ಅಥವಾ

ಒಟ್ಟು 91 ಕಡೆಗಳಲ್ಲಿ , 14 ವಚನಕಾರರು , 38 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಗಳೇಕೆ `ನೋಡಬೇಡಾ' ಎಂದರೆ ಮಾಣವು ? ಶ್ರೋತ್ರಂಗಳೇಕೆ `ಆಲಿಸಬೇಡಾ' ಎಂದರೆ ಮಾಣವು ? ಜಿಹ್ವೆ ಏಕೆ `ರುಚಿಸಬೇಡಾ' ಎಂದರೆ ಮಾಣವು (ದು ?) ನಾಸಿಕವೇಕೆ `ವಾಸಿಸಬೇಡಾ' ಎಂದರೆ ಮಾಣವು ? (ದು ?) ತ್ವಕ್ಕು ಏಕೆ `ಸೋಂಕಬೇಡಾ' ಎಂದರೆ ಮಾಣವು ? (ದು ?)_ ಈ ಭೇದವನರಿದು ನುಡಿಯಲು ಸಮಧಾತುವಾಯಿತ್ತು! ಗುಹೇಶ್ವರಲಿಂಗಕ್ಕೆ ಒಲಿದ ಕಾರಣ, ಅಭಿಮಾನ ಲಜ್ಜೆ ಬೇಸತ್ತು ಹೋಯಿತ್ತು.
--------------
ಅಲ್ಲಮಪ್ರಭುದೇವರು
ಭಕ್ತನೊಂದು ಕುಲ, ಭವಿಯೊಂದು ಕುಲವೆಂಬರು. ಭಕ್ತನೆಂತಿಪ್ಪ ಭವಿಯೆಂತಿಪ್ಪನೆಂದರೆ, ಆರೂ ಅರಿಯರು. ಇದು ಬಲ್ಲವರು ತಿಳಿದು ನೋಡಿ. ಭಕ್ತನೆಂದರೆ ಅಂಗ, ಭವಿ ಎಂದರೆ ಲಿಂಗ, ಈ ಎರಡರ ಸಕೀಲಸಂಬಂಧವನರಿದರೆ, ಆತನೆ ನಮ್ಮ ಬಸವಪ್ರಿಯ ಕೂಡಲಚೆನ್ನಬಸವಣ್ಣ.
--------------
ಹಡಪದ ಅಪ್ಪಣ್ಣ
ಒಂದು, ಎರಡು, ಮೂರು, ನಾಲಕ್ಕು, ಅಯಿದು, ಆರು, ಏಳು, ಎಂಟು ಒಂಬತ್ತು, ಹತ್ತು, ಹನ್ನೊಂದು ಹನ್ನೆರಡು, ಹದಿಮೂರು, ಹದಿನಾಲಕ್ಕು, ಹದಿನೈದು, ಹದಿನಾರು, ಹದಿನೇಳು, ಹದಿನೆಂಟು, ಹತ್ತೊಂ¨ತ್ತು, ಇಪ್ಪತ್ತು, ಇಪ್ಪತ್ತೊಂದು, ಇಪ್ಪತ್ತೆರಡು, ಇಪ್ಪತ್ತಮೂರು, ಇಪ್ಪತ್ತನಾಲಕ್ಕು. ಇಪ್ಪತ್ತನಾಲಕ್ಕು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತನಾಲಕ್ಕು ಎಂದರೆ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ಯುದಿಷ್ಠಿರೋ ವಿಕ್ರ[ಮೋ]ಶಾಲಿವಾಹನ[ಃ] ತ[ಪಸಾ] ಧ್ರುವಶ್ಚ [ದಿವಿ]ಜರಾಜನಂದನಃ ನಾಗಾಂತಕೋ ಭೂಪತಿ [ಷಷ್ಠಮಃ] ಕಲಿಯುಗೇ ಷಟ್‍ಚಕ್ರವರ್ತಿ[ನಃ] ಈ ಆರು ಮಂದಿ ಕಲಿಯುಗದ ಚಕ್ರವರ್ತಿಗಳು. ಇಪ್ಪತ್ತಮೂರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತಮೂರು ಎಂದರೆ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ಯಯಾತಿ ನಹುಷ[ಶ್ಶಂತನುಃ] ಚಿತ್ರವೀರ್ಯಶ್ಚ ಪಾಂಡವಃ ರಾಜಾ ದುರ್ಯೋಧನ[ಶ್ಚೈ]ವ ದ್ವಾಪರೇ ಷ[ಟ್] ಚಕ್ರವರ್ತಿ[ನಃ] ಆ ಆರು ಮಂದಿ ದ್ವಾಪರದ ಚಕ್ರವರ್ತಿಗಳು. ಇಪ್ಪತ್ತೆರಡು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತೆರಡು ಎಂದರೆ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ವೈವ[ಸ್ವ]ತೋ ದಿಲೀಪಶ್ಚ ರಘು ಚಕ್ರೇಶ್ವರೋ ಅ[ಜಃ] ದಶರಥೋ ರಾಮಚಂದ್ರ[ಶ್ಚ] ಷಡೈತೇ ಚಕ್ರವರ್ತಿ[ನಃ] ಈ ಆರು ಮಂದಿ ತ್ರೇತಾಯುಗದ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ಹರಿಶ್ಚಂ[ದ್ರೋ] ನ[ಳ]ರಾಜ[ಃ] ಪುರುಕು[ತ್ಸ]ಶ್ಚ ಪುರೂರವಃ ಸಗರಃ ಕಾರ್ತವೀರ್ಯಶ್ಚ ಷಡೈತೇ ಚಕ್ರವರ್ತಿ[ನಃ] ಈ ಆರು ಮಂದಿ ಕೃತಯುಗದ ಚಕ್ರವರ್ತಿಗಳು. ಅಂತೂ ಇಪ್ಪತ್ತನಾಲ್ಕು ಮಂದಿ ಚಕ್ರವರ್ತಿಗಳು. ಇಪ್ಪತ್ತು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತು ಎಂದರೆ ಪ್ರಪಂಚ ನಿರ್ಮಾಣ ಸಹಾಯ[ದ]ವರು. ಅದು ಎಂತೆಂದಡೆ: ಆಂಗೀರಸ, ಪುಲಸ್ತ್ಯ, ಪುಲಹ, ಶಾಂತ, ದಕ್ಷ, ವಸಿಷ್ಠ, ವಾಮದೇವ, ನವಬ್ರಹ್ಮ, ಕೌಶಿಕ, ಶೌನಕ, ಸ್ವಯಂಭು, ಸ್ವಾರೋಚಿಷ, ಉತ್ತಮ, ತಾಮಸ, ರೈವತ, ಚಾಕ್ಷಷ, ವೈವಸ್ವತ, ಸೂರ್ಯಸಾವರ್ಣಿ, ಚಂದ್ರಸಾವರ್ಣಿ, ಬ್ರಹ್ಮಸಾವರ್ಣಿ, ಇಂದ್ರ ಸಾವರ್ಣಿ ಇವರು ಇಪ್ಪತ್ತು ಮಂದಿ ಪ್ರಪಂಚ ನಿರ್ಮಾಣ ಸಹಾಯ[ದ]ವರು. ಹತ್ತೊಂಬತ್ತು ಎಂದರೆ ಪುಣ್ಯನದಿಗಳು. ಅದು ಎಂತೆಂದಡೆ: ಗ್ರಂಥ || ಗಂಗಾ ಪುಷ್ಕ[ರಿಣೀ] ನರ್ಮದಾ ಚ ಯಮುನಾ ಗೋದಾವರೀ ಗೋಮತೀ ಗಂಗಾದ್ವಾರ ಗಯಾ ಪ್ರಯಾಗ ಬದರೀ ವಾರಾಣಸೀ ಸೈಯಿಂಧವೀ ಇವು ಹತ್ತೊಂಬತ್ತು ಪುಣ್ಯನದಿಗಳು. ಹದಿನೆಂಟು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನೆಂಟು ಎಂದರೆ.......... ಅದು ಎಂತೆಂದಡೆ: ........................... ಹದಿನೇಳು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನೇಳು ಎಂದರೆ................. ಅದು ಎಂತೆಂದಡೆ: .................... ಹದಿನಾರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನಾರು ಎಂದರೆ [ಅ]ರಸುಗಳು ಅದು ಎಂತೆಂದಡೆ: ಗ್ರಂಥ || ಗಯಾಂಬರೀ[ಷ] ಶ[ಶ]ಬಿಂದುರಂಗದೋ ಪೃಥು[ರ್ಮ]ರು[ತ್] ಭರತ[ಸ್ಸು]ಹೋತ್ರಃ ರಾಮೋ ದಿಲೀಪೋ ಸಗರ ರಂತಿ ರಾಮ[ಃ] ಯಯಾತಿ ಮಾಂಧಾತ ಭಗೀರಥ[ಶ್ಚ] ಎಂದುದಾಗಿ, ಗಯ, ಅಂಬರೀಷ, ಶಶಬಿಂದು, ಪೃಥು, ಮರುತ್, ಭರತ, ಸುಹೋತ್ರ, ಪರಶುರಾಮ, ದಿಲೀಪ, ಸಗರ, ರಂತಿ, ರಾಮಚಂದ್ರ, ಯಯಾತಿ, ಮಾಂಧಾತ, ಭಗೀರಥ, ಅ[ಂಗದ] ಇವರು ಹದಿನಾರು ಮಂದಿ ಅರಸುಗಳು. ಹದಿನೈದು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನೈದು ಎಂದರೆ ತಿಥಿಗಳು. ಅದು ಎಂತೆಂದಡೆ: ಪಾಡ್ಯ, ಬಿದಿಗೆ, ತದಿಗೆ, ಚವುತಿ, [ಪಂಚಮಿ], ಷಷ್ಠಿ, ಸಪ್ತಮಿ, ಅಷ್ಟಮಿ, ನವಮಿ, ದಶಮಿ, ಏಕಾದಶಿ, ದ್ವಾದಶಿ, ತ್ರಯೋದಶಿ, ಅಮಾವಾಸ್ಯೆ ಇವು ಹದಿನೈದು ತಿಥಿಗಳು. ಹದಿನಾಲಕ್ಕು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನಾಲಕ್ಕು ಎಂದರೆ ಲೋಕಂಗಳು. ಅದು ಎಂತೆಂದಡೆ: ಅತಲ ವಿತಲ ಸುತಲ ತಲಾತಲ ಮಹಾತಲ ರಸಾತಲ ಪಾತಾಳ ಭೂಲೋಕ ಭುವರ್ಲೋಕ ಸುರ್ವರ್ಲೋಕ ಮಹರ್ಲೋಕ ತಪೋಲೋಕ ಜನೋಲೋಕ ಸತ್ಯಲೋಕ ಇವು ಹದಿನಾಲ್ಕು ಲೋಕಂಗಳು. ಹದಿಮೂರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೆನಪ್ಪ ? ಹದಿಮೂರು ಎಂದರೆ ಚಕ್ರಂಗಳು. ಅದು ಎಂತೆಂದಡೆ, ಆಧಾರಚಕ್ರ, ಸ್ವಾಷ್ಠಾನಚಕ್ರ, ಮಣಿಪೂರಕಚಕ್ರ, ಅನಾಹಚಕ್ರ, ವಿಶುದ್ಧಿಚಕ್ರ, ಆಜ್ಞಾಚಕ್ರ, ಶಿಖಾಚಕ್ರ, ಬ್ರಹ್ಮಚಕ್ರ, ಘಟಚಕ್ರ, ಕಾಲಚಕ್ರ, ಮೇಘಚಕ್ರ, ಭೂಚಕ್ರ, ಅವಗಡಚಕ್ರ ಇವು ಹದಿಮೂರು ಚಕ್ರಂಗಳು. ಹನ್ನೆರಡು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹನ್ನೆರಡು ಎಂದರೆ ಮಾಸಂಗಳು. ಅದು ಎಂತೆಂದರೆ, ಚೈತ್ರ, ವೈಶಾಖ, ಜ್ಯೇಷ್ಠ, ಆಷಾಢ, ಶ್ರಾವಣ, ಭಾದ್ರಪದ, ಆಶ್ವೀಜ, ಕಾರ್ತೀಕ, ಮಾರ್ಗಶಿರ, ಪುಷ್ಯ, ಮಾಘ, ಫಾಲ್ಗುಣ ಇವು ಹನ್ನೆರಡು ಮಾಸಂಗಳು. ಹನ್ನೊಂದು ಎಂದರೆ ನೋಡಿದ್ದೇನಪ್ಪ ? ಕೇಳಿದ್ದೇನಪ್ಪ ? ಹನ್ನೊಂದು ಎಂದರೆ ಭಾರತಂಗಳು. ಅದು ಎಂತೆಂದಡೆ: ಆದಿಭಾರತ, ಕೈಲಾಸಭಾರತ, ಶ್ರೀರುದ್ರಭಾರತ, ನಂದಿಭಾರತ, ನಾರ[ದ]ಭಾರ[ತ], ಭೃಗುಭಾರತ, ಮನುಭಾರತ, ಉಮಾಭಾರತ, ಪ್ರಸಿದ್ಧಭಾರತ, ಸಿದ್ಧೋರಗಭಾರತ, ಶ್ರೀರಂಗಭಾರತ ಇವು ಹನ್ನೊಂದು ಭಾರತಂಗಳು. ಹತ್ತು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹತ್ತು ಎಂದರೆ, ದಶಾವತಾರಂಗಳು. ಅದು ಎಂತೆಂದರೆ, ಗ್ರಂಥ || ಮತ್ಸ್ಯಃ ಕೂರ್ಮಃ ವರಾಹಶ್ಚ ನಾರಸಿಂಹಶ್ಚ ವಾಮನಃ ರಾಮೋ ರಾಮಶ್ಚ [ಕೃಷ್ಣ]ಶ್ಚ ಬೌದ್ಧಃ ಕಲ್ಕಿ[ರೇ]ವ ಚ ಎಂದುದಾಗಿ, ಈ ದಶಾವತಾರಂಗಳಲ್ಲಿ ಯಾರಾರು ಸಂಹಾರ ಎಂದರೆ, ಮತ್ಯ್ಸಾವತಾರದಲ್ಲಿ ಅಮೃತಮಥನೇ ಸೋಮಕಾಸುರನ ಸಂಹಾರ. ಕೂರ್ಮಾವತಾರದಲ್ಲಿ ಮಂದರಪರ್ವತಕ್ಕೆ ಆಧಾರ. ವರಾಹಾವತಾರದಲ್ಲಿ ಹಿರಣ್ಯಾಕ್ಷನ ಸಂಹಾರ. ನರಸಿಂಹಾವತಾರದಲ್ಲಿ ಹಿರಣ್ಯಕಶ್ಯಪ ಸಂಹಾರ. ವಾಮನಾವತಾರದಲ್ಲಿ ಪಂಚಮೇಢ್ರಾಸುರ ಎಂಬ ರಾಕ್ಷಸನ ಸಂಹಾರ. ಪರಶುರಾಮಾವತಾರದಲ್ಲಿ ಕಾರ್ತವೀರ್ಯರ ಸಂಹಾರ. ರಫ್ಸುರಾಮಾವತಾರದಲ್ಲಿ ರಾವಣಕುಂಭಕರ್ಣರ ಸಂಹಾರ. 1ಬಲಭದ್ರ1 ನವತಾರದಲ್ಲಿ ಪ್ರಲಂಬಕವಾದ ಅಸುರರ ಸಂಹಾರ. ಬೌದ್ಧಾವತಾರದಲ್ಲಿ ತ್ರಿಪುರದಾನವಸತಿಯರ ಕೆಡಿಸಿದ. ಕಲ್ಕ್ಯವತಾರದಲ್ಲಿ 2ಕಂಸಾಸುರ, ನರಕಾಸುರ, ಬಾಣಾಸುರರ2 ಸಂಹಾರ, ಇವು ಹತ್ತು ದಶಾವತಾರಗಳು. ಒಂಬತ್ತು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಒಂಬತ್ತು ಎಂದರೆ ನವಗ್ರಹಂಗಳು. ಅದು ಎಂತೆಂದರೆ: ಆದಿತ್ಯ, ಸೋಮ, ಮಂಗಳ, ಬುಧ, ಬೃಹಸ್ಪತಿ, ಶುಕ್ರ, ಶನಿ, ರಾಹು, ಕೇತು- ಇವು ಒಂಬತ್ತು ನವಗ್ರಹಂಗಳು. ಎಂಟು ಎಂದರೆ ನೋಡಿದ್ದೇನಪ್ಪ ಕೇಳಿದ್ದೇನಪ್ಪ ? ಎಂಟು ಎಂದರೆ ಅಷ್ಟದಿಕ್ಪಾಲಕರು. ಅದು ಎಂತೆಂದರೆ: ಇಂದ್ರ, ಅಗ್ನಿ, ಯಮ, ನೈರುತಿ, ವರುಣ, ವಾಯುವ್ಯ, ಕುಬೇರ, ಈಶಾನ್ಯ- ಎಂಟು ಮಂದಿ ಅಷ್ಟದಿಕ್ಪಾಲಕರು. ಏಳು ಎಂದರೆ ನೋಡಿದ್ದೇನಪ್ಪ ಕೇಳಿದ್ದೇನಪ್ಪ ? ಏಳು ಎಂದರೆ ಸಪ್ತಋಷಿಗಳು. ಅದು ಎಂತೆಂದರೆ: ಗ್ರಂಥ || ಕಶ್ಯಪಾತ್ರಿ ಭರದ್ವಾಜ[ಃ] ವಿಶ್ವಾಮಿ[ತ್ರಶ್ಚ] ಗೌತಮ[ಃ] ಜಮದಗ್ನಿ[ಃ] ವಸಿಷ್ಠ[ಶ್ಚ] ಸಪ್ತೈತೇ ಋಷಯ[ಃ ಸ್ಮøತಾಃ] ಎಂದುದಾಗಿ, ಕಶ್ಯಪ, ಅತ್ರಿ, ಭರದ್ವಾಜ, ವಿಶ್ವಾಮಿತ್ರ, ಗೌತಮ, ಜಮದಗ್ನಿ, ವಸಿಷ್ಠ- ಇವರು ಏಳುಮಂದಿ ಸಪ್ತ ಋಷಿಗಳು. ಆರು ಎಂದರೆ ನೋಡಿದ್ದೇನಪ್ಪ ಕೇಳಿದ್ದೇನಪ್ಪ ? ಆರು ಎಂದರೆ ಶಾಸತ್ತ್ರಂಗಳು. ಅದು ಎಂತೆಂದರೆ: ಶಿಲ್ಪಶಾಸ್ತ್ರ, ಭರತಶಾಸ್ತ್ರ, ತರ್ಕಶಾಸ್ತ್ರ, ಶಬ್ದಶಾಸ್ತ್ರ, ಆ[ನ್ವೀಕ್ಷಕೀ]ಶಾಸ್ತ್ರ, ಜ್ಯೋತಿಷ್ಯಶಾಸ್ತ್ರ- ಇವು ಆರು ಶಾಸ್ತ್ರಂಗಳು. ಐದು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಐದು ಎಂದರೆ ಈಶ್ವರನ ಪಂಚ ಮುಖಂಗಳು ಅದು ಎಂತೆಂದರೆ, ಗ್ರಂಥ || ಸದ್ಯೋಜಾ[ತೋ]ದ್ಭವೋರ್ಭೂಮಿಃ] ವಾಮದೇವೋದ್ಭ[ವಂ ಜಲಂ] ಅಫ್ಸೋ[ರಾದ್ವಹ್ನಿ]ರು[ದ್ಭೂತಂ] ತತ್ಪರು[ಷಾದ್ವಾಯುರ್ಭವೇತ್ ಈಶಾನಾದ್ಗಗನಂ ಜಾತಂ] ಎಂದುದಾಗಿ, ಸದ್ಯೋಜಾತಮುಖ, ವಾಮದೇವಮುಖ, ಅಘೋರಮುಖ, ತತ್ಪುರುಷಮುಖ, ಈಶಾನ್ಯಮುಖ- ಇವು ಐದು ಪಂಚಮುಖಂಗಳು. ನಾಲಕ್ಕು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ನಾಲಕ್ಕು ಎಂದರೆ ವೇದಂಗಳು. ಅದು ಎಂತೆಂದರೆ: ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವಣವೇದ- ಇವು ನಾಲ್ಕು ವೇದಂಗಳು. ಮೂರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಮೂರು ಎಂದರೆ ತ್ರಿಮೂರ್ತಿಗಳು. ಅದು ಎಂತೆಂದರೆ: ಬ್ರಹ್ಮ, ವಿಷ್ಣು, ಈಶ್ವರ- ಇವರು ಮೂವರು ತ್ರಿಮೂರ್ತಿಗಳು. ಎರಡು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಎರಡು ಎಂದರೆ ಭಾನು ಶಶಿ. ಅದು ಎಂತೆಂದರೆ: ಸೂರ್ಯ, ಚಂದ್ರ- ಇವರಿಬ್ಬರು ಸೂರ್ಯಚಂದ್ರಾದಿಗಳು. ಒಂದು ಎಂದರೆ ನೋಡಿದ್ದೆನಪ್ಪ ಕೇಳಿದ್ದೇನಪ್ಪ ? ಒಂದು ಎಂದರೆ ಏಕೋ[ಏವ]ದೇವಃ ಅದು ಎಂತೆಂದರೆ: ದೇವನು ಒಬ್ಬನೇ. ದೇವನು] ಒಬ್ಬನೇ ಅಲ್ಲದೆ ಇಬ್ಬರೆಂದು ಬಗುಳುವನ ಮುಖವ ನೋಡಲಾಗದು ಕಾಣೋ ಕೂಡಲಾದಿ ಚನ್ನಸಂಗಮದೇವಾ.
--------------
ಕೂಡಲಸಂಗಮೇಶ್ವರ
ನಿತ್ಯ ನಿರ್ಗುಣನು ನಿರ್ವಿಕಾರಿ ನಿರ್ವಿಕಲ್ಪ ನಿತ್ಯಾತ್ಮಕನು `ಏಕಮೇವಾ ನ ದ್ವಿತೀಯ ಪರಾಪರವೆ' ಶರಣ ಲಿಂಗವೆಂದು ತೋರಿತ್ತು ಕಾಣಾ. ಎಂದರೆ, ಆ ಅಂಗ ಲಿಂಗಕ್ಕೆ ಬ್ಥಿನ್ನವೆಲ್ಲಿಯದೋ? ಅದೆಂತೆಂದಡೆ: ಚಿನ್ನ ಬಣ್ಣದಂತೆ, ಶಿವಶಕ್ತಿಯಂತೆ, ಶುದ್ಧ ಪರಾಪರವೆ ಶರಣನು ನೋಡಾ, ಮಹಾಲಿಂಗಗುರು ಶಿವಸಿದ್ದೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಇಂತಪ್ಪ ತ್ರಿವಿಧಾಚರಣೆಯಲ್ಲಿ ಬ್ಥಿನ್ನಜ್ಞಾನಿಗಳಾಗಿ ಬ್ಥಿನ್ನ ಕ್ರಿಯಗಳಾಚರಿಸಿ, ಬ್ಥಿನ್ನಭಾವ ಮುಂದುಗೊಂಡು ವ್ರತವನಾಚರಿಸುವ ಅಜ್ಞಾನಿಗಳಾದ ಜೀವಾತ್ಮರಿಗೆ ಶಿವನು ಒಲಿ ಒಲಿ ಎಂದರೆ ಎಂತೊಲಿಯುವನಯ್ಯ ? ಮತ್ತೆಂತೆಂದೊಡೆ : ಸುಜ್ಞಾನೋದಯವಾಗಿ ಸಕಲಪ್ರಪಂಚ ನಿವೃತ್ತಿಯ ಮಾಡಿ, ಶ್ರೀಗುರುಕಾರುಣ್ಯವ ಪಡೆದು, ಲಿಂಗಾಂಗಸಮರಸವಾಗಿ ಸರ್ವಾಂಗಲಿಂಗಮಯ ತಾನೆಂದು ತಿಳಿದುನೋಡಿ, ಅಂತಪ್ಪ ಘನಮಹಾಲಿಂಗ ಇಷ್ಟಬ್ರಹ್ಮವನು ತನುವಿನಲ್ಲಿ ಸ್ವಾಯತವ ಮಾಡಿ, ಆ ತನುಪ್ರಕೃತಿಯನಳಿದು ಆ ಇಷ್ಟಲಿಂಗದ ಸತ್ಕ್ರಿಯವನಾಚರಿಸುವುದೇ ದಿನಚರಿ ವಾರ ಸೋಮವಾರವ್ರತವೆಂಬೆ. ಅಂತಪ್ಪ ಇಷ್ಟಬ್ರಹ್ಮದ ಚಿತ್ಕಲಾಸ್ವರೂಪವಾದ ನಿಷ್ಕಲಪ್ರಾಣಲಿಂಗವನು ಮನದಲ್ಲಿ ಸ್ವಾಯತವಮಾಡಿ, ಆ ಮನೋಪ್ರಕೃತಿಯನಳಿದು ಆ ನಿಷ್ಕಲ ಪ್ರಾಣಲಿಂಗದ ಸುಜ್ಞಾನಕ್ರಿಯಗಳನಾಚರಿಸುವುದೇ ದ್ವಾದಶಮಾಸದೊಳಗೆ ಶ್ರೇಷ್ಠವಾದ ಶ್ರಾವಣಮಾಸದವ್ರತವೆಂಬೆ. ಅಂತಪ್ಪ ಇಷ್ಟಬ್ರಹ್ಮಾನಂದಸ್ವರೂಪವಾದ ನಿರಂಜನಭಾವಲಿಂಗವನು - ಧನವೆಂದಡೆ ಆತ್ಮ. ಅಂತಪ್ಪ ಆತ್ಮನಲ್ಲಿ ಸ್ವಾಯತವ ಮಾಡಿ, ಆ ಆತ್ಮಪ್ರಕೃತಿಯನಳಿದು, ಆ ನಿರಂಜನ ಭಾವಲಿಂಗದ ಮಹಾಜ್ಞಾನಾಚರಣೆಯನಾಚರಿಸುವುದೇ ದ್ವಾದಶಮಾಸ, ದ್ವಾದಶ ಚತುರ್ದಶಿ, ದ್ವಾದಶ ಅಮವಾಸಿಯೊಳಗೆ ಮಾಘಮಾಸದ ಚತುರ್ದಶಿ ಶಿವರಾತ್ರಿಅಮವಾಸೆಯ ವ್ರತವೆಂಬೆ. ಇಂತೀ ತ್ರಿವಿಧಲಿಂಗ ಮೊದಲಾದ ಚಿದ್ಘನಲಿಂಗವು ತನ್ನ ಸರ್ವಾಂಗದಲ್ಲಿ ಸ್ವಾಯತವುಂಟೆಂದು ಶ್ರೀಗುರುಮುಖದಿಂ ತಿಳಿಯದೆ ಲಿಂಗವಿರಹಿತರಾಗಿ, ಬಾಹ್ಯದ ಕ್ರಿಯೆಗಳ ಪಿಡಿದು ವ್ರತವನಾಚರಿಸುವುದೆಲ್ಲ ಮಾಯಾವಿಲಾಸ ಭವದ ಬಟ್ಟೆ ಎಂದು ತಿಳಿಯದೆ ಭವಭಾರಿಗಳಾಗಿ, ಭವಕ್ಕೆ ಭಾಜನವಾಗಿ ಕೆಟ್ಟು ಮನು ಮುನಿ ದೇವ ದಾನವರು ಮಾನವರು ಮೊದಲಾದ ಸಕಲ ಲೋಕಾದಿಲೋಕಂಗಳು ತಮ್ಮ ನಿಲುವು ತಾವಾರೆಂಬುದನ್ನರಿಯದೆ ಇದಿರಿಟ್ಟು ಕೆಟ್ಟುಪೋದರು ನೋಡೆಂದ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಶರಣ ಎಂಬ ಶಬ್ದವಂ್ಕಂತಲ್ಲ. [ನೋಣಃ] ಎಂಬ ಸೂತ್ರಂದ ಶರಣನೆನಿಸಿದನು. ಶರ ಎಂದರೆ ಬಾಣ, ನ ಎಂದಡೆ ಅಂಥ ಮನ್ಮಥಬಾಣವಿಲ್ಲದವ. [ಅವ್ವನೇ ಶರಣ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಆದಿ ಅನಾದಿ ಇಲ್ಲದಂದು, ಸ್ಥಿತಿಗತಿ ಉತ್ಪನ್ನವಾಗದಂದು ಭಕ್ತಿಯನುಭಾವಿಯ ಬಸುರೊಳಗೆ ಸತ್ಯಜ್ಞಾನವೆಂಬ ಶಾಸ್ತ್ರಂಗಳು ಹುಟ್ಟಿದವು. ಆ ಶಾಸ್ತ್ರದೊಳಡಗಿದವು ವೇದಪುರಾಣಾಗಮಂಗಳು. ಆ ಆಗಮಂಗಳೊಳಡಗಿದವು ಐವತ್ತೆರಡಕ್ಷರಂಗಳು ಆ ಅಕ್ಷರಂಗಳೊಳಡಗಿದವು ಇಪ್ಪತ್ತೇಳು ನಕ್ಷತ್ರಂಗಳು. ಆ ಇಪ್ಪತ್ತೇಳು ನಕ್ಷತ್ರಂಗಳೊಳಡಗಿದವು ಈರೇಳು ಲೋಕದ ಗಳಿಗೆ ಜಾವ ದಿನ ಮಾಸ ಸಂವತ್ಸರಂಗಳು. ಇಂತಿವೆಲ್ಲವನು ಒಳಗಿಟ್ಟುಕೊಂಡಿಹಾತ `ಓಂ ನಮಃ ಶಿವಾಯ ಎಂಬಾತ ಕಾಣಿರೆ ! ಹೊರಗಿಪ್ಪಾತನು `ಓಂ ನಮಃ ಶಿವಾಯ ಎಂಬಾತ ಕಾಣಿರೆ ! ಉಳಿದಿಪ್ಪಾತನು `ಓಂ ನಮಃ ಶಿವಾಯ ಎಂಬಾತ ಕಾಣಿರೆ ! ಮತ್ತಿದ್ದ ಯೋನಿಜರೆಲ್ಲರೂ ಶಾಪಹತರಾಗಿ ಹೋದರು. ಇದು ಕಾರಣ- `ಓಂ ನಮಃ ಶಿವಾಯ ಎಂಬಾತನೆ ಲಿಂಗವು ಪಂಚಾಕ್ಷರಿಯೆ ಪರಮೇಶ್ವರನು, ಪಂಚಾಕ್ಷರಿಯೆ ಪರಮತತ್ವ, ಪಂಚಾಕ್ಷರಿಯೆ ಪರಮಯೋಗ, ಪಂಚಾಕ್ಷರಿಯೆ ಪರಂಜ್ಯೋತಿ, ಪಂಚಾಕ್ಷರಿಯೆ ಪಾಪಾಂತಕ. `ನ ಎಂಬಕ್ಷರವೆ ದೇವರ ಚರಣ, `ಮ ಎಂಬಕ್ಷರವೆ ದೇವರ ಒಡಲು, `ಶಿ ಎಂಬಕ್ಷರವೆ ದೇವರ ಹಸ್ತ, `ವಾ ಎಂಬಕ್ಷರವೆ ದೇವರ ನಾಸಿಕ, `ಯ ಎಂಬಕ್ಷರವೆ ದೇವರ ನೇತ್ರ. ಮತ್ತೆ ; `ನ ಎಂಬಕ್ಷರವೆ ದೇವರ ದಯೆ, `ಮ ಎಂಬಕ್ಷರವೆ ದೇವರ ಶಾಂತಿ, `ಶಿ ಎಂಬಕ್ಷರವೆ ದೇವರ ಕ್ರೋಧ, `ವಾ ಎಂಬಕ್ಷರವೆ ದೇವರ ದಮನ, `ಯ ಎಂಬ ಅಕ್ಷರವೆ ದೇವರ ಶಬ್ದ, ಮತ್ತೆ ; `ನ ಎಂಬಕ್ಷರವೆ ಪೃಥ್ವಿ, `ಮ ಎಂಬಕ್ಷರವೆ ಅಪ್ಪು, `ಶಿ` ಎಂಬಕ್ಷರವೆ ಅಗ್ನಿ, `ವಾ ಎಂಬಕ್ಷರವೆ ವಾಯು, `ಯ ಎಂಬಕ್ಷರವೆ ಆಕಾಶ. ಮತ್ತೆ; `ನ ಎಂಬಕ್ಷರವೆ ಬ್ರಹ್ಮ, `ಮ ಎಂಬಕ್ಷರವೆ ವಿಷ್ಣು, `ಶಿ ಎಂಬಕ್ಷರವೆ ರುದ್ರ, `ವಾ ಎಂಬಕ್ಷರವೆ ಶಕ್ತಿ, `ಯ ಎಂಬಕ್ಷರವೆ ಲಿಂಗ, ಇಂತು ಪಂಚಾಕ್ಷರದೊಳಗಳಿವಕ್ಷರ ನಾಲ್ಕು, ಉಳಿವಕ್ಷರ ಒಂದು. ಈ ಪಂಚಾಕ್ಷರವನೇಕಾಕ್ಷರವ ಮಾಡಿದ ಬಳಿಕ ದೇವನೊಬ್ಬನೆ ಎಂದರಿದು, ಬ್ರಹ್ಮ ದೈವವೆಂಬ ಬ್ರಹ್ಮೇತಿಕಾರರನೇನೆಂಬೆನಯ್ಯ ! ವಿಷ್ಣು ದೈವವೆಂಬ ವಿಚಾರಹೀನರನೇನೆಂಬೆನಯ್ಯ ! ಅಶ್ವಿನಿ ಭರಣಿ ಕೃತ್ತಿಕೆ ಮೊದಲಾದ ಇಪ್ಪತ್ತೇಳು ನಕ್ಷತ್ರಂಗಳೊಳಗೆ, ಮೂಲಾನಕ್ಷತ್ರದಲ್ಲಿ (ವಿಷ್ಣು) ಹುಟ್ಟಿದನಾಗಿ ಮೂಲನೆಂಬ ಹೆಸರಾಯಿತ್ತು. ದೇವರ ಸೇವ್ಯಕಾರ್ಯಕ್ಕೆ ಪ್ರಾಪ್ತನೆಂದು ವೇದಂಗಳು ಬಿನ್ನೈಸಲು, ಜ್ಯೋತಿಷ್ಯಜ್ಞಾನ ಶಾಸ್ತ್ರಂಗಳು ಹುಸಿಯಾದೆವೆಂದು ನಿಮ್ಮ ಹರಿಯ ಅಡವಿಯಲ್ಲಿ ಬೀಸಾಡಲು, ಅಲ್ಲಿ ಆಳುತ್ತಿದ್ದ ಮಗನ ಭೂದೇವತೆ ಸಲಹಿ, ಭೂಕಾಂತನೆಂಬ ಹೆಸರುಕೊಟ್ಟು, ಭೂಚಕ್ರಿ ತನ್ನ ಪ್ರತಿರೂಪ ತೋಳಲ್ಲಿ ಸೂಡಿಸಿ ಶಿವಧರ್ಮಾಗಮ ಪೂಜೆ ಭಕ್ತಿಯಲ್ಲಿ ಯುಕ್ತನ ಮಾಡಿದ ಬಳಿಕ, ಮತ್ತೆ ನಮ್ಮ ದೇವರ ಶ್ರೀಚರಣದಲ್ಲಿರ್ದು ಒಳಗೆ ತೋರಲು ದೇವರು ಪುರಾಣಂಗ? ಕರೆದು ವಿಷ್ಣುವಿನ ಪಾಪಕ್ಷಯವ ನೋಡಿ ಎಂದರೆ ಆ ಪುರಾಣಂಗಳಿಂತೆಂದವು; ``ಪಾಪಂತು ಮೂಲನಕ್ಷತ್ರಂ ಜನನೀವರಣಂ ಪುನಃ ಪಾಪಂ ತು ಪರ್ವತಸ್ಥೂಲಂ ಶಿವೇ ವೈರಮತಃ ಪರಂ ಶಿವದಾಸೋಹಭಾವೇನ ಪಾಪಕ್ಷಯಮವಾಪ್ನುಯಾತ್ ಎಂದು ಪುರಾಣಂಗಳು ಹೇಳಲಾಗಿ; ವಿಷ್ಣು ಕೇಳಿ, ಪುರಾಣದ ಕೈಯಲು ದೀಕ್ಷಿತನಾಗೆ, ಪುರಾಣ ಪುರುಷೋತ್ತಮನೆಂಬ ಹೆಸರು ಬಳಿಕಾಯಿತ್ತು. ಮತ್ತೆ ನಮ್ಮ ದೇವರ ಪಾದರಕ್ಷೆಯ ತಲೆಯಲ್ಲಿ ಹೊತ್ತುಕೊಂಡು ಭೂತಂಗಳಿಗಂಜಿ ಶಂಖಮಂ ಪಿಡಿದುಕೊಂಡು, ದುರಿತಂಗಳಿಗಂಜಿ ನಾಮವನಿಟ್ಟು, ಪ್ರಳಯಂಗಳಿಗಂಜಿ ವೇಷವ ತೊಟ್ಟು. ರಾಕ್ಷಸರಿಗಂಜಿ ಚಕ್ರಮಂ ಪಿಡಿದು, ಶಿವನ ದಾಸೋಹದ ದಾಸಿಯೆಂದು ಕಸಕಿಲಂ ಪಿಡಿದು ಬಯಲನುಡುಗಿ, ಹೊತ್ತ ನೀರಲ್ಲಿ ಪುತ್ಥಳಿಯ ¸õ್ಞಖ್ಯಮಂ ಮಾಡಿ ಇಪ್ಪತ್ತೇಳು ಲಕ್ಷವರುಷ ಶಿವನ ಸೇವೆಯಂ ಮಾಡಿ ಮತ್ತೆ ಗರುಡವಾಹನ ಸತಿಲಕ್ಷ್ಮಿ ವಾರ್ಧಿಜಯಮಂ ಪಡೆದು ದೇವರ ಎಡದ ಗದ್ದುಗೆಯನೋಲೈಸಿಪ್ಪವನ ದೇವರೆಂದರೆ ನೀವೆಂದಂತೆ ಎಂಬರೆ ? ಕೇಳಿರಣ್ಣಾ ! ವಚನಶುದ್ಧ ಭಾವದಲ್ಲಿ ಭಕ್ತಿಯುಳ್ಳವರು ನೀವು ಹೊತ್ತಿದ್ದ ವೇಷದಲ್ಲಿ ತಿಳಿದು ನೋಡಿ. ತಂದೆತಾಯಿ ಇಂದ್ರಿಯದಲ್ಲಿ ಬಂದವರು ದೇವರೆ ? ಸಂದೇಹ ಭ್ರಮೆಯೊಳಗೆ ಸಿಕ್ಕಿದವರು ದೇವರೆ ? ಶುಕ್ಲ ಶೋಣಿತದೊಳಗೆ ಬೆಳೆದವರು ದೇವರೆ ? ಆ ತಂದೆ ತಾಯ ಹುಟ್ಟಿಸಿದರಾರೆಂದು ಕೇಳಿರೆ; ಹಿಂದೆ ಸಂದ ಯುಗಂಗಳು ಶತಕೋಟಿ ಸಂಖ್ಯೆಯ ಮೇಲೆ ಏಳುನೂರೆಪ್ಪತ್ತುಸಾವಿರ ಯುಗಂಗಳು, ಇದಕ್ಕೆ ನವಕೋಟಿ ನಾರಾಯಣರಳಿದರು, ಶತಕೋಟಿ ಸಂಖ್ಯೆ ಬ್ರಹ್ಮರಳಿದರು ಉಳಿದವರ ಪ್ರಳಯವ ಹೊಗಳಲಿನ್ನಾರ ವಶ ? ಇಂತಿವೆಲ್ಲವನು ಬಿಟ್ಟು ಉಳಿದಿಪ್ಪಾತನೊಬ್ಬನೆ, ಆತಂಗೆ ನಮೋ ಎಂಬೆ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಹತ್ತಕ್ಕೆ ನೀಡಿ ಹನ್ನೊಂದಕ್ಕೆ ನೀಡದಾತ ಭಕ್ತನೇ? ಅಲ್ಲಲ್ಲ. ಭಿಕ್ಷವ ಕೊಡುವಲ್ಲಿ ಮುಖವ ನೋಡಿ ಕೊಡುವಾತ ಭಕ್ತನೇ? ಅಲ್ಲಲ್ಲ. ಗಣಾರಾಧನೆಯ ಮಾಡಿದಲ್ಲಿ ಒಳಗೊಂದು ಹೊರಗೊಂದು ನೀಡುವಾತ ಭಕ್ತನೇ? ಅಲ್ಲಲ್ಲ. ಅದೇನು ಕಾರಣವೆಂದರೆ ಇವರು ತಾಮಸಭಕ್ತರು. ಇಂತಪ್ಪ ತಾಮಸಭಕ್ತರಿಗೆ ಶಿವನು ಒಲಿ ಒಲಿ ಎಂದರೆ ಎಂತೊಲಿಯುವನಯ್ಯ. ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಇಷ್ಟಲಿಂಗದ ಮುಖವಾವುದು? ಪ್ರಾಣಲಿಂಗದ ಮುಖವಾವುದು? ಭಾವಲಿಂಗದ ಮುಖವಾವುದು ಎಂದರೆ ಹೇಳಿಹೆ ಕೇಳಿರಣ್ಣ: ಇಷ್ಟಲಿಂಗದ ಮುಖವೈದು: ಪ್ರಾಣ ವಾಯುಗಳ ಮುಖವನೆಯ್ದಿ ಪ್ರಾಣಲಿಂಗವೆನಿಸಿಕೊಂಡಿತ್ತು. ಭಾವವನೆಯ್ದಿ ಭಾವಲಿಂಗವೆನಿಸಿಕೊಂಡಿತ್ತು. ಒಂದೇ ಲಿಂಗ ತನುತ್ರಯಂಗಳಲ್ಲಿ ಇಷ್ಟ ಪ್ರಾಣ ಭಾವ ರೂಪಕವಾಗಿಪ್ಪುದು. ಜೀವತ್ರಯಂಗಳಲ್ಲಿ ಮಂತ್ರ ಜ್ಞಾನ ಧ್ಯಾನ ರೂಪಕವಾಗಿಪ್ಪುದು. ಅವಸ್ಥಾನತ್ರಯಂಗಳಲ್ಲಿ ಸತ್ಕಿ ್ರಯಾಚರಣೆ ತದ್ವಾಸನೆ ತಲ್ಲೀಯ್ಯವಾಗಿಪ್ಪುದು. ಮಲತ್ರಯಂಗಳಲ್ಲಿ ಸ್ವಯ ಚರ ಪರ ರೂಪಕವಾಗಿಪ್ಪುದು. ಈಷಣತ್ರಯಂಗಳಲ್ಲಿ ಲಿಂಗ ಪ್ರೇಮರತಿಗೆ ಸಕಲಸಾಧನಂಗಳಾಗಿ ಮಾಯಾಭ್ರಾಂತಿಯನು ನಿಭ್ರಾಂತಿಯೆನಿಸಿ ಶುದ್ಧ ಪ್ರಭಾ ಪರಿಪೂರ್ಣ ಲಿಂಗ ತಾನೆ ಪ್ರಸನ್ನ ಪ್ರಸಾದ ರೂಪಕನಾಗಿರುತಿರ್ದೆನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಆದಿ ಅಕಾರ ಪ್ರಣವಕ್ಕೆ ಆದಿ ನಾದಪ್ರಣವವೇ ಆಧಾರ. ಆದಿ ಉಕಾರಪ್ರಣವಕ್ಕೆ ಆದಿ ಬಿಂದುಪ್ರಣವವೇ ಆಧಾರ. ಆದಿ ಮಕಾರಪ್ರಣವಕ್ಕೆ ಆದಿ ಕಲಾಪ್ರಣವವೇ ಆಧಾರ. ಆ ಆದಿ ನಾದಬಿಂದುಕಲಾಪ್ರಣವಣಕ್ಕೆ ಆ ಆದಿ ಪ್ರಕೃತಿಪ್ರಣವವೇ ಆಧಾರ. ಆ ಆದಿ ಪ್ರಕೃತಿಪ್ರಣವಕ್ಕೆ ಆ ಆದಿ ಪ್ರಾಣಮಾತ್ರೆಯ ಪ್ರಣವವೇ ಆಧಾರ. ಆ ಆದಿ ಪ್ರಾಣಮಾತ್ರೆಯ ಪ್ರಣವಕ್ಕೆ ಆ ಅಖಂಡಜ್ಯೋತಿರ್ಮಯಲಿಂಗವೇ ಆಧಾರ. ಆದಿ ಅ ಎಂದರೆ ಆದಿ ಅನಾಹತಪ್ರಣವ, ಆದಿ ಉ ಎಂದರೆ ಆದಿ ನಾದ ಪ್ರಣವವಳಿಯಿತ್ತು. ಆದಿ ಮ ಎಂಬ ಪ್ರಣವದಲ್ಲಿ ಆದಿ ಬಿಂದುಪ್ರಣವ ಬಂದು ಕೂಡಲು ಅಖಂಡ ಜ್ಯೋತಿರ್ಮಯವಾಗಿಹ ಗೋಳಕಾಕಾರಪ್ರಣವವಾಯಿತ್ತು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಆಚಾರದರಿವು ಆಗಮವ ಕೂಡಿಕೊಂಡಿಹುದು. ವಿಚಾರದರಿವು ಶಾಸ್ತ್ರವ ಕೂಡಿಕೊಂಡಿಹುದು. ಲಿಂಗಾಚಾರದರಿವು ಅಂಗಭೋಗವ ಕೂಡಿಕೊಂಡಿಹುದು. ಆದಿ ವಿಚಾರದರಿವು ಜ್ಞಾನವ ಕೂಡಿಕೊಂಡಿಹುದು. ಈ ಚತುರ್ವಿಧದೊಳಗೆ ಆವಂಗವೂ ಅಲ್ಲ. ಎಮ್ಮ ಶರಣರ ಪರಿ ಬೇರೆ. ಅದೆಂತೆಂದರೆ; ಗುರು ಕರದಲ್ಲಿ ಹುಟ್ಟಿದರು, ಲಿಂಗದಲ್ಲಿ ಬೆಳೆದರು. ಜಂಗಮದ ಸಂಗವ ಮಾಡಿದರು, ಪ್ರಸಾದದಲ್ಲಿ ಅಡಗಿದರು. ಇದೀಗ ನಮ್ಮ ಶರಣರ ನಡೆನುಡಿ ಅರಿವು ಆಚಾರ ಲಿಂಗೈಕ್ಯ. ಈ ಚತುರ್ವಿಧವು ಹೊರತಾಗಿ, ಅವರೊಬ್ಬರು ಸಾಧಿಸಿ ಎಂದರೆ, ಸಾಧಕರಿಗೆ ಸಾಧ್ಯವಲ್ಲ, ಭೇದಕರಿಗೆ ಭೇದ್ಯವಲ್ಲ. ಅರಿವಿಂಗೆ ಅಪ್ರಮಾಣು, ವಾಙ್ಮನಕ್ಕಗೋಚರ. ಆಗಮ ಶಾಸ್ತ್ರಂಗಳು ಅರಸಿ ಕಾಣವು. ಇದು ಕಾರಣವಾಗಿ, ಎಮ್ಮ ಶರಣರು ಗುರು, ಲಿಂಗ, ಜಂಗಮ, ಪ್ರಸಾದ ಈ ಚತುರ್ವಿಧವಿಡಿದು ಅಚಲಪದವನೆಯ್ದಿದರು. ಇದಕ್ಕೆ ನೀವೆ ಸಾಕ್ಷಿ, ಬಸವಪ್ರಿಯ ಕೂಡಲಚೆನ್ನಬಸವಣ್ಣ.
--------------
ಹಡಪದ ಅಪ್ಪಣ್ಣ
ಇನ್ನು ಆ ಆದಿ ಮಕಾರಪ್ರಣವ, ಆದಿ ಅಕಾರಪ್ರಣವ, ಆದಿ ಉಕಾರಪ್ರಣವ-ಈ ಮೂರೂ ಪ್ರಣವಂಗಳು ಬೀಜಸಂಯುಕ್ತವಾಗಿ ಅಖಂಡ ಮಹದೋಂಕಾರವಾಯಿತ್ತು. ಅದೆಂತೆಂದಡೆ : ಆ ಆದಿ ಮಕಾರಪ್ರಣವ, ಆದಿ ಅಕಾರಪ್ರಣವ, ಆದಿ ಉಕಾರಪ್ರಣವ-ಈ ಮೂರೂ ಪ್ರಣವಂಗಳು ಬೀಜಾಕ್ಷರ. ಆದಿ ಮಕಾರವೇ ಆದಿ ಕಲಾಪ್ರಣವ, ಆದಿ ಅಕಾರವೆ ಆದಿ ನಾದಪ್ರಣವ. ಆದಿ ಉಕಾರವೆ ಆದಿ ಬಿಂದುಪ್ರಣವ. ಆದಿ ಮಕಾರಪ್ರಣವವೇ ಸರ್ವಾತ್ಮನು. ಆದಿ ಅಕಾರಪ್ರಣವವೇ ಪರಮಾತ್ಮನು. ಆದಿ ಉಕಾರಪ್ರಣವವೇ ಶಿವಾತ್ಮನು. ಇದಕ್ಕೆ ಮಹಾದೇವ ಉವಾಚ: ``ಅಕಾರಂ ಪರಮಾತ್ಮಾ ಚ ಉಕಾರಃ ಶಿವಾತ್ಮಾ ಭವೇತ್ | ಮಕಾರಂ ಸರ್ವಾತ್ಮಾ ಚ ಇತಿ ಭೇದಂ ವರಾನನೇ ||'' ಇಂತೆಂದುದಾಗಿ, ಆದಿ ಮಕಾರಕ್ಕೆ ಆದಿ ಕಲಾಪ್ರಣವವೆ ಆಧಾರ. ಆದಿ ಅಕಾರಕ್ಕೆ ಆದಿ ನಾದಪ್ರಣವವೆ ಆಧಾರ. ಆದಿ ಉಕಾರಕ್ಕೆ ಆದಿ ಬಿಂದುಪ್ರಣವವೆ ಆಧಾರ. ಆದಿ ಪ್ರಾಣಮಾತ್ರೆಯಪ್ರಣವಕ್ಕೆ ಅಖಂಡ ಜ್ಯೋತಿರ್ಮಯಲಿಂಗವೆ ಆಧಾರ. ಆದಿ ಮ ಎಂದರೆ ಆದಿ ಕಲಾಪ್ರಣವ. ಆದಿ ಅ ಎಂದರೆ ಆದಿ ನಾದಪ್ರಣವ. ಆದಿ ಉ ಎಂಬ ಆದಿ ಬಿಂದುಪ್ರಣವದಲ್ಲಿ ಬಿಂದು ಸಂಯುಕ್ತವಾಗಿ, ಆದಿ `ಮ' ಎಂಬ ಆದಿ ಮ ನ ಸ ರ ಪ್ರಣವದಲ್ಲಿ ಬಂದು ಕೂಡಲು ಮಹದೋಂಕಾರವಾಯಿತ್ತು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಸದ್ಯೋಜಾತ ವಾಮದೇವ ಅಘೋರ ತತ್ಪುರುಷ ಈಶಾನ್ಯವೆಂಬ ಪರಶಿವನ ಪಂಚಮುಖವೆ ಪಂಚಕಳಸವೆಂದಿಕ್ಕಿ, ಹಸೆ-ಹಂದರದ ನಡುವೆ, ಶಿವಗಣಂಗಳ ಮಧ್ಯದಲ್ಲಿ ದೀಕ್ಷವನಿತ್ತು, ದೀಕ್ಷವೆಂಬೆರಡಕ್ಷರದ ವರ್ಮವನರುಹಿದ. ದೀಕಾರವೆ ಲಿಂಗಸಂಬಂಧವೆಂದು, ಕ್ಷಕಾರವೆ ಮಲತ್ರಯಂಗಳ ಕಳೆವುದೆಂದು ಅರುಹಿದ. ಸಾಕ್ಷಿ :``ದೀಯತೇ ಲಿಂಗಸಂಬಂಧಃ ಕ್ಷೀಯತೇ ಚ ಮಲತ್ರಯಂ | ದೀಯತೇ ಕ್ಷೀಯತೇ ಚೈವ ಶಿವದೀಕ್ಷಾಭಿಧೀಯತೇ ||'' ಎಂದುದಾಗಿ, ದೀಕ್ಷದ ವರ್ಮವನರುಹಿ, ಅರುಹೆಂಬ ಸೂತ್ರವ ಹಿಡಿಸಿ, ಮರವೆಂಬ ಮಾಯವ ಕಳೆದು, ಹಸ್ತಮಸ್ತಕ ಸಂಯೋಗ ಮಾಡಿ, ನೆತ್ತಿಯೊಳಿಹ ಪರಬ್ರಹ್ಮವಸ್ತುವ ಇಂತೆನ್ನ ಕರ ಉರ ಶಿರ ಮನ ಜ್ಞಾನದೊಳು ನೆಲೆಗೊಳಿಸಿ, ಪ್ರಣವಮಂತ್ರವ ಕರ್ಣದಲ್ಲಿ ಹೇಳಿ, ಮಾಂಸಪಿಂಡವ ಕಳೆದು ಮಂತ್ರಪಿಂಡವ ಮಾಡಿದ ಗುರು ಪರಮಾತ್ಮನಲ್ಲದೆ ನರನೆನಬಹುದೇ ? ಎನಲಾಗದು. ಎಂದರೆ ಕುಂಭೀ ನಾಯಕ ನರಕದಲ್ಲಿಕ್ಕುವ ನಮ್ಮ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಸ್ಥಲವಿಟ್ಟು ನಡೆಯಬೇಕೆಂಬರು, ಸ್ಥಲವಿಟ್ಟು ನುಡಿಯಬೇಕೆಂಬರು. ಸ್ಥಲದ ನೆಲೆಯನಾರೂ ಅರಿಯರು. ಕಾಯಸ್ಥಲ, ಕರಸ್ಥಲ, ಭಾವಸ್ಥಲವನರಿದು, ಆ ಕಾಯಸ್ಥಲ ಕರಸ್ಥಲ ಭಾವಸ್ಥಲದಲ್ಲಿ ಕೂಡಿ ನಿಲಿಸುವದೆ ಸ್ಥಲ. ಇದನರಿಯದೆ, ಹಿಂದಕ್ಕೆ ನುಡಿದವರ ಮಾತು ಕಲಿತುಕೊಂಡು, ಈಗ ನುಡಿವವರ ಮಾತ ಮೆಚ್ಚುವರೆ ನಮ್ಮ ಶರಣರು ? ಅದಂತಿರಲಿ. ಇನ್ನು ನೇಮವಾವುದು ಎಂದರೆ, ಗುರುಲಿಂಗಜಂಗಮದ ಪಾದೋದಕ ಪ್ರಸಾದವನರಿದು, ಅಂಗೀಕರಿಸಿ, ತನ್ನ ತನುವನೆ ಪ್ರಸಾದವ ಮಾಡುವದೀಗ ನೆಲೆ. ಈ ಸ್ಥಲದ ನೆಲೆಯ ಬಲ್ಲವರಿಗೆ ನಮೋ ನಮೋ ಎಂಬೆ. ಇದನರಿಯದೆ ಬರಿಯ ನುಡಿಯ ನುಡಿವವರ ಕಂಡರೆ ಛೀ ಎಂಬೆನು, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಈರೇಳು ಭವನ ಹದಿನಾಲ್ಕು ಲೋಕಕ್ಕೆ ಶ್ರೀ ಮಹಾ ಸಾಂಬಶಿವನೇ ಘನವೆಂದು ನಾಲ್ಕು ವೇದಗಳು ಸಾರುತಿರ್ದವು. ಅಂತಪ್ಪ ಸಾಂಬಶಿವನು ತನ್ನ ಭಕ್ತನ ಏನೆನುತಿರ್ದನಯ್ಯಾ ? 'ಭಕ್ತಂ ಮಹೇಶಗಿನ್ನಧಿಕ', 'ನನಗಿಂತಾ ನನ್ನ ಭಕ್ತನೇ ದೊಡ್ಡವನೆ'ಂದು ಸಾಂಬಶಿವನು ಹೇಳುತ್ತಿಹನು. 'ಭಕ್ತಂ ಮಹೇಶಗಿನ್ನಧಿಕ'ವೆಂಬ ನಾಮಾಂಕಿತ ಎಂತಪ್ಪ ಭಕ್ತಂಗೆ ಸಲುವದೆಂದರೆ : ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ ಇಂತೀ ಆರು ಗುಣಂಗಳಳಿದು, ಅಷ್ಟಮದಂಗಳ ತುಳಿದು, ತ್ರಿವಿಧ ಪದಾರ್ಥವನ್ನು ತ್ರೈಮೂರ್ತಿಗಳಿಗೆ ಕೊಟ್ಟು, ಇಷ್ಟಲಿಂಗನಿಷಾ*ಪರರಾಗಿ, ಜಂಗಮವೇ ಮತ್ಪ್ರಾಣವೆಂದು ನಂಬಿ, ಪೂಜಿಸುವ ಸದ್ಭಕ್ತಂಗೆ 'ಭಕ್ತಂ ಮಹೇಶಗಿನ್ನಧಿಕ'ವೆಂಬ ನಾಮಾಂಕಿತ ಸಲುವದು. ಬರಿದೆ ಡಂಬಾಚಾರಕ್ಕೆ ಪ್ರಾತಃಕಾಲಕ್ಕೆ ಎದ್ದು, ಮೇಕೆ ಹೋತಿನ ಬಂಧುಗಳಾಗಿ ಆಡಿನ ಬೀಗಪ್ಪಗಳಾಗಿ ಪತ್ರೆಗಿಡಕೆ ಹಿಡಿಯ ತೊಪ್ಪಲನ ತೆರಕೊಂಡು ಬಂದು ಲಿಂಗದ ಮಸ್ತಕದ ಮೇಲೆ ಇಟ್ಟು, ಮಧ್ಯಾಹ್ನ ಕಾಲದಲ್ಲಿ ಒಂದು ಶಿವಜಂಗಮಮೂರ್ತಿ ಹಸಿದು ಬಂದು 'ಭಿಕ್ಷಾಂದೇಹಿ' ಎಂದರೆ 'ಅಯ್ಯ ಕೈಯಿ ಅನುವು ಆಗಿಯಿಲ್ಲ', 'ಮನೆಯಲ್ಲಿ ಹಿರಿಯರು ಇಲ್ಲ', 'ಮುಂದಲಮನೆಗೆ ದಯಮಾಡಿರಿ' ಎಂಬ ಹಂದಿಮುಂಡೇಮಕ್ಕಳಿಗೆ 'ಭಕ್ತಂ ಮಹೇಶನಿಂದಧಿಕ'ವೆಂಬ ನಾಮಾಂಕಿತ ಸಲ್ಲದೆಂದಾತನಾರು ? ನಮ್ಮ ಕೂಡಲಾದಿ ಚನ್ನಸಂಗಮದೇವ.
--------------
ಕೂಡಲಸಂಗಮೇಶ್ವರ
ಇನ್ನಷ್ಟು ... -->