ಅಥವಾ

ಒಟ್ಟು 139 ಕಡೆಗಳಲ್ಲಿ , 37 ವಚನಕಾರರು , 108 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

`ಹಸ್ತಮಸ್ತಕಸಂಯೋಗಾದ್ಭೂತಿಪಟ್ಟಸ್ಯ ಧಾರಣಾತ್ | ಶಿವದೇವೇತಿ ವಿಜ್ಞೇಯಃ ಸರ್ವಪಾಪೈಃ ಪ್ರಮುಚ್ಯತೇ || ಎಂದು ವೀರಶೈವಾಚಾರ್ಯನ ಹಸ್ತದ ವೀರಮಾಹೇಶ್ವರನಪ್ಪ ಶಿಷ್ಯನ ಮಸ್ತಕದ ಸಂಯೋಗದ ದೆಸೆಯಿಂದಲೂ ವಿಭೂತಿಯ ಪಟ್ಟವ ಧರಿಸೂದರ ದೆಸೆಯಿಂದಲೂ ಆ ಶಿಷ್ಯನು....ದೇಹಿ ಎಂದರಿಯಲ್ತಕ್ಕಾತನು. ಅಂತಪ್ಪ ವೀರಮಾಹೇಶ್ವರನು ಎಲ್ಲಾ ಪಾಪಂಗಳಿಂ ದಲೂ ಬಿಡಲ್ಪಡುತ್ತಿಹನಯ್ಯಾ ಶಾಂತವೀರೇಶ್ವರಾ.
--------------
ಶಾಂತವೀರೇಶ್ವರ
ಘಟದ ಮಧ್ಯದಲ್ಲಿ ನಿಂದವನ, ಆತ್ಮನ ಚಿತ್ತದಲ್ಲಿ ಅರಿದವನ, ಅಲ್ಲ ಆಹುದೆಂದು ಗೆಲ್ಲ ಸೋಲಕ್ಕೆ ಹೋರದವನ, ಎಲ್ಲಾ ಜೀವಂಗಳಲ್ಲಿ ದಯವುಳ್ಳವನ, ಆತನೆಲ್ಲಿಯೂ ಸುಖಿಯೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಇನ್ನು ವಿಶ್ವಾದ್ಥಿಕ ಮಹಾರುದ್ರನುತ್ಪತ್ಯವೆಂತೆಂದಡೆ : ಅನಂತ ಬ್ರಹ್ಮಾಂಡ ಅನಂತ ಕೋಟಿ ಲೋಕಧರನಾದ ಪರಾಪರನಾದ ಮಹಾಸದಾಶಿವನಾದವನು ತನ್ನ ನಿಜಜಾÕನ ಹಿರಿಣ್ಯಗರ್ಭದಲ್ಲಿ ವಿಶ್ವಾದ್ಥಿಕ ಮಹಾರುದ್ರನಂ ನಿರ್ಮಿಸಿ ತನ್ನ ಪಂಚಮುಖದಿಂದ ಪೃಥ್ವಿ ತೇಜ ವಾಯುವಾಕಾಶವೆಂಬ ಮಹಾಭೂತ ಬ್ರಹ್ಮಾಂಡದೊಳು ಚತುರ್ದಶ ಭುವನಂಗಳು, ಸಪ್ತ ಕುಲಪರ್ವತಂಗಳು ಮೊದಲಾದ ಅನಂತ ಗಿರಿ ಗಹ್ವರಂಗಳಂ, ಸಮಸ್ತ ಗ್ರಹರಾಶಿ ತಾರಾಪಥಂಗಳಂ ಗಬ್ರ್ಥೀಕರಿಸಿಕೊಂಡು ನಿರ್ಮಿಸೆಂದು ಬೆಸನಂ ಕೊಟ್ಟು ಕಳುಹಲು, ಮಹಾಪ್ರಸಾದವೆಂದು ಕೈಕೊಂಡು ಆ ಭೂತಬ್ರಹ್ಮಾಂಡದೊಳು ನಿರ್ಮಿಸಿದನೆಂತೆಂದಡೆ : ಜಲದ ಮೇಲೆ ಕಮಠನ ನಿರ್ಮಿಸಿದ. ಆ ಕಮಠನ ಮೇಲೆ ಮಹಾವಾಸುಗಿಯಂ ನಿರ್ಮಿಸಿದ. ಆ ಮಹಾವಾಸುಗಿಯ ಮೇಲೆ ಅಷ್ಟದಿಗ್ಗಜಂಗಳ ನಿರ್ಮಿಸಿದನು ಆ ವಿಶ್ವಾದ್ಥಿಕ ಮಹಾರುದ್ರನು. ಆ ಅಷ್ಟದಿಗ್ಗಜಂಗಳ ಮೇಲೆ ಸಕಲವಾದ ಜೀವಂಗಳಿಗೂ ಸಕಲವಾದ ಪದಾರ್ಥಂಗಳಿಗೂ ಇಹಂತಾಗಿ ಮಹಾಪೃಥ್ವಿಯಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಮಹಾಮೇರುಪರ್ವತದ ತಾವರೆಯ ನಡುವಣ ಪೀಠಿಕೆಯ ಕ್ರಮದಲ್ಲಿ ನಡೆಯ ಪ್ರಮಾಣು ಹದಿನಾರು ಸಾವಿರದ ಯೋಜನ ಪ್ರಮಾಣು. ಉದ್ದ ಎಂಬತ್ನಾಲ್ಕು ಸಾವಿರ ಯೋಜನದುದ್ದ. ವಿಸ್ತೀರ್ಣ ಮೂವತ್ತೆರಡು ಸಾವಿರಯೋಜನ ಪ್ರಮಾಣು ಉಂಟಾಗಿಹಂತಾಗಿ ಮೇರುತನಕ ಸುತಾಳ ತಾಳ, ಪಂಚಾಶತಕೋಟಿ ಸೋಪಾನಂಗಳುಂಟಾಗಿ ದಿವ್ಯರೂಪಾಗಿ ನಿರ್ಮಿಸಿದನು. ಆ ಮೇರುವಿನ ಪೂರ್ವದೆಸೆಯಲ್ಲಿ ಪದ್ಮರಾಗವು, ಆಗ್ನೆಯಲ್ಲಿ ವಜ್ರ, ದಕ್ಷಿಣದಲ್ಲಿ ಮೌಕ್ತಿಕ, ನೈರುತ್ಯಭಾಗದಲ್ಲಿ ನೀಲ, ಪಶ್ಚಿಮದ ದೆಸೆಯ ವಿಭಾಗದಲ್ಲಿ ವೈಡೂರ್ಯ, ವಾಯುವ್ಯದಲ್ಲಿ ಚಿಂತಾಮಣಿ, ಉತ್ತರದಲ್ಲಿ ರತ್ನಕನಕ, ಈಶಾನ್ಯದಲ್ಲಿ ತಾಮ್ರ, ಮೇರುವಿನ ಮಧ್ಯದಲ್ಲಿ ಪುಷ್ಯರಾಗ ಜಾÕನ ದೃಷ್ಟಿಗಳುಂಟಾಗಿ ಪರಿಪೂರಿತಗಳಿಹಂತಾಗಿ ಗಿರಿಯ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ಮೇರುವಿನ ಮೇಲುಳ್ಳ ವೃಕ್ಷಂಗಳೆಲ್ಲ ಕಲ್ಪವೃಕ್ಷಂಗಳು. ಆ ಮೇರುವಿನ ಮೇಲುಳ್ಳ ಮೃಗಂಗಳೆಲ್ಲ ಅಚಾಮಚರಿತ್ರಂಗಳು. ಆ ಮೇರುವಿನ ಮೇಲುಳ್ಳ ಗೋವೆಲ್ಲ ಕಾಮಧೇನುಗಳು. ಅಲ್ಲಿದ್ದ ಮನುಷ್ಯರೆಲ್ಲ ಪರಮಾತ್ಮರು. ಅಲ್ಲಿದ್ದ ಸ್ತ್ರೀಯರೆಲ್ಲ ದೇವಸ್ತ್ರೀಯರು. ಆಹಾರಂಗಳೆಲ್ಲ ಅಮೃತಾಹಾರ, ನೀರೆಲ್ಲ ರಜಸ್ತಳೇಯ ; ಅಲ್ಲಿಯ ಮಣ್ಣೆಲ್ಲ ಕಸ್ತೂರಿ ಕುಂಕುಮಾದಿಗಳೆನಿಸಿಕೊಂಬುದು. ಅಲ್ಲಿಯ ಕಾಷ್ಠಂಗಳೆಲ್ಲ ಸುಗಂಧಂಗಳು. ಆ ಮೇರುವಿನ ದೇವತೆಗಳಿಗೂ ಮುನಿಗಳಿಗೂ ಅನಂತ ಸಿದ್ಧರಿಗೂ ಅನಂತ ಯೋಗಿಗಳಿಗೂ ಜೋಗಿಗಳಿಗೂ ಪುರಂಗಳು ಗೃಹಂಗಳು ಗುಡಿಗಳು ಬಿಲದ್ವಾರಂಗಳುಂಟಾಗಿ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ಮಹಾಮೇರುವಿಗೆ ನಾಲ್ಕು ಬಾಗಿಲು, ಎಂಟು ಸ್ವರ್ಣಕಂಡಿಗಳು, ಹದಿನಾರು ಮಕರತೋರಣಗಳು, ಮೂವತ್ತೆರಡು ಸೋಮವೀದಿಗಳು, ಅರವತ್ನಾಲ್ಕು ಸಂದುಗಳುಂಟಾಗಿ ಸರ್ವಸಂಪೂರ್ಣವಾಗಿ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ಮಹಾಮೇರುವಿನ ಮಧ್ಯದಲ್ಲಿ ಶ್ರೀ ಮಹಾದೇವರಿಗೆ ಶಿವಪುರಮಂ ನಿರ್ಮಿಸಿದನು. ಪಂಚಸಹಸ್ರಯೋಜನ ಚತುಃಚಕ್ರಾಕಾರವಾಗಿ, ನವರತ್ನಖಚಿತವಾಗಿ, ಅಷ್ಟದಳವೇಷ್ಟಿತವಾಗಿ, ಅಷ್ಟಧ್ವಾನಂಗಳುಂಟಾಗಿ, ಶತಸಹಸ್ರಕೋಟಿ ಕನಕಗೃಹಂಗಳುಂಟಾಗಿ. ಪ್ರಮಥಗಣಂಗಳು, ನಂದಿ, ಮಹಾನಂದಿಕೇಶ್ವರ ಮಹಾಗಣಂಗಳು ಅಷ್ಟದಿಕ್ಪಾಲರು, ಏಕಾದಶರುದ್ರರು, ದ್ವಾದಶಾದಿತ್ಯರು, ನವಗ್ರಹಂಗಳು, ಬ್ರಹ್ಮ ವಿಷ್ಣು ನಾರದ ಸುಖದಲ್ಲಿಪ್ಪಂತಾಗಿ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ಮೇರುವಿನ ಬಲದ ದೆಸೆಯಲ್ಲಿ ಬ್ರಹ್ಮಪುರವು ತ್ರಿಕೋಣಾಕಾರವಾಗಿ ಅನಿಲಪ್ರಕಾರವೇಷ್ಟಿತವಾಗಿ, ಅಷ್ಟದ್ವಾರಂಗಳುಂಟಾಗಿ ಐನೂರು ಕೋಟಿ ಕನಕಗೃಹಂಗಳು ಅಸಂಖ್ಯಾತಕೋಟಿ ಮಹಾಋಷಿಗಳು ಒಡ್ಡೋಲಂಗಗೊಟ್ಟು, ನಾಲ್ಕು ವೇದಂಗಳು ಮೂರ್ತಿಬಾಂಧವರಾಗಿ ಸರಸ್ವತಿಸಮೇತವಾಗಿ ಬ್ರಹ್ಮದೇವರು ಪರಮಾನಂದಸುಖದೊಳಿಪ್ಪಂತಾಗಿ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ಮೇರುವಿನ ವಾಮಭಾಗದಲ್ಲಿ ವಿಷ್ಣುವಿಂಗೆ ವೈಕುಂಠವೆಂಬ ಪುರ ಚಕ್ರಾಕಾರವಾಗಿ ಪದ್ಮರಾಗಪ್ರಕಾಶವೇಷ್ಟಿತವಾಗಿ ಅಷ್ಟದ್ವಾರಂಗಳು ಹತ್ತುನೂರುಕೋಟಿ ಕನಕಗೃಹಂಗಳುಂಟಾಗಿ ಅನಂತಕೋಟಿ ಶಂಕ ಚಕ್ರ ಗದಾಹಸ್ತನಾಗಿ ವೇದ ಓಲೈಸಲಾಗಿ ಶ್ರೀಲಕ್ಷ್ಮೀ ಸಮೇತನಾಗಿ ವಿಷ್ಣು ಪರಮಾನಂದಸುಖದಲ್ಲಿಪ್ಪಂತೆ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ಮೇರುವಿನ ಪೂರ್ವದೆಸೆಯಲ್ಲಿ ದೇವೇಂದ್ರಂಗೆ ಅಮರಾವತಿಯ ಪುರಮಂ ನಿರ್ಮಿಸಿದನು. ಆಗ್ನೇಯ ದೆಸೆಯಲ್ಲಿ ಅಗ್ನಿದೇವಂಗೆ ತೇಜೋವತಿಪುರಮಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ದಕ್ಷಿಣದಿಶಾಭಾಗದಲ್ಲಿ ಯಮದೇವಂಗೆ ಸಿಂಹಾವತಿಯ ಪುರಮಂ ನಿರ್ಮಿಸಿದನು. ನೈಋತ್ಯ ದಿಶಾಭಾಗದಲ್ಲಿ ನೈಋತ್ಯಂಗೆ ಕೃಷ್ಣವತಿಪುರಮಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಪಶ್ಚಿಮ ದಿಶಾಭಾಗದಲ್ಲಿ ವರುಣಂಗೆ ಜಂಜನಿತಪುರಮಂ ನಿರ್ಮಿಸಿದನು. ವಾಯುವ್ಯದಲ್ಲಿ ವಾಯುವಿಂಗೆ ಗಂಗಾವತಿಯಪುರಮಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಉತ್ತರದೆಶೆಯಲ್ಲಿ ಕುಬೇರಂಗೆ ಅಳಕಾಪುರಮಂ ನಿರ್ಮಿಸಿದನು. ಈಶಾನ್ಯದಿಶಾಭಾಗದಲ್ಲಿ ಈಶಾನ್ಯದೇವಂಗೆ ಧವಳಾವತಿಪುರಮಂ ಮೊದಲಾಗಿ ಸಮಸ್ತವಾದ ಪುರಗಳಂ ನಿರ್ಮಿಸಿದನು ವಿಶ್ವಾದ್ಥಿಯಕಮಹಾರುದ್ರನು. ಆ ಮಹಾಮೇರುವಿಂಗೆ ವಳಯಾಕೃತವಾಗಿ ಲವಣ ಇಕ್ಷು ಸುರೆ ಘೃತ ದದ್ಥಿ ಕ್ಷೀರ ಶುದ್ಧಜಲಂಗಳೆಂಬ ಸಪ್ತಸಮುದ್ರಂಗಳಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ಸಮುದ್ರಂಗಳ ನಡುವೆ ಜಂಬೂದ್ವೀಪ, ಪ್ಲಕ್ಷದ್ವೀಪ, ಶುಕ್ಲದ್ವೀಪ, ಕುಶದ್ವೀಪ, ಶಾಕದ್ವೀಪ, ಶಾಲ್ಮಲೀದ್ವೀಪ, ಪುಷ್ಕರದ್ವೀಪ, ಕ್ರೌಂಚದ್ವೀಪವೆಂಬ ಸಪ್ತದ್ವೀಪಂಗಳ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ದ್ವೀಪಂಗಳಿಗೆ ವಳಯಾಕೃತವಾಗಿ ಮಲಯಜಪರ್ವತ, ನೀಲಪರ್ವತ, ಶ್ವೇತಪರ್ವತ, ಋಕ್ಷಪರ್ವತ, ರಮ್ಯಪರ್ವತ, ಉತ್ತರಕುರುಪರ್ವತ, ಸುಗಂಧಪರ್ವತ, ನಿರಾಕಾರಪರ್ವತ, ಉದಾರಪರ್ವತ, ಮಣಿಶಿಖರಪರ್ವತ, ಅರ್ಧಚಂದ್ರಪರ್ವತ, ಮಧುರಪರ್ವತ, ಮಣಿನಾಗಪರ್ವತ, ಮೈನಾಕಪರ್ವತ, ಉದಯಾದ್ರಿಪರ್ವತ, ತ್ರಿಪುರಾಂತಕಪರ್ವತ, ಶ್ರೀರಾಮಪರ್ವತ, ಮಾಲ್ಯವಂತಪರ್ವತ, ನಿಷಧಪರ್ವತ, ಹೇಮಕೂಟಪರ್ವತ, ನಿರಾಚಲಪರ್ವತ, ಗಂಧಾಚಲಪರ್ವತ, ನೀಲಾಚಲಪರ್ವತ, ಮಂದಾಚಲಪರ್ವತ, ಮೇರುಮಂದಿರಪರ್ವತ, ಶುಬರೀಶ್ವರಪರ್ವತ, ಕುಮುದಉದಯಾದ್ರಿ, ದೇವಕೂಟ, ವಿಂಧ್ಯಾಚಲ, ಪವನಾಚಲ, ಪರಿಯಾಚಲ, ಚಂದ್ರಾಚಲ, ಧಾರಾಚಲ, ಷಡುಲಕ್ಷ್ಮಿಗಿರಿ, ಮಾನಸಾಂತಗಿರಿ, ತಮಂಧಗಿರಿ, ಚಂದ್ರಗಿರಿ, ನಾಗಗಿರಿ, ಲಘುಗಿರಿ, ಮಕರಗಿರಿ, ದ್ರೋಣಗಿರಿ, ಅನಂತವಜ್ರಗಿರಿ, ಕಪಿಲಗಿರಿ, ನೀಲಗಿರಿ, ಪರಗಿರಿ, ತ್ರಿಪುರಗಿರಿ, ಸಿಂಹಗಿರಿ, ಶ್ರೀಕಂಠಗಿರಿ, ಚಕ್ರವಾಳಗಿರಿಪರ್ವತ, ಇಂದ್ರಗಿರಿಪರ್ವತ, ಲೋಕಪರ್ವತಂಗಳು ಮೊದಲಾದ ಪರ್ವತಂಗಳೆಲ್ಲವಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಇದಕ್ಕೆ ದೇಶಂಗಳಾಗಬೇಕೆಂದು ಪಾಂಚಾಲ, ಬರ್ಬರ, ಮತ್ಸ್ಯ, ಮಗಧ, ಮಲೆಯಾಳ, ತೆಲುಂಗ, ಕಳಿಂಗ, ಕುಕರ, ಕೊಂಕಣ, ತ್ರಿಕರರಾಷ್ಟ್ರ, ಶ್ವಾಸಿನಿ, ಕಂಠರಹಿತ, ಕುತಿಷ್ಟ, ದಶಾರ್ಣ, ಕುರು, ಮುಖಸರ, ಕೌಸಯಿವರ್ಣ, ಆವಂತಿ, ಲಾಳ, ಮಹೇಂದ್ರ, ಪಾಂಡ್ಯ, ಸರ್ವೇಶ್ವರ, ವಿಷ್ಣು, ಶಾಂತಕ, ತುರಾದ್ರ, ಮಗಧಾದ್ರ, ವಿದೇಹ, ಮಗಧ, ದ್ರವಿಳ, ಕಿರಾಂತ, ಕುಂತಳ, ಕಾಮೀರ, ಗಾಂಧಾರ, ಕಾಂಭೋಜ, ಕೀಳುಗುಜ್ಜರ, ಅತಿದೃಷ್ಟ, ನೇಪಾಳ, ಬಂಗಾಳ, ಪುಳಿಂದ್ರ, ಜಾಳೇಂದ್ರ, ಕಲ್ವರ-ಇಂಥಾ ದೇಶಂಗಳೆಲ್ಲವಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಇನ್ನು ಭೂಮಿಯಿಂದಂ ಮೇಲೆ ಮೇಘಮಂಡಲ ಮೊದಲಾಗಿ ಶಿವಾಂಡ ಚಿದ್ಬ ್ರಹ್ಮಾಂಡ ಕಡೆಯಾಗಿ ಎಲ್ಲಾ ಲೋಕಂಗಳಂ ನಿರ್ಮಿಸಿ, ಸಪ್ತಪಾತಾಳವ ನಿರ್ಮಿಸಿದನದೆಂತೆಂದಡೆ: ಅಲ್ಲಿ ಪೃಥ್ವಿಯ ಕೆಳಗೆ ಶತಕಯೋಜನದಲ್ಲಿ ಅತಳಲೋಕದಲ್ಲಿ ಇಶಿತಮಂಡಲಮಂ ನಿರ್ಮಿಸಿದನು. ಅತಳಲೋಕದಿಂದಂ ಕೆಳಗೆ ಕೋಟಿಯೋಜನದುದ್ದದಲ್ಲಿ ವಿತಳಲೋಕದಲ್ಲಿ ಸ್ವರ್ಣ ನಾಗಮಂಡಲಮಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ವಿತಳಲೋಕದಿಂದಲು ಕೆಳಗೆ ದ್ವಿಕೋಟಿ ಯೋಜನದುದ್ದದಲ್ಲಿ ಸುತಳತೋಲಕದಲ್ಲಿ ಕೃಷ್ಣನಾಗಮಂಡಲಮಂ ನಿರ್ಮಿಸಿದನು. ಆ ಸುತಳಲೋಕದಿಂದಲು ಕೆಳಗೆ ರಸಾತಳಲೋಕದಲ್ಲಿ ರತ್ನನಾಗಮಂಡಲಮಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ರಸಾತಳಲೋಕದಿಂದಲು ಕೆಳಗೆ ಚತುಃಕೋಟಿ ಯೋಜನದುದ್ದದಲ್ಲಿ ಮಹಾತಳಲೋಕದಿಂದಲು ಕೆಳಗೆ ಶತಕೋಟಿ ಯೋಜನದುದ್ದದಲ್ಲಿ ಪಾತಾಳಲೋಕದಲ್ಲಿ ಅವಿಷ್ಟಕೆ ಆಧಾರವಾಗಿ ಕಮಠನಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ಕಮಠನ ಮೇಲೆ ಜಲಂಗಳಂ, ಕಮಲಂಗಳಂ, ಮಹಾಪೃಥ್ವಿಯಂ, ಮೇರುಪರ್ವತ ಸಮಸ್ತದೇವಾಸುರಂಗಳಂ ಮಹಾಪೃಥ್ವಿಯು ಸಮಸ್ತ ಸಪ್ತಸಮುದ್ರಂಗಳಂ, ಸಪ್ತದ್ವೀಪಂಗಳಂ ಮೊದಲಾದ ಲೋಕಾದಿಲೋಕ ಪರ್ವತಂಗಳ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ವಿತಳಲೋಕದಿಂದಲೂ ಕೆಳಗೆ ದ್ವಿಕೋಟಿ ಯೋಜನದುದ್ದದಲ್ಲಿ ಅತಳ ವಿತಳ ಸುತಳ ರಸಾತಳ ತಳಾತಳ ಮಹಾತಳ ಪಾತಾಳ ಭೂಲೋಕ, ಭುವರ್ಲೋಕ, ಸ್ವರ್ಲೋಕ, ಮಹರ್ಲೋಕ, ಜನರ್ಲೋಕ, ತಪರ್ಲೋಕ, ಸತ್ಯರ್ಲೋಕ-ಇಂಥ ಲೋಕಂಗಳೆಂಬ ಹದಿನಾಲ್ಕು ಲೋಕಂಗಳಂ ನಿರ್ಮಿಸಿ ಮತ್ತೆ ಸ್ವರ್ಗ-ಮತ್ರ್ಯ-ಪಾತಾಳಗಳ ವಿವರಿಸಿ ನೋಡಿ ಆ ಲೋಕದವರಿಗೆ ವೇದಶಾಸ್ತ್ರಂಗಳಂ ನಿರ್ಮಿಸಿದನದೆಂತೆಂದಡೆ : ವೇದ ವೇದಾಂಗ, ಮಂತ್ರಶಾಸ್ತ್ರ, ತರ್ಕಶಾಸ್ತ್ರ, ಯೋಗಶಾಸ್ತ್ರ, ಜ್ಯೋತಿಷ್ಯಶಾಸ್ತ್ರ, ವೈದ್ಯಶಾಸ್ತ್ರ, ನೀತಿಶಾಸ್ತ್ರ, ಧರ್ಮಶಾಸ್ತ್ರ, ಶಕುನಶಾಸ್ತ್ರ, ಶಸ್ತ್ರಶಾಸ್ತ್ರ, ಶಿಲ್ಪಶಾಸ್ತ್ರ, ಜಲಶಾಸ್ತ್ರ, ಸಾಮುದ್ರಿಕಶಾಸ್ತ್ರ, ನೃಪತಿಶಾಸ್ತ್ರ, ಅಂಜನಶಾಸ್ತ್ರ, ರಸವೈದ್ಯಶಾಸ್ತ್ರ, ಬಿಲ್ಲುಶಾಸ್ತ್ರ, ಗೋಪಶಾಸ್ತ್ರ, ಮನುಷ್ಯಶಾಸ್ತ್ರ, ರಥಿಕಶಾಸ್ತ್ರ, ಅಂಗುಲಿಶಾಸ್ತ್ರ, ಶ್ರವಣಶಾಸ್ತ್ರ, ಗಂಧಪಾದ್ಯಶಾಸ್ತ್ರ, ಭುಜಗಶಾಸ್ತ್ರ, ಯೋಗಿಣಿಶಾಸ್ತ್ರ, ಯಕ್ಷಿಣಿಶಾಸ್ತ್ರ, ಶಬ್ದನೀತಿಶಾಸ್ತ್ರ, ಅಲಂಕಾರಶಾಸ್ತ್ರ, ವಿಶ್ವಶಾಸ್ತ್ರ, ಗಂಡಶಾಸ್ತ್ರ, ವ್ಯಾದ್ಥಿಶಾಸ್ತ್ರ, ಯುದ್ಧಶಾಸ್ತ್ರ, ಹಸರಶಾಸ್ತ್ರ, ಶುಂಭನಶಾಸ್ತ್ರ, ಮುಖಶಾಸ್ತ್ರ, ಬಂಧಶಾಸ್ತ್ರ, ಜಲಸ್ತಂಭಶಾಸ್ತ್ರ, ಅಗ್ನಿಶಾಸ್ತ್ರ, ಕರ್ಮಶಾಸ್ತ್ರ, ಪುರಾಣಿಕಶಾಸ್ತ್ರ, ಇಂಗಶಾಸ್ತ್ರ, ವೈದ್ಯಶಾಸ್ತ್ರ, ಇಂದ್ರಜಾಲ, ಮಹೇಂದ್ರಜಾಲ ಶಾಸ್ತ್ರಂಗಳು ಮೊದಲಾದ ಚೌಷಷ್ಠಿ ವಿದ್ಯಂಗಳ ನಿರ್ಮಿಸಿದನು ನೋಡಾ [ಅಪ್ರಮಾಣ] ಕೂಡಲಸಂಗಯ್ಯನ ಶರಣ ವಿಶ್ವಾದ್ಥಿಕಮಹಾರುದ್ರನು.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಗಲಿಂಗ ಸಹವಾಗಿ, ಆತ್ಮನರಿವು ಸಹವಾಗಿ, ಇಷ್ಟಪದಾರ್ಥವ ಇಷ್ಟ ಲಿಂಗಸಹವಾಗಿ, ರುಚಿಪದಾರ್ಥವ ಆತ್ಮಲಿಂಗಸಹವಾಗಿ, ರಸ ಗಂಧ ರೂಪ ಶಬ್ದ ಸ್ಪರ್ಶ ಪಂಚೇಂದ್ರಿಯಗಳಲ್ಲಿ ದೃಷ್ಟಪದಾರ್ಥವ ಇಷ್ಟಲಿಂಗಸಹವಾಗಿ, ಸ್ಥೂಲ ಸೂಕ್ಷ್ಮ ಕಾರಣದಲ್ಲಿ ಒಳಗು ಹೊರಗು ಸಹವಾಗಿ, ಅಳಿವು ಉಳಿವು ಸಹವಾಗಿ, ಕಾಬುದು ಕಾಣಿಸಿಕೊಂಬುದು ಸಹವಾಗಿ, ರಸವ ಕೊಂಡವನಂತೆ,ಅಸಿಯ ಮೊನೆ ಹರಿದಲ್ಲಿ ರಸ ಬಂದು ನಿಂತಂತೆ, ಎಲ್ಲಿ ಅರ್ಪಿತಕ್ಕೆ ಅಲ್ಲಿ ವಸ್ತು ಸಹವಾಗಿ ಎಲ್ಲಾ ಎಡೆಯಲ್ಲಿ ಪರಿಪೂರ್ಣ ಸಹವಾಗಿ, ಇಪ್ಪುದು ಸಹಭೋಜನಸ್ಥಲ. ಹೀಗಲ್ಲದೆ ಓಗರ ಮೇಲೋಗರವ ಲಾಗುಲಾಗಿಗೆ ತೋರುತ್ತ ಸಕಲಸಂಸಾರದ ಸಾಗರದಲ್ಲಿ ಮುಳುಗುತ್ತ, ಮರವೆ ಅಜ್ಞಾನದಲ್ಲಿ ಮರಳಿ ತಿರುಗುತ್ತ ನಾನಾವಿಕಾರತ್ರಯಗಳಿಂದ ಹುಟ್ಟುತ್ತ ಸಾವುತ್ತ, ಮತ್ತೆ ಸಾವಧಾನ ಸಹಭೋಜನವೆಂದಡೆ ನಾಚಿತ್ತು ಎನ್ನ ಮನ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ಉಭಯವನಳಿದು ಏಕವಾದುದು ಸಹಭೋಜನಸ್ಥಲ.
--------------
ಅಕ್ಕಮ್ಮ
ಇಷ್ಟಗುಟ್ಟೆಂಬುದು, ನಿಶ್ಚಯ ವಸ್ತುವೆಂಬುದು, ಆತ್ಮನೇಕವೆಂಬುದು, ಇಂದ್ರಿಯಂಗಳು ಹಲವೆಂಬುದು, ಅರಿವು ಹಿಂಗಲಿಕೆ ಒಂದೆಂಬುದು, ಅಣೋರಣೀಯಾನ್ಮಹತೋ ಮಹೀಯಾನ್ ಎಂಬುದು, ಎಲ್ಲಾ ದೃಷ್ಟದ ಲಕ್ಷದಲ್ಲಿ ಉಂಟೆಂಬುದು, ಉಭಯಭಾವದಲ್ಲಿ ತೋರಿ ಹರಿದಾಡುವುದು, ಅದು ಚಿತ್ತೋ, ಚಿದಾದಿತ್ಯನೋ, ವಸ್ತು ಭಾವವೋ ? ಇಂತೀ ಲಕ್ಷ ಅಲಕ್ಷಂಗಳೆಂಬ ಗೊತ್ತ ಮೆಟ್ಟಿ, ಬಟ್ಟಬಯಲಾದ ಕಾಮಧೂಮ ಧೂಳೇಶ್ವರನೊಳಗಾದೆ, ಆಗೆನೆಂಬ ಭಾವ ನಿಂದಲ್ಲಿ.
--------------
ಮಾದಾರ ಧೂಳಯ್ಯ
ಭಕ್ತನಲ್ಲಿಯ ಐಕ್ಯಂಗೆ ಪೃಥ್ವಿಯಲ್ಲಿಯ ಆತ್ಮನೆ ಅಂಗ, ಆ ಅಂಗಕ್ಕೆ ಸುಚಿತ್ತದಲ್ಲಿಯ ಭಾವವೇ ಹಸ್ತ. ಆ ಹಸ್ತಕ್ಕೆ ಆಚಾರಲಿಂಗದಲ್ಲಿಯ ಮಹಾಲಿಂಗವೇ ಲಿಂಗ. ಆ ಮಹಾಲಿಂಗಮುಖದಲ್ಲಿ ಎಲ್ಲಾ ಗಂಧದ್ರವ್ಯವನು ಸಮರ್ಪಣವಂ ಮಾಡಿ ತೃಪ್ತಿಯನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಎಲೆ ಎಲೆ, ಭಕ್ತ ಭವಿ ಎಂಬೋ ನೀತಿಯಂ ಕೇಳು : ಭಕ್ತ ದಾರು ? ಭವಿ ದಾರು ? ಎಂದಡೆ, ಎಲಾ, ಯಾವ ಕುಲ[ದವ]ನಾದಡೆ ಸರಿಯೋ ? ಯಾವ ದೇವರು ಆದರೆ ಸರಿಯೋ ? ಎಲ್ಲಾ ದೇವರಿಗೂ ಆತ್ಮಲಿಂಗವಾಗಿಪ್ಪನೇ ಮಹಾದೇವನೆಂದು ಹೇಳುವುದು ಶ್ರುತಿವಾಕ್ಯ. ಇದರೊಳಗೆ ಏಕದೈವವನು ಪಿಡಿದು ಪೂಜಿಸಿ, ಧ್ಯಾನಿಸಿ, ನಮಸ್ಕರಿಸಿ, ಕ್ರಿಯಾಚಾರದಿಂ ನಡೆದು, ನೀತಿಗಳನೋದಿ, ನಿರ್ಮಳಚಿತ್ತನಾದಡೆ ಭಕ್ತ. ಇದಂ ಮರೆದು, ಹಲವು ಕಾಲ ಲಿಂಗಧ್ಯಾನ, ಹಲವು ಕಾಲ ಹರಿಧ್ಯಾನ, ಹಲವು ಕಾಲ ಬ್ರಹ್ಮಧ್ಯಾನ, ಹಲವು ಕಾಲ ಎಲ್ಲಮ್ಮ, ಎಕನಾತಿ, ಶಾಕಿನಿ, ಡಾಕಿನಿ ಕಲ್ಲು ಮರದೊಳಗಿಪ್ಪ ದೇವರ ಪೂಜಿಸಿದಡೆ, ಎಲ್ಲಾರ ಎಂಜಲ ತಿಂಬೋರ ಎಂಜಲ [ತಿಂದು], ಭಕ್ತನೆಂದರಿಯದೆ, ಪ್ರಸಾದದ ಮಹಾತ್ಮೆಯ ತಿಳಿವ ತಿಳಿಯದೆ, ಧನದ ಪಿಶಾಚಿ ಎಂದು ಧರ್ಮ ಪರಹಿತಾರ್ಥವನು ಮರೆದು, ನಿತ್ಯ ನಿತ್ಯ ಅನ್ನಕ್ಲೇಶದಲ್ಲಿ ಹೊರಳುವ[ವ] ಲಿಂಗದೇಹಿಕನಾದಡೆಯು ಬ್ರಾಹ್ಮಣನಾದೆಡೆಯು, ಇವನೇ ಭವಿ. ಇಂತಾ ಭಕ್ತ ಭವಿಗಳ ನೆಲೆಯ ತಿಳಿದು ನಮ್ಮ ಶರಣರು ನಿರ್ಲೇಪ ದೇಹಮಂ ಅಂಗೀಕರಿಸಿ ಪೋದರು ಕಾಣಾ ಕೂಡಲಾದಿ ಚನ್ನಸಂಗಮದೇವಾ.
--------------
ಕೂಡಲಸಂಗಮೇಶ್ವರ
ಸದ್ಯೋಜಾತನ ಮುಟ್ಟಿ, ಪೃಥ್ವಿ ಬಯಲಾಗಿ ಚಿತ್ತ ಪಂಚಕವು ಕೆಟ್ಟವು ನೋಡಾ. ವಾಮದೇವನಿಗೊಲಿದು, ಅಪ್ಪು ಬಯಲಾಗಿ ಬುದ್ಧಿ ಪಂಚಕವು ಕೆಟ್ಟವು ನೋಡಾ. ಅಘೋರನ ನೆರೆದು, ಅಗ್ನಿ ಬಯಲಾಗಿ ಅಹಂಕಾರ ಪಂಚಕವಳಿದು ನಿರಹಂಕಾರಿಯಾದೆನಯ್ಯ. ತತ್ಪುರುಷನನಪ್ಪಿ, ವಾಯು ಬಯಲಾಗಿ ಮನಪಂಚಕವಳಿದವು ನೋಡಾ. ಈಶಾನ್ಯನೊಡಗೂಡಿ, ಆಕಾಶಬಯಲಾಗಿ ಭಾವ ಪಂಚಕವಳಿದು ನಿರ್ಭಾವಿಯಾಗಿ ನಿಜಲಿಂಗೈಕ್ಯನಾದೆನಯ್ಯ. ಎಲ್ಲಾ ಪದಂಗಳ ಮೀರಿ ಮಹಾಲಿಂಗ ಪದದೊಳಗೆ ಸಂಯೋಗವಾಗಿರ್ದೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ನಾಮರೂಪಕ್ರಿಯಾತ್ಮಕವಾಗಿಹ ಪರವಸ್ತುಲಿಂಗ ತಾನೆ ತನ್ನ ಲೀಲಾವಿನೋದಕ್ಕೆ ಅಂಗಸ್ಥಲದಲ್ಲಿ ನಾಮ-ರೂಪ-ಕ್ರಿಯಾತ್ಮನಾಗಿ ಪ್ರತಿಷ್ಠಿಸಲುಪಟ್ಟುದಾಗಿ ಎಲ್ಲಾ ಮುಖಂಗಳೂ ತನ್ನ ಮುಖಂಗಳುಳ್ಳದಾಗಿ ತೋರುತ್ತಿಹುದು ನೋಡಾ. ಇದಕ್ಕೆ ಶಿವಲಿಂಗಾಗಮೇ : ``ಏಕಮೇವ ಪರಂ ಲಿಂಗಂ ಅಂಗ್ದೇಸ್ಮಿನ್ ಸುಪ್ರತಿಷ್ಠಿತಂ | ಸರ್ವತೋ ಮುಖಮಾಭಾತಿ ನಾಮರೂಪಕ್ರಿಯಾತ್ಮನಾ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
>ದಶವಿಧ ಉದಕ, ಏಕಾದಶ ಪ್ರಸಾದ, ಎಲ್ಲಾ ಎಡೆಯಲ್ಲಿ ಉಂಟು. ಮತ್ತೊಂದ ಬಲ್ಲವರ ತೋರಾ ಎನಗೆ. ಲಿಂಗವ ನೆನೆಯದೆ, ಲಿಂಗಾರ್ಪಿತವ ಮಾಡದೆ, ಅನರ್ಪಿತವ ಕೊಳ್ಳದ ಅಚ್ಚಪ್ರಸಾದಿಯ ತೋರಿ ಬದುಕಿಸಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಶಿವಶಿವಾ ದ್ವಿಜರೆಂಬ ಪಾತಕರು ನೀವು ಕೇಳಿ ಭೋ ! ನೀವು ಎಲ್ಲಾ ಜಾತಿಗೂ ನಾವೇ ಮಿಗಿಲೆಂದು, `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂದು, ಬಳ್ಳಿಟ್ಟು ಬಾಸ್ಕಳಗೆಡವುತಿಪ್ಪಿರಿ ನೋಡಾ. `ಆದಿ ಬಿಂದುದ್ಭವೇ ಬೀಜಂ' ಎಂಬ ಶ್ರುತಿಯಿಂ ತಿಳಿದು ನೋಡಲು ಆದಿಯಲ್ಲಿ ನಿಮ್ಮ ಮಾತಾಪಿತರ ಕೀವು ರಕ್ತದ ಮಿಶ್ರದಿಂದ ನಿಮ್ಮ ಪಿಂಡ ಉದಯಿಸಿತ್ತು. ಆ ಕೀವು ರಕ್ತಕ್ಕೆ ಆವ ಕುಲ ಹೇಳಿರೆ ? ಅದೂ ಅಲ್ಲದೆ ಪಿಂಡ ಒಂಬತ್ತು ತಿಂಗಳು ಒಡಲೊಳಗೆ ಕುರುಳು, ಮಲಮೂತ್ರ, ಕೀವು, ದುರ್ಗಂಧ, ರಕ್ತ ಖಂಡಕಾಳಿಜ ಜಂತುಗಳೊಳಗೆ, ಪಾತಾಳದೊಳಗಣ ಕ್ರಿಮಿಯಂತೆ ಹೊದಕುಳಿಗೊಂಬಂದು ನೀನಾವ ಕುಲ ಹೇಳಿರೆ ? ಅದುವಲ್ಲದೆ ಮೂತ್ರದ ಕುಳಿಯ ಹೊರವಡುವಾಗ, ಹೊಲೆ ಮುಂತಾಗಿ ಮುದುಡಿ ಬಿದಲ್ಲಿ, ಹೆತ್ತವಳು ಹೊಲತಿ, ಹುಟ್ಟಿದ ಮಗುವು ಹೊಲೆಯನೆಂದು ನಿಮ್ಮ ಕುಲಗೋತ್ರ ಮುಟ್ಟಲಮ್ಮದೆ, ಹನ್ನೆರಡು ದಿನದೊಂದು ಪ್ರಾಯಶ್ಚಿತ್ತವನಿಕ್ಕಿಸಿಕೊಂಡು ಬಂದು ನಿನ್ನಾವ ಕುಲ ಹೇಳಿರೆ ? ಮುಂಜಿಗಟ್ಟದ ಮುನ್ನ ಕೀಳುಜಾತಿ, ಮುಂಜಿಗಟ್ಟಿದ ಬಳಿಕ ಮೇಲುಜಾತಿಗಳು ಎಂಬ ಪಾತಕರು ನಿಮ್ಮ ನುಡಿ ಕೊರತೆಗೆ ನೀವು ನಾಚಬೇಡವೆ ? ನೀವು ನಾಚದಿರ್ದಡೆ ನಾ ನಿಮ್ಮ ಕುಲದ ಬೇರನೆತ್ತಿ , ತಲೆಕೆಳಗು ಮಾಡಿ ತೋರಿಹೆನು. ನಾನು ಉತ್ತಮದ ಬ್ರಾಹ್ಮಣರೆಂಬ ನಿಮ್ಮ ದೇಹ ಬ್ರಹ್ಮನೊ ? ನಿಮ್ಮ ಪ್ರಾಣ ಬ್ರಹ್ಮನೊ ? ಆವುದು ಬ್ರಾಹ್ಮಣ್ಯ ? ಬಲ್ಲಡೆ ಬಗುಳಿರಿ ! ಅರಿಯದಿರ್ದಡೆ ಕೇಳಿರಿ. ದೇಹ ಕುಲಜನೆಂದಡೆ ಚರ್ಮಕ್ಕೆ ಕುಲವಿಲ್ಲ, ಖಂಡಕ್ಕೆ ಕುಲವಿಲ್ಲ, ನರವಿಂಗೆ ಕುಲವಿಲ್ಲ, ರಕ್ತಕ್ಕೆ ಕುಲವಿಲ್ಲ, ಕೀವಿಂಗೆ ಕುಲವಿಲ್ಲ. ಕರುಳಿಂಗೆ ಕುಲವಿಲ್ಲ, ಮಲಮೂತ್ರಕ್ಕಂತೂ ಕುಲವಿಲ್ಲ, ಒಡಲೆಂಬುದು ಅಪವಿತ್ರವಾಯಿತ್ತು, ಕುಲವೆಲ್ಲಿಯದೊಡಲಿಂಗೆ ? ಅವಂತಿರಲಿ ; ಇನ್ನು ನಿಮ್ಮ ಪ್ರಾಣಕ್ಕೆ ಕುಲವುಂಟೆಂದಡೆ. ಪ್ರಾಣ ದಶವಾಯುವಾದ ಕಾರಣ, ಆ ವಾಯು ಹಾರುವನಲ್ಲ. ಅದುವಲ್ಲದೆ ನಿಮ್ಮ ಒಡಲನಲಗಾಗಿ ಇರಿವ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳು ಉತ್ತಮ ಕುಲವೆಂಬ ಅವು ಮುನ್ನವೆ ಪಾಪಕಾರಿಗಳಾದ ಕಾರಣ, ಅವಕ್ಕೆ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಳಗಣ ಸಪ್ತವ್ಯಸನಂಗಳು ಉತ್ತಮ ಕುಲವೆಂಬ ಅವು ಮುನ್ನವೆ ದುರ್ವ್ಯಸನಂಗಳಾದ ಕಾರಣ, ಅದಕೆಂದೂ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮ ಅಷ್ಟಮದಂಗಳು ಉತ್ತಮ ಕುಲವೆಂಬ ಅವು ನಿನ್ನ ಸುರೆಯ ಸವಿದ ಕೋಡಗದ ಹಾಂಗೆ ನಿಮ್ಮ ಗಾಣಲೀಯವಾದ ಕಾರಣ, ಅವು ಕುಲವಿಲ್ಲ. ನಿಲ್ಲು ! ಬಗುಳದಿರು ! ಇನ್ನು ಒಡಲ ತಾಪತ್ರಯಂಗಳು ಉತ್ತಮ ಕುಲವೆಂಬ ಅವು ನಿಮ್ಮ ಇರಿದಿರಿದು ಸುಡುವ ಒಡಗಿಚ್ಚುಗಳು. ಅವು ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಡಲ ಮುಚ್ಚಿದ ಮಲಮೂತ್ರಂಗಳ ಕುಲವುಂಟೆ ? ಅವು ಅರಿಕೆಯಲಿ ಮಲಮೂತ್ರಂಗಳಾದ ಕಾರಣ, ಅವಕ್ಕೆ ಕುಲವಿಲ್ಲ ನಿಲ್ಲು ! ಮಾಣು ! ಇನ್ನು ಉಳಿದ ಅಂತಃಕರಣಂಗಳಿಗೆ ಉತ್ತಮ ಕುಲವೆಂಬಿರಿ. ಅವ ನೀವು ಕಾಣಿರಿ, ನಿಮ್ಮನವು ಕಾಣವು. ಅದು ಕಾರಣ ಬಯಲಭ್ರಮೆಗೆ ಉತ್ತಮ ಕುಲವುಂಟೆ ? ಇಲ್ಲ ! ಇಲ್ಲ !! ನಿಲ್ಲು ! ಮಾಣು ! ಇಂತು ನಿಮ್ಮ ಪಂಚಭೂತ ಸಪ್ತಧಾತು ಪಂಚೇಂದ್ರಿಯಂಗಳು ಉತ್ತಮ ಕುಲವೆಂಬ ಅವು ಎಲ್ಲಾ ಜೀವರಾಶಿಗೂ ನಿಮಗೂ ಒಂದೇ ಸಮಾನ. ಅದೆಂತೆಂದಡೆ : ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸಮಾಯುಕ್ತಂ ವರ್ಣಾನಾಂ ಕಿಂ ಪ್ರಯೋಜನಂ || ಎಂದುದಾಗಿ, ನಿಮ್ಮ ದೇಹಕ್ಕೆ ಕುಲವಾವುದು ಹೇಳಿರೆ ! ಇದಲ್ಲದೆ ಆತ್ಮನು ದೇಹವ ಬಿಟ್ಟು, ಒಂದು ಘಳಿಗೆ ತೊಲಗಿರಲು ಆ ದೇಹ ಹಡಿಕೆಯಾಗಿ ಹುಳಿತು, ನಾಯಿ ನರಿ ತಿಂಬ ಕಾರಣ ನಿಮ್ಮ ದೇಹ ಅಪವಿತ್ರ ಕಾಣಿರೆ ! ಇಂತಪ್ಪ ಅಪವಿತ್ರ ಕಾರ್ಯಕ್ಕೆ ಕುಲವಿಲ್ಲ. ಆ ಕಾರ್ಯಕ್ಕೆ ಕುಲವುಂಟೆಂದಡೆ ಮೇಲುಜಾತಿಯ ದೇಹದೊಳಗೆ ಹಾಲುವುಳ್ಳಡೆ ಕೀಳುಜಾತಿಯ ದೇಹದೊಳಗೆ ರಕ್ತವುಳ್ಳಡೆ ಅದು ಕುಲವಹುದು ! ಅಂಥಾ ಗುಣ ನಿಮಗಿಲ್ಲವಾಗಿ, ಎಲ್ಲಾ ಜೀವರಾಶಿಯ ದೇಹವು, ನಿಮ್ಮ ದೇಹವು ಒಂದೇ ಸಮಾನವಾದ ಕಾರಣ ನಿಮಗೆ ಕುಲವಿಲ್ಲ ! ನಿಲ್ಲು ! ಮಾಣು ! ಒಡಲು ಕರಣಾದಿಗಳು ಕುಲವಿಲ್ಲದೆ ಹೋದಡೂ ಎಲ್ಲವೂ ಅರಿವ ಚೈತನ್ಯಾತ್ಮಕನೆ, ಸತ್ಕುಲಜನೆ ಆತ್ಮನು, ಆವ ಕುಲದೊಳಗೂ ಅಲ್ಲ. ಶರೀರ ಬೇರೆ, ಆತ್ಮ ಬೇರೆ. ಅದೆಂತೆಂದಡೆ : ಭೂದೇವಮೃದ್ಭಾಂಡಮನೇಕ ರೂಪಂ ಸುವರ್ಣಮೇಕಂ ಬಹುಭೂಷಣಾನಾಂ | ಗೋಕ್ಷೀರಮೇಕಂ ಬಹುವರ್ಣಧೇನುಃ | ಶರೀರಭೇದಸ್ತೆ ್ವೀಕಃ ಪರಮಾತ್ಮಾ || ಎಂದುದಾಗಿ, ಶರೀರಂಗಳು ಅನಂತ, ಆತ್ಮನೊಬ್ಬನೆ. ಅದು ಕಾರಣ, ಆ ಆತ್ಮನು ಆವ ಕುಲದಲ್ಲೂ ಅಲ್ಲ. ಇನ್ನು ಆವ ಠಾವಿನಲ್ಲಿ ನಿಮ್ಮ ಕುಲದ ಪ್ರತಿಷ್ಠೆಯ ಮಾಡಿ ತೋರಿವಿರೊ ? ದೇಹದ ಮೃತ್ತಿಕೆ ಆತ್ಮ ನಿರಾಕಾರನೆನುತ್ತಿರಲು, ಇನ್ನಾವ ಪರಿಯಲ್ಲಿ ನಾ ಉತ್ತಮ ಕುಲಜರೆಂಬಿರೊ ? ಜೀವಶ್ಶಿವೋ ಶಿವೋ ಜೀವಸ್ಸಜೀವಃ ಕೇವಲಃ ಶಿವಃ | ಪಾಶಬದ್ಧಸ್ಥಿತೋ ಜೀವಃ ಪಾಶಮುಕ್ತಃ ಸದಾಶಿವಃ || ಎಂಬ ಶ್ರುತಿಯಂ ತಿಳಿದು ನೋಡಲು, ನೀವೆಲ್ಲಾ ಪಾಶಬದ್ಧ ಜೀವಿಗಳಾಗುತ್ತ ಇರಲು, ನಿಮಗೆಲ್ಲಿಯ ಉತ್ತಮ ಕುಲ ? ಪಾಶಮುಕ್ತರಾದ ಎಮ್ಮ ಶಿವಭಕ್ತರೆ ಕುಲಜರಲ್ಲದೆ ನಿಮಗೆ ಉತ್ತಮ ಕುಲ ಉಂಟಾದಡೆ, ನಿಮ್ಮ ದೇಹದೊಳಗೆ ಹೊರಗೆ ಇಂಥಾ ಠಾವೆಂದು ಬೆರಳುಮಾಡಿ ತೋರಿ ! ಅದೂ ಅಲ್ಲದೆ ಒಂದು ಪಕ್ಷಿಯ ತತ್ತಿಯೊಳಗೆ ಹಲವು ಮರಿ ಹುಟ್ಟಿದಡೆ ಒಂದರ ಮರಿಯೋ, ಹಲವು ಪಕ್ಷಿಯ ಮರಿಯೋ ? ತಿಳಿದು ನೋಡಿದಡೆ ಅದಕ್ಕೆ ಬೇರೆ ಬೇರೆ ಪಕ್ಷಿಗಳೆಂಬ ಕುಲವಿಲ್ಲ. ಅಹಂಗೆ ಒಬ್ಬ ಬ್ರಹ್ಮನ ಅಂಡವೆಂಬ ತತ್ತಿಯೊಳಗೆ ಸಕಲ ಜೀವರಾಶಿ ಎಲ್ಲಾ ಉದಯಿಸಿದವು. ಅದೆಂತೆಂದಡೆ : ಪೃಥಿವ್ಯಾಕಾಶಯೋರ್ಭಾಂಡಂ ತಸ್ಯಾಂಡಂ ಜಾಯತೇ ಕುಲಂ | ಅಂತ್ಯಜಾತಿದ್ರ್ವಿಜಾತಿರ್ಯಾ ಏಕಯೋನಿಸಹೋದರಾ || ಎಂದುದಾಗಿ, ಇರುಹೆ ಮೊದಲು, ಆನೆ ಕಡೆಯಾದ ಸಚರಾಚರವೆಲ್ಲವು ಒಬ್ಬ ಬ್ರಹ್ಮನ ಅಂಡದೊಳಗೆ ಹುಟ್ಟಿ, ಏಕಯೋನಿ ಸಹೋದರರೆಂದು ಪ್ರತಿಷ್ಠಿಸುತ್ತಿರಲು, ನಿಮಗೆಲ್ಲಿಯ ಕುಲವೊ ? ಶಿವಭಕ್ತರೆ ಉತ್ತಮ ಕುಲಜರೆಂದು, ಮಿಕ್ಕಿನವರೆಲ್ಲಾ ಕೀಳುಜಾತಿ ಎಂಬುದನು ಓದಿ ಬರಿದೊರೆಯಾದಡು ನಾನು ನಿಮಗೆ ಹೇಳಿಹೆನು ಕೇಳಿ ಶ್ವಪಚೋಪಿ ಮುನಿಶ್ರೇಷ್ಠಶ್ಶಿವ ಸಂಸ್ಕಾರಸಂಯುತಃ | ಶಿವಸಂಸ್ಕಾರಹೀನಶ್ಚ ಬ್ರಾಹ್ಮಣಃ ಶ್ವಪಚಾಧಮಃ || ಎಂಬ ಶ್ರುತಿಗೆ ಇದಿರುತ್ತರವ ಕೊಟ್ಟಡೆ, ಬಾಯಲ್ಲಿ ಕಾಷ್ಟವ ಮೂಡುವುದಾಗಿ ನೀವೇ ಕೀಳುಜಾತಿಗಳು, ಅರಿದ ಶಿವಭಕ್ತರು ಸತ್ಕುಲಜರೆಂದು ಸುಮ್ಮನಿರಿರೋ. ಅಲ್ಲದ ಅಜ್ಞಾನರಾದುದೆಲ್ಲಾ ಒಂದು ಕುಲ. ಸುಜ್ಞಾನರಾದುದೆಲ್ಲಾ ಒಂದು ಕುಲವೆಂದು ಶಾಸ್ತ್ರಗಳು ಹೇಳುತ್ತಿದಾವೆ. ಅದೆಂತೆಂದಡೆ : ಆಹಾರನಿದ್ರಾಭಯಮೈಥುನಂ ಚ ಸಾಮಾನ್ಯಮೇತತ್ಪಶುಬ್ಥಿರ್ನರಾಣಾಂ | ಜ್ಞಾನಂ ಹಿ ತೇಷಾಂ ಅದ್ಥಿಕೋ ವಿಶೇಷಃ ಜ್ಞಾನೇನ ಹೀನಾಃ ಪಶುಬ್ಥಿಃ ಸಮಾನಾಃ || ಎಂದುದಾಗಿ, ಅಜ್ಞಾನತಂತುಗಳು ನೀವೆಲ್ಲರೂ ಕರ್ಮಪಾಶಬದ್ಧರು. ನಿಮಗೆಲ್ಲಿಯದೊ ಸತ್ಕುಲ ? ಇದು ಅಲ್ಲದೆ ನಿಮ್ಮ ನುಡಿಯೊಡನೆ ನಿಮಗೆ ಹಗೆಮಾಡಿ ತೋರಿಹೆನು. ಕೇಳೆಲವೊ ನಿಮಗೆ ಕುಲವು ವಶಿಷ್ಟ, ವಿಶ್ವಾಮಿತ್ರ, ಭಾರದ್ವಾಜ, ಕೌಂಡಿಲ್ಯ, ಕಾಶ್ಯಪನೆಂಬ ಋಷಿಗಳಿಂದ ಬಂದಿತ್ತೆಂಬಿರಿ. ಅವರ ಪೂರ್ವವನೆತ್ತಿ ನುಡಿದಡೆ ಹುರುಳಿಲ್ಲ. ಅವರೆಲ್ಲಾ ಕೀಳುಜಾತಿಗಳಾದ ಕಾರಣ, ನೀವೇ ಋಷಿಮೂಲವನು, ನದಿಮೂಲವನೆತ್ತಲಾಗದೆಂಬಿರಿ. ಇನ್ನು ನಿಮ್ಮ ನುಡಿ ನಿಮಗೆ ಹಗೆಯಾಯಿತ್ತೆಂದೆ ಕೇಳಿರೊ. ಆ ಋಷಿಗಳ ಸಂತಾನವಾಗಿ ನಿಮ್ಮ ಮೂಲವನೆತ್ತಿದಡೂ ಹುರುಳಿಲ್ಲ. ಅದಂತಿರಲಿ. ನಿಮ್ಮ ಕುಲಕೆ ಗುರುವೆನಿಸುವ ಋಷಿಗಳೆಲ್ಲರೂ ಲಿಂಗವಲ್ಲದೆ ಪೂಜಿಸರು, ವಿಭೂತಿ ರುದ್ರಾಕ್ಷಿಯನಲ್ಲದೆ ಧರಿಸರು, ಪಂಚಾಕ್ಷರಿಯನಲ್ಲದೆ ಜಪಿಸರು, ಜಡೆಯನ್ನಲ್ಲದೆ ಕಟ್ಟರು. ಹಾಗೆ ನೀವು ಲಿಂಗವ ಪೂಜಿಸಿ, ವಿಭೂತಿ ರುದ್ರಾಕ್ಷಿಯ ಧರಿಸಿ, ಪಂಚಾಕ್ಷರಿಯ ಜಪಿಸಿ, ಜಡೆಯ ಕಟ್ಟಿ, ಈಶ್ವರನ ಲಾಂಛನವ ಧರಿಸಿದಡೆ ನೀವು ಋಷಿಮೂಲದವರಹುದು. ಹೇಗಾದಡೂ ಅನುಸರಿಸಿಕೊಳಬಹುದು. ಅದು ನಿಮಗಲ್ಲದ ಮಟ್ಟಿಯನ್ನಿಟ್ಟು ವಿಷ್ಣುವಂ ಪೂಜಿಸಿ ಮುಡುಹಂ ಸುಡಿಸಿಕೊಂಡು, ಸಾಲಿಗ್ರಾಮ, ಶಕ್ತಿ, ಲಕ್ಷ್ಮಿ, ದುರ್ಗಿ ಎಂಬ ಕಿರುಕುಳದೈವವಂ ಪೂಜಿಸಿ, ನರಕಕ್ಕಿಳಿದು ಹೋಹರಾದ ಕಾರಣ, ನೀವೇ ಹೀನಜಾತಿಗಳು. ನಿಮ್ಮ ಋಷಿಮಾರ್ಗವ ವಿಚಾರಿಸಿ ನಡೆಯಿರಾಗಿ ನೀವೇ ಲಿಂಗದ್ರೋಹಿಗಳು. ಲಿಂಗವೆ ದೈವವೆಂದು ಏಕನಿಷ್ಠೆಯಿಂದಲಿರಿರಾಗಿ ನೀವೇ ಲಿಂಗದ್ರೋಹಿಗಳು. ಪಂಚಾಕ್ಷರಿಯ ನೆನೆಯಿರಾಗಿ ಮಂತ್ರದ್ರೋಹಿಗಳು. ರುದ್ರಾಕ್ಷಿಯ ಧರಿಸರಾದ ಕಾರಣ ನೀವು ಶಿವಲಾಂಛನ ದ್ರೋಹಿಗಳು. ಶಿವಭಕ್ತರಿಗೆರಗದ ಕಾರಣ ನೀವು ಶಿವಭಕ್ತರಿಗೆ ದ್ರೋಹಿಗಳು. ನಿಮ್ಮ ಮುಖವ ನೋಡಲಾಗದು. ಬರಿದೆ ಬ್ರಹ್ಮವನಾಚರಿಸಿ ನಾವು ಬ್ರಹ್ಮರೆಂದೆಂಬಿರಿ. ಬ್ರಹ್ಮವೆಂತಿಪ್ಪುದೆಂದರಿಯಿರಿ. ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಸತ್ಯಂ ಬ್ರಹ್ಮ ಶುಚಿಬ್ರ್ರಹ್ಮ ಇಂದ್ರಿಯನಿಗ್ರಹಃ | ಸರ್ವಜೀವದಯಾಬ್ರಹ್ಮ ಇತೈ ್ಯೀದ್ಬ್ರಹ್ಮ ಲಕ್ಷಣಂ | ಸತ್ಯಂ ನಾಸ್ತಿ ಶುಚಿರ್ನಾಸ್ತಿ ನಾಸ್ತಿ ಚೇಂದ್ರಿಯ ನಿಗ್ರಹಃ | ಸರ್ವಜೀವ ದಯಾ ನಾಸ್ತಿ ಏತಚ್ಚಾಂಡಾಲ ಲಕ್ಷಣಂ || ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಬ್ರಹ್ಮವೆ ನಿಃಕರ್ಮ, ನೀವೇ ಕರ್ಮಿಗಳು. ಮತ್ತೆಂತೊ `ಬ್ರಹ್ಮಂ ಚರೇತಿ ಬ್ರಹ್ಮಣಾಂ' ಎಂದು ಗಳವುತ್ತಿಹಿರಿ. ಗಾಯತ್ರಿಯ ಜಪಿಸಿ ನಾವು ಕುಲಜರೆಂಬಿರಿ. ಆ ಗಾಯತ್ರಿ ಕರ್ಮವಲ್ಲದೆ ಮುಕ್ತಿಗೆ ಕಾರಣವಿಲ್ಲ. ಅಂತು ಗಾಯತ್ರಿಯಿಂದ ನೀವು ಕುಲಜರಲ್ಲ. ವೇದವನೋದಿ ನಾವೇ ಬ್ರಹ್ಮರಾದೆವೆಂಬಿರಿ. ವೇದ ಹೇಳಿದ ಹಾಂಗೇ ನಡೆಯಿರಿ. ಅದೆಂತೆಂದಡೆ : ``ದ್ಯಾವಾಭೂವಿೂ ಜನಯನ್ ದೇವ ಏಕಃ'' ಎಂದೋದಿ ಮರದು, ವಿಷ್ಣು ವನೆ ಭಜಿಸುವಿರಿ. ನೀವೇ ವೇದವಿರುದ್ಧಿಗಳು. ``ವಿಶ್ವತೋ ಮುಖ ವಿಶ್ವತೋ ಚಕ್ಷು ವಿಶ್ವತೋ ಬಾಹು'' ಎಂದೋದಿ ಮತ್ತೆ , ``ಏಕೋ ರುದ್ರೋ ನ ದ್ವಿತೀಯಾಯ ತಸ್ಥೇ'' ಎಂದು ಮರದು, ಬೇರೊಬ್ಬ ದೈವ ಉಂಟೆಂದು ಗಳಹುತ್ತಿದಿರಿ. ನೀವೇ ವೇದದ್ರೋಹಿಗಳು. ``ಏಕಮೇವಾದ್ವಿತಿಯಂ ಬ್ರಹ್ಮ''ವೆಂದೋದಿ, ಕರ್ಮದಲ್ಲಿ ಸಿಕ್ಕಿದೀರಿ. ನೀವೇ ದುಃಕರ್ಮಿಗಳು. ``ಅಯಂ ಮೇ ಹಸ್ತೋ ಭಗವಾನ್, ಅಯಂ ಮೇ ಭಗವತ್ತರಃ |'' ಎಂದೋದಿ, ಅನ್ಯಪೂಜೆಯ ಮಾಡುತಿದೀರಿ. ನೀವೇ ಪತಿತರು. ``ಶಿವೋ ಮೇ ಪಿತಾ'' ಎಂದೋದಿ, ಸನ್ಯಾಸಿಗಳಿಗೆ ಮಕ್ಕಳೆಂದಿರಿ. ನೀವೇ ಶಾಸ್ತ್ರವಿರುದ್ಧಿಗಳು. ಸದ್ಯೋಜಾತದ್ಭವೇದ್ಭೂಮಿರ್ವಾಮದೇವಾದ್ಭವೇಜ್ಜಲಂ | ಅಘೋರಾದ್ವನ್ಹಿರಿತ್ಯುಕ್ತಸ್ತತ್ಪುರುಷಾದ್ವಾಯುರುಚ್ಯತೇ || ಈಶಾನ್ಯಾದ್ಗಗನಾಕಾರಂ ಪಂಚಬ್ರಹ್ಮಮಯಂ ಜಗತ್ | ಎಂದೋದಿ, ಸರ್ವವಿಷ್ಣುಮಯ ಎನ್ನುತ್ತಿಪ್ಪಿರಿ. ನಿಮ್ಮಿಂದ ಬಿಟ್ಟು ಶಿವದ್ರೋಹಿಗಳಾರೊ ? ``ಭಸ್ಮ ಜಲಮಿತಿ ಭಸ್ಮ ಸ್ಥಲಮಿತಿ ಭಸ್ಮ |'' ಎಂದೋದಿ, ಮರದು ವಿಭೂತಿಯ ನೀಡಲೊಲ್ಲದೆ ಮಟ್ಟಿಯಂ ನೀಡುವಿರಿ. ನಿಮ್ಮಿಂದ ಪತಿತರಿನ್ನಾರೊ ? ``ರುದ್ರಾಕ್ಷಧಾರಣಾತ್ ರುದ್ರಃ'' ಎಂಬುದನೋದಿ ರುದ್ರಾಕ್ಷಿಯಂ ಧರಿಸಲೊಲ್ಲದೆ, ಪದ್ಮಾಕ್ಷಿ ತೊಳಸಿಯ ಮಣಿಯಂ ಕಟ್ಟಿಕೊಂಬಿರಿ. ನಿಮ್ಮಿಂದ ಪಾಪಿಗಳಿನ್ನಾರೊ ? ``ಪಂಚಾಕ್ಷರಸಮಂ ಮಂತ್ರಂ ನಾಸ್ತೀ ತತ್ವಂ ಮಹಾಮುನೇ '' ಎಂಬುದನೋದಿ, ಪಂಚಾಕ್ಷರಿಯ ಜಪಿಸಲೊಲ್ಲದೆ, ಗೋಪಳಾ ಮಂತ್ರವ ನೆನವಿರಿ ಎಂತೊ ? ನಿಮ್ಮ ನುಡಿ ನಿಮಗೆ ವಿರುದ್ಧವಾಗಿರಲು, ನಿಮ್ಮ ಓದು ವೇದ ನಿಮಗೆ ವಿರುದ್ಧವಾಗಿರಲು, ನಿಮ್ಮ ಉತ್ತಮ ಕುಲಜರೆಂದು ವಂದಿಸಿದವರಿಗೆ ಶೂಕರ ಜನ್ಮದಲ್ಲಿ ಬಪ್ಪುದು ತಪ್ಪದು ನೋಡಿರೆ ! ವಿಪ್ರಾಣಾಂ ದರಿಶನೇ ಕಾಲೇ ಪಾಪಂ ಭುಂಜಂತಿ ಪೂಜಕಾಃ | ವಿಪ್ರಾಣಾಂ ವದನೇನೈವ ಕೋಟಿಜನ್ಮನಿ ಶೂಕರಃ || ಇಂತೆಂದುದಾಗಿ, ನಿಮ್ಮೊಡನೆ ಮಾತನಾಡಿದಡೆ ಪಂಚಮಹಾಪಾತಕಃ ನಿಮ್ಮ ಮುಖವ ನೋಡಿದಡೆ ಅಘೋರನರಕ. ಅದೆಂತೆಂದಡೆ : ಒಬ್ಬ ಹಾರುವನ ದಾರಿಯಲ್ಲಿ ಕಂಡದಿರೆ ಇರಿದು ಕೆಡಹಿದಲ್ಲದೆ ಹೋಗಬಾರದೆಂದು ನಿಮ್ಮ ವಾಕ್ಯವೆಂಬ ನೇಣಿಂದ ಹೆಡಗುಡಿಯ ಕಟ್ಟಿಸಿಕೊಳುತಿಪ್ಪಿರಿ. ಮತ್ತು ನಿಮ್ಮ ದುಶ್ಯರೀರತ್ರಯವನೆಣಿಸುವಡೆ ``ಅಣೋರಣೀಯಾನ್ ಮಹತೋ ಮಹೀಯಾನ್'' ಎಂಬುದ ನೀವೇ ಓದಿ, ಪ್ರಾಣಿಯಂ ಕೊಂದು ಯಾಗವನ್ನಿಕ್ಕಿ, ದೇವರ್ಕಳುಗಳಿಗೆ ಹೋಮದ ಹೊಗೆಯಂ ತೋರಿ, ಕೊಬ್ಬು ಬೆಳೆದ ಸವಿಯುಳ್ಳ ಖಂಡವನೆ ತಿಂದು, ಸೋಮಪಾನವೆಂಬ ಸುರೆಯನೆ ಕುಡಿದು, ನೊಸಲಕಣ್ಣ ತೋರುವಂತಹ ಶಿವಭಕ್ತನಾದಡೂ ನಿಂದಿಸಿ ನುಡಿವುತಿಪ್ಪಿರಿ. ನಿಮ್ಮೊಡನೆ ನುಡಿವಡೆ ಗುರುಲಿಂಗವಿಲ್ಲದವರು ನುಡಿವರಲ್ಲದೆ, ಗುರುಲಿಂಗವುಳ್ಳವರು ನುಡಿವರೆ ? ಇದು ಶ್ರುತ ದೃಷ್ಟ ಅನುಮಾನದಿಂದ ವಿಚಾರಿಸಿ ನೋಡಲು, ನೀವೇ ಪಂಚಮಹಾಪಾತಕರು. ಶಿವಭಕ್ತಿಯರಿಯದ ನರರು ಪೀನಕುರಿಗಳು. ನಿಮ್ಮಿಂದ ಏಳುಬೆಲೆ ಹೊರಗಾದ ಹೊಲೆಯನೆ ಉತ್ತಮ ಕುಲಜನೆಂದು ಮುಂಡಿಗೆಯ ಹಾಕಿದೆನು, ಎತ್ತಿರೊ ಸತ್ಯವುಳ್ಳಡೆ ! ಅಲ್ಲದಡೆ ನಿಮ್ಮ ಬಾಯಬಾಲವ ಮುಚ್ಚಿಕೊಳ್ಳಿರೆ. ಎಮ್ಮ ಶಿವಭಕ್ತರೇ ಅದ್ಥಿಕರು, ಎಮ್ಮ ಶಿವಭಕ್ತರೇ ಕುಲಜರು, ಎಮ್ಮ ಶಿವಭಕ್ತರೇ ಸದಾಚಾರಿಗಳು, ಎಮ್ಮ ಶಿವಭಕ್ತರೇ ಪಾಪರಹಿತರು, ಎಮ್ಮ ಶಿವಭಕ್ತರೇ ಸರ್ವಜೀವ ದಯಾಪಾರಿಗಳು, ಎಮ್ಮ ಶಿವಭಕ್ತರೇ ಸದ್ಯೋನ್ಮುಕ್ತರಯ್ಯಾ, ಘನಗುರು ಶಿವಲಿಂಗ ರಾಮನಾಥ.
--------------
ವೀರಶಂಕರದಾಸಯ್ಯ
ಪ್ರಾಣವಿಲ್ಲದ ಹೆಣ್ಣು ನಾನಾಗಿರಲು, ಆ ಪ್ರಾಣವಿಲ್ಲದ ಕಾಯಕ್ಕೆ ಪ್ರಾಣ ಪ್ರಸನ್ನರೂಪಾಯಿತ್ತು. ಎಲ್ಲವನಳಿದು ಎಲ್ಲವ ತಿಳಿದು ಎಲ್ಲಾ ವಸ್ತುವ ಕಂಡು ನಿರ್ಲೇಪಿಯಾದೆನಯ್ಯ ಸಂಗಯ್ಯ.
--------------
ನೀಲಮ್ಮ
ಎಲೆ ಮನವೆ ಕೇಳಾ, ಶಿವನು ನಿನಗೆ ಅನಂತಾನಂತಯುಗದಲ್ಲಿ ಶಿವಾನುಭಾವಸ್ಥಿತಿಯ ಕಳುಹಿತ್ತ, ಲೋಕಕ್ಕೆರಡು ಸ್ಥಿತಿಯಲ್ಲಿ ಜನ್ಮಾದಿ ಕಟ್ಟಣೆಯ ಹರಿಯೆಂದು. ಆ ಪ್ರಭಾಮೂರ್ತಿಯಾಗಿ ಗುರುವೆಂಬ ನಾಮವಂ ಧರಿಸಿ, ಮಹಾಲಿಂಗೈಕ್ಯವನು, ಮಹಾಲಿಂಗ ಯೋಗಪ್ರಭಾವವನು, ಅಷ್ಟಾಷಷ್ಟಿತೀರ್ಥಂಗಳನು, ಶಿವನು ಅನಂತಪ್ರಾಣಿಗಳಿಗೆ ಸಾಧನವೆಂದು ಮಾಡಿದನು. ಮಂದರಗಿರಿ ರಜತಗಿರಿ ಮೇರುಗಿರಿ ಹಿಮಗಿರಿ ಮೊದಲಾದ ಅಷ್ಟಕುಲಪರ್ವತಂಗಳನು ಸ್ಥಲಂಗೊಳಿಸಿದನು. ಅನಾದಿಸಂಸಿದ್ಧದಾದಿಲಿಂಗೇಶ್ವರದೇವರ ಸ್ಥಲಂಗೊಳಿಸಿದನು. ಎಲ್ಲಾ ಯಂತ್ರಕ್ಕೆ ಅಮೃತಕಳೆಯನೀಯಲೆಂದು ಕಪಿಲಸಿದ್ಧಮಲ್ಲಿಕಾರ್ಜುನದೇವರ ಸ್ಥಲಂಗೊಳಿಸಿದನು. ಸಿದ್ಧಸಿಂಹಾಸನದ ಮೇಲೆ ನಾಮಕರಣ ರಾಮನಾಥನಾಗಿ ಗುರು ಮತ್ರ್ಯಕ್ಕೆ ಬಂದ ಕಾಣಾ ಮನವೆ. ಆಚಾರ ಗೋಚರವಾಗಬೇಕೆಂದು ಆ ನಿರ್ವಯಲೆಂಬ ಸ್ವಾಮಿ ತಾನೆಯಾಗಿ, ಓಂಕಾರ ಊಧ್ರ್ವರೇತ ಶಿವನಾಗಿ, ಬೆಳಗನುಟ್ಟು ಬಸವಣ್ಣ ಬಂದ ಕಾಣಾ ಮನವೆ. ಎಲ್ಲಾ ಪ್ರಾಣಿಗಳಿಗೆ ಜಿಹ್ವೆಗಳನು ಪವಿತ್ರವ ಮಾಡಲೆಂದು ಶುದ್ಧಸಿದ್ಧಪ್ರಸಿದ್ಧಪ್ರಸಾದವ ತೋರಿಹೆವೆನುತ ಮಹಾಪ್ರಸಾದಿ ಚೆನ್ನಬಸವಣ್ಣ ಬಂದ ಕಾಣಾ ಮನವೆ. ಜ್ಞಾನವಾಹನವಾಗಿ ತನುಮನಧನದ ಮೇಲೆ ನಡೆದು, ಅನಂತಮೂರ್ತಿಗಳ ಪವಿತ್ರವ ಮಾಡಲೆಂದು ಎಲ್ಲಾ ಸಂಬಂಧವನು ಕರಸ್ಥಲದಲ್ಲಿ ಹಿಡಿದುಕೊಂಡು, ಜಂಗಮವಾಗಿ ಪ್ರಭುದೇವರು ಬಂದರು ಕಾಣಾ ಮನವೆ. ಗುರುವೆ ಮಹಾಭಕ್ತನಾಗಿ ಅರ್ಪಿತವ ಮಾಡಿ, ಪ್ರಸಾದಿಯ ಅನುಭಾವದ ಆಭರಣವೆ ಜಂಗಮವಾಗಿ, ಇಂತೀ ಚತುರ್ವಿಧಸ್ಥಲಂಗಳು ಎನ್ನ ಪ್ರಾಣನ ಕೊರಳಲ್ಲಿಹವಾಗಿ, ನಿಮ್ಮ ಅನಿಮಿಷವಾಗಿ ನಾ ನೋಡುತಿರ್ದೆ ಕಾಣಾ, ಕಲಿದೇವಯ್ಯಾ.
--------------
ಮಡಿವಾಳ ಮಾಚಿದೇವ
ಎಲ್ಲಾ ಎಲ್ಲವ ಹಡೆಯಬಹುದು, ಭಕ್ತಿಯ ಹಡೆಯಬಾರದು. ಅಷ್ಟಾದಶವಿದ್ಯೆ ಸಕಲಕಳೆಯನೆಲ್ಲವ ಹಡೆಯಬಹುದು, ಭಕ್ತಿಯ ಹಡೆಯಬಾರದು. ಪಂಚತತ್ವಪದವಿಯ ಹಡೆಯಬಹುದು, ಭಕ್ತಿಯ ಹಡೆಯಬಾರದು. ಈ ಆರಿಗೆಯೂ ಅರಿದು ಹಡೆಯಬಾರದಂಥ ಭಕ್ತಿಯ ಹಡೆದನು. ಆ ಬಸವಣ್ಣನ ನಾ ಹಡೆದೆನು. ನಾನೆಲ್ಲರಿಗೆಯೂ ಬಲ್ಲಿದನು ಕಾಣಾ, ಕಲಿದೇವರದೇವ ನಿಮ್ಮಾಣೆ.
--------------
ಮಡಿವಾಳ ಮಾಚಿದೇವ
ಭಕ್ತಿುಲ್ಲದ ಬಡವ ನಾನಯ್ಯಾ: ಕಕ್ಕಯ್ಯನ ಮನೆಯಲ್ಲೂ ಬೇಡಿದೆ, ಚೆನ್ನಯ್ಯನ ಮನೆಯಲ್ಲೂ ಬೇಡಿದೆ, ದಾಸಯ್ಯನ ಮನೆಯಲ್ಲೂ ಬೇಡಿದೆ. ಎಲ್ಲಾ ಪುರಾತರು ನೆರೆದು ಭಕ್ತಿಭಿಕ್ಷವನಿಕ್ಕಿದಡೆ ಎನ್ನ ಪಾತ್ರೆ ತುಂಬಿತ್ತು, ಕೂಡಲಸಂಗಮದೇವಾ.
--------------
ಬಸವಣ್ಣ
ಇನ್ನಷ್ಟು ... -->