ಅಥವಾ

ಒಟ್ಟು 3 ಕಡೆಗಳಲ್ಲಿ , 2 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಮೃತಮಥನದಲ್ಲಿ ಅಜ ಹರಿ ಸುರಪ ವಾಲಿ ಸುಗ್ರೀವರಳಿದರು. ಕಾಶಿಯಲ್ಲಿ ಬ್ರಹ್ಮ ವಿಷ್ಣುಗಳಳಿದರು. ಕೇದಾರದಲ್ಲಿ ಪಾಂಡವರಳಿದರು, ಕಲ್ಯಾಣದಲ್ಲಿ ವ್ಯಾಳನಳಿದನು. ಶ್ರೀಶೈಲದಲ್ಲಿ ಹಿರಣ್ಯ ಧನುಜ ನಾಗಾರ್ಜುನರಳಿದರು. ಪಾತಾಳ ಲಂಕೆಯಲ್ಲಿ ಮಹಿರಾವಣನಳಿದನು. ಲವಣ ಲಂಕೆಯಲ್ಲಿ ಲಕ್ಷ್ಮಿಗಳುಪಿದವನಳಿದನು. ದಶರಥನ ತೋಹಿನಲ್ಲಿ ಮಂಡುಬಲಚೌಡನಳಿದನು. ಬ್ಥೀಮನ ಕೈಯಲ್ಲಿ ಕೀಚಕನಳಿದನು. ಮುನಿ ಕರ್ಣಿಕೆಯ ಶಿರವ ಹರಿದು, ಸುರಪನಜಹರಿಗಳು ಶಾಪಹತರಾದರು. ಋಷಿಯ ಸತಿಗಳುಪಿ ಸುರಪ ಮೈಯನಳಿದ. ಬ್ಥೀಷ್ಮರು ಕುಂಭಕರ್ಣ ದ್ರೋಣ ಜಾಂಬರು ನಿದ್ರೆಯಲ್ಲಿ ಅಳಿದರು. ವ್ಯಾಧರ ಬಾಣದಲ್ಲಿ ಬಿದ್ದರು ವಿಷ್ಣು ಪಾಂಡ್ಯರಾಯರು. ವಿಷದ ಪಣ್ಣಿಂದಳಿದ ಪರೀಕ್ಷಿತರಾಯನು. ಪರಶುರಾಮನ ಕೈಯಲಿ ಜಮದಗ್ನಿ ಮುನಿಯ ವಧೆಯಿಂದ ಕಾರ್ತಿಕರಳಿದರು. ವೃಷಭನ ವಧೆಯಿಂದ ವೀತರಾಜನಳಿದ. ಕುರುಕ್ಷೇತ್ರದಲ್ಲಿ ಕೌರವರಳಿದರು. ಮಾಸನೂರಲ್ಲಿ ಸಿದ್ಧರಳಿದರು. ಕೊಲ್ಲಾಪುರದಲ್ಲಿ ಹರಿ ಅಜ ಇಂದ್ರ ದಿಕ್ಪಾಲಕರು ತೃಣಕೆ ಲಫುವಾದರು. ಹೋಮ ಕಾಮ ತ್ರಿಣೇತ್ರ ಪಂಚಮುಖರೆಲ್ಲ ಮಹಾಪ್ರಳಯದಲ್ಲಿ ಅಳಿದರು. ಇನ್ನು ಬಿಜ್ಜಳರಾಯನ ಅಳಿವಿನುಳಿವಿನ ಹವಣವೇನು ಕಲಿದೇವರದೇವಾ.
--------------
ಮಡಿವಾಳ ಮಾಚಿದೇವ
ವೇದಂಗಳೆಂಬವು ಬ್ರಹ್ಮನ ಬೂತಾಟ. ಶಾಸ್ತ್ರಂಗಳೆಂಬವು ಸರಸ್ವತಿಯ ಗೊಡ್ಡಾಟ. ಆಗಮಗಳೆಂಬವು ಋಷಿಯ ಮರುಳಾಟ. ಪುರಾಣಗಳೆಂಬವು ಪೂರ್ವದವರ ಗೊಡ್ಡಾಟ (ಒದ್ದಾಟ?) ಇಂತು ಇವನು ಅರಿದವರ ನೇತಿಗಳೆದು ನಿಜದಲ್ಲಿ ನಿಂದಿಪ್ಪಾತನೆ ಗುಹೇಶ್ವರನಲ್ಲಿ ಅಚ್ಚಲಿಂಗೈಕ್ಯನು !
--------------
ಅಲ್ಲಮಪ್ರಭುದೇವರು
ಜೀವರು ಜೀವಿಸಿ ಜೀವನ್ಮುಕ್ತವೆಂತೆಂದರಿಯರು. ಜೀವಂಗೆ ಆತ್ಮಸ್ಥಲ ಸಲ್ಲದು. ತಮ್ಮ ಜೀವಾತ್ಮನನು ಶಿವನೆಂದು, ತಮ್ಮ ಶರೀರವನು ಶಿವನೆಂದು ಅನಂತ ಋಷಿಯ ಅರ್ಚಿಸಿಕೊಂಬರು. ಆರಾರುವೆಂದಡೆ: ವಶಿಷ* ವಾಲ್ಮೀಕಿ ಭೃಗು ದಧೀಚಿ ಕಾಶ್ಯಪ ಅಗಸ್ತ್ಯ ಮಾರ್ಕಂಡೇಯ ಮೊದಲಾದ ಮಹಾಋಷಿಯರು. ಅವರ ಶಾಪಾನುಗ್ರಹ ಸಾಮರ್ಥಿಕೆಯ ಪೇಳುವಡೆ, ಅನಂತ ಶ್ರುತಿಗಳೈದಾವೆ, ಅನಂತ ಶಾಸ್ತ್ರಂಗಳೈದಾವೆ. ಶಿವನ ಕರದೋಯೆನಿಸಬಲ್ಲರು. ಅಂತಹರು, ಅಕಟಕಟ ಭಕ್ತಿಯ ಕುಳವನರಿಯದೆ, ಭವಭಾರಕರಾದರು. ಅಂತು ಜೀವನ ಬಲುಹಿಂದಲು ಸುರರು ಖೇಚರರು ಗರುಡ ಗಂಧರ್ವರು ಸಿದ್ಧವಿದ್ಯಾಧರರು ಗುಹ್ಯಕರು ಯಕ್ಷರಾಕ್ಷಸರು ಹರಿವಿರಂಚಿಗಳು ಮೊದಲಾದ ದೈವಂಗಳೆಲ್ಲಾ ಪ್ರಳಯಚಕ್ರಕ್ಕೊಳಗಾದರು. ಭಾವಾದ್ವೈತರು ವಾಗಾದ್ವೈತರು ಶ್ವಾನಜ್ಞಾನಿಗಳಾಗಿ ಕೆಟ್ಟರು. ಭಕ್ತರು ಭಕ್ತಿಯ ಸ್ಥಿತಿ ಕುಳವನರಿಯದೆ, ಧ್ಯಾನ ಮೌನ ಅನುಷಾ*ನ ಜಪತಪ ಸಮಾಧಿ ಸಂಜೆ ಹೋಮ ನೇಮ ನಿತ್ಯ ಅಷ್ಟವಿಧಾರ್ಚನೆ ಷೋಡಶೋಪಚಾರ ಇಂತೀ ವ್ರತ ಭಾವ ಭಕ್ತಿಯ ಮಾಡಿದರಲ್ಲದೆ, ಭಕ್ತಿದಾಸೋಹವನರಿಯದೆ ಕೆಟ್ಟರು. ಅಂದು ನಮ್ಮ ಬಸವಣ್ಣ ಸ್ವತಂತ್ರನಾದ ಕಾರಣ, ಭಕ್ತಿದಾಸೋಹವಳವಟ್ಟಿತ್ತು. ಲಿಂಗಸ್ಥಲ ಜಂಗಮಸ್ಥಲ ಪ್ರಸಾದಸ್ಥಲವಳವಟ್ಟಿತ್ತು. ಜಂಗಮ ಲಿಂಗವೆಂಬುದು ಸಂಗನಬಸವಣ್ಣಂಗೆ ಅಳವಟ್ಟಿತ್ತು. ದ್ವೈತನಲ್ಲ ಅದ್ವೈತನಲ್ಲ ಬಸವಣ್ಣ, ಭಾವಿಯಲ್ಲ ನಿರ್ಭಾವಿಯಲ್ಲ ಬಸವಣ್ಣ. ದೇಹಿಯಲ್ಲ ನಿರ್ದೇಹಿಯಲ್ಲ ಬಸವಣ್ಣ, ಖಂಡಿತನಲ್ಲ ಅಖಂಡಿತನಲ್ಲ ಬಸವಣ್ಣ. ಇಂತಪ್ಪ ಬಸವಣ್ಣಂಗೆ ಆವ ಗುಣಂಗಳೂ ಇಲ್ಲ. ನಿರ್ಗುಣ ನಿರಂಜನ ನಿಸ್ಸೀಮ ಶಿವನು ಬಸವಣ್ಣನೊಡನೆ ಆಡುತ್ತಿಪ್ಪನು ಹಾಡುತ್ತಿಪ್ಪನು. ಅದು ಕಾರಣ, ಬಸವಣ್ಣನ ಮನ ಪರುಷ, ಬಸವಣ್ಣನ ನೋಟ ಪರುಷ. ಭಾವ ಪರುಷ, ನಡೆ ಪುರುಷ, ನುಡಿ ಪರುಷ, ಹಸ್ತ ಪರುಷ. ತನುಮನಧನವ ನಿವೇದಿಸಿದಾತ ಬಸವಣ್ಣ. ಲಿಂಗ ಬಸವಣ್ಣ, ಜಂಗಮ ಬಸವಣ್ಣ, ಗುರು ಬಸವಣ್ಣ. ಆದಿ ಅನಾದಿಯಿಲ್ಲದಂದಿನ ಬಸವಣ್ಣನ ನೆನೆವುದೆ ಪರತತ್ವ. ಬಸವಣ್ಣನ ನೆನೆವುದೆ ಪರಮಜ್ಞಾನ, ಬಸವಣ್ಣನ ನೆನೆವುದೆ ಮಹಾನುಭಾವ. ಎಲೆ ಕಲಿದೇವ, ನಿಮ್ಮ ಶರಣ ಬಸವಣ್ಣನ ಸಮಸ್ತ ಗಣಂಗಳೆಲ್ಲಾ ನೆನೆದು ಶುದ್ಧರಾದರು.
--------------
ಮಡಿವಾಳ ಮಾಚಿದೇವ
-->