ಅಥವಾ

ಒಟ್ಟು 5 ಕಡೆಗಳಲ್ಲಿ , 4 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಸಿಯಿಲ್ಲದ ಗೂಡಿನೊಳಗೆ ಹೊಸಬಣ್ಣದ ಪಕ್ಷಿಯ ಗೂಡನೈದೆ ಭಸ್ಮವ ಮಾಡಿ ನುಂಗಿ, ಶಿಶು ತಾಯ ಬೆಸಲಾಗಲಾ ತಾಯಿ ಶಿಶುವನೆ ನುಂಗಲಾ ಶಿಶು ಕೋಪದಿಂದಲಾ ತಾಯ ಐದೆ ನುಂಗಿ, ಹೊಸ ದೇಶದಿಂದೊಬ್ಬನಾರಯ್ಯ ಬಂದಾತ ಪೆಸರಿಲ್ಲದಂತಿಪ್ಪರನೈದೆ ನುಂಗಿ, ಬಸವ ಚೆನ್ನಬಸವ ಅನುಮಿಷ ಗುಹೇಶ್ವರ ಸಹಿತವಾಗಿ ಶಿಶುವಿನ ಕರಸ್ಥಲದಲ್ಲಿ ಸುಖಿಯಾದರು.
--------------
ಅಲ್ಲಮಪ್ರಭುದೇವರು
ಭಕ್ತಿಸ್ಥಲ ಮೂರು, ಮಾಹೇಶ್ವರಸ್ಥಲ ನಾಲ್ಕು, ಪ್ರಸಾದಿಸ್ಥಲ ಐದು, ಪ್ರಾಣಲಿಂಗಿಸ್ಥಲ ಆರು, ಶರಣಸ್ಥಲವೆರಡು, ಐಕ್ಯಸ್ಥಲ ಒಂದು, ಭಕ್ತಂಗೆ ಮೂರು ಗೊತ್ತು, ಮಾಹೇಶ್ವರಂಗೆ ನಾಲ್ಕು ಗೊತ್ತು, ಪ್ರಸಾದಿಗೆ ಐದು ಗೊತ್ತು, ಪ್ರಾಣಲಿಂಗಿಗೆ ಆರು ಗೊತ್ತು, ಶರಣಂಗೆ ಎರಡು ಗೊತ್ತು, ಐಕ್ಯಂಗೆ ಒಂದು ಗೊತ್ತಾಗಿ ಸಂಬಂಧಿಸಿ ಷಡುಸ್ಥಲ ರೂಪಾದಲ್ಲಿ ಒಂದು ಸ್ಥಲಕ್ಕೆ ಆರು ಸ್ಥಲ ಹೊರೆ ಹೊರೆಯಾಗಿ ಮಿಶ್ರವಾಗಿ ಸ್ಥಲಂಗಳು ಚರಿಸುವಲ್ಲಿ ನೂರೊಂದು ಸ್ಥಲಂಗಳಲ್ಲಿ ಆರೋಪಿಸಿ ನಿಂದುದು ಮೂರೆ ಭಕ್ತಿಸ್ಥಲ, ಸಂದುದು ನಾಲ್ಕೆ ಮಾಹೇಶ್ವರಸ್ಥಲ, ಕೊಂಡುದು ಐದೆ ಪ್ರಸಾದಿಸ್ಥಲ, ಗಮನವಿಲ್ಲದೆ ನಿಜದಲ್ಲಿ ನಿಂದುದಾರೆ ಪ್ರಾಲಿಂಗಿಸ್ಥಲ, ಸ್ತುತಿ-ನಿಂದೆಗೆಡೆಯಿಲ್ಲದೆ ನಿಂದುದೆರಡೆ ಶರಣಸ್ಥಲ, ನಿರ್ನಾಮವಾಗಿ ಭಾವಕ್ಕೆ ಬ್ರಮೆಯಿಲ್ಲದುದೊಂದೆ ಐಕ್ಯಸ್ಥಲ. ಇಂತೀ ಭಿನ್ನ ವರ್ಣಂಗಳಲ್ಲಿ ವರ್ಣಸ್ವರೂಪನಾದೆಯಲ್ಲಾ, ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 67 ||
--------------
ದಾಸೋಹದ ಸಂಗಣ್ಣ
ಐದೆ ಬಿನ್ನಾಣಿಕೆ ಬಿನ್ನಾಣಿಯ ಬಸುರಲ್ಲಿ ಹುಟ್ಟಿದವಳು ಬಾಯಲ್ಲಿ ಬಳೆದೊಟ್ಟವಳು; ಬಾಯಲ್ಲಿ ತಲೆಯಾದವಳು; ತಲೆಯೊಳಗೆ ಮೊಲೆಯಾದವಳು; ಮೊಲೆಯೊಳಗೆ ನಾಭಿಯಾದವಳು; ನಾಭಿಯೊಳಗೆ ಬಸುರಾದವಳು; ಬಸುರೊಳಗೆ ಬೆನ್ನಾದವಳು; ಬೆನ್ನೊಳಗೆ ಕಾಲಾದವಳು; ಗಂಡಂಗೆ ಕೈಯೆಂದು ಬಾಯಲಿ ಹಿಡಿದು ಹರಿದವಳು ಕಪಿಲಸಿದ್ಧಮ್ಲನಾಥನ ಬಾಯಲ್ಲಿ ಭೋಗಿಯಾದವಳು. ಇಂತಪ್ಪ ವಿದ್ಯದ ಬೇಟದ ಮಾತಿನ ಕೊಂಬ ಹೇಳಿದಡೆ, ಅಲ್ಲಿಗೆ ಬಂದಡೆ ತಾ ಕಂಡಯ್ಯಾ, ಐದೆ ಬಿನ್ನಾಣಿಕೆ!
--------------
ಸಿದ್ಧರಾಮೇಶ್ವರ
ಆಯುಧವಿಕ್ಕಿದವಂಗೆ ವೀರದ ಮಾತೇಕೆ ಲಿಂಗವು ಅಂತರಿಸಿದವಂಗೆ ಒಳುನುಡಿ ಏಕೆ ಐದೆ ಅಣಚಿಯಿಲ್ಲದವಳಿಗೆ ¸õ್ಞಭಾಗ್ಯದ ಹೂವಿನ ಬೊಟ್ಟೇಕೆ ಸತ್ಯವಿಲ್ಲದವಂಗೆ ನಿತ್ಯನೇಮವೇಕೆ ಕರ್ತಾರ, ನಿಮ್ಮ ಒಲವಿಲ್ಲದವಂಗೆ ಶಂಭುವಿನ ಬಂಧುಗಳೇಕೆ ಕೂಡಲಸಂಗಮದೇವಯ್ಯಾ, ನೀವಿಲ್ಲದವಂಗೆ ಶಿವಾಚಾರದ ಮಾತೇಕೆ
--------------
ಬಸವಣ್ಣ
-->