ಅಥವಾ

ಒಟ್ಟು 7 ಕಡೆಗಳಲ್ಲಿ , 5 ವಚನಕಾರರು , 7 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉಪನಿಷದ್ವಾಕ್ಯವೆನಬಹುದಲ್ಲದೆ, ಆ ಪರಬ್ರಹ್ಮವೆನಬಾರದು ಸಮತೆ ಸಮಾಧಾನವೆಂಬುದು ಯೋಗದಾಗು ನೋಡಾ. ಸಮತೆ ಸಮಾಧಾನ ನೆಲೆಗೊಳ್ಳದಿರ್ದಡೆ, ಆ ಯೋಗ ಅಜ್ಞಾನದಾಗು. ಅಷ್ಟಶಿಲೆ ಸಹಸ್ರ ಋಷಿಯರು ಸಮತೆ ಸಮಾಧಾನ ನೆಲೆಗೊಳ್ಳದೆ, ನಾನಾ ಯೋÀನಿಯಲ್ಲಿ ಬಂದರು. ಮಹಾಲಿಂಗ ಕಲ್ಲೇಶ್ವರದೇವಾ, ಸಮತೆ ನೆಲೆಗೊಂಡು, ಸಮಾಧಾನ ಸಹಜವಾದುದೆ ಮುಕ್ತಿ ಕ್ಷೇತ್ರ.
--------------
ಹಾವಿನಹಾಳ ಕಲ್ಲಯ್ಯ
ಎಪ್ಪತ್ತೊಂದು ಅರಣ್ಯದಲ್ಲಿಪ್ಪತ್ತೊಂದು ಋಷಿಯರು ತಪ್ಪದೆ ಅಜಪೆಯ ಜಪಿಸುತ್ತ, `ಹವಿಷಾ ಹವಿಷಾ'ಯೆಂಬ ಆನಂದದ ಹಂಸನ ಜಪದಲ್ಲಿ, ತೋರಿಪ್ಪ ಬ್ರಹ್ಮಾಂಡವ ಮೀರಿಪ್ಪ ಜಪದಲ್ಲಿ, ಆರೂಢವಾದಳವ್ವೆ. ಕಪಿಲಸಿದ್ಧಮಲ್ಲಿನಾಥನ ಕೂಡಿ ಕೂಡಿಲೀಯವಾದಳು.
--------------
ಸಿದ್ಧರಾಮೇಶ್ವರ
ಕಾಲಚಕ್ರದ ವಚನ : ಏಕಂ ಏಕವಾದ ವಸ್ತುವ ಲೋಕಾಲೋಕಂಗಳರಿಯವು ಸ್ಥೂಲ ಸೂಕ್ಷ್ಮವೆನುತಿರ್ಪರೆಲ್ಲರೂ, ಆತನೀತ ಬೇರೆ ಮತ್ತೊಬ್ಬಾತನೆಂಬ ಭ್ರಮೆಯಲ್ಲಿ ಭೂತಪ್ರಾಣಿಗಳವರೆತ್ತ ಬಲ್ಲರು ಆತನ ಘನವ. ಚಿಟುಕು ಮುನ್ನೂರರವತ್ತು ಕೂಡಿದಡೆ ಒಂದು ವಿಘಳಿಗೆ, ಆ ವಿಘಳಿಗೆ ಅರುವತ್ತು ಕೂಡಿದೊಡೆ ಒಂದು ಘಳಿಗೆ, ಆ ಘಳಿಗೆ ಅರುವತ್ತು ಕೂಡಿದೊಡೆ ಒಂದು ದಿನ. ದಿನ ಮೂವತ್ತು ಕೂಡಿದೊಡೆ ಒಂದು ಮಾಸ ಮಾಸ ಹನ್ನೆರಡು ಕೂಡಿದೊಡೆ ಒಂದು ವರುಷ ವರುಷ ಅರುವತ್ತು ಕೂಡಿದೊಡೆ ಒಂದು ಸಂವತ್ಸರ_ ಇಂತೀ ಕಾಲಚಕ್ರಂಗಳು ಈ ಪರಿಧಿಯಲ್ಲಿ ತಿರುಗಿ ಬರುತ್ತಿಹವು ಕಾಣಿರೆ. ನಾಲ್ಕು ಯುಗಂಗಳು ಬೇರೆ ಬೇರೆ ಕಟ್ಟಿದ ಕಟ್ಟಳೆಯೊಳು, ತಿರುಗಿ ಬರುತ್ತಿಹವು ಕಾಣಿರೆ. ಕೃತಯುಗ ಹದಿನೇಳು ಲಕ್ಷವು ಇಪ್ಪತ್ತೆಂಟುಸಾವಿರವರ್ಷ ವರ್ತಿಸಿ ನಿಂದಿತ್ತು. ತ್ರೇತಾಯುಗ ಹನ್ನೆರಡು ಲಕ್ಷವು ತೊಂಬತ್ತಾರುಸಾವಿರ ವರ್ಷ ವರ್ತಿಸಿ ನಿಂದಿತ್ತು. ದ್ವಾಪರಯುಗ ಎಂಟು ಲಕ್ಷವು ಅರುವತ್ತುನಾಲ್ಕುಸಾವಿರ ವರ್ಷ ವರ್ತಿಸಿ ನಿಂದಿತ್ತು. ಕಲಿಯುಗ ನಾಲ್ಕುಲಕ್ಷವು ಮೂವತ್ತೆರಡುಸಾವಿರ ವರ್ಷ ವರ್ತಿಸಿ ನಿಂದಿತ್ತು. _ಇಂತೀ ನಾಲ್ಕು ಯುಗಂಗಳು ಕೂಡಿ ಒಂದಾಗಿ ಮೇಳಯಿಸಿದೊಡೆ, ನಾಲ್ವತ್ತು ಮೂರು ಲಕ್ಷವು ಇಪ್ಪತ್ತುಸಾವಿರ ವರುಷ ಕಟ್ಟಳೆಯಾಯಿತ್ತು. ಈ ನಾಲ್ಕುಯುಗಂಗಳು ಇಪ್ಪತ್ತೊಂದು ಬಾರಿ ತಿರುಗಿದಡೆ ಸುರಪತಿಗೆ ಪರಮಾಯು, ಬ್ರಹ್ಮಂಗೆ ಜಾವ, ಅಷ್ಟಾಶಿತಿ ಸಹಸ್ರ ಋಷಿಯರು ಸಾವಿರಬಾರಿ ತಿರುಗಿದಡೆ ಬ್ರಹ್ಮಂಗೆ ಆಯುಷ್ಯ ನೂರಪ್ಪುದು, ವಿಷ್ಣುವಿಂಗೆ ಜಾವಪ್ಪುದು. ಆ ವಿಷ್ಣುವಿನ ಒಂದು ದಿನ(ಜಾವ?)ದೊಳಗೆ ನಾಲ್ಕು ಬಾರಿ ಹುಟ್ಟಿ ನಾಲ್ಕು ಬಾರಿ ಹೊಂದುವ ಬ್ರಹ್ಮನು, ಆ(ದಿ) ವಿಷ್ಣುವಿನ ಒಂದು ದಿನವಪ್ಪುದು, (ಅಂಥ ವಿಷ್ಣುವಿನ ಒಂದು ದಿನದಲ್ಲಿ) ಸಮಸ್ತ ಈರೇಳು ಭುವನಂಗಳೆಲ್ಲ ಭೂತಸಂಹಾರ , ಅಂಥಾ ಭೂತಸಂಹಾರಗಳು ಹದಿನೆಂಟು ಲಕ್ಷವು ಇಪ್ಪತ್ತೆಂಟುಸಹಸ್ರ ವರುಷ ತಿರುಗಲು ಪೃಥ್ವಿಯೆಲ್ಲಾ ಜಲಪ್ರಳಯ. ಅಂಥಾ ಜಲಪ್ರಳಯವೆಂಟು ಬಾರಿ ತಿರುಗಿದಡೆ ವಿಷ್ಣುವಿಂಗೆ ಮರಣ, ರುದ್ರಂಗೆ ನಿಮಿಷ. ಅಂಥಾ ರುದ್ರನ ಒಂದು ನಿಮಿಷದಲ್ಲಿ ಅತಳ ವಿತಳ ಸುತಳ ಮಹೀತಳ ರಸಾತಳ ತಳಾತಳ ಪಾತಾಳ_ ಇಂತು ಕೆಳಗೇಳು ಭುವನಂಗಳು, ಮೇಲೆ, ಸತ್ಯಲೋಕ ಜನರ್ಲೋಕ ತಪೋಲೋಕ ಮಹರ್ಲೋಕ, ಸ್ವರ್ಲೋಕ ಭುವರ್ಲೋಕ ಭೂಲೋಕ ಮೊದಲಾಗಿ_ಇಂತೀ ಲೋಕಾಲೋಕಂಗಳೆಲ್ಲ ಮುಳುಗಿ ಮಹಾಪ್ರಳಯವಾದಲ್ಲಿ ರುದ್ರಲೋಕವೊಂದುಳಿಯೆ, ಆ ರುದ್ರಂಗೆ ಒಂದುದಿನ. ಅಂಥಾದಿನ ಮುನ್ನೂರರವತ್ತು ಕೂಡಿದಡೆ ಒಂದು ವರುಷ. ಅಂಥಾ ವರುಷ ಶತಕೋಟಿ ಕೂಡಿದಡೆ ರುದ್ರಂಗೆ ಪರಮಾಯು. ಅಂಥಾ ರುದ್ರರು ಅನೇಕರು ಹೋದರಲ್ಲಾ, ಮತ್ತಂ ಪಶುಪತಿ, ಶಂಕರ, ಶಶಿಧರ, ಸದಾಶಿವ, ಗೌರೀಪತಿ, ಮಹಾದೇವ ಈಶ್ವರರೆಂಬವರು ಆ ದಿನದಲ್ಲಿ ಇವರು ಪ್ರಮಥಗಣೇಶ್ವರರು, ತಪೋರಾಜ್ಯವನುಂಬರು. ತಪಕ್ಕೆ ಬಿಜಯಂಗೈವರು ಆ ರುದ್ರರು. ಲೋಕಾಲೋಕಂಗಳು ಕೂಡಿ ಭೂತ ವರ್ತಿಸುತ್ತಿದ್ದಿತ್ತೊಂದು ಕೆಲವು ಕಾಲ, ಅದು ತೊಡೆದು ಹೋಯಿತ್ತು. ಬಳಿಕ ಶೂನ್ಯವರ್ತಿಸುತ್ತಿದ್ದಿತ್ತೊಂದು ಕೆಲವು ಕಾಲ, ಅದು ತೊಡೆದು ಹೋಯಿತ್ತು ಬಳಿಕ ಕಾಳಾಂಧರ ವರ್ತಿಸುತ್ತಿದ್ದಿತ್ತೊಂದು ಕೆಲವು ಕಾಲ, ಅದು ತೊಡೆದು ಹೋಯಿತ್ತು_ಬಳಿಕ ಮಹಾ ಪ್ರಕಾಶದ ಬೆಳಗು. ಇಂತಹ ಕಾಲಂಗಳು ಈ ಪರಿಯಲ್ಲಿ ತಿರುಗಿ ಬರುತ್ತಿಹವು ಕಾಣಿರೆ ! ಅಂತಹ ಕಾಲಂಗಳೂ ಅರಿಯವು, ಅಂತಹ ದಿನಂಗಳೂ ಅರಿಯವು ಅಂತಹ ದೇವತೆಗಳೂ ಅರಿಯರು,_ ಅಪ್ರಮಾಣ ಅಗಮ್ಯ ಅಗೋಚರ ಉಪಮಿಸಬಾರದು ಅಂತಿಂತೆನಲಿಲ್ಲ ಗುಹೇಶ್ವರಲಿಂಗ ನಿರಂಜನ ನಿರಾಳ ! ನಿರಾಮಯ !
--------------
ಅಲ್ಲಮಪ್ರಭುದೇವರು
ಮೀನಜ ರೋಮಜ ಋಷಿಯರು ಮೊದಲಾದ ಅನಂತಕೋಟಿ ಬ್ರಹ್ಮರಿಲ್ಲದಂದು, ಅಲ್ಲಿಂದತ್ತತ್ತ ಏಕೋಲಿಂಗನೊಬ್ಬನೆ ಶರಣ. ಗುರುವೆ ಪರಮಗುರುವೆ ನೀನೆ ಗತಿಯಯ್ಯಾ. ಆದಿಕುಳಕ್ಕೆ ಮೂಲಿಗನಾಗಿ ಸುಳುಹ ತೋರಿ ಪಾವನವ ಮಾಡಬಂದೆ ಬಹುಮುಖ ಜೀವಿಗಳಿಗೆ ಬಹುಮುಖ ಪ್ರಸಾದವ ತೋರಿದೆಯಯ್ಯಾ ಭುವನವ ಸಲಹಲೆಂದು ಆದಿಯ ಲಿಂಗವ ಅನಾದಿಯ ಶರಣನ ಕೈಯಲಿ ಕೊಟ್ಟಿರಿ. ಆ ಲಿಂಗವನು ನೀ ಪುಟ್ಟಿಸಿದ ಘಟಕ್ಕೆ ಕಾರುಣ್ಯವ ಮಾಡಿ ಸಲಹಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಪೃಥ್ವಿಯಿಂದ ಈಶ್ವರ ಪರಿಯಂತ ಪಂಚವಿಶಂತಿ ತತ್ವಂಗಳುತ್ಪತ್ಯ, ಈಶ್ವರಾದಿ ಪರಶಿವ ಪರಿಯಂತ ಶಿವತತ್ವದುತ್ಪತ್ಯ. ದೇವತಾದಿಗೆ ಜಗದಾದಿಗೆ ಪೃಥ್ವಿಯಾದಿಗೆ ಪಂಚವಿಂಶತಿತತ್ವಂಗಳುತ್ಪತ್ಯಮಂ ಪೇಳ್ವೆ: ಪಂಚಶತಕೋಟಿ (ವಿಸ್ತೀರ್ಣ) ಭೂಮಂಡಲವಳಯದಲ್ಲಿ ಮೇರುಮಂದಿರದ ವಿಸ್ತೀರ್ಣ ಒಂದುಕೋಟಿ ಇಪ್ಪತ್ತಾರುಲಕ್ಷದ ಮೇಲೆ ಎಂಬತ್ತೈದುಸಾವಿರ ಯೋಜನ ಪ್ರಮಾಣು. ಆ ಮೇರುಮಂದಿರದ ಮೇಲೆ ಬ್ರಹ್ಮ ವಿಷ್ಣು ರುದ್ರ ಸದಾಶಿವ ನಂದಿ ಮಹಾಕಾಳ ವೀರಭದ್ರ ಅಷ್ಟಾಶೀತಿಸಹಸ್ರ ಋಷಿಯರು, ಅಸಂಖ್ಯಾತ ಮಹಾಗಣಂಗಳು, ದ್ವಾದಶಾದಿತ್ಯರು, ನಾರದಯೋಗೀಶ್ವರರು, ಅಷ್ಟದಿಕ್ಪಾಲಕರು ಏಕಾದಶ ರುದ್ರರು ಮುಖ್ಯವಾಗಿ ಶಿವಸುಖಸಂತೋಷದಿಂ ರಾಜ್ಯಂಗೆಯ್ವರು. ಆ ಮೇರುಮಂದಿರದ ಕೆಳಗಣ ಜಂಬೂದ್ವೀಪದ ವಿಸ್ತೀರ್ಣ ಲಕ್ಷದಮೇಲೆ ಇಪ್ಪತ್ತೈದುಸಾವಿರ ಯೋಜನಪ್ರಮಾಣು. (ಅಲ್ಲಿಂದ ಮುಂದೆ) ಲವಣಸಮುದ್ರ ಲಕ್ಷದಮೇಲೆ ಇಪ್ಪತ್ತೈದುಸಾವಿರ ಯೋಜನಪ್ರಮಾಣು. ಆ ಲವಣಸಮುದ್ರದಿಂದಾಚೆಯಲ್ಲಿ ಭೂಮಿ ಎರಡುಲಕ್ಷದ ಮೇಲೆ ಐವತ್ತುಸಾವಿರ ಯೋಜನಪ್ರಮಾಣು. (ಆ ದ್ವೀಪದ ಹೆಸರು ಪ್ಲಕ್ಷದ್ವೀಪ) ಪ್ಲಕ್ಷದ್ವೀಪಕ್ಕೆ ಇಕ್ಷುರಸಮುದ್ರ ಎರಡುಲಕ್ಷ ಐವತ್ತುಸಾವಿರ ಯೋಜನಪ್ರಮಾಣು. ಅದರಿಂದಾಚೆಯಲ್ಲಿ ಭೂಮಿ ಐದುಲಕ್ಷ ಯೋಜನಪ್ರಮಾಣು. (ಆ ದ್ವೀಪದ ಹೆಸರು ಶಾಲ್ಮಲಿದ್ವೀಪ) ಶಾಲ್ಮಲಿದ್ವೀಪಕ್ಕೆ ಮಧುಸಮುದ್ರ, ಐದುಲಕ್ಷ ಯೋಜನಪ್ರಮಾಣು. ಅದರಿಂದಾಚೆಯಲ್ಲಿ ಭೂಮಿ, ಹತ್ತುಲಕ್ಷ ಯೋಜನಪ್ರಮಾಣು. (ಆ ದ್ವೀಪಕ್ಕೆ ಹೆಸರು ಕುಶದ್ವೀಪ) ಕುಶದ್ವೀಪಕ್ಕೆ ಘೃತಸಮುದ್ರ ಹತ್ತುಲಕ್ಷ ಯೋಜನಪ್ರಮಾಣು. ಅಲ್ಲಿಂದತ್ತ ಭೂಮಿ, ಇಪ್ಪತ್ತೈದು ಲಕ್ಷ ಯೋಜನಪ್ರಮಾಣು. (ಆ ದ್ವೀಪದ ಹೆಸರು ಶಾಕದ್ವೀಪ) ಶಾಕದ್ವೀಪಕ್ಕೆ ದಧಿಸಮುದ್ರ, ನಾಲ್ವತ್ತುಲಕ್ಷ ಯೋಜನಪ್ರಮಾಣು. ಅದರಿಂದಾಚೆಯಲ್ಲಿ ಭೂಮಿ ನಾಲ್ವತ್ತುಲಕ್ಷ ಯೋಜನಪ್ರಮಾಣು. (ಆ ದ್ವೀಪದ ಹೆಸರು Põ್ಞ್ರಂಚದ್ವೀಪ) Põ್ಞ್ರಂಚದ್ವೀಪಕ್ಕೆ ಕ್ಷೀರಸಮುದ್ರ, ನಾಲ್ವತ್ತುಲಕ್ಷ ಯೋಜನಪ್ರಮಾಣು. ಅದರಿಂದಾಚೆಯಲ್ಲಿ ಭೂಮಿ, ಎಂಬತ್ತುಲಕ್ಷ ಯೋಜನಪ್ರಮಾಣು. (ಆ ದ್ವೀಪದ ಹೆಸರು ಪುಷ್ಕರದ್ವೀಪ) ಪುಷ್ಕರದ್ವೀಪಕ್ಕೆ ಸ್ವಾದೋದಕಸಮುದ್ರ ಎಂಬತ್ತುಲಕ್ಷ ಯೋಜನಪ್ರಮಾಣು, ಅಲ್ಲಿಂದತ್ತತ್ತ ಲೋಕಾಲೋಕ ಪರ್ವತಾಕಾರವಾಗಿಪ್ಪುದು. ಇಂತೀ ಸಪ್ತಸಮುದ್ರಂಗಳ ಸಪ್ತದ್ವೀಪಂಗಳ ಪ್ರಮಾಣವೊಂದಾಗಿ ಮೇಳೈಸಿದಡೆ ಮೂರುಕೋಟಿಯುಂ ಹದಿನೇಳುಲಕ್ಷದೈವತ್ತುಸಹಸ್ರ ಯೋಜನ ಪರಿಮಾಣಿನ ಕಟ್ಟಳೆಯಾಯಿತ್ತು. ಮತ್ತಲ್ಲಿಂದ ಭೂಮಂಡಲ ಉಂಟೆರಿ ಎಂದೊಡೆ, ಉಂಟು: ನಾನೂರುಕೋಟಿಯೋಜನ ಹೇಮೋರ್ವಿ. ಅಲ್ಲಿಂದತ್ತ ಭೂಮಂಡಲ ಉಂಟೆರಿ ಎಂದೊಡೆ ಉಂಟು: ಹತ್ತುಕೋಟಿ ಇಪ್ಪತ್ತುಲಕ್ಷ ಯೋಜನಪ್ರಮಾಣು, ಹೇಮದ ಬೆಟ್ಟ. ಮತ್ತಲ್ಲಿಂದತ್ತಲೂ ಭೂಮಂಡಲ ಉಂಟೆರಿ ಎಂದಡೆ, ಉಂಟು: ಎಂಬತ್ತೈದುಕೋಟಿ ಮೂವತ್ತೈದುಲಕ್ಷದ ಅರುವತ್ತೈದುಸಾವಿರ ಯೋಜನ ಪರಿಮಾಣ ವಳಯದಲ್ಲಿಅಂಧಕಾರವಾಗಿ, ಸೂರ್ಯಚಂದ್ರರ ಬೆಳಗಿಲ್ಲ. ಇಂತಿವನೆಲ್ಲವನೊಂದಾಗಿ ಮೇಳೈಸಿದಡೆ ಐನೂರುಕೋಟಿ ಯೋಜನ ಪರಿಪ್ರಮಾಣು ಕಟ್ಟಳೆಯಾಗಿತ್ತು. ಆ ಮೇರುವಿನ ಒಂದು ದಿಕ್ಕಿನ ಪ್ರಮಾಣು:ಆ ಮೇರುವಿನ ಪ್ರದಕ್ಷಿಣವಾಗಿ ಎಂಟು ದಳದಲ್ಲಿಎಂಟು ಪಂಚಶತಕೋಟಿ [ಯೋಜನ] ವಿಸ್ತೀರ್ಣವಾಯಿತ್ತು. ಇದನು ದಿವಸದೊಳಗೆ ಸೂರ್ಯ ತಿರುಗುವನು, ರಾತ್ರಿಯೊಳಗೆ ಚಂದ್ರ ತಿರುಗುವನು, ಇಪ್ಪತ್ತೇಳು ನಕ್ಷತ್ರ, ಧ್ರುವಮಂಡಲ, ಸಪ್ತಋಷಿಯರು, ರಾಹುಕೇತು, ನವಗ್ರಹ- ಇಂತಿವರೆಲ್ಲರು ಆ ಮೇರುಮಂದಿರದ ಹೊಸಪ್ರದಕ್ಷಿಣವಂ ದಿವಾರಾತ್ರಿಯಲ್ಲಿ ತಿರುಗಿ ಬಹರು. ಇವರೆಲ್ಲರ ಪ್ರಮಾಣವನು ಮಹಕ್ಕೆ ಮಹವಾಗಿಪ್ಪ ಶರಣಸ್ಥಲದವರು ಬಲ್ಲರು. ಪ್ರಭುದೇವರು ಸಿದ್ಧರಾದೇವರು ಸಾಮವೇದಿಗಳು, ಆದಿಲಿಂಗ ಅನಾದಿಶರಣ ಪೂರ್ವಾಚಾರಿ ಸಂಗನಬಸವಣ್ಣನು ಕಟ್ಟಿದ ಕಟ್ಟಳೆಯೊಳಗೆ ಜ್ಯೋತಿಜ್ರ್ಞಾನದವರು. (ಇಂತೀ) ಕಾಲ ಜ್ಯೋತಿಷ ಗ್ರಹಣ ಸಂಕ್ರಮಣ ತಿಥಿ ವಾರ ನಕ್ಷತ್ರ ಯೋಗ ಕರಣ ಸಂವತ್ಸರ ಇವೆಲ್ಲವು ಕೂಡಲಚೆನ್ನಸಂಗನಲ್ಲಿ ಬಸವಣ್ಣ ಕಟ್ಟಿದ ಕಟ್ಟಳೆ.
--------------
ಚನ್ನಬಸವಣ್ಣ
ಅಯ್ಯಾ ಅಯ್ಯಾ ಎಂದು ನೆನೆವುತ್ತಿಹರಯ್ಯಾ ಗಂಗೆವಾಳುಕಸಮಾರುದ್ರರು, ಅವರಿಗೆ ಪ್ರಸಾದಲಿಂಗವ ಸಾಹಿತ್ಯವ ಮಾಡಿದ ಕಾರಣ. ಅಯ್ಯಾ ಅಯ್ಯಾ ಎಂದು ಹೊಗಳುತ್ತಿಹರಯ್ಯಾ ಏಕಾದಶರುದ್ರರು, ಅವರಿಗೆ ಸಕಲ ನಿಃಕಲಾತ್ಮಕ ನೀನೆಯಾಗಿ ಪ್ರಾಣಲಿಂಗವ ಸಾಹಿತ್ಯವ ಮಾಡಿದ ಕಾರಣ. ಶಿವಶಿವಾ ಎನುತಿರ್ಪರಯ್ಯಾ ವಿಷ್ಣು ಮೊದಲಾದ ತ್ರೈತಿಂಶತಿಕೋಟಿ ದೇವತೆಗಳು, ಅವರಿಗೆ ಧರ್ಮಾರ್ಥಕಾಮಮೋಕ್ಷಂಗಳನಿತ್ತೆಯಾಗಿ. ಹರಹರಾ ಎನುತಿರ್ಪರಯ್ಯಾ ಬ್ರಹ್ಮ ಮೊದಲಾದ ಅಷ್ಟಾಶೀತೀಸಹಸ್ರ ಋಷಿಯರು, ಅವರಿಗೆ ಸ್ವರ್ಗ ನರಕಾದಿಗಳ ಮಾಡಿದೆಯಾಗಿ. ಮಹಾದೇವಾ ಮಹಾದೇವಾ ಎನುತಿರ್ಪರಯ್ಯಾ ದಾನವಾದಿಗಳು ಅವರಿಗೆ ಸುಕೃತ ದುಃಕೃತಂಗಳನೀವೆಯಾಗಿ. ಬಸವಾ ಬಸವಾ ಎನುತಿರ್ಪರಯ್ಯಾ ಮಹಾಭಕ್ತರು, ಅವರಿಗೆ ಗುರು ಲಿಂಗ ಜಂಗಮ ಪಾದೋದಕ ಪ್ರಸಾದವ ತೋರಿದ ಕಾರಣ. ಉಳಿದ ಎಂಬತ್ತುನಾಲ್ಕುಲಕ್ಷ ಜೀವರಾಶಿಗಳೆಲ್ಲ ನಿಮ್ಮುವನನಿಮಿಷವಾಗಿ ನೋಡುತಿರ್ಪರಯ್ಯಾ, ಸಕಲ ನಿಃಕಲಾತ್ಮಕ ಚೈತನ್ಯನಾದೆಯಾಗಿ. ಸಕಲವೂ ನಿನ್ನಾಧಾರ, ನಿಃಕಲವೂ ನಿನ್ನಾಧಾರ. ಸಕಲ ನಿಃಕಲದೊಡೆಯ ದೇವರದೇವ ಕಲಿದೇವಾ ನಿಮ್ಮ ಕರಸ್ಥಲದ ಹಂಗಿನೊಳಗಿರ್ದ ಕಾರಣ ಸಂಗನಬಸವಣ್ಣ.
--------------
ಮಡಿವಾಳ ಮಾಚಿದೇವ
ಓಂ ವಿಶ್ವನಿರಾಕಾರ ನಿರವಯನಿರ್ವಿಕಾರ ಅವಗತವಾಗ್ಮನವಾಗತ ಆಕಾಶ ಸಭಾಮೂರ್ತಿ ನಿರಾಕಾರವೆಂಬ ನಿಜಲಿಂಗವಪ್ಪ ಪರಶಿವಾನಂದ ಮೂರ್ತಿ ತನ್ನೊಳು ತ್ರಿಗುಣಾತ್ಮಕನಾಗಿಹ. ಅದೆಂತೆಂದಡೆ : ಶಿವ ಸದಾಶಿವ ಮಹೇಶ್ವರನೆಂದು ಪರಶಿವನ ತ್ರಿಗುಣಾತ್ಮಕ ಭೇದಂಗಳು, ಇಂತಪ್ಪ ಪರಶಿವನು ವಿಶ್ವದುತ್ಪತ್ಯಕಾರಣನಾಗಿ ಪಂಚಸಾದಾಖ್ಯ ರೂಪಗಳಂ ಪ್ರತ್ಯೇಕ ತ್ರಿಗುಣಾತ್ಮಕರಾಗಿ ಜ್ಯೋತಿಯಿಂ ಪೊತ್ತಿಸಲಾಪುದು. ಘನವಾದುದು ಉಪಮಿಸಬಾರದ ಮಹಾಘನದಂತೆ ಆ ಮಹಾಬೆಳಗು ತನ್ನೊಳೈದು ರೂಪಾಯಿತ್ತು. ಅದೆಂತೆಂದಡೆ : ಶಿವ ಅಮೂರ್ತಿ ಮೂರ್ತಿ ಕರ್ತೃ ಕರ್ಮರೆಂಬ ಪಂಚಬ್ರಹ್ಮ ಹುಟ್ಟಿದವು; ಅದಕೈವರು ಶಕ್ತಿಯರುದಯಿಸಿದರು, ಅವರ ನಾಮಂಗಳು:ಪರಾಶಕ್ತಿ, ಆದಿಶಕ್ತಿ, ಇಚ್ಛಾಶಕ್ತಿ ಜ್ಞಾನಶಕ್ತಿ ಕ್ರಿಯಾಶಕ್ತಿ. ಇಂತಿಂತು ಐವರನು ಪಂಚಬ್ರಹ್ಮರಿಗೆ ವಿವಾಹಂ ಮಾಡಿದೊಡಾ ಶಿವಶಕ್ತಿ ಪಂಚಕದಿಂದೊಂದು ಓಂಕಾರವೆಂಬ ಬೀಜವಂ ನಿರ್ಮಿಸಿದಡಾ, ಓಂಕಾರ ಬೀಜದಿಂದೊಂದು ವಿರಾಟಸ್ವರೂಪಮಪ್ಪ ಮಹಾಘನ ತೇಜೋಮಯವಪ್ಪ ಅನಾದಿರುದ್ರಸಹಸ್ರಾಂಶುವಿಂಗೆ ಸಾವಿರ ಶಿರ ಸಾವಿರ ನಯನ ಸಾವಿರ ದೇಹ ಸಾವಿರಪಾದವುಳ್ಳ ಸ್ವಯಂಭುಮೂರ್ತಿ ಪುಟ್ಟಿದ ಆ ಸ್ವಯಂಭುಮೂರ್ತಿಯ ಮುಖದಲ್ಲಿ ಈಶ್ವರಪುಟ್ಟಿದ, ಈಶ್ವರನ ವಾಮಭಾಗದಲ್ಲಿ ವಿಷ್ಣುಪುಟ್ಟಿದ. ದಕ್ಷಿಣಭಾಗದಲ್ಲಿ ಬ್ರಹ್ಮಪುಟ್ಟಿದ. ಇಂತು ತ್ರಿದೇವತೆಯರೊಳಗಗ್ರಜನಪ್ಪ ಮಹಾಮಹಿಮ ಈಶ್ವರನ ಪಂಚಮುಖದಲ್ಲಿ ಪಂಚಬ್ರಹ್ಮ ತೇಜೋಮಯ ರುದ್ರರು ಪುಟ್ಟಿದರು. ಅವರ ನಾಮಂಗಳು : ಸದ್ಯೋಜಾತ ವಾಮದೇವ ಅಘೋರ ತತ್ಪುರುಷ ಈಶಾನ್ಯರೆಂದಿಂತು. ಅವರೋಳ್ಸದ್ಯೋಜಾತನೆಂಬ ಅಗ್ರಜರುದ್ರ ಪುಟ್ಟಿದನು. ಆ ಸದ್ಯೋಜಾತಂಗೆ ಮಹಾರುದ್ರ ಪುಟ್ಟಿದನು. ಆ ಮಹಾರುದ್ರಂಗೆ ಶ್ರೀರುದ್ರ ಪುಟ್ಟಿದನು. ಆ ಶ್ರೀರುದ್ರಂಗೆ ರುದ್ರ ಪುಟ್ಟಿದನು. ಆ ರುದ್ರಂಗೆ ಅಗ್ನಿಯು ಅವಗತ ಪುಟ್ಟಿದವು. ಆ ಅಗ್ನಿಗೆ ಕಾಶ್ಶಪಬ್ರಹ್ಮ ಪುಟ್ಟಿದನು. ಅವಗತಕ್ಕೆ ಮಾಯಾಸ್ವಪ್ನಬ್ರಹ್ಮ ಪುಟ್ಟಿದನು. ಅದೆಂತೆಂದಡೆ : ಮಾಯವೆ ಮೃತ್ಯು, ಬ್ರಹ್ಮವೆ ಸತ್ಯ ಅದು ಮಾಯಾಸ್ವವಪ್ನಬ್ರಹ್ಮವೆನಿಸಿತ್ತು. ಇಂತಿಪ್ಪ ಬ್ರಹ್ಮವು ಮಾಯಾ ಅವಲಂಬಿಸಿಹುದಾಗಿ ಅದು ಮಾಯಾಸ್ವಪ್ನಬ್ರಹ್ಮವೆನಿಸಿತ್ತು. ಇಂತಪ್ಪ ಮಾಯಾ ಸ್ವಪ್ನಬ್ರಹ್ಮಂಗೆ ತ್ರಯೋದಶಕುಮಾರಿಯರು ಪುಟ್ಟಿದರು. ಅವರ ನಾಮಂಗಳು : ಬೃಹತಿ, ಅದಿತಿ, ದಿತಿ, ವಿನುತಾದೇವಿ, ಕದ್ರು, ಸುವರ್ಣಪ್ರಭೆ, ಕುಮುದಿನಿ, ಪ್ರಭಾದೇವಿ, ಕಾಳಿದಂಡಿ, ಮೇಘದಂಡಿ, ದಾತೃಪ್ರಭೆ, ಕುಸುಮಾವತಿ, ಪಾರ್ವಂದಿನಿ ಎಂದಿಂತು ತ್ರಯೋದಶಕುಮಾರಿಯರು ಪುಟ್ಟಿದರು. ಇದಕ್ಕೆ ಆದಿ ಪರಮೇಶ್ವರನು ಸೃಷ್ಟಿ ನಿರ್ಮಿತ ಜಗದುತ್ಪತ್ಯ ಸ್ಥಿತಿ ಲಯಗಳಾಗಬೇಕೆಂದು, ಆ ಕಾಶ್ಯಪಬ್ರಹ್ಮಗು ತ್ರಯೋದಶ ಸ್ತ್ರೀಯರಿಗೆಯು ವಿವಾಹವ ಮಾಡಿದನು. ಆ ಕಾಶ್ಯಪಬ್ರಹ್ಮನ ಮೊದಲ ಸ್ತ್ರೀಯ ಪೆಸರು ಬೃಹತಿ. ಆ ಬೃಹತಿಗೆ ಪುಟ್ಟಿದ ಮಕ್ಕಳ ಪೆಸರು ಹಿರಣ್ಯಕಾಂಕ್ಷ. ಹಿರಣ್ಯಕಾಂಕ್ಷನ ಮಗ ಪ್ರಹರಾಜ, ಪ್ರಹರಾಜ ಮಗ ಕುಂಭಿ, ಆ ಕುಂಭಿಯ ಮಗ ನಿಃಕುಂಭಿ, ನಿಃಕುಂಭಿಯ ಮಗ ದುಂದುಭಿ, ಆ ದುಂದುಭಿಯ ಮಗ ಬಲಿ, ಬಲಿಯ ಮಗ ಬಾಣಾಸುರ. ಇಂತಿವರು ಮೊದಲಾದ ಛಪ್ಪನ್ನಕೋಟಿ ರಾಕ್ಷಸರು ಪುಟ್ಟಿದರು. ಎರಡನೆಯ ಸ್ತ್ರೀಯ ಪೆಸರು ಅದಿತಿ. ಆ ಅದಿತಿಗೆ ಸೂರ್ಯ ಮೊದಲಾದ ಮೂವತ್ತುಕೋಟಿ ದೇವರ್ಕಳು ದೇವಗಣ ಪುಟ್ಟಿದವು. ಮೂರನೆಯ ಸ್ತ್ರೀಯ ಪೆಸರು ದಿತಿದೇವಿ. ಆ ದಿತಿದೇವಿಗೆ ಕೂರ್ಮ ಮೊದಲಾದ ಜಲಚರಂಗಳು ಪುಟ್ಟಿದವು. ನಾಲ್ಕನೆಯ ಸ್ತ್ರೀಯ ಪೆಸರು ವಿನುತಾದೇವಿ. ಆ ವಿನುತಾದೇವಿಗೆ ಸಿಡಿಲು, ಮಿಂಚು, ವರುಣ, ಗರುಡ ಮೊದಲಾದ ಖಗಜಾತಿಗ?ು ಪುಟ್ಟಿದವು. ಐದನೆಯ ಸ್ತ್ರೀಯ ಪೆಸರು ಕದ್ರುದೇವಿ. ಆ ಕದ್ರುವಿಗೆ ಶೇಷ, ಅನಂತ, ವಾಸುಗಿ, ಶಂಬವಾಳ, ಕಕ್ಷರ, ಕರ್ಕೋಟ, ಕರಾಂಡ, ಭುಜಂಗ, ಕುಳ್ಳಿಕ, ಅಲ್ಲಮಾಜಾರ್ಯ ಇಂತಿವು ಮೊದಲಾದ ನವಕುಲನಾಗಂಗಳು ಪುಟ್ಟಿದವು. ಆರನೆಯ ಸ್ತ್ರೀಯ ಪೆಸರು ಸುವರ್ಣಪ್ರಭೆ. ಆ ಸುವರ್ಣಪ್ರಭೆಗೆ ಚಂದ್ರ, ತಾರಾಗಣ, ನಕ್ಷತ್ರಂಗಳು ಪುಟ್ಟಿದವು. ಏಳನೆಯ ಸ್ತ್ರೀಯ ಪೆಸರು ಕುಮುದಿನಿ. ಆ ಕುಮುದಿನಿಗೆ ಐರಾವತ, ಪುಂಡರೀಕ, ಪುಷ್ಪದಂತ, ವಾಮನ, ಸುಪ್ರದೀಪ, ಅಂಜನ, ಸಾರ್ವಭೌಮ, ಕುಮುದ, ಭಗದತ್ತ ಇಂತಿವು ಮೊದಲಾದ ಮೃಗಕುಲಾದಿ ವ್ಯಾಘ್ರ ಶರಭ ಶಾರ್ದೂಲಂಗಳು ಪುಟ್ಟಿದವು. ಎಂಟನೆಯ ಸ್ತ್ರೀಯ ಪೆಸರು ಪ್ರಭಾದೇವಿ. ಆ ಪ್ರಭಾದೇವಿಗೆ ಕನಕಗಿರಿ, ರಜತಗಿರಿ, ಸೇನಗಿರಿ, ನೀಲಗಿರಿ, ನಿಷಧಗಿರಿ, ಮೇರುಗಿರಿ, ಮಾನಸಗಿರಿ ಇಂತಿವು ಮೊದಲಾದ ಪರ್ವತಂಗಳು ಪುಟ್ಟಿದವು. ಒಂಬತ್ತನೆಯ ಸ್ತ್ರೀಯ ಪೆಸರು ಕಾಳಿದಂಡಿ. ಆ ಕಾಳಿದಂಡಿಗೆ ಸಪ್ತಋಷಿಯರು ಮೊದಲಾದ ಅಷ್ಟಾಸೀತಿ ಸಹಸ್ರ ಋಷಿಯರು ಪುಟ್ಟಿದರು. ಹತ್ತನೆಯ ಸ್ತ್ರೀಯ ಪೆಸರು ಮೇಘದಂಡಿ. ಆ ಮೇಘದಂಡಿಗೆ ನೀಲಮೇಘ, ಕುಂಭಮೇಘ, ದ್ರೋಣಮೇಘ, ಧೂಮಮೇಘ, ಕಾರ್ಮೇಘ ಇಂತಿವು ಮೊದಲಾದ ಮೇಘಂಗಳು ಪುಟ್ಟಿದವು. ಹನ್ನೊಂದನೆಯ ಸ್ತ್ರೀಯ ಪೆಸರು ದಾತೃಪ್ರಭೆ. ಆ ದಾತೃಪ್ರಭೆಗೆ ಚಿಂತಾಮಣಿ ಮೊದಲಾದ ನವರತ್ನಂಗಳು ಪುಟ್ಟಿದವು. ಹನ್ನೆರಡನೆಯ ಸ್ತ್ರೀಯ ಪೆಸರು ಕುಸುಮಾವತಿ. ಆ ಕುಸುಮಾವತಿಗೆ ಕಾಮಧೇನು, ಕಲ್ಪವೃಕ್ಷಂಗಳು ಪುಟ್ಟಿದವು. ಹದಿಮೂರನೆಯ ಸ್ತ್ರೀಯ ಪೆಸರು ಪಾರ್ವಂದಿನಿ. ಆ ಪಾರ್ವಂದಿನಿಗೆ ಅಷ್ಟದಿಕ್ಪಾಲಕರು ಪುಟ್ಟಿದರು. ಇಂತಿವರುಗಳ ರಜಸ್ಸೀಲಾಶೋಣಿತದಿಂದ ಸಹಸ್ರವೇದಿ ಮೊದಲಾದ ಅಷ್ಟ ಪಾಷಾಣಂಗಳು ಪುಟ್ಟಿದವು. ಇವರುಗಳ ಮಲಮೂತ್ರದಿಂದ ಪರುಷರಸ ಸಿದ್ಧರಸ ನಿರ್ಜರೋದಕ ಪುಟ್ಟಿದವು. ಇಂತಿವರುಗಳ ಬೆಚ್ಚು ಬೆದರಿಂದ ದೇವಗ್ರಹ, ಯಕ್ಷಗ್ರಹ, ನಾಗಗ್ರಹ, ಗಾಂಧರ್ವಗ್ರಹ, ಪಿಶಾಚಗ್ರಹ, ಪೆಂತರಗ್ರಹ, ಬ್ರಹ್ಮರಾಕ್ಷಸಗ್ರಹ ಶತಕೋಟಿ ದೇವಗ್ರಹ, ಸರ್ವದರ್ಪಗ್ರಹ, ಶಾಕಿನಿ, ಡಾಕಿನಿ ಮೊದಲಾದ ಗ್ರಹಭೂತ ಪ್ರೇತ ಪಿಶಾಚಂಗಳು ಪುಟ್ಟಿದವು. ಇವರುಗಳ ಪ್ರಸೂತಿಕಾಲ ಮಾಸಿನಿಂದ ಅಷ್ಟಲೋಹ ಪಾಷಾಣಂಗಳು ಪುಟ್ಟಿದವು. ಕಾಲರಾಶಿ, ಕರಣರಾಶಿ, ಭೂತರಾಶಿ, ಮೂಲರಾಶಿ, ಪ್ರಾಣರಾಶಿಗಳು ಮೊದಲಾದ ಕೀಟಕ ಜಾತಿಗಳು ಪುಟ್ಟಿದವು. ಇಂತು ಚತುರ್ದಶ ಭುವನಂಗಳು, ಐವತ್ತಾರುಕೋಟಿ ರಾಕ್ಷಸರು, ದ್ವಾದಶಾದಿತ್ಯರು, ಮೂವತ್ತುಮೂರುಕೋಟಿದೇವರ್ಕಗಳು, ದೇವಗಣ ಸುರಪತಿ, ಖಗಪತಿ, ಸಿಡಿಲು, ಮಿಂಚು, ವರುಣ, ಗರುಡ, ನವಕುಲ ನಾಗಂಗಳು, ಚಿಂತಾಮಣಿನವರತ್ನಂಗಳು, ಕಾಮಧೇನು, ಕಲ್ಪವೃಕ್ಷ ಪರುಷರಸ, ಸಿದ್ದರಸ ನಿರ್ಜರೋದಕ, ದಿಕ್ಕರಿಗಳು, ಕೂರ್ಮ ಮೊದಲಾದ ಜಲಚರಂಗಳು, ಚಂದ್ರತಾರಾಗಣ ನಕ್ಷತ್ರಂಗಳು ಪುಟ್ಟಿದವು. ಇದಕ್ಕೆ ಶ್ರುತಿ : ಓಂ ವಿಶ್ವಕರ್ಮಹೃದಯೇ ಬ್ರಹ್ಮಚಂದ್ರಮಾ ಮನಸೋ ಜಾತಃ ಚಕ್ಷೋಸ್ಸೂರ್ಯದಯಾಭ್ಯೋ ಸರ್ವಾಂಗ ಭೂಷಿಣಿ ದೇವಸ್ಯ ಬಾಹುದ್ವಯಾಂಶಕಃ ಪ್ರತಿಬಾಹು ವಿಷ್ಣುಮೇವಚ ಮಣಿಬಂಧೇ ಪಿತಾಮಹಃ ಜ್ಯೇಷಾ*ಂಗುಲೇ ದೇವೇಂದ್ರ ತರ್ಜಂನ್ಯಂಗುಲೇ ಈಶಾನಃ ಪ್ರೋಕ್ತಃ ಮಾಧ್ಯಮಾದಂಗುಲೇ ಮಾಧವಃ ಅನಾಮಿಕಾಂಗುಲೇ ಅಗ್ನಿ ದೇವಃ ಕನಿಷ್ಟಾಂಗುಲೇ ಭಾಸ್ಕರಃ ಅಚಲಕುಚಿತಮಧ್ಯೇ ವನರ್ಚಪಾದ ಆಹ್ವಾನಾಂತು ಜಗತ್ ನಿರ್ಮಿತ ವಿಶ್ವಕರ್ಮಣಾಂ ಇಂತು ಕಾಶ್ಯಪಬ್ರಹ್ಮನ ಹದಿಮೂರು ಸ್ತ್ರೀಯರುಗಳಿಗೆ ಸಚರಾಚರಂಗಳು ಪುಟ್ಟಿದವಾಗಿ, ಇವರ ಪರಿಪ್ರಮಾಣ ನಮ್ಮ ಶರಣಸ್ಥಲದಲ್ಲಿದ್ದವರು ಬಲ್ಲರು. ಸದ್ಯೋಜಾತ, ವಾಮದೇವ, ಅಘೋರ, ತತ್ಪುರುಷ, ಈಶಾನ್ಯ, ಪಂಚವಕ್ತ್ರ, ಆದಿಲಿಂಗ, ಅನಾದಿಶರಣ ಇವರೆಲ್ಲರು ಸಾಕ್ಷಿಯಾಗಿ ಕೂಡಲಚೆನ್ನಸಂಗಯ್ಯನೆ ವಿಶ್ವಕರ್ಮ ಜಗದ್ಗುರು
--------------
ಚನ್ನಬಸವಣ್ಣ
-->