ಅಥವಾ

ಒಟ್ಟು 13 ಕಡೆಗಳಲ್ಲಿ , 5 ವಚನಕಾರರು , 9 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಕರತರ್ಕದ ಪ್ರಸ್ತಾವನ ವಚನ : ಅರಿಷಡ್ವರ್ಗವೆಂಬ ಆರು ನಾಯಿಗಳು ಬೊಗಳುತ್ತಿರೆ, ಹೊನ್ನು ಹೆಣ್ಣು ಮಣ್ಣೆಂಬ ತ್ರಿವಿಧ ನರಿ ಕೂಗುತ್ತಿರೆ, ಹಸಿವು ತೃಷೆ ನಿದ್ರೆ ಜಾಡ್ಯವೆಂಬ ನಾಲ್ಕು ಸೂಕರ ಮುತ್ತಿಕೊಂಡಿರೆ, ಸಪ್ತವ್ಯಸನಗಳೆಂಬ ಏಳು ಬೆಕ್ಕು ಸುಳಿವುತ್ತಿರೆ, ಪಂಚೇಂದ್ರಿಯವೆಂಬ ಐದು ವರ್ಣದ ಹುಲಿ ನುಂಗುತ್ತಿರೆ, ಸಪ್ತಧಾತುಗಳೆಂಬ ಏಳುಮಂದಿ ಹೊಲೆಯರು ಮುಟ್ಟಿ ತನ್ನಂಗದೊಳು ನಾನು ನೀನೆಂಬ ಅಹಂಕಾರದ ಜಾಗಟೆಯ ಪಿಡಿದು ಅಜಾÕನವೆಂಬ ಕುಡಿಯಲ್ಲಿ ಬಾರಿಸಿ, ಇಂತಪ್ಪ ಪರಿಯಲ್ಲಿದ್ದ ಸೂತಕಂಗಳ ಪರಿಯದೆ ಹೊರಮಾತ ಕೇಳಬಾರದೆಂದು ಜಾಗಟೆಯ ಹೊಯ್ಸಿ ನಾದದ ಮರೆಯಲ್ಲಿ ಆಹಾರವ ಕೊಂಬ ಸೇವಕರ ನೋಡಿ ನಗುತಿರ್ದ ನಮ್ಮ ಗೊಹೇಶ್ವರಪ್ರಿಯ ನಿರಾಳಲಿಂಗಾ.
--------------
ಗುಹೇಶ್ವರಯ್ಯ
ಐದು ಮನೆಯೊಳಗೆ ಏಳುಮಂದಿ ಹೆಂಡರ ಕಂಡೆನಯ್ಯ. ಆ ಏಳುಮಂದಿ ಹೆಂಡರು ಎಂಟುಮಂದಿ ನೆಂಟರ ಸಂಗವ ಮಾಡುತಿಪ್ಪರು ನೋಡಾ. ಕಂಟಕಂಗಳ ಗೆಲಿದ ಪುರುಷನು, ಎಂಟುಮಂದಿ ನೆಂಟರ ಕೊಂದು, ಏಳುಮಂದಿ ಹೆಂಡರ ಹಿಡಿದು, ಐದು ಮನೆಯ ತೊರೆದ ಸೋಜಿಗವ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಒಂದು, ಎರಡು, ಮೂರು, ನಾಲಕ್ಕು, ಅಯಿದು, ಆರು, ಏಳು, ಎಂಟು ಒಂಬತ್ತು, ಹತ್ತು, ಹನ್ನೊಂದು ಹನ್ನೆರಡು, ಹದಿಮೂರು, ಹದಿನಾಲಕ್ಕು, ಹದಿನೈದು, ಹದಿನಾರು, ಹದಿನೇಳು, ಹದಿನೆಂಟು, ಹತ್ತೊಂ¨ತ್ತು, ಇಪ್ಪತ್ತು, ಇಪ್ಪತ್ತೊಂದು, ಇಪ್ಪತ್ತೆರಡು, ಇಪ್ಪತ್ತಮೂರು, ಇಪ್ಪತ್ತನಾಲಕ್ಕು. ಇಪ್ಪತ್ತನಾಲಕ್ಕು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತನಾಲಕ್ಕು ಎಂದರೆ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ಯುದಿಷ್ಠಿರೋ ವಿಕ್ರ[ಮೋ]ಶಾಲಿವಾಹನ[ಃ] ತ[ಪಸಾ] ಧ್ರುವಶ್ಚ [ದಿವಿ]ಜರಾಜನಂದನಃ ನಾಗಾಂತಕೋ ಭೂಪತಿ [ಷಷ್ಠಮಃ] ಕಲಿಯುಗೇ ಷಟ್‍ಚಕ್ರವರ್ತಿ[ನಃ] ಈ ಆರು ಮಂದಿ ಕಲಿಯುಗದ ಚಕ್ರವರ್ತಿಗಳು. ಇಪ್ಪತ್ತಮೂರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತಮೂರು ಎಂದರೆ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ಯಯಾತಿ ನಹುಷ[ಶ್ಶಂತನುಃ] ಚಿತ್ರವೀರ್ಯಶ್ಚ ಪಾಂಡವಃ ರಾಜಾ ದುರ್ಯೋಧನ[ಶ್ಚೈ]ವ ದ್ವಾಪರೇ ಷ[ಟ್] ಚಕ್ರವರ್ತಿ[ನಃ] ಆ ಆರು ಮಂದಿ ದ್ವಾಪರದ ಚಕ್ರವರ್ತಿಗಳು. ಇಪ್ಪತ್ತೆರಡು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತೆರಡು ಎಂದರೆ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ವೈವ[ಸ್ವ]ತೋ ದಿಲೀಪಶ್ಚ ರಘು ಚಕ್ರೇಶ್ವರೋ ಅ[ಜಃ] ದಶರಥೋ ರಾಮಚಂದ್ರ[ಶ್ಚ] ಷಡೈತೇ ಚಕ್ರವರ್ತಿ[ನಃ] ಈ ಆರು ಮಂದಿ ತ್ರೇತಾಯುಗದ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ಹರಿಶ್ಚಂ[ದ್ರೋ] ನ[ಳ]ರಾಜ[ಃ] ಪುರುಕು[ತ್ಸ]ಶ್ಚ ಪುರೂರವಃ ಸಗರಃ ಕಾರ್ತವೀರ್ಯಶ್ಚ ಷಡೈತೇ ಚಕ್ರವರ್ತಿ[ನಃ] ಈ ಆರು ಮಂದಿ ಕೃತಯುಗದ ಚಕ್ರವರ್ತಿಗಳು. ಅಂತೂ ಇಪ್ಪತ್ತನಾಲ್ಕು ಮಂದಿ ಚಕ್ರವರ್ತಿಗಳು. ಇಪ್ಪತ್ತು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತು ಎಂದರೆ ಪ್ರಪಂಚ ನಿರ್ಮಾಣ ಸಹಾಯ[ದ]ವರು. ಅದು ಎಂತೆಂದಡೆ: ಆಂಗೀರಸ, ಪುಲಸ್ತ್ಯ, ಪುಲಹ, ಶಾಂತ, ದಕ್ಷ, ವಸಿಷ್ಠ, ವಾಮದೇವ, ನವಬ್ರಹ್ಮ, ಕೌಶಿಕ, ಶೌನಕ, ಸ್ವಯಂಭು, ಸ್ವಾರೋಚಿಷ, ಉತ್ತಮ, ತಾಮಸ, ರೈವತ, ಚಾಕ್ಷಷ, ವೈವಸ್ವತ, ಸೂರ್ಯಸಾವರ್ಣಿ, ಚಂದ್ರಸಾವರ್ಣಿ, ಬ್ರಹ್ಮಸಾವರ್ಣಿ, ಇಂದ್ರ ಸಾವರ್ಣಿ ಇವರು ಇಪ್ಪತ್ತು ಮಂದಿ ಪ್ರಪಂಚ ನಿರ್ಮಾಣ ಸಹಾಯ[ದ]ವರು. ಹತ್ತೊಂಬತ್ತು ಎಂದರೆ ಪುಣ್ಯನದಿಗಳು. ಅದು ಎಂತೆಂದಡೆ: ಗ್ರಂಥ || ಗಂಗಾ ಪುಷ್ಕ[ರಿಣೀ] ನರ್ಮದಾ ಚ ಯಮುನಾ ಗೋದಾವರೀ ಗೋಮತೀ ಗಂಗಾದ್ವಾರ ಗಯಾ ಪ್ರಯಾಗ ಬದರೀ ವಾರಾಣಸೀ ಸೈಯಿಂಧವೀ ಇವು ಹತ್ತೊಂಬತ್ತು ಪುಣ್ಯನದಿಗಳು. ಹದಿನೆಂಟು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನೆಂಟು ಎಂದರೆ.......... ಅದು ಎಂತೆಂದಡೆ: ........................... ಹದಿನೇಳು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನೇಳು ಎಂದರೆ................. ಅದು ಎಂತೆಂದಡೆ: .................... ಹದಿನಾರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನಾರು ಎಂದರೆ [ಅ]ರಸುಗಳು ಅದು ಎಂತೆಂದಡೆ: ಗ್ರಂಥ || ಗಯಾಂಬರೀ[ಷ] ಶ[ಶ]ಬಿಂದುರಂಗದೋ ಪೃಥು[ರ್ಮ]ರು[ತ್] ಭರತ[ಸ್ಸು]ಹೋತ್ರಃ ರಾಮೋ ದಿಲೀಪೋ ಸಗರ ರಂತಿ ರಾಮ[ಃ] ಯಯಾತಿ ಮಾಂಧಾತ ಭಗೀರಥ[ಶ್ಚ] ಎಂದುದಾಗಿ, ಗಯ, ಅಂಬರೀಷ, ಶಶಬಿಂದು, ಪೃಥು, ಮರುತ್, ಭರತ, ಸುಹೋತ್ರ, ಪರಶುರಾಮ, ದಿಲೀಪ, ಸಗರ, ರಂತಿ, ರಾಮಚಂದ್ರ, ಯಯಾತಿ, ಮಾಂಧಾತ, ಭಗೀರಥ, ಅ[ಂಗದ] ಇವರು ಹದಿನಾರು ಮಂದಿ ಅರಸುಗಳು. ಹದಿನೈದು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನೈದು ಎಂದರೆ ತಿಥಿಗಳು. ಅದು ಎಂತೆಂದಡೆ: ಪಾಡ್ಯ, ಬಿದಿಗೆ, ತದಿಗೆ, ಚವುತಿ, [ಪಂಚಮಿ], ಷಷ್ಠಿ, ಸಪ್ತಮಿ, ಅಷ್ಟಮಿ, ನವಮಿ, ದಶಮಿ, ಏಕಾದಶಿ, ದ್ವಾದಶಿ, ತ್ರಯೋದಶಿ, ಅಮಾವಾಸ್ಯೆ ಇವು ಹದಿನೈದು ತಿಥಿಗಳು. ಹದಿನಾಲಕ್ಕು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನಾಲಕ್ಕು ಎಂದರೆ ಲೋಕಂಗಳು. ಅದು ಎಂತೆಂದಡೆ: ಅತಲ ವಿತಲ ಸುತಲ ತಲಾತಲ ಮಹಾತಲ ರಸಾತಲ ಪಾತಾಳ ಭೂಲೋಕ ಭುವರ್ಲೋಕ ಸುರ್ವರ್ಲೋಕ ಮಹರ್ಲೋಕ ತಪೋಲೋಕ ಜನೋಲೋಕ ಸತ್ಯಲೋಕ ಇವು ಹದಿನಾಲ್ಕು ಲೋಕಂಗಳು. ಹದಿಮೂರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೆನಪ್ಪ ? ಹದಿಮೂರು ಎಂದರೆ ಚಕ್ರಂಗಳು. ಅದು ಎಂತೆಂದಡೆ, ಆಧಾರಚಕ್ರ, ಸ್ವಾಷ್ಠಾನಚಕ್ರ, ಮಣಿಪೂರಕಚಕ್ರ, ಅನಾಹಚಕ್ರ, ವಿಶುದ್ಧಿಚಕ್ರ, ಆಜ್ಞಾಚಕ್ರ, ಶಿಖಾಚಕ್ರ, ಬ್ರಹ್ಮಚಕ್ರ, ಘಟಚಕ್ರ, ಕಾಲಚಕ್ರ, ಮೇಘಚಕ್ರ, ಭೂಚಕ್ರ, ಅವಗಡಚಕ್ರ ಇವು ಹದಿಮೂರು ಚಕ್ರಂಗಳು. ಹನ್ನೆರಡು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹನ್ನೆರಡು ಎಂದರೆ ಮಾಸಂಗಳು. ಅದು ಎಂತೆಂದರೆ, ಚೈತ್ರ, ವೈಶಾಖ, ಜ್ಯೇಷ್ಠ, ಆಷಾಢ, ಶ್ರಾವಣ, ಭಾದ್ರಪದ, ಆಶ್ವೀಜ, ಕಾರ್ತೀಕ, ಮಾರ್ಗಶಿರ, ಪುಷ್ಯ, ಮಾಘ, ಫಾಲ್ಗುಣ ಇವು ಹನ್ನೆರಡು ಮಾಸಂಗಳು. ಹನ್ನೊಂದು ಎಂದರೆ ನೋಡಿದ್ದೇನಪ್ಪ ? ಕೇಳಿದ್ದೇನಪ್ಪ ? ಹನ್ನೊಂದು ಎಂದರೆ ಭಾರತಂಗಳು. ಅದು ಎಂತೆಂದಡೆ: ಆದಿಭಾರತ, ಕೈಲಾಸಭಾರತ, ಶ್ರೀರುದ್ರಭಾರತ, ನಂದಿಭಾರತ, ನಾರ[ದ]ಭಾರ[ತ], ಭೃಗುಭಾರತ, ಮನುಭಾರತ, ಉಮಾಭಾರತ, ಪ್ರಸಿದ್ಧಭಾರತ, ಸಿದ್ಧೋರಗಭಾರತ, ಶ್ರೀರಂಗಭಾರತ ಇವು ಹನ್ನೊಂದು ಭಾರತಂಗಳು. ಹತ್ತು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹತ್ತು ಎಂದರೆ, ದಶಾವತಾರಂಗಳು. ಅದು ಎಂತೆಂದರೆ, ಗ್ರಂಥ || ಮತ್ಸ್ಯಃ ಕೂರ್ಮಃ ವರಾಹಶ್ಚ ನಾರಸಿಂಹಶ್ಚ ವಾಮನಃ ರಾಮೋ ರಾಮಶ್ಚ [ಕೃಷ್ಣ]ಶ್ಚ ಬೌದ್ಧಃ ಕಲ್ಕಿ[ರೇ]ವ ಚ ಎಂದುದಾಗಿ, ಈ ದಶಾವತಾರಂಗಳಲ್ಲಿ ಯಾರಾರು ಸಂಹಾರ ಎಂದರೆ, ಮತ್ಯ್ಸಾವತಾರದಲ್ಲಿ ಅಮೃತಮಥನೇ ಸೋಮಕಾಸುರನ ಸಂಹಾರ. ಕೂರ್ಮಾವತಾರದಲ್ಲಿ ಮಂದರಪರ್ವತಕ್ಕೆ ಆಧಾರ. ವರಾಹಾವತಾರದಲ್ಲಿ ಹಿರಣ್ಯಾಕ್ಷನ ಸಂಹಾರ. ನರಸಿಂಹಾವತಾರದಲ್ಲಿ ಹಿರಣ್ಯಕಶ್ಯಪ ಸಂಹಾರ. ವಾಮನಾವತಾರದಲ್ಲಿ ಪಂಚಮೇಢ್ರಾಸುರ ಎಂಬ ರಾಕ್ಷಸನ ಸಂಹಾರ. ಪರಶುರಾಮಾವತಾರದಲ್ಲಿ ಕಾರ್ತವೀರ್ಯರ ಸಂಹಾರ. ರಫ್ಸುರಾಮಾವತಾರದಲ್ಲಿ ರಾವಣಕುಂಭಕರ್ಣರ ಸಂಹಾರ. 1ಬಲಭದ್ರ1 ನವತಾರದಲ್ಲಿ ಪ್ರಲಂಬಕವಾದ ಅಸುರರ ಸಂಹಾರ. ಬೌದ್ಧಾವತಾರದಲ್ಲಿ ತ್ರಿಪುರದಾನವಸತಿಯರ ಕೆಡಿಸಿದ. ಕಲ್ಕ್ಯವತಾರದಲ್ಲಿ 2ಕಂಸಾಸುರ, ನರಕಾಸುರ, ಬಾಣಾಸುರರ2 ಸಂಹಾರ, ಇವು ಹತ್ತು ದಶಾವತಾರಗಳು. ಒಂಬತ್ತು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಒಂಬತ್ತು ಎಂದರೆ ನವಗ್ರಹಂಗಳು. ಅದು ಎಂತೆಂದರೆ: ಆದಿತ್ಯ, ಸೋಮ, ಮಂಗಳ, ಬುಧ, ಬೃಹಸ್ಪತಿ, ಶುಕ್ರ, ಶನಿ, ರಾಹು, ಕೇತು- ಇವು ಒಂಬತ್ತು ನವಗ್ರಹಂಗಳು. ಎಂಟು ಎಂದರೆ ನೋಡಿದ್ದೇನಪ್ಪ ಕೇಳಿದ್ದೇನಪ್ಪ ? ಎಂಟು ಎಂದರೆ ಅಷ್ಟದಿಕ್ಪಾಲಕರು. ಅದು ಎಂತೆಂದರೆ: ಇಂದ್ರ, ಅಗ್ನಿ, ಯಮ, ನೈರುತಿ, ವರುಣ, ವಾಯುವ್ಯ, ಕುಬೇರ, ಈಶಾನ್ಯ- ಎಂಟು ಮಂದಿ ಅಷ್ಟದಿಕ್ಪಾಲಕರು. ಏಳು ಎಂದರೆ ನೋಡಿದ್ದೇನಪ್ಪ ಕೇಳಿದ್ದೇನಪ್ಪ ? ಏಳು ಎಂದರೆ ಸಪ್ತಋಷಿಗಳು. ಅದು ಎಂತೆಂದರೆ: ಗ್ರಂಥ || ಕಶ್ಯಪಾತ್ರಿ ಭರದ್ವಾಜ[ಃ] ವಿಶ್ವಾಮಿ[ತ್ರಶ್ಚ] ಗೌತಮ[ಃ] ಜಮದಗ್ನಿ[ಃ] ವಸಿಷ್ಠ[ಶ್ಚ] ಸಪ್ತೈತೇ ಋಷಯ[ಃ ಸ್ಮøತಾಃ] ಎಂದುದಾಗಿ, ಕಶ್ಯಪ, ಅತ್ರಿ, ಭರದ್ವಾಜ, ವಿಶ್ವಾಮಿತ್ರ, ಗೌತಮ, ಜಮದಗ್ನಿ, ವಸಿಷ್ಠ- ಇವರು ಏಳುಮಂದಿ ಸಪ್ತ ಋಷಿಗಳು. ಆರು ಎಂದರೆ ನೋಡಿದ್ದೇನಪ್ಪ ಕೇಳಿದ್ದೇನಪ್ಪ ? ಆರು ಎಂದರೆ ಶಾಸತ್ತ್ರಂಗಳು. ಅದು ಎಂತೆಂದರೆ: ಶಿಲ್ಪಶಾಸ್ತ್ರ, ಭರತಶಾಸ್ತ್ರ, ತರ್ಕಶಾಸ್ತ್ರ, ಶಬ್ದಶಾಸ್ತ್ರ, ಆ[ನ್ವೀಕ್ಷಕೀ]ಶಾಸ್ತ್ರ, ಜ್ಯೋತಿಷ್ಯಶಾಸ್ತ್ರ- ಇವು ಆರು ಶಾಸ್ತ್ರಂಗಳು. ಐದು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಐದು ಎಂದರೆ ಈಶ್ವರನ ಪಂಚ ಮುಖಂಗಳು ಅದು ಎಂತೆಂದರೆ, ಗ್ರಂಥ || ಸದ್ಯೋಜಾ[ತೋ]ದ್ಭವೋರ್ಭೂಮಿಃ] ವಾಮದೇವೋದ್ಭ[ವಂ ಜಲಂ] ಅಫ್ಸೋ[ರಾದ್ವಹ್ನಿ]ರು[ದ್ಭೂತಂ] ತತ್ಪರು[ಷಾದ್ವಾಯುರ್ಭವೇತ್ ಈಶಾನಾದ್ಗಗನಂ ಜಾತಂ] ಎಂದುದಾಗಿ, ಸದ್ಯೋಜಾತಮುಖ, ವಾಮದೇವಮುಖ, ಅಘೋರಮುಖ, ತತ್ಪುರುಷಮುಖ, ಈಶಾನ್ಯಮುಖ- ಇವು ಐದು ಪಂಚಮುಖಂಗಳು. ನಾಲಕ್ಕು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ನಾಲಕ್ಕು ಎಂದರೆ ವೇದಂಗಳು. ಅದು ಎಂತೆಂದರೆ: ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವಣವೇದ- ಇವು ನಾಲ್ಕು ವೇದಂಗಳು. ಮೂರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಮೂರು ಎಂದರೆ ತ್ರಿಮೂರ್ತಿಗಳು. ಅದು ಎಂತೆಂದರೆ: ಬ್ರಹ್ಮ, ವಿಷ್ಣು, ಈಶ್ವರ- ಇವರು ಮೂವರು ತ್ರಿಮೂರ್ತಿಗಳು. ಎರಡು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಎರಡು ಎಂದರೆ ಭಾನು ಶಶಿ. ಅದು ಎಂತೆಂದರೆ: ಸೂರ್ಯ, ಚಂದ್ರ- ಇವರಿಬ್ಬರು ಸೂರ್ಯಚಂದ್ರಾದಿಗಳು. ಒಂದು ಎಂದರೆ ನೋಡಿದ್ದೆನಪ್ಪ ಕೇಳಿದ್ದೇನಪ್ಪ ? ಒಂದು ಎಂದರೆ ಏಕೋ[ಏವ]ದೇವಃ ಅದು ಎಂತೆಂದರೆ: ದೇವನು ಒಬ್ಬನೇ. ದೇವನು] ಒಬ್ಬನೇ ಅಲ್ಲದೆ ಇಬ್ಬರೆಂದು ಬಗುಳುವನ ಮುಖವ ನೋಡಲಾಗದು ಕಾಣೋ ಕೂಡಲಾದಿ ಚನ್ನಸಂಗಮದೇವಾ.
--------------
ಕೂಡಲಸಂಗಮೇಶ್ವರ
ಮೂಲದ್ವಾರದ ಮೂಲೆಯಲ್ಲಿ ಏಳುಮಂದಿ ಕಳ್ಳರಡಗಿ, ಬಹಳ ಬಂಗಾರವ ಕದ್ದರು ನೋಡಾ. ಕದ್ದ ಕಳವರಗದೆ ಮತ್ತೊಂದು ಬುದ್ಧಿಯ ನೆನೆದು, ಹೊದ್ದಿ ಸೇರಿದರು ಮನೆಯಾತನ. ಅವನಿರುವ ಹೆಜ್ಜೆಯನರಿದು ಎದ್ದು ಹಿಡಿದ. ಕೈಯೊಳಗಾದರು, ಕಳ್ಳರು ಬೆಳ್ಳರೆಂದು ಹೋದರೆ, ಇದ ಬಲ್ಲವರಾರೊ, ನಿಃಕಳಂಕ ಮಲ್ಲಿಕಾರ್ಜುನಾ ?
--------------
ಮೋಳಿಗೆ ಮಾರಯ್ಯ
ಘಟ್ಟಬೆಟ್ಟದ ನಟ್ಟನಡುವಿನ ಗಿರಿಯಲ್ಲಿ ಹುಟ್ಟಿತೊಂದು ಸೋಜಿಗದಗ್ನಿಯ ಕಳೆ. ಆ ಕಳೆಯ ಬೆಳಗ ಕಾಣೆನೆಂದು ಇಬ್ಬರು ಮುಂದುಗೆಟ್ಟರು, ಮೂವರು ತಾಮಸಕ್ಕೊಳಗಾದರು, ನಾಲ್ವರು ನಡೆಗೆಟ್ಟರು, ಐವರು ಅಂಧಕರಾದರು, ಆರುಮಂದಿ ಹೋರಾಟಗೊಳುತಿರೆ, ಏಳುಮಂದಿ ಕೂಪವ ಬಿದ್ದರು, ಎಂಟುಮಂದಿ ತಂಟುಕಕ್ಕೆ ಒಳಗಾದರು. ಒಂಬತ್ತು [ಮಂದಿ] ಕಣವಿಯ ಹರವರಿಯಲ್ಲಿ [ಹೊಕ್ಕರು.] ಹತ್ತು ಬಗೆಯವರು ಹರಿದಾಡುತಿರೆ, ಇದನು ಕಂಡು, ತರುಗಿರಿಯ ನಡುವೆ ಹರಿವ ಉದಕ ಗಾಳಿ ಬಂದು ಬೆಟ್ಟವನಡರಿ, ಉರಿವ ಜ್ಯೋತಿಯ ತಾಗದ ಮುನ್ನ ನೀರಹರಿಯನಡ್ಡಂಗಟ್ಟಿ, ಗಾಳಿಯ ಹಿಮ್ಮೆಟ್ಟಿಸಿ, ಜ್ಞಾನಪರಬ್ರಹ್ಮದಲ್ಲಿ ನಿಂದವರಾರೆಂದರೆ : ಪ್ರಭುದೇವರು, ಚೆನ್ನಬಸವೇಶ್ವರದೇವರು, ಮೋಳಿಗೆಯ್ಯನವರು, ಸಂಗನಬಸವೇಶ್ವರದೇವರು, ನೀಲಾಂಬಿಕೆ ತಾಯಿ, ಅಕ್ಕನಾಗಮ್ಮ, ಮಹಾದೇವಿಯಕ್ಕ, ಮುಕ್ತಾಯಿ ಮುಖ್ಯವಾದ ಏಳುನೂರಾ ಎಪ್ಪತ್ತು ಅಮರಗಣಂಗಳ ಲೆಂಕರ ಲೆಂಕನಾಗಿ ಎನ್ನ ಆದಿಪಿಂಡಿವ ಧರಿಸಿ, ಮತ್ರ್ಯಕ್ಕೆ ಕಳುಹಿದ ಭೇದವ ಪಿಂಡಜ್ಞಾನದಿಂದಲರಿದು ಆಚರಿಸುತ್ತಿದ್ದೆನಯ್ಯಾ ಎನ್ನಾಳ್ದ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಇದಕ್ಕೆ ನಿರ್ವಚನ : ಅರಿಷಡ್ವರ್ಗವೆಂಬ ಆರು ನಾಯಿಗಳ ಮರ್ದಿಸಿ, ಹೊನ್ನು ಹೆಣ್ಣು ಮಣ್ಣೆಂಬ ತ್ರಿವಿಧ ನರಿಯ ಸೂರೆಗೊಂಡು, ಸಪ್ತವ್ಯಸನಂಗಳೆಂಬ ಏಳುಬೆಕ್ಕಿನ ಮೂಲವಂ ಕೆಡಿಸಿ, ಹಸಿವು ತೃಷೆ ನಿದ್ರೆ ಜಾಡ್ಯವೆಂಬ ಸೂಕರಂಗಳ ಕೊಂದು, ಪಂಚವರ್ಣದ ಹುಲಿಯ ಆರ್ಭಟವಂ ಮುರಿದು, ಸಪ್ತಧಾತುಗಳೆಂಬ ಏಳುಮಂದಿ ಹೊಲೆಯರ ಸೂತಕವಂ ಕಳೆದು, ನಾನು ನೀನೆಂಬ ಅಹಾಂಕರವ ನಷ್ಟವ ಮಾಡಿ, ಸುಜ್ಞಾನವೆಂಬ ಜಾಗಟೆಯ ಪಿಡಿದು ಅರಿವೆಂಬ ಕುಡಿಯಲ್ಲಿ ನುಡಿಸಿ, ಪರಮ ಪರಿಣಾಮವೆಂಬ ನಾದದ ಮರೆಯಲ್ಲಿ ಪ್ರಸಾದವಂ ಕೊಂಡು ಸುಖಿಸುವ ಸರ್ವಕಾರರ ನೋಡಿ ಅಹುದಹುದೆಂದು ಅಭಯಹಸ್ತವ ಕೊಡುತ್ತಿದ್ದ ನಮ್ಮ ಗೊಹೇಶ್ವರಪ್ರಿಯ ನಿರಾಳಲಿಂಗ.
--------------
ಗುಹೇಶ್ವರಯ್ಯ
ಕೋಣನ ಹಣೆಯ ಮೇಲೆ ಗಾಣಗಾರನ ಕಂಡೆನಯ್ಯ. ಆ ಗಾಣಗಾರಂಗೆ ಐವರು ಹೆಂಡರು, ಏಳುಮಂದಿ ಮಕ್ಕಳು, ಎಂಟುಮಂದಿ ನೆಂಟರು, ಹತ್ತುಮಂದಿ ಬಾಂಧವರು ಇಪ್ಪರು ನೋಡಾ. ಇದು ಕಾರಣ, ಆ ಕೋಣನ ಹಣೆ ಒಡೆದು, ಗಾಣಗಾರ ಸತ್ತು, ಜ್ಞಾನ ಉದಯವಾಗಲೊಡನೆ ಐವರು ಹೆಂಡರಡಗಿ, ಏಳುಮಂದಿ ಮಕ್ಕಳುಡುಗಿ, ಎಂಟುಮಂದಿ ನೆಂಟರು ಹೋಗಿ, ಹತ್ತುಮಂದಿ ಬಾಂಧವರು ಬಯಲಾದರು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಹುಲ್ಲುಮಾರುವ ಹಾವಾಡಿಗಂಗೆ ಏಳುಮಂದಿ ಮಕ್ಕಳು ಹುಟ್ಟಿದರು ನೋಡಾ ! ಆ ಮಕ್ಕಳ ಕೈಬಾಯೊಳಗೆ ಈರೇಳು ಲೋಕಂಗಳೆಲ್ಲ ನಚ್ಚುಮಚ್ಚಾಗಿ ಇರ್ಪವು ನೋಡಾ ! ಆದಿಯ ಲಿಂಗದ ಸಂಗದಿಂದ ಒಬ್ಬಳು ಬಂದು ಹುಲ್ಲುಮಾರುವ ಹಾವಾಡಿಗನ ಹಿಡಿಯಲು ಏಳು ಮಂದಿ ಮಕ್ಕಳು ಬಿಟ್ಟು ಹೋದರು ನೋಡಾ ! ಆ ಹಾವಾಡಿಗನ ಕೈಯಲ್ಲಿ ರತ್ನವಿಪ್ಪುದು ನೋಡಾ ! ಆ ರತ್ನವು ನಡುಮಧ್ಯದಲ್ಲಿ ಉಳಿದಿತ್ತು. ನವನಾಳಕ್ಕೆ ಒಂದೇ ಬೆಳಗಾಯಿತ್ತು ನೋಡಾ ! ಆದಿಯ ಲಿಂಗವ ಕೂಡೆ ಲಿಂಗವಾಯಿತ್ತು, ಅಯ್ಯಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಹಾರುವಗೇರಿಯಲ್ಲಿ ಇರುತಿಪ್ಪ ಐವರು ನಾರಿಯರ ಕಂಡೆನಯ್ಯ. ಅವರಿಂಗೆ ಏಳುಮಂದಿ ಮಕ್ಕಳು ಹುಟ್ಟಿ ಎಂಟುಮಂದಿ ನೆಂಟರ ಸಂಗವ ಮಾಡಿ, ಈ ಜಗವನೆಲ್ಲಾ ಏಡಿಸ್ಯಾಡುತಿಪ್ಪರು ನೋಡಾ. ಇದು ಕಾರಣ, ಪ್ರಥಮಕಾಲದಲ್ಲಿ ಆದಿಯ ಗಣೇಶ್ವರ ಬಂದು, ಏಳುಮಂದಿ ಮಕ್ಕಳ ಹಿಡಿದು, ಐವರು ನಾರಿಯರ ಕೊಂದು, ಹಾರುವಗೇರಿಯ ಸೂರೆಮಾಡಿದ ಸೋಜಿಗವ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
-->