ಅಥವಾ

ಒಟ್ಟು 6 ಕಡೆಗಳಲ್ಲಿ , 5 ವಚನಕಾರರು , 6 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಲು ಮೂರು, ಬಸುರು ನಾಲ್ಕು, ಕೈ ಐದು, ತಲೆ ಎಂಟು, ಬಾಯಿ ಒಂಬತ್ತು, ಕಿವಿ ಆರು, ಕಣ್ಣು ಮೂವತ್ತೆರಡು. ಇಂತೀ ಪಿಂಡಕ್ಕೆ ಐವತ್ತೊಂದು ಕಳೆ. ಆ ಜೀವಕ್ಕೆ ಪರಮನೊಂದೆ ಕಳೆ. ಈ ಗುಣ ಜಾÕನಪಿಂಡದ ಭೇದ. ಶಂಭುವಿನಿಂದಿತ್ತ ಸ್ವಯಂಭವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.
--------------
ದಾಸೋಹದ ಸಂಗಣ್ಣ
ಒಂದು ಬೀಜವ ಬಿತ್ತಿದಡೆ ಮೂರುಫಲವಾಯಿತ್ತು. ಆ ಫಲ ಬಲಿದು ಬೆಳೆದ ಮತ್ತೆ, ಒಂದ ಉದಯದಲ್ಲಿ ಕೊಯ್ದೆ, ಒಂದ ಮಧ್ಯಾಹ್ನದಲ್ಲಿ ಕೊಯ್ದೆ, ಒಂದ ಹೊತ್ತು ಸಂದ ಮತ್ತೆ ಕೊಯ್ದೆ. ಈ ಮೂರರೆಯನೊಂದು ಮಾಡಿ ಮೆಟ್ಟಿಸಿದೆ. ಭಕ್ತಿಜ್ಞಾನವೈರಾಗ್ಯವೆಂಬ ಎತ್ತಿನ ಕೈಯಲ್ಲಿ ತೂರಿದೆ ಕೊಂಗವನೆತ್ತಿ ಅಂಗವೆಂಬ ಹೊಳ್ಳು ಹಾರಿತ್ತು. ಸಂಸಾರವೆಂಬ ಚೊಳ್ಳು ನಿತ್ಯಾನಿತ್ಯ ವಿವೇಕವೆಂಬ ಕೊಳಗವ ಹಿಡಿದಳೆಯಲಾಗಿ, ನೂರೊಂದು ಕೊಳಗವಾಯಿತ್ತು. ಹೆಡಗೆಗೆ ಅಳವಡಿಸುವಾಗ ಐವತ್ತೊಂದು ಕೊಳಗವಾಯಿತ್ತು. ನಡುಮನೆಯಲ್ಲಿ ಸುರಿವಾಗ ಇಪ್ಪತ್ತೈದು ಕೊಳಗವಾಯಿತ್ತು. ಪಡುವಣ ಕೋಣೆಯಲ್ಲಿ ಮಡಗಿರಿಸುವಾಗ, ಪಡಿಯ ನೋಡಲಾಗಿ ಐಗಳವಾಯಿತ್ತು. ಅದು ಬಿಡುಬಿಸಿಲಿನಲ್ಲಿ ಒಣಗೆ, ಅದು ಪಡಿಪುಚ್ಚಕ್ಕೆ ಮೂಗಳವಾಯಿತ್ತು. ಆ ಮೂಗಳವ ನಡುಮೊರದಲ್ಲಿ ಸುರಿಯೆ, ಪಡಿಗಣಿಸುವಾಗ ಒಕ್ಕುಳವಾಯಿತ್ತು. ಈ ಒಕ್ಕುಳವ ಕುಟ್ಟಿ, ಮಿಕ್ಕುದ ಕೇರೆ ಮತ್ತೆ ಒಬ್ಬಳವಾಯಿತ್ತು. ಒಬ್ಬಳವ ಕುಡಿಕೆಯಲ್ಲಿ ಹೊಯ್ದು ನಿರುತದಿಂ ನೋಡೆ, ಮೂರು ಮಾನವ ನುಂಗಿ, ಒಂದು ಮಾನವಾಯಿತ್ತು. ಒಂದು ಮಾನವನಟ್ಟು ಕುಡಿಕೆಯಲ್ಲಿ ಕುಸುರೆ ಕೂಳೊಡೆದು ಬಾಲಗೋಗರವಾಯಿತ್ತು. ಉಂಡವರತ್ತ, ನಾನಿತ್ತ ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಆ ನಿಜದರಿವು ತಾನೊಂದು ಬಂಧನದಿಂದ ಮರೆಯಾದುದ ತಾನರಿಯದೆ, ಮರವೆಯ ಗುಣ ಇದಿರಿಗೆ ಅದೆಯೆಂದು ಸಂಪಾದಿಸುವಾಗ, ಆ ತೆರ ಶಿಲೆಯ ನೆಳಲಿನ ಮರೆಯಲ್ಲಿ ತನ್ನಂಗ ಬಿಂಬಿಸಲಿಂತಾಗಿ, ಅರಿ ಇದಿರಾಯಿತ್ತೆಂದು, ಶಿಲೆಯ ಕೊಂಡು, ತಾನೊಂದು ಚೇತರಿಸಿಕೊಂಡು ನಿಂದ ಗಜದಂತೆ, ನಿಜದರಿವು ತ್ರಿಗುಣಾತ್ಮಕದಲ್ಲಿ ಬೆರಸಿ, ತ್ರಿದೋಷದ ದೆಸೆಯಿಂದ ನಾನಾದರುಶನ ಪಕ್ಷಪಾತಂಗಳಲ್ಲಿ ಹೊತ್ತು ಹೋರಿ, ಅಧ್ಯಾತ್ಮ, ಆದಿಭೌತಿಕ, ಆದಿದೈವಿಕಂಗಳ ತಿಳಿಯಬೇಕೆಂದು, ಭೂತಭವಿಷ್ಯದ್ವರ್ತಮಾನವ ವಿಚಾರಿಸಿಹೆನೆಂದು, ಷಡುದರುಶನವ ಸಂಪಾದಿಸಿಹೆನೆಂದು, ಪಂಚಭೌತಿಕ ಭೇದ, ಪಂಚವಿಂಶತಿತತ್ವ ಮೂವತ್ತಾರು ಕ್ರಮ, ಐವತ್ತೊಂದು ಮೆಟ್ಟು, ನೂರೊಂದರ ಲಕ್ಷ. ಇಂತಿವ ಪ್ರಮಾಣಿಸಿ ತಿಳಿದಲ್ಲಿ, ಅದಕ್ಕೆ ಬೇರೆ ಬೇರೆ ಸೂರ್ಯ ಚಂದ್ರ ಆಕಾಶ ವಾಯು ಆಗ್ನಿ ಉದಕ ಪೃಥ್ವಿ ಬೇರೊಂದು ನೆಲಹೊಲಬುಂಟೆ ? ಇಂತಿವೆಲ್ಲವು ವಸ್ತುಮಯದೊಳಗಿದ್ದ ಲಕ್ಷ. ಊರೊಳಗಣ ಹಲವು ಕುಲವೆಲ್ಲವೂ ಅರಸಿನ ದೆಸೆ ಕುಲದಲ್ಲಿ ಎಸಕವ ತಿಳಿದಡಗಿದ ತೆರದಂತೆ, ಅರಿದು ನಡೆವ ಪರಮವಿರಕ್ತಂಗೆ ಹಲವುಮಾತಿನ ಬಲೆಯ ಭ್ರಮೆಯಿಲ್ಲ. ಗೆಲ್ಲಸೋಲದ ಕಲ್ಲೆದೆಯವನಲ್ಲ. ಅಲ್ಲಿಗಲ್ಲಿಗೆ ಬಲ್ಲರಿಯರೆಂದು ಕೋಲಾಟಿಗರಂತೆ ಥೆಕಾವ್ಯವೆಲ್ಲವ ಹೇಳುವನಲ್ಲ. ತ್ರಿವಿಧಮಲವಿಲ್ಲದಡೆ ಒಲ್ಲೆನೆಂದು ತನ್ನಲ್ಲಿಗೆ ಬಂದಡೆ, ಕೂಡಿ ಕದಂಬನಾಗಿ, ಮಧು ಮಕ್ಷಿಕನಂತೆ ಸಂಸಾರದಲ್ಲಿಯೆ ಸಾವನಲ್ಲ. ಕಲ್ಲಿಯೊಳಗಣ ಮಕರದ ಜೀವದಂತೆ, ಸಂಸಾರದಲ್ಲಿಯೆ ಹೋದ ಕುಳಿಗೊಂಬನಲ್ಲ. ಆತನ ಇರವು ದಗ್ಧಪಟದಂತೆ, ರತ್ನದೀಪ್ತಿಯ ಹೊದ್ದಿಗೆಯ ತೆರದಂತೆ, ಸ್ಫಟಿಕದ ನಿರ್ದೇಹದ ವರ್ಣದ ಹೊದ್ದಿಗೆಯಂತೆ, ಇಂತು ಚಿದ್ರೂಪನ ಇರವು. ಊಧ್ರ್ವರೇತೋಮೂರ್ತಿ ಶ್ವೇತಸ್ವಯಂಭು ಕಪಿಲೇಶ್ವರಲಿಂಗದೊಳಗಾದವನ ಇರವು
--------------
ಮಹಾಲಿಂಗ ಶಶಿಮೌಳಿ ಸದಾಶಿವ
ನಾನಾ ಯೋನಿಯಲ್ಲಿ ತಿರುಗಿ ಬಂದನಾಗಿ ಗುರುವಲ್ಲ. ನಾನಾ ಶಿಲೆಯಲ್ಲಿ ರೂಹಿಟ್ಟು ಬಂದುದಾಗಿ ಲಿಂಗವಲ್ಲ. ನಾನಾ ಯಾಚಕ ವಿಕಾರದಿಂದ ತಿರುಗುವನಾಗಿ ಜಂಗಮವಲ್ಲ. ಜನನರಹಿತ ಗುರು, ಅವತಾರರಹಿತ ಲಿಂಗ, ಮರಣರಹಿತ ಜಂಗಮ. ಹೀಗಲ್ಲದೆ ತ್ರಿವಿಧವ ಕಳೆಯಬಾರದು. ತ್ರಿವಿಧಕ್ಕೆ ತ್ರಿವಿಧವನಿತ್ತು, ಗುರುವಿನ ಹಂಗ ಮರೆಯಬೇಕು. ತ್ರಿವಿಧಕ್ಕೆ ತ್ರಿವಿಧವನಿತ್ತು, ಲಿಂಗದ ಹಂಗ ಮರೆಯಬೇಕು. ತ್ರಿವಿಧಕ್ಕೆ ತ್ರಿವಿಧವನಿತ್ತು, ಜಂಗಮದ ಹಂಗ ಮರೆಯಬೇಕು. ಮೂರರೊಳಗಾದ ಆರು ಕೊಟ್ಟು, ಐದನಿರಿಸಿಕೊಂಡು, ಇಪ್ಪತ್ತೈದರ ಲೆಕ್ಕದಲ್ಲಿರಿಸಿ, ಐವತ್ತೊಂದು ಬಿಂದುವಿನಲ್ಲಿ ಹೊಂದಿಸಿ, ಓಂಕಾರವಪ್ಪ ಪ್ರಣಮವ ಪರಿಣಾಮಿಸಿ, ವ್ಯಾಪಾರದ ಲತೆಯ ಬಳ್ಳಿಯ ಬೇರ ಕಿತ್ತು, ಪರ್ವಿ ಪ್ರಕಾರದಿಂದ ಉರ್ವಿಯ ಸುತ್ತಿಮುತ್ತಿ ಬೆಳೆದ ಚಿತ್ತಬಿದಿರಿನ ನಡುವಿದ್ದ ಹುತ್ತದ ಬಹುಮುಖದ ಸರ್ಪನ ಹಿಡಿದು, ಕಾಳೋರಗನಂ ಬೇರು ಮಾಡಿ, ಲೀಲೆಗೆ ಹೊರಗಾಗಿ ಭಾಳಲೋಚನನಂ ಕೀಳುಮಾಡಿ, ಬಾಲೆಯರ ಬಣ್ಣಕ್ಕೆ ಸೋಲದೆ, ಕಾಳುಶರೀರವೆಂಬ ಒತ್ತರಂಗೊಳ್ಳದೆ, ಗತಿ ಮತಿ ಗುಣ ಸಂಸರ್ಗ ವಿಪಿನ ಕಂಟಕಕ್ಕೊಳಗಾಗದೆ, ಪಿಂಡಪ್ರಾಣದ ವಾಯುಸಂಚಾರಕ್ಕೀಡುಮಾಡದೆ, ಅರಿದೆನೆಂಬುದಕ್ಕೆ ಕುರುಹಿಲ್ಲದೆ, ಕುರುಹಿಗೆ ಅವಧಿಗೊಡಲಿಲ್ಲದೆ, ಹುಸಿ ಮಸಿಯ ಮಣಿಮಾಡದಲ್ಲಿ ಒರಗದೆ, ಪರಿಣಾಮವೇ ಪಥ್ಯವಾಗಿ, ಅಂತರಂಗಶುದ್ಧಿ ಪರಿಪೂರ್ಣವಾಗಿ ನಿಂದು, ಸಂಸಾರಕ್ಕೆ ಸಿಕ್ಕದೆ, ನಿಂದ ನಿಜ ತಾನಾಗಿ ಲಿಂಗೈಕ್ಯವು. ನಿಃಕಳಂಕ ಮಲ್ಲಿಕಾರ್ಜುನನಲ್ಲಿ ಸರ್ವಾಂಗದಲ್ಲಿ ನಿರ್ಲೇಪವಾ[ದುದೇ] ಶರಣಸ್ಥಲ.
--------------
ಮೋಳಿಗೆ ಮಾರಯ್ಯ
ಜೀವನ ಬಾಗಿಲಲ್ಲಿ ಭ್ರಮೆಯ ತಡೆದು, ಆತ್ಮನ ಬಾಗಿಲಲ್ಲಿ ಪ್ರಕೃತಿಯ ತಡೆದು, ಪರಮನ ಬಾಗಿಲಲ್ಲಿ ಚಿತ್ತವ ತಡೆದು, ಮಿಕ್ಕಾದ ವಾಯುಗಳ ದಿಸೆಯಿಂದ ಇಂದ್ರಿಯಂಗಳ ತಿಳಿದು, ಇಂತೀ ಜೀವಾತ್ಮ ಪರಮ ತ್ರಿವಿಧಗುಣಂಗಳು ತಲೆದೋರದೆ ಕರ್ಮೇಂದ್ರಿಯ ಭಾವೇಂದ್ರಿಯ ಜ್ಞಾನೇಂದ್ರಿಯ ಇಂತೀ ತ್ರಿವಿಧಸ್ವಾನುಭಾವದಲ್ಲಿ ಅಡಗಿ, ಓಂಕಾರದ ಉಲುಹು ನಷ್ಟವಾಗಿ ಷಡಕ್ಷರ ಪಂಚಾಕ್ಷರ ಮೂಲದ ಉಭಯದ ಮೂಳೆ ಮುರಿದು ಐವತ್ತೊಂದು ಭೇದದ ಸೂತಕದ ಸುಳುಹಡಗಿ ಹಿಂದುಮುಂದಣ ಎಚ್ಚರಿಕೆ ಸುಮ್ಮಖ ತಿರುಗಲಾಗೆನುತ್ತಿದ್ದೆನು. ಕೂಡಲಸಂಗಮದೇವರಲ್ಲಿ ಬಸವಣ್ಣನ ಮುಂದಣ ಎಚ್ಚರಿಕೆ ಕುಂದದಂತೆ ಉಗ್ಗಡಿಸುತ್ತಿದ್ದೆನು.
--------------
ಉಗ್ಘಡಿಸುವ ಗಬ್ಬಿದೇವಯ್ಯ
ಐವತ್ತೊಂದು ಶಾಖೆಯಲ್ಲಿ, ಮೂವತ್ತೊಂದು ಬಿಂದುವಿನಲ್ಲಿ, ಇಪ್ಪತ್ತೈದು ತತ್ವದಲ್ಲಿ, ಹೊತ್ತುಹೋರಿಯಾಡುತ್ತಿಪ್ಪುದು ಜಗ. ಸ್ಥೂಲದಲ್ಲಿ ಸಂಬಂಧವಾಗಿ, ಸೂಕ್ಷ್ಮದಲ್ಲಿ ಲೇಪವಾಗಿ, ಕಾರಣದಲ್ಲಿ ಸ್ವಯವಾಗಿ, ತ್ರಿವಿಧದ ಉಳುಮೆಯ ಜಾರಿ ನಿಂದುದು ಸ್ವಯಂಜ್ಯೋತಿ. ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವು ಸ್ವಯಂಭುವಾದ
--------------
ಶಿವಲೆಂಕ ಮಂಚಣ್ಣ
-->