ಅಥವಾ

ಒಟ್ಟು 49 ಕಡೆಗಳಲ್ಲಿ , 5 ವಚನಕಾರರು , 13 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾಚಾತೀತಂ ಮನೋತೀತಂ ಭಾವಾತೀತಂ ಜ್ಞಾನಾತೀತಂ ನಿರಂಜನಂ ಅಣೋರಣೀಯಾನ್ ಮಹತೋಮಹೀಯಾನ್ ಎಂದೆನಿಸುವ ಅತಿಶಯಬ್ರಹ್ಮವು, ದಿವ್ಯ ಜ್ಞಾನವೆಂಬ ಭಕ್ತಿಮಂದಿರಕ್ಕೆ ಕರ್ತೃವಾದ ಈಶ್ವರ_ಗುಹೇಶ್ವರ.
--------------
ಅಲ್ಲಮಪ್ರಭುದೇವರು
ವಟಬೀಜವು ವಟವೃಕ್ಷಕೋಟಿಯನೊಳಕೊಂಡಿಪ್ಪಂತೆ, ಸಟೆಯಿಂದಲಾದಜಾಂಡಕೋಟಿಯನೊಳಕೊಂಡಿಹ ಲಿಂಗವೆ, `ಅಯಂ ಮೇ ಹಸ್ತೋ ಭಗವಾನ್' ಎಂದೆನಿಸುವ ಲಿಂಗವೆ, `ಚಕಿತಮಬ್ಥಿದತ್ತೇ ಶ್ರುತಿರಪಿ' ಎಂದೆನಿಸುವ ಲಿಂಗವೆ, ಎನ್ನ ಕರಸ್ಥಕ್ಕೆ ಬಂದು ಸೂಕ್ಷ್ಮವಾದೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ಕಂಡೆನೆನ್ನ ಕರದೊಳು ಕರುಣವರಮೂರ್ತಿಲಿಂಗವ. ಕಂಡೆನೆನ್ನ ಕರದೊಳು ಆತ್ಮಲಿಂಗವ. ಕಂಡೆನೆನ್ನ ಕರದೊಳು ಚಿನ್ಮಯ ಚಿದ್ರೂಪ ಚಿತ್ಪ್ರಕಾಶಲಿಂಗವ. ಕಂಡೆನೆನ್ನ ಕರದೊಳು ಮನಾತೀತಮಗೋಚರ ಲಿಂಗವ. ಕಂಡೆನೆನ್ನ ಕರದೊಳು ನಿರ್ನಾಮ ನಿರ್ಗುಣ ನಿರಂಜನ ನಿರವಯಲಿಂಗವ. ಕಂಡೆನೆನ್ನ ಕರದೊಳು ಮಹಾಲಿಂಗವ. ಸಾಕ್ಷಿ : ``ಮಹಾಲಿಂಗಮಿದಂ ದೇವಿ ಮನೋತೀತಮಗೋಚರಂ | ನಿರ್ನಾಮ ನಿರ್ಗುಣಂ ನಿತ್ಯಂ ನಿರಂಜನ ನಿರಾಮಯಂ ||'' ಎಂದೆನಿಸುವ ಲಿಂಗವ ಕಂಡೆನಲ್ಲ ಎನ್ನ ಕರದೊಳು ! ಆ ಲಿಂಗವೆನ್ನ ಕರಸ್ಥಲಕ್ಕೆ ಇಷ್ಟಲಿಂಗವಾಗಿ, ಮನಸ್ಥಲಕ್ಕೆ ಪ್ರಾಣಲಿಂಗವಾಗಿ, ಭಾವಸ್ಥಲಕ್ಕೆ ಭಾವಲಿಂಗವಾಗಿ ; ಇಷ್ಟಲಿಂಗ ಪ್ರಾಣಲಿಂಗ ಭಾವಲಿಂಗವೆಂಬ ಮೂರುಲಿಂಗವೆ ಆರುಲಿಂಗವಾಗಿ, ಆರುಲಿಂಗವೆ ಮೂವತ್ತಾರು ಲಿಂಗವಾಗಿ , ಮೂವತ್ತಾರು ಲಿಂಗವೆ ಇನ್ನೂರ ಹದಿನಾರು ಲಿಂಗವಾಗಿ, ಸರ್ವಾಂಗವೆಲ್ಲ ಲಿಂಗಮಯವಾಗಿ, ಸರ್ವತೋಮುಖದ ಲಿಂಗವೆ ಗೂಡಾಗಿಪ್ಪ ಶರಣ ಬಸವಣ್ಣ ಚೆನ್ನಬಸವಣ್ಣ ಪ್ರಭುರಾಯ ಮುಖ್ಯವಾದ ಅಸಂಖ್ಯಾತ ಮಹಾಗಣಂಗಳ ಲೆಂಕರ ಲೆಂಕನೆಂದೆನಿಸಯ್ಯಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
`ಏಕೋ ದೇವೋ ನ ದ್ವಿತೀಯಃ' ಎಂದೆನಿಸುವ ಶಿವನೊಬ್ಬನೆ, ಜಗಕ್ಕೆ ಗುರುವೆಂಬುದನರಿಯದೆ, ವಿಶ್ವಕರ್ಮ ಜಗದ ಗುರುವೆಂದು ನುಡಿವ ದುರಾಚಾರಿಯ ಮುಖವ ನೋಡಲಾಗದು. ಪ್ರಥಮದಲ್ಲಿ ಹುಟ್ಟಿದಾಗ ವಿಶ್ವಕರ್ಮಂಗೆ ತಾಯಿತಂದೆಗಳಾರು ? ಅವನು ಹುಟ್ಟಿದಾಗ ಹೊಕ್ಕಳನಾಳವ ಕೊಯ್ವ ಕತ್ತಿಯ ಮಾಡಿದರಾರು ? ಅವಂಗೆ ತೊಟ್ಟಿಲವ ಕಟ್ಟಿದರಾರು ? ಅವಂಗೆ ಹಾಲು ಬೆಣ್ಣೆ ಬಿಸಿನೀರು ಇಡುವುದಕೆ ಮಡಕೆಯ ಮಾಡಿದರಾರು ? ಅವಂಗೆ ವಿದ್ಯಾಬುದ್ಧಿಯ ಕಲಿಸಿದರಾರು ? ಅವಂಗೆ ಅರುಹು ಮರಹು ಹುಟ್ಟಿಸಿದರಾರು ? ಅವಂಗೆ ಇಕ್ಕುಳ, ಅಡಿಗಲ್ಲು, ಚಿಮ್ಮಟಿಗೆ, ಮೊದಲಾದ ಸಂಪಾದನೆಗಳ ಕೊಟ್ಟವರಾರು ? ಇನಿತನು ವಿಚಾರಿಸದೆ ತಾನು ವೆಗ್ಗಳವೆಂದು ಗಳಹುವನ ದುರಾಚಾರಿಯೆಂದು ಭಾವಿಸುವುದು. ಸರ್ವಜಗದ ಜೀವದ ಪ್ರವರ್ತನೆಯ ಚಾರಿತ್ರಂಗಳ ನೆನಹು ಮಾತ್ರದಿಂದ ಶಿವನು ಒಂದೇ ವೇಳೆಯಲ್ಲಿ ನಿರ್ಮಿಸಿದನು. ಅದೆಂತೆಂದಡೆ; ಅರಣ್ಯಗಿರಿಯ ಕನ್ನಡಿಯೊಳು ನೋಡಿದಂತೆ, ಗಿಡವೃಕ್ಷಂಗಳು ಎಳೆಯದು ಹಳೆಯದು ಒಂದೆ ವೇಳೆ ಕಾಣಿಸಿದಂತೆ, ಒಂದೆ ವೇಳೆಯಲಿ ಬೀಜವೃಕ್ಷನ್ಯಾಯದಲ್ಲಿ, ದಿವಾರಾತ್ರಿನ್ಯಾಯದಲ್ಲಿ ಹಿಂಚು ಮುಂಚು ಕಾಣಲೀಯದೆ, ಸರ್ವಜೀವವ ಹುಟ್ಟಿಸಿ, ರಕ್ಷಿಸಿ, ಸಂಹರಿಸಿ, ಲೀಲಾವಿನೋದದಿಂದಿಪ್ಪ ಶಿವನೊಬ್ಬನೆ ಸಕಲ ಜಗಕ್ಕೆ ಗುರುಸ್ವಾಮಿ. ``ಮನ್ನಾಥಸ್ತ್ರಿಜಗನ್ನಾಥೋ ಮದ್ಗುರುಸ್ತ್ರಿಜಗದ್ಗುರುಃ ಸರ್ವಮಮಾತ್ಮಾ ಭೂತಾತ್ಮಾ ತಸ್ಮೈ ಶ್ರೀಗುರವೇ ನಮಃ ಎಂದುದಾಗಿ ಅರಿತರಿತು ಅನಾಚಾರವ ಗಳಹಿ, ಗುರುಲಿಂಗಜಂಗಮವೆ ಘನವೆಂದು ಅರಿಯದ ಶಿವಭಕ್ತಿಶೂನ್ಯ ಪಾತಕನ ಹಿರಿಯನೆಂದು ಸಂಭಾಷಣೆಯ ಮಾಡಿ ಅವನ ಚಾಂಡಾಲ ಬೋಧೆಯ ಕೇಳ್ವ ಪಂಚಮಹಾಪಾತಕನ ರೌರವನರಕದಲ್ಲಿ ಹಾಕಿ ಮೆಟ್ಟಿಸುತಿಪ್ಪ, ಕೂಡಲಚೆನ್ನಸಂಗಮದೇವ.
--------------
ಚನ್ನಬಸವಣ್ಣ
ವಟಬೀಜ ವಟವೃಕ್ಷಕೋಟಿಯ ನುಂಗಿಪ್ಪಂತೆ ಸಟೆಯಿಂದಾದ ಅಜಾಂಡ ಬ್ರಹ್ಮಾಂಡ ಕೋಟಿಗಳ ನುಂಗಿಪ್ಪ ಲಿಂಗವೇ, ದಿಟಪುಟವಾಗಿ ಕಣ್ಣುಮನಕರಸ್ಥಲಕ್ಕೆ ಪ್ರಕಾಶವಾದೆ. ಮಝಭಾಪು ಮಝಭಾಪು ಲಿಂಗವೇ `ನ ಚ ರೇಣುರ್ನಚಾಕ್ಷುಷಂ ಎಂದೆನಿಸುವ ಲಿಂಗವೇ, ನಿಮ್ಮ ಮುಟ್ಟಿ ಉತ್ಪತ್ತಿಸ್ಥಿತಿಲಯಕ್ಕೆ ಹೊರಗಾದೆನಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ಆದಿಯಾಧಾರವಿಲ್ಲದಂದಿನ ಪ್ರಸಾದ; ಅಗಮ್ಯ ಅಗೋಚರ ಅಪ್ರಮಾಣವೆಂದೆನಿಸುವ ಪ್ರಸಾದ; `ಅಣೋರಣೀಯಾನ್ ಮಹತೋ ಮಹೀಯಾನ್' ಎಂದೆನಿಸುವ ಪ್ರಸಾದ; `ನಿಜತ್ವ ಪ್ರಾಣನಿರ್ಮಲಂ' ಎಂದೆನಿಸುವ ಪ್ರಸಾದ; `ಶಿವೈಕ್ಯಂ ಸುಖಸಂಬಂಧಂ' ಎಂದೆನಿಸುವ ಪ್ರಸಾದ; `ಪರಮಾತ್ಮೇತ್ಯಯಂ ರುದ್ರಃ' ಎಂದೆನಿಸುವ ಪ್ರಸಾದ; `ಅಕ್ಷರಾತ್ಮಾ ಶಿವಂ ಸೂತ್ರಂ' ಎಂದೆನಿಸುವ ಪ್ರಸಾದ; ಇನಿತಪ್ಪ ಪರಮಸುಖದ ಪರಮಪ್ರಸಾದವು ಒಂದಾಗಿ, ನಿತ್ಯಮುತ್ತೈದೆಯ ಭಾವದಲ್ಲಿ ಶುದ್ಧವಾಯಿತ್ತಯ್ಯಾ, ಕಪಿಲಸಿದ್ಧಮಲ್ಲಿನಾಥಯ್ಯಾ.
--------------
ಸಿದ್ಧರಾಮೇಶ್ವರ
ಭಕ್ತಿಭಾಂಡದ ಶಿವಭಕ್ತರ ನಿಷೇಧವ ಮಾಡುವ ಕರ್ಮಭಾಂಡದ ದ್ವಿಜರು ನೀವು ಕೇಳಿಭೋ : `ಸತ್ಯಂ ಭೋ ಬ್ರೂತ ಪಂಚಪ್ರಾಣ ಇಂದ್ರಿಯನಿಗ್ರಹಮೆಂದೋದಿ ಗುದ್ದಿ ಗುದ್ದಿ ಹೋತನ ತಿಂಬುದಾವಾಚಾರವೊ ? `ಪಿತಾಮಹಶ್ಚ ವೈಶ್ಯಸ್ತು ಕ್ಷತ್ರಿಯೋ ಪರಯೋ ಹರಿಃ ಬ್ರಾಹ್ಮಣೋ ಭಗವಾನ್ ರುದ್ರಃ ಸರ್ವೇಷ್ವ್ಯುತ್ತಮೋತ್ತಮಃ ಎಂಬ ಶ್ರುತಿಯ ನೋಡಿ, ತಮ್ಮ ಕುಲದೈವವಹ ಬ್ರಾಹ್ಮಣನಹ ರುದ್ರನ ನಿಂದಿಸಿ, ತಮಗಿಂದ ಕೀಳುಜಾತಿಯಹ ಕ್ಷತ್ರಿಯ ಹರಿಯ ಆರಾಧಿಸುವ ಕುಲಹೀನರು ನೀವು ಕೇಳಿಭೋ : `ಜನ್ಮನಾ ಜಾಯತೇ ಶೂದ್ರಃ ಕರ್ಮಣಾ ದ್ವಿಜ ಉಚ್ಯತೇ `ವೇದಾಭ್ಯಾಸೇನ ವಿಪ್ರಸ್ತು ಬ್ರಹ್ಮಣಾ ಚರಂತೀತಿ ಬ್ರಾಹ್ಮಣಃ ಎಂಬ ಶ್ರುತಿಯನೋದಿ, ಪರಬ್ರಹ್ಮನಂತಹ ಶಿವಲಿಂಗಪೂಜೆಯನಾಚರಿಸಿ ಬ್ರಾಹ್ಮಣತ್ವವನೈ[ದದೆ] ಶತಯಾಗಂಗಳ ಮಾಡಿ ಶೂದ್ರನಹ ಇಂದ್ರತ್ವವ ಬಯಸುವ ಅಧಮರು ನಿವು ಕೇಳಿಭೋ : `ಜನ್ಮನಾ ಜಾಯತೇ ಶೂದ್ರಃ ಮಾತಾ ಸಾ ಪ್ರಥಮಂ ಶೂದ್ರಾಣಿ ನಚೋಪದೇಶಃ ಗಾಯತ್ರೀ ನ ಚ ಮೌಂಜೀ ನ ಚ ಕ್ರಿಯಾ ಎಂದುದಾಗಿ, ದೀಕ್ಷೆಯಿಲ್ಲದೆ ಸತಿಶೂದ್ರಗಿತ್ತಿಗೆ ಹುಟ್ಟಿದವನೊಡನುಂಬ ಅನಾಚಾರಿಗೆ ಎಲ್ಲಿಯದೊ ಬ್ರಾಹ್ಮಣತ್ವ ? ಆವ ಜಾತಿಯವನಾದರೇನು ಶಿವಭಕ್ತನೆ ಬ್ರಾಹ್ಮಣ. ಅದಕ್ಕೆ ಸಾಕ್ಷಿ : . `ತಪಸಾ ಬ್ರಾಹ್ಮಣೋ[s]ಭವತ್ ಸಾಂಖ್ಯಾಯನ ಮಹಾಮುನಿಃ ತಪಸಾ ಬ್ರಾಹ್ಮಣೋ[s]ಭವತ್ ಗೌತಮಸ್ತು ಮಹಾಮುನಿಃ ಜಾತಿಂ ನ ಕಾರಯೇತ್ತೇಷು ಶ್ರೇಷಾ*ಃ ಸಮಭವಂಸ್ತತಃ ತಜ್ಜಾತಿರಭವತ್ತೇನ' ಎಂದುದಾಗಿ, ತಮ್ಮ ತಮ್ಮ ಗೋತ್ರಂಗಳೆ ಸಾಕ್ಷಿಯಾಗಿ ಸಾರುತ್ತಿರಲು ಕುಭ್ರಮೆಯಾತಕ್ಕೆ ? ಶ್ವಪಚೋ[s]ಪಿ ಮುನಿಶ್ರೇಷ*ಃ ಶಿವಭಕ್ತಿಸಮನ್ವಿತಃ ಶಿವಭಕ್ತಿವಿಹೀನಸ್ತು ಶ್ವಪಚೋ[s]ಪಿ ದ್ವಿಜಾಧಮಃ ಎಂದುದಾಗಿ ಶಿವಭಕ್ತನೆ ಕುಲಜ, ಶಿವಭಕ್ತಿ ಇಲ್ಲದವನೆ ಶ್ವಪಚನೆಂದರಿಯದ ಅಜ್ಞಾನಿಗಳು ನೀವು ಕೇಳಿಭೋ ! `ಏಕ ಏವ ರುದ್ರೋ ನ ದ್ವಿತೀಯಾಯತಸ್ಥೇ' ಎಂದು ವೇದವನೋದಿ `ಪಶುಪತಯೇ ನಮಃ' ಎಂದಾ ರುದ್ರವನೋದಿ ಶಿವನೆ ಪತಿ ಮಿಕ್ಕಿನ ದೈವಂಗಳೆಲ್ಲ ಪಶುಗಳೆಂಬುದ ತಿಳಿದು ಮತ್ತೆಯೂ ಈ ದ್ವಿಜರು ಕಾಣಲರಿಯರು. ಹರಹರನೊಂದೆಯೆಂಬ ನರಗುರಿಗಳು ನೀವು ಕೇಳಿಭೋ ! ಪಾರಾಶ[ರ] ಪುರಾಣೇ : ಆದೌ ರುದ್ರಾಂಗಮುತ್ಪತ್ತಿಃ ಮುಖೇ ಬ್ರಾಹ್ಮಣವೀಶ್ವರಃ ವಿಷ್ಣುಂ ಕ್ಷತ್ರಿಯಮಿತ್ಯಾಹುರ್ಬಾಹುನಾ ಚ ಅವಸ್ಥಿತಃ ವೈಶ್ಯಶ್ಚ ಬ್ರಹ್ಮಾ ಇತ್ಯಾಹುಃ ಲಿಂಗಾದೇವ ಅವಸ್ಥಿತಃ ಸುರಪೋ ಶೂದ್ರಯಿತ್ಯಾಹುಃ ದೇವಪಾದಾದವಿಸ್ಥಿತಃ ಎಂದುದಾಗಿ, ರುದ್ರನ ಮುಖದಲ್ಲಿ ಹುಟ್ಟಿದವನೆ ಬ್ರಾಹ್ಮಣ, ಮಿಕ್ಕಾದ ವಿಪ್ರರೆಲ್ಲರು ಋಷಿಗೋತ್ರದಲ್ಲಿ ಹುಟ್ಟಿದರು. ಆ ಋಷಿಮೂಲದ ವಿಪ್ರರೆಲ್ಲರು ಅಧಮಜಾತಿ ಅಧಮಜಾತಿಯಾದರೇನು ? ರುದ್ರಭಕ್ತರಾದ ಕಾರಣ ಬ್ರಾಹ್ಮಣರಾದರು. ಈ ವರ್ಮವನರಿಯದ ಚಾಂಡಾಲ ವಿಪ್ರರ್ಗೇನೂ ಸಂಬಂಧವಿಲ್ಲ. ಕಾಕ ರುದ್ರನ ಮುಖದಲ್ಲಿ ಉದ್ಭವವೆಂಬುದಕ್ಕೆ ಶ್ವಾನಸೂಕರರೂಪೇ ಪ್ರೇತಪಿಂಡ ಪ್ರದಾನತಃ ಪ್ರೇತತ್ವಂ ಚ ಸದಾ ಸ್ಯಾತ್ ತಥಾ ಧರ್ಮೇಣ ಲುಪ್ಯತೇ ಎಂದುದಾಗಿ ಆಗಮಾರ್ಥವನರಿಯದೆ, ಪ್ರೇತಪಿಂಡವನಿಕ್ಕುವ ಪಾತಕರು, [ಪ್ರಾಣಾಯಸ್ವಾಹಾ]ಅಪಾನಾಯ ಸ್ವಾಹಾ, ವ್ಯಾನಾಯ ಸ್ವಾಹಾ ಉದಾನಾಯ ಸ್ವಾಹಾ, ಸಮಾನಾಯ ಸ್ವಾಹಾ' ಎಂದು ಭೂತಬಲಿಯ ಬೆಕ್ಕು ನಾಯಿಗೆ ಹಾಕಿ ಮಿಕ್ಕ ಭೂತಶೇಷವ ಕೊಂಬ ಅಕುಲಜರು, ನೀವು ಕೇಳಿಭೋ ! `ವಸುರೂಪೋ ಮಧ್ಯಪಿಂಡಃ ಪುತ್ರ¥õ್ಞತ್ರಪ್ರವರ್ಧನಃ' ಎಂದು, ರುದ್ರಪ್ರಸಾದವನೆ ಕೊಂಡು ರುದ್ರಪಿಂಡದಿಂದ ಹುಟ್ಟಿ, ದೀಕ್ಷಾಕಾಲದಲ್ಲಿ ಭಸಿತವ ಧರಿಸಿ, ಬ್ರಹ್ಮಕಪಾಲಪಾತ್ರೆಯಂ ಪಿಡಿದು, ಪಲಾಶಕಂಕಾಳದಂಡಮಂ ಪಿಡಿದು, `ಭವತೀ ಭಿಕ್ಷಾಂ ದೇಹಿ'ಯೆಂದು ಭಿಕ್ಷಮಂ ಬೇಡಿ ಪಿತೃಕಾರ್ಯದಲ್ಲಿ `ವಿಶ್ವೇ ದೇವಾಂಸ್ತರ್ಪಯಾಮಿ'ಯೆಂದರ್ಚಿಸಿ, ಮರಣಕಾಲದಲ್ಲಿ ರುದ್ರಭೂಮಿಯಲ್ಲಿ ರುದ್ರಾಗ್ನಿಯಿಂದ ದಹನ ರುದ್ರವಾಹನದ ಬಾಲವಿಡಿದು ಸ್ವರ್ಗವನೆಯ್ದಿದರು, ರುದ್ರಭಕ್ತಿವಿರುದ್ಧ ವಿಚಾರಹೀನರು. `ತ್ರ್ಯಾಯುಕ್ಷಂ ಜಮದಗ್ನೇಃ ಕಶ್ಯಪಸ್ಯ ತ್ರಿಯಾಯುಷಂ, ಅಗಸ್ತ್ಯಸ್ಯ ತ್ರಿಯಾಯುಷಂನತನ್ಮೇಡಿಸ್ತುಫತ್ರಿಯಾ ಶತಸಯುಷಂ ಎಂದು ಸಕಲಋಷಿಗಳು ಶ್ರೀ ವಿಭೂತಿಯನು ಧರಿಸಿ, ಬಹಳಾಯುಷ್ಯಮಂ ಪಡೆದರೆಂದು ಮತ್ತೆಯು ಯಜುಸ್ಸಿನಲ್ಲಿ ದೀಕ್ಷೆಯನೈದಲ್ಲಿ, `ಭೂತಿವಾಂಶ್ಚ ಪ್ರಿಯಂ ಹೋತವ್ಯಂ'ಯೆಂದು, ಶ್ರೀವಿಭೂತಿಯನೆ ಧರಿಸಹೇಳಿತ್ತು ವೇದವು. `ಗೋಪೀ ಮಲಿನಧಾರೀ ತು ಶಿವಂ ಸ್ಪೃಶತಿ ಯೋ ದ್ವಿಜಃ ತದೈಕವಿಂಶತಿಕುಲಂ ಸಾಕ್ಷಾತ್ತು ನರಕಂ ವ್ರಜೇತ್ ' ಎಂದು, ಗೋಪಿ ಮಲಿನ ಚಂದನವನಿಟ್ಟು, ಪಾತಕರು[ವ] ಶಿವಲಿಂಗ ಮುಟ್ಟಿದರೆ ತಮ್ಮಿಪ್ಪತ್ತೊಂದು ಕುಲಸಹಿತ ಕೇಡಿಲ್ಲದ ನರಕದಲ್ಲಿ ಬೀಳುವರೆಂದರಿಯದೆ ಮುಟ್ಟಿಯನಿಟ್ಟ ಭ್ರಷ್ಟರು, ಮತ್ಸ್ಯ ಕೂರ್ಮ ವರಾಹ ನಾರಸಿಂಹ ಈ ನಾಲ್ಕೂ ಅವತಾರದಲ್ಲಿ ನೀರಿಂದ ಬಲಿ ಧಾರೆಯನೆರೆದನೆಂಬುದನರಿದು, ವಿಷ್ಣುವಿನ ಪಾದದಲ್ಲಿ ಗಂಗೆ ಹುಟ್ಟಿತೆಂಬ ವಿಚಾರಹೀನರು `ವಿಯದ್ವಿಷ್ಣುಪದಂ ಪ್ರೋಕ್ತಂ ಪುಂಸ್ಯಾಕಾಶವಿಹಾಯಸೀ ವಿಹಾಯಸೋ[s]ಪಿನಾಕೋ[s]ಪಿ ದ್ಯುರಪಿ ಸ್ಯಾತ್ತಿದವ್ಯಯಂ' ಎಂದು ನಿಘಂಟಿನಲ್ಲಿ ಆಕಾಶದ ಹೆಸರು ವಿಷ್ಣುಪದಿ, ಆಕಾಶಗಂಗೆ ಮುನ್ನಲುಂಟೆಂಬುದನರಿತು, ವಿಷ್ಣುವಿನ ಕಾಲಲ್ಲಿ ಗಂಗೆ ಹುಟ್ಟಿತೆಂಬ ದುಷ್ಟರು, ವೇದಕ್ಕೆ ನೆಲೆಗಟ್ಟು ಓಂಕಾರ, ಬ್ರಾಹ್ಮಣಕ್ಕೆ ನೆಲೆಗಟ್ಟು ಗಾಯತ್ರಿಯಲ್ಲಿ ಶಿವನೆ ದೈವವೆಂದಿತ್ತು. `ಓಂ ಭೂಃ ಓಂ ಭುವಃ ಓಂ ಸುವಃ ಓಂ ಮಹಃ ಓಂ ಜನಃ ಓಂ ತಪಃ ಓಂ ಸತ್ಯಂ ಓಂ ತತ್ಸವಿತುರ್ವರೇಣ್ಯಂ ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋ ನಃ ಪ್ರಚೋದಯಾತ್ ಹರ ಹರಿಭಕ್ತನೆಂದನಿಸುವ ವಿಚಾರಹೀನರು ನೀವು ಕೇಳಿಭೋ ! ಹರಿ ಶಿವನ ಭಕ್ತನೆಂಬುವದಕ್ಕೆ ಸಾವಿರಕಮಲ ಕೊರತೆಗೆ ತನ್ನ ನಯನ ಕಮಲಮಂ ಕಳೆದು ಶಿವನಂಘ್ರಿಗರ್ಪಿಸಿ, ಚಕ್ರಮಂ ಪಡೆದನೆಂದು ಮಹಿಮದಲ್ಲಿ ಹರಿಸ್ತೇ ಸಾಹಸ್ರಂ ಕಮಲಬಲಿಯಾಧಾಯ ಪದಯೋಃ' ಎಂದೋದಿ ಮರೆದ ಮತಿಭ್ರಷ್ಟರು ನೀವು ಕೇಳಿಭೋ ! ಹರನೆ ಕರ್ತ, ಹರಿಯೆ ಭೃತ್ಯನೆಂಬುದಕ್ಕೆ ರಾಮಪ್ರತಿಷೆ* ಶಿವಲಿಂಗ[ದ] ಮೂರ್ತಿಗಳಿಂ ಕಾಣಿರೆ, ಕಂಡು ತಿಳಿಯಲರಿಯದ ಹುಲಮನುಜರು ಶ್ರೀರಾಮನ ಗುರು ವಶಿಷ* ಹಂಪೆಯಲ್ಲಿ ವಿರೂಪಾಕ್ಷಲಿಂಗನ ಭಕ್ತನೆಂದರಿದು, ಕೃಷ್ಣಾವಿಷ್ಣುವಿನ ಗುರು ಉಪಮನ್ಯು ಅಹಿಪುರದಲ್ಲಿ ಸೋಮೇಶ್ವರಲಿಂಗನ ಭೃತ್ಯನೆಂಬುದನರಿದು, ಇಂತು ಭೃತ್ಯನ ಶಿಷ್ಯಂಗೆ ಕರ್ತನ ಸರಿಯೆಂಬ ಕರ್ಮಚಂಡಾಲರು ನೀವು ಕೇಳಿಭೋ ! `ಅಸಂಖ್ಯಕೋಟಿಬ್ರಹ್ಮಾಣಾಂ ಕೋಟಿವಿಷ್ಣುಗಣಂ ತತಃ ಗಂಗಾವಾಲುಕ ಸಮೌ ಹೇvõ್ಞ ಕಿಂಚಿದಜ್ಞಾಃ ನ ಮಹೇಶ್ವರಾತ್ ಎಂದು ರುದ್ರನ ಎವೆಯಾಡುವನಿತಕ್ಕೆ ಲೆಕ್ಕವಿಲ್ಲದ ಕೋಟಿ ಬ್ರಹ್ಮವಿಷ್ಣುರು ಸತ್ತುಹೋದರೆಂದು ಓದಿ ತಿಳಿದು ಇಂಥ ಹುಲುದೈವಂಗಳ `ಮೃತ್ಯುಂಜಯಃ ನಿತ್ಯಃ ಏಕೋ ದೇವಃ ನ ದ್ವಿತೀಯಃ' ಎಂದೆನಿಸುವ ಶಿವಗೆ ಸರಿಯಂದೆನಿಸುವ ಭವಿವಿಪ್ರರಿಗೆ ತಾವು ಓದುವ, ವೇದಾಗಮಂಗಳು ತಮಗೆ ಹಗೆಯಾಗಿ ನಡೆಯೊಂದು ಪರಿ ನುಡಿಯೊಂದು ಪರಿ ಆಗಿಹುದು. ಅದೆಂತೆಂದರೆ:ಗೌತಮ ದಧೀಚಿ ಭೃಗುವಾದಿಯಾಗಿ ಹಿರಿಯರುಗಳೇ ಶಾಪದಿಂದ ಶಾಪಹತರಾಗಿ ಶಿವದ್ರೋಹಿಗಳಾಗಿ ನರಕಕ್ಕಿಳಿವ ಚಾಂಡಾಲರಿಂದ ವಿಪ್ರರ ಸತ್ಪಾತ್ರರೆಂದಾರಾಧಿಸುವರ ನರಕದ ಕುಳಿಯೊಳು ಮೆಟ್ಟಿ ನರಕಾಗ್ನಿಯಿಂದ ಸುಡುತಿರ್ಪ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಶ್ರೀಗುರುಸ್ವಾಮಿ ಕರುಣಿಸಿಕೊಟ್ಟು ಪ್ರಾಣಲಿಂಗವು ಪಂಚಬ್ರಹ್ಮಮುಖವುಳ್ಳ ವಸ್ತುವೆಂದರಿವುದು. ಆ ಪಂಚಬ್ರಹ್ಮಮುಖಸಂಜ್ಞೆಯ ಭೇದವೆಂತೆಂದಡೆ: ಆವುದಾನೊಂದು ಶಿವಸಂಬಂಧವಾದ ಪರಮತೇಜೋಲಿಂಗವು ತನ್ನ ಭೋಗಾದಿಕಾರಣ ಮೂರ್ತಿಗಳಿಂದುದಯವಾದ ಬ್ರಹ್ಮಾದಿತೃಣಾಂತವಾದ ದೇಹಿಗಳಿಂದಲೂ ವೋಮಾದಿಭೂತಂಗಳಿಂದಲೂ ಇತ್ಯಾದಿ ಸಮಸ್ತತತ್ತ್ವಂಗಳಿಂದಲೂ ಮೇಲಣ ತತ್ತ್ವವುಪ್ಪುದೇ ಕಾರಣವಾಗಿ ಪರವೆಂಬ ಸಂಜ್ಞೆಯದುಳ್ಳುದಾಗಿಹುದು. ಅನಂತಕೋಟಿಬ್ರಹ್ಮಾಂಡಗಳ ತನ್ನೊಳಡಗಿಸಿಕೊಂಡು ಸಮಸ್ತಜಗಜ್ಜನಕ್ಕೆ ತಾನೇ ಕಾರಣವಾಗಿ ಅವ್ಯಕ್ತಲಕ್ಷಿತವಾದ ನಿಮಿತ್ತಂ ಗೂಢವೆಂಬ ಸಂಜ್ಞೆಯದುಳ್ಳುದಾಗಿಹುದು. ತಾನು ಶೂನ್ಯ ಶಿವತತ್ತ್ವಭೇದವಾಗಿ ಆಯಸ್ಕಾಂತ ಸನ್ನಿಧಿಯಿಂದ ಲೋಹವೇ ಹೇಗೆ ಭ್ರಮಿಸುವುದೋ ಹಾಗೆ ಬ್ರಹ್ಮಾದಿಗಳ ಹೃತ್ಕಮಲಮಧ್ಯದಲ್ಲಿದ್ದು ತನ್ನ ಚಿಚ್ಛಕ್ತಿಯ ಸನ್ನಿಧಿಮಾತ್ರದಿಂದ ಅಹಮಾದಿಗಳಿಂ ವ್ಯೋಮಾದಿಭೂತಂಗಳಂ ಸೃಷ್ಟಿಸುವುದಕ್ಕೆ ತಾನೇ ಕಾರಣವಪ್ಪುದರಿಂದ ಶರೀರಸ್ಥವೆಂಬ ಸಂಜ್ಞೆಯದುಳ್ಳುದಾಗಿಹುದು. ತನ್ನ ಸೃಷ್ಟಿಶಕ್ತಿಯಿಂದುದಯವಾದ ಸಮಸ್ತಸಂಸಾರಾದಿ ಪ್ರಪಂಚವು ತನ್ನಿಂದಲೇ ಕಾರಣವಪ್ಪುದರಿಂ ಅನಾದಿವತ್ತೆಂಬ ಸಂಜ್ಞೆಯದುಳ್ಳುದಾಗಿಹುದು. ತನ್ನ ಮಾಯಾಶಕ್ತಿಯಿಂದುದಯವಾದ ಸ್ತ್ರೀಲಿಂಗ ಪುಲ್ಲಿಂಗ ನಪುಸಕಲಿಂಗವೆಂಬ ತ್ರಿಲಕ್ಷಿತವಾದ ಸಮಸ್ತಪ್ರಪಂಚವು ವರ್ತಿಸುವುದಕ್ಕೆ ತಾನೇ ಕ್ಷೇತ್ರವಾದ ಕಾರಣ ಲಿಂಗಕ್ಷೇತ್ರವೆಂಬ ಸಂಜ್ಞೆಯದುಳ್ಳುದಾಗಿಹುದು. ಈ ಪ್ರಕಾರದಿಂ ಪರಬ್ರಹ್ಮಲಿಂಗವು ಪಂಚಮುಖಸಂಜ್ಞೆಯ ನುಳ್ಳುದಾಗಿಹುದೆಂದರಿವುದು. ಅದೆಂತೆಂದಡೆ:ಅದಕ್ಕೆ ವಾತುಳಾಗಮದಲ್ಲಿ, ಅಖಿಳಾರ್ಣವಲಯಾನಾಂ ಲಿಂಗತತ್ತ್ವಂ ಪರಂ ತತಃ ಪರಂ ಗೂಢಂ ಶರೀರಸ್ಥಂ ಲಿಂಗಕ್ಷೇತ್ರಮನಾದಿವತ್ ಯದಾದ್ಯಮೈಶ್ವರಂ ತೇಜಸ್ತಲ್ಲಿಂಗಂ ಪಂಚಸಂಜ್ಞಕಂ ಎಂದೆನಿಸುವ ಲಿಂಗವು. ಮತ್ತಂ, ವಾಶಿಷ*ದಲ್ಲಿ: ಪಿಂಡಬ್ರಹ್ಮಾಂಡಯೋರೈಕ್ಯಂ ಲಿಂಗಸೂತ್ರಾತ್ಮನೋರಪಿ ಸ ಬಾಹ್ಯಾಂತರಯೋರೈಕ್ಯಂ ಕ್ಷೇತ್ರಜ್ಞಪರಮಾತ್ಮನೋಃ ಎಂದೆನಿಸುವ ಲಿಂಗವು. ಮತ್ತಂ ಬ್ರಹ್ಮಾಂಡಪುರಾಣದಲ್ಲಿ, ಅಧಿಷಾ*ನಂ ಸಮಸ್ತಸ್ಯ ಸ್ಥಾವರಸ್ಯ ಚರಸ್ಯ ಚ ! ಜಗತೋ ಯದ್ಭವೇತ್‍ತತ್ತ್ವಂ ತದ್ದಿವ್ಯಂ ಸ್ಥಲಮುಚ್ಯತೇ ಎಂದೆನಿಸುವ ಲಿಂಗವು. ಮತ್ತಂ ಶಿವರಹಸ್ಯದಲ್ಲಿ, ಮಹಾಲಿಂಗಮಿದಂ ದೇವಿ ಮನೋ[s]ತೀತಮಗೋಚರಂ ನಿರ್ನಾಮಂ ನಿರ್ಗುಣಂ ನಿತ್ಯಂ ನಿರಂಜನಂ ನಿರಾಮಯಂ ಎಂದೆನಿಸುವ ಲಿಂಗವು. ಮತ್ತಂ ಉತ್ತರವಾತುಳದಲ್ಲಿ, ಆದ್ಯಂತಶೂನ್ಯಮಮಲಂ ಪರಿಪೂರ್ಣಮೇಕಂ ಸೂಕ್ಷ್ಮಂ ಪರಾತ್ಪರಮನಾಮಯಮಪ್ರಮೇಯಂ ಚಿಚ್ಛಕ್ತಿಸಂಸ್ಫುರಣರೂಢಮಹಾತ್ಮಲಿಂಗಂ ಭಾವೈಕಗಮ್ಯಮಜಡಂ ಶಿವತತ್ತ್ವಮಾಹುಃ ಎಂದೆನಿಸುವ ಲಿಂಗವು. ಮತ್ತಂ ಅಥರ್ವಣವೇದದಲ್ಲಿ, ಶಿವಂ ಪರಾತ್ಪರಂ ಸೂಕ್ಷ್ಮಂ ನಿತ್ಯಂ ಸರ್ವಗತಾವ್ಯಯಂ ಅನಿಂದಿತಮ£õ್ಞಪಮ್ಯಮಪ್ರಮಾಣಮನಾಮಯಮ್ ಶುದ್ಧತ್ವಾಚ್ಛಿವಮುದ್ದಿಷ್ಟಂ ಪರಾದೂಧ್ರ್ವಂ ಪರಾತ್ಪರಂ ಎಂದೆನಿಸುವ ಲಿಂಗವು. ಮತ್ತಂ ಸಾಮವೇದದಲ್ಲಿ, ಅನಂತಮವ್ಯಕ್ತ ಮಚಿಂತ್ಯಮೇಕಂ ಹರಂ ತಮಾಶಾಂಬರಮಪ್ರಮೇಯಂ ಲೋಕೈಕನಾಥಂ ಭುಜಗೇಂದ್ರಹಾರಂ ಅಜಂ ಪುರಾಣಂ ಪ್ರಣಮಾಮಿ ನಿತ್ಯಂ `ಅಣೋರಣೀಯಾನ್ ಮಹತೋ ಮಹೀಯಾನ್' ಎಂದೆನಿಸುವ ಲಿಂಗವು. ಮತ್ತಂ ಶಿವಧರ್ಮಪುರಾಣದಲ್ಲಿ, ಆಕಾಶಂ ಲಿಂಗಮಿತ್ಯಾಹುಃ ಪೃಥ್ವೀ ತಸ್ಯಾದಿಪೀಠಿಕಾ ಆಲಯಸ್ಸರ್ವಭೂತಾನಾಂ ಲಯನಾಲ್ಲಿಂಗಮುಚ್ಯತೇ ಎಂದೆನಿಸುವ ಲಿಂಗವು. ಮತ್ತಂ ಗಾರುಡಪುರಾಣದಲ್ಲಿ, ಲಿಂಗಮಧ್ಯೇ ಜಗತ್‍ಸರ್ವಂ ತ್ರೈಲೋಕ್ಯಂ ಸಚರಾಚರಂ ಲಿಂಗಬಾಹ್ಯಾತ್ ಪರಂ ನಾಸ್ತಿ ತಸ್ಮೈ ಶ್ರೀಗುರವೇ ನಮಃ ಎಂದೆನಿಸುವ ಲಿಂಗವು. ಮತ್ತಂ ಯಜುರ್ವೇದದಲ್ಲಿ, ವಿಶ್ವತಶ್ಚಕ್ಷುರುತ ವಿಶ್ವತೋಮುಖೋ ವಿಶ್ವತೋಬಾಹುರುತ ವಿಶ್ವತಸ್ಪಾತ್ ಸಂಬಾಹುಭ್ಯಾಂಧಮತಿ ಸಂಪತತ್ರೈದ್ರ್ಯಾವಾಭೂಮೀ ಜನಯನ್ ದೇವ ಏಕಃ ಎಂದೆನಿಸುವ ಲಿಂಗವು. ಮತ್ತಂ ಗಾಯತ್ರಿಯಲ್ಲಿ, `ಓಂ ಭೂಃ ಓಂ ಭುವಃ ಓಂ ಸುವಃ ಓಂ ಮಹಃ ಓಂ ಜನಃ ಓಂ ತಪಃ ಓಂ ಸತ್ಯಂ ಓಂ ತತ್ಸವಿತುರ್ವರೇಣ್ಯಂ ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋ ನಃ ಪ್ರಚೋದಯಾತ್ ಎಂದೆನಿಸುವ ಲಿಂಗವು. ಮತ್ತಂ ಸ್ಕಂದಪುರಾಣದಲ್ಲಿ ಲೀಯತೇ ಗಮ್ಯತೇ ಯತ್ರ ಯೇನ ಸರ್ವಂ ಚರಾಚರಂ ತದೇವ ಲಿಂಗಮಿತ್ಯಕ್ತಂ ಲಿಂಗತತ್ತ್ವಪರಾಯಣೈಃ ಎಂದೆನಿಸುವ ಲಿಂಗವು. ಮತ್ತಂ ಜ್ಞಾನವೈಭವಖಂಡದಲ್ಲಿ, ಲಕಾರಂ ಲಯಸಂಪ್ರೋಕ್ತಂ ಗಕಾರಂ ಸೃಷ್ಟಿರುಚ್ಯತೇ ಲಯನಾದ್ಗಮನಾಚ್ಚೈವ ಲಿಂಗಶಬ್ದಮಿಹೋಚ್ಯತೇ ಎಂದೆನಿಸುವ ಲಿಂಗವು. ಮತ್ತಂ ಮಹಿಮ್ನದಲ್ಲಿ, 'ಚಕಿತಮಭಿಧತ್ತೇ ಶ್ರುತಿರಪಿ' ಎಂದೆನಿಸುವ ಲಿಂಗವು. ಮತ್ತಂ ಶಿವಧರ್ಮೋತ್ತರದಲ್ಲಿ, 'ನ ಜಾನಂತಿ ಪರಂ ಭಾವಂ' ಯಸ್ಯ ಬ್ರಹ್ಮಸುರಾದಯಃ ಎಂದೆನಿಸುವ ಲಿಂಗವು. ಮತ್ತಂ ಪುರುಷಸೂಕ್ತದಲ್ಲಿ, `ಅತ್ಯತಿಷ*ದ್ದಶಾಂಗುಲಂ ಎಂದೆನಿಸುವ ಲಿಂಗವು. ಮತ್ತಂ ಉಪನಿಷತ್ತಿನಲ್ಲಿ, 'ಯತೋ ವಾಚೋ ನಿವರ್ತಂತೇ ಅಪ್ರಾಪ್ಯ ಮನಸಾ ಸಹ' ಎಂದೆನಿಸುವ ಲಿಂಗವು. ಮತ್ತಂ ಕೂರ್ಮಪುರಾಣದಲ್ಲಿ, 'ವಾಚಾತೀತಂ ಮನೋತೀತಂ ಭಾವಾತೀತಂ ನಿರಂಜನಂ ಅವರ್ಣಮಕ್ಷರಂ ಬ್ರಹ್ಮ ನಿತ್ಯಂ ಧ್ಯಾಯಂತಿ ಯೋಗಿನಃ ' ಎಂದೆನಿಸುವ ಲಿಂಗವು. ಮತ್ತಂ ಋಗ್ವೇದದಲ್ಲಿ, 'ಆಯಂ ಮೇ ಹಸ್ತೋ ಭಗವಾನ್ ಅಯಂ ಮೇ ಭಗವತ್ತರಃ ಅಯಂ ಮೇ ವಿಶ್ವಭೇಷಜೋ[s]ಯಂ ಶಿವಾಭಿಮರ್ಶನಃ ಅಯಂ ಮಾತಾ ಅಯಂ ಪಿತಾ ಅಯಂ ಜೀವಾತುರಾಗಮ್ ಎಂದೆನಿಸುವ ಲಿಂಗವು. ಮತ್ತಂ ಉತ್ತರವಾತುಳದಲ್ಲಿ, ಸ ಬಾಹ್ಯಾಭ್ಯಂತರಂ ಸಾಕ್ಷಾಲ್ಲಿಂಗಜ್ಯೋತಿಃ ಪರಂ ಸ್ವಕಂ ತಿಲೇ ತೈಲಮಿವಾಭಾತಿ ಅರಣ್ಯಾಮಿವ ಪಾವಕಃ ಕ್ಷೀರೇ ಸರ್ಪಿರಿವ ಸ್ರೋತಸ್ಯಂಬುವತ್ ಸ್ಥಿತಮಾತ್ಮನಿ ಏಕೋ[s]ಯಂ ಪುರುಷೋ ವಿಶ್ವತೈಜಸಪ್ರಾಜ್ಞರೂಪತಃ ಸದಾ ಸ್ವಾಂಗೇಷು ಸಂಯುಕ್ತಮುಪಾಸ್ತೇ ಲಿಂಗಮದ್ವಯಂ ಎಂದೆನಿಸುವ ಲಿಂಗವು. ಮತ್ತಂ ಲೈಂಗ್ಯದಲ್ಲಿ, ಅನಯೋರ್ದೃಷ್ಟಿಸಂಯೋಗಾಜ್ಞಾಯತೇ ಜ್ಞಪ್ತಿರೂಪಿಣೀ ವೇಧಾದೀಕ್ಷಾ ತು ಸೈವಸ್ಯಾನ್ಮಂತ್ರರೂಪೇಣ ತಾಂ ಶ್ರುಣು ಎಂದೆನಿಸುವ ಲಿಂಗವು. ಮತ್ತಂ ¸õ್ಞರಪುರಾಣದಲ್ಲಿ, ಹಸ್ತಮಸ್ತಕಸಂಯೋಗಾತ್ಕಲಾ ವೇಧೇತಿ ಗೀಯತೇ ಗುರುಣೋದೀರಿತಾ ಕರ್ಣೇ ಸಾ ಮಂತ್ರೇತಿ ಕಥ್ಯತೇ ಶಿಷಾಣಿತಲೇದತ್ತಾ ಸಾ ದೀಕ್ಷಾ ತು ಕ್ರಿಯೋಚ್ಯತೇ ಎಂದೆನಿಸುವ ಲಿಂಗವು. ಮತ್ತಂ ಕಾಳಿಕಾಖಂಡದಲ್ಲಿ, ಅಂಗಂ ಚ ಲಿಂಗಂ ಚ ಮುಖಂ ಚ ಹಸ್ತಂ ಶಕ್ತಿಶ್ಚ ಭಕ್ತಶ್ಚ ತಥಾರ್ಪಣಂ ಚ ಆನಂದಮೇವ ಸ್ವಯಮರ್ಪಣಂ ಚ ಪ್ರಸಾದರೂಪೇಣ ಭವೇತ್ರಿತತ್ತ್ವಂ ಎಂದೆನಿಸುವ ಲಿಂಗವು. ಮತ್ತಂ ಶಂಕರಸಂಹಿತೆಯಲ್ಲಿ, ತದೇವ ಹಸ್ತಾಂಬುಜಪೀಠಮಧ್ಯೇ ನಿಧಾಯ ಲಿಂಗಂ ಪರಮಾತ್ಮಚಿಹ್ನಂ ಸಮರ್ಚಯೇದೇಕಧಿಯೋಪಚಾರರೈರ್ನರಶ್ಚ ಬಾಹ್ಯಾಂತರಭೇದಭಿನ್ನಂ ಎಂದೆನಿಸುವ ಲಿಂಗವು. ಮತ್ತಂ ವೀರಾಗಮದಲ್ಲಿ, ಭಾವಪ್ರಾಣಶರೀರೇಷು ಲಿಂಗಂ ಸಂಸಾರಮೋಚಕಂ ಧಾರಯೇದವಧಾನೇನ ಭಕ್ತಿನಿಷ*ಸ್ಸುಬುದ್ಧಿಮಾನ್ ಎಂದೆನಿಸುವ ಲಿಂಗವು. ಮತ್ತಂ ಶಿವರಹಸ್ಯದಲ್ಲಿ, ಕರ್ಣದ್ವಾರೇ ಯಥಾವಾಕ್ಯಂ ಗುರುಣಾ ಲಿಂಗಮೀರ್ಯತೇ ಇಷ್ಟಂ ಪ್ರಾಣಸ್ತಥಾ ಭಾವಸ್ತ್ರಿಧಾ ಚೈಕಂ ವರಾನನೇ ಎಂದೆನಿಸುವ ಲಿಂಗವು ಮತ್ತಂ ಶಿವರಹಸ್ಯದಲ್ಲಿ, ಏಕಮೂರ್ತಿಸ್ತ್ರಯೋಭಾಗಾಃ ಗುರುರ್ಲಿಂಗಂ ತು ಜಂಗಮಃ ಜಂಗಮಶ್ಚ ಗುರುರ್ಲಿಂಗಂ ತ್ರಿವಿಧಂ ಲಿಂಗಮುಚ್ಯತೇ ಎಂದೆನಿಸುವ ಲಿಂಗವು. ಗುರುಲಿಂಗಜಂಗಮರೂಪಾಗಿ ಎನ್ನ ಕರಸ್ಥಲಕ್ಕೆ ಬಿಜಯಂಗೈದು ಕರತಲಾಮಲಕವಾಗಿ ತೋರುತ್ತೈದಾನೆ. ಆಹಾ ಎನ್ನ ಪುಣ್ಯವೇ, ಆಹಾ ಎನ್ನ ಭಾಗ್ಯವೇ, ಆಹಾ ಎನ್ನ ಸತ್ಯವೇ, ಆಹ ಎನ್ನ ನಿತ್ಯವೇ, ಶಿವ ಶಿವ, ಮಹಾದೇವ, ಮಹಾದೇವ, ಮಹಾದೇವ ನೀನೇ ಬಲ್ಲೆ, ನೀನೇ ಬಲ್ಲೆ, ಉರಿಲಿಂಗಪೆದ್ದಿಪ್ರಿಯವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಶಿಲೆ ಮೌಕ್ತಿಕ ಪದ್ಮಾಕ್ಷಿ ಸುವರ್ಣ ಸಲೆ ಪುತ್ರಂಜಿ ಮೊದಲಾದ ಇಂತಿವರಲ್ಲಿ ಜಪವ ಮಾಡಿದರೆ ಒಂದೊಂದಕೊಂದು ಫಲವಿಹುದು. ಶ್ರೀ ರುದ್ರಾಕ್ಷಿಯ ಧರಿಸಲು ಅನಂತಫಲವೆಂದಿತ್ತು ಪೌರಾಣ. ಸಾಕ್ಷಿ : ``ಅಂಗುಲೀ ಜಪಸಂಖ್ಯಾಭಿರೇಕೈಕಾಂತು ವರಾನನೇ | ರೇಖಾಯಾಷ್ಟಗುಣಂ ಪ್ರೋಕ್ತಂ ಪುತ್ರಜೀವಿಪಲೈರ್ದಶ ||'' ಎಂದುದಾಗಿ, ``ಶಂಖೆಶ್ಶತಗುಣವಿಂದ್ಯಾತ್ಪ್ರವಾಳಸ್ತು ಸಹಸ್ರಕಂ | ಸ್ಫಟಿಕೈರ್ದಶಸಾಹಸ್ರಂ ಮೌಕ್ತಕಂ ಲಕ್ಷಮೇವ ಚ ||'' ಎಂದುದಾಗಿ, ``ಪದ್ಮಾಕ್ಷಿರ್ದಶಲಕ್ಷಂತು ಸುವರ್ಣಕೋಟಿರುಚ್ಯತೇ | ದಶಕೋಟಿ ಕುಶದ್ರಾಂತೆ ರುದ್ರಾಕ್ಷಿಯನಂತ ಫಲ ||'' (?) ಎಂದೆನಿಸುವ ರುದ್ರಾಕ್ಷಿಯ ಧರಿಸಿ ರುದ್ರನಾಗಿದ್ದೆನು ಕಾಣಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
`ಯತೋ ವಾಚೋ ನಿವರ್ತಂತೇ ಅಪ್ರಾಪ್ಯ ಮನಸಾ ಸಹ' ಎಂದೆನಿಸುವ ಲಿಂಗವು, `ಅತ್ಯತಿಷ*ದ್ಧಶಾಂಗುಲಂ' ಎಂದೆನಿಸುವ ಲಿಂಗವು, `ಚಕಿತಮಭಿದತ್ತೇ ಎಂದೆನಿಸುವ ಲಿಂಗವು, `ಅಣೋರಣೀಯಾನ್ ಮಹತೋ ಮಹೀಯಾನ್' ಎಂದೆನಿಸುವ ಲಿಂಗವು, `ಅಯಂ ಮೇ ಹಸ್ತೋ ಭಗವಾನ್ ಅಯಂ ಮೇ ಭಗವತ್ತರಃ ಎಂದೆನಿಸುವ ಲಿಂಗವು, `ಏಕಮೂರ್ತಿಸ್ತ್ರಿಧಾ ಭೇದಾಃ' ಎಂದೆನಿಸಿ ಶ್ರೀಗುರುಲಿಂಗಜಂಗಮರೂಪಾಗಿ, `ಇಷ್ಟಂ ಪ್ರಾಣಿಸ್ತಥಾ ಭಾವಸ್ತ್ರಿಧಾ ಚೈಕಂ ವರಾನನೇ' ಎಂದುದಾಗಿ ತ್ರಿವಿಧ ಏಕೀಭವಿಸಿ ಲಿಂಗರೂಪಾಗಿ, ಎನ್ನ ಕರಸ್ಥಲಕ್ಕೆ ಬಂದು ಕರತಳಾಮಳಕದಂತೆ ತೋರುವೆ. ಆಹಾ ಎನ್ನ ಸತ್ಯವೆ, ಆಹಾ ಎನ್ನ ನಿತ್ಯವೆ, ಆಹಾ ಎನ್ನ ಪುಣ್ಯವೇ, ಆಹಾ ಎನ್ನ ಭಾಗ್ಯವೇ, ಶಿವ ಶಿವ ಮಹಾದೇವ ! ನೀನೇ ಬಲ್ಲೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ದೇವರದೇವ ನಿತ್ಯದೇವ ಸ್ವಯಂಭೂದೇವ ಗಿರಿವಾಸದೇವ ಗಣರೊಂದ್ಯ ದೇವೇಂದ್ರಭಜಿತದೇವ ಸರ್ವಲೋಕಪ್ರಕಾಶದೇವ ಸರ್ವರ ಕಾವದೇವ ಶುಭ್ರವರ್ಣದೇವ ನಂದೀಶದೇವ ಪಂಚವಕ್ತ್ರದೇವ ಪಂಚಬ್ರಹ್ಮದೇವ ಪಂಚಾಕ್ಷರಿಯಧ್ಯಾತ್ಮಜ್ಯೋತಿದೇವ ಕೆಂಜೆಡೆಯ ಭೂಷಣದೇವ ರವಿಕೋಟಿತೇಜದೇವ ನಂದಮಯ ನಾದೋರ್ಲಿಂಗಂ ನಾದಪ್ರಿಯ ನಾಗೇಶ್ವರ ಆದಿಮಧ್ಯಾಂತರಹಿತ ದೇವಂ ವೇದವಿದವರಂ ವ್ಯೋಮಜ್ಯೋತಿರೂಪಕಂ ಎಂದೆನಿಸುವ ದೇವನೆಂದು ಮೊರೆಹೊಕ್ಕೆ. ಎನ್ನಯ ಮೊರೆಯಂ ಕೇಳಿ ಅಂಜದಿರೆಂದು ರಕ್ಷಿಸು ಹರಹರ ಜಯಜಯ ಶಿವಶಿವ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಹರ ತ್ರಿಪುರದಹನದಲ್ಲಿ [ಈಕ್ಷಿಸಿ] ನೋಡಲಾಕ್ಷಣ ನಯನಜಲದೊರೆದು ಉದಯವಾದ ಶ್ರೀರುದ್ರಾಕ್ಷಿ. ಪರಮ ಮುನಿಗಳಿಗೆ ಮೋಕ್ಷಾರ್ಥವನೀವ ಶ್ರೀರುದ್ರಾಕ್ಷಿ. ಧರೆಯ ಸದ್ಭಕ್ತರುಗಳ ಪಾಲನಮಾಡಿ ತೋರುವ ಶ್ರೀರುದ್ರಾಕ್ಷಿ, ಕರ್ಮಶರಧಿಯ ನಿಟ್ಟೊರಸುವುದಕ್ಕೆ ಶ್ರೀರುದ್ರಾಕ್ಷಿ. ದರುಶನವ ಮಾಡಿದರೆ ಲಕ್ಷಪುಣ್ಯ, ಸ್ಪರುಶನವ ಮಾಡಿದರೆ ಕೋಟಿಫಲಂ, ಧರಿಸಿದಡಂ ದಶಶತಕೋಟಿ ಫಲಂ ಇನಿತು ಫಲವಪ್ಪುದು ಶ್ರೀ ರುದ್ರಾಕ್ಷಿಯಿಂ. ಸಾಕ್ಷಿ : ``ಲಕ್ಷಂ ತದ್ದರ್ಶನಾತ್ಪುಣ್ಯಂ ಕೋಟಿಃ ಸಂಸ್ಪರ್ಶನಾದಪಿ | ದಶಕೋಟಿ ಶತಂ ಪುಣ್ಯಂ ಧಾರಣಾತ್ ಲಭತೇ ನರಃ ||'' ಹೀಗೆನಿಸುವ ರುದ್ರಾಕ್ಷಿಯ ಧರಿಸಿ, ರುದ್ರಪದವಿಯನೈದುವುದು ತಪ್ಪದು ನೋಡಾ ! ಅದು ಹೇಗೆಂದರೆ :ಆವನೊಬ್ಬನು ಕೊರಳಲ್ಲಿ ರುದ್ರಾಕ್ಷಿಯ ಧರಿಸೆ ಅವನ ಕುಲಕೋಟಿ ಸಹವಾಗಿ ಶಿವಲೋಕವನೈದರೆ ? ಅದಕೆ ಶ್ರುತಿ ದೃಷ್ಟವುಂಟೇಯೆಂದರೆ ಉಂಟು. ಸಾಕ್ಷಿ : ``ರುದ್ರಾಕ್ಷಾಶ್ರಿತಕಂಠಶ್ಚ ಗೃಹೇ ತಿಷ*ತಿ ಯೋ ನರಃ | ಕುಲೈಕಂ ವಿಂಶಯುಕ್ತಂ ಚ ಶಿವಲೋಕೇ ಮಹೀಯತೇ ||'' ಎಂದೆನಿಸುವ ರುದ್ರಾಕ್ಷಿಯ ಮೂಲ ಬ್ರಹ್ಮನೆಂದಿತ್ತು ಪೌರಾಣ. ರುದ್ರಾಕ್ಷಿಯ ಗಳ ವಿಷ್ಣುವೆಂದಿತ್ತು ಪೌರಾಣ. ರುದ್ರಾಕ್ಷಿಯ ಮುಖ ಸದಾಶಿವನೆಂದಿತ್ತು ಪೌರಾಣ. ರುದ್ರಾಕ್ಷಿಯ ಸರ್ವಾಂಗವೆಲ್ಲ ಸರ್ವದೇವರೆಂದಿತ್ತು ಪೌರಾಣ. ಸಾಕ್ಷಿ :``ರುದ್ರಾಕ್ಷಿಮೂಲಂ ಬ್ರಹ್ಮಾ ಚ ತನ್ನಾಳಂ ವಿಷ್ಣುರುಚ್ಯತೇ | ಮುಖಂ ಸದಾಶಿವಂ ಪ್ರೋಕ್ತಂ ಬಿಂದುಃ ಸರ್ವತ್ರ ದೇವತಾ ||'' ಎಂದೆನಿಸುವ ರುದ್ರಾಕ್ಷಿಯ ಧರಿಸಿ ರುದ್ರನಾಗಿದ್ದೆನು. `ಅತಏವ ರುದ್ರಾಕ್ಷಿಧಾರಣಂ ರುದ್ರಾ'ಯೆಂದಿತ್ತು ವೇದ. ರುದ್ರಾಕ್ಷಿಯ ಧರಿಸಿ ಶುದ್ಧಚಿದ್ರೂಪನಾಗಿದ್ದೆನು ಕಾಣಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಪ್ರಾಣಲಿಂಗ ಪ್ರಾಣಲಿಂಗವೆಂಬರು, ಪ್ರಾಣಲಿಂಗವೆಂಬುದಾರಿಗುಂಟಯ್ಯಾ ? ಮೂವರಿಗೆ ಹುಟ್ಟಿದ ಲಿಂಗವು ತನ್ನ ಪ್ರಾಣಲಿಂಗವಾದ ಪರಿಯಿನ್ನೆಂತೊ ? ವಸುಧೆಗೆ ಹುಟ್ಟಿದ ಲಿಂಗವನು ವಶಕ್ಕೆ ತಂದು, ತನ್ನ ದೆಸೆಯಲ್ಲಿ ನಿಲಿಸುವ ಪರಿಯಿನ್ನೆಂತೊ ? ಭೂಮಿಗೆ ಹುಟ್ಟಿ ಶಿಲೆಯಾದ, ಕಲುಕುಟಿಗ ಮುಟ್ಟಿರೂಪಾದ, ಗುರುಮುಟ್ಟಿ ತೇಜವಾದ. ಹಿಂದೆ ಮುಟ್ಟಿದವರಿಗೆಲ್ಲ ಪ್ರಾಣಲಿಂಗವಾದ ಪರಿಯಿನ್ನೆಂತೊ ರಿ ? ತನ್ನ ಪ್ರಾಣ ಮುಂದೆ ಹೋಗಿ ಲಿಂಗ ಹಿಂದುಳಿದಡೆ ಪ್ರಾಣ ಲಿಂಗವಾದ ಪರಿಯಿನ್ನೆಂತೊ ? ಹಸಿವು ತೃಷೆ, ವಿಷಯ ನಿದ್ರೆ ಜಾಡ್ಯ, ಇಂತಿವೆಲ್ಲವನತಿಗಳೆದು ನಿರ್ಮಲದೇಹಿಯಾಗಿ ಹೃದಯಕಮಲದೊಳು ವಿಮಲವಪ್ಪ ಶ್ರೀಗುರುಮೂರ್ತಿ, ಪರಂಜ್ಯೋತಿ ಎಂದೆನಿಸುವ ಲಿಂಗವ, ಮಲಿನವಿಡಿಯದ ಕಾಯದ ಸೆಜ್ಜೆಯೊಳು ದೃಢದೊಳ್ಬಿಜಯಂಗೈಸಿ, ಸಪ್ತಧಾತು ಅಷ್ಟಮದವಿಲ್ಲದೆ ಜ್ಞಾನದೋಗರವನರ್ಪಿಸಿ, ಸುಜ್ಞಾನಬುದ್ಧಿಯೊಳು ಪ್ರಸಾದವ ಸ್ವೀಕಾರವ ಮಾಡಿ, ನಿತ್ಯಸುಖಿಯಾಗಿ ಆಡುತಿಪ್ಪ_ ಇದು ಕಾರಣ, ಕೂಡಲಚೆನ್ನಸಂಗಯ್ಯನಲ್ಲಿ ಬಸವಣ್ಣನೊಬ್ಬನೆ ಪ್ರಾಣಲಿಂಗ ಸಂಬಂಧಿ; ಪ್ರಾಕ್‍ಶುದ್ಧಿಗಳೆಲ್ಲ ಲಿಂಗಲಾಂಛನಧಾರಿಗಳೆಂದೆನಿಸುವರು
--------------
ಚನ್ನಬಸವಣ್ಣ
-->