ಅಥವಾ

ಒಟ್ಟು 83 ಕಡೆಗಳಲ್ಲಿ , 25 ವಚನಕಾರರು , 80 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನ ಮುಟ್ಟದ ಮಜ್ಜನ ತನು ತಾಗದ ದೇಹಾರ, ಭಾವ ತಾಗದ ಪೂಜೆ, ಎದೆ ತಾಗದ ನೋಟ ವಾಯು ತಾಗದ ನಲಿಂಗದ¥sgಠ್ಞವ ತೋರಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ವೇದದ ಮೊದಲಧ್ಯಾಯದಲ್ಲಿ ಒಂಕಾರಕ್ಕೆ ಒಡೆಯನಾರೆಂಬುದ ತಿಳಿದು, ಸದ್ಯೋಜಾತಾದ್ಭವೇದ್ಭೂಮಿರ್ವಾಮದೇವಾದ್ಭವೇಜ್ಜಲಂ ಅಘೋರಾದ್ವನ್ಹಿರಿತ್ಯುಕ್ತಸ್ತತ್ಪುರುಷಾದ್ವಾಯುರುಚ್ಯತೇ | ಈಶಾನ್ಯಾದ್ಗಗನಾಕಾರಂ ಪಂಚಬ್ರಹ್ಮಮಯಂ ಜಗತ್ || ಇಂತೀ ವೇದವೇದ್ಯರು ಶಿವಭಕ್ತರಲ್ಲದಿಲ್ಲ. ಇಂತಿದನರಿಯದೆ, ಘನ ಕಿರಿದೆಂದು ಹೋರುವವರಿಗೆ ತಿಳಿವಳವ ಕೊಡುವೆ. ನಿಮ್ಮ ಶಾಂಕರಸಂಹಿತೆಯಲ್ಲಿ ದೃಷ್ಟವ ತಿಳಿದುಕೊಳ್ಳಿ. ಲಲಾಮಬ್ಥೀಮಸಂಗಮೇಶ್ವರಲಿಂಗವಲ್ಲದಿಲ್ಲಾ ಎಂದೆ.
--------------
ವೇದಮೂರ್ತಿ ಸಂಗಣ್ಣ
ಎದೆ ಬಿರಿವನ್ನಕ್ಕ, ಮನ ದಣಿವನ್ನಕ್ಕ, ನಾಲಗೆ ನಲಿನಲಿದೋಲಾಡುವನ್ನಕ್ಕ ನಿಮ್ಮ ನಾಮಾಮೃತವ ತಂದೆರೆಸು ಕಂಡಯ್ಯಾ, ಎನಗೆನ್ನ ತಂದೆ. ಬಿರಿಮುಗುಳಂದದಿ ಎನ್ನ ಹೃದಯ ನಿಮ್ಮ ಶ್ರೀಚರಣದ ಮೇಲೆ ಬಿದ್ದರಳುಗೆ, ಕೂಡಲಸಂಗಯ್ಯಾ. 486
--------------
ಬಸವಣ್ಣ
ಅಂಗಕ್ಕಾಚಾರ ಮನಕ್ಕೆ ಜ್ಞಾನ ಸಮರಸಾದ್ವೈತವಾದ ಮತ್ತೆ ಪುನರಪಿ ಪುನರ್ದೀಕ್ಷೆಯುಂಟೆ ? ಗರುಡಿಯಲ್ಲಿ ಕೋಲಲ್ಲದೆ, ಕಾಳಗದಲ್ಲಿ ಉಂಟೆ ಕೋಲು ? ಭವಿಗೆ ಮೇಲುವ್ರತ ಪುನರ್ದೀಕ್ಷೆಯಲ್ಲದೆ, ಭಕ್ತರಿಗುಂಟೆ ? ವ್ರತತಪ್ಪಿ ಅನುಗ್ರಹವಿಡಿದ ನರಕಿಗಳಿಗೆ ಮುಕ್ತಿ ಇಲ್ಲ ಎಂದೆ ಅಮುಗೇಶ್ವರಲಿಂಗದಲ್ಲಿ.
--------------
ಅಮುಗೆ ರಾಯಮ್ಮ
ನಿಜಾ.......[ನಂದ ನಿಬ್ರ್ಥಿನ್ನವೆಂಬುವ ನಿತ್ಯನಾತನ ಪಿಂಡದೊಳಗೆ ನಿಶ್ಚಿಂತಾಮೃತವೆಂಬ ದಿವ್ಯಾಮೃತ ಕುಂಭವುಂಟು. ನಾಬ್ಥಿಸ್ಥಾನದೊಳಗೆ ಇದ್ದಂಥಾ ಮಹಾಕುಂಭದೊಳಗೆ ಮಹಾನುಭಾವವೆಂಬುದೊಂದು ಸುವರ್ಣಮಂಟಪವುಂಟು. ಆ ಸುವರ್ಣ ಮಂಟಪದೊಳಗೆ ರತ್ನಸಿಂಹಾಸನವೆಂಬ ಮಹಾಪೀಠಿಕೆಯುಂಟು. ಆ ಪೀಠಿಕೆಯ [ಮೇಲೆ] ಸಾಸಿರ ಅನಂತಕೋಟಿಪ್ರಭೆಯೊಳಗಣ ಕಳಾಸ್ವರೂಪವಪ್ಪುದೊಂದು ಪ್ರಾಣಲಿಂಗ. ಆ ರತ್ನಪೀಠಿಕೆಯ ಮೇಲೆ ಪ್ರಕಾಶಿಸುತ್ತಿರ್ಪ ಲಿಂಗ. ಆ ಲಿಂಗವೆ ತನ್ನ ಸ್ವಯಾನಂದದಿಂದ ಊಧ್ರ್ವವೆಂಬ ಚಕ್ರಸ್ಥಾನದೊಳಗೆ ನಿಂದು ನೋಡುತ್ತಿರಲು ಒಂದು ಕಮಲ ವಿಕಸಿತವಾಯಿತ್ತು. ಆ ಕಮಲದೊಳಗೊಂದು ದಿವ್ಯಜ್ಞಾನವೆಂಬುದೊಂದು [ಲಿಂಗ]. ತಲ್ಲಿಂಗ ತೊಳಗಿ ಬೆಳಗಿ ಪ್ರಕಾಶಿಸಿತ್ತು. ನೋಡುತಿರಲು ತಾನೆ ಪರಂಜ್ಯೋತಿ ದಿವ್ಯವಸ್ತು ಎಂದೆ ಕಾ[ಣಾ], ಬಸವಪ್ರಿಯ ವಿಶ್ವಕರ್ಮಟಕ್ಕೆ ಕಾಳಿಕಾವಿಮಲ ರಾಜೇಶ್ವರಲಿಂಗದರಿಕೆಯಾಗಿ.
--------------
ಬಾಚಿಕಾಯಕದ ಬಸವಣ್ಣ
ರೋಗಿಗೆ ಹಾಲು ಸಿಹಿಯಪ್ಪುದೆ? ಗೂಗೆಗೆ ರವಿ ಲೇಸಪ್ಪುದೆ? ಚೋರಗೆ ಬೆಳಗು ಗುಣವಪ್ಪುದೆ? ಭವಸಾಗರದ ಸಮಯದಲ್ಲಿದ್ದವರು ನಿರ್ಭಾವನ ಭಾವವನೆತ್ತ ಬಲ್ಲರು? ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ಎಂದೆ.
--------------
ಘಟ್ಟಿವಾಳಯ್ಯ
ಬರಿಹುಂಡನ ಗಡಿವಾಡದಲ್ಲಿರಿಸಿದಂತೆ, ಒಡೆಯರಿಲ್ಲದ ಮನೆಯ ತುಡುಗುಣಿ ಹೊಕ್ಕು, ಗಡಬಡಿಯ ಮಾಡಿದಂತೆ, ಅಂಗಕ್ಕೆ ಕುರುಹಿಲ್ಲದೆ, ಮನಕ್ಕರಿವಿಲ್ಲದೆ ತ್ರಿಭಂಗಿಯಲ್ಲಿ ನೊಂದವಂಗೆ, ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವಿಲ್ಲಾ ಎಂದೆ.
--------------
ಶಿವಲೆಂಕ ಮಂಚಣ್ಣ
ಅಂಡಜ ಇಪ್ಪತ್ತೊಂದು ಲಕ್ಷ, ಪಿಂಡಜ ಇಪ್ಪತ್ತೊಂದು ಲಕ್ಷ, ಉದ್ಬಿಜ ಇಪ್ಪತ್ತೊಂದು ಲಕ್ಷ, ಜರಾಯುಜ ಇಪ್ಪತ್ತೊಂದು ಲಕ್ಷ, ಇಂತು ಎಂಬತ್ತುನಾಲ್ಕುಲಕ್ಷ ಜೀವರಾಶಿಗಳೊಳಗೆ ಒಂದೊಂದು ಜನ್ಮದೊಳಗೆ ಸಹಸ್ರ ಸಹಸ್ರವೇಳೆ ಹುಟ್ಟಿಬಂದ ಅನೇಕ ದುಃಖವಂತಿರಲಿ. ಮುಂದೆ ಮನುಷ್ಯದೇಹವಿಡಿದು ಬಂದ ದುಃಖಮಂ ಪೇಳ್ವೆನದೆಂತೆನೆ : ತಂದೆಯ ವಿಕಾರದದೆಸೆಯಿಂದೆ ಬಂದು ಬಿಂದುರೂಪಾಗಿ, ತಾಯಿಯ ಬಸುರಲ್ಲಿ ನಿಂದು ಒಂಬತ್ತುತಿಂಗಳ ಪರಿಯಂತರ ಅವಯವಂಗಳು ಬಲಿದು ಪಿಂಡವರ್ಧನವಾಗಿ, ಕದ್ದ ಕಳ್ಳನ ಹೆಡಗೈಯಕಟ್ಟಿ ಸೆರೆಮನೆಯಲ್ಲಿ ಕುಳ್ಳಿರಿಸುವಂತೆ, ಗರ್ಭವೆಂಬ ಸೆರೆಮನೆಯಲ್ಲಿ ಶಿಶುವು ಮುಚ್ಚಿದ ಕಣ್ಣು, ಮುಗಿದ ಬಾಯಾಗಿ, ಕುಕ್ಕುಟಾಸನದಲ್ಲಿ ಕುಳ್ಳಿರ್ದು, ಕಡಿವ ಜಂತುಜಂಗುಳಿಯ ಬಾಧೆ, ಸುಡುವ ಜಠರಾಗ್ನಿಯ ಬಾಧೆ, ಎಡದಲ್ಲಿ ಮೂತ್ರದ ತಡಿಕೆಯ ಬಾಧೆ, ಬಲದಲ್ಲಿ ಅಮೇಧ್ಯದ ಹಡಿಕೆಯ ಬಾಧೆ, ಇಂತಿವು ಮೊದಲಾದನಂತಕೋಟಿ ಬಾಧೆಗಳಿಂದೆ ದಿನದಿನಕ್ಕೆ ದುಃಖಮಂಬಡುತಿರ್ದು, ಆ ಮೇಲೆ ಜಾತಿಸ್ಮರತ್ವ ಉದಯವಾಗಿ, ತನ್ನ ಹಿಂದಣ ಧರ್ಮಕರ್ಮಂಗಳ ಪುಣ್ಯಪಾಪಂಗಳ ಅರಹು ಮರಹುಗಳನಾರೈದು ನೋಡಿ, ಹಿಂದರಿಯದ ಪಾಪದ ದೆಸೆಯಿಂದೆ ಈ ಗರ್ಭನರಕಕ್ಕೆ ಬಂದೆ, ಇನ್ನು ಮುಂದೆ ತೆರನೇನೆಂದು ತನ್ನೊಳಗೆ ತಾನೆ ಚಿಂತಿಸಿ ಸರ್ವರಿಗೆ ಪರಮೇಶ್ವರನೇ ಕರ್ತನು, ಸರ್ವರ ಭವಪಾಶಂಗಳ ಛೇದಿಸುವಾತನು ಪರಮೇಶ್ವರನೆಂದರಿದು, ಮನದಲ್ಲಿ ನಿಶ್ಚೈಸಿಕೊಂಡು ಆ ಪರಮೇಶ್ವರಂಗೆ ಶಿವಧೋ ಶಿವಧೋ ಎಂದು ಮೊರೆಯಿಡುತ್ತ ಶಿವಧ್ಯಾನಮಂ ಮಾಳ್ಪ ಸಮಯದಲ್ಲಿ ಕೋಟಿಸಿಡಿಲು ಹೊಯ್ದಂತೆ ವಿಷ್ಣುಪ್ರಸೂತಿಯೆಂಬ ಗಾಳಿ ಬೀಸಲು, ಅದಕಂಡು ಥರಥರನೆ ನಡುಗಿ ಧ್ಯಾನಪಲ್ಲಟವಾಗಿ ದಿಗ್‍ಭ್ರಮಣೆಗೊಂಡು ಊಧ್ರ್ವಮುಖವಾಗಿ ಕುಳಿತಿರ್ದ ಶಿಶುವು ಗಿರ್ರನೆ ತಿರುಗಿ ತಲೆಕೆಳಗಾಗಿ ಕರ್ತಾರನ ಕಂಬೆಚ್ಚಿನಲ್ಲಿ ಚಿನ್ನದ ಸಲಾಕೆ ತೆಗವಂತೆ, ಬಚ್ಚಲಹುಳುವಿನಂದದಿ ಯೋನಿಯೆಂಬ ಸೂಕ್ಷ್ಮದ್ವಾರದಿಂದೆ ಪೊರಮಟ್ಟು ಹುಟ್ಟಿದಲ್ಲಿ ಕೋಟಿಬಾಧೆಗಳಿಂದ ನೊಂದು ಹವ್ವನೆ ಹಾರಿ ಕಡುದುಃಖಮಂಬಟ್ಟು ಪಿಂದಣ ಜಾತಿಸ್ಮರತ್ವ ಕೆಟ್ಟು, ಮತಿ ಮಸುಳಿಸಿ, ತನ್ನ ಮಲಮೂತ್ರಂಗಳಲ್ಲಿ ತಾ ಹೊರಳಾಡಿ ಬಾಲಲೀಲೆಯ ಸುಖದುಃಖಂಗಳನನುಭವಿಸಿ, ಆ ಬಾಲಲೀಲೆಯು ಹಿಂದುಳಿದ ಮೇಲೆ ಯೌವನದ ವಯಸ್ಸೊದಗಿದಲ್ಲಿ, ಕಾಮದಲ್ಲಿ ಕರಗಿ ಕ್ರೋಧದಲ್ಲಿ ಕೊರಗಿ ಮದಮತ್ಸರಂಗಳಲ್ಲಿ ಮುಂದುಗೆಟ್ಟು ನಾನಾ ವ್ಯಾಪಾರವನಂಗೀಕರಿಸಿ ಬಂದ ಯೋನಿಯೆಂದರಿಯದೆ, ಉಂಡ ಮೊಲೆಯೆಂದರಿಯದೆ, ಕಾಮವಿಕಾರ ತಲೆಗೇರಿ ವಿಷಯಾತುರನಾಗಿ, ಈಳಿಗಾರನ ದೆಸೆಯಿಂದ ಈಚಲಮರ ನಿಸ್ಸಾರವಾದಂತೆ, ಸ್ತ್ರೀಯರ ಸಂಗದಿಂದೆ ದೇಹದೊಳಗಣ ಊರ್ಧ್ವಬಿಂದು ಜಾರಿ ಜಾರಿ ಇಳಿದು ಸೋರಿ ಸೋರಿ ಹೋಗಿ ದೇಹವು ನಿಸ್ಸಾರವಾಗಿ, ಯೌವನದ ಬಲಗೆಟ್ಟು ಮುಪ್ಪಾವರಿಸಿ ಅಚೇತನಗೊಂಡು ಸರ್ವಾಂಗವೆಲ್ಲ ನೆರೆತೆರೆಗಳಿಂದ ಮುಸುಕಲ್ಪಟ್ಟಾತನಾಗಿ, ಆದ್ಥಿ ವ್ಯಾದ್ಥಿ ವಿಪತ್ತು ರೋಗ ರುಜೆಗಳಿಂದೆ ಬಹು ದುಃಖಬಟ್ಟು, ಎದೆ ಗೂಡುಗಟ್ಟಿ, ಬೆನ್ನು ಬಾಗಿ, ಕಣ್ಣು ಒಳನಟ್ಟು, ಶರೀರ ಎಳತಾಟಗೊಂಡು, ಕಾಲಮೇಲೆ ಕೈಯನೂರಿ ಕೋಲವಿಡಿದು ಏಳುತ್ತ, ನಾನಾ ತೆರದ ದುಃಖಧಾವತಿಯಿಂದೆ ಆತ್ಮ ಕೆಟ್ಟು ನಷ್ಟವಾಗಿ ಹೋಯಿತ್ತು ನೋಡಾ. ಇದ ಕಂಡು ನಾನಂಜಿ ಮರಳಿ ಜನ್ಮಕ್ಕೆ ಬರಲಾರದೆ ನಿಮ್ಮ ಮೊರೆಹೊಕ್ಕೆನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ದೇವರಾಜ್ಯದಲ್ಲಿ, ಧಾರೆಯ ಭೋಜನ ಅರಮನೆಯ ಓಲಗದೊಳಗೆ ಹೊಂಪುಳಿವರಿವುತ್ತ ನಾಲ್ಕೂದಿಕ್ಕಿನಲ್ಲಿ ನಾಲ್ವರ ಫಣಿಯ ಬೆಳಗು. ಜಾಣಭಾಷೆಯಲ್ಲಿ ಮಧ್ಯದಲೊಬ್ಬಳು, ಆಣತಿಯ ಸರವು. ಮಹಾದೇವಿ ಗಾಂಧಾರಿಯನು ತೋರಿ, ಒದವಿಸಿದ ಮಧುಮಾಧವಿಯನು ಭೋಜ ಗದ್ಯವನೋದಲು, ಶಿವನು ಕೇಳುತ್ತಿರೆ ಬಾಣಸಿಗ ಹಡಪದವನೆ ಬಲ್ಲನು ಕಾಣಾ. ಕೊಂಕಿಲ್ಲದೆ ಶಬುದ ರಸಭೇದವನು ರಾಣಿ ಬಲ್ಲಳು. ಕುಮುದ ಪಾತ್ರವಿಧಾಂತ ಮಾವಟಿಗ ಭೇದವನು ಮೇಲೆ ಅಂಗರಿಕನು ದೀವಟಿಗೆ ಧಾರೆವಟ್ಟದ ಜಾಣನು ಅಲ್ಲಿ ಚಂಬಕನ ಕಹಳೆ ಭೋರೆಂದು ಬಾರಿಸಿ ಪ್ರತಾಪದ ಕದಳಿಗೆ ಎದೆ ದಲ್ಲಣ. ಆರುಬಣ್ಣದ ವಸ್ತುವ ಮೂರು ಬಣ್ಣಕ್ಕೆ ತಂದು, ಕೇವಣಿಸಿದನು ಕಮಠ ಸುರಥ ಕವಾಹಾರದಾರದ ಖೂಳರ ನಾಲ್ವರ ಬಯಕೆಯನು, ದೇವ ಬಳ್ಳೇಶ್ವರನ ಕನ್ನಡ ವಿಪರೀತ.
--------------
ಬಳ್ಳೇಶ ಮಲ್ಲಯ್ಯ
ಮಾರುತನಲ್ಲಿ ಬೆರೆದ ಗಂಧದಂತೆ, ಸುರತದಲ್ಲಿ ಬೆರೆದ ಸುಖದಂತೆ, ಮಚ್ಚಿದಲ್ಲಿ ಕೊಡುವ ಉಚಿತದಂತೆ, ಭಕ್ತರಿಗದೆ ಹಾದಿ ಎಂದೆ ನಾಸ್ತಿನಾಥ.
--------------
ಗೊಗ್ಗವ್ವೆ
ಮೂರಂಗುಲದಲ್ಲಿ ಅಳೆದು, ಐದಂಗುಲದಲ್ಲಿ ಪ್ರಮಾಣಿಸಿ ಆರಂಗುಲದಲ್ಲಿ ವಟ್ಟಕ್ಕೆ ಶುದ್ಧವಾಯಿತ್ತು. ಎಂಟರಳತೆ ಹದಿನಾರರ ಚದುರಸ ಮೂವತ್ತೆರಡರ ಮಧ್ಯದಲ್ಲಿ ಹಸ್ತಕಂಬಿಯನಿಕ್ಕಿ ಮೂರರಲ್ಲಿ ಭಾಗಿಸಲಾಗಿ, ಎರಡು ಒಳಗು ನಿಂದಿತ್ತು. ಒಂದು ಹೊರಗಾದ ಕೈಸಾಲೆಯಾಯಿತ್ತು. ಈ ಕೆಲಸವ ಹೊರಗೆ ಬಾಚಿಯಲ್ಲಿ ಸವೆದೆ, ಒಳಗೆ ಉಳಿಯಲ್ಲಿ ಸವೆದೆ. ಇಂತೀ ತೆರನ ತಿಳಿದಡೆ ಬಸವಣ್ಣಪ್ರಿಯ ವಿಶ್ವಕರ್ಮಟಕ್ಕೆ ಕಾಳಿಕಾವಿಮಲ ರಾಜೇಶ್ವರಲಿಂಗವಲ್ಲದಿಲ್ಲಾ ಎಂದೆ.
--------------
ಬಾಚಿಕಾಯಕದ ಬಸವಣ್ಣ
ಸದ್ಭಕ್ತನ ಆಚರಣೆಯ ಕ್ರೀಯೆಂತುಂಟೆಂದಡೆ: ಜಂಗಮದ ಪಾದೋದಕ ಲಿಂಗಕ್ಕೆ ಮಜ್ಜನವ ಮಾಡುವಲ್ಲಿ ಜಂಗಮದ ಕುಂದು ನಿಂದೆಯ ಕೇಳಬಾರದು. ಜಂಗಮಪ್ರಸಾದವ ಲಿಂಗಕ್ಕೆ ಕೊಡುವಲ್ಲಿ ಅರ್ಥ ಪ್ರಾಣ ಅಬ್ಥಿಮಾನವ ಮುಟ್ಟಿದಲ್ಲಿ ಚಿತ್ತದಲ್ಲಿ ಹೆಚ್ಚು ಕುಂದು ತೋರಿದಾಗಲೆ ಪ್ರಸಾದಕ್ಕೆ ದೂರ. ಇದು ಕಾರಣ, ದೇಹಭಾವವಳಿದವಂಗಲ್ಲದೆ ಪಾದೋದಕ ಪ್ರಸಾದವಿಲ್ಲಾ ಎಂದೆ. ವಿಶ್ವಾಸವುಂಟಾದಲ್ಲಿ ಕುರುಹಿನ ಮುದ್ರೆಯ ಬಯಕೆ ಉಂಟೆ ಅಯ್ಯಾ? ಅವಿಶ್ವಾಸವುಳ್ಳವಂಗೆ ಗುರುಚರದ ಮಾರ್ಗವಿಲ್ಲಾಯೆಂದೆ. ಸದಾಶಿವಮೂರ್ತಿಲಿಂಗವ ಹೀಗರಿವುದಕ್ಕೆಠಾವ ಕಾಣೆ.
--------------
ಅರಿವಿನ ಮಾರಿತಂದೆ
ತನುವ ಮರೆಯಬೇಕೆಂದು ಗುರುವ ತೋರಿ, ಮನವ ಮರೆಯಬೇಕೆಂದು ಲಿಂಗವ ತೋರಿ, ಧನವ ಮರೆಯಬೇಕೆಂದು ಜಂಗಮವ ತೋರಿ, ಲೇಸ ಮರೆದು ಕಷ್ಟಕ್ಕೆ ಕಡಿದಾಡುವ ಭಾಷೆಹೀನರ ಕಂಡು ನಾಚಿಕೆಯಾಯಿತ್ತು ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ಎಂದೆ.
--------------
ಘಟ್ಟಿವಾಳಯ್ಯ
ಬಿಂದು ನಾದವ ನುಂಗಿತ್ತೆಂಬರು, ನಾದ ಬಿಂದುವ ನುಂಗಿತ್ತೆಂಬರು. ಕಳೆ ಬಿಂದುವ ನುಂಗಿತ್ತೆಂಬರು, ಬಿಂದು ಕಳೆಯ ನುಂಗಿತ್ತೆಂಬರು. ಈ ಮೂರರ ಅಂದವ ಅತೀತ ತಿಂದಿತ್ತು, ತಿಂದವನ ತಿಂದ ಅಂದವ ನೋಡಾ. ಇದಕ್ಕೊಂದೂ ಇಲ್ಲಾ ಎಂದೆ, ಸಂದನಳಿದ ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಕೈಯಲ್ಲಿ ಹಿಡಿದಡೆ ಕಲ್ಲು ಸಿಕ್ಕಿತ್ತಲ್ಲದೆ, ಲಿಂಗವಿಲ್ಲಾ ಎಂದೆ. ಕಣ್ಣಿನಲ್ಲಿ ನೋಡಿ ಕಬಳೀಕರಿಸಿದೆನೆಂದಡೆ ಅದು ಕವುಳಿಕವೆಂಬೆ. ಮನದಲ್ಲಿ ನೆನೆದು ಘನದಲ್ಲಿ ನಿಂದೆಹೆನೆಂದಡೆ ಭವಕ್ಕೆ ಬೀಜವೆಂದೆ. ಕೈಗೂ ಕಣ್ಣಿಗೂ ಮನಕ್ಕೂ ಬಹಾಗ ತೊತ್ತಿನ ಕೂಸೆ ? ಕಂಡಕಂಡವರ ಅಪ್ಪಾ ಅಪ್ಪಾ ಎಂಬ ಇಂತೀ ಸುಚಿತ್ತರನರಿಯದೆ, ಉದ್ಯೋಗಿಸಿ ನುಡಿವ ಜಗದ ಭಂಡಕರನೊಲ್ಲೆನೆಂದ, ನಿಃಕಳಂಕ ಮಲ್ಲಿಕಾರ್ಜುನ.
--------------
ಮೋಳಿಗೆ ಮಾರಯ್ಯ
ಇನ್ನಷ್ಟು ... -->