ಅಥವಾ

ಒಟ್ಟು 233 ಕಡೆಗಳಲ್ಲಿ , 45 ವಚನಕಾರರು , 154 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಕರತರ್ಕದ ಪ್ರಸ್ತಾವನ ವಚನ : ಅರಿಷಡ್ವರ್ಗವೆಂಬ ಆರು ನಾಯಿಗಳು ಬೊಗಳುತ್ತಿರೆ, ಹೊನ್ನು ಹೆಣ್ಣು ಮಣ್ಣೆಂಬ ತ್ರಿವಿಧ ನರಿ ಕೂಗುತ್ತಿರೆ, ಹಸಿವು ತೃಷೆ ನಿದ್ರೆ ಜಾಡ್ಯವೆಂಬ ನಾಲ್ಕು ಸೂಕರ ಮುತ್ತಿಕೊಂಡಿರೆ, ಸಪ್ತವ್ಯಸನಗಳೆಂಬ ಏಳು ಬೆಕ್ಕು ಸುಳಿವುತ್ತಿರೆ, ಪಂಚೇಂದ್ರಿಯವೆಂಬ ಐದು ವರ್ಣದ ಹುಲಿ ನುಂಗುತ್ತಿರೆ, ಸಪ್ತಧಾತುಗಳೆಂಬ ಏಳುಮಂದಿ ಹೊಲೆಯರು ಮುಟ್ಟಿ ತನ್ನಂಗದೊಳು ನಾನು ನೀನೆಂಬ ಅಹಂಕಾರದ ಜಾಗಟೆಯ ಪಿಡಿದು ಅಜಾÕನವೆಂಬ ಕುಡಿಯಲ್ಲಿ ಬಾರಿಸಿ, ಇಂತಪ್ಪ ಪರಿಯಲ್ಲಿದ್ದ ಸೂತಕಂಗಳ ಪರಿಯದೆ ಹೊರಮಾತ ಕೇಳಬಾರದೆಂದು ಜಾಗಟೆಯ ಹೊಯ್ಸಿ ನಾದದ ಮರೆಯಲ್ಲಿ ಆಹಾರವ ಕೊಂಬ ಸೇವಕರ ನೋಡಿ ನಗುತಿರ್ದ ನಮ್ಮ ಗೊಹೇಶ್ವರಪ್ರಿಯ ನಿರಾಳಲಿಂಗಾ.
--------------
ಗುಹೇಶ್ವರಯ್ಯ
ಪೃಥ್ವ್ಯಾದಿ ಪಂಚಭೂತಂಗು ಇದಕ್ಕೆ ವಿವರ: ಅಸ್ಥಿ ಚರ್ಮ ಮಾಂಸ ರೋಮ ಮಜ್ಜೆ ಇವೈದು ಪೃಥ್ವಿಯ ಅಂಶ. ಶುಕ್ಲ ಶೋಣಿತ ಶ್ಲೇಷ್ಮ ಪಿತ್ತ ರಕ್ತ ಇವೈದು ಅಪ್ಪುವಿನ ಅಂಶ. ಹಸಿವು ತೃಷೆ ನಿದ್ರೆ ಆಲಸ್ಯ ಸ್ತ್ರೀಸಂಗ ಇವೈದು ಅಗ್ನಿಯ ಅಂಶ. ಹವುದು ಕುಳ್ಳಿರುವುದು ಏಳುವುದು ಮೈಮುರಿವುದು ನಡೆವುದು ಈ ಐದು ವಾಯುವಿನ ಅಂಶ. ಡಂಬು ಪ್ರಕಟ ಪ್ರಪಂಚು ಅಭ್ರಚ್ಛಾಯ ಆನಂದ ಇವೈದು ಆಕಾಶದ ಅಂಶ. ಇಂತೀ ಅಂಗ ಶುದ್ಧಂಗಳ ಬಿಟ್ಟು ಲಿಂಗಾಂಗವ ಮಾಡಬಲ್ಲಡೆ ಕೂಡಲಚೆನ್ನಸಂಗಯ್ಯನಲ್ಲಿ ಶರಣನೆನಿಸುವನು
--------------
ಚನ್ನಬಸವಣ್ಣ
ಕಾಲು ಮೂರು, ಬಸುರು ನಾಲ್ಕು, ಕೈ ಐದು, ತಲೆ ಎಂಟು, ಬಾಯಿ ಒಂಬತ್ತು, ಕಿವಿ ಆರು, ಕಣ್ಣು ಮೂವತ್ತೆರಡು. ಇಂತೀ ಪಿಂಡಕ್ಕೆ ಐವತ್ತೊಂದು ಕಳೆ. ಆ ಜೀವಕ್ಕೆ ಪರಮನೊಂದೆ ಕಳೆ. ಈ ಗುಣ ಜಾÕನಪಿಂಡದ ಭೇದ. ಶಂಭುವಿನಿಂದಿತ್ತ ಸ್ವಯಂಭವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.
--------------
ದಾಸೋಹದ ಸಂಗಣ್ಣ
ಐದು ತತ್ವ, ಐದು ಭೂತ, ಐದು ಅಂಗ, ಐದು ಲಿಂಗ, ಐದು ಸುಗಂಧ, ಐದರಿಂದತ್ತತ್ತ ಮಹಾಲಿಂಗದ ಬೆಳಗು. ಆ ಬೆಳಗಿನೊಳು ಕೂಡಿ ತಾನು ತಾನಾಗಿಪ್ಪ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ನಾಯ ನರಿಯ ಮಧ್ಯದಲ್ಲಿ ನಾರಿವಾಳದ ಸಸಿ ಹುಟ್ಟಿತ್ತು. ಐದು ಗೇಣು ಉದ್ದ ಎಂಟು ಗೇಣು ವಿಸ್ತೀರ್ಣ. ಅದರ ಬೇರು ಪಾತಾಳಕ್ಕೆ ಇಳಿಯಿತ್ತು; ಬೇರಿನ ಮೊನೆ ನೀರ ತಿಂದಿತ್ತು; ನೀರ ಸಾರ ತಾಗಿ ಮರನೊಡೆಯಿತ್ತು, ಮಟ್ಟೆ ಇಪ್ಪತ್ತೈದಾಗಿ ಹೊಂಬಾಳೆ ಬಿಟ್ಟಿತ್ತು; ಹದಿನಾರು ವಳಯದಲ್ಲಿ ಕಾಯಿ ಬಲಿದವು. ಮೂರು ದಿಸೆಯಲ್ಲಿ ಆ ಮರವ ಹತ್ತಿ ಕಾಯ ಕೆಡಹುವರಿಲ್ಲ. ವಾಯವಾಯಿತ್ತು ಮರಹುಟ್ಟಿ ಮರದ ಕೆಳಗಿದ್ದು ಹಣ್ಣಿನ ಹಂಬಲು ಹರಿವುದ ನೋಡುತ್ತಿದ್ದೇನೆ. ನಾರಾಯಣಪ್ರಿಯ ರಾಮನಾಥಾ.
--------------
ಗುಪ್ತ ಮಂಚಣ್ಣ
ಬ್ರಹ್ಮಚಾರಿಯಾಗಿಹ, ಅಪೇಕ್ಷೆಯಂ ಬಿಟ್ಟು ನಿರಾಪೇಕ್ಷನಾಗಿಹ, ಧನಾಪೇಕ್ಷೆಯಿಲ್ಲದಿಹ, ಆಗಮವಿಡಿದು ಆಚರಿಸುತ್ತಿಹ, ಗುರುತತ್ತ್ವ ಶಿವತತ್ತ್ವ ಪರತತ್ತ್ವಸ್ವರೂಪಂಗಳನರಿದಿಹ, ಇವು ಐದು ನಿಯಮಯೋಗ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಪರಮಾರ್ಥದಲ್ಲಿ ಪರೀಕ್ಷಿಸಿ ತಿಳಿದು ನೋಡುವಡೆ ಗುರುವಾರೂ ಇಲ್ಲ ಚೋಳ ತಪ್ಪಿಸಿ. ಪರಮಾರ್ಥದಲ್ಲಿ ಪರೀಕ್ಷಿಸಿ ತಿಳಿದು ನೋಡುವಡೆ ಭಕ್ತರಾರೂ ಇಲ್ಲ ಬಸವಣ್ಣ ತಪ್ಪಿಸಿ. ಪರಮಾರ್ಥದಲ್ಲಿ ಪರೀಕ್ಷಿಸಿ ತಿಳಿದು ನೋಡುವಡೆ ನಿರ್ವಾಣಿಗಳಾರೂ ಇಲ್ಲ ಅಕ್ಕಗಳು ತಪ್ಪಿಸಿ. ಪರಮಾರ್ಥದಲ್ಲಿ ಪರೀಕ್ಷಿಸಿ ತಿಳಿದು ನೋಡುವಡೆ ಹಿರಿಯರಾರೂ ಇಲ್ಲ ಚೀಲಾಳ ತಪ್ಪಿಸಿ. ಪರಮಾರ್ಥದಲ್ಲಿ ಪರೀಕ್ಷಿಸಿ ತಿಳಿದು ನೋಡುವಡೆ ಗಂಭೀರರಾರೂ ಇಲ್ಲ ಅಜಗಣ್ಣ ತಪ್ಪಿಸಿ. ಇಂತೀ ಐದು ತೆರದನುವು ಆರಿಗೂ ಇಲ್ಲವೆಂದೆನಬೇಡ. ಅವರ ಕರುಣ ಉಳ್ಳವರಿಗೆ ಆ ಮುಕ್ತಿಯುಂಟು. ಆ ಐವರ ಕಾರುಣ್ಯದ ಪ್ರಸಾದವ ಕೊಂಡು ನಾನು ಬಯಲಾದೆನು ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಒಂದನೆ ದೆಸೆಯಲ್ಲಿ ಒಂದು ಮುಖದ ಭೈರವನು. ಎರಡನೆಯ ದೆಸೆಯಲ್ಲಿ ಎರಡು ಮುಖದ ಭೈರವನು. ಮೂರನೆಯ ದೆಸೆಯಲ್ಲಿ ಮೂರು ಮುಖದ ಭೈರವನು. ನಾಲ್ಕನೆಯ ದೆಸೆಯಲ್ಲಿ ನಾಲ್ಕು ಮುಖದ ಭೈರವನು. ಐದನೆಯ ದೆಸೆಯಲ್ಲಿ ಐದು ಮುಖದ ಭೈರವನು. ಆರನೆಯ ದೆಸೆಯಲ್ಲಿ ಆರು ಮುಖದ ಭೈರವನು. ಏಳನೆಯ ದೆಸೆಯಲ್ಲಿ ಏಳು ಮುಖದ ಭೈರವನು. ಎಂಟನೆಯ ದೆಸೆಯಲ್ಲಿ ಎಂಟು ಮುಖದ ಭೈರವನು. ಇಂತಿರುವ ಅಷ್ಟಭೈರವರು ಹೊರಸುತ್ತಿನಲ್ಲಿ ಪಹರಿಕರು. ತುತ್ತರಸಿನವೆಂಬ ಚಕ್ರವು ಸುರಗಿಯಂದದಿ ಸುತ್ತಿ, ತೆರಹು ಇಲ್ಲವೆ ತಿರುಗುತ್ತಿಹುದು. ಅದು ಕಾಣಬಾರದಂತಿಹುದು ನೋಡಾ, ಜಂಗಮಲಿಂಗಪ್ರಭುವೆ.
--------------
ಜಂಗಮಲಿಂಗ ಪ್ರಭುವೆ
ಮೂರುವರ್ಣದ ಬೊಟ್ಟುಗ, ಆರು ವರ್ಣದ ಅಳಗ, ಐದು ವರ್ಣದ ಸಂಚಿಗ ಇವರೊಳಗಾದ ನಾನಾ ವರ್ಣದ ಅಜಕುಲ, ಕುರಿವರ್ಗ, ಕೊಲುವ ತೋಳನ ಕುಲ, ಮುಂತಾದ ತ್ರಿವಿಧದ ಬಟ್ಟೆಯ ಮೆಟ್ಟದೆ ಮೂರ ಮುಟ್ಟದೆ, ಆರ ತಟ್ಟದೆ, ಐದರ ಬಟ್ಟೆಯ ಮೆಟ್ಟದೆ, ಒಂದೇ ಹೊಲದಲ್ಲಿ ಮೇದು, ಮಂದೆಯಲ್ಲಿ ನಿಂದು, ಸಂದೇಹ ಕಳೆದು, ಉಳಿಯದ ಸಂದೇಹವ ತಿಳಿದು, ವೀರಬೀರೇಶ್ವರಲಿಂಗದಲ್ಲಿಗೆ ಹೋಗುತ್ತಿರಬೇಕು.
--------------
ವೀರ ಗೊಲ್ಲಾಳ/ಕಾಟಕೋಟ
ಒಳಗೊಂದು ಗಾಲಿ, ಹೊರಗೊಂದು ಗಾಲಿ ಎರಡಕ್ಕೆ ಹೂಡಿದುದೊಂದು ಹರಿಯಚ್ಚು, ಮೇಲೆ ಹಾಸಿದ ನೀಳ Zõ್ಞಕದ ಕುರುಗುಣಿಯ ಕೊಂಬಿಂಗೆ ಈಚೆರಡು. ಏಳು ಹುರಿಯ ಬಲುಮಿಣಿಯಿಂ ಆಳವನಿಕ್ಕಿದ ಕಾಮನ ನೊಗ. ಅರೆತ್ತು ಹೂಡಿ, ಹಾಸು ದಡಿಕೆ ಒಂದು, ಮೇಲು ದಡಿಕೆ ಎರಡು, ಒಂದು ದೊಡ್ಡದು, ಒಂದು ಚಿಕ್ಕದು, ಒಂದುರೆ ಚಿಕ್ಕದು, ಬಂಡಿಯ ಮೇಲೊಬ್ಬ ಮೊದಲೆತ್ತ ಹೊಡೆವ, ತಲೆಯಾರು ನಡುವಣಾರು ಹೊಡೆವರಿಬ್ಬರು. ಬಂಡಿ ನಡೆವ ಬಟ್ಟೆಯಯ್ದು, ತುಂಬಿದ ಭಂಡವೈದು, ಐದು ಬಟ್ಟೆಯಂ ತಪ್ಪಿಸಿ ಆರು ಬಟ್ಟೆಯಲಿ ನಡೆಸಿ, ಹೇರಿದ ಭಂಡವನೊಡೆಯಂಗೊಪ್ಪಿಸಲರಿಯದೆ, ಎಡೆಯ ಕಡಿದು ಭುಂಜಿಸಿ ಒಡೆಯಂಗೆ ದೂರಾಗಿ, ಬಹುಮುಖದ ದಂಡಣೆಗೊಳಗಾಗಿ ಬಹಳ ಮುಖದಲ್ಲಿ ಬಂದು, ಹೇರಡವಿಯ ಕಗ್ಗತ್ತಲಲ್ಲಿ ತೊಳಲಿ ಭ್ರಮಿಸುವ ಹೊಲಬರಿಯದೆ ಹೊಲಬುಗೆಟ್ಟ ಮಲಮಾಯಾದ್ಥಿಕರು ನಿಮ್ಮನೆತ್ತ ಬಲ್ಲರಯ್ಯಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾರಿ
--------------
ಉರಿಲಿಂಗಪೆದ್ದಿ
ಐದು ಮನೆಯೊಳಗೆ ಏಳುಮಂದಿ ಹೆಂಡರ ಕಂಡೆನಯ್ಯ. ಆ ಏಳುಮಂದಿ ಹೆಂಡರು ಎಂಟುಮಂದಿ ನೆಂಟರ ಸಂಗವ ಮಾಡುತಿಪ್ಪರು ನೋಡಾ. ಕಂಟಕಂಗಳ ಗೆಲಿದ ಪುರುಷನು, ಎಂಟುಮಂದಿ ನೆಂಟರ ಕೊಂದು, ಏಳುಮಂದಿ ಹೆಂಡರ ಹಿಡಿದು, ಐದು ಮನೆಯ ತೊರೆದ ಸೋಜಿಗವ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಐದು ಮುಖದ ಅಂಗನೆಗೆ ಹದಿನೈದು ದೇಹ ನೋಡಾ! ಆ ಅಂಗನೆಯ ಮನೆಯೊಳಗಿರ್ದು, ತಾವಾರೆಂಬುದನರಿಯದೆ; ಬಾಯ್ಗೆ ಬಂದಂತೆ ನುಡಿವರು, ಗುಹೇಶ್ವರಾ ನಿಮ್ಮನರಿಯದ ಜಡರುಗಳು.
--------------
ಅಲ್ಲಮಪ್ರಭುದೇವರು
ಬೇರು ಇಲ್ಲದ ಮರ ಹೋಗಿ ಆದಿಯ ಸೇರಿತ್ತಯ್ಯ, ಆ ಮರಕ್ಕೆ ಐದು ಕೊಂಬೆಗಳು ಬೆಳೆದಿರ್ಪವು ನೋಡಾ. ಬ್ರಹ್ಮವೊಂದನೇರಿದ, ವಿಷ್ಣುವೊಂದನೇರಿದ, ರುದ್ರವೊಂದನೇರಿದ, ಈಶ್ವರನೊಂದನೇರಿದ, ಸದಾಶಿವನೊಂದನೇರಿದ- ಈ ಐದು ಕೊಂಬೆಗಳ ಮೆಟ್ಟಿ ತುಟ್ಟತುದಿಯಲೊಂದು ಬಟ್ಟಬಯಲ ಹಣ್ಣಾಗಿಪ್ಪುದು ನೋಡಾ ! ಆ ಹಣ್ಣ ಸವಿಯಲೊಡನೆ, ಹಣ್ಣಿನ ಒಡೆಯ ಬಂದು ಸವಿದಾತನ ನುಂಗಿದ ನೋಡಾ, ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಒಂದು, ಎರಡು, ಮೂರು, ನಾಲಕ್ಕು, ಅಯಿದು, ಆರು, ಏಳು, ಎಂಟು ಒಂಬತ್ತು, ಹತ್ತು, ಹನ್ನೊಂದು ಹನ್ನೆರಡು, ಹದಿಮೂರು, ಹದಿನಾಲಕ್ಕು, ಹದಿನೈದು, ಹದಿನಾರು, ಹದಿನೇಳು, ಹದಿನೆಂಟು, ಹತ್ತೊಂ¨ತ್ತು, ಇಪ್ಪತ್ತು, ಇಪ್ಪತ್ತೊಂದು, ಇಪ್ಪತ್ತೆರಡು, ಇಪ್ಪತ್ತಮೂರು, ಇಪ್ಪತ್ತನಾಲಕ್ಕು. ಇಪ್ಪತ್ತನಾಲಕ್ಕು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತನಾಲಕ್ಕು ಎಂದರೆ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ಯುದಿಷ್ಠಿರೋ ವಿಕ್ರ[ಮೋ]ಶಾಲಿವಾಹನ[ಃ] ತ[ಪಸಾ] ಧ್ರುವಶ್ಚ [ದಿವಿ]ಜರಾಜನಂದನಃ ನಾಗಾಂತಕೋ ಭೂಪತಿ [ಷಷ್ಠಮಃ] ಕಲಿಯುಗೇ ಷಟ್‍ಚಕ್ರವರ್ತಿ[ನಃ] ಈ ಆರು ಮಂದಿ ಕಲಿಯುಗದ ಚಕ್ರವರ್ತಿಗಳು. ಇಪ್ಪತ್ತಮೂರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತಮೂರು ಎಂದರೆ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ಯಯಾತಿ ನಹುಷ[ಶ್ಶಂತನುಃ] ಚಿತ್ರವೀರ್ಯಶ್ಚ ಪಾಂಡವಃ ರಾಜಾ ದುರ್ಯೋಧನ[ಶ್ಚೈ]ವ ದ್ವಾಪರೇ ಷ[ಟ್] ಚಕ್ರವರ್ತಿ[ನಃ] ಆ ಆರು ಮಂದಿ ದ್ವಾಪರದ ಚಕ್ರವರ್ತಿಗಳು. ಇಪ್ಪತ್ತೆರಡು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತೆರಡು ಎಂದರೆ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ವೈವ[ಸ್ವ]ತೋ ದಿಲೀಪಶ್ಚ ರಘು ಚಕ್ರೇಶ್ವರೋ ಅ[ಜಃ] ದಶರಥೋ ರಾಮಚಂದ್ರ[ಶ್ಚ] ಷಡೈತೇ ಚಕ್ರವರ್ತಿ[ನಃ] ಈ ಆರು ಮಂದಿ ತ್ರೇತಾಯುಗದ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ಹರಿಶ್ಚಂ[ದ್ರೋ] ನ[ಳ]ರಾಜ[ಃ] ಪುರುಕು[ತ್ಸ]ಶ್ಚ ಪುರೂರವಃ ಸಗರಃ ಕಾರ್ತವೀರ್ಯಶ್ಚ ಷಡೈತೇ ಚಕ್ರವರ್ತಿ[ನಃ] ಈ ಆರು ಮಂದಿ ಕೃತಯುಗದ ಚಕ್ರವರ್ತಿಗಳು. ಅಂತೂ ಇಪ್ಪತ್ತನಾಲ್ಕು ಮಂದಿ ಚಕ್ರವರ್ತಿಗಳು. ಇಪ್ಪತ್ತು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತು ಎಂದರೆ ಪ್ರಪಂಚ ನಿರ್ಮಾಣ ಸಹಾಯ[ದ]ವರು. ಅದು ಎಂತೆಂದಡೆ: ಆಂಗೀರಸ, ಪುಲಸ್ತ್ಯ, ಪುಲಹ, ಶಾಂತ, ದಕ್ಷ, ವಸಿಷ್ಠ, ವಾಮದೇವ, ನವಬ್ರಹ್ಮ, ಕೌಶಿಕ, ಶೌನಕ, ಸ್ವಯಂಭು, ಸ್ವಾರೋಚಿಷ, ಉತ್ತಮ, ತಾಮಸ, ರೈವತ, ಚಾಕ್ಷಷ, ವೈವಸ್ವತ, ಸೂರ್ಯಸಾವರ್ಣಿ, ಚಂದ್ರಸಾವರ್ಣಿ, ಬ್ರಹ್ಮಸಾವರ್ಣಿ, ಇಂದ್ರ ಸಾವರ್ಣಿ ಇವರು ಇಪ್ಪತ್ತು ಮಂದಿ ಪ್ರಪಂಚ ನಿರ್ಮಾಣ ಸಹಾಯ[ದ]ವರು. ಹತ್ತೊಂಬತ್ತು ಎಂದರೆ ಪುಣ್ಯನದಿಗಳು. ಅದು ಎಂತೆಂದಡೆ: ಗ್ರಂಥ || ಗಂಗಾ ಪುಷ್ಕ[ರಿಣೀ] ನರ್ಮದಾ ಚ ಯಮುನಾ ಗೋದಾವರೀ ಗೋಮತೀ ಗಂಗಾದ್ವಾರ ಗಯಾ ಪ್ರಯಾಗ ಬದರೀ ವಾರಾಣಸೀ ಸೈಯಿಂಧವೀ ಇವು ಹತ್ತೊಂಬತ್ತು ಪುಣ್ಯನದಿಗಳು. ಹದಿನೆಂಟು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನೆಂಟು ಎಂದರೆ.......... ಅದು ಎಂತೆಂದಡೆ: ........................... ಹದಿನೇಳು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನೇಳು ಎಂದರೆ................. ಅದು ಎಂತೆಂದಡೆ: .................... ಹದಿನಾರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನಾರು ಎಂದರೆ [ಅ]ರಸುಗಳು ಅದು ಎಂತೆಂದಡೆ: ಗ್ರಂಥ || ಗಯಾಂಬರೀ[ಷ] ಶ[ಶ]ಬಿಂದುರಂಗದೋ ಪೃಥು[ರ್ಮ]ರು[ತ್] ಭರತ[ಸ್ಸು]ಹೋತ್ರಃ ರಾಮೋ ದಿಲೀಪೋ ಸಗರ ರಂತಿ ರಾಮ[ಃ] ಯಯಾತಿ ಮಾಂಧಾತ ಭಗೀರಥ[ಶ್ಚ] ಎಂದುದಾಗಿ, ಗಯ, ಅಂಬರೀಷ, ಶಶಬಿಂದು, ಪೃಥು, ಮರುತ್, ಭರತ, ಸುಹೋತ್ರ, ಪರಶುರಾಮ, ದಿಲೀಪ, ಸಗರ, ರಂತಿ, ರಾಮಚಂದ್ರ, ಯಯಾತಿ, ಮಾಂಧಾತ, ಭಗೀರಥ, ಅ[ಂಗದ] ಇವರು ಹದಿನಾರು ಮಂದಿ ಅರಸುಗಳು. ಹದಿನೈದು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನೈದು ಎಂದರೆ ತಿಥಿಗಳು. ಅದು ಎಂತೆಂದಡೆ: ಪಾಡ್ಯ, ಬಿದಿಗೆ, ತದಿಗೆ, ಚವುತಿ, [ಪಂಚಮಿ], ಷಷ್ಠಿ, ಸಪ್ತಮಿ, ಅಷ್ಟಮಿ, ನವಮಿ, ದಶಮಿ, ಏಕಾದಶಿ, ದ್ವಾದಶಿ, ತ್ರಯೋದಶಿ, ಅಮಾವಾಸ್ಯೆ ಇವು ಹದಿನೈದು ತಿಥಿಗಳು. ಹದಿನಾಲಕ್ಕು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನಾಲಕ್ಕು ಎಂದರೆ ಲೋಕಂಗಳು. ಅದು ಎಂತೆಂದಡೆ: ಅತಲ ವಿತಲ ಸುತಲ ತಲಾತಲ ಮಹಾತಲ ರಸಾತಲ ಪಾತಾಳ ಭೂಲೋಕ ಭುವರ್ಲೋಕ ಸುರ್ವರ್ಲೋಕ ಮಹರ್ಲೋಕ ತಪೋಲೋಕ ಜನೋಲೋಕ ಸತ್ಯಲೋಕ ಇವು ಹದಿನಾಲ್ಕು ಲೋಕಂಗಳು. ಹದಿಮೂರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೆನಪ್ಪ ? ಹದಿಮೂರು ಎಂದರೆ ಚಕ್ರಂಗಳು. ಅದು ಎಂತೆಂದಡೆ, ಆಧಾರಚಕ್ರ, ಸ್ವಾಷ್ಠಾನಚಕ್ರ, ಮಣಿಪೂರಕಚಕ್ರ, ಅನಾಹಚಕ್ರ, ವಿಶುದ್ಧಿಚಕ್ರ, ಆಜ್ಞಾಚಕ್ರ, ಶಿಖಾಚಕ್ರ, ಬ್ರಹ್ಮಚಕ್ರ, ಘಟಚಕ್ರ, ಕಾಲಚಕ್ರ, ಮೇಘಚಕ್ರ, ಭೂಚಕ್ರ, ಅವಗಡಚಕ್ರ ಇವು ಹದಿಮೂರು ಚಕ್ರಂಗಳು. ಹನ್ನೆರಡು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹನ್ನೆರಡು ಎಂದರೆ ಮಾಸಂಗಳು. ಅದು ಎಂತೆಂದರೆ, ಚೈತ್ರ, ವೈಶಾಖ, ಜ್ಯೇಷ್ಠ, ಆಷಾಢ, ಶ್ರಾವಣ, ಭಾದ್ರಪದ, ಆಶ್ವೀಜ, ಕಾರ್ತೀಕ, ಮಾರ್ಗಶಿರ, ಪುಷ್ಯ, ಮಾಘ, ಫಾಲ್ಗುಣ ಇವು ಹನ್ನೆರಡು ಮಾಸಂಗಳು. ಹನ್ನೊಂದು ಎಂದರೆ ನೋಡಿದ್ದೇನಪ್ಪ ? ಕೇಳಿದ್ದೇನಪ್ಪ ? ಹನ್ನೊಂದು ಎಂದರೆ ಭಾರತಂಗಳು. ಅದು ಎಂತೆಂದಡೆ: ಆದಿಭಾರತ, ಕೈಲಾಸಭಾರತ, ಶ್ರೀರುದ್ರಭಾರತ, ನಂದಿಭಾರತ, ನಾರ[ದ]ಭಾರ[ತ], ಭೃಗುಭಾರತ, ಮನುಭಾರತ, ಉಮಾಭಾರತ, ಪ್ರಸಿದ್ಧಭಾರತ, ಸಿದ್ಧೋರಗಭಾರತ, ಶ್ರೀರಂಗಭಾರತ ಇವು ಹನ್ನೊಂದು ಭಾರತಂಗಳು. ಹತ್ತು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹತ್ತು ಎಂದರೆ, ದಶಾವತಾರಂಗಳು. ಅದು ಎಂತೆಂದರೆ, ಗ್ರಂಥ || ಮತ್ಸ್ಯಃ ಕೂರ್ಮಃ ವರಾಹಶ್ಚ ನಾರಸಿಂಹಶ್ಚ ವಾಮನಃ ರಾಮೋ ರಾಮಶ್ಚ [ಕೃಷ್ಣ]ಶ್ಚ ಬೌದ್ಧಃ ಕಲ್ಕಿ[ರೇ]ವ ಚ ಎಂದುದಾಗಿ, ಈ ದಶಾವತಾರಂಗಳಲ್ಲಿ ಯಾರಾರು ಸಂಹಾರ ಎಂದರೆ, ಮತ್ಯ್ಸಾವತಾರದಲ್ಲಿ ಅಮೃತಮಥನೇ ಸೋಮಕಾಸುರನ ಸಂಹಾರ. ಕೂರ್ಮಾವತಾರದಲ್ಲಿ ಮಂದರಪರ್ವತಕ್ಕೆ ಆಧಾರ. ವರಾಹಾವತಾರದಲ್ಲಿ ಹಿರಣ್ಯಾಕ್ಷನ ಸಂಹಾರ. ನರಸಿಂಹಾವತಾರದಲ್ಲಿ ಹಿರಣ್ಯಕಶ್ಯಪ ಸಂಹಾರ. ವಾಮನಾವತಾರದಲ್ಲಿ ಪಂಚಮೇಢ್ರಾಸುರ ಎಂಬ ರಾಕ್ಷಸನ ಸಂಹಾರ. ಪರಶುರಾಮಾವತಾರದಲ್ಲಿ ಕಾರ್ತವೀರ್ಯರ ಸಂಹಾರ. ರಫ್ಸುರಾಮಾವತಾರದಲ್ಲಿ ರಾವಣಕುಂಭಕರ್ಣರ ಸಂಹಾರ. 1ಬಲಭದ್ರ1 ನವತಾರದಲ್ಲಿ ಪ್ರಲಂಬಕವಾದ ಅಸುರರ ಸಂಹಾರ. ಬೌದ್ಧಾವತಾರದಲ್ಲಿ ತ್ರಿಪುರದಾನವಸತಿಯರ ಕೆಡಿಸಿದ. ಕಲ್ಕ್ಯವತಾರದಲ್ಲಿ 2ಕಂಸಾಸುರ, ನರಕಾಸುರ, ಬಾಣಾಸುರರ2 ಸಂಹಾರ, ಇವು ಹತ್ತು ದಶಾವತಾರಗಳು. ಒಂಬತ್ತು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಒಂಬತ್ತು ಎಂದರೆ ನವಗ್ರಹಂಗಳು. ಅದು ಎಂತೆಂದರೆ: ಆದಿತ್ಯ, ಸೋಮ, ಮಂಗಳ, ಬುಧ, ಬೃಹಸ್ಪತಿ, ಶುಕ್ರ, ಶನಿ, ರಾಹು, ಕೇತು- ಇವು ಒಂಬತ್ತು ನವಗ್ರಹಂಗಳು. ಎಂಟು ಎಂದರೆ ನೋಡಿದ್ದೇನಪ್ಪ ಕೇಳಿದ್ದೇನಪ್ಪ ? ಎಂಟು ಎಂದರೆ ಅಷ್ಟದಿಕ್ಪಾಲಕರು. ಅದು ಎಂತೆಂದರೆ: ಇಂದ್ರ, ಅಗ್ನಿ, ಯಮ, ನೈರುತಿ, ವರುಣ, ವಾಯುವ್ಯ, ಕುಬೇರ, ಈಶಾನ್ಯ- ಎಂಟು ಮಂದಿ ಅಷ್ಟದಿಕ್ಪಾಲಕರು. ಏಳು ಎಂದರೆ ನೋಡಿದ್ದೇನಪ್ಪ ಕೇಳಿದ್ದೇನಪ್ಪ ? ಏಳು ಎಂದರೆ ಸಪ್ತಋಷಿಗಳು. ಅದು ಎಂತೆಂದರೆ: ಗ್ರಂಥ || ಕಶ್ಯಪಾತ್ರಿ ಭರದ್ವಾಜ[ಃ] ವಿಶ್ವಾಮಿ[ತ್ರಶ್ಚ] ಗೌತಮ[ಃ] ಜಮದಗ್ನಿ[ಃ] ವಸಿಷ್ಠ[ಶ್ಚ] ಸಪ್ತೈತೇ ಋಷಯ[ಃ ಸ್ಮøತಾಃ] ಎಂದುದಾಗಿ, ಕಶ್ಯಪ, ಅತ್ರಿ, ಭರದ್ವಾಜ, ವಿಶ್ವಾಮಿತ್ರ, ಗೌತಮ, ಜಮದಗ್ನಿ, ವಸಿಷ್ಠ- ಇವರು ಏಳುಮಂದಿ ಸಪ್ತ ಋಷಿಗಳು. ಆರು ಎಂದರೆ ನೋಡಿದ್ದೇನಪ್ಪ ಕೇಳಿದ್ದೇನಪ್ಪ ? ಆರು ಎಂದರೆ ಶಾಸತ್ತ್ರಂಗಳು. ಅದು ಎಂತೆಂದರೆ: ಶಿಲ್ಪಶಾಸ್ತ್ರ, ಭರತಶಾಸ್ತ್ರ, ತರ್ಕಶಾಸ್ತ್ರ, ಶಬ್ದಶಾಸ್ತ್ರ, ಆ[ನ್ವೀಕ್ಷಕೀ]ಶಾಸ್ತ್ರ, ಜ್ಯೋತಿಷ್ಯಶಾಸ್ತ್ರ- ಇವು ಆರು ಶಾಸ್ತ್ರಂಗಳು. ಐದು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಐದು ಎಂದರೆ ಈಶ್ವರನ ಪಂಚ ಮುಖಂಗಳು ಅದು ಎಂತೆಂದರೆ, ಗ್ರಂಥ || ಸದ್ಯೋಜಾ[ತೋ]ದ್ಭವೋರ್ಭೂಮಿಃ] ವಾಮದೇವೋದ್ಭ[ವಂ ಜಲಂ] ಅಫ್ಸೋ[ರಾದ್ವಹ್ನಿ]ರು[ದ್ಭೂತಂ] ತತ್ಪರು[ಷಾದ್ವಾಯುರ್ಭವೇತ್ ಈಶಾನಾದ್ಗಗನಂ ಜಾತಂ] ಎಂದುದಾಗಿ, ಸದ್ಯೋಜಾತಮುಖ, ವಾಮದೇವಮುಖ, ಅಘೋರಮುಖ, ತತ್ಪುರುಷಮುಖ, ಈಶಾನ್ಯಮುಖ- ಇವು ಐದು ಪಂಚಮುಖಂಗಳು. ನಾಲಕ್ಕು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ನಾಲಕ್ಕು ಎಂದರೆ ವೇದಂಗಳು. ಅದು ಎಂತೆಂದರೆ: ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವಣವೇದ- ಇವು ನಾಲ್ಕು ವೇದಂಗಳು. ಮೂರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಮೂರು ಎಂದರೆ ತ್ರಿಮೂರ್ತಿಗಳು. ಅದು ಎಂತೆಂದರೆ: ಬ್ರಹ್ಮ, ವಿಷ್ಣು, ಈಶ್ವರ- ಇವರು ಮೂವರು ತ್ರಿಮೂರ್ತಿಗಳು. ಎರಡು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಎರಡು ಎಂದರೆ ಭಾನು ಶಶಿ. ಅದು ಎಂತೆಂದರೆ: ಸೂರ್ಯ, ಚಂದ್ರ- ಇವರಿಬ್ಬರು ಸೂರ್ಯಚಂದ್ರಾದಿಗಳು. ಒಂದು ಎಂದರೆ ನೋಡಿದ್ದೆನಪ್ಪ ಕೇಳಿದ್ದೇನಪ್ಪ ? ಒಂದು ಎಂದರೆ ಏಕೋ[ಏವ]ದೇವಃ ಅದು ಎಂತೆಂದರೆ: ದೇವನು ಒಬ್ಬನೇ. ದೇವನು] ಒಬ್ಬನೇ ಅಲ್ಲದೆ ಇಬ್ಬರೆಂದು ಬಗುಳುವನ ಮುಖವ ನೋಡಲಾಗದು ಕಾಣೋ ಕೂಡಲಾದಿ ಚನ್ನಸಂಗಮದೇವಾ.
--------------
ಕೂಡಲಸಂಗಮೇಶ್ವರ
ಕರಸ್ಥಲ ಕಂಠಸ್ಥಲ ಕರ್ಣಸ್ಥಲ ಮಧ್ಯಸ್ಥಲ ಮಹಾಸ್ಥಲ. ಇಂತೀ ಐದು ಸ್ಥಲಂಗಳನು ಮಹಾಸ್ಥಲಕ್ಕೆ ತಂದು, ಬಸವಣ್ಣ ಸಂಪೂರ್ಣವಾದ ಕಾಣಾ, ಕಲಿದೇವರದೇವಾ.
--------------
ಮಡಿವಾಳ ಮಾಚಿದೇವ
ಇನ್ನಷ್ಟು ... -->