Some error occurred
ಅಥವಾ

ಒಟ್ಟು 19 ಕಡೆಗಳಲ್ಲಿ , 11 ವಚನಕಾರರು , 18 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

Created with Highcharts 3.0.6Chart context menuಪದವಿರುವ ವಚನಗಳುವಚನಕಾರರು11111523111ಒಟ್ಟು37ಅಂಬಿಗರಚೌಡಯ್ಯ3ಅಲ್ಲಮಪ್ರಭುದೇವರು65ಇಮ್ಮಡಿಮುರಿಘಾಗುರುಸಿದ್ಧ/ಗುರುಸಿದ್ಧಸ್ವಾಮಿ 32ಉರಿಲಿಂಗಪೆದ್ದಿ16ಗುಪ್ತಮಂಚಣ್ಣ 7ಚನ್ನಬಸವಣ್ಣ112ಪ್ರಸಾದಿಭೋಗಣ್ಣ 41ಬಾಲಸಂಗಯ್ಯಅಪ್ರಮಾಣದೇವ19ಮೋಳಿಗೆಮಾರಯ್ಯ 5ಸಿದ್ಧರಾಮೇಶ್ವರ12ಹಡಪದಅಪ್ಪಣ್ಣ 02.557.5
ಇಂದ್ರಪದ ಬ್ರಹ್ಮಪದ ವಿಷ್ಣುಪದವಿಲ್ಲದಂದು, ಸುರಾಲಯ ರುದ್ರಲೋಕ ಉತ್ಪತ್ಯವಾಗದಂದು, ಅಷ್ಟವಸುಗಳು, ದ್ವಾದಶಾದಿತ್ಯರು, ಏಕಾದಶ ರುದ್ರರುತ್ಪತ್ಯವಾಗದಂದು, ದ್ವಾದಶ ರಾಸಿ ನಕ್ಷತ್ರ ನವಗ್ರಹಂಗಳುತ್ಪತ್ಯವಾಗದಂದು, ಅಗ್ನಿಮಂಡಲ ಆದಿತ್ಯಮಂಡಲ ಉತ್ಪತ್ಯವಾಗದಂದು, ಚಂದ್ರಮಂಡಲ ತಾರಾಮಂಡಲ ಉತ್ಪತ್ಯವಾಗದಂದು, ಇವೇನೂ ಏನೂ ಎನಲಿಲ್ಲದಂದು ಚಿತ್ಕಲಾಪ್ರಣವವಾಗಿದ್ದನು ನೋಡಾ ನಮ್ಮ ಅಪ್ರಮಾಣಕೂಡಲಸಂಗಮದೇವ.
--------------
ಬಾಲಸಂಗಯ್ಯ ಅಪ್ರಮಾಣ ದೇವ
>ದಶವಿಧ ಉದಕ, ಏಕಾದಶ ಪ್ರಸಾದ, ಎಲ್ಲಾ ಎಡೆಯಲ್ಲಿ ಉಂಟು. ಮತ್ತೊಂದ ಬಲ್ಲವರ ತೋರಾ ಎನಗೆ. ಲಿಂಗವ ನೆನೆಯದೆ, ಲಿಂಗಾರ್ಪಿತವ ಮಾಡದೆ, ಅನರ್ಪಿತವ ಕೊಳ್ಳದ ಅಚ್ಚಪ್ರಸಾದಿಯ ತೋರಿ ಬದುಕಿಸಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಅರ್ಪಿತದ ಮಹಿಮೆಯ ಅನುವ, ಪ್ರಸಾದದ ಮಹಿಮೆಯ ಆವಂಗಾವಂಗರಿಯಬಾರದು. ವಿಷ್ಣ್ವಾದಿ ದೇವ ದಾನವ ಮಾನವ, ಋಷಿಜನಂಗಳಿಗೆಯೂ ಅರಿಯಬಾರದು. ಕಿಂಚಿತ್ತರಿದಡೆಯೂ ಅರ್ಪಿಸಬಾರದು. ಕಿಂಚಿತ್ ಅರ್ಪಿಸಿದಡೆಯೂ ಪ್ರಸಾದವ ಹಡೆಯಬಾರದು. ಕಿಂಚಿತ್ ಪ್ರಸಾದವ ಹಡೆದಡೆಯೂ, ಪ್ರಸಾದವ ಭೋಗಿಸಿ ಪರಿಣಾಮದಿಂ ಮುಕ್ತರಾಗಿರಲರಿಯರು. ಶಿವ ಶಿವಾ ! ಗುರು ಲಿಂಗ ಜಂಗಮಕ್ಕೆ ತನು ಮನ ಧನವನರ್ಪಿಸಲರಿಯರು. ಗುರು ಲಿಂಗ ಜಂಗಮವನೇಕೀಭವಿಸಿ ಮಹಾಲಿಂಗವನು ನೇತ್ರದಲ್ಲಿ ಧರಿಸಿ, ನೇತ್ರಲಿಂಗಕ್ಕೆ ನೇತ್ರದ ಕೈಯಲೂ ರೂಪವನರ್ಪಿಸಲರಿಯರು. ಆ ಮಹಾಲಿಂಗವನು ಶ್ರೋತ್ರದಲ್ಲಿ ಧರಿಸಿ ಶ್ರೋತ್ರಲಿಂಗಕ್ಕೆ ಶ್ರೋತ್ರದ ಕೈಯಲೂ ಮಹಾಶಬ್ದವನರ್ಪಿಸಲರಿಯರು. ಆ ಮಹಾಲಿಂಗವನು ಘ್ರಾಣದಲ್ಲಿ ಧರಿಸಿ ಘ್ರಾಣಲಿಂಗಕ್ಕೆ ಘ್ರಾಣದ ಕೈಯಲೂ ಸುಗಂಧವನರ್ಪಿಸಲರಿಯರು. ಆ ಮಹಾಲಿಂಗವನು ಜಿಹ್ವೆಯಲ್ಲಿ ಧರಿಸಿ ಜಿಹ್ವೆಯಲಿಂಗಕ್ಕೆ ಜಿಹ್ವೆಯ ಕೈಯಲೂ ಮಹಾರಸವನರ್ಪಿಸಲರಿಯರು. [ಆ ಮಹಾಲಿಂಗವನು ತ್ವಕ್ಕಿನಲ್ಲಿ ಧರಿಸಿ ತ್ವಕ್‍ಲಿಂಗಕ್ಕೆ ಘ್ರಾಣದ ಕೈಯಲ್ಲಿ ಮಹಾಸ್ಪರ್ಶವನರ್ಪಿಸಲರಿಯರು] ಆ ಮಹಾಲಿಂಗವನು ಭಾವದಲ್ಲಿ ಧರಿಸಿ ಭಾವಲಿಂಗಕ್ಕೆ ಭಾವದ ಕೈಯಲೂ ಸರ್ವಸುಖಪರಿಣಾಮ ಮೊದಲಾದ ಭಾವಾಭಾವ ನಿಷ್ಕಲವಸ್ತುವನರ್ಪಿಸಲರಿಯರು. ಆ ಮಹಾಲಿಂಗವನು ಮನದಲ್ಲಿ ಧರಿಸಿ ಮನೋಮಯಲಿಂಗಕ್ಕೆ ಮನದ ಕೈಯಲೂ ಸಕಲ ನಿಷ್ಕಲಾದಿ ರೂಪವನರ್ಪಿಸಲರಿಯರು. ಆ ಮಹಾಲಿಂಗವನು ವಾಕ್ಕಿನಲ್ಲಿ ಧರಿಸಿ ವಾಕ್‍ಲಿಂಗಕ್ಕೆ ವಾಕ್ಕಿನ ಕೈಯಲ್ಲೂ ಪಡಿಪದಾರ್ಥ ಮೊದಲಾದ ಸಕಲದ್ರವ್ಯಂಗಳ ರುಚಿ ಮೊದಲಾದ ಸುಖವನರ್ಪಿಸಲರಿಯರು. ಆ ಮಹಾಲಿಂಗವನು ಇಂತು ಮನೋವಾಕ್ಕಾಯವೆಂಬ ತ್ರಿವಿಧದಲ್ಲಿ ಏಕಾದಶ ಅರ್ಪಿತ ಸ್ಥಾನವನರಿದು ಅರ್ಪಿತವಾದ ಏಕಾದಶ ಪ್ರಸಾದವನರಿಯರು. ಮಹಾರ್ಪಿತವನು ಮಹಾಪ್ರಸಾದವನು ಎಂತೂ ಅರಿಯರು. ಪರಂಜ್ಯೋತಿಃ ಪರಂ ತತ್ತ್ವಂ ಪರಾತ್ಪರತರಂ ತಥಾ ಪರವಸ್ತು ಪ್ರಸಾದಃ ಸ್ಯಾದಪ್ರಮಾಣಂ ಪ್ರಸಾದಕಃ ಎಂಬುದನರಿಯರು. ಪೂಜಕಾ ಬಹವಸ್ಪಂತಿ ಭಕ್ತಾಶ್ಯತಸಹಸ್ರಶಃ ಮಹಾಪ್ರಸಾದಪಾತ್ರಂ ತು ದ್ವಿತ್ರಾ ವಾ ನೈವ ಪಂಚಷಃ ಪ್ರಸಾದಂ ಗಿರಿಜಾದೇವಿ ಸಿದ್ಧಕಿನ್ನರಗುಹ್ಯಕಾಃ ವಿಷ್ಣುಪ್ರಮುಖದೇವಾಶ್ಚ ನ ಜಾನಂತಿ ಶಿವಂಕರಂ ಎಂಬ ಪ್ರಸಾದ ಎಲ್ಲರಿಗೆಯೂ ಅಸಾಧ್ಯ. ಅರ್ಪಿತ ಮುನ್ನವೇ ಅಸಾಧ್ಯ. ಅರ್ಪಿತವೂ ಪ್ರಸಾದವೂ ಚನ್ನಬಸವಣ್ಣಂಗಾಯಿತ್ತು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಪವಳ ಪದ್ಮಾಕ್ಷಿ ಪುತ್ರಜೀವಿ ಮೌಕ್ತಿಕ ರುದ್ರಾಕ್ಷಿ ಇವು ಮುಂತಾದ ಪವಣಿಗೆಯಲ್ಲಿ ಸದ್ಯೋಜಾತಮುಖಕ್ಕೆ ಪವಳಮಾಲೆ ವಾಮದೇವಮುಖಕ್ಕೆ ಪದ್ಮಮಾಲೆ ಅಘೋರಮುಖಕ್ಕೆ ಪುತ್ರಿಕಮಾಲೆ ತತ್ಪುರುಷಮುಖಕ್ಕೆ ಮೌಕ್ತಿಕಮಾಲೆ ಈಶಾನಮುಖಕ್ಕೆ ರುದ್ರಾಕ್ಷಿ ನೂರೆಂಟರಲ್ಲಿ ಪುನರಪಿಯಾಗಿ ದ್ವಾದಶದಲ್ಲಿ ಶತಸಂಖ್ಯೆಯಲ್ಲಿ ಜಪಧ್ಯಾನದಲ್ಲಿ ಆಹ್ವಾನಿಸಲಿಕ್ಕೆ ನವಬ್ರಹ್ಮತ್ವ ದಶಾವತಾರಕ್ಕೆ ಮುಖ್ಯತ್ವ ಏಕಾದಶ ಶತರುದ್ರರಿಗೆ ಗಣಂಗಳ ಪದಕ್ಕೆ ಸಾಲೋಕ್ಯವಪ್ಪುದು ಈ ಪಂಚಾಕ್ಷರಿಯ ಪ್ರಣಮ. ಇದು ಮೂಲದಿವ್ಯಮಂತ್ರ. ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ ಪಂಚಾಕ್ಷರಿಯ ಭೇದ.
--------------
ಪ್ರಸಾದಿ ಭೋಗಣ್ಣ
ಅಯ್ಯ ! ಪೂರ್ವವನಳಿದು ಪುನರ್ಜಾತನಾದ ಸತ್ಯಸದ್ಧರ್ಮಸ್ವರೂಪ ತಚ್ಛಿಷ್ಯನು ಶ್ರೀಗುರುಲಿಂಗಜಂಗಮದ ವೇಧಾ_ಮಂತ್ರ_ಕ್ರಿಯಾದೀಕ್ಷೆಯ ಪಡೆದು, ಅಷ್ಟಾವರಣದ ನೆಲೆಕಲೆಗಳ ತಿಳಿದು, ಪಂಚಾಚಾರ ಮೊದಲಾಗಿ ಸರ್ವಾಚಾರ ಸಂಪತ್ತಿನ ವಿವರ ತಿಳಿದು, ನೂರೊಂದು ಸ್ಥಲದ ಆಚರಣೆ_ಇನ್ನೂರಹದಿನಾರು ಸ್ಥಲದ ಸಂಬಂಧವನರಿದು, ಷಟ್ಸ್ಥಲ ಮಾರ್ಗವಿಡಿದು, ಶ್ರೀಗುರುಲಿಂಗ ಜಂಗಮಕ್ಕೆ ತನು_ಮನ_ಧನವಂಚನೆಯಿಲ್ಲದೆ ನಿರ್ವಂಚಕನಾಗಿ, ಭಕ್ತಸ್ಥಲದಲ್ಲಿ ನಿಂದಡೆ ಸತ್ಯಶುದ್ಧ ಕಾಯಕ[ವ ಮಾಡಿ] ಮಹೇಶ್ವರಸ್ಥಲದಲ್ಲಿ ನಿಂದಡೆ ಸತ್ಯಶುದ್ಧ ಭಿಕ್ಷವ ಮಾಡಿ, (ಬೇಡಿ?) ಬಂದ ಪದಾರ್ಥವ ಸಮರ್ಪಿಸಿ, ಪರದ್ರವ್ಯದಲ್ಲಿ ರಿಣಭಾರನಾಗದೆ, ಸತ್ಯಶುದ್ಧ ನಡೆನುಡಿಯಿಂದಾಚರಿಸಿ, ಶ್ರದ್ಧಾದಿ ಸಮರಸಾಂತ್ಯಮಾದ ಸದ್ಭಕ್ತಿಯ ತಿಳಿದು ಅನಾದಿಕುಳ ಸನ್ಮತವಾದ ದಶವಿಧ ಪಾದೋದಕ, ಏಕಾದಶ ಪ್ರಸಾದದ ವಿಚಾರ ಮೊದಲಾದ ಅರ್ಪಿತಾವಧಾನವ, ಪರಿಪೂರ್ಣಮಯ ಶ್ರೀಗುರುಲಿಂಗಜಂಗಮಕರುಣಕಟಾಕ್ಷೆಯಿಂದ, ಅಚ್ಚ ಪ್ರಸಾದಿಸ್ಥಲದ ಶರಣತ್ವವ ಪಡೆದು, ಸತ್ಯಸದಾಚಾರವುಳ್ಳ ಸದ್ಗುರುಲಿಂಗಜಂಗಮದ ನಿಜನಿಷ*ತ್ವಮಂ ತಿಳಿದು, ದಂತಧಾವನಕಡ್ಡಿ ಮೊದಲು Põ್ಞಪ ಕಟಿಸೂತ್ರ ಕಡೆಯಾದ ಸಮಸ್ತ ಪದಾರ್ಥವ ಗುರು_ಲಿಂಗ_ಜಂಗಮಕ್ಕೆ ಸಮರ್ಪಿಸಿ, ಅವರೊಕ್ಕುದ ಹಾರೈಸಿ, ಕೊಂಡು ಇಂತು ಅಂತರಂಗ ಪರಿಪೂರ್ಣವಾಗಿ ನಿಂದ ಸಮಯದಲ್ಲಿ, ಸ್ವಯ_ಚರ_ಪರಲೀಲೆಯ ಧರಿಸಿ ಜಂಗಮಾಕೃತಿಯಿಂದ ಬಂದ ಗುರುಲಿಂಗಜಂಗಮದ ವೃತ್ತಸ್ಥಾನವಾದ ಮೊಳಪಾದ ಪರಿಯಂತರವು ತೊಳದು ಬಹುಗುಣಿಯಲ್ಲಿ ಮಡಗಿಕೊಂಡು, ಹೊಸಮನೆ, ಹೊಸಧನ, ಧಾನ್ಯ ಭಾಂಡಭಾಜನ, ಹೊಸ ಅರುವೆ_ಆಭರಣ, ಜನನಿಜಠರದಿಂದಾದ ಅಂಗಾಂಗ, ಕಾಯಿಪಲ್ಯ, ಉಚಿತಕ್ರಿಯೆ ಮೊದಲಾಗಿ ಅರಿದಾಚರಿಸುವದು ನೋಡ ! ಆ ಮೇಲೆ ಗುರುಲಿಂಗಜಂಗಮದ ಪ್ರಕ್ಷಾಲನೆ ಮಾಡಿದ ಪಾದವನ್ನು ಮೂರು ವೇಳೆ ಅಡಿಪಾದವ ಸ್ಪರ್ಶನವ ಮಾಡಿ, ನಾಲ್ಕನೆಯ ವೇಳ್ಯಕ್ಕೆ ದಶಾಂಗುಲಿಗಳ ಒಂದು ವೇಳೆ ಸ್ಪರ್ಶನವ ಮಾಡಿದ ಉದಕವನ್ನು ಭಾಂಡಭಾಜನದಲ್ಲಿ ತುಂಬಿ ಸ್ವಪಾಕವ ಮಾಡುವುದು. ಆ ಸಮಯದಲ್ಲಿ ಬಿಂದುಮಾತ್ರ [ವಾದರೂ] ಇಷ್ಟಲಿಂಗ ಬಾಹ್ಯವಾದ ಭವಿಜನ್ಮಾತ್ಮರಿಗೆ ಹಾಕಲಾಗದು. ಇನ್ನು ಜಂಗಮದ ಅಂಗುಷ* ಎರಡು_ಅಂಗುಲಿ ಎಂಟರಲ್ಲಿ ತನ್ನ ತರ್ಜನಿ ಬೆರಳಿಂದ ಮೊದಲಂತೆ ಪಾದೋದಕವ ಮಾಡಿ, ಬಟ್ಟಲಲ್ಲಿ ಮಡಗಿ, ಪೂರ್ವದಲ್ಲಿ ಭಾಂಡದೊಳಗೆ ತುಂಬಿದ ಗುರುಪಾದೋದಕದಿಂದ ವಿಭೂತಿ ಘಟ್ಟಿಯ ಅಭಿಷೇಕವ ಮಾಡಿ, ಈ ಬಟ್ಟಲಲ್ಲಿ ಮಡಗಿದ ಲಿಂಗಪಾದೋದಕದಲ್ಲಿ ಮಿಶ್ರವ ಮಾಡಿ, ಇಪ್ಪತ್ತೊಂದು ಪ್ರಣಮವ ಲಿಖಿಸಿ ಶ್ರೀಗುರುಲಿಂಗಜಂಗಮವು ತಾನು ಮಂತ್ರಸ್ಮರಣೆಯಿಂದ ಸ್ನಾನ_ಧೂಳನ_ಧಾರಣವ ಮಾಡಿ, ಲಿಂಗಾರ್ಚನೆ ಕ್ರಿಯೆಗಳ ಮುಗಿಸಿಕೊಂಡು, ಆ ಮೇಲೆ ತೀರ್ಥವ ಪಡಕೊಂಬುವಂಥ ಲಿಂಗಭಕ್ತನು ಆ ಜಂಗಮಲಿಂಗಮೂರ್ತಿಯ ಸಮ್ಮುಖದಲ್ಲಿ ಗರ್ದುಗೆಯ ರಚಿಸಿಕೊಂಡು, ಅಷ್ಟಾಂಗಯುಕ್ತನಾಗಿ ಶರಣಾರ್ಥಿ ಸ್ವಾಮಿ ! ಜಂಗಮಲಿಂಗಾರ್ಚನೆಗೆ ಅಪ್ಪಣೆಯ ಪಾಲಿಸಬೇಕೆಂದು ಬೆಸಗೊಂಡು, ಆ ಗರ್ದುಗೆಯ ಮೇಲೆ ಮೂರ್ತವ ಮಾಡಿಕೊಂಡು ಆ ಕ್ರಿಯಾಜಂಗಮಮೂರ್ತಿಯ ಕರಕಮಲದಲ್ಲಿ ನೆಲಸಿರುವ ಪರಾತ್ಪರ ಜ್ಞಾನಜಂಗಮ ಲಿಂಗಮೂರ್ತಿಗೆ ಅಷ್ಟವಿಧಾರ್ಚನೆ_ಷೋಡಶೋಪಚಾರಂಗಳ ಸಮರ್ಪಿಸಿ, ಆ ಮೇಲೆ, ತನ್ನ ವಾಮಕರದಂಗುಲಿ ಮಧ್ಯದಲ್ಲಿ ಷಡಕ್ಷರಂಗಳ ಲಿಖಿಸಿಕೊಂಡು ಅರ್ಚಿಸಿ, ತನ್ನ ಹೃನ್ಮಂದಿರಾಲಯದಲ್ಲಿ ನೆಲಸಿರುವ ಜ್ಯೋತಿರ್ಮಯ ಇಷ್ಟಮಹಾಲಿಂಗವ ನಿರೀಕ್ಷಿಸಿ ಆ ಪರಶಿವಜಂಗಮಲಿಂಗದೇವನ ಚರಣಾಂಗುಷ*ವ, ತನ್ನ ವಾಮಕರಸ್ಥಲದಲ್ಲಿ ಸುತ್ತು ಚಿತ್ತಾನಂದ ನಿತ್ಯಪರಿಪೂರ್ಣ ಅವಿರಳ ಪರಂಜ್ಯೋತಿ ಸ್ವರೂಪವಾದ ಪ್ರಾಣಲಿಂಗವೆಂದು ಭಾವಿಸಿ ಅಷ್ಟವಿಧಾರ್ಚನೆ ಷೋಡಶೋಪಚಾರ ಕ್ರಿಯಗಳ ಮಾಡಿ, ಆಮೇಲೆ ಇಷ್ಟಲಿಂಗಜಪಪ್ರಣಮ ಒಂದು ವೇಳೆ ಪ್ರಾಣಲಿಂಗ ಜಪಪ್ರಣಮ ಒಂದು ವೇಳೆ ಭಾವಲಿಂಗ ಜಪಪ್ರಣಮ ಒಂದು ವೇಳೆ ಪ್ರದಕ್ಷಿಣವ ಮಾಡಿ ಜಂಗಮಸ್ತೋತ್ರದಿಂದ ಶರಣು ಮಾಡಿ ಪೂಜೆಯನಿಳುಹಿ, ಪಾತ್ರೆಯಲ್ಲಿರುವ ಗುರುಪಾದೋದಕದಲ್ಲಿ ಬಿಂದುಯುಕ್ತವಾಗಿ ಮೂಲ ಪ್ರಣಮವ ಲಿಖಿಸಿ ಬಲದಂಗುಷ*ದಲ್ಲಿ ನೀಡುವಾಗ ಷಡಕ್ಷರಿಮಂತ್ರವ ಆರು ವೇಳೆ ಸ್ಮರಿಸಿ, ನೀಡುವಾಗ ಅಲ್ಲಿ ಅನಾದಿಗುರುವೆಂದು ಭಾವಿಸುವುದು. ಎಡದಂಗುಷ*ದ ಮೇಲೆ ನೀಡುವಾಗ ಪಂಚಾಕ್ಷರವ ಐದು ವೇಳೆ ಸ್ಮರಿಸಿ, ನೀಡುವಾಗ ಅಲ್ಲಿ ಅನಾದಿಲಿಂಗವೆಂದು ಭಾವಿಸುವುದು. ಎರಡಂಗುಷ*ದ ಮಧ್ಯದಲ್ಲಿ ನೀಡುವಾಗ ಒಂಬತ್ತಕ್ಷರವ ಒಂದು ವೇಳೆ ಸ್ಮರಿಸಿ, ನೀಡುವಾಗ ಅಲ್ಲಿ ತ್ರಿಕೂಟಸಂಗಮ ಅನಾದಿಜಂಗಮವೆಂದು ಭಾವಿಸುವುದು. ಈ ಪ್ರಕಾರದಲ್ಲಿ ನೀಡಿದ ಮೇಲೆ ದ್ರವವನಾರಿಸಿ, ಭಸ್ಮಧಾರಣವ ಮಾಡಿ, ಒಂದೆ ಪುಷ್ಪವ ಧರಿಸಿ, ನಿರಂಜನ ಪೂಜೆಯಿಂದ ಪ್ರದಕ್ಷಣವ ಮಾಡಿ, ನಮಸ್ಕರಿಸಿ, ಆ ತೀರ್ಥದ ಬಟ್ಟಲೆತ್ತಿ ಆ ಜಂಗಮಲಿಂಗಕ್ಕೆ ಶರಣಾರ್ಥಿಯೆಂದು ಅಭಿವಂದಿಸಿ. ಅವರು ಸಲಿಸಿದ ಮೇಲೆ ತಾನು ಗರ್ದುಗೆಯ ಬಿಟ್ಟೆದ್ದು, ಪರಾತ್ಪರ ಬ್ರಹ್ಮಸ್ವರೂಪ ಜಂಗಮ ತೀರ್ಥದ ಸ್ತೋತ್ರವ ಮಾಡಿ, ಅಷ್ಟಾಂಗ ಹೊಂದಿ ಶರಣುಹೊಕ್ಕು, ನಿಮ್ಮ ಪ್ರಸಾದೋದಕಕ್ಕೆ ನಿರೂಪವ ಪಾಲಿಸಬೇಕು ಸ್ವಾಮಿ ! ಎಂದು ಬೇಡಿಕೊಂಡು ಬಂದು ಮೊದಲ ಹಾಂಗೆ ಗರ್ದುಗೆಯ ಮೇಲೆ ಮೂರ್ತವ ಮಾಡಿಕೊಂಡು ಆ ಜಂಗಮ ಮೂರ್ತಿಗಳು ಸಲಿಸಿದೋಪಾದಿಯಲ್ಲಿ ತಾನು ಸಲಿಸುವುದು. ಆಮೇಲೆ ಷಟ್ಸ್ಥಲಭಕ್ತ ಮಹೇಶ್ವರರು ಅದೇ ರೀತಿಯಲ್ಲಿ ಸಲಿಸುವುದು. ಉಳಿದ ಷಟ್ಸ್ಥಲಮಾರ್ಗವರಿಯದ ಲಿಂಗಧಾರಕಶಿಶುವಾಗಿಲಿ, ಶಕ್ತಿಯಾಗಲಿ, ದೊಡ್ಡವರಾಗಲಿ ಆ ಗರ್ದುಗೆಯ ತೆಗೆದು ಲಿಂಗಕ್ಕೆ ಅರ್ಪಿಸಿಕೊಳ್ಳಬೇಕಲ್ಲದೆ ಬಟ್ಟಲೆತ್ತಲಾಗದು. ಅದೇನು ಕಾರಣವೆಂದಡೆ, ಅವರಿಗೆ ಇಪ್ಪತ್ತೊಂದು ದೀಕ್ಷೆ, ಷಟ್ಸ್ಥಲಮಾರ್ಗ, ಸರ್ವಾಚಾರ ಸಂಪತ್ತಿನಾಚರಣೆ ಮುಂದಿದ್ದರಿಂದ ಅವರು ಬಟ್ಟಲೆತ್ತಲಾಗದು. ಹೀಂಗೆ ಸಮಸ್ತರು ಸಲಿಸಿದ ಮೇಲೆ ಕೊಟ್ಟು_ಕೊಂಡ, ಭಕ್ತ_ಜಂಗಮವು ಇರ್ವರು ಕೂಡಿ ಮುಕ್ತಾಯವ ಮಾಡಿದಲ್ಲಿಗೆ ದಶವಿಧ ಪಾದೋದಕವಾಗುವುದು. ಆ ಮೇಲೆ ಗುರುಪಾದೋದಕದಿಂದ ಪಾಕವ ಮಾಡಿದ ಭಾಂಡಭಾಜನಂಗಳು ತಾಂಬೂಲ ಪದಾರ್ಥ ಮುಂತಾಗಿ ಇರ್ವರು ಕೂಡಿ ಮೌನಮಂತ್ರ ಧ್ಯಾನದಿಂದ ಹಸ್ತಸ್ಪರ್ಶನವ ಮಾಡಿ. ಶುದ್ಧ ಪ್ರಸಾದವೆಂದು ಭಾವಿಸಿ, ಬಹುಸುಯಿದಾನದಿಂದ ಸಮಸ್ತ ಜಂಗಮಭಕ್ತ ಮಹೇಶ್ವರ ಶರಣಗಣಾರಾಧ್ಯರಿಗೆ ಎಡೆಮಾಡಿ, ಅಷ್ಟಾಂಗ ಹೊಂದಿ, ಎಡಬಲ ಗಣತಿಂಥಿಣಿಯ ನೋಡಿ, ನಿರೀಕ್ಷಿಸಿ, ಶರಣಾರ್ಥಿ ! ಸ್ವಾಮಿ ! ಮಹಾಲಿಂಗಾರ್ಪಿತವ ಮಾಡಬೇಕೆಂದು ಅಭಿವಂದಿಸಿ, ಪತಿವ್ರತತ್ವದಿಂದ ಜಂಗಮಕ್ಕೆ ನಿರ್ವಂಚಕನಾಗಿ, ಭಕ್ತ_ಜಂಗಮವೆಂಬ ಉಭಯನಾಮವಳಿದು ಕ್ಷೀರ ಕ್ಷೀರ ಬೆರೆತಂತೆ ನಿರಾಕಾರ_ ನಿಶ್ಯಬ್ಧಲೀಲೆ ಪರಿಯಂತರವು ಶ್ರೀಗುರುಲಿಂಗಜಂಗಮಪಾದೋದಕಪ್ರಸಾದವ ಸಪ್ತವಿಧಭಕ್ತಿಯಿಂದ ಸಾವಧಾನಿಯಾಗಿ ಆಚರಿಸುವಾತನೆ ಜಂಗಮಭಕ್ತನಾದ ಅಚ್ಚಪ್ರಸಾದಿಯೆಂಬೆ ಕಾಣಾ ! ಗುಹೇಶ್ವರಲಿಂಗದಲ್ಲಿ ಚೆನ್ನಬಸವಣ್ಣ.
--------------
ಅಲ್ಲಮಪ್ರಭುದೇವರು
ಇನ್ನು ರುದ್ರಾಕ್ಷಿಸ್ಥಲವೆಂತೆಂದಡೆ : ಬ್ರಹ್ಮ ವಿಷ್ಮು ರುದ್ರ ಮೊದಲಾದ ಸಮಸ್ತ ದೇವರ್ಕಳು ತ್ರಿಪುರದ ರಾಕ್ಷಸರ ಉಪದ್ರಕ್ಕೆ ಭೀತರಾಗಿ ರುದ್ರಲೋಕದ ಮಹಾರುದ್ರಂಗೆ ಶಿವಧೋ ಶಿವಧೋ ಎಂದು ಮೊರೆಯಿಡುತ ಚಿಂತಾಕ್ರಾಂತರಾಗಿ ನಿಲಲು, ಆ ರುದ್ರಲೋಕದ ಮಹಾರುದ್ರನು ತ್ರಿಪುರವಧಾರ್ಥ ಸರ್ವದೇವಮಯ ದಿವ್ಯ ಅನಂತತೇಜ ಅನಂತಪ್ರಚಯ ಅನಂತಜ್ವಾಲಾಮಯವಾಗಿಹ ಅಘೋರರೂಪ ತಾಳಿ ಉತ್ತಮವಾದ ಅಘೋರಾಸ್ತ್ರಮಂ ಚಿಂತಿಸಿ, ತ್ರಿಪುರದ ಕೀಲ ದಿವ್ಯಸಹಸ್ರವರ್ಷ ನೋಡಲು ಆ ರುದ್ರನ ಅಕ್ಷಿಯಲ್ಲಿ ರಕ್ತಾಶ್ರುಜಲಬಿಂದುಗಳು ಜನಿಸಿ ಭೂಮಿಯ ಮೇಲೆ ಬೀಳಲು ಮಹಾರುದ್ರಾಕ್ಷ ವೃಕ್ಷವಾಗಿ ತ್ರೈಲೋಕ್ಯಾನುಗ್ರಹ ಕಾರಣವಾಯಿತ್ತು ನೋಡಾ. ಆ ರುದ್ರಾಕ್ಷಿಯ ದರುಶನದ ಫಲ ಲಿಂಗದರುಷನದ ಫಲ, ರುದ್ರಾಕ್ಷಿಯ ದರುಶನ ಸ್ಪರ್ಶನದಿಂದ ಸರ್ವಪಾಪಂಗಳು ಹೋಹವು ನೋಡಾ. ಇದಕ್ಕೆ ಈಶ್ವರೋsವಾಚ : ``ಶ್ರುಣು ಷಣ್ಮುಖ ಯತ್ನೇನ ಕಥಯಾಮಿ ಸಮಾಸತಃ | ತ್ರಿಪುರೋ ನಾಮ ದೈತ್ಯಸ್ತು ಪುರಶ್ಚಿತ್ತು ಸುರರ್ಜಯಃ || ಚಿತ್ತಾಪ್ತೇವ ಸುರಾಸ್ಸರ್ವೇ ಬ್ರಹ್ಮ ವಿಷ್ಣೇಂದ್ರದೇವತಾಃ ಚಿಂತಿತಂ ಚ ಮಯಾ ಪುತ್ರ ಅಘೋರಾಸ್ತ್ರಮನುತ್ತಮಂ|| ಸರ್ವದೇವಮಯಂ ದಿವ್ಯಂ ಜ್ವಲಿತಂ ಘೋರರೂಪಕಂ | ತ್ರಿಪುರಸ್ಯ ವಧಾರ್ಥಾಯ ದೇವಾನಾಂ ಪ್ರಾಣವಾಯು ಚ || ಸರ್ವವಿಘ್ನಪ್ರಶಮನಂ ಅಘೋರಾಸ್ತ್ರಂತು ಚಿಂತಿತಂ | ದಿವ್ಯವರ್ಷಸಹಸ್ರಾಣಿ ಚಕ್ಷುರುನ್ಮೀಲಿತಂ ಮಯಾ || ಘಟೇಭ್ಯಾಂ ಚ ಕುಲಾಕ್ಷಿಭ್ಯಾಂ ಪತಿತಾ ಜಲಬಿಂದವಃ | ರಕ್ತಾಶ್ರುಬಿಂದವೋ ಜಾತಾಃ ಮಹಾರುದ್ರಾಕ್ಷವೃಕ್ಷಕಾಃ || ಸ್ಥಾವರತ್ವಮನುಪ್ರಾಪ್ಯ ಮತ್ರ್ಯಾನುಗ್ರಹಕಾರಣಾತ್ | ರುದ್ರಾಕ್ಷಾಣಾಂ ಫಲಂ ಧೃತ್ವಾ ತ್ರಿಷು ಲೋಕೇಷು ವಿಶ್ರುತಂ || ಲಿಂಗಸ್ಯ ದರ್ಶನೇ ಪುಣ್ಯಂ ಭವೇತ್‍ರುದ್ರಾಕ್ಷದರ್ಶನಾತ್ | ಭಕ್ತ್ಯ ರಾತ್ರೋ ದಿವಾಪಾಪಂ ದಿವಾರಾತ್ರಿ ಕೃತಂ ಹರೇತ್ || ಲಕ್ಷಂತು ದರ್ಶನಾತ್ಪುಣ್ಯಂ ಕೋಟಿ ಸಂಸ್ಪರ್ಶನೇ ಭವೇತ್ | ತತ್ಕೋಟಿ ಶತಂ ಪುಣ್ಯಂ ಲಭತೇ ಧಾರಣಾನ್ನರಃ || ಲಕ್ಷಕೋಟಿ ಸಹಸ್ರಾಣಿ ಲಕ್ಷಕೋಟಿ ಶತಾನಿ ಚ | ತಜ್ಜಪಾಲ್ಲಭತೇ ಪುಣ್ಯಂ ನಾತ್ರ ಕಾರ್ಯಂ ವಿಚಾರಣಾತ್ ||'' ಇಂತೆಂದುದಾಗಿ, ಇದಕ್ಕೆ ಮಹಾದೇವೋoವಾಚ : ``ಶಿರೋಮಾಲಾ ಚ ಷಟ್ತ್ರಿಂಶದ್ವಾತ್ರಿಂಶತ್ಕಂಠಮಾಲಿಕಾ | ಕೂರ್ಪರೇ ಷೋಡಶ ಪ್ರೋಕ್ತಾ ದ್ವಾದಶಂ ಮಣಿಬಂಧಯೋಃ || ಉರೋಮೂಲಾಚ ಪಂಚಾಶತಷ್ಟೋತ್ತರಶತಂ ತಥಾ | ಶಿರಸಾ ಧಾರಯತ್ಕೋಟಿ ಕರ್ಣಾಭ್ಯಾಂ ದಶಕೋಟಿಯಃ || ಗಳೇ ಬಂಧಂ ಶತಂ ಕೋಟಿ ಮೂಧ್ರ್ನಿ ಕೋಟಿಸಹಸ್ರಕಂ | ಆಯುಕಂಠೋಪವಿತ್ತಂ ಚ ಲಕ್ಷಮಾವೇ ಮಣಿಬಂಧಯೋರ್ಣ ವಕ್ತ್ರಾಣಿ | ದ್ವಾದಶಾದಿತ್ಯಾದಿ ಪಾಯು ಶ್ರೀಮಹಾದೇವಾಯ ನಮಃ || ಅಷ್ಟೋತ್ತರಶತಂ ಸೋಪವಿ ತ್ತಂ ಚತುರ್ದಶ ವಕ್ತ್ರಾಣಿ | ಶತರುದ್ರಾತ್ಮಾಕಾಯ ಶ್ರೀ ವಿಶ್ವೇಶ್ವರಾಯ ನಮಃ ಇತಿ ||'' ಇಂತೆಂದುದಾಗಿ, ಇದಕ್ಕೆ ಬೋಧಾಯನಶಾಖಾಯಾಂ : ``ತಾನಿ ಹವಾಏತಾನಿ ರುದ್ರಾಕ್ಷಾಣಿ ಯತ್ರ ಯೋ ಯೇ ಧಾರಯಂತಿ ಕಸ್ಮಾದೇವ ಧಾರಯಂತಿ ಸ್ನಾತ್ತ್ವಾನಿ ಧಾರಯನ್ ಗರ್ಭೇ ತಿಷ್ಟನ್ ಸ್ವಪನ್ ಖಾದನ್ ಉನ್ಮಿಷನ್ ಅಪಿ ಸರ್ವಾಣೈವಾನಿ ಚರತಿ ಮದ್ರಿ ಭೂತ್ವಾ ರುದ್ರೋ ಭವತಿ ಯೋಯೇನ ವಿದ್ವಾನ್ ಬ್ರಹ್ಮಚಾರೀ ಗೃಹಸ್ಥೋ ವಾನಪ್ರಸ್ಥೋಯತಿರ್ವಾ ಧಾರಯೇತ್ ಪದೇ ಪದೇ ಯಶ್ವಮೇಧಫಲಂ ಪ್ರಾಪ್ನೋತಿ ||'' ಇಂತೆಂದುದು ಶ್ರುತಿ. ಇದಕ್ಕೆ ಲೈಂಗ್ಯಪುರಾಣೇ : ``ರುದ್ರಾಕ್ಷಂ ಧಾರಯೇದ್ವಿಪ್ರಃ ಸಂಧ್ಯಾದಿಷು ಚ ಕರ್ಮಸು | ತತ್ಸರ್ವಂ ಸಮವಾಪ್ನೋತಿ ಕೋಟಿ ಕೋಟಿ ಗುಣಂ ಸದಾ || ಸ್ನಾನೇ ದಾನೇ ಜಪೇ ಹೋಮೇ ವೈಶ್ಯದೇವೇಷುರರ್ಚನೆ | ಪ್ರಾಯಶ್ಚಿತ್ತೇ ಕಥಾ ಶ್ರಾದ್ಧೇ ದೀಕ್ಷಾಕಾಲೇ ವಿಶೇಷತಃ || ರುದ್ರಾಕ್ಷಧರೋ ಭೂತ್ವಾ ಯತ್ಕಿಂಚಿತ್ಕರ್ಮವೈದಿಕಂ | ಕುರ್ಯಾದ್ವಿಪ್ರಸ್ತು ಯೋ ಮೋಹ ವಂಶಾವಪ್ನೋತಿ ತತ್ಫಲಂ ||'' ಇಂತೆಂದುದಾಗಿ, ಇದಕ್ಕೆ ಸ್ಕಂದಪುರಾಣೇ : ``ಲಕ್ಷಂತು ದರ್ಶನಾತ್ಪುಣ್ಯಂ ಕೋಟಿ ಸಂಸ್ಪರ್ಶನಾದಪಿ | ದಶಕೋಟಿ ಶತಂ ಪುಣ್ಯಂ ಧಾರಣಾಲ್ಲಭತೇ ವರಂ ||'' ಇಂತೆಂದುದಾಗಿ, ಇದಕ್ಕೆ ಕೂರ್ಮಪುರಾಣೇ : ``ಹಸ್ತೇಚೋರಸಿ ಕಂಠೇ ವಾ ಮಸ್ತಕೇ ವಾsಪಿ ಧಾರಯೇತ್ | ಮುಚ್ಯತೇ ಸರ್ವಪಾಪೇಭ್ಯಃ ಸ ರುದ್ರೋ ನಾತ್ರಸಂಶಯಃ || '' ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ಶಿಖಾಯಾಂ ಧಾರಯೇದೇಕಂ ಷಟ್ತ್ರಿಂಶನ್ಮಸ್ತಕೇ ತಥಾ| ದ್ವಾತ್ರಿಂಶತ್ಕಂಠದೇಶೇಚ ಪಂಚಾಷಣ್ಮಾಲಿಕಾ ಹೃದಿ || ಷೋಡಶಂ ಬಾಹುಮೂಲಯೋಃ ದ್ವಾದಶಂ ಮಣಿಬಂಧಕೇ | ಕರ್ಣಯೇಕೀಕಮೇಶುಸ್ಯಾ ದುಪವಿತೇ ಶತಾಷ್ಟಕಂ || ಶತಾಷ್ಟಮಕ್ಷಮಾಲಾಂತು ನಿತ್ಯಂ ಧಾರಯೇತೇ ವರಃ | ಪದೇ ಪದೇsಶ್ವಮೇಧಸ್ಯ ಫಲಂ ಪ್ರಾಪ್ನೋತಿ ನ ಸಂಶಯಃ || ಇಂತೆಂದುದಾಗಿ, ಇದಕ್ಕೆ ಈಶ್ವರೋsವಾಚ : ``ರುದ್ರಾಕ್ಷ ಶತಕಂಠೋ ಯಃ ಗೃಹೇ ತಿಷ*ತಿ ಯೋ ವರಃ | ಕುಲೈಕವಿಂಶಮುಕ್ತಾರ್ಯ ಶಿವಲೋಕೇ ಕೋಟಿಭುಜದ್ವಯಂ | ಅಪ್ರಮೇಯ ಫಲಂ ಹಸ್ತೇ ರುದ್ರಾಕ್ಷಂ ಮೋಕ್ಷಸಾಧನಂ ||'' ಇಂತೆಂದುದಾಗಿ, ಇದಕ್ಕೆ ಈಶ್ವರೋsವಾಚ : ``ಅವದ್ಯಃ ಸರ್ವಭೂತಾನಾಂ ರುದ್ರವದ್ವಿಚರೇತ್ ಭುವಿ | ಸುರಾಣಾಮಸುರಾಣಾಂ ಚ ವಂದನೀಯೋ ಯಥಾ ಶಿವಃ || ರುದ್ರಾಕ್ಷರಧಾರಶೋ ನಿತ್ಯಂ ವಂದನೀಯೋ ನರೈರಿಹ | ಉಚ್ಛಿಷ್ಟೋ ವಾ ವಿಕರ್ಮಸ್ತೋ ಯುಕ್ತೋ ವಾ ಸರ್ವಪಾಪಕೈಃ | ಮುಚ್ಯತೇ ಸರ್ವಪಾಪೇಭ್ಯೋ ನರೋ ರುದ್ರಾಕ್ಷಧಾರಣಾತ್ ||'' ಇಂತೆಂದುದಾಗಿ ಇದಕ್ಕೆ ಕಾತ್ಯಾಯನಶಾಖಾಯಾಂ : ``ಅಥೈವ ಭಗವಂತಂ ರುದ್ರಕುಮಾರಃ ಪಪ್ರಚ್ಛಾರಣೇನ ದಶಶತ ಗೋದಾನಫಲಂ || ದರ್ಶನಸ್ಪರ್ಶನಾಭ್ಯಾಂ ದ್ವಿಗುಣಂ ತ್ರಿಗುಣಂ ಫಲಂ ಭವತಿ, ಅತ ಊಧ್ರ್ವಂ ವಕ್ತುಂ ನ ಶಕ್ನೋಮಿ ತತೋಂ ಜಪ ಸಮಂತ್ರಕಂ ಧಾರಣೇ ವಿಧಿಂ ಕಥಯಾಮಿ || ಸ್ನಾನ ವಿಧಿನಾ ಸ್ನಾತೇಷು ಖೇರಾಜ್ಞೇಯ ಸ್ನಾನಂ ತ್ರಿಪುಂಡ್ರಧಾರಣಂ ಕೃತ್ವಾ ಏಕಾಶ್ಯಾದಿರುದ್ರ ಶಾಂತಾನಾಂ || ಸೃಷ್ಟಿಕ್ರಮೇಣಂ ಮಂತ್ರಾಸ್ಯಂ `ಓಂ ಹೂಂ ಚಂ ಖಂ ಹೂಂ ಕ್ಲಿಂ ಮಾಂ ದ್ರಾಂ ದ್ರಿಂ ಹ್ರುಂ ಕ್ರೂಂ ಕ್ಷಾಂ ಕ್ಷಿಂ ಕ್ಷುಂ' ನವಮಿತೀಷುರುವೋಕ್ತ ಂ ಮಂತ್ರಾನನಂತಾ ಶೋಕ್ತ್ವಾನ್ವಾ ಜಪೇದಿಮಾನ್ ಪಾಣಾನಾಯಮ್ಯ ಸಮಸ್ತಪಾಪಕ್ಷಯಾರ್ಥಂ ಶಿವಜ್ಞಾನಾ ವಸ್ಯಾರ್ಥ ಸಮಸ್ತ ಮಂತ್ರಸ್ಸಹಧಾರಣಂ ಕರಿಷ್ಯಾಮಿತಿ ಸಂಕಲ್ಪ್ಯ ಶಿಖಾಯಾಮೇಕಮೇಕಸ್ಯಂ ಶ್ರೀ ಸದಾಶಿವಾಯ ನಮಃ ಇತಿ ||'' ``ದ್ವಿ ತ್ರಿ ದ್ವಾದಶವಕ್ತ್ರಾಣಿ ಶಿರಸಿ ತ್ರೀಣಿ ಧಾರಯೇತ್ | ವಹ್ನಿ ಸೂರ್ಯಸೋಮಾಧಿಪಾಯ ಶಿವಾಯ ನಮಃ ಇತಿ || ಏಕಾದಶ ವಕ್ತ್ರಂ ಷಟ್ತ್ರಿಂಶನ್ಮೂಧ್ರ್ನಿ ಷಟ್ತ್ರಿಂಶತ್ತತ್ವಾತ್ಮಕಾಯ | ನಮ ಇತಿ ಪಂಚದಶ ವಕ್ತ್ರಾಣಿ ಕರ್ಣಯೋರೇಕಮೇಕಂ || ಸೋಮಾಯ ನಮಃ ಇತಿ, ಯೇದಷ್ಟವಕ್ತ್ರಾಣಿ ಕಂಠೇ ದ್ವಾತ್ರಿಂಶತ್ | ತ್ರ್ಯಂಬಕಕಲಾತ್ಮನೇ ಶ್ರೀಕಂಠಾಯ ನಮಃ ಇತಿ || ಚತುರ್ವಕ್ತ್ರಂ ಪಂಚಷಣ್ಮಾಲಿಕಾಮುರಸಿ ಶ್ರೀಕಂಠಾದಿ | ಮೂತ್ರ್ಯಾಯಸ್ಥಿಕಾಯ ಶ್ರೀ ಸರ್ವಜ್ಞಾಯ ನಮಃ ಇತಿ || ಬಾಹೋ ತ್ರಯೋದಶವಕ್ತ್ರಾಣಿ ಷೋಡಶಸುಖಾಸನಾದಿ | ಷೋಡಶಮೂತ್ರ್ಯಾತ್ಮಕಾಯ ಶ್ರೀಕಂಠಾಯ ನಮಃ ಇತಿ || ದಕ್ಷೇರ್ಣವ ವಕ್ತ್ರಾಣಿ ಶ್ರೀ ವ್ಯೋಮಕಳಾತ್ಮಕಾಯ ಉಪಮಾಪತಯೇ ನಮಃ ಇತಿ ಉಪಾಯತೇ ||'' ಇಂತೆಂದುದಾಗಿ, ಇದಕ್ಕೆ ಮಹಾಲಿಂಗಪುರಾಣೇ : ``ರುದ್ರಾಕ್ಷಮಾಲಯಾ ಶುಭ್ರೋ ಜಟಾಜೂಟವಿರಾಜಿತಃ | ಭಸ್ಮಾವಲಿಪ್ತಸರ್ವಾಂಗಃ ಕಮಂಡಲುಕರಾನ್ವಿತಃ || ಕೃಷ್ಮಾಜಿನೋ ಪವಿತ್ರಾಂಗಃ ಆಶಾಹೆ ಪುಣ್ಯಕೀರ್ತನಃ | ಶಿವಃ ತಸ್ಮೆ ೈಃ ಮಹಾದೇವಂ ಯೋಗಿನಾಂ ಹೃದಯಾಲಯಂ ||'' ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ರುದ್ರಕ್ಷಧಾರಣಾಸ್ಸರ್ವೇ ಜಟಾಮಂಡಲಧಾರಣಾತ್ | ಅಕ್ಷಮಾಲಾರ್ಪಿತಕರಂ ತ್ರಿಪುಂಡ್ರಾಪಲಿಯುಕ್ತಾಂಗಂ | ಆಷೇಡೇವ ವಿರಾಜಿತಂ ಋಗ್ಯಜುಃಸಾಮರೂಪೇಣ | ಸೇವತೇಸ್ಮೈ ಮಹೇಶ್ವರಃ ಸಂಸ್ಥಾಯಮನೋದಿಷ್ಟಾಂಗೈ || ದೇವೈರ್ಮುನಿಗಣೈಸ್ತಥಾಮೃತ ತ್ರಿಪುಂಡ್ರಕೋ ದಿವ್ಯೇ | ರುದ್ರಾಕ್ಷೇಶ್ವ ವಿಭಾಷಿತಃ ಶುಭೇ ಸತತಂ ವಿಷ್ಟು| ಭಸ್ಮದಿಗ್ಧತಮೂಲತಃ ತ್ರಿಪುಂಡ್ರಾಂಕಿತ ಸರ್ವಾಂಗೋ | ಜಟಾಮಂಡಲಮಂಡನ ಭೂತಿ ತ್ರಿಪುಂಡ್ರರುದ್ರಾಕ್ಷಂ | ಅಕ್ಷರ ಮಾಲಾರ್ಪಿತಕರಃ ಕುರ್ವಕ್ತ್ರಃ ಪಿತಾಮಹಾ ||'' ಇಂತೆಂದುದಾಗಿ, ಇದಕ್ಕೆ ಮಹಾದೇವೋವಾಚ : ``ಭಾಲೇ ತ್ರಿಪುಂಡ್ರಕಂ ಚೈವ ಗಳೇ ರುದ್ರಾಕ್ಷಮಾಲಿಕಾ | ವಕ್ತ್ರೇ ಷಡಕ್ಷರೀ ಮಂತ್ರೋ ಸ ರುದ್ರೋ ನಾತ್ರ ಸಂಶಯಃ ||'' ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ರುದ್ರಕ್ಷಮಾಲಿಕಾ ಕಂಠೇ ಧಾರಸ್ತದ್ಭಕ್ತಿವರ್ಜಿತಃ | ಪಾಪಕರ್ಮಾಪಿ ಯೋ ನಿತ್ಯಂ ರುದ್ರಲೋಕೇ ಮಹೀಯತೇ ||'' ಇಂತೆಂದುದಾಗಿ, ಇದಕ್ಕೆ ಸ್ಕಂದಪುರಾಣೇ : ``ರುದ್ರಾಕ್ಷಂ ಕಂಠಮಾಶ್ರಿತ್ಯ ಶ್ವಾನೋsಪಿ ಮಿೃಯತೇ ಯದಿ | ಸೋsಪಿ ರುದ್ರಂ ಸಮಾಪ್ನೋತಿ ಕಿಂ ಪುನರ್ಮಾನುಷಾದಯಃ || ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ಖಾದನ್ ಮಾಂಸಂ ಪಿಬನ್ ಮದ್ಯಂ ಸಂಗಚ್ಛನ್ನಂತ್ಯಜೇಷ್ವಪಿ | ಸದ್ಯೋ ಭವತಿ ಪೂತಾತ್ಮಾ ರುದ್ರಾಕ್ಷೌ ಶಿರಸಿ ಸ್ಥಿತೇ ||'' ಇಂತೆಂದುದಾಗಿ, ಇದಕ್ಕೆ ಈಶ್ವರ ಉವಾಚ : ``ಶುಚಿರ್ವಾಪ್ಯಶುಚಿರ್ವಾಪಿ ಅಭಕ್ಷಸ್ಯ ಚ ಭಕ್ಷಣಾತ್ | ಅಗಮ್ಯಾಗಮನಂ ಚೈವ ಬ್ರಹ್ಮಹಾ ಗುರುತಲ್ಪಕಃ || ಮ್ಲೇಚ್ಛೋ ವಾಪ್ಯಥ ಚಾಂಡಾಲೋ ಯುಕ್ತೋ ವಾ ಪ್ಯಥ ಪಾತಕೈಃ | ರುದ್ರಾಕ್ಷಧಾರಣಾದ್ಯಸ್ತು ಸ ರುದ್ರೋ ನಾತ್ರ ಸಂಶಯಃ ||'' ಇಂತೆಂದುದಾಗಿ, ಇದಕ್ಕೆ ಮಹಾಲಿಂಗಪುರಾಣೇ : ``ಧ್ಯಾನಧಾರಣಹೀನೋsಪಿ ರುದ್ರಾಕ್ಷಂ ಯೋ ಹಿ ಧಾರಯೇತ್ | ಸರ್ವಪಾಪವಿನಿರ್ಮುಕ್ತಃ ಸಯಾತಿ ಪರಮಾಂ ಗತಿಂ||'' ಇಂತೆಂದುದಾಗಿ, ಇದಕ್ಕೆ ಮಾನವಪುರಾಣೇ : ``ಮೃಣ್ಮಯಂ ವಾಪಿ ರುದ್ರಾಕ್ಷಂ ಕೃತ್ವಾ ಯಸ್ತು ಧಾರಯೇತ್ | ಅಪಿ ದುಃಕೃತಕರ್ಮೋsಪಿ ಸ ಯಾತಿ ಪರಮಾಂ ಗತಿಂ ||'' ಇಂತೆಂದುದಾಗಿ, ಇದಕ್ಕೆ ಶಿವಲಿಂಗಾಗಮೇ : ``ರುದ್ರಾಕ್ಷಮಾಲಂ ಬ್ರಹ್ಮಾ ಚ ತನ್ನಾಳಂ ವಿಷ್ಣುರುಚ್ಯತೇ | ಮುಖಂ ಸದಾಶಿವಂ ಪ್ರೋಕ್ತಂ ಬಿಂದುಃ ಸರ್ವತ್ರ ದೇವತಾ ||'' ಇಂತೆಂದುದಾಗಿ, ``ರುದ್ರಾಕ್ಷಿಯ ಧರಿಸಿಪ್ಪಾತನೆ ರುದ್ರನು. ಆತನ ಭವರೋಗಂಗಳು ಹೊದ್ದಲಮ್ಮವು ನೋಡಾ. `ಏವಂ ರುದ್ರಾಕ್ಷಧಾರಣಾದ್ ರುದ್ರಾ' ಎಂದುದು ಶ್ರುತಿ. ರುದ್ರಾಕ್ಷಿಯ ಧರಿಸಿಪ್ಪ ಶರಣರಿಗೆ ಶರಣೆಂದು ಬದುಕಿದೆನು ಕಾಣಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಆದಿ, ಅನಾದಿ, ಅನಾಗತ, ಅನಂತ, ಅದ್ಭುತ, ತಮಂಧ, ತಾರಜ, ತಂಡಜ, ಬಿಂದುಜ, ಭಿನ್ನಾಯುಕ್ತ, ಅವ್ಯಕ್ತ, ಆಮದಾಯುಕ್ತ, ಮಣಿರಣ, ಮಾನ್ಯರಣ, ವಿಶ್ವರಣ, ವಿಶ್ವವಸು, ಅಲಂಕೃತ, ಕೃತಯುಗ, ತ್ರೇತಾಯುಗ, ದ್ವಾಪರ[ಯುಗ], ಕಲಿಯುಗ- ಇಂತೀ ಇಪ್ಪತ್ತೊಂದು ಯುಗಂಗಳ ನಿರ್ಮಿಸಿದಾತ ನಮ್ಮ ಬಸವಣ್ಣ. ಪ್ರಥಮ ಯುಗದಲ್ಲಿ ಪೃಥ್ವಿ, ಅಪ್ಪು, ತೇಜ, ವಾಯು, ಆಕಾಶಂಗಳಿಲ್ಲದಂದು ಆರೂ ಆರೂ ಇಲ್ಲದಂದು, ನಾಮವಿಲ್ಲದಂದು, ಅಂದು ನಿಃಶೂನ್ಯವಾಗಿದ್ದ ಕಾಣ ನಮ್ಮ ಬಸವಣ್ಣ. ಅಂದು ನಿಮ್ಮ ನಾಭಿಕಮಲದಲ್ಲಿ ಜಲಪ್ರಳಯ ಪುಟ್ಟಿತ್ತು. ಆ ಜಲಪ್ರಳಯದಲ್ಲಿ ಒಂದುಗುಳ್ಳೆ ಲಿಂಗಾಕಾರವಾಗಿ ಪುಟ್ಟಿತ್ತು. ಆ ಲಿಂಗವ ತಕ್ಕೊಂಡು ಸ್ಥಾಪ್ಯವಿಟ್ಟಾತ ನಮ್ಮ ಬಸವಣ್ಣನು. ಇಪ್ಪತ್ತನೆಯ ಯುಗದಲ್ಲಿ ಓಂಕಾರವೆಂಬ ಮೇವ ಮೇದು, ಮೆಲುಕಿರಿದು, ಪರಮಾರ್ಥವೆಂಬ ಹೆಂಡಿಯನ್ನಿಕ್ಕಿ ನೊಸಲ ಕಣ್ಣತೆರೆದು ನೋಡಲಾಗಿ ಆ ಹೆಂಡಿ ಭಸ್ಮವಾಯಿತ್ತು. ಆ ಭಸ್ಮವನೆ ತೆಗೆದು ತಳಿಯಲಾಗಿ ಭೂಮಂಡಲ ಹೆಪ್ಪಾಯಿತ್ತು ಹೆಪ್ಪಾಗಲಿಕ್ಕಾಗಿ ತೊಡೆಯ ಮೇಲಿದ್ದ ಲಿಂಗವ ತಕ್ಕೊಂಡು ಸ್ಥಾಪ್ಯವಿಟ್ಟಾತ ನಮ್ಮ ಬಸವಣ್ಣ. ಹತ್ತೊಂಬತ್ತನೆಯ ಯುಗದಲ್ಲಿ ಏಕಪಾದದ ಮಾಹೇಶ್ವರನ ನಿರ್ಮಿಸಿದಾತ ನಮ್ಮ ಬಸವಣ್ಣ. ಹದಿನೆಂಟನೆಯ ಯುಗದಲ್ಲಿ ಕತ್ತಲೆಯ ಕಾಳೋದರನೆಂಬ ರುದ್ರನ ನಿರ್ಮಿಸಿದಾತ ನಮ್ಮ ಬಸವಣ್ಣ ಹದಿನೇಳನೆಯ ಯುಗದಲ್ಲಿ ವೇದಪುರಾಣಾಗಮಶಾಸ್ತ್ರಂಗಳ ನಿರ್ಮಿಸಿದಾತ ನಮ್ಮ ಬಸವಣ್ಣ ಹದಿನಾರನೆಯ ಯುಗದಲ್ಲಿ....... ಹದಿನೈದನೆಯ ಯುಗದಲ್ಲಿ ಅಮೃತಮಥನವ ಮಾಡಿದಾತ ನಮ್ಮ ಬಸವಣ್ಣ. ಹದಿನಾಲ್ಕನೆಯ ಯುಗದಲ್ಲಿ ತೆತ್ತೀಸಕೋಟಿ ದೇವರ್ಕಳ ನಿರ್ಮಿಸಿದಾತ ನಮ್ಮ ಬಸವಣ್ಣ. ಹದಿಮೂರನೆಯ ಯುಗದಲ್ಲಿ ಸೌರಾಷ್ಟ್ರ ಸೋಮೇಶ್ವರನ ನಿರ್ಮಿಸಿದಾತ ನಮ್ಮ ಬಸವಣ್ಣ. ಹನ್ನೆರಡನೆಯ ಯುಗದಲ್ಲಿ ಪಾರ್ವತಿಪರಮೇಶ್ವರರ ನಿರ್ಮಿಸಿದಾತ ನಮ್ಮ ಬಸವಣ್ಣ. ಹನ್ನೊಂದನೆಯ ಯುಗದಲ್ಲಿ ಏಕಾದಶ ರುದ್ರರ ನಿರ್ಮಿಸಿದಾತ ನಮ್ಮ ಬಸವಣ್ಣ. ಹತ್ತನೆಯ ಯುಗದಲ್ಲಿ ದಶವಿಷ್ಣುಗಳ ನಿರ್ಮಿಸಿದಾತ ನಮ್ಮ ಬಸವಣ್ಣ. ಒಂಬತ್ತನೆಯ ಯುಗದಲ್ಲಿ ನವಬ್ರಹ್ಮರ ನಿರ್ಮಿಸಿದಾತ ನಮ್ಮ ಬಸವಣ್ಣ. ಎಂಟನೆಯ ಯುಗದಲ್ಲಿ ಅಷ್ಟದಿಕ್ಪಾಲರ ನಿರ್ಮಿಸಿದಾತ ನಮ್ಮ ಬಸವಣ್ಣ. ಏಳನೆಯ ಯುಗದಲ್ಲಿ ಸಪ್ತ ಸಮುದ್ರಂಗಳ ನಿರ್ಮಿಸಿದಾತ ನಮ್ಮ ಬಸವಣ್ಣ. ಆರನೆಯ ಯುಗದಲ್ಲಿ ಷಣ್ಮುಖದೇವರ ನಿರ್ಮಿಸಿದಾತ ನಮ್ಮ ಬಸವಣ್ಣ. ಐದನೆಯ ಯುಗದಲ್ಲಿ ಪಂಚಮುಖದೀಶ್ವರನ ನಿರ್ಮಿಸಿದಾತ ನಮ್ಮ ಬಸವಣ್ಣ. ನಾಲ್ಕನೆಯ ಯುಗದಲ್ಲಿ ಚತುರ್ಮುಖದ ಬ್ರಹ್ಮನ ನಿರ್ಮಿಸಿದಾತ ನಮ್ಮ ಬಸವಣ್ಣ. ಮೂರನೆಯ ಯುಗದಲ್ಲಿ ಬ್ರಹ್ಮ, ವಿಷ್ಣು, ರುದ್ರರ ನಿರ್ಮಿಸಿದಾತ ನಮ್ಮ ಬಸವಣ್ಣ. ಎರಡನೆಯ ಯುಗದಲ್ಲಿ ಸಂಗಯ್ಯನ ನಿರ್ಮಿಸಿದಾತ ನಮ್ಮ ಬಸವಣ್ಣ. ಒಂದನೆಯ ಯುಗದಲ್ಲಿ ಪ್ರಭುವೆಂಬ ಜಂಗಮವ ನಿರ್ಮಿಸಿದಾತ ನಮ್ಮ ಬಸವಣ್ಣ. ಇಂತೀ ಇಪ್ಪತ್ತೊಂದು ಯುಗಂಗಳಲ್ಲಿ ಬಸವಣ್ಣನು ತಮ್ಮ ಕರಕಮಲವೆಂಬ ಗರ್ಭದಲ್ಲಿ ಜನಿಸಿದನೆಂದು. ಕಕ್ಕಯ್ಯಗಳು ತಮ್ಮ ಮೋಹದ ಮಗನೆಂದು ಒಕ್ಕುದನಿಕ್ಕಿ ಸಲಹಿದರು ಕಾಣಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಈಶ್ವರ ಲೀಲಾಮೂತಿಯಾಗಿ ಏಕಾದಶ ರುದ್ರಮೂರ್ತಿಯ ಭಾವಿಸುವಲ್ಲಿ ವಾದರುದ್ರನ ಕಳುಹಿದ ಬಿಜ್ಜಳನೆಂಬ ನಾಮವ ಕೊಟ್ಟು, ಕಾಲರುದ್ರನ ಕಳುಹಿದ ಭಕ್ತಿನಾಮವ ಕೊಟ್ಟು ಬಸವೇಶ್ವರನ, ಮಾಯಾಕೋಳಾಹಳನೆಂಬ ರುದ್ರನ ಕಳುಹಿದ ಪ್ರಭುನಾಮವ ಕೊಟ್ಟು, ಮತ್ಸರವೆಂಬ ನಾಮ ಗುಪ್ತಗಣೇಶ್ವರನೆಂಬ ನಾಮವ ತಾಳ್ದು ಬಪ್ಪುದಕ್ಕೆ ಮುನ್ನವೇ ಐಕ್ಯ. ಪ್ರಮಥರುಗಳು ಪ್ರಕಟವ ಮಾಡಲಿಕ್ಕೆ ಬಂದಿತ್ತು. ಎನಗೆ ಮತ್ರ್ಯದ ಭವ. ಭವ ಬಸವನಿಂದ ಹರಿವುದು. ನಾ ಬಿತ್ತಿದ ಬೆಳೆಯೆನಗೆ ಫಲಭೋಗವನಿತ್ತು ಎನ್ನ ಅವತಾರಭಕ್ತಿ ಇನ್ನೆಂದು ಮೀರವಪ್ಪುದು, ಅಚ್ಚುತಪ್ರಿಯ ರಾಮನಾಥಾ.
--------------
ಗುಪ್ತ ಮಂಚಣ್ಣ
ಏಕಾದಶ ರುದ್ರರು ಹೊರಗಾದ, ಈರೇಳು ಲೋಕ ಹದಿನಾಲ್ಕು ಭುವನ ಯುಗಜುಗಂಗಳಲ್ಲಿ ಒಳಗಾಗಿ ತಿರುಗುವುದೊಂದು ಶಕ್ತಿಯ ಭೇದ. ದಶಾವತಾರವಾಗಿ ಕಾಲಕರ್ಮಂಗಳಲ್ಲಿ ಓಲಾಡುತ್ತಿಪ್ಪುದು ಒಂದು ಶಕ್ತಿಯ ಭೇದ. ಉಂಟು ಇಲ್ಲಾ ಎಂದು ನಿಶ್ಚಿಂತಕ್ಕೆ ಹೋರುವುದೊಂದು ಶಕ್ತಿಯ ಭೇದ. ಇಂತೀ ತ್ರಿವಿಧಶಕ್ತಿಯ ಆದಿ ಆಧಾರವನರಿದು ಕರ್ಮವ ಕರ್ಮದಿಂದ ಕಂಡು, ಧರ್ಮವ ಧರ್ಮದಿಂದ ಅರಿದು, ಜ್ಞಾನವ ಜ್ಞಾನದಿಂದ ವಿಚಾರಿಸಿ, ಇಂತೀ ತ್ರಿಗುಣದಲ್ಲಿ ತ್ರಿಗುಣಾತ್ಮಕನಾಗಿ, ದರ್ಪಣದಿಂದ ಒಪ್ಪಂಗಳನರಿವಂತೆ ಅರಿವು ಕುರುಹಿನಲ್ಲಿ ನಿಂದು, ಕುರುಹು ಅರಿವನವಗವಿಸಿದಲ್ಲಿ ತ್ತøಮೂರ್ತಿ ನಷ್ಟವೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಸ್ಥಲವೆಂದರೆ ಒಂದು, ನೆಲೆಯೆಂದರೆ ಎರಡು, ಕಲೆಯೆಂದರೆ ಮೂರು, ಕರಣವೆಂದರೆ ನಾಲ್ಕು, ಕಾಯವೆಂದರೆ ಐದು, ಕಾಮವೆಂದರೆ ಆರು, ಸೀಮೆಯೆಂದರೆ ಏಳು, ನೇಮವೆಂದರೆ ಎಂಟು, ತಾಮಸವೆಂದರೆ ಒಂಬತ್ತು , ಹರಿಯೆಂದರೆ ಹತ್ತು, ಹರನೆಂದರೆ ಇನ್ನೊಂದು. ಇದೇ ದಶವಿಧ ಪಾದೋದಕ, ಇದೇ ಏಕಾದಶ ಪ್ರಸಾದ. ಇದೇ ಅರ್ಪಿತ, ಇದೇ ಅವಧಾನ, ಇದೇ ಸುಯಿದಾನ. ಇದೇ ಶುದ್ಧಸಿದ್ಧಪ್ರಸಿದ್ಧ ಪ್ರಸಾದ. ಇದೇ ನಮ್ಮ ಬಸವಪ್ರಿಯ ಕೂಡಲಚೆನ್ನಬಸವಣ್ಣ ಆಡುವ ಹೊಲಸ್ಥಲದ ನೆಲೆ.
--------------
ಹಡಪದ ಅಪ್ಪಣ್ಣ
ತ್ರಿವಿಧಲಿಂಗಕ್ಕೆ ಸೂತ್ರಭೇದ. ಸ್ಥಾವರಲಿಂಗ ಬಾಣಲಿಂಗ ಇಷ್ಟಲಿಂಗಕ್ಕೆ, ಪಂಚಸೂತ್ರದ ತ್ರಿವಿಧಲಿಂಗಕ್ಕೆ ಲಕ್ಷಣಭೇದ. ಚಕ್ರದಂಡಕ್ಕೆ ಖಂಡಿಕಾದಂಡಕ್ಕೆ ಶಕ್ತಿಪೀಠ ಗೋಮುಖಕ್ಕೆ ಪಂಚಾಂಗುಲದಲ್ಲಿ ಪ್ರಥಮಾಂಗುಲದ ರೇಖೆ ಮಧ್ಯದಲ್ಲಿ ಹೇಮ ಪ್ರಥಮ ಅಂಗುಲ ಗತಿ ನಾಲ್ಕರಲ್ಲಿ ಏಕಾದಶ ಪ್ರಕಾರ ಪ್ರಯೋಗದಲ್ಲಿ ಗುಣಿತದ ಸೂತ್ರ ಲೆಕ್ಕ ಪ್ರಯೋಗಿಸಿರೆ ಚಕ್ರದಂಡಭೇದ. ಆ ಅರೆಪ್ರಯೋಗ ಸೂತ್ರ ಖಂಡಿಕಾದಂಡ. ಆ ಉಭಯಭೇದ ಸೂತ್ರಸಂಬಂಧ ಗೋಮುಖ ಸೂತ್ರಾವಟ್ಟ ಪರಿವರ್ತನ ಪ್ರಯೋಗಸಂಬಂಧ. ವಿಸ್ತೀರ್ಣಕ್ಕೆ ದಿಗ್ವಳಯಕ್ಕೆ ಸರ[ಳ]ರೇಖೆ ಶುದ್ಧಪೀಠಿಕಾವಳಯಕ್ಕೆ ಮೇಲೆ ಲಿಂಗಪ್ರಯೋಗ ಚಕ್ರ. ಖಂಡಿಕಾಶಕ್ತಿಪೀಠಕ್ಕೆ ಲಿಂಗಪ್ರಮಾಣ ಲಕ್ಷಣಭೇದ. ಕುಬ್ಜ ದೀರ್ಘ ಹರಿವರಿಯಿಲ್ಲದೆ ಪ್ರಮಾಣ ಪಂಚಸೂತ್ರವಾಗಿ ರವಿ ಶಶಿ ಪವನ ಪಾವಕ ಪವಿತ್ರಯೋಗಿ ರೇಖೆ ಮುಂತಾದ ಲಕ್ಷಣಯುಕ್ತಿಯಲ್ಲಿ ಪ್ರತಿಷೆ* ಶೈವಲಿಂಗಭೇದ. ಆ ಪ್ರಮಾಣುವಿನಲ್ಲಿ ಸ್ಥೂಲಕ್ಕೆ ಸ್ಥೂಲ ಸೂಕ್ಷ್ಮಕ್ಕೆ ಸೂಕ್ಷ್ಮ. ಈ ಸೂತ್ರದಲ್ಲಿ ಬಾಣಲಿಂಗ ಇಷ್ಟಲಿಂಗದ ಲಕ್ಷಣಯುಕ್ತಿ. ಇಂತೀ ಭೇದ ಉತ್ತಮ ಕನಿಷ* ಮಧ್ಯಮವೆಂದು ಸಂಕಲ್ಪಕ್ಕೊಳಗಹ ವೇದಾಂತ ಪ್ರಥಮಪ್ರತಿಷೆ* ಆಚಾರ್ಯನ ಕರ್ಮಕ್ರೀ. ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವನರಿವುದಕ್ಕೆ ಆಚಾರ್ಯನಂಗ.
--------------
ಪ್ರಸಾದಿ ಭೋಗಣ್ಣ
ಅಯ್ಯಾ, ಜಗತ್ಪಾವನ ನಿಮಿತ್ಯರ್ಥವಾಗಿ ಸಾಕಾರೀಲೆಯ ಧರಿಸಿದ ಸ್ವಯಚರಪರಗುರುಚರಮೂರ್ತಿಗಳ ಅರ್ಪಿತಾವಧಾನದ ನಿಲುಕಡೆಯೆಂತೆಂದೆಡೆ: ಲಿಂಗಾಚಾರ ಮೊದಲಾದ ಸದ್ಭಕ್ತ ಶರಣಗಣಂಗಳಲ್ಲಿ ಲಿಂಗಾರ್ಪಿತಭಿಕ್ಷಲೀಲೆಯ ಧರಿಸಿ ಹೋದ ವ್ಯಾಳ್ಯದೊಳು ಆ ಭಕ್ತಗಣಂಗಳು ಶರಣುಹೊಕ್ಕು ಸಮಸ್ತ ಆಚರಣೆಯ ಒದಗಿಸಿಕೊಟ್ಟ್ಲ ದಶವಿಧ ಪಾದೋದಕ ಏಕಾದಶ ಪ್ರಸಾದದಾಚರಣೆಯಾಗುವದಯ್ಯಾ. ಇಂತು ಲಿಂಗಾಚಾರ ಭಕ್ತಗಣಂಗಳು ದೊರೆಯದಿರ್ದಡೆ ವೇದಾಂತಿ ಸಿದ್ಧಾತಿ ತಿನ್ನಯೋಗಿ ಮೊದಲಾದ ಸಮಸ್ತಮತದಿಂದ ಏಕಶಬ್ದಭಿಕ್ಷವ ಸಪ್ತಗೃಹವ ಬೇಡಿ ದುರ್ಗುಣಯುಕ್ತವಾದ ಅಯೋಗ್ಯದ್ರವ್ಯವನುಳಿದು ಸದ್ಗುಣಯುಕ್ತವಾದ ಯೋಗ್ಯದ್ರವ್ಯವ ಕೈಕೊಂಡು, ಧೂಳಪಾದಜಲದಿಂದ ಭವಿತನವ ಕಳೆದು ಭಕ್ತಪದಾರ್ಥವೆನಿಸಿ ಅಘ್ರ್ಯಪಾದ್ಯಾಚಮನವ ಮಾಡಿ ಧಾನ್ಯವಾದಡೆ ಪರಿಣಾಮಜಲಂ ಶೋಧಿಸಿ ಪಾಕವ ಮಾಡಿ, ಫಲಾಹಾರವಾದಡೆ ಶೋಧಿಸಿ ಪಕ್ವವ ಮಾಡಿಟ್ಟು ಆಮೇಲೆ, ಅಯ್ಯಾ, ನಿನಗೆ ಭಕ್ತಗಣಂಗಳು ದೊರೆಯದ ಸಮಯದಲ್ಲಿ ಚತುರ್ವಿಧ ಪಾದೋದಕವೆಂತುಟೆಂದಡೆ: ಏಕಾಂತವಾಸದಲ್ಲಿ ಪರಿಣಾಮತರವಾದ ಹಳ್ಳ ಹೊಳೆ ಕೆರೆ ಬಾವಿ ಮಡು ಹೊಂಡ ಚಿಲುಮೆ ಕೊಳ ಮೊದಲಾದ ಸ್ಥಾನಕ್ಕೆ ಹೋಗಿ ಪ್ರಥಮದಲ್ಲಿ `ಶಿವ ಶಿವ! ಹರಹರ! ಗುರುಬಸವಲಿಂಗ!' ಎಂಬ ಮಂತ್ರಧ್ಯಾನದಿಂದ ಪಾದವನಿಟ್ಟು ಚರಣಸೋಂಕಿನಿಂ ಪವಿತ್ರವಾದುದಕವೆ ಧೂಳಪಾದೋದಕವೆನಿಸುವದಯ್ಯ; ಆ ಮೇಲೆ ತಂಬಿಗೆಯೊಳಗೆ ಶೋಧಿಸಿ ಬಸವಾಕ್ಷರವ ಲಿಖಿಸುವದೆ ಗುರುಪಾದೋದಕವೆನಿಸುವದಯ್ಯ; ಆ ಮೇಲೆ ಅರ್ಚನಾಕ್ರಿಯೆಗಳ ತೀರ್ಚಿಸಿಕೊಂಡು ನಿಚ್ಚಪ್ರಸಾದಿ ಸಂಬಂಧಾಚರಣೆಯಂತೆ ಮುಗಿದಲ್ಲಿ ಜಂಗಮ ಪಾದೋದಕವೆನಿಸುವದಯ್ಯ. ಇಂತು ಚತುರ್ವಿಧ ಪಾದೋದಕದೊಳಗೆ ಷಡ್ವಿಧ ಪಾದೋದಕ ಉಂಟಯ್ಯ. ಅದೆಂತೆಂದಡೆ: ಹಸ್ತವಿಟ್ಟು ಸ್ಪರ್ಶನವ ಮಾಡೆ ಸ್ಪರ್ಶನೋದಕವೆನಿಸುವದಯ್ಯ; ಲಿಂಗಕ್ಕೆ ಧಾರೆಯಿಂದ ಅಭಿಷೇಕವ ಎರೆದಲ್ಲಿ ಅವಧಾರೋದಕವೆನಿಸುವದಯ್ಯ; ಲಿಂಗಾರ್ಪಿತವ ಮಾಡಬೇಕೆಂಬ ಆನಂದವೆ ಆಪ್ಯಾಯನೋದಕವೆಂದೆನಿಸುವದಯ್ಯ; ಅರ್ಪಿತಮುಖದಲ್ಲಿ ಹಸ್ತವ ಪ್ರಕ್ಷಾಸಿ ಖಂಡಿತವ ಮಾಡಿದಲ್ಲಿಗೆ ಹಸ್ತೋದಕವೆನಿಸುವದಯ್ಯ; ಲಿಂಗಕ್ಕೆ ಸಂತೃಪ್ತಿಪರಿಯಂತರವು ಅರ್ಪಿತವ ಮಾಡಿ[ದಲ್ಲಿ] ಪರಿಣಾಮೋದಕವೆನಿಸುವದಯ್ಯ; ತಟ್ಟೆ ಬಟ್ಟಲ ಲೇಹವ ಮಾಡಿದಲ್ಲಿ ನಿರ್ನಾಮೋದಕವೆನಿಸುವದಯ್ಯ; ಲೇಹವ ಮಾಡಿದ ಮೇಲೆ ದ್ರವ್ಯವನಾರಿಸಿ ಸರ್ವಾಂಗದಲ್ಲಿ ಲೇಪಿಸುವದೆ ಸತ್ಯೋದಕವೆನಿಸುವದಯ್ಯ. ಇಂತೀ ದಶವಿಧ ಪಾದೋದಕದ ವಿಚಾರವ ತಿಳಿದು ಆ ಮೇಲೆ ನಿಚ್ಚಪ್ರಸಾದಿಯ ಸಂಬಂಧಾಚರಣೆಯಂತೆ ಪ್ರಸಾದವ ಮುಗಿವದಯ್ಯ. ಅದರೊಳಗೆ ಏಕಾದಶಪ್ರಸಾದದ ವಿಚಾರವೆಂತೆಂದಡೆ: ಪ್ರಥಮದಲ್ಲಿ ಹಸ್ತಸ್ಪರ್ಶ ಮಾಡಿದಂತಹದೆ ಗುರುಪ್ರಸಾದವೆನಿಸುವದಯ್ಯ; ಇಷ್ಟ ಮಹಾಲಿಂಗಕ್ಕೆ ಮಂತ್ರಸ್ಮರಣೆಯಿಂದ ಮೂರು ವೇಳೆ ರೂಪನರ್ಪಿಸಿದಲ್ಲಿಗೆ ಲಿಂಗಪ್ರಸಾದವೆನಿಸುವದಯ್ಯ; ಎರಡು ವೇಳೆ ಇಷ್ಟಮಹಾಂಗದೇವಂಗೆ ರೂಪನರ್ಪಿಸಿದಲ್ಲಿಗೆ ಲಿಂಗಪ್ರಸಾದವೆನಿಸುವದಯ್ಯ; ಎರಡುವೇಳೆ ಇಷ್ಟಮಹಾಂಗದೇವಂಗೆ ರೂಪನರ್ಪಿಸಿ ಜಿಹ್ವೆಯಲ್ಲಿಟ್ಟ್ಲ ಜಂಗಮ ಪ್ರಸಾದವೆನಿಸುವದಯ್ಯ; ಆ ಮೇಲೆ ಲಿಂಗದೇವರಿಗೆ ತೋರಿ ಬೋಜೆಗಟ್ಟಿ ಲಿಂಗದೇವಂಗೆ ತೋರಿ ಜಿಹ್ವೆಯ್ಲಟ್ಟಂತಹದೆ ಪ್ರಸಾದಿಯ ಪ್ರಸಾದವೆನಿಸುವದಯ್ಯ; ಆ ಭೋಜ್ಯರೂಪಾದ ಪ್ರಸಾದಿಯ ಪ್ರಸಾದದೊಳಗೆ ಮಧುರ ಒಗರು ಕಾರ ಆಮ್ಲ ಕಹಿ ತೃಪ್ತಿ-ಮಹಾತೃಪ್ತಿಯೆ ಆಪ್ಯಾಯನ, ಸಮಯ, ಪಂಚೇಂದ್ರಿಯವಿರಹಿತ, ಕರಣಚತುಷ್ಟಯವಿರಹಿತ, ಸದ್ಭಾವ, ಸಮತೆ, ಜ್ಞಾನಪ್ರಸಾದ ಮೊದಲಾದವು ಸಪ್ತವಿಧಪ್ರಸಾದವೆನಿಸುವದಯ್ಯ. ಇಂತು ಪರಾಧೀನತೆಯಿಂ ಭಿಕ್ಷವ ಬೇಡಲಾರದಿರ್ದಡೆ, ಅರಣ್ಯದಲ್ಲಿ ಫಲರಸಯುಕ್ತವಾದ ಹಣ್ಣು ಕಾಯಿಗಳ ಲಿಂಗಾರ್ಪಿತ ಭಿಕ್ಷೆಯೆಂದು ಆ ಫಲಾದಿಗಳ ತೆಗೆದುಕೊಂಡು ಶೋಧಿಸಿ, ಪವಿತ್ರವ ಮಾಡಿ ಲಿಂಗಾರ್ಪಿತ ಭೋಗಿಯಾದಾತನೆ ಸ್ವಯಂಭು ಪ್ರಸಾದ ಭಕ್ತನಾದ ಚಿತ್ಕಲಾಪ್ರಸಾದಿ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಅನಾದಿಕುಳುಸನ್ಮತವಾದ ಏಕಾದಶಪ್ರಸಾದವ ಕುಳವ ತಿಳಿವಡೆ; ಪ್ರಥಮದಲ್ಲಿ ಗುರುಪ್ರಸಾದ, ದ್ವಿತೀಯದಲ್ಲಿ ಲಿಂಗಪ್ರಸಾದ, ತೃತೀಯದಲ್ಲಿ ಜಂಗಮಪ್ರಸಾದ, ಚತುರ್ಥದಲ್ಲಿ ಪ್ರಸಾದಿಪ್ರಸಾದ ಪಂಚಮದಲ್ಲಿ ಅಪ್ಯಾಯನ ಪ್ರಸಾದ, ಷಷ*ಮದಲ್ಲಿ ಸಮಯಪ್ರಸಾದ, ಸಪ್ತಮದಲ್ಲಿ ಪಂಚೇಂದ್ರಿಯವಿರಹಿತ ಪ್ರಸಾದ ಅಷ್ಟಮದಲ್ಲಿ ಅಂತಃಕರಣ ಚತುಷ್ಟಯವಿರಹಿತಪ್ರಸಾದ, ನವಮದಲ್ಲಿ ಸದ್ಭಾವಪ್ರಸಾದ, ದಶಮದಲ್ಲಿ ಸಮತಾಪ್ರಸಾದ, ಏಕಾದಶದಲ್ಲಿ ಜ್ಞಾನಪ್ರಸಾದ._ ಇಂತೀ ಏಕಾದಶ ಪ್ರಸಾದಸ್ಥಲವನತಿಗಳೆದ ಕೂಡಲಚೆನ್ನಸಂಗಯ್ಯನಲ್ಲಿ ಐಕ್ಯಪ್ರಸಾದಿಗೆ ನಮೋ ನಮೋ ಎಂದೆನು.
--------------
ಚನ್ನಬಸವಣ್ಣ
ಪೃಥ್ವಿಯಿಂದ ಈಶ್ವರ ಪರಿಯಂತ ಪಂಚವಿಶಂತಿ ತತ್ವಂಗಳುತ್ಪತ್ಯ, ಈಶ್ವರಾದಿ ಪರಶಿವ ಪರಿಯಂತ ಶಿವತತ್ವದುತ್ಪತ್ಯ. ದೇವತಾದಿಗೆ ಜಗದಾದಿಗೆ ಪೃಥ್ವಿಯಾದಿಗೆ ಪಂಚವಿಂಶತಿತತ್ವಂಗಳುತ್ಪತ್ಯಮಂ ಪೇಳ್ವೆ: ಪಂಚಶತಕೋಟಿ (ವಿಸ್ತೀರ್ಣ) ಭೂಮಂಡಲವಳಯದಲ್ಲಿ ಮೇರುಮಂದಿರದ ವಿಸ್ತೀರ್ಣ ಒಂದುಕೋಟಿ ಇಪ್ಪತ್ತಾರುಲಕ್ಷದ ಮೇಲೆ ಎಂಬತ್ತೈದುಸಾವಿರ ಯೋಜನ ಪ್ರಮಾಣು. ಆ ಮೇರುಮಂದಿರದ ಮೇಲೆ ಬ್ರಹ್ಮ ವಿಷ್ಣು ರುದ್ರ ಸದಾಶಿವ ನಂದಿ ಮಹಾಕಾಳ ವೀರಭದ್ರ ಅಷ್ಟಾಶೀತಿಸಹಸ್ರ ಋಷಿಯರು, ಅಸಂಖ್ಯಾತ ಮಹಾಗಣಂಗಳು, ದ್ವಾದಶಾದಿತ್ಯರು, ನಾರದಯೋಗೀಶ್ವರರು, ಅಷ್ಟದಿಕ್ಪಾಲಕರು ಏಕಾದಶ ರುದ್ರರು ಮುಖ್ಯವಾಗಿ ಶಿವಸುಖಸಂತೋಷದಿಂ ರಾಜ್ಯಂಗೆಯ್ವರು. ಆ ಮೇರುಮಂದಿರದ ಕೆಳಗಣ ಜಂಬೂದ್ವೀಪದ ವಿಸ್ತೀರ್ಣ ಲಕ್ಷದಮೇಲೆ ಇಪ್ಪತ್ತೈದುಸಾವಿರ ಯೋಜನಪ್ರಮಾಣು. (ಅಲ್ಲಿಂದ ಮುಂದೆ) ಲವಣಸಮುದ್ರ ಲಕ್ಷದಮೇಲೆ ಇಪ್ಪತ್ತೈದುಸಾವಿರ ಯೋಜನಪ್ರಮಾಣು. ಆ ಲವಣಸಮುದ್ರದಿಂದಾಚೆಯಲ್ಲಿ ಭೂಮಿ ಎರಡುಲಕ್ಷದ ಮೇಲೆ ಐವತ್ತುಸಾವಿರ ಯೋಜನಪ್ರಮಾಣು. (ಆ ದ್ವೀಪದ ಹೆಸರು ಪ್ಲಕ್ಷದ್ವೀಪ) ಪ್ಲಕ್ಷದ್ವೀಪಕ್ಕೆ ಇಕ್ಷುರಸಮುದ್ರ ಎರಡುಲಕ್ಷ ಐವತ್ತುಸಾವಿರ ಯೋಜನಪ್ರಮಾಣು. ಅದರಿಂದಾಚೆಯಲ್ಲಿ ಭೂಮಿ ಐದುಲಕ್ಷ ಯೋಜನಪ್ರಮಾಣು. (ಆ ದ್ವೀಪದ ಹೆಸರು ಶಾಲ್ಮಲಿದ್ವೀಪ) ಶಾಲ್ಮಲಿದ್ವೀಪಕ್ಕೆ ಮಧುಸಮುದ್ರ, ಐದುಲಕ್ಷ ಯೋಜನಪ್ರಮಾಣು. ಅದರಿಂದಾಚೆಯಲ್ಲಿ ಭೂಮಿ, ಹತ್ತುಲಕ್ಷ ಯೋಜನಪ್ರಮಾಣು. (ಆ ದ್ವೀಪಕ್ಕೆ ಹೆಸರು ಕುಶದ್ವೀಪ) ಕುಶದ್ವೀಪಕ್ಕೆ ಘೃತಸಮುದ್ರ ಹತ್ತುಲಕ್ಷ ಯೋಜನಪ್ರಮಾಣು. ಅಲ್ಲಿಂದತ್ತ ಭೂಮಿ, ಇಪ್ಪತ್ತೈದು ಲಕ್ಷ ಯೋಜನಪ್ರಮಾಣು. (ಆ ದ್ವೀಪದ ಹೆಸರು ಶಾಕದ್ವೀಪ) ಶಾಕದ್ವೀಪಕ್ಕೆ ದಧಿಸಮುದ್ರ, ನಾಲ್ವತ್ತುಲಕ್ಷ ಯೋಜನಪ್ರಮಾಣು. ಅದರಿಂದಾಚೆಯಲ್ಲಿ ಭೂಮಿ ನಾಲ್ವತ್ತುಲಕ್ಷ ಯೋಜನಪ್ರಮಾಣು. (ಆ ದ್ವೀಪದ ಹೆಸರು Põ್ಞ್ರಂಚದ್ವೀಪ) Põ್ಞ್ರಂಚದ್ವೀಪಕ್ಕೆ ಕ್ಷೀರಸಮುದ್ರ, ನಾಲ್ವತ್ತುಲಕ್ಷ ಯೋಜನಪ್ರಮಾಣು. ಅದರಿಂದಾಚೆಯಲ್ಲಿ ಭೂಮಿ, ಎಂಬತ್ತುಲಕ್ಷ ಯೋಜನಪ್ರಮಾಣು. (ಆ ದ್ವೀಪದ ಹೆಸರು ಪುಷ್ಕರದ್ವೀಪ) ಪುಷ್ಕರದ್ವೀಪಕ್ಕೆ ಸ್ವಾದೋದಕಸಮುದ್ರ ಎಂಬತ್ತುಲಕ್ಷ ಯೋಜನಪ್ರಮಾಣು, ಅಲ್ಲಿಂದತ್ತತ್ತ ಲೋಕಾಲೋಕ ಪರ್ವತಾಕಾರವಾಗಿಪ್ಪುದು. ಇಂತೀ ಸಪ್ತಸಮುದ್ರಂಗಳ ಸಪ್ತದ್ವೀಪಂಗಳ ಪ್ರಮಾಣವೊಂದಾಗಿ ಮೇಳೈಸಿದಡೆ ಮೂರುಕೋಟಿಯುಂ ಹದಿನೇಳುಲಕ್ಷದೈವತ್ತುಸಹಸ್ರ ಯೋಜನ ಪರಿಮಾಣಿನ ಕಟ್ಟಳೆಯಾಯಿತ್ತು. ಮತ್ತಲ್ಲಿಂದ ಭೂಮಂಡಲ ಉಂಟೆರಿ ಎಂದೊಡೆ, ಉಂಟು: ನಾನೂರುಕೋಟಿಯೋಜನ ಹೇಮೋರ್ವಿ. ಅಲ್ಲಿಂದತ್ತ ಭೂಮಂಡಲ ಉಂಟೆರಿ ಎಂದೊಡೆ ಉಂಟು: ಹತ್ತುಕೋಟಿ ಇಪ್ಪತ್ತುಲಕ್ಷ ಯೋಜನಪ್ರಮಾಣು, ಹೇಮದ ಬೆಟ್ಟ. ಮತ್ತಲ್ಲಿಂದತ್ತಲೂ ಭೂಮಂಡಲ ಉಂಟೆರಿ ಎಂದಡೆ, ಉಂಟು: ಎಂಬತ್ತೈದುಕೋಟಿ ಮೂವತ್ತೈದುಲಕ್ಷದ ಅರುವತ್ತೈದುಸಾವಿರ ಯೋಜನ ಪರಿಮಾಣ ವಳಯದಲ್ಲಿಅಂಧಕಾರವಾಗಿ, ಸೂರ್ಯಚಂದ್ರರ ಬೆಳಗಿಲ್ಲ. ಇಂತಿವನೆಲ್ಲವನೊಂದಾಗಿ ಮೇಳೈಸಿದಡೆ ಐನೂರುಕೋಟಿ ಯೋಜನ ಪರಿಪ್ರಮಾಣು ಕಟ್ಟಳೆಯಾಗಿತ್ತು. ಆ ಮೇರುವಿನ ಒಂದು ದಿಕ್ಕಿನ ಪ್ರಮಾಣು:ಆ ಮೇರುವಿನ ಪ್ರದಕ್ಷಿಣವಾಗಿ ಎಂಟು ದಳದಲ್ಲಿಎಂಟು ಪಂಚಶತಕೋಟಿ [ಯೋಜನ] ವಿಸ್ತೀರ್ಣವಾಯಿತ್ತು. ಇದನು ದಿವಸದೊಳಗೆ ಸೂರ್ಯ ತಿರುಗುವನು, ರಾತ್ರಿಯೊಳಗೆ ಚಂದ್ರ ತಿರುಗುವನು, ಇಪ್ಪತ್ತೇಳು ನಕ್ಷತ್ರ, ಧ್ರುವಮಂಡಲ, ಸಪ್ತಋಷಿಯರು, ರಾಹುಕೇತು, ನವಗ್ರಹ- ಇಂತಿವರೆಲ್ಲರು ಆ ಮೇರುಮಂದಿರದ ಹೊಸಪ್ರದಕ್ಷಿಣವಂ ದಿವಾರಾತ್ರಿಯಲ್ಲಿ ತಿರುಗಿ ಬಹರು. ಇವರೆಲ್ಲರ ಪ್ರಮಾಣವನು ಮಹಕ್ಕೆ ಮಹವಾಗಿಪ್ಪ ಶರಣಸ್ಥಲದವರು ಬಲ್ಲರು. ಪ್ರಭುದೇವರು ಸಿದ್ಧರಾದೇವರು ಸಾಮವೇದಿಗಳು, ಆದಿಲಿಂಗ ಅನಾದಿಶರಣ ಪೂರ್ವಾಚಾರಿ ಸಂಗನಬಸವಣ್ಣನು ಕಟ್ಟಿದ ಕಟ್ಟಳೆಯೊಳಗೆ ಜ್ಯೋತಿಜ್ರ್ಞಾನದವರು. (ಇಂತೀ) ಕಾಲ ಜ್ಯೋತಿಷ ಗ್ರಹಣ ಸಂಕ್ರಮಣ ತಿಥಿ ವಾರ ನಕ್ಷತ್ರ ಯೋಗ ಕರಣ ಸಂವತ್ಸರ ಇವೆಲ್ಲವು ಕೂಡಲಚೆನ್ನಸಂಗನಲ್ಲಿ ಬಸವಣ್ಣ ಕಟ್ಟಿದ ಕಟ್ಟಳೆ.
--------------
ಚನ್ನಬಸವಣ್ಣ
ಅಯ್ಯಾ, ಪಿಂಡಬ್ರಹ್ಮಾಂಡದ ಮಧ್ಯದಲ್ಲಿ, ಭಕ್ತನೆಂಬ ವೃಕ್ಷವಾಗಿ ಚಿದಂಡವಿರ್ಪುದು. ಆ ಚಿದಂಡದ ಮಧ್ಯದಲ್ಲಿ ಜಂಗಮವೆಂಬ ಬೀಜವಾಗಿ ಚಿನ್ಮಯಾಂಡವಿರ್ಪುದು. ಆ ಎರಡರ ಮಧ್ಯದಲ್ಲಿ ಸತ್ಕ್ರಿಯೆ ಸಮ್ಯಕ್‍ಜ್ಞಾನ ಮಹಾಜ್ಞಾನವೆಂಬ ಚಿತ್ಸೂರ್ಯ ಚಿದಗ್ನಿ ಚಿಚ್ಚಂದ್ರಮಂಡಲವಿರ್ಪುದು. ಆ ಮಂಡಲದ ಮಧ್ಯದಲ್ಲಿ ಏಕಾದಶ ದಿಕ್ಕುಗಳಿರ್ಪುವು. ಆ ದಿಕ್ಕುಗಳ ಮಧ್ಯದಲ್ಲಿ ಲಕ್ಷದಳ ಕಮಲವಿರ್ಪುದು. ಆ ಕಮಲದಳಂಗಳಲ್ಲಿ ಲಕ್ಷ ಲಿಂಗಗಳಿರ್ಪುವು. ಆ ಲಿಂಗಂಗಳಂಗುಷಾ*ಗ್ರದಲ್ಲಿ ಲಕ್ಷ ಗಂಗೆಗಳಿರ್ಪುವು. ಆ ಗಂಗೆಗಳ ಮಧ್ಯದಲ್ಲಿ ಲಕ್ಷ ಪ್ರಣವಂಗಳಿರ್ಪುವು ನೋಡಾ. ಆ ಪ್ರಣವಂಗಳ ಮಧ್ಯದಲ್ಲಿ ಬಸವ ಮೊದಲಾದ ಮಹಾಶರಣಗಣಂಗಳು ಪರಿಪೂರ್ಣವಾಗಿ ಮೂರ್ತಗೊಂಡಿರ್ಪರು ನೋಡಾ. ಇಂತು ಪ್ರಮಥಗಣಂಗಳು ನೆರೆದಿರ್ದ ಸ್ವಸ್ವರೂಪದ ನಿಲುಕಡೆಯನರಿಯದೆ, ಕೊಟ್ಟಿದನವ ದೊಡ್ಡ ವೃಕ್ಷಕ್ಕೆ ಕಟ್ಟಿದಂತೆ, ಅಂಗದ ಮೇಲೆ ಲಿಂಗವ ಕಟ್ಟಿಕೊಂಡು ಸುಳಿವಾತ ಜಂಗಮವಲ್ಲ, ಆ ಜಂಗಮಕ್ಕೆ ತನಮನಧನಂಗಳ ಕೊಟ್ಟು ಅವರಡಿಯಿಂದ ಹುಟ್ಟಿದ ಜಲಶೇಷವ ಕೊಂಬಾತ ಭಕ್ತನಲ್ಲ. ಇಂತು, ಉಭಯಾಂಧಕ ಭಕ್ತಜಂಗಮಕುಲವಳಿದು ಪ್ರಮಥರಾಚರಿಸಿದ ಸನ್ಮಾರ್ಗದಲ್ಲಿ ಸುಳಿಯಬಲ್ಲಾತ ಜಂಗಮ. ಆ ಜಂಗಮದನುವರಿದು ಅಡಗಬಲ್ಲಾತ ಭಕ್ತ. ಇದು ಕಾರಣ, -ಕೂಡಲಚೆನ್ನಸಂಗಯ್ಯಾ ಇಂತಪ್ಪ ಭಕ್ತ ಜಂಗಮರ ಪಾದವ ತೋರಿ ಬದುಕಿಸಯ್ಯಾ ಗುರುವೆ.
--------------
ಚನ್ನಬಸವಣ್ಣ
ಇನ್ನಷ್ಟು ... -->
Some error occurred