ಅಥವಾ

ಒಟ್ಟು 9 ಕಡೆಗಳಲ್ಲಿ , 6 ವಚನಕಾರರು , 8 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿರಾಮಯ ಭಕ್ತ, ನಿರಾಮಯ ಮಹೇಶ್ವರ, ನಿರಾಮಯ ಪ್ರಸಾದಿ, ನಿರಾಮಯ ಪ್ರಾಣಲಿಂಗಿ, ನಿರಾಮಯ ಶರಣ, ನಿರಾಮಯ ಐಕ್ಯನೆಂದು ಆರು ಪ್ರಕಾರವಾಗಿಹುದು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯನೆಂದು ಹೆಸರಿಟ್ಟುಕೊಂಬಿರಿ. ಆರು ಪರಿಯಲ್ಲಿ ಆರಾದವನರಿಯಿರಿ. ಭಕ್ತನಾದಡೇಕೆ ಭವದ ಬೇರು? ಮಾಹೇಶ್ವರನಾದಡೇಕೆ ಪ್ರಳಯಕ್ಕೊಳಗಿಹ? ಪ್ರಸಾದಿಯಾದಡೇಕೆ ಇಂದ್ರಿಯವೈದ ಅನಿಗ್ರಹಿಯಾಗಿಹ? ಪ್ರಾಣಲಿಂಗಿಯಾದಡೇಕೆ ಉತ್ಪತ್ತಿ ಸ್ಥಿತಿ ಲಯಕೊಳಗಾಗಿಹ? ಶರಣನಾದಡೇಕೆ ಉಪಬೋಧೆಗೊಳಗಾಗಿಹ? ಐಕ್ಯನಾದಡೇಕೆ ಇಹ-ಪರವನರಿದಿಹ? ಇವೆಲ್ಲ ಠಕ್ಕ, ಇವೆಲ್ಲ ಅಭ್ಯಾಸ! ಕಪಿಲಸಿದ್ಧಮಲ್ಲಿಕಾರ್ಜುನಯ್ಯ, ನಿಮ್ಮ ಷಡುಸ್ಥಲವಭೇದ್ಯ!
--------------
ಸಿದ್ಧರಾಮೇಶ್ವರ
ಭಕ್ತ ಮಾಹೇಶ್ವರ ಪ್ರಸಾದಿಯೆಂದು ಈ ಮೂರು ಕ್ರಿಯಾಂಗವಯ್ಯ. ಪ್ರಾಣಲಿಂಗಿ ಶರಣ ಐಕ್ಯವೆಂದು ಈ ಮೂರು ಜ್ಞಾನಾಂಗವಯ್ಯ. ಆಚಾರಲಿಂಗ ಗುರುಲಿಂಗ ಶಿವಲಿಂಗವೆಂದು ಈ ಮೂರು ಕ್ರಿಯಾಲಿಂಗವಯ್ಯ. ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗವೆಂದು ಈ ಮೂರು ಜ್ಞಾನಲಿಂಗವಯ್ಯ. ಇವಕ್ಕೆ ಅಂಗ ಲಿಂಗ ಸಂಗ ಸಂಯೋಗನಿರ್ದೇಶವ ಹೇಳಿಹೆನು. ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯನೆಂದು ಆ ಆರು ಕ್ರಿಯಾಂಗವು. ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗವೆಂದು ಲಿಂಗವಾರು ತೆರನಾಗಿಪ್ಪುದಯ್ಯ. ಇನ್ನು ಸಂಗವಾರು ತೆರನದೆಂತೆಂದಡೆ: ಘ್ರಾಣ, ಜಿಹ್ವೆ, ನೇತ್ರ, ತ್ವಕ್ಕು, ಶ್ರೋತ್ರ, ಭಾವವೆಂದು ಸಂಗವಾರು ತೆರನಾಗಿಪ್ಪುದಯ್ಯ. ಘ್ರಾಣದಲ್ಲಿ ಆಚಾರಲಿಂಗ, ಜಿಹ್ವೆಯಲ್ಲಿ ಗುರುಲಿಂಗ; ನೇತ್ರದಲ್ಲಿ ಶಿವಲಿಂಗ; ತ್ವಕ್ಕಿನಲ್ಲಿ ಜಂಗಮಲಿಂಗ; ಶ್ರೋತ್ರದಲ್ಲಿ ಪ್ರಸಾದಲಿಂಗ; ಭಾವದಲ್ಲಿ ಮಹಾಲಿಂಗ ಸಂಬಂಧ. ಇಂತೀ ಷಂಡಗವು ಷಡ್ವಿಧಲಿಂಗದಲ್ಲಿ ಸಮರಸ ಸಂಯೋಗವಾದಲ್ಲಿ ಅಂಗ ಲಿಂಗ ಸಂಬಂಧವೆನಿಸಿಕೊಂಡಿತಯ್ಯ. ಇನ್ನು ಪ್ರಾಣಾಂಗವಾರು ತೆರನದೆಂತೆಂದಡೆ: ಸುಚಿತ್ತ, ಸುಬುದ್ಧಿ, ನಿರಹಂಕಾರ, ಸುಮನ, ಸುಜ್ಞಾನ, ಶುದ್ಧಾತ್ಮ ಆ ಆರು ಪ್ರಾಣಾಂಗಗಳು. ಇಂತೀ ಪ್ರಾಣಾಂಗಂಗಳಲ್ಲಿಯೂ ಹಿಂದೆ ಹೇಳಿದ ಷಡ್ವಿಧಲಿಂಗವು ಮಾರ್ಗ ಕ್ರೀಯನೆಯ್ದಿ ಮೀರಿದ ಕ್ರಿಯಾಸ್ಥಲದಲ್ಲಿ ಬಂದು ನಿಂದು ಜ್ಞಾನಗಮ್ಯವಾಗಿ ಸಂಗದನುವನರಿದು ಪ್ರಾಣಾಂಗವಾರೂ ಲಿಂಗಸಂಬಂಧವಾದವಯ್ಯ. ಹಿಂದೆ ಹೇಳಿದ ಕ್ರಿಯಾಂಗವಾರು ಮುಂದೆ ಹೇಳುವ ಸುಚಿತ್ತಾದಿ ಭಾವಾಂತ್ಯವಹ ಜ್ಞಾನಾಂಗವಾರು. ಈ ಉಭಯಾಂಗವು ಲಿಂಗಸಂಗದಿಂದ ಲಿಂಗಕ್ಕೆ ಅಂಗಕ್ಕೆ ಆಶ್ರಯಸ್ಥಾನನಾಗಿ ನಿಂದ ನಿರುಪಮ ಮಹಿಮ ಶರಣ ತಾನೆ ಅಂಗಲಿಂಗ ಪ್ರಾಣಲಿಂಗ ಸಂಬಂಧಿಯೆನಿಸಿಕೊಂಬನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯನೆಂದು ಬೇರು ಮಾಡಿ ನುಡಿದು ಬೇರು ಮಾಡಿ ನಡೆವ ಭಿನ್ನನಲ್ಲ. ಭಿನ್ನವಿಲ್ಲದ ಅಂತರಂಗದಲ್ಲಿ ಅರಿವು ಪರಿಪೂರ್ಣ ಬಸವಣ್ಣ. ಬಹಿರಂಗದಲ್ಲಿ ದಾಸೋಹ ಸಂಪನ್ನ ಬಸವಣ್ಣ. ಮನ ವಚನ ಕಾಯದಲ್ಲಿ ಸದ್ಭಕ್ತಿಸಂಪನ್ನ ಬಸವಣ್ಣ. ಎಡೆದೆರಹಿಲ್ಲದ ಲಿಂಗಸಂಪನ್ನ ಬಸವಣ್ಣ. ಸರ್ವಾಂಗದಲ್ಲಿ ಸರ್ವಾಚಾರಸಂಪನ್ನ ಬಸವಣ್ಣ. ಕೂಡಲಚೆನ್ನಸಂಗನಲ್ಲಿ ಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು
--------------
ಚನ್ನಬಸವಣ್ಣ
ನಿತ್ಯವೆಂದಡೆ ಲಿಂಗ, ಅನಿತ್ಯವೆಂದಡೆ ಅಂಗ. ನಿತ್ಯವೆಂದಡೆ ಜಾÐನ, ಅನಿತ್ಯವೆಂದಡೆ ಅಜಾÐನ. ನಿತ್ಯ ಕಾರ್ಯವು ಸತ್ಕರ್ಮ, ಅನಿತ್ಯ ಕಾರ್ಯಗಳೆ ವಿಷಯಂಗಳು. ವಿಷಯಂಗಳೆ ನಿತ್ಯಂಗಳಾಗಲು, ಜಾÐನಿಯೆಂದು, ಐಕ್ಯನೆಂದು, ಪ್ರಮಥನೆಂದು, ವೀರಶೈವನೆಂದು, ಕಪಿಲಸಿದ್ಧಮಲ್ಲಿಕಾರ್ಜುನನೆಂದು ಬೇರೆ ಉಂಟೇನೊ, ಹಾವಿನಹಾಳ ಕಲ್ಲಯ್ಯಾ ?
--------------
ಸಿದ್ಧರಾಮೇಶ್ವರ
ಲೋಕಾಧಿ ಲೋಕಂಗಳೇನುಯೇನೂ ಇಲ್ಲದಂದು `ಏಕಮೇವಾದ್ವಿತೀಯಂ ಪರಬ್ರಹ್ಮ' ತಾನೊಂದೆ ನೋಡಾ. ಅದು ತನ್ನನು ನೆನೆಯದೆ, ಇದಿರನು ನೆನೆಯದೆ ನೆನಹು ನಿಷ್ಪತ್ತಿಯಾಗಿದ್ದಿತು ನೋಡ. ಆ ನೆನಹಿಲ್ಲದ ಘನವಸ್ತು ನೆನೆದ ನೆನಹೆ ಸಾವಯವಾಗಿ ಚಿತ್ತೆನಿಸಿಕೊಂಡಿತ್ತು. ಆ ಚಿತ್ತೇ, ಸತ್ತು, ಚಿತ್ತು, ಆನಂದ, ನಿತ್ಯ, ಪರಿಪೂರ್ಣ ಎಂಬ ಐದಂಗವನಂಗೀಕರಿಸಿ, ನಿಃಕಲ ಶಿವತತ್ವವೆನಿಸಿತ್ತು ನೋಡ. ಆ ನಿಃಕಲ ಶಿವತತ್ವ ತಾನೊಂದೆ, ತನ್ನ ಶಕ್ತಿಯ ಚಲನೆಮಾತ್ರದಿಂದ ಒಂದೆರಡಾಯಿತ್ತು ನೋಡ. ಅದರೊಳಗೆ ಒಂದು ಲಿಂಗಸ್ಥಲ, ಮತ್ತೊಂದು ಅಂಗಸ್ಥಲ. ಹೀಂಗೆ ಅಂಗ ಲಿಂಗವೆಂದು, ಉಪಾಸ್ಯ ಉಪಾಸಕನೆಂದು, ವರ್ತಿಸುತ್ತಿಹುದು ನೋಡ. ಆ ಪರಶಿವನ ಚಿಚ್ಛಕ್ತಿ ತಾನೆ ಎರಡು ತೆರನಾಯಿತ್ತು. ಲಿಂಗಸ್ಥಲವನಾಶ್ರಯಿಸಿ ಶಕ್ತಿಯೆನಿಸಿತ್ತು, ಅಂಗಸ್ಥಲವನಾಶ್ರಯಿಸಿ ಭಕ್ತಿಯೆನಿಸಿತ್ತು. ಶಕ್ತಿಯೆ ನಿವೃತ್ತಿಯೆನಿಸಿತ್ತು. ಶಕ್ತಿ ಭಕ್ತಿಯೆಂದೆರಡು ಪ್ರಕಾರವಾಯಿತ್ತು ಶಿವನ ಶಕ್ತಿ. ಲಿಂಗವಾರು ತೆರನಾಯಿತ್ತು; ಅಂಗವಾರು ತೆರನಾಯಿತ್ತು. ಶಕ್ತಿಯಾರು ತೆರನಾಯಿತ್ತು; ಭಕ್ತಿಯಾರು ತೆರನಾಯಿತ್ತು. ಅದು ಹೇಂಗೆಂದಡೆ; ಮೊದಲಲ್ಲಿ ಲಿಂಗ ಮೂರು ತೆರನಾಯಿತ್ತು. ಅದು ಹೇಂಗೆಂದಡೆ : ಭಾವಲಿಂಗವೆಂದು, ಪ್ರಾಣಲಿಂಗವೆಂದು, ಇಷ್ಟಲಿಂಗವೆಂದು, ಮೂರು ತೆರನಾಯಿತ್ತು. ಆ ಭಾವಲಿಂಗ, ಪ್ರಾಣಲಿಂಗ, ಇಷ್ಟಲಿಂಗವೆಂಬ ಲಿಂಗತ್ರಯವು ಒಂದೊಂದು ಲಿಂಗವೆರಡೆರಡಾಗಿ ಆರು ತೆರನಾಯಿತ್ತು. ಅದು ಹೇಂಗೆಂದಡೆ : ಭಾವಲಿಂಗವು ಮಹಾಲಿಂಗವೆಂದು, ಪ್ರಸಾದಲಿಂಗವೆಂದು ಎರಡು ತೆರನಾಯಿತ್ತು. ಪ್ರಾಣಲಿಂಗವು ಜಂಗಮಲಿಂಗವೆಂದು, ಶಿವಲಿಂಗವೆಂದು ಎರಡು ತೆರನಾಯಿತ್ತು. ಇಷ್ಟಲಿಂಗವು ಗುರುಲಿಂಗವೆಂದು, ಆಚಾರಲಿಂಗವೆಂದು ಎರಡು ತೆರನಾಯಿತ್ತು. ಹೀಂಗೆ ಒಬ್ಬ ಶಿವನು ಆರು ತೆರನಾದನು. ಶಾಂತ್ಯತೀತೋತ್ತರೆಯೆಂಬ ಕಲಾಪರಿಯಾಯವನುಳ್ಳ ಚಿಚ್ಛಕ್ತಿ, ಶಾಂತ್ಯತೀತೆಯೆಂಬ ಕಲಾಪರಿಯಾಯವನುಳ್ಳ ಪರಾಶಕ್ತಿ, ಶಾಂತಿಯೆಂಬ ಕಲಾಪರಿಯಾಯವನುಳ್ಳ ಆದಿಶಕ್ತಿ, ವಿದ್ಯಾಕಲಾಪರಿಯಾಯವನುಳ್ಳ ಇಚ್ಛಾಶಕ್ತಿ, ಪ್ರತಿಷಾ*ಕಲಾಪರಿಯಾಯವನುಳ್ಳ ಕ್ರಿಯಾಶಕ್ತಿ. ನಿವೃತ್ತಿ ಕಲಾಪರಿಯಾಯವನುಳ್ಳ ಜ್ಞಾನಶಕ್ತಿ, ಹೀಂಗೆ ಒಂದೇ ಶಿವಶಕ್ತಿ ಆರು ತೆರನಾಗಿ, ಷಟ್‍ಪ್ರಕಾರವಹಂಥಾ ಲಿಂಗಕ್ಕೆ ಅಂಗರೂಪಾಯಿತ್ತು. ಇದು ಲಿಂಗಷಟ್‍ಸ್ಥಲ. ಇನ್ನು ಒಂದು ಅಂಗ ಮೂರು ತೆರನಾಯಿತ್ತು. ಅದು ಹೇಂಗೆಂದಡೆ: ಯೋಗಾಂಗ, ಭೋಗಾಂಗ, ತ್ಯಾಗಾಂಗವೆಂದು ಮೂರು ಪ್ರಕಾರವಾಯಿತ್ತು. ಈ ತ್ರಯಾಂಗ ಒಂದೊಂದು ಎರಡೆರಡಾಗಿ, ಆರು ತೆರನಾಯಿತ್ತು. ಅದು ಹೇಂಗೆಂದೆಡೆ: ಯೋಗಾಂಗವೆ ಐಕ್ಯನೆಂದು, ಶರಣನೆಂದು ಎರಡು ತೆರನಾಯಿತ್ತು. ಭೋಗಾಂಗವೆ ಪ್ರಾಣಲಿಂಗಿಯೆಂದು, ಪ್ರಸಾದಿಯೆಂದು ಎರಡು ತೆರನಾಯಿತ್ತು. ತ್ಯಾಗಾಂಗವೆ ಮಾಹೇಶ್ವರನೆಂದು, ಭಕ್ತನೆಂದು ಎರಡು ತೆರನಾಯಿತ್ತು. ಹೀಂಗೆ ಒಬ್ಬ ಶಿವಶರಣನು ಆರು ತೆರನಾದನು. ಸಮರಸಭಕ್ತಿ, ಆನಂದಭಕ್ತಿ, ಅನುಭಾವಭಕ್ತಿ, ಅವಧಾನಭಕ್ತಿ, ನೈಷ್ಟಿಕಾಭಕ್ತಿ, ಸದ್ಭಕ್ತಿ ಎಂದು ಮಹಾಘನ ಅನುಪಮಭಕ್ತಿ ತಾನೆ ಆರು ತೆರನಾಗಿ, ಷಟ್‍ಪ್ರಕಾರವಹಂಥ ಶರಣಂಗೆ ಅಂಗರೂಪವಾಯಿತ್ತು. ಇದು ಅಂಗಷಟ್‍ಸ್ಥಲ. ಇನ್ನು ಕ್ರಿಯಾಶಕ್ತಿಯಿಂದ ನಿವೃತ್ತಿಕಲೆ- ಆ ನಿವೃತ್ತಿಯ ಕಲೆಯ ಸಂಕಲ್ಪಮಾತ್ರದಿಂದ ಮಾಯಾಶಕ್ತಿ ಹುಟ್ಟಿದಳು. ಆ ಮಾಯಾಶಕ್ತಿಯಿಂದ ಸಮಸ್ತ ಜಗತ್ತಿನ ಉತ್ಪತ್ತಿ. ಅಂಗವೆಂದಡೆ ಶರಣ:ಲಿಂಗವೆಂದಡೆ ಶಿವ. ಆ ಶರಣಂಗೆ ಆ ಲಿಂಗವು ಆವಾಗಲೂ ಪ್ರಾಣವು ಆ ಲಿಂಗಕ್ಕೆ ಆ ಶರಣನಾವಾಗಲೂ ಅಂಗವು. ಈ ಶರಣ ಲಿಂಗವೆರಡಕ್ಕೂ ಬೀಜವೃಕ್ಷನ್ಯಾಯದ ಹಾಂಗಲ್ಲದೆ, ಭಿನ್ನವಿಲ್ಲ. ಇದು ಕಾರಣ, ಅನಾದಿಯಿಂದವು ಶರಣನೆಂದಡೆ ಲಿಂಗ, ಲಿಂಗವೆಂದೆಡೆ ಶರಣ, ಈ ಶರಣ ಲಿಂಗವೆರಡಕ್ಕೂ ಭೇದವಿಲ್ಲವೆಂಬುದನು ಸ್ವಾನುಭಾವವಿವೇಕದಿಂದ ಅರಿದುದು ಅರುಹಲ್ಲದೆ, ಆಗಮಯುಕ್ತಿಯಿಂದ ಅರಿದುದು ಅರುಹಲ್ಲ. ಅದೇನು ಕಾರಣವೆಂದಡೆ; ಶಾಸ್ತ್ರಜ್ಞಾನದಿಂದ ಸಂಕಲ್ಪ ಹಿಂಗದಾಗಿ. ಈ ಷಟ್‍ಸ್ಥಲಮಾರ್ಗವು ದ್ವೆ ೈತಾದ್ವೆ ೈತದ ಪರಿವರ್ತನೆಯಲ್ಲ. ಅದೇನು ಕಾರಣವೆಂದಡೆ; ಇದು ಶಿವಾದ್ವೆ ೈತಮಾರ್ಗವಾದ ಕಾರಣ. ಈ ಲಿಂಗಾಂಗಸಂಬಂಧ ಸಮರಸೈಕ್ಯವ ತಿಳಿದ ಬಳಿಕ ಬೊಮ್ಮ, ಪರಬೊಮ್ಮನೆಂದು ಬೇರುಂಟೆ ತಾನಲ್ಲದೇ? ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಆರುಸ್ಥಲವಿಟ್ಟು ಬೇರೆ ಕರೆದ ಭಾವವಾವುದಯ್ಯಾ ? ಸಕಲಗುಣಂಗಳನರತು, ಸರ್ವಜೀವಕ್ಕೆ ದಯಾಪರನಾಗಿಪ್ಪುದು, ಭಕ್ತಿಸ್ಥಲ. ಸಕಲದೇಹಭಾವಂಗಳಲ್ಲಿ ಕಲೆದೋರದಿಪ್ಪುದು, ಗುರುಸ್ಥಲ. ಉತ್ಪತ್ಯ ಸ್ಥಿತಿ ಲಯಕ್ಕೆ ಹೊರಗಾದುದು, ಲಿಂಗಸ್ಥಲ. ಆ ಮೂರ ಹೆರೆಹಿಂಗಿ ನಿಂದುದು, ಜಂಗಮಸ್ಥಲ. ಆ ಚತುರ್ವಿಧವನೊಳಕೊಂಡದುದು, ಶರಣಸ್ಥಲ. ಆ ಅಯಿದನವಗವಿಸಿ ನಿಂದುದು, ಐಕ್ಯಸ್ಥಲ. ಇಂತೀ ಷಡುಸ್ಥಲದ ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯನೆಂದು ನಿಂದುದು, ಒಂದೆ ಸ್ಥಲ. ಮರೆದು ಅರಿದಲ್ಲಿ ಆಯಿತ್ತು. ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವು, ಷಡಂಗಲೇಪವಾಗಿ ಸ್ವಯಂಭುವಾಯಿತ್ತು.
--------------
ಶಿವಲೆಂಕ ಮಂಚಣ್ಣ
ನಾನು ಭಕ್ತ, ನಾನು ಶರಣ, ನಾನು ಐಕ್ಯನೆಂದು ಹೆಸರಿಟ್ಟುಕೊಂಬುವ ಅಣ್ಣಗಳು ನೀವು ಕೇಳಿರೋ. ತನ್ನಲಿದ್ದ ಮೂಲಚಕ್ರದ ಮೂಲಭೇದವನರಿಯಬಲ್ಲಡೆ, ಭಕ್ತನಿಂದೆನಿಸಬಹುದು. ಅಷ್ಟದಳಕಮಲದಲ್ಲಿ ನಿಟ್ಟಿಸಿದ್ದ ಪ್ರಾಣದ ನೆಲೆಯನರಿಯಬಲ್ಲಡೆ, ಶರಣ[ನೆಂ]ದೆನಿಸಬಹುದು. ಇಡಾ ಪಿಂಗಳ ಸುಷುಮ್ನ ತ್ರಿವಿಧವನೊಂದುಗೂಡಿ, ಏಕನಾಳದೊ[ಳು] ತುಂಬಿ. ಯಜ್ಜಯಿಲ್ಲದೆ ಮಣಿಯ ಆ ಹುರಿಯಲ್ಲಿ ಪೋಣಿಸಿ, ಊಧ್ರ್ವಮುಖದಲ್ಲಿ ಎತ್ತಿ, ಪಂಚದ್ವಾರದ ಕದವ ತೆರದು, ತ್ರಿಕೂಟದಲ್ಲಿರ್ದ ಮಹಾಲಿಂಗವ ನಿರೀಕ್ಷಣವಮಾಡಬಲ್ಲಡೆ, ಐಕ್ಯನೆಂದೆನಿಸಬಹುದು. ಇಂತಪ್ಪ ಭೇದಂಗಳನರಿಯದೆ, ನಾನು ಭಕ್ತ, ನಾನು ಶರಣ, ನಾನು ಐಕ್ಯನೆಂದು ಹುಸಿಯ ನುಡಿವವರ ನೋಡಿ ಬೆರಗಾದ, ನಮ್ಮ ಗೊಹೇಶ್ವರಪ್ರಿಯ ನಿರಾಳಲಿಂಗ.
--------------
ಗುಹೇಶ್ವರಯ್ಯ
-->