ಅಥವಾ

ಒಟ್ಟು 31 ಕಡೆಗಳಲ್ಲಿ , 12 ವಚನಕಾರರು , 31 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಒಂದನೆ ದೆಸೆಯಲ್ಲಿ ಒಂದು ಮುಖದ ಭೈರವನು. ಎರಡನೆಯ ದೆಸೆಯಲ್ಲಿ ಎರಡು ಮುಖದ ಭೈರವನು. ಮೂರನೆಯ ದೆಸೆಯಲ್ಲಿ ಮೂರು ಮುಖದ ಭೈರವನು. ನಾಲ್ಕನೆಯ ದೆಸೆಯಲ್ಲಿ ನಾಲ್ಕು ಮುಖದ ಭೈರವನು. ಐದನೆಯ ದೆಸೆಯಲ್ಲಿ ಐದು ಮುಖದ ಭೈರವನು. ಆರನೆಯ ದೆಸೆಯಲ್ಲಿ ಆರು ಮುಖದ ಭೈರವನು. ಏಳನೆಯ ದೆಸೆಯಲ್ಲಿ ಏಳು ಮುಖದ ಭೈರವನು. ಎಂಟನೆಯ ದೆಸೆಯಲ್ಲಿ ಎಂಟು ಮುಖದ ಭೈರವನು. ಇಂತಿರುವ ಅಷ್ಟಭೈರವರು ಹೊರಸುತ್ತಿನಲ್ಲಿ ಪಹರಿಕರು. ತುತ್ತರಸಿನವೆಂಬ ಚಕ್ರವು ಸುರಗಿಯಂದದಿ ಸುತ್ತಿ, ತೆರಹು ಇಲ್ಲವೆ ತಿರುಗುತ್ತಿಹುದು. ಅದು ಕಾಣಬಾರದಂತಿಹುದು ನೋಡಾ, ಜಂಗಮಲಿಂಗಪ್ರಭುವೆ.
--------------
ಜಂಗಮಲಿಂಗ ಪ್ರಭುವೆ
ಆಚಾರವೆಂಬುದು ಕೂರಲಗು, ತಪ್ಪಿ ಬಂದಡೆ ಪ್ರಾಣವ ತಗಲುವುದು. ಅದು ಕಾರಣ, ಅರಿದರಿದು ಆಚರಿಸಬೇಕು. ಆಚಾರವಿಚಾರ ಉಭಯದ ವಿಚಾರವ ನೋಡದೆ, ಶಿವದೀಕ್ಷೆಯ ಮಾಡಲಾಗದು. ಅದೆಂತೆಂದಡೆ : ಪರರ ಹೆಣ್ಣಿಗೆ ಕಣ್ಣಿಡದಿಹುದೆ ಒಂದನೆಯ ಆಚಾರ. ಪರರ ದ್ರವ್ಯವ ಅಪಹಾರ ಮಾಡದಿಹುದೆ ಎರಡನೆ ಆಚಾರ. ಸುಳ್ಳಾಡದಿರವುದೆ ಮೂರನೆಯ ಆಚಾರ. ವಿಶ್ವಾಸಘಾತವ ಮಾಡದಿಹುದೆ ನಾಲ್ಕನೆಯ ಆಚಾರ. ಪ್ರಾಣಹಿಂಸೆಯ ಮಾಡದಿಹುದೆ ಐದನೆಯ ಆಚಾರ. ಸಕಲ ಶಿವಶರಣರ್ಗೆ ಸಂತೋಷವಂ ಪುಟ್ಟಿಸುವುದೆ ಆರನೆಯ ಆಚಾರ. ಸ್ವೀಕರಿಸಿದ ನೇಮವ ಪ್ರಾಣಾಂತ್ಯವಾಗಿ ಬಿಡೆನೆಂಬುವ ಏಳನೆಯ ಆಚಾರ. ಷಟ್ಸ್ಥಲದವರ ಧಿಕ್ಕರಿಸುವ ಜನರ ಸೀಳುವೆನೆಂಬುವ ವ್ರತವೆ ಎಂಟನೆ ಆಚಾರ. ಕೆಟ್ಟಜನರ ಸಹವಾಸ ಮಾಡದಿಹುದೆ ಒಂಬತ್ತನೆಯ ಆಚಾರ. ಸಜ್ಜನ ಸಂಗತಿಯ ಬಿಡದಿಹುದೆ ಹತ್ತನೆಯ ಆಚಾರ ಅನ್ಯದೇವತಾಭಜನೆಗೆ ವಿಮುಖನಾಗುವುದೆ ಹನ್ನೊಂದನೆಯ ಆಚಾರ. ಶಿವನೇ ಸರ್ವದೇವಶಿಖಾಮಣಿಯೆಂದು ಮನದಲ್ಲಿ ಅಚ್ಚೊತ್ತಿಪ್ಪುದೆ ಹನ್ನೆರಡನೆಯ ಆಚಾರ. ಶಿವನಿಗೆ ಶಿವಗಣಂಗಳಿಗೆ ಭೇದವ ಮಾಡದಿಹುದೆ ಹದಿಮೂರನೆಯ ಆಚಾರ. ಸಕಲ ಜೀವಿಗಳಿಗೆ ಹಿತವ ಬಯಸುವುದೆ ಹದಿನಾಲ್ಕನೆಯ ಆಚಾರ. ಸರ್ವರಿಗೆ ಹಿತವ ಮಾಡುವುದೆ ಹದಿನೈದನೆಯ ಆಚಾರ. ಕಡ್ಡಿಯ ಲಿಂಗಕ್ಕೆ ತೋರಿ ದಂತಧಾವನೆಯ ಮಾಡುವುದೆ ಹದಿನಾರನೆಯ ಆಚಾರ. ಸರ್ವಾವಯವವ ಸ್ವಚ್ಛ ಪ್ರಕ್ಷಾಳಿಸುವುದೆ ಹದಿನೇಳನೆಯ ಆಚಾರ ಲಿಂಗಮುದ್ರೆಯಿಲ್ಲದ ಗುಡಿಯಲ್ಲಿ ಪಾಕವ ಮಾಡದಿಹುದೆ ಹದಿನೆಂಟನೆಯ ಆಚಾರ. ಪ್ರಣವಮುದ್ರೆ ಇಲ್ಲದ ವಸ್ತ್ರ ಹೊದೆಯದಿಹುದೆ ಹತ್ತೊಂಬತ್ತನೆಯ ಆಚಾರ. ಹುಟ್ಟಿದ ಶಿಶುವಿಗೆ ಲಿಂಗಾಧಾರಣ ಮಾಡದೆ, ತಾಯ ಮೊಲೆಹಾಲು ಜೇನುತುಪ್ಪ ಮುಟ್ಟಿಸದಿಹುದೆ ಇಪ್ಪತ್ತನೆಯ ಆಚಾರ. ಆಡಿದ ಭಾಷೆಯ ಕಡೆಪೂರೈಸುವುದೆ ಇಪ್ಪತ್ತೊಂದನೆಯ ಆಚಾರ. ಸತ್ಯವ ನುಡಿದು ತಪ್ಪದಿಹುದೆ ಇಪ್ಪತ್ತೆರಡನೆಯ ಆಚಾರ. ತುರುಗಳ ಕಟ್ಟಿ ರಕ್ಷಿಸುವುದೆ ಇಪ್ಪತ್ತುಮೂರನೆಯ ಆಚಾರ. ತುರುಗಳಿಗೆ ಲಿಂಗಮುದ್ರೆಯಿಕ್ಕಿ ಹಾಲು ಕರೆವುದು ಇಪ್ಪತ್ತುನಾಲ್ಕನೆಯ ಆಚಾರ. ಮಂತ್ರಸಹಿತ ಗೋಮಯವ ಹಿಡಿದು, ಮಂತ್ರಸಹಿತ ಪುಟವಿಕ್ಕಿ ಭಸ್ಮದ ರಾಶಿಯ ಮಾಡುವುದೆ ಇಪ್ಪತ್ತೈದನೆಯ ಆಚಾರ. ಆ ಭಸ್ಮದ ರಾಶಿಯ ಪಾದೋದಕದೊಡನೆ ಉಂಡಿಯ ಕಟ್ಟುವುದೆ ಇಪ್ಪತ್ತಾರನೆಯ ಆಚಾರ. ವಿಧಿಯರಿತು ಸ್ಥಾನವರಿತು ರುದ್ರಾಕ್ಷಿಗ? ಧರಿಸುವುದೆ ಇಪ್ಪತ್ತೇಳನೆಯ ಆಚಾರ. ಶಿವಾನುಭವವ ಶಾಸ್ತ್ರವ ವಿಚಾರಿಸುವುದೆ ಇಪ್ಪತ್ತೆಂಟನೆಯ ಆಚಾರ. ಮನವ ನೋಯಿಸಿ ಮಾತನಾಡದಿಹುದೆ ಇಪ್ಪತ್ತೊಂಬತ್ತನೆಯ ಆಚಾರ. ಲಿಂಗದ ಕಲೆಯರಿತು ಲಿಂಗವ ಪೂಜಿಸುವುದೆ ಮೂವತ್ತನೆಯ ಆಚಾರ. ಗುರುಮುಖದಿಂದ `ತಾನಾರು' ತನ್ನ ನಿಜವೇನೆಂದು ಬೆಸಗೊಳ್ಳವುದೆ ಮೂವತ್ತೊಂದನೆಯ ಆಚಾರ. ಷಡ್ವರ್ಗಂಗಳ ಮೆಟ್ಟಿ ಷಟ್ಸ್ಥಲವನಿಂಬುಗೊಂಡುದೆ ಮೂವತ್ತೆರಡನೆಯ ಆಚಾರ. ಅವಿಚ್ಛಿನ್ನವಾಗಿ ಅಂಗತ್ರಯದಲ್ಲಿ ಮನ ಓಕರಿಸಿಕೊಂಡುದೆ ಮೂವತ್ತುಮೂರನೆಯ ಆಚಾರ. ಲಿಂಗದಲ್ಲಿ ಶಿಲೆಯ ಭಾವವನರಸದಿಹುದೆ ಮೂವತ್ತುನಾಲ್ಕನೆಯ ಆಚಾರ. ಜಂಗಮದಲ್ಲಿ ಕುಲವನರಸದಿಹುದೆ ಮೂವತ್ತೈದನೆಯ ಆಚಾರ. ವಿಭೂತಿಯ ಮಾಣ್ಬದಿಹುದೆ ಮೂವತ್ತಾರನೆಯ ಆಚಾರ. ರುದ್ರಾಕ್ಷಿಯ ಶುದ್ಧವ ಮಾಡಿ ಮಣಿಗಳ ಅರಸುವುದೆ ಮೂವತ್ತೇಳನೆಯ ಆಚಾರ. ಪಾದೋದಕದಲ್ಲಿ ಉಚ್ಛಿಷ್ಟವಳಿದುದೆ ಮೂವತ್ತೆಂಟನೆಯ ಆಚಾರ. ಪ್ರಸಾದದಲ್ಲಿ ರುಚಿಯ ನೋಡದಿಹುದೆ ಮೂವತ್ತೊಂಬತ್ತನೆಯ ಆಚಾರ. ಮಂತ್ರದಲ್ಲಿ ಕುತ್ಸಿತಕಲ್ಪನೆಯ ಮಾಡದಿಹುದೆ ನಾಲ್ವತ್ತೆಳನೆಯ ಆಚಾರ. ಲಿಂಗಾರ್ಚನವಿರಹಿತ ಭೋಜನ ಮಾಡದಿಹುದೆ ನಾಲ್ವತ್ತೊಂದನೆಯ ಆಚಾರ. ಐಕ್ಯರ ಸಮಾಧಿಗೊಳಿಸಿ ತಾನು ಲಿಂಗಪೂಜೆಯ ಮಾಡುವುದೆ ನಾಲ್ವತ್ತೆರಡನೆಯ ಆಚಾರ. ಲಿಂಗದ್ರೋಹವ ಕೇಳಿ ತಾನು ಪ್ರಾಣಬಿಡುವುದೆ ನಾಲ್ವತ್ತುಮೂರನೆಯ ಆಚಾರ. ಜಂಗಮದ್ರೋಹವ ಕೇಳಿ ತಾನು ಐಕ್ಯನಾಗುವುದೆ ನಾಲ್ವತ್ತುನಾಲ್ಕನೆಯ ಆಚಾರ. ಲಿಂಗದ್ರೋಹವ ಮಾಡಿದವನ ಪ್ರಾಣವ ಭೇದಿಸುವುದೆ ನಾಲ್ವತ್ತೈದನೆಯ ಆಚಾರ. ಜಂಗಮದ್ರೋಹವ ಮಾಡಿದವನ ಶಿರವನೀಡಾಡುವುದೆ ನಾಲ್ವತ್ತಾರನೆಯ ಆಚಾರ. ಅಷ್ಟಾವರಣಸಂಗವ ಮಾಡುವ ಭೇದವ ತಿಳಿವುದೆ ನಾಲ್ವತ್ತೇ?ನೆಯ ಆಚಾರ. ತಾನಾರು ಲಿಂಗವಾರು ಎಂಬ ಭೇದವು ತಿಲಮಾತ್ರ ಇಲ್ಲದಿರುವುದೆ ನಾಲ್ವತ್ತೆಂಟನೆಯ ಆಚಾರ. ತನ್ನ ನಿಜವಿಚಾರವ ತಾ ಮರೆಯದೆ ಷಟ್ಸ್ಥಲದವರಿಗೆ ಅರುಹಿ ತನ್ನಂತೆ ಮಾಡುವುದೆ ನಾಲ್ವತ್ತೊಂಬತ್ತನೆಯ ಆಚಾರ. ಇಂತಿಷ್ಟು ಆಚಾರಂಗಳ ಕಡೆಮುಟ್ಟಿಸುವುದೆ, ಕೂಡಲಚೆನ್ನಸಂಗಮದೇವರಲ್ಲಿ ಐವತ್ತನೆಯ ಆಚಾರ ನೋಡಾ ಸಿದ್ದರಾಮಯ್ಯಾ.
--------------
ಚನ್ನಬಸವಣ್ಣ
ಭಕ್ತನೆದ್ದು ಭವಿಯ ಮುಖವ ಕಂಡರೆ, gõ್ಞರವ ನರಕವೆಂಬರು. ಭಕ್ತನಾವನು ? ಭವಿಯಾವನು ? ಬಲ್ಲರೆ ಹೇಳಿ, ಅರಿಯದಿದ್ದರೆ ಕೇಳಿ. ಕಾಮ ಒಂದನೆಯ ಭವಿ, ಕ್ರೋಧ ಎರಡನೆಯ ಭವಿ, ಲೋಭ ಮೂರನೆಯ ಭವಿ, ಮೋಹ ನಾಲ್ಕನೆಯ ಭವಿ, ಮದ ಐದನೆಯ ಭವಿ, ಮತ್ಸರ ಆರನೆಯ ಭವಿ. ಇಂತೀ ಷಡ್ವಿಧ ಭವಿಯ ತಮ್ಮೆದೆಯೊಳಗೆ ಇಂಬಿಟ್ಟುಕೊಂಡು, `ನಾನು ಭವಿಯ ಮೋರೆಯ ಕಾಣಬಾರದು, ಎಂದು ಮುಖದ ಮೇಲೆ ವಸ್ತ್ರವ ಬಾಸಣಿಸಿಕೊಂಡು ತಿರುಗುವ ಕುನ್ನಿಗಳ ಮೆಚ್ಚುವನೆ ಕೂಡಲಚೆನ್ನಸಂಗಮದೇವ ?
--------------
ಚನ್ನಬಸವಣ್ಣ
ಮತ್ತಂ, ಪ್ರಣವಭೇದ ನಿರೂಪಣಾನಂತರದಲ್ಲಿ ಅಂಗಭೇದಮಂ ಪೇಳ್ವೆನೆಂತೆನೆ- ಶಿವಾಂಗ ಭೂತಾಂಗ ವಿದ್ಯಾಂಗ ಕೂಪಾಂಗ ಶಕ್ತ್ಯಂಗ ಸಾಮಾನ್ಯಂಗಂಗಳೆಂದಾರು ತೆರನೀ ಷಡಂಗಾಕ್ಷರಂಗಳಲ್ಲಿ ನಾದಬ್ರಹ್ಮಂ ಪರಿಪೂರ್ಣವಾಗಿಹುದಾ ಷಡಂಗಂಗಳಲ್ಲಿ ಮೊದಲ ಶಿವಾಂಗಕ್ಕೆ ವಿವರಂ- `ಆ ಈ ಊ Iೂ ಒ ಐ ಔ ಅಂ ಅಃ' ಎಂಬೀಯೊಂಬತ್ತ್ತು ವಿಕೃತಾಕ್ಷರಂಗಳಲ್ಲಿ ನಾಲ್ಕನೆಯ Iೂಕಾರಮಂ ಐದನೆಯ ಒ ಕಾರಮಂ ಎಂಟನೆಯ ಅಂ ಎಂಬ ಈ ಮೂರಕ್ಕರಮಂ ಬಿಟ್ಟು ಉಳಿದಾರಕ್ಕರಮಂ ಶಿವ ಸಂಜ್ಞಿತವಾದ ಹಕಾರದೊಡನೆ ಕೂಡಿಸೆ ಹಾಂ ಹೀಂ ಹೂಂ ಹೈಂ ಹೌಂ ಹಃ ಎಂಬೀ ಶಿವಷಡಂಗಮಂತ್ರವೆ ರಕಾರದಿಂ ಪೊರಗಪ್ಪುದರಿಂ ತಾಂತ್ರಿಕ ಶಿವಷಡಂಗವೆನಿಕುಂ. ರಕಾರದೊಡನೆ ಕೂಡಿ ಹ್ರಾಂ ಹ್ರೀಂ ಹ್ರೂಂ ಹೆಂ ಹ್ರೌಂ ಹ್ರಃ ಎಂಬ ವೈದಿಕ ಶಿವಷಡಂಗಮಂತ್ರವೆನಿಸುಗು ಮೀಯುಭಯಮಂತ್ರಕ್ಕಂ ಭೇದವಿಲ್ಲವೆಂದು ನಿರೂಪಿಸಿದೆಯಯ್ಯಾ, ಪರಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಶೀಲಶೀಲವೆಂಬ ಅಣ್ಣಗಳು ನೀವು ಕೇಳಿರೊ: ಕಾಮ ಒಂದನೆಯ ಭವಿ, ಕ್ರೋಧ ಎರಡನೆಯ ಭವಿ, ಲೋಭ ಮೂರನೆಯ ಭವಿ, ಮೋಹ ನಾಲ್ಕನೆಯ ಭವಿ, ಮದ ಐದನೆಯ ಭವಿ, ಮತ್ಸರ ಆರನೆಯ ಭವಿ. ಇಂತೀ ಷಡ್ವಿಧಭವಿಯ ತಮ್ಮ ಎದೆಯೊಳಗೆ ಇಂಬಿಟ್ಟುಕೊಂಡು ಅಂಗದ ಮೇಲೆ ಅವರಿಗೆ ಲಿಂಗವುಂಟೊ ? ಇಲ್ಲವೊ ? ಎಂಬ ಜಗಭಂಡರು ನೀವು ಕೇಳಿರೊ: ಅಚ್ಚಪ್ರಸಾದಿ ನಿಚ್ಚಪ್ರಸಾದಿ ! ಜಲವನೆ ಹೊಕ್ಕು ಕನ್ನವನಿಕ್ಕಿ ಅಗ್ಗಣಿಯ ತಂದು ಮಜ್ಜನಕ್ಕೆ ನೀಡುವ ಹಗಲುಗಳ್ಳರ ಮೆಚ್ಚುವನೆ ಕೂಡಲಚೆನ್ನಸಂಗಮದೇವ ?
--------------
ಚನ್ನಬಸವಣ್ಣ
ತನ್ನ ತನ್ನಿಚ್ಛೆಗೆ ಬಹಲ್ಲಿ ಪಿನಾಕಿ ಬೋಸರಗಿತ್ತಿಯ ಹಾಸೆ? ಮನವ ಕಟ್ಟಿ, ಐದನೆಯ ಭೂತವ ಸುಟ್ಟಡೆ. ಎನ್ನ ದೇವನುಂಟಿಲ್ಲೆನ್ನಬೇಡ. ಮನಗಾಯಲಾರದೆ ತನುಗಾಯಹೋದಡೆ, ಎನ್ನ ದೇವ ಸೆರೆಯಲ್ಲೆಂದಾತನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ತಾಯಿಯಲ್ಲಿ ಬಯಸಿ ತಂದ ತಲೆಯ ಕೈಯೊಳಿಟ್ಟು ಕಾಣದಿರ್ದೊಡೆ ಸವಿಸುಖ ತಪ್ಪಿತ್ತು. ಮಣ್ಣೊಳಗೆ ಮುಚ್ಚಿದರೆ ಒಂದನೆಯ ಸುಖ ತಪ್ಪಿತ್ತು. ಜಲದೊಳಗೆ ಮುಚ್ಚಿದರೆ ಎರಡನೆಯ ಸುಖ ತಪ್ಪಿತ್ತು. ಕಿಚ್ಚಿನೊಳಗೆ ಮುಚ್ಚಿದರೆ ಮೂರನೆಯ ಸುಖ ತಪ್ಪಿತ್ತು. ಗಾಳಿಯೊಳಗೆ ಮುಸುಕಲಿಟ್ಟರೆ ನಾಲ್ಕನೆಯ ಸುಖ ತಪ್ಪಿತ್ತು. ಅಂಬರದೊಳಗಡಗಿಸಿದರೆ ಐದನೆಯ ಸುಖ ತಪ್ಪತ್ತು. ಕರ್ತಾರನಲ್ಲಿಟ್ಟು ಕಾಣಿಸದಿರ್ದಡೆ ಆರನೆಯ ಸುಖ ತಪ್ಪಿತ್ತು. ಈ ಸುಖವನರಿಯದೆ ಮತ್ತೆ ಮತ್ತೆ ಮಾಡಿಕೊಂಡರೇನು ಅತ್ತತ್ತಲರಿಯದೆ ವ್ಯರ್ಥವಾಯಿತ್ತು ಗುರುನಿರಂಜನ ಚನ್ನಬಸವಲಿಂಗವು ಸಾಕ್ಷಿಯಾಗಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಬಳಿಕೀ ಪ್ರಕಾರಮಾದ ಹಠಯೋಗರೂಪಮಪ್ಪ ಅಷ್ಟಾಂಗಗಳಂ ನಿರಾಲಸ್ಯದಿಂ ಎಡೆಬಿಡುವಿಲ್ಲದೆ ಮಾಡಿದಾತಂಗೆ ಆಗುವ ಸಿದ್ಧಿಪ್ರಕಾರಗಳೆಂತೆನೆ : ಮೊದಲನೆಯ ವರ್ಷದಲ್ಲಿ ನಿರೋಗಿಯಾಗಿ ಸಕಲಜನ ಪ್ರೀತನಾಗುವನು. ಎರಡನೆಯ ವರ್ಷದಲ್ಲಿ ಸುಸಂಸ್ಕøತ ಭಾಷೆಯಿಂದ ಕವಿತ್ವವಂ ಮಾಡುವನು. ಮೂರನೆಯ ವರ್ಷದಲ್ಲಿ ಸರ್ಪಾದಿ ದುಷ್ಟಪ್ರಾಣಿಗಳಿಂದೆ ಬಾಧಿಸಿಕೊಳ್ಳುತಿರನು. ನಾಲ್ಕನೆಯ ವರ್ಷದಲ್ಲಿ ಹಸಿವು ತೃಷೆ ವಿಷಯ ನಿದ್ರೆ ಶೋಕ ಮೋಹಾದಿಗಳಂ ಬಿಡುವನು. ಐದನೆಯ ವರ್ಷದಲ್ಲಿ ದೂರಶ್ರವಣ ವಾಕ್ಸಿದ್ಧಿ ಪರಕಾಯಪ್ರವೇಶಾಧಿಕವುಳ್ಳಾತನಹನು. ಆರನೆಯ ವರ್ಷದಲ್ಲಿ ವಜ್ರಾದ್ಯಾಯುಧಗಳಿಂದೆ ಭೇದಿಸಲ್ಪಡದಾತನಾಗಿ, ಶೀಘ್ರಗಾಮಿಯಾಗಿ ದೂರದರ್ಶನವುಳ್ಳಾತನಾಗುವನು. ಏಳನೆಯ ವರ್ಷದಲ್ಲಿ ಖೇಚರಗಾಮಿಯಾಗುವನು. ಎಂಟನೆಯ ವರ್ಷದಲ್ಲಿ ಅಣಿಮಾದಿ ಅಷ್ಟಮಹದೈಶ್ವರ್ಯಸಂಪನ್ನನಾಹನು. ಒಂಬತ್ತನೆಯ ವರ್ಷದಲ್ಲಿ ಸ್ವೇಚ್ಛಾಗಮನಿಯಾಗಿ ವಜ್ರಶರೀರಿಯಾಹನು. ಹತ್ತನೆಯ ವರ್ಷದಲ್ಲಿ ಮನೋಯೋಗಿಯಾಗಿ ಇಚ್ಛಾವಿಷಯಂಗಳ ಪಡೆಯುವನು. ಹನ್ನೊಂದನೆಯ ವರ್ಷದಲ್ಲಿ ಸಕಲ ಲೋಕಂಗಳಿಗೆ ಆಜ್ಞಾಕರ್ತೃವಾಹನು. ಹನ್ನೆರಡನೆಯ ವರ್ಷದಲ್ಲಿ ಶಿವನ ಸಮಾನವಾಗಿ ಸೃಷ್ಟಿಸ್ಥಿತಿಲಯಂಗಳಂ ಮಾಡುತಿರ್ಪುದೇ ಹಠಯೋಗಸಿದ್ಧಿ ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಆದಿ, ಅನಾದಿ, ಅನಾಗತ, ಅನಂತ, ಅದ್ಭುತ, ತಮಂಧ, ತಾರಜ, ತಂಡಜ, ಬಿಂದುಜ, ಭಿನ್ನಾಯುಕ್ತ, ಅವ್ಯಕ್ತ, ಆಮದಾಯುಕ್ತ, ಮಣಿರಣ, ಮಾನ್ಯರಣ, ವಿಶ್ವರಣ, ವಿಶ್ವವಸು, ಅಲಂಕೃತ, ಕೃತಯುಗ, ತ್ರೇತಾಯುಗ, ದ್ವಾಪರ[ಯುಗ], ಕಲಿಯುಗ- ಇಂತೀ ಇಪ್ಪತ್ತೊಂದು ಯುಗಂಗಳ ನಿರ್ಮಿಸಿದಾತ ನಮ್ಮ ಬಸವಣ್ಣ. ಪ್ರಥಮ ಯುಗದಲ್ಲಿ ಪೃಥ್ವಿ, ಅಪ್ಪು, ತೇಜ, ವಾಯು, ಆಕಾಶಂಗಳಿಲ್ಲದಂದು ಆರೂ ಆರೂ ಇಲ್ಲದಂದು, ನಾಮವಿಲ್ಲದಂದು, ಅಂದು ನಿಃಶೂನ್ಯವಾಗಿದ್ದ ಕಾಣ ನಮ್ಮ ಬಸವಣ್ಣ. ಅಂದು ನಿಮ್ಮ ನಾಭಿಕಮಲದಲ್ಲಿ ಜಲಪ್ರಳಯ ಪುಟ್ಟಿತ್ತು. ಆ ಜಲಪ್ರಳಯದಲ್ಲಿ ಒಂದುಗುಳ್ಳೆ ಲಿಂಗಾಕಾರವಾಗಿ ಪುಟ್ಟಿತ್ತು. ಆ ಲಿಂಗವ ತಕ್ಕೊಂಡು ಸ್ಥಾಪ್ಯವಿಟ್ಟಾತ ನಮ್ಮ ಬಸವಣ್ಣನು. ಇಪ್ಪತ್ತನೆಯ ಯುಗದಲ್ಲಿ ಓಂಕಾರವೆಂಬ ಮೇವ ಮೇದು, ಮೆಲುಕಿರಿದು, ಪರಮಾರ್ಥವೆಂಬ ಹೆಂಡಿಯನ್ನಿಕ್ಕಿ ನೊಸಲ ಕಣ್ಣತೆರೆದು ನೋಡಲಾಗಿ ಆ ಹೆಂಡಿ ಭಸ್ಮವಾಯಿತ್ತು. ಆ ಭಸ್ಮವನೆ ತೆಗೆದು ತಳಿಯಲಾಗಿ ಭೂಮಂಡಲ ಹೆಪ್ಪಾಯಿತ್ತು ಹೆಪ್ಪಾಗಲಿಕ್ಕಾಗಿ ತೊಡೆಯ ಮೇಲಿದ್ದ ಲಿಂಗವ ತಕ್ಕೊಂಡು ಸ್ಥಾಪ್ಯವಿಟ್ಟಾತ ನಮ್ಮ ಬಸವಣ್ಣ. ಹತ್ತೊಂಬತ್ತನೆಯ ಯುಗದಲ್ಲಿ ಏಕಪಾದದ ಮಾಹೇಶ್ವರನ ನಿರ್ಮಿಸಿದಾತ ನಮ್ಮ ಬಸವಣ್ಣ. ಹದಿನೆಂಟನೆಯ ಯುಗದಲ್ಲಿ ಕತ್ತಲೆಯ ಕಾಳೋದರನೆಂಬ ರುದ್ರನ ನಿರ್ಮಿಸಿದಾತ ನಮ್ಮ ಬಸವಣ್ಣ ಹದಿನೇಳನೆಯ ಯುಗದಲ್ಲಿ ವೇದಪುರಾಣಾಗಮಶಾಸ್ತ್ರಂಗಳ ನಿರ್ಮಿಸಿದಾತ ನಮ್ಮ ಬಸವಣ್ಣ ಹದಿನಾರನೆಯ ಯುಗದಲ್ಲಿ....... ಹದಿನೈದನೆಯ ಯುಗದಲ್ಲಿ ಅಮೃತಮಥನವ ಮಾಡಿದಾತ ನಮ್ಮ ಬಸವಣ್ಣ. ಹದಿನಾಲ್ಕನೆಯ ಯುಗದಲ್ಲಿ ತೆತ್ತೀಸಕೋಟಿ ದೇವರ್ಕಳ ನಿರ್ಮಿಸಿದಾತ ನಮ್ಮ ಬಸವಣ್ಣ. ಹದಿಮೂರನೆಯ ಯುಗದಲ್ಲಿ ಸೌರಾಷ್ಟ್ರ ಸೋಮೇಶ್ವರನ ನಿರ್ಮಿಸಿದಾತ ನಮ್ಮ ಬಸವಣ್ಣ. ಹನ್ನೆರಡನೆಯ ಯುಗದಲ್ಲಿ ಪಾರ್ವತಿಪರಮೇಶ್ವರರ ನಿರ್ಮಿಸಿದಾತ ನಮ್ಮ ಬಸವಣ್ಣ. ಹನ್ನೊಂದನೆಯ ಯುಗದಲ್ಲಿ ಏಕಾದಶ ರುದ್ರರ ನಿರ್ಮಿಸಿದಾತ ನಮ್ಮ ಬಸವಣ್ಣ. ಹತ್ತನೆಯ ಯುಗದಲ್ಲಿ ದಶವಿಷ್ಣುಗಳ ನಿರ್ಮಿಸಿದಾತ ನಮ್ಮ ಬಸವಣ್ಣ. ಒಂಬತ್ತನೆಯ ಯುಗದಲ್ಲಿ ನವಬ್ರಹ್ಮರ ನಿರ್ಮಿಸಿದಾತ ನಮ್ಮ ಬಸವಣ್ಣ. ಎಂಟನೆಯ ಯುಗದಲ್ಲಿ ಅಷ್ಟದಿಕ್ಪಾಲರ ನಿರ್ಮಿಸಿದಾತ ನಮ್ಮ ಬಸವಣ್ಣ. ಏಳನೆಯ ಯುಗದಲ್ಲಿ ಸಪ್ತ ಸಮುದ್ರಂಗಳ ನಿರ್ಮಿಸಿದಾತ ನಮ್ಮ ಬಸವಣ್ಣ. ಆರನೆಯ ಯುಗದಲ್ಲಿ ಷಣ್ಮುಖದೇವರ ನಿರ್ಮಿಸಿದಾತ ನಮ್ಮ ಬಸವಣ್ಣ. ಐದನೆಯ ಯುಗದಲ್ಲಿ ಪಂಚಮುಖದೀಶ್ವರನ ನಿರ್ಮಿಸಿದಾತ ನಮ್ಮ ಬಸವಣ್ಣ. ನಾಲ್ಕನೆಯ ಯುಗದಲ್ಲಿ ಚತುರ್ಮುಖದ ಬ್ರಹ್ಮನ ನಿರ್ಮಿಸಿದಾತ ನಮ್ಮ ಬಸವಣ್ಣ. ಮೂರನೆಯ ಯುಗದಲ್ಲಿ ಬ್ರಹ್ಮ, ವಿಷ್ಣು, ರುದ್ರರ ನಿರ್ಮಿಸಿದಾತ ನಮ್ಮ ಬಸವಣ್ಣ. ಎರಡನೆಯ ಯುಗದಲ್ಲಿ ಸಂಗಯ್ಯನ ನಿರ್ಮಿಸಿದಾತ ನಮ್ಮ ಬಸವಣ್ಣ. ಒಂದನೆಯ ಯುಗದಲ್ಲಿ ಪ್ರಭುವೆಂಬ ಜಂಗಮವ ನಿರ್ಮಿಸಿದಾತ ನಮ್ಮ ಬಸವಣ್ಣ. ಇಂತೀ ಇಪ್ಪತ್ತೊಂದು ಯುಗಂಗಳಲ್ಲಿ ಬಸವಣ್ಣನು ತಮ್ಮ ಕರಕಮಲವೆಂಬ ಗರ್ಭದಲ್ಲಿ ಜನಿಸಿದನೆಂದು. ಕಕ್ಕಯ್ಯಗಳು ತಮ್ಮ ಮೋಹದ ಮಗನೆಂದು ಒಕ್ಕುದನಿಕ್ಕಿ ಸಲಹಿದರು ಕಾಣಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಅಯ್ಯಾ, ಏಳೇಳು ಜನ್ಮದಲ್ಲಿ ಶಿವಭಕ್ತನಾಗಿ ಬಾರದಿರ್ದಡೆ ನಿಮ್ಮಾಣೆ, ನಿಮ್ಮ ಪ್ರಮಥರಾಣೆ ! ನಿಮ್ಮ ಪ್ರಸಾದಕ್ಕಲ್ಲದೆ ಬಾಯ್ದೆರೆಯೆನಯ್ಯಾ. ಪ್ರಥಮಭವಾಂತರದಲ್ಲಿ ಶಿಲಾದನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು ನಿಮ್ಮ ಭೃತ್ಯನ ಮಾಡಿ ಎನನ್ನಿರಿಸಿಕೊಂಡಿರ್ದಿರಯ್ಯಾ. ಎರಡನೆಯ ಭವಾಂತರದಲ್ಲಿ ಸ್ಕಂದನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು ನಿಮ್ಮ ಕಾರುಣ್ಯವ ಮಾಡಿರಿಸಿಕೊಂಡಿರ್ದಿರಯ್ಯಾ. ಮೂರನೆಯ ಭವಾಂತರದಲ್ಲಿ ನೀಲಲೋಹಿತನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು ನಿಮ್ಮ ಲೀಲಾವಿನೋದದಿಂದಿರಿಸಿಕೊಂಡಿರ್ದಿರಯ್ಯಾ. ನಾಲ್ಕನೆಯ ಭವಾಂತರದಲ್ಲಿ ಮನೋಹರನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು ನಿಮ್ಮ ಮನಃಪ್ರೇರಕನಾಗಲೆಂದಿರಿಸಿಕೊಂಡಿರ್ದಿರಯ್ಯಾ. ಐದನೆಯ ಭವಾಂತರದಲ್ಲಿ ಕಾಲಲೋಚನನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು ಸರ್ವಕಾಲಸಂಹಾರವ ಮಾಡಿಸುತ್ತಿರ್ದಿರಯ್ಯಾ. ಆರನೆಯ ಭವಾಂತರದಲ್ಲಿ ವೃಷಭನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು ನಿಮಗೇರಲು ವಾಹನವಾಗಲೆಂದಿರಿಸಿಕೊಂಡಿರ್ದಿರಯ್ಯಾ. ಏಳನೆಯ ಭವಾಂತರದಲ್ಲಿ ಬಸವದಣ್ಣಾಯಕನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು ನಿಮ್ಮ ಒಕ್ಕುದ ಮಿಕ್ಕುದಕ್ಕೆ ಯೋಗ್ಯನಾಗಲೆಂದಿರಿಸಿಕೊಂಡಿರ್ದಿರಯ್ಯಾ. ಇದು ಕಾರಣ ಕೂಡಲಸಂಗಮದೇವಾ, ನೀವು ಬರಿಸಿದ ಭವಾಂತರದಲ್ಲಿ ನಾನು ಬರುತಿರ್ದೆನಯ್ಯಾ. 4
--------------
ಬಸವಣ್ಣ
ಆರೂ ಇಲ್ಲದಂದು ತಾನಹ ದೆವಸ, ತನಗೆ [ಆ]ನಾಧಾರವಾದೆ ನೋಡಾ. ಭೂಮಿಯಾಕಾಶ ಐದನೆಯ ಭೂತ ಒಳಗಾಗಿ [ಆಂ] ಬೇರೆ ತಾ ಬೇರೆ ಬಳಿಕಾದ ದೆವಸ, ತಾ ತೋರಿದಂದಹ ಆ ನೂಲ ಹಿಡಿದೆನು. ತೀವಿದ ಒಂಬತ್ತು ದ್ವೀಪಕ್ಕೆ ಭಾವವಿರಹಿತನಾಗಿ ತಾ ಹೊರಗಾದಡೆ [ಅಂ] ಹಿಡಿದೊಳಗುಮಾಡಿದನೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ತನುವಿಲ್ಲದ ಘನಕ್ಕೆ ತನುಸಂಬಂಧಿಸಿದರೆ ಒಂದನೆಯ ಪಾತಕ. ಮನವಿಲ್ಲದ ಘನಕ್ಕೆ ಮನವ ಸಂಬಂಧಿಸಿದರೆ ಎರಡನೆಯ ಪಾತಕ. ಧನವಿಲ್ಲದ ಘನಕ್ಕೆ ಧನವ ಸಂಬಂಧಿಸಿದರೆ ಮೂರನೆಯ ಪಾತಕ. ಭಾವವಿಲ್ಲದ ಘನಕ್ಕೆ ಭಾವ ಸಂಬಂಧಿಸಿದರೆ ನಾಲ್ಕನೆಯ ಪಾತಕ. ತಾನಿಲ್ಲದ ಘನಕ್ಕೆ ತನ್ನ ಸಂಬಂಧಿಸಿದರೆ ಐದನೆಯ ಪಾತಕ. ಇಂತು ಪಂಚವಿಧವನರಿಯದೆ ಪಂಚಬ್ರಹ್ಮ ಗುರುನಿರಂಜನ ಚನ್ನಬಸವಲಿಂಗದಲ್ಲಡಗಿರ್ದ ನಿಜಕ್ಕೆ ಗಜಬಜೆಯಗಲಸಿದರೆ ಪಂಚಮಹಾಪಾತಕದೊಳಗಾಗುವರು.
--------------
ದೇಶಿಕೇಂದ್ರ ಸಂಗನಬಸವಯ್ಯ
ಶ್ರೀಗುರುಕರುಣಕಟಾಕ್ಷದೊಳ್ ಚಿದ್ಘನಲಿಂಗ ಅಂಗಸಂಬಂಧದಾಚರಣೆಯ ಸರ್ವಾಚಾರಸಂಪದವೆಂಬ ಪರಮಾಮೃತಮಂ ಸವಿದುಂಡುಪವಾಸಿ ಬಳಸಿಬ್ರಹ್ಮವಾಗಿ, ಪರಮಪಾತಕವೆಂಬ ಕಾಲ ಕಾಯ ಮಾಯಾಪಾಶ ಭವಸಾಗರವ ದಾಂಟಿ, ದೃಢಚಿತ್ತಿನೊಳ್ ನಿಂದ ನಿತ್ಯಸುಖಿಗಳು, ತಮ್ಮ ನಡೆ ನುಡಿ ತಮಗೆ ಸ್ವಯವಾಗಿ, ಸತ್ಯಶುದ್ಧದಿಂದ ಹಸ್ತಪಾದವ ದುಡಿಸಿ, ಮಾಡುಂಬ ಭಕ್ತನಾಗಲೀ, ಬೇಡುಂಬ ಮಹೇಶನಾಗಲೀ, ಅಂಗವಿಕಾರದ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರವೆಂಬ ಅವಲಕ್ಷಣಮಂ ಜರಿದು ಮರೆದು ನಿರಾಸತ್ವದಿಂದ, ದೇಹಮೋಹಮನ್ನಳಿದುಳಿದು, ಅಪರಾಧ ಪ್ರಾಣಿಗಳಾಗಲಿ, ನಿರಪರಾಧ ಪ್ರಾಣಿಗಳಾಗಲಿ, ಕೊಲ್ಲದಿರ್ಪುದೆ ಧರ್ಮ, ಗಂಧ ರಸ ಮೊದಲಾದ ಪರದ್ರವ್ಯ ಒಲ್ಲದಿಪ್ಪುದೆ ಶೀಲ, ಗುರುಹಿರಿಯರುಗಳಿಗೆ ಪ್ರತಿ ಉತ್ತರವ ಕೊಡದಿಪ್ಪುದೆ ವ್ರತ, ಕ್ಷುತ್ತು ಪಿಪಾಸಾದಿಗಳಿಗೆ ಅಳುಕದಿಪ್ಪುದೆ ನೇಮ, ಕುಲಾದಿ ಅಷ್ಟಮದಗಳಿಗೆಳಸದಿಪ್ಪುದೆ ನಿತ್ಯ. ಇಂತೆಸೆವ ಪಂಚಪರುಷವ ಬಾಹ್ಯಾಂತರಂಗದಲ್ಲಿ ಪರಿಪೂರ್ಣಭಾವದಿಂದ ತುಂಬಿತುಳುಕಾಡುತ, ಶ್ರಿಗುರುಲಿಂಗಜಂಗಮದ ಷಟ್ಸಾ ್ಥನದಲ್ಲಿ ಷಡ್ವಿಧಲಿಂಗ ಮಂತ್ರಪ್ರಣಮಂಗಳು ಸಂಬಂಧವಾಗಿಪ್ಪುದ ಶ್ರುತಿಗುರುಸ್ವಾನುಭಾವದಿಂದರಿದು, ತನ್ನ ಬಳಿವಿಡಿದು ಬಂದ ಸುಪದಾರ್ಥವ ಆ ಗುರುಚರಪರಕ್ಕೆ ಪುಷ್ಪ ಮೊದಲಾದ ಸುಗಂಧವ ಪವಿತ್ರಮುಖದಿಂದ ನಿವೇದಿಸಿದಲ್ಲಿ ಆಚಾರಲಿಂಗಕ್ಕೆ ಸಮರ್ಪಣೆಯಾಗಿಪ್ಪುದು. ಹಣ್ಣು ಮೊದಲಾದ ಸುರಸದ್ರವ್ಯವ ಸುಪವಿತ್ರಗಳಿಂದ ಸುಪವಿತ್ರಮುಖದೊಳ್ ಸಮರ್ಪಿಸಿದಲ್ಲಿ ಗುರುಲಿಂಗಕ್ಕೆ ಸಮರ್ಪಣೆಯಾಗಿಪ್ಪುದು. ಪೀತ ಶ್ವೇತ ಮೊದಲಾದ ಸಮಸ್ತ ಚಿತ್ರವಿಚಿತ್ರಂಗಳ ಸ್ವರೂಪವನು ಮಹಾಜ್ಞಾನಸೂತ್ರವಿಡಿದು ಯೋಗ್ಯವೆನಿಸಿ ನಿವೇದಿಸಿದಲ್ಲಿ ಶಿವಲಿಂಗಕ್ಕೆ ಸಮರ್ಪಣೆಯಾಗಿರ್ಪುದು. ಕೌಪ ಕಟಿಸೂತ್ರ ಮೊದಲಾದ ವಸ್ತ್ರಾಭರಣಗಳ ಯೋಗ್ಯವೆನಿಸಿ ತಟ್ಟುವ ಮುಟ್ಟುವ ಶೀತುಷ್ಣಾದಿ ಸತ್ಕ್ರಿಯವಿಡಿದು ಸಮರ್ಪಿಸಿದಲ್ಲಿ ಚರಲಿಂಗಕ್ಕೆ ಸಮರ್ಪಣೆಯಾಗಿರ್ಪುದು. ಶಿವಾನುಭಾವಪ್ರಸಂಗ ಘಂಟೆ ತಂತಿ ಚರ್ಮ ಮೊದಲಾದ ಸುಶಬ್ದಂಗಳ ಸತ್ಯಶುದ್ಧ ತ್ರಿಕರಣವಿಡಿದು ಪವಿತ್ರತೆಯಿಂದ ನಿವೇದಿಸಿದಲ್ಲಿ ಪ್ರಸಾದಲಿಂಗಕ್ಕೆ ಸಮರ್ಪಣೆಯಾಗಿರ್ಪುದು. ಈ ಸಕಲ ಸಂತೋಷವಾದ ಮತ್ತೆ ಹೊನ್ನು ಹೆಣ್ಣುಗಳ ಗಣಸಾಕ್ಷಿಯಾಗಿ, ಸತ್ಯಸಾವಧಾನದಿಂದೆ ಧಾರೆಯನೆರೆದು, ಶಿವದೀಕ್ಷೋಪದೇಶಗಳಿಂದ ಸುಪವಿತ್ರವೆಂದೆನಿಸಿ ನಿವೇದಿಸಿದಲ್ಲಿ ಮಹಾಲಿಂಗಕ್ಕೆ ಸಮರ್ಪಣೆಯಾಗಿರ್ಪುದು. ಈ ಪ್ರಕಾರದಿಂದ ಸತ್ಯಶುದ್ಧಕಾಯಕದೊಳು ತನಗುಳ್ಳ ಸುಪದಾರ್ಥದ್ರವ್ಯವ ನಿಜೇಷ್ಟಾರ್ಪಣ ಪರದಿಂದೆ ಲಿಂಗಾರ್ಪಣವ ಸಮರ್ಪಿಸಬಲ್ಲಾತನೆ ಷಟ್‍ಸ್ಥಲಭಕ್ತ ಮಹೇಶ್ವರರೆಂಬೆನು. ಈ ಷಡ್ವಿಧ ದ್ರವ್ಯಪದಾರ್ಥಂಗಳು ದೊರೆಯದಿದ್ದರೆ ಮೂಲಚಿತ್ತ ಮೊದಲಾದ ಅಂಗ ಮನ ಪ್ರಾಣ ಇಂದ್ರಿಯ ಕರಣ ವಿಷಯಂಗಳ ಆ ಶ್ರೀಗುರುವಿಂಗೆ ಜಂಗಮದ ಸೊಮ್ಮುಸಂಬಂಧದಲ್ಲಿ ನಿಲಿಸುವುದೆ ಸರ್ವಾಂಗಲಿಂಗಾರ್ಪಣವಾಗಿರ್ಪುದು. ಇದರೊಳಗೆ ತನು ನೋಯದೆ, ಮನ ಕರಗದೆ, ಭಾವ ಬಳಲಿಸದೆ, ಅತಿ ಸುಯಿಧಾನದಿಂದ ನಿಃಕಳಂಕ ಪರಶಿವ ಪಾದೋದಕ ಪ್ರಸಾದ ಮಂತ್ರದ ಪರಶಿವತತ್ವದಲ್ಲಿ ಪರಿಪೂರ್ಣರಾಗಿರ್ಪುದೆ ಅನಾದಿಪ್ರಮಥಗಣಮಾರ್ಗವು. ಇಂತೆಸೆವ ಸಚ್ಚಿದಾನಂದದ ಪರಮಾನುಭಾವ ಸನ್ಮಾರ್ಗವನುಳಿದು ಸರ್ವಾಚಾರಸಂಪನ್ನ ಬಾಹ್ಯರಾದ ಕಿರಾತರಂತೆ, ಭಂಗಿ ಗಾಂಜಿ ಗುಡಾಕು ತಂಬಾಕದ ಚಿಲುಮೆ ಕಡ್ಡಿ ಹುಡಿ ನಾಸಿಬುಕುಣಿಯೆಂದು ಭುಂಜಿಸಿ, ಹುಚ್ಚನಾಯಿ ಎಲುವ ಕಚ್ಚಿದಂತೆ, ದಿವರಾತ್ರಿಗಳಲ್ಲಿ ಪಾದೋದಕಪ್ರಸಾದದ್ವಾರವಾಗಿ ಪರಿಶೋಭಿಸುವಂತೆ ಪರಶಿವ ಪ್ರಾಣಲಿಂಗದ ಭೋಗಾಂಗದಲ್ಲಿಟ್ಟುಕೊಂಡು, ಭ್ರಾಂತು ಭೋಗಿಗಳಾಗಿ, ನಿಜಗೆಟ್ಟು, ತಮ್ಮ ತಾವರಿಯದೆ, ಪಿಶಾಚಿಮಾನವರಂತೆ ಇಂದ್ರಾದಿ ಹರಿಸುರಬ್ರಹ್ಮಾದಿಗಳು ಹೊಡೆದಾಡಿದ ಕರ್ಮದೋಕುಳಿಯಲ್ಲಿ ಬಿದ್ದೊದ್ದಾಡಿ ತೊಳಲುವ, ವನಿತಾದಿ ಆಸೆ, ಭೋಗದ ಆಸೆ ಪಾಶದೋಕುಳಿಯೆಂದರಿದು ಮರೆದು ನರಗುರಿಗಳಾಗಿ, ಬಾಯಿಗೆ ಬಾಯಿ ಹಚ್ಚಿ ಬೊಗಳಾಡುವುದೊಂದು ದುರಾಚಾರ. ರಾಜರಿಗೆ ರೊಕ್ಕವ ಕೊಟ್ಟು, ಯಂತ್ರ ಮಂತ್ರ ತಂತ್ರಗಳಿಂದೋಲೈಸಿ, ಮಲತ್ರಯವಿದೂರರೆಂದು ಪತ್ರ ಉತ್ರಗಳಲ್ಲಿ ಹೆಮ್ಮೆ ಹಿರಿತನಕ್ಕೆ ಬಿದ್ದು, ಅಂದಿನವರೆ ಇಂದಿನವರೆಂದು ಒಪ್ಪವಿಟ್ಟು, ನುಡಿನಡೆಹೀನರಾಗಿ, ಬಿಟ್ಟಿಮಲವನುಸರಿಸಿ, ತಥ್ಯ ಮಿಥ್ಯ ತಾಗುದ್ವೇಷಗಳಿಂದೆ ದಿವರಾತ್ರಿಗಳಲ್ಲಿ ತ್ರಿವಿಧವಸ್ಥೆಗಳ ಕಳೆದು, ಒಬ್ಬರೊಬ್ಬರು ಹೊಡೆದಾಡುವುದೊಂದು ದುರಾಚಾರ. ಇಂತಲ್ಲದೆ, ಮಿಲಂಚರಾಕ್ಷಸರ ಅರವತ್ತುನಾಲ್ಕು ವಿದ್ಯೆ ಬತ್ತೀಸಾಯುಧಗಳ ಕಟ್ಟಿ, ತಳ್ಳಿತಗಾದಿಗಳಿಂದ ಹೊಲ ಗದ್ದೆ ಬಣಮೆಗಳ ಸುಟ್ಟು, ಅನಂತ ಹಿಂಸೆಗಳ ಮಾಡಿ, ಊರು ಕೇರಿ ಪೇಟೆ ಪಟ್ಟಣಗಳ ಸುಲಿದು, ಹಾದಿ ಬೀದಿಯ ಬಡಿದು, ಮತ್ತೆ ನಾಚಿಕೆಯಿಲ್ಲದೆ ನಾವು ವೀರಶೈವಘನದ ಭಕ್ತಮಹೇಶ್ವರರೆಂದು, ನಡೆಗೆಟ್ಟು ನುಡಿಯ ನುಡಿವುದೊಂದು ಅತಿಕಠಿಣವಾದ ದುರಾಚಾರವು. ವಿಭೂತಿ ರುದ್ರಾಕ್ಷಿ ಗುಣತ್ರಯಗಳಳಿದುಳಿದ ಶಿವಲಾಂಛನ ಮುದ್ರಾಧರ್ಮಗಳ ಹೊದೆದು, ಜಡೆ ಮಕುಟಗಳ ಬಿಟ್ಟು, ಕೌಪ ಕಟಿಸೂತ್ರವ ಧರಿಸಿ, ನಿಜಮೋಕ್ಷಪದವನರಿಯದೆ, ಅರ್ಥೇಷಣ ಪುತ್ರೇಷಣ ಧಾರೇಷಣ ಈಷಣತ್ರಯದ ಮೋಹಾಭಿರತಿಯಿಂದ, ಅಂತಜ್ರ್ಞಾನ ಬಹಿಕ್ರ್ರಿಯಾಚಾರವ ಮೆರೆದು, ಕಾಲತ್ರಯ ಕಾಮತ್ರಯ ಕರ್ಮತ್ರಯ ದೋಷತ್ರಯ ಪಾಪತ್ರಯ ರೋಗತ್ರಯ ಅಜ್ಞಾನತ್ರಯ ಅನಾಚಾರತ್ರಯ ಮೊದಲಾದ ಭವಪಾಶದಲ್ಲಿ ಮುಳುಗುಪ್ಪಿಯಾಗಿ ಭರಿಸುವಂಥಾದ್ದೆ ಐದನೆಯ ಪಾತಕವು. ಇದಕ್ಕೆ ಹರನಿರೂಪ ಸಾಕ್ಷಿ : ``ತಸ್ಕರಂ ಪರದಾರಂಚ ಅನ್ಯದೈವಮುಪಾಸನಂ | ಅನೃತಂ ಇಂದಕಶ್ಚೆ ೈವ ತಸ್ಯ ಚಾಂಡಾಲವಂಶಜಃ || ಪರಾರ್ಥಹಿಂಸಕಶ್ಚೈವ ಭಕ್ತದ್ರೋಹೀ ಚ ನಿಂದಕಃ | ಪ್ರಾಣಘಾತಕದೇಹಾನಾಂ ತಸ್ಮಾತ್‍ಚಾಂಡಾಲವಂಶಜಃ || ಅಲ್ಪಜೀವೀ ಭವಪ್ರಾಣೀ ಅಲ್ಪಭೋಗನಿರರ್ಥಕಃ | ಅಲ್ಪಾಶ್ರಯಂ ನ ಕರ್ತವ್ಯಂ ಮಹದಾಶ್ರಯಃ || ಅಜ್ಞಾನಾಚ್ಚ ಕೃತಂ ಪಾಪಂ ಸುಜ್ಞಾನಾಚ್ಚ ವಿನಶ್ಯತಿ | ಸುಜ್ಞಾನಾಚ್ಚ ಕೃತಾತ್ ಪಾಪಾತ್ ರೌರವಂ ನರಕಂ ವ್ರಜೇತ್ ||'' ಎಂದುದಾಗಿ, ಪರಿಪೂರ್ಣ ಶ್ರೀಗುರುಮಾರ್ಗಾಚಾರ ನಡೆನುಡಿಯಿಂದಾಚರಿಸಿ, ನಿಜಮುಕ್ತಿಮಂದಿರವ ಸೇರಬೇಕೆಂಬ ಸದ್ಭಕ್ತಮಹೇಶ್ವರರು ಸತ್ತುಚಿತ್ತಾನಂದ ನಿತ್ಯಪರಿಪೂರ್ಣತ್ವವನೈದಿ, ಪರಮಪಾತಕಂಗಳಿಗೆ ಮಹಾಜ್ಞಾನಾಯುಧವ ಹಿಡಿದು, ನಿತ್ಯ ನಿತ್ಯ ಇತರೇತರ ದುಶ್ಚಾಷ್ಟಿ ಬಿಟ್ಟು ಘನಲಿಂಗಾಂಗಸಮರಸಮನೋಲ್ಲಾಸ ಸದ್ಭಕ್ತಿ ಜ್ಞಾನವೈರಾಗ್ಯ ನಿಜನಿಷಾ*ಪರತ್ವಮಂ ಸಾಧಿಸಿ, ತಮ್ಮ ತಾವರಿತವರೆ ಪರಶಿವಯೋಗಾನಂದಭರಿತರೆಂಬೆ ಕಾಣಾ ನಿರವಯಪ್ರಭು ಮಹಾಂತ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ತಾ ಭಕ್ತನಾಗಿ ಭವಿಯ ನಿರೀಕ್ಷಣೆಯ ಮಾಡಿದರೆ ಒಂದನೆಯ ಪಾತಕ. ಕೊಡುಕೊಳ್ಳುವ ವ್ಯವಹಾರ ಮಾಡಿದರೆ ಎರಡನೆಯ ಪಾತಕ. ತಂದೆ, ಮಗ, ಸಹೋದರ, ನೆಂಟನೆಂದು ನಡೆದರೆ ಮೂರನೆಯ ಪಾತಕ. ಶಿವಪ್ರಸಂಗವ ಮಾಡಿದರೆ ನಾಲ್ಕನೆಯ ಪಾತಕ. ಸಂಗಸಮರಸವ ಮಾಡಿದರೆ ಐದನೆಯ ಪಾತಕ. ಇಂತು ಪಂಚಮಹಾಪಾತಕರಿಗೆ ಭಕ್ತನೆಂದರೆ ಭವತಪ್ಪದು ಕಾಣಾ ಗುರುನಿರಂಜನ ಚನ್ನಬಸವಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಇಂತು ಪಂಚಪ್ರಣವ ನಿರೂಪಣಾನಂತರದಲ್ಲಿ ಬ್ರಹ್ಮಭೇದವಿಧಿಯಂ ಪೇಳ್ವೆನೆಂತೆನೆ- ಬ್ರಹ್ಮವೆಂದೊಡೆ ದೊಡ್ಡಿತ್ತಹತನದಿಂದೆಯುಂ ಪೂರ್ಣವಹಣದಿಂದೆಯುಂ `ಸರ್ವಂ ಖಲ್ವಿದಂ ಬ್ರಹ್ಮ'ವೆಂಬ ವಚನಾರ್ಥ ಸಾರ್ಥಕವಾಗಿಯಾ ಆದ್ವಿತೀಯ ಶಿವತತ್ವ ಬ್ರಹ್ಮವೆ ಪಂಚಪ್ರಕಾರವಾದವಾ ಪಂಚಬ್ರಹ್ಮವೊಂದೊಂದೈದೈದಾಗುತ್ತಿರ್ಪತ್ತೈದಾದುದೆಂತೆನೆ ಮೂರ್ತಿಬ್ರಹ್ಮ, ತತ್ವಬ್ರಹ್ಮ, ಭೂತಬ್ರಹ್ಮ ಪಿಂಡಬ್ರಹ್ಮ, ಕಲಾಬ್ರಹ್ಮಗಳೆಂಬೀವೈದುಂ ಪಂಚಬ್ರಹ್ಮಂಗಳಿವಕ್ಕೆ ವಿವರವೆಂತೆನೆ ಅಕಾರೋಕಾರಮಕಾರಾಧಿದೇವತೆಗಳಾದ ಸೃಷ್ಟಿಸ್ಥಿತ್ಯಂತ್ಯಕಾರಿಗಳಾದ ಬ್ರಹ್ಮ ವಿಷ್ಣು ರುದ್ರರುಂ ಸಾಕಲ್ಯಾದಿ ಪಂಚಪ್ರಣವಾಂಗರೂಪ ಸಮಸ್ತಾಕ್ಷರಂಗಳು- ಮಿವೆಲ್ಲವಾದ ಬ್ರಹ್ಮ ಸಂಜ್ಞಿತವಾದ ಹಕಾರಾಂತಸ್ಥವಾದುದರಿಂದೀ ಸರ್ವವುಂ ಮೂರ್ತಿಬ್ರಹ್ಮವೆನಿಕುಂ. ಮತ್ತವಿೂ ತ್ರಿವರ್ಣಸಂಭೂತವಾದ ಸಮಸ್ತ ವರ್ಣತತ್ವಂಗಳ್ಗೆಯು ಶಿವತತ್ವವೆ ಪ್ರಭುವಾದುದರಿಂ ಶಿವಬೀಜ ಸಂಜ್ಞಿತವಾದ ಹ ಎಂಬ ಶುದ್ಧ ಪ್ರಸಾದಾಧ್ಯಾತ್ಮಪ್ರಸಾದಾಂತವಾದ ಪಂಚಪ್ರಸಾದಮಂತ್ರವೆ ತತ್ವಬ್ರಹ್ಮವೆನಿಕುಂ. ಬಳಿಕ್ಕಂ ಮಾಂಸ ಸಂಜ್ಞಿತವಾದ ಲಕಾರವೆ ಪೃಥ್ವೀಭೂತ ಬೀಜಂ. ಮೇದಸ್ಸಂಜ್ಞಿತವಾದ ವಕಾರವೆ ಜಲಭೂತ ಬೀಜಂ. ಷಷ* ್ಯ ಸಂಜ್ಞಿತವಾದ ರಕಾರವೆ ತೇಜೋಭೂತ ಬೀಜಂ. ಸಪ್ತಮಸಂಜ್ಞಿತವಾದ ಹಕಾರವೆ ಆಕಾಶಭೂತ ಬೀಜವೀ ಪ್ರಕಾರದಿಂ ಪಂಚಭೂತಾತ್ಮಕವಾದುದೆ ಭೂತಬ್ರಹ್ಮವೆನಿಕುಂ. ಮರಲ್ದುಂ, ಪ್ರಕೃತಿಸಂಜ್ಞಿತವಾದ ಅ ಇ ಉ ಋ ಒ ಎ ಒಯೆಂಬೀ ಪ್ರಕೃತಿಗಳಲ್ಲಿ ಋ ಒ ದ್ವಯಂಮಂ ಬಿಟ್ಟುಳಿದ ಅ ಇ ಉ ಎ ಒ ಯೆಂಬೀಯೈದಕ್ಕರಮಂ ಪಂಚಸಂಜ್ಞಿತವಾದ ಹಕಾರದೊಡನೆ ಕೂಡೆ, ಬಿಂದುನಾದ ಸೌಂಜ್ಞಿತವಾದ ಸೊನ್ನೆಯೊಳ್ಬೆಸೆ, ಹ್ರಂ ಹ್ರೀಂ ಹ್ರುಂ ಹ್ರೇಂ ಹ್ರೌಂ ಎಂಬೀ ಬ್ರಹ್ಮಬೀಜಂಗಳೈದಂ ಪೇಳ್ದು, ಮತ್ತವಿೂ ಬೀಜಗಳೊಳ್ವಾಚಕವಾದ ಪಂಚಬ್ರಹ್ಮಂಗಳಂ ಪೇಳ್ವೆನೆಂತೆನೆ- ಸದ್ಯೋಜಾತ ವಾಮದೇವಾಘೋರ ತತ್ಪುರುಷೇಶಾನಂಗಳೆಂಬಿವೆ ಪಂಚಬ್ರಹ್ಮಂಗಳಿವಕ್ಕೆ ಪ್ರಣವವಾದಿಯಾಗಿ ನಮಃ ಪದಂ ಕಡೆಯಾಗಿ ಚತುಥ್ರ್ಯಂತಮಂ ಪ್ರಯೋಗಿಸೆ ಆ ಪಂಚಬ್ರಹ್ಮ ಮಂತ್ರೋದ್ಧರಣೆಯಾದುದೆಂತನೆ- ಓಂ ಹ್ರಂ ಸದ್ಯೋಜಾತಾಯ ನಮಃ ಓಂ ಹ್ರೀಂ ವಾಮದೇವಾಯ ನಮಃ ಓಂ ಹ್ರುಂ ಅಘೋರಾಯ ನಮಃ ಓಂ ಹ್ರೇಂ ತತ್ಪುರುಷಾಯ ನಮಃ ಓಂ ಹ್ರೌಂ ಈಶಾನಾಯ ನಮಃ ಎಂದು ಶಿವಬೀಜದೋಳ್ವೀವ ಪ್ರಕೃತಿ ಪಂಚಾಕ್ಷರಂಗಳಂ ಕೂಡಿಸಿ ಸಬಿಂದುವಾಗುಚ್ಚರಿಸೆ, ಪಂಚಬ್ರಹ್ಮವೆನಿಸಿದ ಕರ್ಮಸಾದಾಖ್ಯ ಸ್ವರೂಪಮೆ ಪಿಂಡಬ್ರಹ್ಮವೆನಿಕುಂ. ಮತ್ತಂ, ಪಿಂಡಬ್ರಹ್ಮವೆಂಬ ಪಂಚಬ್ರಹ್ಮ ನಿರೂಪಣಾನಂತರದಲ್ಲಿಯಾ ಪಂಚಬ್ರಹ್ಮಮಂತ್ರಕ್ಕೆ ಮೂವತ್ತೆಂಟು ಕಳೆಗಳುಂಟದೆಂತೆನೆ- ಈಶಾನ ತತ್ಪುರುಷಾಘೋರ ವಾಮದೇವ ಸದ್ಯೋಜಾತಂಗಳಿವಕ್ಕೆ ವಿವರಂ ಈಶಾನಕ್ಕೆದು ಕಲೆ. ತತ್ಪುರುಷಕ್ಕೆ ನಾಲ್ಕು ಕಲೆ. ಅಘೋರಕ್ಕೆಂಟು ಕಲೆ. ವಾಮದೇವಕ್ಕೆ ಪದಿರ್ಮೂಕಲೆ. ಸದ್ಯೋಜಾತಕ್ಕೆಂಟು ಕಲೆ. ಅಂತು, ಮೂವತ್ತೆಂಟು ಕಲೆ. ಇವಕ್ಕೆ ವಿವರಂ, ಮೊದಲೀಶಾನಕ್ಕೆ- `ಈಶಾನಸ್ಸರ್ವ ವಿದ್ಯಾನಾಂ' ಇದು ಮೊದಲ ಕಲೆ. `ಈಶಾನಾಸ್ಸರ್ವ ಭೂತಾನಾಂ' ಇದೆರಡನೆಯ ಕಲೆ. `ಬ್ರಹ್ಮಣಾಧಿಪತಿ ಬ್ರಹ್ಮಣಾಧಿಪತಿ ಬ್ರಹ್ಮ' ಇದು ಮೂರನೆಯ ಕಲೆ. `ಶಿವೋಮೇಸ್ತು' ಇದು ನಾಲ್ಕನೆಯ ಕಲೆ. `ಸದಾ ಶಿವೋಂ' ಇದು ಐದನೆಯ ಕಲೆ. ತತ್ಪುರುಷಕ್ಕೆ- `ತತ್ಪುರುಷಾಯ ವಿದ್ಮಹೆ' ಇದು ಮೊದಲ ಕಲೆ. `ಮಹಾದೇವಾಯ ಧೀಮಹಿತನ್ನೋ' ಇದೆರಡನೆಯ ಕಲೆ. `ರುದ್ರಃ' ಇದು ಮೂರನೆಯ ಕಲೆ. `ಪ್ರಚೋದಯಾತ್' ಇದು ನಾಲ್ಕನೆಯ ಕಲೆ. ಅಘೋರಕ್ಕೆ `ಅಘೋರೇಭ್ಯಃ' ಇದು ಮೊದಲ ಕಲೆ. `ಘೋರೇಭ್ಯಃ' ಇದು ಎರಡನೆಯ ಕಲೆ. `ಘೋರಘೋರ' ಇದು ಮೂರನೆಯ ಕಲೆ. `ತರೇಭ್ಯ' ಇದು ನಾಲ್ಕನೆಯ ಕಲೆ. `ಸರ್ವತಃ' ಇದೈದನೆಯ ಕಲೆ. `ಸರ್ವ' ಇದಾರನೆಯ ಕಲೆ. `ಸರ್ವೇಭ್ಯೇ ನಮಸ್ತೇಸ್ತು' ಇದೇಳನೆಯ ಕಲೆ. `ರುದ್ರ ರೂಪೇಭ್ಯಃ' ಇದೆಂಟನೆಯ ಕಲೆ. ವಾಮದೇವಕ್ಕೆ- `ವಾಮದೇವಾಯ' ಇದು ಮೊದಲ ಕಲೆ. `ಜೇಷಾ*ಯ' ಇದೆರಡನೆಯ ಕಲೆ. `ರುದ್ರಾಯ ನಮಃ' ಇದು ಮೂರನೆಯ ಕಲೆ. `ಕಲಾಯ' ಇದು ನಾಲ್ಕನೆಯ ಕಲೆ. `ಕಲಾ' ಇದೈದನೆಯ ಕಲೆ. `ವಿಕರಣಾಯ ನಮಃ' ಇದಾರನೆಯ ಕಲೆ. `ಬಲಂ' ಇದೇಳನೆಯ ಕಲೆ. `ವಿಕರಣಾಯ' ಇದೆಂಟನೆಯ ಕಲೆ. `ಬಲಂ' ಇದೊಂಬತ್ತನೆಯ ಕಲೆ. `ಪ್ರಮಥನಾಥಾಯ' ಇದು ಪತ್ತನೆಯ ಕಲೆ. `ಸರ್ವಭೂತ ದಮನಾಯ ನಮಃ' ಇದು ಪನ್ನೊಂದನೆಯ ಕಲೆ `ಮನ' ಇದು ಪನ್ನೆರಡನೆಯ ಕಲೆ. `ಉನ್ಮನಾಯ' ಇದು ಪದಿಮೂರನೆಯ ಕಲೆ. ಸದ್ಯೋಜಾತಕ್ಕೆ- `ಸದ್ಯೋಜಾತಂ ಪ್ರಪದ್ಯಾಮಿ' ಇದು ಮೊದಲ ಕಲೆ. `ಸದ್ಯೋಜಾತಾಯವೈ ನಮಃ' ಇದೆರಡನೆಯ ಕಲೆ. `ಭವೆ' ಇದು ಮೂರನೆಯ ಕಲೆ. `ಭವೇ' ಇದು ನಾಲ್ಕನೆಯ ಕಲೆ. `ನಾತಿಭವೆ' ಇದೈದನೆಯ ಕಲೆ. `ಭವಸ್ವ ಮಾಂ' ಇದಾರನೆಯ ಕಲೆ. `ಭವ' ಇದೇಳನೆಯ ಕಲೆ. `ಉದ್ಭವ' ಇದೆಂಟನೆಯ ಕಲೆ. ಇದು ಕಲಾಬ್ರಹ್ಮವಿಂತು ಮೂರ್ತಿಬ್ರಹ್ಮ ತತ್ವಬ್ರಹ್ಮ ಭೂತಬ್ರಹ್ಮ ಪಿಂಡಬ್ರಹ್ಮ ಕಲಾಬ್ರಹ್ಮಗಳೆಂಬ ಪಂಚಬ್ರಹ್ಮಗಳಂ ನಿರವಿಸಿದೆಯಯ್ಯಾ, ಪರಮ ಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಇನ್ನಷ್ಟು ... -->