶ್ರಮವನತಿಗಳೆಯದಿದ್ದಡೆ ಆ ಗುರುಕಾರುಣ್ಯ ತಾನೆಂತಿಪ್ಪುದು ಹೇಳಿರೆ? ಆ ಗುರುಸ್ವಾಮಿ ಹಸ್ತಮಸ್ತಕಸಂಯೋಗವ ಮಾಡಿ, ಮಾಂಸಪಿಂಡವ ಕಳೆದು ಮಂತ್ರಪಿಂಡವಂ ಮಾಡಿ, ವಾಯುಪ್ರಾಣಿಯ ಕಳೆದು ಲಿಂಗಪ್ರಾಣಿಯ ಮಾಡಿದ. ಶಿವಜನ್ಮಕುಲಯುತರಾಗಿ ಶಿವನ ಶರಣರು ವಾಙõïಮಾನಸಾಗೋಚರರೆನ್ನದಿದ್ದಡೆ ಕುಂಭೀಪಾತಕನಾಯಕನರಕ ತಪ್ಪದು, ಸತ್ಯಸತ್ಯ ಅವರಿಗಿದೇ ಗತಿ. ಇನ್ನು ಅನಂತಕೋಟಿಬ್ರಹ್ಮಕಲ್ಪ ಉಳ್ಳನ್ನಕ್ಕರ ಇಹರು ಕಾಣಾ ನರಕದಲ್ಲಿ, ಇದಕಿನ್ನು ಶ್ರುತಿ: ಪಾತಕಂತು ಮನುಷ್ಯಾಣಾಂ ತನುಭಾವೇಷು ವರ್ಧನಂ ಜನ್ಮಕರ್ಮಾಮರಣಾಂತಂ ಅಜಕಲ್ಪಾವಧಿಂ ಭವೇತ್ ಮುಕ್ತಿ ಎಂಬುದು ಉಂಟಾದುದಕ್ಕೆ ಉಪದೃಷ್ಟವ ಹೇಳಿಹೆನು: ಹಿಂದೆ ಅರಿಯಿರೆ, ನಿಮ್ಮ ಋಷಿ ಮೂಲಾಂಕುರವನು, ಉಪದೇಶಗಮ್ಯರಾಗಿ ಅಷ್ಟಾದಶಕುಲಂಗಳನೂ ಏಕವರ್ಣವ ಮಾಡಿರೆ ಉಪದೇಶಗಮ್ಯದಿಂದಲೂ ಇನ್ನರಿದು ಹಡೆದ ಪದಫಲಾದಿಗಳ ನೋಡಿರೆ. ಜನ್ಮಕರ್ಮನಿವೃತ್ತಿಯಾಗದೆ ಒಬ್ಬ ಋಷಿಗೆ? ಜೀವನದ ಮೊದಲಲ್ಲಿ ಆವ ಬೇಡ ಕಾಣಾ. ಜ್ಞಾನದಿಂದ ಅಂತಂತು ಮಾಡಿದಡೆ, ಶಿವಭಕ್ತನಿಂದೆಯಿಂದ ಒಂದು ಬ್ರಹ್ಮಕಲ್ಪಪರಿಯಂತರ ಕುಂಭೀಪಾತಕನಾಯಕನರಕದಲ್ಲಿ ಅಯಿದಾನೆ ಎಂದುದು ಶ್ರುತಿ: ಲಿಂಗಸ್ಯಾರಾಧನೇ ವಿಘ್ನಂ ಯತ್ಕೃತಂ ಸ್ವಾರ್ಥಕಾರಣಾತ್ ನಿಮೇಷಮಪಿ ತತ್ಪಾಪಂ ಕರೋತಿ ಚ ಕುಲಕ್ಷಯಂ ಸೂಕರಃ ಕೋಟಿಜನ್ಮಾನಿ ಲಭತೇ ಶತಕೋಟಿಭಿಃ ಮೃಗಶ್ಚ ಕೋಟಿಜನ್ಮಾನಿ ಶೃಗಾಲಃ ಕೋಟಿಜನ್ಮಭಿಃ ಅಂಧಶ್ಚ ಲಕ್ಷಜನ್ಮಾನಿ ಕುಬ್ಜಸ್ಸ್ಯಾದಬ್ಜಜನ್ಮಭಿಃ ಪಂಗುಲಃ ಕೋಟಿಜನ್ಮಾನಿ ಶಿಖಂಡೀ ಜಾಯತೇ ತಥಾ ಉಲೂಕೋ ವಾಯಸೋ ಗೃಧ್ರಶ್ಸೂಕರೋ ಜಂಬುಕಸ್ತಥಾ ಮಾರ್ಜಾಲೋ ವಾನರಶ್ಚೈವ ಯುಗಕೋಟಿ ಶತ ನರಃ ಲಿಂಗಾರ್ಚನರತಂ ವಾಚಾ ಸಕೃಲ್ಲಿಂಗಂ ಚ ದೂಷಯನ್ ಯುಗಕೋಟಿಕ್ರಿಮಿರ್ಭೂತ್ವಾ ವಿಷ್ಟಾಯಾಂ ಜಾಯತೇ ಪುನಃ ಕೀಟಃ ಪತಂಗೋ ಜಾಯೇತ ಕೃತವೃಶ್ಚಿಕದರ್ದುರಃ ಜಾಯಂತೇ ಚ ಮ್ರಿಯಂತೇ ಚ ನರಾಸ್ತೇ ನಾಸ್ತಿ ವೈ ಸುಖಂ ಇಂತೆಂದುದಾಗಿ- ಅಂದೊಮ್ಮೆ ಬಂದುದು ದೂರ್ವಾಸನೆಂಬ ಋಷಿಗೆ ಮತ್ರ್ಯಲೋಕದಲ್ಲಿ ಮಹಾಪವಾದ. ಅದ ಮರಳಿ ಪರಿಹರಿಸಿಕೊಳನೆ ಮತ್ರ್ಯಲೋಕದಲ್ಲಿ ಶಿವಾರ್ಚನೆಯಂ ಮಾಡಿ? ಶಿವಭಕ್ತರಿಗೆ ಮನೋಹರವಂತಹ ಪೂಜೆಯ ಮಾಡಿ ಆ ಪರಶಿವನ ಘನಲಿಂಗವೆಂದರಿದು ಅರ್ಚಿಸಿ, ಪರಮಭಕ್ತರ ಪಾದತೀರ್ಥಪ್ರಸಾದದಿಂದ ಆ ಋಷಿ ಅಮರಕಾಯನೆಂಬ ನಾಮವ ಪಡೆಯನೆರಿ ಆಕಾರಾಧ್ಯಕ್ಷರಂಗಳಿಗೆ ನಾಯಕವಂತಹ ಅಕ್ಷರ ಪಂಚಾಕ್ಷರವೆಂಬುದನರಿದು ಶಿವನೇ ಸರ್ವದೇವರಿಗೆ ಅಧಿದೈವವೆಂದರಿದು ವೇದಶಾಸ್ತ್ರಪುರಾಣಾನಿ ಸ್ಪಷ್ಟಾ ವೇಶ್ಯಾಂಗನಾ ಇವ ಯಾ ಪುನಶ್ಯಾಂಕರೀ ವಿದ್ಯಾ ಗುಪ್ತಾ ಕುಲವಧೂರಿವ ಎಂದುದಾಗಿ: ಶಿವಾರ್ಚಕಪದದ್ವಂದ್ವಸ್ಯಾರ್ಚನಾತ್ ಸ್ಮರಣಾದಪಿ ಕೋಟಿಜನ್ಮಸು ಸೌಖ್ಯಂ ಸ್ಯಾತ್ ಸ ರುದ್ರೋ ನಾತ್ರ ಸಂಶಯಃ ಎಂಬರ್ಥವನರಿದು ಆಂಗಿರಸ, ಶಾಂಡಿಲ್ಯ, ವೇದವ್ಯಾಸ, ವಾಲ್ಮೀಕಿ, ಮಾಂಡವ್ಯ ಮೊದಲಾದ ಋಷಿಗಳೆಲ್ಲರೂ ಶಿವನಿಂದೆ, ಶಿವಭಕ್ತರ ನಿಂದೆಯ ಮಾಡಿ ಶಿವನ ಕ್ಷೇತ್ರವಹ ವೇದಾದಿಶಾಸ್ತ್ರಗಮಂಗಳಿಗೆ ಪ್ರತಿಯಿಟ್ಟು ಕರ್ಮಶಾಸ್ತ್ರಂಗಳನೆಸಗಿ ಅಕ್ಷಯನರಕವನೈದಿರಲಾಗಿ, ತ್ರ್ಯಕ್ಷನ ಶರಣ ಕೃಪಾವರದಾನಿ ಏಕನಿಷ* ಪರಮಮಾಹೇಶ್ವರ ಸಾನಂದನು ಕರುಣದಿಂದಲೆತ್ತನೆ ಅವರೆಲ್ಲರ ನರಕಲೋಕದಿಂದ? ಇಂತಿವಕ್ಕೆ ಸಾಕ್ಷಿದೃಷ್ಟಾಂತಗ್ರಂಥಗಳ ಪೇಳುವಡೆ, ಅಂತಹವು ಅನಂತ ಉಂಟು, ಆಗಮ ಪುರಾಣದಲ್ಲಿ ಅರಿವುಳ್ಳವರು ತಿಳಿದು ನೋಡುವುದು. ಶಾಪಹತರೆನಿಸುವ ಪಾಪಿಗಳು ಅವ ಮುಚ್ಚಿ ವಿತಥವ ನುಡಿವರು. ಇದನರಿದು ನಿತ್ಯಸಹಜ ಶಿವಲಿಂಗರ್ಚನೆಯಂ ಮಾಡಿ `ತತ್ವಮಸಿ' ವಾಕ್ಯಂಗಳನರಿದು ತತ್ಪದೇನೋಚ್ಯತೇ ಲಿಂಗಂ ತ್ವಂಪದೇನಾಂಗಮುಚ್ಯತೆ ಲಿಂಗಾಂಗಸಂಗೋ[s]ಸಿಪದಂ ಪರಮಾರ್ಥನಿರೂಪಣೇ ಎಂಬುದನರಿದು ನಿತ್ಯನಿರ್ಮಳಜ್ಞಾನಾನಂದ ಪ್ರಕಾಶವೆಂಬ ಮಹಾಮನೆಯಲ್ಲಿ ಪರಮಸುಖದಲ್ಲಿ ಆಕಾರಂಗಳ ಲಯವನು ತಮ್ಮಲ್ಲಿ ಎಯ್ದಿಸಿ ಮಹಾನುಭಾವರನೆನಗೆ ತೋರಯ್ಯಾ. ನಾ ನಿನ್ನನರಿದುದಕ್ಕೆ ಫಲವಿದು ನೀನೆನ್ನ ನೋಡಿದುದಕ್ಕೆ ಫಲವಿದು. ಸುಖಸಚ್ಚಿದಾನಂದಸ್ವರೂಪ ಅನಿತ್ಯವ ಮೀರಿದ ನಿತ್ಯ ನೀನಲ್ಲದೆ ಮತ್ತೊಂದುಂಟೆ? ಎನಗೆ ನಿನ್ನಂತೆ ನಿರ್ಮಲಜ್ಞಾನಾನಂದಪದವನಿತ್ತು ಎನ್ನ ನಿನ್ನಂತೆ ಮಾಡಿ ಉದ್ಧರಿಸಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ವೇದವೆಂಬುದು ವಾದ, ವೈದಿಕತ್ವ ಮಾಯಾಭೇದ. ದೇವತಾ ದೇವತೆ ಕುಲ ಋಷಿ ಪ್ರಯೋಗಯಾಗಕ್ರಮ ದಿಗ್ವಳಯ ಬಂಧನ, ಗ್ರಹಸಂಬಂಧಯೋಗ. ಇಂತಿವು ಮೊದಲಾದ ಕರ್ಮಂಗಳಲ್ಲಿ ವ[ತಿರ್]ಸಿ ನಿಂದ ಸ್ವಯವಾವುದು ? ಧರ್ಮಶಾಸ್ತ್ರವ ತಿಳಿದು, ಶಿಲ್ಪ ವೈದಿಕ ಜೋಯಿಸ ಇವು ಮುಂತಾದ ನಾನಾ ಭೇದಂಗಳ ಹೇಳಿ ತನ್ನ ಅಳಿವು ಉಳಿವು ಕಂಡುದಿಲ್ಲ. ಪುರಾಣವನೋದಿ ಕೆಲರ್ಗೆ ಹೇಳಿ ಪೂರ್ವಯಥ್ಞಿಕಥನ ಮುಂತಾದ ರಾಮರಾವಣಾದಿಗಳು ಚಕ್ರವರ್ತಿಗಳು ಮುಂತಾದ ಧರ್ಮಕರ್ಮಂಗಳನೋದಿ ಬೋಧಿಸಿದಲ್ಲಿಯೂ ಸಫಲವಾದುದಿಲ್ಲ. ಇಂತಿವನ್ನೆಲ್ಲವನರಿತು, ಉಭಯಸಂಧಿಯ ಉಪೇಕ್ಷಿಸಿದಲ್ಲಿ ಬಿಡುಮುಡಿ ಉಭಯದ ಭೇದವ ತಾನರಿತು ಮಲತ್ರಯಕ್ಕೆ ದೂರಸ್ಥನಾಗಿ ತ್ರಿವಿಧಾತ್ಮಕ್ಕೆ ಅಳಿವು ಉಳಿವನರಿತು ಆರಾರ ಮನ ಧರ್ಮಂಗಳಲ್ಲಿ ಭೇದವಿಲ್ಲದೆ ನುಡಿದು ಅಭೇದ್ಯಮೂರ್ತಿಯ ತೋರಿ, ವಿಭೇದವ ಬಿಡಿಸಿ ತರಣಿಯ ಕಿರಣದಂತೆ, ವಾರಿಯ ಸಾರದಂತೆ 'ಖಲ್ವಿದಂ ಬ್ರಹ್ಮವಸ್ತು'ವೆಂದಲ್ಲಿ, ಏಕಮೇವನದ್ವಿತೀಯನೆಂದಲ್ಲಿ 'ಓಂ ಭರ್ಗೋ ದೇವಸ್ಯ ಧೀಮಹಿ' ಯೆಂದಲ್ಲಿ ಆದಿ ಪರಮೇಶ್ವರನೆಂದಲ್ಲಿ, ಆದಿ ಪುರುಷೋತ್ತಮನೆಂದಲ್ಲಿ ಆರಾರ ಭೇದಕ್ಕೆ ಭೇದ. ತ್ರಿಮೂರ್ತಿಗಳ ಜಗಹಿತಾರ್ಥವಾಗಿ ಸಂಶಯಸಿದ್ಧಿಯಿಂದ ತಿಳಿವುದು. ಸರ್ವಶಾಸ್ತ್ರದಿಂದ ಈ ಗುಣವಾಚಕರಿಗೆ ದೂಷಣದಿಂದ ನುಡಿವರಿಗೆ ಹಾಕಿದ ಮುಂಡಿಗೆ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವಲ್ಲದಿಲ್ಲಾ ಎಂಬೆನು.
--------------
ಪ್ರಸಾದಿ ಭೋಗಣ್ಣ
ಅಯ್ಯಾ, ವೈಷ್ಣವರಾದವರು ತಮ್ಮ ವಿಷ್ಣುವ ಬಿಟ್ಟು ಕಳೆದು, ಲಿಂಗಭಕ್ತರಾದರನೇಕರು. ಅಯ್ಯಾ, ಜೈನರಾದವರು ತಮ್ಮ ಜಿನನ ಬಿಟ್ಟು ಕಳೆದು, ಲಿಂಗಭಕ್ತರಾದರನೇಕರು. ಅಯ್ಯಾ, ದ್ವಿಜರಾದವರು ತಮ್ಮ ಕರ್ಮಂಗಳ ಬಿಟ್ಟು ಕಳೆದು, ಲಿಂಗಭಕ್ತರಾದರನೇಕರು. ಲಿಂಗವ ಬಿಟ್ಟು, ಇತರವ ಹಿಡಿದವರುಳ್ಳರೆ ಹೇಳಿರಯ್ಯಾ ? ಉಳ್ಳಡೆಯೂ ಅವರು ವ್ರತಗೇಡಿಗಳೆನಿಸಿಕೊಂಬರು. ಇದು ಕಾರಣ, ಋಷಿ ಕೃತಕದಿಂದಲಾದ ಕುಟಿಲದೈವಂಗಳ ದಿಟವೆಂದು ಬಗೆವರೆ, ಬುದ್ಧಿವಂತರು ? ಸಟೆಯ ಬಿಡಲಾರದೆ, ದಿಟವ ನಂಬಲಾರದೆ, ನಷ್ಟವಾಗಿ ಹೋಯಿತ್ತೀ ಜಗವು ನೋಡಾ. ಸಕಲದೈವಂಗಳಿಗೆ, ಸಕಲಸಮಯಂಗಳಿಗೆ ನೀವೇ ಘನವಾಗಿ, ನಿಮಗೆ ಶರಣುವೊಕ್ಕೆನಯ್ಯಾ, ಬಸವಪ್ರಿಯ ಕೂಡಲಚೆನ್ನಸಂಗಮದೇವಾ.
--------------
ಸಂಗಮೇಶ್ವರದ ಅಪ್ಪಣ್ಣ
ವ್ಯಾಸ ಬೋವಿತಿಯ ಮಗ, ಮಾರ್ಕಂಡೇಯ ಮಾತಂಗಿಯ ಮಗ, ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿಂ ಭೋ ! ಕುಲದಿಂದ ಮುನ್ನೇನಾದಿರಿಂ ಭೋ ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ, ದುರ್ವಾಸ ಮುಚ್ಚಿಗ, ಕಶ್ಯಪ ಕಮ್ಮಾರ, Põ್ಞಂಡಿನ್ಯನೆಂಬ ಋಷಿ ಮೂರು ಭುವನರಿಯದೆ ನಾವಿದ ಕಾಣಿ ಭೋ ! ನಮ್ಮ ಕೂಡಲಸಂಗನ ವಚನವಿಂತೆಂದುದು ಶ್ವಪಚೋಪಿಯಾದಡೇನು, ಶಿವಭಕ್ತನೆ ಕುಲಜಂ ಭೋ !
--------------
ಬಸವಣ್ಣ
ಓಂ ನಮಃ ಶಿವಾಯ, ಓಂ ನಮಃ ಶಿವಾಯ ಎಂಬುದೆ ಛಂದ. . ಓಂ ನಮಃ ಶಿವಾಯ, ಓಂ ನಮಃ ಶಿವಾಯ ಎಂಬುದೆ ಋಷಿ ತಾನು. ಓಂ ನಮಃ ಶಿವಾಯ, ಓಂ ನಮಃ ಶಿವಾಯ ಎಂಬುದೆ ಅಧಿದೇವತೆ. ಓಂ ನಮಃ ಶಿವಾಯ, ಓಂ ನಮಃ ಶಿವಾಯ ಎಂದೆನಲು ಸದ್ಯೋನ್ಮುಕ್ತಿ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
`ಮಹಿಂ ದು:ಖವಿವರ್ಧಿನಿಂ | ಭೂತ್ಯಾಯುರ್ಭಾಗ ವೈಷಮ್ಯ' || ಮೇಲೆ ಸಕಲ ಮಂತ್ರಂಗಳಿಗೆ ಸಾಧಾರಣಮಾದ ಋಷಿ, ಛಂದಸ್ಸು, ದೇವತೆ, ಬೀಜ, ಶಕ್ತಿ, ಕೀಲಕ, ಸ್ವರ, ವರ್ಣ, ಸ್ಥಾನ, ಅಕ್ಷರ, ಕಲೆ, ತತ್ವ ಅರ್ಥಚಿಂತನಾದಿಗಳೆಂಬ ಅಂಗಗಳಲ್ಲಿ ಮುಖ್ಯವಾದ ಮಂತ್ರ ಪ್ರಥಮ ದೃಷ್ಟವಾದ ಋಷಿಯನೆ ಮಸ್ತಕದಲ್ಲಿ, ಮಂತ್ರಾಕ್ಷರ ಸಂಖ್ಯಾರೂಪಮಾದ ಛಂದವನೆ ಮುಖದಲ್ಲಿ, ಮಂತ್ರವಾಚ್ಯವಾದ ಅಧಿದೇವದೇವತೆಯನೆ ಹೃದಯದಲ್ಲಿ, ಮಂತ್ರದೇವತಾ ನಾಮವರ್ಣ ವಿಶೇಷ ಮಾದ ಬೀಜವನೆ ನಾಭಿಯಲ್ಲಿ, ಮಂತ್ರಸಿದ್ಧಿಪ್ರದಮಾದ ಕುಂಡಲಿನ್ಯಾದಿಶಕ್ತಿಯನೆ ಗುಹ್ಯದಲ್ಲಿ, ವಿಘ್ನನಿವರ್ತಕಮಾದ ಕೀಲಕವನೆ ಪಾದ ದಲ್ಲಿ, ಬೇರೆ ಮಂತ್ರ ರಕ್ಷಕರಾದ ಉಮೆ ವಿಘ್ನೇಶ್ವರರನೆ ಕ್ರಮದಿಂ ವಾಮ ದಕ್ಷಿಣ ಭುಜದ್ವಯದಲ್ಲಿ, ಋಷೆಯೇ ನಮ:ಎಂಬಂತೀ ಕ್ರಮದಿಂ ಚತುಸ್ಯಾಂತ ನಮ ಸ್ಕಾರಪೂರ್ವಕವಾಗಿ ಆಯಾ ಸ್ಥಾನಂಗಳಂ ಮುಟ್ಟಿ ಮುಟ್ಟಿ ಸ್ಮರಿಸುವುದಯ್ಯಾ ಶಾಂತವೀರೇಶ್ವರಾ.
--------------
ಶಾಂತವೀರೇಶ್ವರ
ಎಲ್ಲಾ ದೈವಕ್ಕೆ ವಿಷ್ಣು ಘನವೆಂಬ ವೇದಾದಿಗಳು ನೀವು ಕೇಳಿ. ಎಲ್ಲಾ ದೈವಕ್ಕೆ ಸರಿಯೆಂಬ ಮಾಯಾವಾದಿಗಳು ನೀವು ಕೇಳಿ. ಗಾಯತ್ರಿ ಛಂದ, ವಿಶ್ವಾಮಿತ್ರ ಋಷಿ, ಸವಿತಾ ದೇವ, ಅಗ್ನಿ ಮುಖ, ಬ್ರಹ್ಮ ಶಿರ, ವಿಷ್ಣು ಹೃದಯ, ರುದ್ರ ಲಲಾಟವೆಂದು ಹೀಂಗೆ ಹೇಳುತ್ತಿದೆ [ಶ್ರುತಿ]. ಗಾಯತ್ರಿ ಕಲ್ಪದಲ್ಲಿ : ಒಂ ಭೂಃ ಒಂ ಭುವಃ ಒಂ ಸುವಃ ತತ್ಸ ವಿತುರ್ವರೇಣ್ಯಂ | ಭರ್ಗೋ ದೇವಸ್ಯ ಧೀಮಹಿಯೋ ಯೋನಃ ಪ್ರಚೋದಯಾತ್ || ಎಂದುದು ಶ್ರುತಿ. ಸರ್ವದೇವ ಶಿಖಾಮಣಿ ಸೊಡ್ಡಳನಲ್ಲದೆ ದೈವವಿಲ್ಲೆಂದುದು.
--------------
ಸೊಡ್ಡಳ ಬಾಚರಸ
ಸಂಕಲ್ಪ ವಿಕಲ್ಪವೆಂಬ ಉದಯಾಸ್ತಮಾನಗಳಿಗೆ ದೂರವಾದ ಶಿವಶರಣರ ಅಕುಲಜರೆಂದು ಗಳಹುತಿಪ್ಪರು ನೋಡಾ ಈ ಮರುಳ ವಿಪ್ರರು ತಾವು ಮಾತಂಗಿಯ ಗರ್ಭಸಂಭವ ಜೇಷ*ಪುತ್ರರೆಂಬುದನರಿಯದೆ. ನಮ್ಮ ಶಿವಭಕ್ತರು ಅಂತಹ ಕುಲ ಇಂತಹ ಕುಲದವರೆಂದು ನಿಂದಿಸಿ ನುಡಿವ ವಿಪ್ರಹೊಲೆಯರು ನೀವು ಕೇಳಿ ಭೋ ಅದೆಂತೆಂದಡೆ_ ಸ್ತ್ರೀವಾದಪುರುಷಃ ಷಂಡಶ್ಚಂಡಾಲೋ ದ್ವಿಜವಂಶಜಃ ನಜಾತಿಭೇದೋ ಲಿಂಗಾರ್ಚೇ ರುದ್ರಗಣಾಃ ಸ್ಮೃತಾಃ ಇಂತೆಂಬ ಪುರಾಣವಾಕ್ಯವನರಿದು ನಮ್ಮ ಶಿವಭಕ್ತನು ಹೊಲೆಯ ಮಾದಿಗ ಕಬ್ಬಿಲ ಕಮ್ಮಾರ ಕಂಚುಗಾರ ಅಕ್ಕಸಾಲೆ ಕುಂಬಾರ ಅಗಸ ನಾವಿಂದ ಜೇಡ ಬೇಡನೆಂದು ನುಡಿಯುತಿಪ್ಪರು. ನಿಮ್ಮ ಉತ್ತಮ ಸತ್ಕುಲಂಗಳ ನಾವು ಎತ್ತಿ ನುಡಿಯಬಹುದೇ ಮಾರ್ಕಂಡೇಯ ಮಾದಿಗನೆಂದು ಸಾಂಖ್ಯ ಶ್ವಪಚನೆಂದು ಕಾಶ್ಯಪ ಕಮ್ಮಾರನೆಂದು ರೋಮಜ ಕಂಚುಗಾರನೆಂದು ಅಗಸ್ತ್ಯ ಕಬ್ಬಿಲನೆಂದು ನಾರದ ಅಗಸನೆಂದು ವ್ಯಾಸ ಬೇಡನೆಂದು ವಶಿಷ* ಡೊಂಬನೆಂದು ದುರ್ವಾಸ ಮಚ್ಚಿಗನೆಂದು ಕೌಂಡಿಲ್ಯ ನಾವಿಂದನೆಂದು ಅದೆಂತೆಂದಡೆ ವಾಸಿಷ*ದಲ್ಲಿ_ ವಾಲ್ಮಿಕೀ ಚ ವಶಿಷ*ಶ್ಚ ಗಾಗ್ರ್ಯಮಾಂಡವ್ಯಗೌತಮಾಃ ಪೂರ್ವಾಶ್ರಯೇ ಕನಿಷಾ*ಸ್ಯುರ್ದೀಕ್ಷಯಾ ಸ್ವರ್ಗಗಾಮಿನಃ ಎಂದುದಾಗಿ ಇದನರಿದು ಮರೆದಿರಿ ನಿಮ್ಮ ಕುಲವನು ಇನ್ನು ನಿಮ್ಮ ಕುಲದಲ್ಲಿ ಹಿರಿಯರುಳ್ಳರೆ ನೀವು ಹೇಳಿ ಭೋ ನಿಮ್ಮ ಗೋತ್ರವ ನೋಡಿ ನಿಮ್ಮ ಹಮ್ಮು ಬಿಡಿ ಭೋ ಎಮ್ಮ ಸದ್ಭಕ್ತರೇ ಕುಲಜರು. ಇದ ನಂಬಿದಿರ್ದಡೆ ಓದಿ ನೋಡಿರಣ್ಣಾ ನಿಮ್ಮ ವೇದವರ್ಗಂಗಳೊಳಗೆ ಅದೆಂತೆಂದಡೆ ಅಥರ್ವವೇದದಲ್ಲಿ_ ಮಾತಂಗೀ ರೇಣುಕಾ ಗರ್ಭಸಂಭವಾತ್ ಇತಿ ಕಾರುಣ್ಯಂ ಮೇಧಾವೀ ರುದ್ರಾಕ್ಷಿಣಾ ಲಿಂಗಧಾರಣಸ್ಯ ಪ್ರಸಾದಂ ಸ್ವೀಕುರ್ವನ್ ಋಷೀಣಾಂ ವರ್ಣಶ್ರೇಷೊ*ೀs ಘೋರ ಋಷಿಃ ಸಂಕರ್ಷಣಾತ್ ಇತ್ಯಾದಿ ವೇದ ವಚನ ಶ್ರುತಿಮಾರ್ಗೇಷು ಎಂದುದಾಗಿ ಮತ್ತಂ ವಾಯವೀಯಸಂಹಿತಾಯಾವಮ್_ ಬಾಹ್ಮಣೋ ವಾಪಿ ಚಾಂಡಾಲೋ ದುರ್ಗುಣಃ ಸುಗುಣೋsಪಿ ವಾ ಭಸ್ಮ ರುದ್ರಾಕ್ಷಕಕಂಠೂೀ ವಾ ದೇಹಾಂತೇ ಸ ಶಿವಂ ವ್ರಜೇತ್ ಎಂದುದಾಗಿ ಮತ್ತಂ ಶಿವರಹಸ್ಯದಲ್ಲಿ_ ಗ್ರಾಮೇಣ ಮಲಿನಂ ತೋಯಂ ಯಥಾ ಸಾಗರಸಂಗತವರಿï ಶಿವಸಂಸ್ಕಾರಸಂಪನ್ನೆ ಜಾತಿಭೇದಂ ನ ಕಾರಯೇತ್ ಎಂದುದಾಗಿ ಇವರೆಲ್ಲರ ವರ್ಣಂಗಳು ಲಿಂಗಧಾರಣೆಯಿಂದ ಮರೆಸಿಹೋದವು ಕೇಳಿರಣ್ಣಾ. ಇಂತಪ್ಪ ಋಷಿ ಜನಂಗಳೆಲ್ಲ ಶ್ರೀಗುರುವಿನ ಕಾರುಣ್ಯವಂ ಪಡೆದು ವಿಭೂತಿ ರುದ್ರಾಕ್ಷಿಯಂ ಧರಿಸಿ ಶಿವಲಿಂಗಾರ್ಚನೆಯಂ ಮಾಡಿ ಪಾದತೀರ್ಥ ಪ್ರಸಾದವಂ ಕೊಂಡು ಉತ್ತಮ ವರ್ಣಶ್ರೇಷ*ರಾದರು ಕಾಣಿರೇ ಇದು ಕಾರಣ ನಮ್ಮ ಕೂಡಲಚೆನ್ನಸಂಗಯ್ಯನ ಅರಿದು ಪೂಜಿಸುವಾತನೇ ಉತ್ತಮ ಸದ್ಭಕ್ತ ಬ್ರಾಹ್ಮಣನು. ಅರಿಯದವನೀಗಲೇ ಕೆಟ್ಟ ಹೊಲೆಯ ಕಾಣಿರಣ್ಣಾ.
--------------
ಚನ್ನಬಸವಣ್ಣ
ಭವಿತನಕ್ಕೆ ಹೇಸಿ ಭಕ್ತನಾಗಬೇಕೆಂಬಾತನು ಸದ್ಗುರುವನರಸಿಕೊಂಡು ಬಂದು ಅವರ ಕಾರುಣ್ಯದಿಂದ ಮುಕ್ತಿಯಂ ಪಡೆದೆನೆಂದು ಆ ಶ್ರೀಗುರುವಿಂಗೆ ದಂಡಪ್ರಣಾಮಂ ಮಾಡಿ ಭಯಭಕ್ತಿಯಿಂದ ಕರಂಗಳಂ ಮುಗಿದು ನಿಂದಿರ್ದು ಎಲೆ ದೇವಾ ! ಎನ್ನ ಭವಿತನಮಂ ಹಿಂಗಿಸಿ ನಿಮ್ಮ ಕಾರುಣ್ಯದಿಂದೆನ್ನ ಭಕ್ತನಂ ಮಾಡುವುದೆಂದು ಶ್ರೀಗುರುವಿಂಗೆ ಬಿನ್ನಹವಂ ಮಾಡಲು ಆ ಶ್ರೀಗುರುವು ಅಂತಪ್ಪ ಭಯಭಕ್ತಿ ಕಿಂಕರತೆಯೊಳಿಪ್ಪ ಶಿಶುವಂ ಕಂಡು ತಮ್ಮ ಕೃಪಾವಲೋಕನದಿಂ ನೋಡಿ ಆ ಭವಿಯ ಪೂರ್ವಾಶ್ರಯಮಂ ಕಳೆದು ಪೂನರ್ಜಾತನಂ ಮಾಡಿ ಆತನ ಅಂಗದ ಮೇಲೆ ಲಿಂಗಪ್ರತಿಷೆ*ಯಂ ಮಾಡುವ ಕ್ರಮವೆಂತೆಂದಡೆ_ ಓಂ ಅಗ್ನಿರಿತಿ ಭಸ್ಮ ಓಂ ವಾಯುರಿತಿ ಭಸ್ಮ ಓಂ ಜಲಮಿತಿ ಭಸ್ಮ ಓಂ ಸ್ಥಲಮಿತಿ ಭಸ್ಮ ಓಂ ವ್ಯೋಮೇತಿ ಭಸ್ಮ ಓಂ ಸೋಮೇತಿ ಭಸ್ಮ ಓಂ ಸೂರ್ಯೇತಿ ಭಸ್ಮ ಓಂ ಆತ್ಮೇತಿ ಭಸ್ಮ ಎಂಬೀ ಮಂತ್ರದಿಂದ ಆತನ ಅಷ್ಟತನುವಂ ಶುದ್ಧವ ಮಾಡುವುದು ಇನ್ನು ಆತನ ಜೀವ ಶುದ್ಧವ ಮಾಡುವ ಕ್ರಮವೆಂತೆಂದಡೆ_ ಓಂ ಅಸ್ಯ ಪ್ರಾಣಪ್ರತಿಷಾ* ಮಂತ್ರಸ್ಯ ಬ್ರಹ್ಮವಿಷ್ಣು ಮಹೇಶ್ವರಾ ಋಷಯಃ ಋಗ್ಯಜುಃ ಸಾಮಾಥರ್ವಣಾ ಶ್ಫಂದಾಂಸಿ ಸದಾಶಿವ ಮಹಾಪ್ರಾಣ ಇಹಪ್ರಾಣ ಮಮ ಜೀವ ಅಯಂ ತಥಾ ಮಮಾಸಕ್ತ ಸರ್ವೇಂದ್ರಿಯಾಣಿ ವಾಙ್ಮನಶ್ಚಕ್ಷುಃ ಶ್ರೋತ್ರ ಜಿಹ್ವಾಘ್ರಾಣ ಮನೋಬುದ್ಧಿ ಚಿತ್ತ ವಿಜ್ಞಾನವ? ಮಮ ಶರೀರೇ ಅಂಗಸ್ಯ ಸುಖಂ ಸ್ಥಿರಿಷ್ಯತಿ ಜೀವಃ ಶಿವಃ ಶಿವೋ ಜೀವಃ ಸಜೀವಃ ಕೇವಲಃ ಶಿವಃ ಪಾಶಬದ್ಧೋ ಭವೇಜ್ಜೀವಃ ಪಾಶಮುಕ್ತಃ ಶದಾಶಿವಃ ಎಂದೀ ಮಂತ್ರದಿಂದ ಆತನ ಜೀವನ ಶುದ್ಧವಂ ಮಾಡುವುದು. ಇನ್ನು ಆತ್ಮಶುದ್ದವ ಮಾಡುವ ಕ್ರಮವೆಂತೆಂದಡೆ_ ಓಂ ಶಿವಾತ್ಮಕಸುಖಂ ಜೀವೋ ಜೀವಾತ್ಮಕಸುಖಂ ಶಿವಃ ಶಿವಜೀವಾತ್ಮಸಂಯೋಗೇ ಪ್ರಾಣಲಿಂಗಂ ತಥಾ ಭವೇತ್ ಎಂದೀ ಮಂತ್ರದಿಂದ ಆತನ ಆತ್ಮನ ಶುದ್ಧವಂ ಮಾಡುವುದು. ಇನ್ನು ವಾಕ್ಕು ಪಾಣಿ ಪಾದ ಗುಹ್ಯ ಪಾಯುವೆಂಬ ಕರ್ಮೇಂದ್ರಿಯಂಗಳ ಮೇಲಣ ಇಂದ್ರಿಯ ಲಿಖಿತವಂ ತೊಡೆದು ಲಿಂಗಲಿಖಿತವಂ ಮಾಡುವ ಕ್ರಮವೆಂತೆಂದಡೆ_ ಓಂ [ಮೇ] ನೇತ್ರೇ ತ್ರ್ಯಂಬಕಃ ಪಾತು ಮುಖಂ ಪಾತು ಮಹೇಶ್ವರಃ ಕuõ್ರ್ಞ ಪಾತು ಶಂಭುರ್ಮೇ ನಾಸಿ ಕಾಯಾಂ ಭವೋದ್ಭವಃ ವಾಗೀಶಃ ಪಾತು ಮೇ ಜಿಹ್ವಾಮೋಷ*ಂ ಪಾತ್ವಂಬಿಕಾಪತಿಃ ಎಂದೀ ಮಂತ್ರದಿಂದ ಆತನ ಪಂಚೇಂದ್ರಿಯಂಗಳ ಮೇಲಣ ಇಂದ್ರಿಯ ಲಿಖಿತಮಂ ತೊಡೆದು ಲಿಂಗಲಿಖಿತವಂ ಮಾಡುವುದು. ಇನ್ನು ಮನ ಬುದ್ಧಿ ಚಿತ್ತ ಅಹಂಕಾರವೆಂಬ ಅಂತಃಕರಣ ಚತುಷ್ಟಯಂಗಳ ನಿವರ್ತನೆಯ ಮಾಡುವ ಕ್ರಮವೆಂತೆಂದಡೆ_ ಮನದಲ್ಲಿ ಧ್ಯಾನವಾಗಿ ಬುದ್ಧಿಯಲ್ಲಿ ವಂಚನೆಯಿಲ್ಲದೆ ಚಿತ್ತವು ದಾಸೋಹದಲ್ಲಿ ಅಹಂಕಾರವು ಜ್ಞಾನದಲ್ಲಿ ಈ ಮರ್ಯಾದೆಯಲ್ಲಿ ಚತುರ್ವಿಧಮಂ ನಿವರ್ತನೆಯಂ ಮಾಡುವುದು. ಇನ್ನು ಆತಂಗೆ ಪಂಚಗವ್ಯಮಂ ಕೊಟ್ಟು ಏಕಭುಕ್ತೋಪವಾಸಂಗಳಂ ಮಾಡಿಸಿ ಪಂಚಭೂತಸ್ಥಾನದ ಅಧಿದೇವತೆಗಳಂ ತೋರುವುದು ಅವಾವೆಂದಡೆ_ ಬ್ರಹ್ಮಾ ವಿಷ್ಣುಶ್ಚ ರುದ್ರಶ್ಚ ಈಶ್ವರಶ್ಚ ಸದಾಶಿವಃ ಏತೇ ಗರ್ಭಗತಾ ಯಸ್ಯ ತಸ್ಮೈ ಶ್ರೀಗುರವೇ ನಮಃ ಎಂದೀ ಮಂತ್ರದಿಂದ ಆತನ ಪಂಚಭೂತ ಶುದ್ಧಿಯಂ ಮಾಡುವುದು. ಈ ಕ್ರಮದಲ್ಲಿ ಶುದ್ಧಾತ್ಮನಂ ಮಾಡಿದ ಬಳಿಕ ಆತನನ್ನು ಗಣತಿಂಥಿಣಿಯ ಮುಂದೆ ನಿಂದಿರಿಸುವುದು. ನಿಂದಿರ್ದಾತನಂ ದಂಡಪ್ರಣಾಮಮಂ ಮಾಡಿಸುವ ಕ್ರಮವೆಂತೆಂದಡೆ_ ಅನಂತ ಜನ್ಮಸಂಪ್ರಾಪ್ತ ಕರ್ಮೇಂಧನವಿದಾಹಿನೇ ಜ್ಞಾನಾನಲಪ್ರಭಾವಾಯ ತಸ್ಮೈ ಶ್ರೀಗುರವೇ ನಮಃ ಕರ್ಮಣಾ ಮನಸಾ ವಾಚಾ ಗುರು ಭಕ್ತೈತುವತ್ಸಲಃ ಶರೀರಂ ಪ್ರಾಣಮರ್ಥಂ ಚ ಸದ್ಗುರುಭ್ಯೋ ನಿವೇದಯೇತ್ ಪ್ರಣಮ್ಯ ದಂಡವದ್ಭೂಮೌ ಅಷ್ಟಮಂತ್ರೈಃ ಸಮರ್ಚಯೇತ್ ಶ್ರೀಗುರೋಃ ಪಾದಪದ್ಮಂಚ ಗಂಧಪುಷ್ಪಾಕ್ಷತಾದಿಭಿಃ ಅನ್ಯಥಾ ವಿತ್ತಹೀನೋ[s]ಪಿ ಗುರುಭಕ್ತಿಪರಾಯಣಃ ಕೃತ್ವಾ ದಂಡನಮಸ್ಕಾರಂ ಸ್ವಶರೀರಂ ನಿವೇದಯೇತ್ ಎಂದೀ ಮಂತ್ರದಿಂದ ದಂಡಪ್ರಣಾಮವಂ ಮಾಡಿಸುವುದು ಆತನ ರೈವಿಡಿದೆತ್ತುವ ಕ್ರಮವೆಂದರೆ ಗುರುಃ ಪಿತಾ ಗುರುರ್ಮಾತಾ ಗುರುರೇವ ಹಿ ಬಾಂಧವಃ ಗುರುದೈವಾತ್ಪರಂ ನಾಸ್ತಿ ತಸ್ಮೈ ಶ್ರೀಗುರವೇ ನಮಃ ಓಂ ಗುರುದೇವೋ ಭವ, ಓಂ ಪಿತೃದೇವೋ ಭವ, ಓಂ ಆಚಾರ್ಯದೇವೋ ಭವ ಎಂದೀ ಮಂತ್ರದಿಂದ ಆತನ ಕೈವಿಡಿದೆತ್ತುವುದು ಇನ್ನು ಭೂಶುದ್ಧಿಯಂ ಮಾಡುವ ಕ್ರಮವೆಂತೆಂದಡೆ_ ಓಂ ಶಿವಶಿವ ಶಿವಾಜ್ಞಾ ವಿಷ್ಣುಪ್ರವರ್ತಮಾನುಷಾ ಅಪವಿತ್ರಃ ಪವಿತ್ರೋವಾ ಸರ್ವಾವಸ್ಥಾಂಗತೋ[s]sಪಿ ವಾ ಯಃ ಸ್ಮರೇತ್ ಪುಂಡರೀಕಾಕ್ಷಂ ಸ ಬಾಹ್ಯಾಭ್ಯಂತರಃ ಶುಚಿಃ ಪ್ರಥ್ವಿ ತ್ವಯಾ ಧೃತಾ ದೇವಿ ದೇವತ್ವಂ ವಿಷ್ಣುನಾ ಧೃತಾ ಪಂಚದಾರಾಮಯೋ ದೇವಿ ಪವಿತ್ರಂ ಕುರು ಚಾಸನಮ್ ಸಮ್ಮಾರ್ಜನಂ ಶತಂ ಪುಣ್ಯಂ ಸಹಸ್ರಮನುಲೇಪನಮ್ ರೇಖಾಶತಸಹಸ್ರೇಷು ಅನಂತಂ ಪದ್ಮಮುಚ್ಯತೇ ಬಂಧೋ ಭವಹರಶ್ಚೈವ ಸ್ವಸ್ತಿಕಂ ಶತ್ರುನಾಶನಮ್ ಪದ್ಮಂ ಪುಣ್ಯಂ ಫಲಂ ಚೈವ ಮುದ್ರಾ ತು ಮೋಕ್ಷಸಾಧನಮ್ ಎಂದೀ ಮಂತ್ರದಿಂದ ಭೂಶುದ್ಧಿಯ ಮಾಡುವದು. ಇನ್ನು ಆತನ ಚೌಕಮಧ್ಯದಲ್ಲಿ ಕುಳ್ಳಿರಿಸುವ ಕ್ರಮವೆಂತೆಂದಡೆ- ಓಂ ನಮೋ ರುದ್ರೇಭ್ಯೋ ಯೇ ಪೃಥ್ವಿವ್ಯಾಂ ಯೇ[s]ಂತರಿಕ್ಷೇ ಯೇ ದಿವಿ ಯೇಷಾಮನ್ನಂ ವಾತೋ ವರ್ಷಮಿಷವಸ್ತೇಭ್ಯೋ ದಶಪ್ರಾಚೀರ್ದಶ ದಕ್ಷಿಣಾ ದಶ ಪ್ರತೀಚೀರ್ದಶೋದೀಚೀರ್ದಶೋಧ್ರ್ವಾಸ್ತೇಭ್ಯೋ ನಮಸ್ತೇನೋ ಮೃಡಯಂತು ತೇ ಯಂ ದ್ವಿಷ್ಟೋ ಯಶ್ಚನೋ ದ್ವೇಷ್ಟಿ ತಂ ವೊ ಜಂಬೇ ದಧಾಮಿ ಚಾಂ ಪೃಥಿವ್ಯಾ ಮೇರು ಪೃಷ* ಋಷಿಃ ಕೂರ್ಮೋ ದೇವತಾ ಜಗತೀ ಛಂದಃ ಆಸನೇ ವಿನಿಯೋಗಃ ಎಂದೀ ಮಂತ್ರದಿಂದ ಶ್ರೀಗುರು ಆತನ Zõ್ಞಕಮಧ್ಯದಲ್ಲಿ ಕುಳ್ಳಿರಿಸುವುದು. ಇನ್ನು ನಾಲ್ಕೂ ಕಲಶದ ಪ್ರತ್ಯೇಕ ಪ್ರಧಾನ ದೇವತೆಗಳಂ ಕುಳ್ಳಿರಿಸಿ ಗುರುಕಲಶವಂ ಸ್ಥಾಪ್ಯವಂ ಮಾಡುವ ಕ್ರಮವೆಂತೆಂದಡೆ- ಚೌಕಮಧ್ಯೇ ಸುಮಾಂಗಲ್ಯಂ ಷೋಡಶಂ ಕಲಶಂ ತಥಾ ಭಾಸುರಂ ತಂಡುಲಂ ತಸ್ಯ ಪಂಚಸೂತ್ರಂ ತಥೈವ ಚ ತೇಷು ತೀರ್ಥಾಂಬುಪೂರ್ಣೇಷು ನಿದಧ್ಯಾದಾಮ್ರಪಲ್ಲವಾನ್ ದೂರ್ವಾಂಕುರಸುಪೂಗಾನಿ ನಾಗವಲ್ಲೀದಲಾನ್ಯಪಿ ಓಂ ತತ್ಪುರುಷಾಯ ನಮಃ ತತ್ಪುರುಷವಕ್ತ್ರಾಯ ನಮಃ ಓಂ ಅಘೋರರಾಯ ನಮಃ ಅಘೋರವಕ್ತ್ರಾಯ ನಮಃ ಓಂ ಸದ್ಯೋಜಾತಾಯ ನಮಃ ಸದ್ಯೋಜಾತವಕ್ತ್ರಾಯ ನಮಃ ಓಂ ವಾಮದೇವಾಯ ನಮಃ ವಾಮದೇವವಕ್ತ್ರಾಯ ನಮಃ ಓಂ ಈಶಾನಾಯ ನಮಃ ಈಶಾನವಕ್ತ್ರಾಯ ನಮಃ ಓಂ ತತ್ಪುರುಷ ಅಘೋರ ಸದ್ಯೋಜಾತ ವಾಮದೇವ ಈಶಾನ ವಕ್ತ್ರೇಭ್ಯೋ ನಮಃ ಎಂದು ಈ ಮಂತ್ರದಿಂದ ಗುರುಕಲಶಕ್ಕೆ ಪಂಚಸೂತ್ರಂಗಳನಿಕ್ಕಿ ಪಂಚಪಲ್ಲವಂಗಳನಿಕ್ಕಿ ಪಂಚಮುಖಂಗಳನಿಕ್ಕಿ ಗುರುಕಲಶವಂ ಸ್ಥಾಪ್ಯವಂ ಮಾಡುವುದು. ಇನ್ನು ಜಲಶುದ್ಧವಂ ಮಾಡುವ ಕ್ರಮವೆಂತೆಂದಡೆ - ಓಂ ನಮಃ ಶಿವಾಯ ನಮಸ್ತೇ ಅಸ್ತು ಭಗವನ್ ವಿಶ್ವೇಶ್ವರಾಯ ಮಹಾದೇವಾಯ ತ್ರ್ಯಂಬಕಾಯ ತ್ರಿಪುರಾಂತಕಾಯ ತ್ರಿಕಾಲಾಗ್ನಿಕಾಲಾಯ ಕಾಲಾಗ್ನಿರುದ್ರಾಯ ನೀಲಕಂಠಾಯ ಮೃತ್ಯುಂಜಯಾಯ ಸರ್ವೇಶ್ವರಾಯ ಸದಾಶಿವಾಯ ಶ್ರೀಮನ್ಮಹಾದೇವಾಯ ನಮಃ ಓಂ ನಿಧನಪತಯೇ ನಮಃ ನಿಧನಪತಾಂತಿಕಾಯ ನಮಃ ಓಂ ಊಧ್ರ್ವಾಯ ನಮಃ ಊಧ್ರ್ವಲಿಂಗಾಯ ನಮಃ ಓಂ ಹಿರಣ್ಯಾಯ ನಮಃ ಹಿರಣ್ಯಲಿಂಗಾಯನಮಃ ಓಂ ಸುವರ್ಣಾಯ ನಮಃ ಸುವರ್ಣಲಿಂಗಾಯ ನಮಃ ಓಂ ದಿವ್ಯಾಯ ನಮಃ ದಿವ್ಯಲಿಂಗಾಯ ನಮಃ ಓಂ ಭವಾಯ ನಮಃ ಭವಲಿಂಗಾಯ ನಮಃ ಓಂ ಶಿವಾಯ ನಮಃ ಶಿವಲಿಂಗಾಯ ನಮಃ ಓಂ ಜ್ಯೇಷಾ*ಯ ನಮಃ ಜ್ಯೇಷ*ಲಿಂಗಾಯ ನಮಃ ಓಂ ಶ್ರೇಷಾ*ಯ ನಮಃ ಶ್ರೇಷ*ಲಿಂಗಾಯ ನಮಃ ಓಂ ಜ್ವಲಾಯ ನಮಃ ಜ್ವಲಲಿಂಗಾಯ ನಮಃ ಓಂ ಸ್ಥೂಲಾಯ ನಮಃ ಸ್ಥೂಲಲಿಂಗಾಯ ನಮಃ ಓಂ ಸೂಕ್ಷ್ಮಾಯ ನಮಃ ಸೂಕ್ಷ್ಮಲಿಂಗಾಯ ನಮಃ ಓಂ ಶೂನ್ಯಾಯ ನಮಃ ಶೂನ್ಯಲಿಂಗಾಯ ನಮಃ ಓಂ ನೇತ್ರಾಯ ನಮಃ ನೇತ್ರಲಿಂಗಾಯ ನಮಃ ಓಂ ಶ್ರೋತ್ರಾಯ ನಮಃ ಶ್ರೋತ್ರಲಿಂಗಾಯ ನಮಃ ಓಂ ಘ್ರಾಣಾಯ ನಮಃ ಘ್ರಾಣಲಿಂಗಾಯ ನಮಃ ಓಂ ಪ್ರಾಣಾಯ ನಮಃ ಪ್ರಾಣಲಿಂಗಾಯ ನಮಃ ಓಂ ವ್ಯೋಮಾಯ ನಮಃ ವ್ಯೋಮಲಿಂಗಾಯ ನಮಃ ಓಂ ಆತ್ಮಾಯ ನಮಃ ಆತ್ಮಲಿಂಗಾಯ ನಮಃ ಓಂ ಪರಮಾಯ ನಮಃ ಪರಮಲಿಂಗಾಯ ನಮಃ ಓಂ ಶರ್ವಾಯ ನಮಃ ಶರ್ವಲಿಂಗಾಯ ನಮಃ ಓಂ ಶಾಂತಾಯ ನಮಃ ಶಾಂತಲಿಂಗಾಯ ನಮಃ ಓಮೇತತ್ಸೋಮಸ್ಯ ಸೂರ್ಯಸ್ಯ ಸರ್ವಲಿಂಗಂ ಸ್ಥಾಪಯತಿ ಪಾಣಿಮಂತ್ರಂ ಪವಿತ್ರಮ್ ಓಂ ನಮಸ್ತೇ ಸರ್ವೋ ವೈ ರುದ್ರಸ್ತಸ್ಮೈ ರುದ್ರಾಯ ನಮೋsಸ್ತು ನಮೋ ಹಿರಣ್ಯಬಾಹವೇ ಹಿರಣ್ಯವರ್ಣಾಯ ಹಿರಣ್ಯರೂಪಾಯ ಹಿರಣ್ಯಪತಯೇ ಅಂಬಿಕಾಪತಯೇ ಉಮಾಪತಯೇ ಪಶುಪತಯೇ ನಮೋ ನಮಃ ಋತಂ ಸತ್ಯಂ ಪರಬ್ರಹ್ಮ ಪುರುಷಂ ಕೃಷ್ಣಪಿಂಗಲಂ ಊಧ್ರ್ವರೇತಂ ವಿರೂಪಾಕ್ಷಂ ವಿಶ್ವರೂಪಾಯ ವೈ ನಮೋ ನಮಃ ಓಂ ಸದ್ಯೋಜಾತಂ ಪ್ರಪದ್ಯಾಮಿ ಸದ್ಯೋಜಾತಾಯ ವೈ ನಮೋ ನಮಃ ಭವೇ ಭವೇ ನಾತಿಭವೇ ಭವಸ್ವ ಮಾಂ ಭವೋದ್ಭವಾಯ ನಮಃ ಓಂ ವಾಮದೇವಾಯ ನಮೋ ಜ್ಯೇಷಾ*ಯ ನಮಃ ಶ್ರೇಷಾ*ಯ ನಮೋ ರುದ್ರಾಯ ನಮಃ ಕಾಲಾಯ ನಮಃ ಕಲವಿಕರಣಾಯ ನಮೋ ಬಲವಿಕರಣಾಯ ನಮೋ ಬಲಾಯ ನಮೋ ಬಲಪ್ರಮಥನಾಥಾಯ ನಮಃ ಸರ್ವಭೂತದಮನಾಯ ನಮೋ ಮನೋನ್ಮನಾಯ ನಮಃ ಓಂ ಅಘೋರೇಭ್ಯೋsಥ ಘೋರೇಭ್ಯೋ ಘೋರಘೋರತರೇಭ್ಯಃ ಸರ್ವೇಭ್ಯಸ್ಯರ್ವ ಸರ್ವೇಭ್ಯೋ ನಮಸ್ತೇ ಅಸ್ತು ರುದ್ರರೂಪೇಭ್ಯಃ ಶ್ರೀ ಸದಾಶಿವಾಯ ನಮಃ ಓಂ ತತ್ಪುರುಷಾಯ ವಿದ್ಮಹೇ ಮಹಾದೇವಾಯ ಧೀಮಹಿ ತನ್ನೋ ರುದ್ರಃ ಪ್ರಚೋದಯಾತ್ ಓಮೀಶಾನಃ ಸರ್ವವಿದ್ಯಾನಾಮೀಶ್ವರಃ ಸರ್ವಭೂತಾನಾಂ ಬ್ರಹ್ಮಾಧಿಪತಿಬ್ರಹ್ಮಣೋsಧಿಪತಿಬ್ರ್ರಹ್ಮಾ ಶಿವೋ ಮೇ ಅಸ್ತು ಸದಾಶಿವೋಂ ಕದ್ರುದ್ರಾಯ ಪ್ರಚೇತಸೇ ಮೀಡುಷ್ಟಮಾಯ ತವ್ಯಸೇ ವೋಚೇಮ ಶಂತಮಗ್‍ಂ ಹೃದೇ ಏಕಃ ಶಿವ ಏವಾನ್ಯರಹಿತಾಯ ತೇ ನಮೋ ನಮಃ ಓಂ ವಿಶ್ವಂ ಭೂತಂ ಭುವನಂ ಚಿತ್ರಂ ಬಹುಧಾಜಾತಂ ಜಾಯಮಾನಂ ಚ ಯತ್ ಓಂ ಶಂ ಚ ಮೇ ಮಯಶ್ಚ ಮೇ ಪ್ರಿಯಂ ಚ ಮೇ[s] ಸುಕಾಮಶ್ಚ ಮೇ ಕಾಮಶ್ಚ ಮೇ ಸೌಮನಶ್ಚ ಮೇ ಭದ್ರಂ ಚ ಮೇ ಶ್ರೇಯಶ್ಚ ಮೇ ವಸ್ಯಶ್ಚ ಮೇ ಯಶಶ್ಚ ಮೇ ಭಗಶ್ಚ ಮೇ ದ್ರವಿಣಂ ಚ ಮೇ ಯಂತಾ ಚ ಮೇ ಧರ್ತಾ ಚ ಮೇ ಕ್ಷೇಮಶ್ವಮೇ ಧೃತಿಶ್ಚಮೇ ವಿಶ್ವಂ ಚ ಮೇ ಮಹಶ್ಚಮೇ ಸಂವಿಚ್ಚ ಮೇ ಜ್ಞಾತ್ರಂ ಚ ಮೇ ಸೂಶ್ಚ ಮೇ ಪ್ರಸೂಶ್ಚ ಮೇ ಸೀರಂ ಚ ಮೇ ಲಯಶ್ಚಯ ಮೇ ಅಮೃತಂ ಚ ಮೇ ಯಕ್ಷ್ಮಂಚ ಮೇ[s] ಮೃತಂ ಚ ಮೇ ನಾಮಯಶ್ಚ ಮೇ ಜೀವಾತು ಶ್ಚ ಮೇ ದೀರ್ಘಾಯುತ್ವಂ ಚ ನಮಿತ್ರಂ ಚ ಮೇS ಭಯಂ ಚಮೇ ಸುಗಂಧಂ ಚ ಮೇ ಶಯನಂ ಚ ಮೇ ಸೂಷಾ ಚ ಮೇ ಸುದಿನಂ ಚ ಮೇ ಓಂ ಸಹನಾವವತು ಸಹ £õ್ಞ ಭುನಕ್ತು ಸಹ ವೀರ್ಯಂ ಕರವಾವಹೈ ತೇಜಸ್ವಿನಾವಧೀತಮಸ್ತು ಮಾ ವಿದ್ವಿಷಾವಹೈ ಓಂ ಶಾಂತಿಃ ಶಾಂತಿಃ ಶಾಂತಿಃ ಎಂದೀ ಮಂತ್ರದಿಂದ ಜಲಶುದ್ಧವಂ ಮಾಡುವುದು. ಇನ್ನು ಜಂಗಮಕ್ಕೆ ಪಾದಾರ್ಚನೆಯಂ ಮಾಡುವ ಕ್ರಮವೆಂತೆಂದಡೆ_ ಅಂಗುಷಾ*ಗ್ರೇ ಅಷ್ಟಷಷ್ಟಿ ತೀರ್ಥಾನಿ ನಿವಸಂತಿ ವೈ ಸಪ್ತಸಾಗರಪಾದಾಧಸ್ತದೂಧ್ರ್ವೇ ಕುಲಪರ್ವತಾಃ ಚರಸ್ಯ ಪಾದತೀರ್ಥೇನ ಲಿಂಗಮಜ್ಜನಮುತ್ತಮವಮ್ ತತ್ಪ್ರಸಾದಂ ಮಹಾದೇವಿ ನೈವೇದ್ಯಂ ಶುಭಮಂಗಲಮ್ ಈ ಮಂತ್ರದಿಂದ ಪಾದಾರ್ಚನೆಯಂ ಮಾಡುವುದು. ಇನ್ನು ಕುಮಾರಠಾವನು ಜಲಾಭಿವಾಸವ ಮಾಡುವ ಕ್ರಮವೆಂತೆಂದಡೆ_ ಜ್ವಾಲಾಮಾಲಾವೃತಾಂಗಾಯ ಜ್ವಲನಸ್ತಂಭರೂಪಿಣೇ ನಮಃ ಶಿವಾಯ ಶಾಂತಾಯ ಬ್ರಹ್ಮಣೇ ಲಿಂಗಮೂರ್ತಯೇ ಎಂದೀ ಮಂತ್ರದಿಂದ ಕುಮಾರಠಾವನ್ನು ಜಲಾಧಿವಾಸವ ಮಾಡಿಸುವುದು. ಇನ್ನು ಆ ಶಿಷ್ಯನ ಹಸ್ತವಂ ಶೋಧಿಸುವ ಕ್ರಮವೆಂತೆಂದಡೆ_ ಓಂ ತ್ರಾತ್ವಿಯಂ ಶಕ್ತಿಃ ಶ್ರೀಕರಂ ಚ ಪವಿತ್ರಂ ಚ ರೋಗಶೋಕಭಯಾಪಹವರಿï ಮನಸಾ ಸಹ ಹಸ್ತೇಭ್ಯೋ ಪದ್ಭ್ಯಾಮುದ್ಧರಣಾಯ ಚ ಎಂದೀ ಮಂತ್ರದಿಂದ ಶಿಷ್ಯನ ಹಸ್ತವಂ ಶೋಧಿಸುವುದು. ಇನ್ನು ವಿಭೂತಿಯ ಧರಿಸುವ ಕ್ರಮವೆಂತೆಂದಡೆ_ ಮೂಧ್ರ್ನಿ ಲಲಾಟೇ ಕರ್ಣೇ ಚ ಚಕ್ಷುಷೋಘ್ರ್ರಾಣಕೇ ತಥಾ ಆಸ್ಯೇ ದ್ವಾಭ್ಯಾಂ ಚ ಬಾಹುಭ್ಯಾಂ ತನ್ಮೂಲತನವಸ್ತಥಾ ಮಣಿಬಂಧೇ ಚ ಹೃತ್ಪಾಶ್ರ್ವೇ ನಾಭೌ ಮೇಢ್ರೇ ತಥೈವ ಚ ಉರೌ ಚ ಜಾನುಕೇ ಚೈವ ಜಂಘಾ ಪೃಷೆ*ೀ ತಥೈವ ಚ ಪಾದೇ ದ್ವಾತ್ರಿಂಶತಿಶ್ಚೈವ ಪಾದಸಂಧೌ ಯಥಾ ಕ್ರಮಾತ್ ಇತ್ಯುದ್ಧೂಳನಂ ಸ್ನಾನಂ ಧಾರಣಂ ಮೋಕ್ಷಕಾರಣಮ್ ಎಂದೀ ಮಂತ್ರದಿಂದ ಆ ಶಿಷ್ಯನ ಮೂವತ್ತೆರಡು ಸ್ಥಾನಗಳಲ್ಲಿ ವಿಭೂತಿಯಂ ಧರಿಸುವುದು. ಇನ್ನು ರುದ್ರಾಕ್ಷಿಯಂ ಧರಿಸುವ ಕ್ರಮವೆಂತೆಂದಡೆ_ ಓಂ ಹ್ರೂಂ ಶ್ರೂಂ ಭ್ರೂಂ ರೂಂ ಬ್ರೂ_ ಪ್ರರೂಮಪಿ ಸ್ರೀಯಂ ಕ್ಷೇಕ್ಷಮಪಿಕ್ಷೂ ಹ್ರೀಂ ನಮೋಂತಿ ಮಯಯೇ ಇತಿ ಪೂರ್ವೋಕ್ತ ಮಂತ್ರಾನಂತರೇ ಪ್ರಾಣನಾಯಮ್ಯ ಸಮಸ್ತ ಪಾಪಕ್ಷಯಾರ್ಥಂ ಶಿವಜ್ಞಾನಾವಾಪ್ತ್ಯರ್ಥಂ ಸಮಷ್ಟಿಮಂತ್ರೈಃ ಸಹ ಧಾರಣಂ ಕರಿಷ್ಯೇ ಇತಿ ಸಂಕಲ್ಪ್ಯ_ ಶಿರಸಾ ಧಾರಯೇತ್ಕೋಟಿ ಕರ್ಣಯೋರ್ದಶಕೋಟಿಭಿಃ ಶತಕೋಟಿ ಗಳೇ ಬದ್ಧಂ ಸಹಸ್ರಂ ಬಾಹುಮೂಲಯೋಃ ಅಪ್ರಮಾಣಫಲಂ ಹಸ್ತೇ ರುದ್ರಾಕ್ಷಂ ಮೋಕ್ಷಸಾಧನವರಿï ಎಂದೀ ಮಂತ್ರದಿಂದ ಆ ಶಿಷ್ಯನ ಹಸ್ತಂಗಳಲ್ಲಿ ರುದ್ರಾಕ್ಷಿಯಂ ಧರಿಸುವುದು, ಇನ್ನು ಜಲಾಧಿವಾಸದೊಳಗಣ ಕುಮಾರಠಾವಂ ತೆಗೆಯುವ ಕ್ರಮವೆಂತೆಂದಡೆ_ ಮಹಾದೇವಾಯ ಮಹತೇ ಜ್ಯೋತಿಷೇSನಂತತೇಜಸೇ ನಮಃ ಶಿವಾಯ ಶಾಂತಾಯ ಬ್ರಹ್ಮಣೇ ಲಿಂಗಮೂರ್ತಯೇ ಎಂದೀ ಮಂತ್ರದಿಂದ ಜಲಾಧಿವಾಸದೊಳಗಣ ಕುಮಾರಠಾವಂ ತೆಗೆಯುವದು. ಇನ್ನು ಶಿಲೆಯ ಪೂವಾಶ್ರಯವಂ ಕಳೆವ ಪರಿಯೆಂತೆಂದಡೆ_ ವಿಶ್ವತಶ್ಚಕ್ಷುರುತ ವಿಶ್ವತೋಮುಖೋ ವಿಶ್ವತೋಬಾಹುರುತ ವಿಶ್ವತಃಸ್ವಾತ್ ಸಂಬಾಹುಭ್ಯಾಂ ದಮತಿ ಸಂಪದಂ ತ್ರಯೀ_ ದ್ರ್ಯಾವಾಭೂಮೀ ಜನಯನ್ ದೇವ ಏಕಃ ಎಂದೀ ಮಂತ್ರದಿಂದ ಆ ಶಿಲೆಯ ಪೂರ್ವಾಶ್ರಯವಂ ಕಳೆವುದು. ಇನ್ನು ಆ ಶಿಲೆಗೆ ಪ್ರಾಣ ಪ್ರತಿಷೆ*ಯಂ ಮಾಡುವ ಕ್ರಮವೆಂತೆಂದಡೆ_ ಓಂ ವಿಶ್ವಾಧಿಕೋ ರುದ್ರೋ ಮಹರ್ಷಿಃ ಸರ್ವೋ ಹ್ಯೇಷ ರುದ್ರ ಸ್ತಸ್ಮೈ ರುದ್ರಾಯ ತೇ ಅಸ್ತು ನಮೋ ರುದ್ರೋ ವೈ ಕ್ರೂರೋ_ ರುದ್ರಃ ಪಶುನಾಮಧಿಪತಿಸ್ತಥಾ ದೇವಾ ಊಧ್ರ್ವಬಾಹವೊ_ ರುದ್ರಾ ಸ್ತುನ್ವಂತಿ ಯಸ್ಮಾತ್ಪರಂ ನಾಪರಮಸ್ತಿ ಕಿಂಚಿದ್ಯಸ್ಯಾನಾ ಣೀಯೋ ನ ಧ್ಯೇಯಃ ಕಿಂಚಿತ್ ಶಿವ ಏಕೋ ಧ್ಯೇಯಃ ಎಂದೀ ಮಂತ್ರದಿಂದ ಆ ಶಿಲೆಗೆ ಪ್ರಾಣಪ್ರತಿಷೆ*ಯಂ ಮಾಡುವುದು. ಇನ್ನು ದೇವರಿಗೆ ಸ್ನಪನಕ್ಕೆರೆಯುವ ಕ್ರಮವೆಂತೆಂದಡೆ_ ಸಪುಷ್ಪಶೀರ್ಷಕಂ ಲಿಂಗಂ ತಥಾ ಸ್ನಪನಮಾಚರೇತ್ ಪಯೋಧಧ್ಯಾಜಮಧ್ವಿಕ್ಷುರಸೈರ್ಮೂಲೇನ ಪಂಚಭಿಃ ಓಮನಂತ ಶುಚಿರಾಯುಕ್ಷ ಭಕ್ತಂ ತಿಸ್ತರತಾತ್ ಪರಮಂ ನಿಯಮುಚ್ಯತೇರ್ಮರಾತಸ್ಯ ಅವಿರಸ ಭುವನಂ ಜ್ಯೋತಿರೂಪಕವರಿï ಎಂದೀ ಮಂತ್ರದಿಂದ ದೇವರಿಗೆ ಸ್ನಪನಕ್ಕೆರೆವುದು. ಇನ್ನು ದೇವರಿಗೆ ವಸ್ತ್ರವಂ ಸಮರ್ಪಿಸುವುದೆಂತೆಂದಡೆ - ವ್ಯೋಮರೂಪ ನಮಸ್ತೇSಸ್ತು ವ್ಯೋಮತ್ಮಾಯ ಪ್ರಹರ್ಷಿಣೇ ವಾಸಾಂಸಿ ಚ ವಿಚಿತ್ರಾಣಿ ಸರವಂತಿ ಮೃದೂನಿ ಚ ಶಿವಾಯ ಗುರವೇ ದತ್ತಂ ತಸ್ಯ ಪುಣ್ಯಫಲಂ ಶೃಣು ಏವಂ ತದ್ವಸ್ತ್ರತಂತೂನಾಂ ಪರಿಸಂಖ್ಯಾತ ಏವ ಹಿ ತಾವದ್ವರ್ಷಸಹಸ್ರಾಣಿ ರುದ್ರಲೋಕೇ ಮಹೀಯತೇ ಎಂದೀ ಮಂತ್ರದಿಂದ ದೇವರಿಗೆ ವಸ್ತ್ರವಂ ಸಮರ್ಪಿಸುವುದು. ಇನ್ನು ದೇವರಿಗೆ ಗಂಧವಂ ಸಮರ್ಪಿಸುವ ಕ್ರಮವೆಂತೆಂದಡೆ- ಚಂದನಾಗರುಕರ್ಪೂರತಮಾಲದಳಕುಂಕುಮಂ ಉಶೀರಕೋಷ*ಸಂಯುಕ್ತಂ ಶಿವಗಂಧಾಷ್ಟಕಂ ಸ್ಮೃತವಮ್ ಆಚಮಾನಸ್ತು ಸಿದ್ಧಾರ್ಥಂ ಅವಧಾರ್ಯ ಯಥೈವ ಚ ಅಷ್ಟಗಂಧಸಮಾಯುಕ್ತಂ ಪುಣ್ಯಪ್ರದಸಮನ್ವಿತವಮ್ ಎಂದೀ ಮಂತ್ರದಿಂದ ದೇವರಿಗೆ ಗಂಧಮಂ ಸಮರ್ಪಿಸುವುದು. ಇನ್ನು ದೇವರಿಗೆ ಅಕ್ಷತೆಯನರ್ಪಿಸುವ ಕ್ರಮವೆಂತೆಂದಡೆ ಅಭಿನ್ನಶಂಖವಚ್ಚೈವ ಸುಶ್ವೇತವ್ರೀಹಿತಂಡುಲವಮ್ ಸ್ಮೃತಂ ಶಿವಾರ್ಚನಾಯೋಗ್ಯಂ ನೇತರಂ ಚ ವರಾನನೇ ಗಂಧಾಕ್ಷತಸಮಾಯುಕ್ತಂ ಶಿವಮುಕ್ತೇಶ್ಚಕಾರಣಮ್ ಸರ್ವವಿಘ್ನವಿನಿರ್ಮುಕ್ತಂ ಶಿವಲೋಕೇ ಮಹೀಯತೇ ಎಂದೀ ಮಂತ್ರದಿಂದ ದೇವರಿಗೆ ಅಕ್ಷತೆಯಂ ಸಮರ್ಪಿಸುವುದು. ಇನ್ನು ದೇವರಿಗೆ ಪುಷ್ಪವಂ ಸಮರ್ಪಿಸುವ ಕ್ರಮವೆಂತೆಂದಡೆ - ಮಲ್ಲಿಕೋತ್ಪಲಪುನ್ನಾಗಕದಂಬಾಶೋಕಚಂಪಕಮ್ ಸೇವಂತಿಕರ್ಣಿಕಾರಾಖ್ಯಂ ತ್ರಿಸಂಧ್ಯಾರಕ್ತಕೇಸರೀ ಕದಂಬವನಸಂಭೂತಂ ಸುಗಂಧಿಂ ಚ ಮನೋಹರಮ್ ತತ್ವತ್ರಯಾತ್ಮಕಂ ದಿವ್ಯಂ ಪುಷ್ಪಂ ಶಂಭೋSರ್ಪಯಾಮಿ ತೇ ಎಂದೀ ಮಂತ್ರದಿಂದ ದೇವರಿಗೆ ಪುಷ್ಪವ ಸಮರ್ಪಿಸುವದು. ಇನ್ನು ದೇವರಿಗೆ ಧೂಪವ ಸಮರ್ಪಿಸುವ ಕ್ರಮವೆಂತೆಂದಡೆ- ಗುಗ್ಗುಲಂ ಘೃತಸಂಯುಕ್ತಂ ಲಿಂಗಮಭ್ಯಚ್ರ್ಯ ಸಂದಹೇತ್ ವನಸ್ಪತಿವಾಸನೋಕ್ತಂ ಗಂಧಂ ದದ್ಯಾತ್ತಮುತ್ತಮಮ್ ಅರ್ಪಣಾದೇವ ದೇವಾಯ ಭಕ್ತಪಾಪಹರಾಯ ಚ ಎಂಬೀ ಮಂತ್ರದಿಂದ ದೇವರಿಗೆ ಧೂಪವನರ್ಪಿಸುವುದು. ಇನ್ನು ದೇವರಿಗೆ ದೀಪವ ಸಮರ್ಪಿಸುವ ಕ್ರಮವೆಂತೆಂದಡೆ- ಸ್ವಪ್ರಕಾಶ ಮಹಾತೇಜ ಸರ್ವಾಂತಸ್ತಿಮಿರಾಪಹೆ ಸ ಬಾಹ್ಯಾಭ್ಯಂತರಂ ಜ್ಯೋತಿರ್ದೀಪೊSಯಂ ಪ್ರತಿಗೃಹ್ಯತಾಮ್ ಎಂಬೀ ಮಂತ್ರದಿಂದ ದೇವರಿಗೆ ದೀಪವನರ್ಪಿಸುವುದು. ಇನ್ನು ದೇವರಿಗೆ ನೈವೇದ್ಯವನರ್ಪಿಸುವ ಕ್ರಮವೆಂತೆಂದಡೆ- ಕ್ಷೀರವಾರಿದಿ[s]ಸಂಭೂತಮಮೃತಂ ಚಂದ್ರಸನ್ನಿಭಮ್ ನೈವೇದ್ಯಂ ಷಡ್ರಸೋಪೇತಂ ಶಾಶ್ವತಾಯ ಸಮರ್ಪಿತಮ್ ಎಂಬೀ ಮಂತ್ರದಿಂದ ದೇವರಿಗೆ ನೈವೇದ್ಯವ ಸಮರ್ಪಿಸುವುದು. ಇನ್ನು ದೇವರಿಗೆ ತಾಂಬೂಲವ ಸಮರ್ಪಿಸುವ ಕ್ರಮವೆಂತೆಂದಡೆ- ಪೂಗಸಂಭೂತಕರ್ಪೂರ ಚೂರ್ಣಪರ್ಣದ್ವಿಸಂಯುತಃ ತ್ರಯೋದಶಕಲಾತ್ಮಾನಂ ತಾಂಬೂಲಂ ಫಲಮುಚ್ಯತೇ ಎಂದೀ ಮಂತ್ರದಿಂದ ದೇವರಿಗೆ ತಾಂಬೂಲವ ಸಮರ್ಪಿಸುವುದು. ಇನ್ನು ದೇವರಿಗೆ ಮಂತ್ರಪುಷ್ಪವ ಸಮರ್ಪಿಸುವ ಕ್ರಮವೆಂತೆಂದಡೆ ತ್ರಿಯಂಬಕಂ ಯಜಾಮಹೇ ಸುಗಂಧಿಂ ಪುಷ್ಟಿವರ್ಧನವಮ್ ಉರ್ವಾರುಕಮಿವ ಬಂಧನಾನ್ಮುೃತ್ಯೋರ್ಮುಕ್ಷೀಯ ಮಾಮೃತಾತ್ ಎಂಬೀ ಮಂತ್ರದಿಂದ ದೇವರಿಗೆ ಮಂತ್ರಪುಷ್ಪವಂ ಸಮರ್ಪಿಸುವುದು. ಇನ್ನು ದೇವರಿಗೆ ನಮಸ್ಕಾರವಂ ಮಾಡುವ ಕ್ರಮವೆಂತೆಂದಡೆ- ಪಿÀಠಂ ಯಸ್ಯಾ ಧರಿತ್ರೀ ಜಲಧರಕಲಶಂ ಲಿಂಗಮಾಕಾಶಮೂರ್ತಿಂ ನಕ್ಷತ್ರಂ ಪುಷ್ಪಮಾಲ್ಯಂ ಗ್ರಹಗಣಕುಸುಮಂ ನೇತ್ರಚಂದ್ರಾರ್ಕವಹ್ನಿಮ್ ಕುಕ್ಷಿಂ ಸಪ್ತ ಸಮುದ್ರಂ ಭುಜಗಿರಿಶಿಖರಂ ಸಪ್ತಪಾತಾರಿಪಾದಂ ವೇದಂ ವಕ್ತ್ರಂ ಷಡಂಗಂ ದಶದಿಶಸನಂ ದಿವ್ಯಲಿಂಗಂ ನಮಾಮಿ ಎಂಬೀ ಮಂತ್ರದಿಂದ ದೇವರಿಗೆ ನಮಸ್ಕಾರವಂ ಮಾಡುವುದು. ಇನ್ನು ದೇವರಿಗೆ ಅನುಷಾ*ನವಂ ಮಾಡುವ ಕ್ರಮವೆಂತೆಂದಡೆ- ``ಏತೇಷಾಂ ಪುರುಷೋsಸ್ತು'' ಎಂದೀ ಮಂತ್ರದಿಂದ ದೇವರಿಗೆ ಅನುಷಾ*ನವಂ ಮಾಡುವುದು. ಇನ್ನು ಅನುಷಾ*ನವಂ ಮಾಡಿದ ಬಳಿಕ ಶ್ರೀಗುರುವು ಶಿಷ್ಯಂಗೆ ಉರಸ್ಥಲದ ಸಜ್ಜೆಯಲ್ಲಿ ಲಿಂಗವ ಧರಿಸುವ ಕ್ರಮವೆಂತೆಂದಡೆ- ಅಯಂ ಮೇ ಹಸ್ತೊ ಭಗವಾನ್ ಅಯಂ ಮೇ ಭಗವತ್ತರಃ ಅಯಂ ಮೇ ವಿಶ್ವಭೇಷಜಃ ಅಯಂ ಶಿವಾಭಿಮರ್ಶನಃ ಅಯಂ ಮಾತಾ ಅಯಂ ಪಿತಾ ಅಯಂ ಜೀವಾತುರಗಮತ್ ಇದಂ ತವ ಸಮರ್ಪಣಂ ಸುಬಂಧವೇ ನಿರೀಹಿ ಎಂದೀ ಮಂತ್ರದಿಂದ ಆ ಶಿಷ್ಯನ ಅಂಗದ ಮೇಲೆ ಲಿಂಗಪ್ರತಿಷೆ*ಯಂ ಮಾಡುವುದು. ಇನ್ನು ಆ ಶಿಷ್ಯನ ವಾಯುಪ್ರಾಣಿತ್ವವಂ ಕಳೆದು ಲಿಂಗಪ್ರಾಣಿಯ ಮಾಡುವ ಕ್ರಮವೆಂತೆಂದಡೆ- ಓಂ ಅಪಿ ಚ ಪ್ರಾಣಾಪಾನವ್ಯಾನೋದಾನಸಮಾನಾದಿ ತಚ್ಚೈತನ್ಯ ಸ್ವರೂಪಸ್ಯ ಪರಮೇಶ್ವರಸ್ಯ ಓಂ ಶ್ರದ್ಧಾಯಾಂ ಪ್ರಾಣೇನ ವಿಷ್ಣೋSಮೃತಂ ಜುಹೋಮಿ ಶಿವೋ ಮಾಂ ವಿಷಪ್ರದಾಹಾಯ ಪ್ರಾಣಾಯ ಸ್ವಾಹಾ ಓಂ ಶ್ರದ್ಧಾಯಾಮಪಾನೇನ ವಿಷ್ಣೋSಮೃತಂ ಜುಹೋಮಿ ಶಿವೋ ಮಾಂ ವಿಷಪ್ರದಾಹಾಯ ಅಪಾನಾಯ ಸ್ವಾಹಾ ಓಂ ಶ್ರದ್ಧಾಯಾಂ ವ್ಯಾನೇನ ವಿಷ್ಣೋSಮೃತಂ ಜುಹೋಮಿ ಶಿವೋ ಮಾಂ ವಿಷಪ್ರದಾಹಾಯ ವ್ಯಾನಾಯ ಸ್ವಾಹಾ ಓಂ ಶ್ರದ್ಧಾಯಾಮುದಾನೇನ ವಿಷ್ಣೋSಮೃತಂ ಜುಹೋಮಿ ಶಿವೋ ಮಾಂ ವಿಷಪ್ರದಾಹಾಯ ಉದಾನಾಯ ಸ್ವಾಹಾ ಓಂ ಶ್ರದ್ಧಾಯಾಂ ಸಮಾನೇನ ವಿಷ್ಣೋSಮೃತಂ ಜುಹೋಮಿ ಶಿವೋ ಮಾಂ ವಿಷಪ್ರದಾಹಾಯ ಸಮಾನಾಯ ಸ್ವಾಹಾ ಎಂದೀ ಮಂತ್ರದಿಂದ ಆ ಶಿಷ್ಯನ ವಾಯುಪ್ರಾಣಿತ್ವವ ಕಳೆದು ಲಿಂಗ ಪ್ರಾಣಿಯಂ ಮಾಡುವುದು. ಇನ್ನು ಆ ಶಿಷ್ಯಂಗೆ ಅಗ್ರೋದಕವನ್ನು ಸರ್ವಾಂಗದ ಮೇಲೆ ತಳಿವ ಕ್ರಮವೆಂತೆಂದಡೆ- ಶಿವಃ ಪಶ್ಯತಿ ಶಿವೋ ದೃಶ್ಯತೇ ಅಹೋರಾತ್ರಂ ಶಿವಸನ್ನಿಧಾವೈಕಮೇನಂ ಪ್ರಯುಜ್ಯತೇ ತ್ರೈಜಾತಾಮಿ ಯಜೇಕಂ ಆ ಸರ್ವೇಭ್ಯೋಹಿ ಕಾಮೇಭ್ಯೋ ಅಗ್ನೀನಾಂ ಪ್ರಯುಜ್ಯತೇ ಸರ್ವೇಭ್ಯೋ ಹಿ ಕಾಮೇಭ್ಯೋ ಅಗ್ನೀನಾಂ ಪ್ರಯುಜ್ಯತೇ ತ್ರೈಜಾತಾಮಿಯಜೇಕಂ ಅಭಿಚಾರನ್ ಇತಿ ಸರ್ವೋ ವೈ ಏಷ ಯಜ್ಞಃ ಯತ್ರೋಪಾತ್ತಯಜ್ಞಃ ಸರ್ವೇಷಾಮೇನಂ ಯಜ್ಞೇನ ಜಾಯತೇ ನ ದೇವತಾಭ್ಯಾಂ ಆ ಉಚ್ಯತೇ ದ್ವಾದಶಕಪಾಲ ಪೂರುಷೋ ಭವತಿ ತಂ ತೇ ಯಜೇತ ಕಪಾಲ ಸ್ತ್ರೀಸಾಮುದ್ರೈ- ತ್ರಯಂ ತ್ರಯೀ ಮೇ ಲೋಕಾ ಏಷಾಮ್- ಲೋಕಾನಾಮಪ್ಯುತ್ತರೋತ್ತರ ಜ್ಞೇಯೋ ಭವತಿ ಎಂದೀ ಮಂತ್ರದಿಂದ ಆ ಶಿಷ್ಯಂಗೆ ಸರ್ವಾಂಗದಲ್ಲಿ ಅಗ್ರೋದಕವಂ ತಳೆವುದು. ಇನ್ನು ಆ ಶಿಷ್ಯನ ಭಾಳದಲ್ಲಿವಿಭೂತಿಯ ಪಟ್ಟವಂ ಕಟ್ಟುವ ಕ್ರಮವೆಂತೆಂದಡೆ ಓಂ ತ್ರಿಪುಂಡ್ರಂ ಸತತಂ ತ್ರಿಪುಂಡ್ರಂ ಸರ್ವದೇವಲಲಾಟಪಟ್ಟತ್ರಿಪುಂಡ್ರಂ ಸಪ್ತಜನ್ಮಕೃತಂ ಪಾಪಂ ಭಸ್ಮೀಭೂತಂ ತತಃ ಕ್ಷಣಮ್ ಎಂದೀ ಮಂತ್ರದಿಂದ ಆ ಶಿಷ್ಯನ ಭಾಳದಲ್ಲಿ ವಿಭೂತಿ ಪಟ್ಟವಂ ಕಟ್ಟುವುದು. ಇನ್ನು ಆ ಶಿಷ್ಯನ ದುರಕ್ಷರವ ತೊಡೆವ ಕ್ರಮವೆಂತೆಂದಡೆ- ಐಶ್ವರ್ಯಕಾರಣಾಧ್ಭೂತಿರ್ಭಾಸನಾದ್ಭಸಿತಂ ತಥಾ ಸರ್ವಾಂಗಾಭ್ಯರ್ಚನಾದ್ಭಸ್ಮ ಚಾಪದಕ್ಷರಣಾತ್ ಕ್ಷರಂ ತತೋಭೂತಪ್ರೇತಪಿಶಾಚಬ್ರಹ್ಮರಾಕ್ಷಸ - ಅಪಸ್ಮಾರಭವಭೀತಿಭ್ಯೋ ಭೀಕಾರಣಾದ್ರಕ್ಷಾ ರಕ್ಷತೇ ಏತಾನಿ ತಾನಿ ಶಿವಮಂತ್ರ ಪವಿತ್ರಿತಾನಿ ಭಸ್ಮಾನಿ ಕಾಮದಹನಾಂಗ ವಿಭೂಷಿತಾನಿ ತ್ರೈಪುಂಡ್ರಕಾನಿ ರಚಿತಾನಿ ಲಲಾಟಪಟ್ಟೇ ಲುಂಪಂತಿ ದೈವಲಿಖಿತಾನಿ ದುರಕ್ಷರಾಣಿ ಎಂದೀ ಮಂತ್ರದಿಂದ ಆ ಶಿಷ್ಯನ ದುರಕ್ಷರವಂ ತೊಡೆವುದು. ಇನ್ನು ಆ ಶಿಷ್ಯನ ಲಲಾಟದಲ್ಲಿ ಲಿಂಗಲಿಖಿತವಂ ಬರೆವ ಕ್ರಮವೆಂತೆಂದಡೆ- ``ಓಂ ಓಂ ಓಂ ನಮಃ ಶಿವಾಯ ಸರ್ವಜ್ಞಾನಧಾಮ್ನೇಱಱ ಎಂದೀ ಮಂತ್ರದಿಂದ ಆ ಶಿಷ್ಯನ ಲಲಾಟದಲ್ಲಿ ಶಿವಲಿಖಿತಮಂ ಬರೆವುದು. ಇನ್ನು ಆ ಶಿಷ್ಯನ ಮಸ್ತಕದಲ್ಲಿ ಹಸ್ತವನಿರಿಸುವ ಕ್ರಮವೆಂತೆಂದಡೆ- ಉದ್ಯದ್ಭಾಸ್ಕರ ಕೋಟಿ ಪ್ರಕಾಶ ಮಹಾದರ್ಶನ ದಿವ್ಯಮೂರ್ತಿಭೀಷಣಮ್ ಭುಜಂಗಭೂಷಣಂ ಧ್ಯಾಯೇತ್ ದಿವ್ಯಾಯುಧಂ ರುದ್ರವರಿï ಸರ್ವೈಸ್ತಪಸ್ವಿಭಿಃ ಪ್ರೋಕ್ತಂ ಸರ್ವಜ್ಞೇಷು ಭಾಗಿನಮ್ ರುದ್ರಭಕ್ತಂ ಸ್ಮೃತಾಃ ಸರ್ವೇ ತ್ರಿಪುಂಡ್ರಾಂಕಿತಮಸ್ತಕಮ್ ಎಂದೀ ಮಂತ್ರದಿಂದ ಆ ಶಿಷ್ಯನ ಮಸ್ತಕದ ಮೇಲೆ ಹಸ್ತವನ್ನಿರಿಸುವುದು. ಇನ್ನು ಆ ಶಿಷ್ಯನ ಕರ್ಣದಲ್ಲಿ ಶಿವಮಂತ್ರವಂ ನಿರೂಪಿಸುವ ಕ್ರಮವೆಂತೆಂದಡೆ - ಕರ್ಣದ್ವಾರೇ ಯಥಾವಾಕ್ಯಂ ಸದ್ಗುರೋರ್ಲಿಂಗಮೀರ್ಯತೇ ಇಷ್ಟಪ್ರಾಣಸ್ತಥಾಭಾವೋ ತ್ರಿಧಾಮ್ನೈಕ್ಯಮಿದಂ ಶೃಣು ಕರ್ಣೇ ಶಿಷ್ಯಸ್ಯ ಶನಕೈಃ ಶಿವಮಂತ್ರಮುದೀರಯೇತ್ ಸ ತು ಬದ್ಧಾಂಜಲಿಃ ಶಿಷ್ಯೋ ಮಂತ್ರತದ್ಧ್ಯಾನಮಾನಸಃ ಎಂದೀ ಮಂತ್ರದಿಂದ ಆ ಶಿಷ್ಯನ ಕರ್ಣದಲ್ಲಿ ಶಿವಮಂತ್ರವಂ ನಿರೂಪಿಸುವುದು. ಇನ್ನು ಶತಪತ್ರದೊಳಗಣ ಮನಪ್ರಾಣದೊಳಗಿಪ್ಪ ಪ್ರಾಣಲಿಂಗಕ್ಕೊಂದು ಇಷ್ಟಲಿಂಗ ಸ್ಥಲಮಂ ತೋರಿಸಿ ಆ ಶಿಷ್ಯನಂ ಕೃತಕೃತ್ಯನಂ ಮಾಡಿದ ಶ್ರೀಗುರುವಿಂಗೆ ನಮೋ ನಮಃ ಎಂದು ಬದುಕಿದನಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಇನ್ನಷ್ಟು ... -->