ಅಥವಾ

ಒಟ್ಟು 30 ಕಡೆಗಳಲ್ಲಿ , 12 ವಚನಕಾರರು , 29 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕುಂಡಲಿಯೆಂಬ ಆಧಾರದಲ್ಲಿ ಜಲ ತೇಜ ವಾಯುವೆಂಬ ತ್ರಿವಿಧ ಕೂಡಿ ಕಮಂಡಲ ಹುಟ್ಟಿತ್ತು. ಅದಕ್ಕೆ ಬಾಯಿ ಮೂರು ಹೆಡೆಯಾರು. ಜೂಳಿಯೊಂದರಲ್ಲಿ ಉದಕವ ಕೊಳುತಿರಲಾಗಿ ಆ ಹಸುವಿನ ತೃಷೆಯಡಗಿ ಬಯಕೆ ಸಲೆ ಬತ್ತಿದಲ್ಲಿ ಮಹಾಗಣನಾಥನ ಐವತ್ತೆರಡು ಸರ ಹರಿದವು. ಮೂವತ್ತಾರು ಮಣಿ ಕೆಟ್ಟವು; ಇಪ್ಪತ್ತೈದು ಮಣಿ ಪುಂಜವಾಯಿತ್ತು. ಆರು ನಾಯಕರತ್ನ ಎಲ್ಲಿ ಅಡಗಿತ್ತೆಂದರಿಯೆ. ಮೂರು ರತ್ನವ ಕಂಡೆ: ಒಂದು ಉಲಿವುದು, ಒಂದು ಉರಿವುದು, ಒಂದು ಬೆಳಗು ನಂದಿಹುದು. ಇಂತೀ ತ್ರಿವಿಧಂಗವ ಕಂಡು ಈ ಅಂಗದ ಮಣಿಯ ಒಂದೊಂದ ಪೋಣಿಸಲಾರದೆ ಈ ದಿನಮಣಿಯ ವಿರಳವ ತೋರಿಸಾ ಗೋರಕ್ಷಪಾಲಕ ಮಹಾಪ್ರಭು ಸಿದ್ಧಸೋಮನಾಥಲಿಂಗವೆ.
--------------
ಗೋರಕ್ಷ / ಗೋರಖನಾಥ
ಲಿಂಗಸ್ವರೂಪಕ್ಕೆ ಪಂಚಸೂತ್ರ ಲಕ್ಷಣವನರಿತು ವರ್ತುಳ ಖಂಡಿಕಾದಂಡ ಗೋಮುಖ ಗೋಳಕಾಕಾರವಪ್ಪ ಲಿಂಗಮೂರ್ತಿಯಿಂದ ಶಶಿ ರವಿ ಪವನ ಪಾವಕ ಆತ್ಮ ಮುಂತಾದ ಭೇದಂಗಳನರಿದು ಪಂಚಸೂತ್ರದಿಂದ ಪ್ರಯೋಗಿಸಿ, ಅಚೇತನವಪ್ಪ ಶಿಲೆಯ ಕುಲವಂ ಹರಿದು, ತಾ ಶುಚಿರ್ಭೂತನಾಗಿ ಆ ಇಷ್ಟಲಿಂಗವ ತನ್ನ ಕರಸ್ಥಲದಲ್ಲಿ ಮೂರ್ತಿಗೊಳಿಸಿ ತನು ಕರಗಿ ಮನ ರೆುsುೂಂಪಿಸಿ ಪುಳಕಿತದಿಂದ ಆನಂದಾಶ್ರು ಉಣ್ಮಿ ನಿಧಾನಿಸಿ ನಿಕ್ಷೇಪವ ಕಾಬವನಂತೆ ಬಯಲ ಬಂದಿವಿಡಿವವನಂತೆ ಶಿಲೆಯಲ್ಲಿ ರಸವ ಹಿಳವವನಂತೆ ರತ್ನದ ಕಳೆಯ ಗಂಟನಿಕ್ಕಿ ಕಟ್ಟಿ ತಾಹವನಂತೆ ಮುತ್ತಿನೊಳಗಡಗಿದ ಅಪ್ಪುವಿನ ವಿರಾಳದಿಂದ ಶೋದ್ಥಿಸಿ ಮುಚ್ಚಿತಾಹವನಂತೆ ಜ್ಯೋತಿಗೆ ಪ್ರತಿಹಣತೆಯಿಂದ ಆ ಬೆಳಗ ಮುಟ್ಟಿಸಿ ಕಾಹವನಂತೆ, ಇಂತೀ ನಿರವಯದ ಸುವಸ್ತುವಿನ ಪ್ರಯೋಗದಿಂದ ದಿವ್ಯಪ್ರಕಾಶನ ತನ್ನ ಕರತಳಾಮಳಕದಂತೆ ಮೂರ್ತಿಗೊಂಡಿದ್ದ ಶಿವಲಿಂಗಮೂರ್ತಿಗೆ ಧ್ಯಾನದ ಕೈಯಿಂದ ಆ ಸ್ವರೂಪಕ್ಕೆ ಮೂರ್ತಿಗೊಳಿಸಿ ಷೋಡಶಕಳೆಯಿಂದ ಉಪಚರಿಸಿ ನವಕಳಶ ಪ್ರಯತ್ನ ಪ್ರಯೋಗವ ಮಾಡಿ ಚತುರ್ವಿಧ ಆಚಾರ್ಯರ ಕೂಡಿ ಅಷ್ಟದೆಸೆಗಳಲ್ಲಿ ಕರ್ತೃಕಳಶ ನಾಲ್ಕು, ಭೃತ್ಯಕಳಶ ನಾಲ್ಕು, ಶ್ರೀಗುರುಕಳಶ ಮಧ್ಯದಲ್ಲಿ ನಾಲ್ಕು ವರ್ಣಕ್ರೀ ಮುಂತಾದ ಪ್ರಾಣಲಿಂಗವೆಂದು ಉಪೇಕ್ಷಿಸಿ ಧಾರಣವ ಮಾಡುವಲ್ಲಿ ಗುರು ನಾನೆಂಬುದ ಮರೆದು ಅಹಂಕಾರವ ತೊರೆದು ಆತ್ಮತೇಜವ ಹರಿದು ಮುಂದಣ ತ್ರಿವಿಧ ಸೇವೆಯ ತೋರಿ ಮಂತ್ರಾಬ್ಥಿಷೇಕ ತೀರ್ಥಮಂ ತಳೆದು ಶ್ರೀವಿಭೂತಿಯಲ್ಲಿ ಸರ್ವಾಂಗ ಧೂಳಿತವಂ ಮಾಡಿ ತ್ರಿಕರಣ ಶುದ್ಧವಂ ಮಾಡಿ ಕಪಾಲಕ್ಕೆ ಕರವನಿಟ್ಟಲ್ಲಿ ಪರುಷರಸ ಪಾಷಾಣ ಲೋಹದ ಮೇಲೆ ಬಿದ್ದಂತೆ ನಂಜೇರಿದಂಗೆ ಸಂಜೀವನ ಸಂದ್ಥಿಸಿದಂತೆ ಇಂತೀ ಕಪಾಲಕ್ಕೆ ಕರವನಿಟ್ಟು ಕರ್ಣಕ್ಕೆ ಮಂತ್ರವ ಹೇಳಿದಲ್ಲಿ ಹುಸಿ ಕೊಲೆ ಕುಹಕ ಪಾರದ್ವಾರ ಚೋರತ್ವ ಪಿಸುಣತನವಂಬಿಟ್ಟು ಅರುವತ್ತುನಾಲ್ಕು ಶೀಲ, ಐವತ್ತೆರಡು ನೇಮ, ಮೂವತ್ತರೊಳಗಾದ ನಿತ್ಯಕೃತ್ಯ, ಆರುಸ್ಥಲದೊಳಗಾದ ಆಚಾರ, ಇಪ್ಪತ್ತೈದರೊಳಗಾದ ತತ್ತ್ವ ಇಂತಿವರೊಳಗಾದವರಲ್ಲಿ ಸತ್ವಕ್ಕೆ ತಕ್ಕ ಸಾಮಥ್ರ್ಯದಲ್ಲಿ ನಿಶ್ಚೆ ೈಸಿ ನಡೆಯೆಂದು ಲಿಂಗಧಾರಣವ ಮಾಡುವದಿದು ಗುರುದೀಕ್ಷಾ ನಿರ್ವಾಹ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 82 ||
--------------
ದಾಸೋಹದ ಸಂಗಣ್ಣ
ಕಾಳ ರಕ್ಕಸಿಗೆ ಮೂರು ಬೆನ್ನು, ಐದು ಬಸುರು, ಆರು ಕಣ್ಣು, ಏಳು ಮೊಲೆ, ಎಂಟು ಭುಜ, ಹತ್ತು ತೋಳು, ಹದಿನಾರು ಪಾದ, ಹದಿನೆಂಟು ತಲೆ, ಮೂವತ್ತಾರು ಬಾಯಿ, ಐವತ್ತೆರಡು ನಾಲಗೆ, ಅರುವತ್ತುನಾಲ್ಕು ಕೋರೆದಾಡೆ. ಈ ಪರಿಯಲ್ಲಿ ಜಗವೆಲ್ಲವನಗಿದಗಿದು ಉಗುಳುತ್ತಿರ್ದಳಯ್ಯಾ, ಸೌರಾಷ್ಟ್ರ ಸೋಮೇಶ್ವರಾ, ನೀ ಮುಟ್ಟೆ ಬಟ್ಟಬಯವಾದಳು.
--------------
ಆದಯ್ಯ
ಆ ಭಸ್ಮತಾಗಿ ಬ್ರಹ್ಮ ತನ್ನ ಕಪಾಲವಿಡಿದನು. ಗಣನಾಥನ ಐವತ್ತೆರಡು ಸರ ಹರಿದು ಬಿದ್ದವು. ಆ ಭಸ್ಮತಾಗಿ ಅಂಡಜಮುಗ್ಧೆಯ ಮೂರು ಮೊಲೆ ಹರಿದು ಬಿದ್ದವು. ನಾದಪ್ರಿಯ ನಂದಿಯನೇರಿಕೊಂಡು ಅತೀತನ ಮೇಲೆ ಆನಂದಸಿಂಹಾಸನವನಿಕ್ಕಿ ಕುಳ್ಳಿತ್ತ, ಕೂಡಲಸಂಗಮದೇವರ ದೇವತ್ವ ಕೆಟ್ಟಿತ್ತು.
--------------
ಬಸವಣ್ಣ
ಭಕ್ತಂಗೆ ಮೂರು ಗುಣ, ಮಾಹೇಶ್ವರಂಗೆ ಆರು ಗುಣ, ಪ್ರಸಾದಿಗೆ ಎಂಟು ಗುಣ, ಪ್ರಾಣಲಿಂಗಿಗೆ ಹತ್ತು ಗುಣ, ಶರಣಂಗೆ ಹದಿನಾರು ಗುಣ, ಐಕ್ಯಂಗೆ ಐವತ್ತೆರಡು (ಗುಣ). ಸರನಾದು ಭೇದ ನಿಂದಲ್ಲಿ ಒಂದೆ ಗುಣ ಸಂದಿತ್ತು. ಇದು ಕ್ರಿಯಾಸ್ಥಲ ನಿರ್ವಾಹ. ಸಂಗನ ಬಸವಣ್ಣನ ಆದಿ, ಚನ್ನಬಸವಣ್ಣನ ಅನಾದಿ ಶರಣ ಸಂತತಿಯ ಸಂಬಂಧ ಮಾರ್ಗ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 64 ||
--------------
ದಾಸೋಹದ ಸಂಗಣ್ಣ
ಬೆಟ್ಟದ ತುದಿಯ ಮೇಲೆ ಹುಟ್ಟಿ ಆಡುವ ಹಂಸನ ಕಂಡೆ ನೋಡಾ, ಅದಕೆ ತಲೆ ಒಂದು, ನಾಲಗೆ ಮೂರು, ಹಸ್ತವಾರು, ಮೂವತ್ತಾರು ಪಾದಂಗಳು, ಐವತ್ತೆರಡು ಎಸಳಿನ ಮನೆಯಲ್ಲಿ ಸುಳಿದಾಡುತಿಪ್ಪುದು ನೋಡಾ. ಆ ಸುಳುವಿನ ಭೇದವನರಿವ ಶರಣರ ತೋರಿಸಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಕವಿಗಳುಯೆಂದು ಹೆಸರಿಟ್ಟುಕೊಂಡು ನುಡಿವ ಅಣ್ಣಗಳು ನೀವು ಕೇಳಿರೊ. ಪ್ರಥಮ ಶಿವಾಲ್ಯದಲ್ಲಿ ಮೂಲಸ್ಥಾನದ ಲಿಂಗವನರಿದು ಅಲ್ಲಿದ್ದ ವಿಮಳವಾದ ಗಂಟ ಕೊಯಿದು, ಸಕಲ ಪರಿಮಳ ದ್ರವ್ಯಂಗಳ ಆ ಮೂಲಲಿಂಗಕ್ಕೆ ಕೊಡಬಲ್ಲಡೆ ಕ ಎಂಬ ಅಕ್ಷರದ ಭೇದವ ಬಲ್ಲನೆಂದೆನ್ನಬಹುದು. ಪರಬ್ರಹ್ಮನ ಆಶ್ರೈಸಬಲ್ಲಡೆ ವಿ ಎಂಬ ಅಕ್ಷರದ ಭೇದವ ಬಲ್ಲಡೆ ನಿಮ್ಮ ಹೆಸರ ನೀವೇ ಇಟ್ಟುಕೊಂಡು, ಕವಿಯೆಂಬ ಎರಡಕ್ಷರದ ಬೇದವನರಿಯದೆ ವಾದ ತರ್ಕವ ಮಾಡಿ ಗುರುಗುಡುವುದು ಕಾರಣವಲ್ಲ. ಬಲ್ಲರೆ ಹೇಳಿ, ಅರಿಯದಿದ್ದರೆ ಕೇಳಿ. ಕವಿಯೆಂಬ ಎರಡು ಐವತ್ತೆರಡು ಅಕ್ಷರದ ಭೇದವ ಅಷ್ಟದಳಕಮಲವ ವಿಚಾರಿಸುವುದು, ಅಲ್ಲದ ಕಾರಣ (?) ನಮ್ಮ ಗೊಹೇಶ್ವರಪ್ರಿಯ ನಿರಾಳಲಿಂಗ.
--------------
ಗುಹೇಶ್ವರಯ್ಯ
ಸಪ್ತಕೋಟಿ ಮಹಾಮಂತ್ರ ವಿಶಾಲವಾಗದಂದು, ತೊಂಬತ್ತುನಾಲ್ಕು ಪದ ವಿಶಾಲವಾಗದಂದು, ವರ್ಣ ಐವತ್ತೆರಡು ವಿಶಾಲವಾಗದಂದು, ಇನ್ನೂರಾ ಇಪ್ಪತ್ತುನಾಲ್ಕು ಭುವನ ವಿಶಾಲವಾಗದಂದು, ತೊಂಬತ್ತಾರುತತ್ವ ವಿಶಾಲವಾಗದಂದು, ಅರುವತ್ತುನಾಲ್ಕು ಕಲೆಜ್ಞಾನ ವಿಶಾಲವಾಗದಂದು, ಓಂಕಾರವೆಂಬ ಅನಾದಿಪ್ರಣವವಾಗಿದ್ದನು ನೋಡಾ ಇಲ್ಲದಂತೆ ನಮ್ಮ ಅಪ್ರಮಾಣಕೂಡಲಸಂಗಮದೇವನು.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಬಯಲನೇರಿದ ಪಕ್ಷಿಂಗೆ ಮುಖ ಮೂರು, ಒಡಲಾರು, ಮೂವತ್ತಾರು ಪಾದಂಗಳು, ಐವತ್ತೆರಡು ನಾಲಗೆಯು, ಒಬ್ಬ ಬೇಂಟೆಕಾರನು ಅರಿವೆಂಬ ಬಿಲ್ಲು ಹಿಡಿದು, ಕುರುಹೆಂಬ ಅಂಬು ತಕ್ಕೊಂಡು ಎಸೆವ. ಆ ಬೇಂಟೆಕಾರನ ಆ ಪಕ್ಷಿ ನುಂಗಿ ನಿರ್ವಯಲಾದುದ ಕಂಡೆ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಲಿಂಗೋದ್ಭವ ಐವತ್ತೆರಡು ಅಕ್ಷರಂಗಳಲ್ಲಿ ವರ್ತುಳ ಗೋಮುಖ ಗೋಳಕಾಕಾರಕ್ಕೆ ಸಂಬಂಧಿಸುವಲ್ಲಿ ಅಕಾರ ವರ್ತುಳಾಕಾರಕ್ಕೆ, ಉಕಾರ ಗೋಮುಖಕ್ಕೆ ಮಕಾರ ಗೋಳಕಾಕಾರಕ್ಕೆ. ಇಂತೀ ಆದಿ ಆಧಾರ ಆತ್ಮಬೀಜ ಓಂಕಾರದಿಂದ ಉದ್ಭವವಾದ ಅಕ್ಷರಾತ್ಮಕ ವಸ್ತುವನರಿತು ಬ್ರಹ್ಮ ವರ್ತುಲದಲ್ಲಿ ಅಡಗಿ, ವಿಷ್ಣು ಗೋಮುಖದಲ್ಲಿ ನಿಂದು ರುದ್ರ ಗೋಳಕಾಕಾರಕ್ಕೆ ಸಂಬಂಧಿತನಾಗಿ ಉತ್ಪತ್ಯ ಸ್ಥಿತಿ ಲಯಂಗಳ ಲಕ್ಷಿಸುತ್ತ ಜಗಹಿತಾರ್ಥವಾಗಿ ಸ್ವಯಂಭು ಉಮಾಪತಿಯಾದೆ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವಾದೆಹೆನೆಂದು.
--------------
ಪ್ರಸಾದಿ ಭೋಗಣ್ಣ
ಆದಿಯಲ್ಲಿ ಒಬ್ಬ ಶಿವಶರಣನು ಮನೆಯ ಕಟ್ಟಿಸಲಿಕ್ಕೆ ಅನುವಂಗೈದನಯ್ಯ. ಅದು ಹೇಗೆಂದಡೆ: ಒಂದಾಮೋದವ ಮಾಡಿ, ಮೂವತ್ತಾರು ಕಂಬಗಳ ಮಾಡಿ, ಐವತ್ತೆರಡು ತೊಲೆ ಜಂತಿಗಳ ಹಮ್ಮಿ, ಇಪ್ಪತ್ತೈದು ಬೋದಂಗಳ ಭೇದಿಸಿ, ಸಾಪಾಯವೆಂಬ ಮೇಲುಮುದ್ದಿಯ ಹಾಕಿ, ಮನೆಯ ಕಟ್ಟಿದನಯ್ಯ ನಮ್ಮ ಶಿವಶರಣನು. ಆ ಮನೆಯು ನಾ ಘನವೆಂದರೆ ನನ್ನ ನುಂಗಿತ್ತು, ನೀ ಘನವೆಂದರೆ ನಿನ್ನ ನುಂಗಿತ್ತು ನಾನು ನೀನೆಂಬ ಕೊನೆಕೋಣೆಯಲ್ಲಿ ತಾನೇ ನೋಡಾ ! ತನ್ನೊಡನೆ ಒಬ್ಬ ಭಾಮಿನಿಯು ಹುಟ್ಟಿದಳು. ಐದಗಲ ಮಾಡಿ ತಂದು, ಪೃಥ್ವಿಗೆ ಒಂದು ಸಂಬಂಧಿಸಿ, ಅಪ್ಪುವಿಂಗೆ ಒಂದು ಸಂಬಂಧಿಸಿ, ತೇಜಕ್ಕೆ ಒಂದು ಸಂಬಂಧಿಸಿ, ವಾಯುವಿಂಗೆ ಒಂದು ಸಂಬಂಧಿಸಿ, ಆಕಾಶಕ್ಕೆ ಒಂದು ಸಂಬಂಧಿಸಿ, ಈ ಐದಗಲ ಬಿಟ್ಟು ನೀಡಿದ ಭಾಮಿನಿಯ ನುಂಗಿತ್ತು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಮಹಾಮೇರುವೆಂಬ ಪಟ್ಟಣದರಸಂಗೆ ಮೂರು ಪ್ರಧಾನಿಗಳು, ಆರು ಮಂದಿ ವಜೀರರು, ಮೂವತ್ತಾರು ಮಂದಿ ಸರದಾರರು, ಐವತ್ತೆರಡು ಮಂದಿ ಮಹಾಲದಾರರು ಕೂಡಿ ಕತ್ತಲ ಕಾಳಂಧವೆಂಬ ದೇಶವನು ಕಾಳಗವ ಮಾಡಿ ತಕ್ಕೊಂಬುವುದ ಕಂಡೆನಯ್ಯ. ಅದು ಹೇಗೆಂದಡೆ: ಹತ್ತುಲಕ್ಷ ರಾವುತರ ಹಿಡಿದು, ಎಂಟು ಸಾವಿರ ಕುದುರೆಗಳ ಹಿಡಿದು, ಅರವತ್ತು ಕೋಟಿ ಕಾಲಮಂದಿಯ ಸಂದಿಸಂದಿನಲ್ಲಿ ನಿಲಿಸಿ, ಸಪ್ತೇಳುಸಾಗರವ ದಾಂಟಿ, ಕತ್ತಲಕಾಳಂಧವೆಂಬ ದೇಶವನು, ಕೈಸೆರೆಯ ಮಾಡಿಕೊಂಡು, ಐದು ಠಾಣ್ಯವ ಬಲಿದು, ಕಡೆಯ ಠಾಣ್ಯದ ಮುಂದೆ ಚಾವಡಿಯ ರಚಿಸುವುದ ಕಂಡೆನಯ್ಯ. ಅದು ಹೇಗೆಂದಡೆ: ಅದಕೆ ಕಂಬ ಒಂದು, ತೊಲೆ ಮೂರು, ಆರು ಜಂತಿಗಳು, ಮೂವತ್ತಾರು ನೆಲೆಗಳ ಹೂಡಿ. ಒಂಬತ್ತು ಬಾಗಿಲಲ್ಲಿ ನವ ಬೊಂಬೆಗಳ ನಿಲಿಸಿ, ಅವಕ್ಕೆ ನವರತ್ನವ ಕೆತ್ತಿಸಿ, ಐದು ತೊಂಡಲಂಗಳ ಕಟ್ಟಿ, ಹವಳ ನೀಲ ರತ್ನ ಧವಳ ಮುತ್ತು ಮಾಣಿಕ್ಯದ ಗದ್ದುಗೆಯ ಮೇಲೆ ಆ ಅರಸನ ಮೂರ್ತಂಗೊಳಿಸಿ, ಸಪ್ತದ್ವೀಪಂಗಳಂ ರಚಿಸಿ, ಸೋಮವೀದಿ ಸೂರ್ಯವೀದಿಯ ಶೃಂಗಾರವ ಮಾಡಿ, ಆ ಅರಸಿಂಗೆ ಒಡ್ಡೋಲಗವಂ ಮಾಡುವುದ ಕಂಡೆನಯ್ಯ. ಅದು ಹೇಗೆಂದಡೆ: ಪಾತಾಳಲೋಕವೆಂಬ ಠಾಣ್ಯದಲ್ಲಿ ತಾಳ, ಕಂಸಾಳ, ಘಂಟೆ, ಜಾಗಟೆ ಮೊದಲಾದ ಶಬ್ದಂಗಳು, ಮತ್ರ್ಯಲೋಕವೆಂಬ ಠಾಣ್ಯದಲ್ಲಿ ಕಿನ್ನರವೇಣು ತಂಬೂರವೇಣು ಕೈಲಾಸವೇಣುಗಳು ಮೊದಲಾದ ಶಬ್ದಗಳು, ಸ್ವರ್ಗಲೋಕವೆಂಬ ಠಾಣ್ಯದಲ್ಲಿ ಭೇರಿ ಡಮರು ತುಡುಮೆ ಡಿಂಡಿಮ ಮೊದಲಾದ ಶಬ್ದಂಗಳು, ತತ್ಪುರುಷವೆಂಬ ಲೋಕದಲ್ಲಿ, ಕೊಳಲು ನಾಗಸ್ವರ ಶಂಖ ಸನಾಯ ಬುರುಗು ನಪಿರಿ ಹೆಗ್ಗಾಳೆ ಚಿನಿಗಾಳೆ ಚಂದ್ರಗಾಳೆ ಮೊದಲಾದ ಶಬ್ದಂಗಳು, ಈಶಾನ್ಯಲೋಕವೆಂಬ ಠಾಣ್ಯದಲ್ಲಿ ಗೀತಪ್ರಬಂಧ ರಾಗಭೇದ ಮೊದಲಾದ ಶಬ್ದಂಗಳು, ಇಂತಿವು ಆ ಅರಸಿಂಗೆ ಒಡ್ಡೋಲಗವ ಮಾಡುವುದ ಕಂಡೆನಯ್ಯ. ಬ್ರಹ್ಮಂಗೆ ತಾಳ, ವಿಷ್ಣುವಿಂಗೆ ವೇಣು, ರುದ್ರಂಗೆ ಮೃದಂಗ, ಈಶ್ವರಂಗೆ ಉಪಾಂಗ, ಸದಾಶಿವಂಗೆ ಗಾಯನ- ಇಂತೀ ಐವರು ಆ ಅರಸಿಂಗೆ ಗಂಧರ್ವರಾಗಿರ್ಪರು ನೋಡಾ. ಆದಿಶಕ್ತಿ ಮಂತ್ರಶಕ್ತಿ ಕ್ರಿಯಾಶಕ್ತಿ ಇಚ್ಫಾಶಕ್ತಿ ಜ್ಞಾನಶಕ್ತಿ ಇಂತೈವರು ನಾಂಟ್ಯವನಾಡುತಿರ್ಪರು ನೋಡಾ. ಒಬ್ಬ ಸತಿಯಳು ಆ ಅರಸಿಂಗೆ ಸಜ್ಜನವೆಂಬ ಮಜ್ಜನವ ನೀಡಿ, ಅಂತರಂಗದ ಬೆಳಗಿನ ಮಹಾಚಿದ್ವಿಭೂತಿಯಂ ಧರಿಸಿ, ನಿರ್ಮಲವೆಂಬ ಗಂಧವನೊರೆದು, ಸುಜ್ಞಾನವೆಂಬ ಅಕ್ಷತೆಯನಿಟ್ಟು, ನಿರ್ಭಾವವೆಂಬ ಪತ್ರಿಯನೇರಿಸಿ, ನಿದ್ರ್ವಂದ್ವವೆಂಬ ಧೂಪವ ತೋರಿ, ಭಕ್ತನೆಂಬ ಅಡ್ಡಣಿಗೆಯ ಮೇಲೆ, ಮಹೇಶ್ವರನೆಂಬ ಹರಿವಾಣವನಿಕ್ಕಿ, ಮಹಾಪ್ರಸಾದವ ನೆಲೆಯಂಗೊಂಡು, ಪ್ರಾಣಲಿಂಗಿಯೆಂಬ ತುಪ್ಪವನೆರೆದು, ಶರಣನೆಂಬ ಸಕ್ಕರೆಯ ತಳೆದು, ಆ ಅರಸಿಂಗೆ ನೈವೇದ್ಯವ ಮಾಡುತಿರ್ಪಳು ನೋಡಾ. ನವರತ್ನದ ಹರಿವಾಣದೊಳಗೆ ಪಂಚಾರ್ತಿಯ ಮೇಲೆ ಏಕಾರ್ತಿಯನಿಕ್ಕಿ ಪಂಚದೀಪಂಗಳ ರಚಿಸಿ, ಆ ಅರಸಿಂಗೆ ಓಂ ನಮೋ ಓಂ ನಮೋ ಎಂದು ಬೆಳಗುತಿರ್ಪಳು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಕಣ್ಣು ಇಲ್ಲದವ ಕಂಡನಯ್ಯ ಒಂದು ಲಿಂಗವ. ಆ ಲಿಂಗಕ್ಕೆ ತಲೆ ಒಂದು, ಮುಖ ಮೂರು, ಆರು ಹಸ್ತ, ಮೂವತ್ತಾರು ಪಾದಂಗಳು. ಐವತ್ತೆರಡು ಎಸಳಿನ ಶಿವಾಲಯದೊಳಗೆ ಪೂಜೆಗೊಂಬ ಲಿಂಗವನು ಏಕೋಮನೋಹರನೆಂಬ ಪೂಜಾರಿಯು ಕಂಡು ನವರತ್ನ ತೊಂಡಲಂಗಳ ಕಟ್ಟಿ ಆ ಲಿಂಗಾರ್ಚನೆಯ ಮಾಡುತಿರ್ಪನು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಸಪ್ತಕೋಟಿ ಮಹಾಮಂತ್ರಂಗಳು ತಾನಿರ್ದಲ್ಲಿ, ತೊಂಬತ್ತುನಾಲ್ಕು ವ್ಯೋಮವ್ಯಾಪಿಪದಂಗಳು ತಾನಿರ್ದಲ್ಲಿ, ಅಕಾರಾದಿ ಕ್ಷಕಾರಾಂತವಾದ ಐವತ್ತೆರಡು ಅಕ್ಷರಂಗಳು ತಾನಿರ್ದಲ್ಲಿ, ಇನ್ನೂರ ಇಪ್ಪತ್ತುನಾಲ್ಕು ಭುವನಂಗಳು ತಾನಿರ್ದಲ್ಲಿ, ಮೂವತ್ತಾರು ತತ್ವಂಗಳು ತಾನಿರ್ದಲ್ಲಿ, ಷಟ್ಕಲೆ ದ್ವಾದಶಕಲೆ ಷೋಡಶಕಲೆಗಳು ತಾನಿರ್ದಲ್ಲಿ, ಅರುವತ್ತುನಾಲ್ಕು ಕಲೆಯ ಜ್ಞಾನಂಗಳು ತಾನಿರ್ದಲ್ಲಿ, ಇವೆಲ್ಲವು ತನ್ನಲ್ಲಿ ಉತ್ಪತ್ತಿ ಸ್ಥಿತಿ ಲಯವಾದ ಕಾರಣ ತನ್ನಿಂದಧಿಕವಪ್ಪ ಘನವೊಂದಿಲ್ಲವಾಗಿ, ತಾನೆ ಪರಬ್ರಹ್ಮ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಓಂ ಎಂಬ ಓಂಕಾರ ಪೃಥ್ವೀತತ್ವದ ನಾಮಬೀಜ. ನ ಎಂಬ ನಕಾರ ಅಪ್ಪುತತ್ವದ ನಾಮಬೀಜ. ಮ ಎಂಬ ಮಕಾರ ತೇಜತತ್ವದ ನಾಮಬೀಜ. ಶಿ ಎಂಬ ಶಿಕಾರ ವಾಯುತತ್ವದ ನಾಮಬೀಜ. ವಾ ಎಂಬ ವಾಕಾರ ಆಕಾಶತತ್ವದ ನಾಮಬೀಜ. ಯ ಎಂಬ ಯಕಾರ ಆತ್ಮತತ್ವದ ನಾಮಬೀಜ. ಇಂತೀ ಷಡಕ್ಷರದ ನಾಮಭೇದ. ರೋಹ ಅವರೋಹವಾಗಿ, ಅವರೋಹ ರೋಹವಾಗಿ ಪೂರ್ವ ಉತ್ತರಕ್ಕೆ ಪುಂಜಕ್ಕೆ ವಿರಳವಾದಂತೆ ಉಭಯಚಕ್ಷು ಅಭಿಮುಖವಾಗಿ ಏಕಾಕ್ಷರದಲ್ಲಿ ಗುಣಿತನಾಮದಿಂದ ಹಲವಕ್ಷರ ಹೊಲಬುದೋರುವಂತೆ ಓಂಕಾರ ಬೀಜನಾಮದಲ್ಲಿ ದಶಾಕ್ಷರವಡಗಿ ದಶಾಕ್ಷರದ ಅಕಾರಾಂತದಲ್ಲಿ ಷೋಡಶಾಕ್ಷರ ಭೇದ. ಆ ಭೇದದಿಂದ ಐವತ್ತೆರಡು ಅಕ್ಷರನಾಮ ಬೀಜವಾಗಿ ಷಡಕ್ಷರ ಘಟವಾಗಿ ಪಂಚಾಕ್ಷರಿ ಪ್ರಾಣವಾಗಿ ಆ ಗುಣದಲ್ಲಿ ತೊಳಗಿ ಬೆಳಗುವ ಕಳೆ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವಾಗಿ.
--------------
ಪ್ರಸಾದಿ ಭೋಗಣ್ಣ
ಇನ್ನಷ್ಟು ... -->