ಅಥವಾ

ಒಟ್ಟು 58 ಕಡೆಗಳಲ್ಲಿ , 27 ವಚನಕಾರರು , 49 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತನ್ನನರಿದು ಹಿಡಿದು ಬಂದ ಶರಣ ಎಂಟರಲ್ಲಿ ನಿಂದು, ಏಳರಲ್ಲಿ ನಡೆದು, ಒಂದರಲ್ಲಿ ನಿಂದು, ಎಂಟರಲ್ಲಿ ನಡೆದು, ಒಂದರಲ್ಲಿ ನಿಂದು, ಆರರಲ್ಲಿ ನಡೆದು, ಒಂದರಲ್ಲಿ ನಿಂದು, ನಾಲ್ಕರಲ್ಲಿ ನಡೆದು, ಒಂದರಲ್ಲಿ ನಿಂದು ಮೂರರಲ್ಲಿ ನಡೆದು ಒಂದರಲ್ಲಿ ನಿಂದು, ಮೂರರಲ್ಲಿ ನಡೆದುಡುಗಿದ ಮತ್ತೆ ಒಂಬತ್ತರಲ್ಲಿ ತನುಮನಭಾವವೆರೆದು ಬಂದು, ಮತ್ತೊಂಬತ್ತರಲ್ಲಿ ತನುಮನಭಾವವೆರೆದು ಬಂದು, ಮತ್ತೊಂಬತ್ತರಲ್ಲಿ ತನುಮನಭಾವವೆರೆದು ಬಂದು, ಮತ್ತೊಂಬತ್ತರಲ್ಲಿ ತನುಮನಭಾವವೆರೆದು ಬಂದು, ಮತ್ತೊಂಬತ್ತರಲ್ಲಿ ತನುಮನಭಾವವೆರೆದು ಬಂದು, ಮತ್ತೊಂಬತ್ತರಲ್ಲಿ ತನುಮನಭಾವವೆರೆದು ಬಂದು, ಮತ್ತೊಂಬತ್ತರಲ್ಲಿ ತನುಮನಭಾವವೆರೆದು ಬಂದು, ಮತ್ತೆ ಮೂರರಲ್ಲಿ ತನುಮನಭಾವವೆರೆದು ನಿಂದ ಮಹಿಮಂಗೆ ಗುರುನಿರಂಜನ ಚನ್ನಬಸವಲಿಂಗ ಕರತಳಾಮಳಕ ಕಡೆಗಿಲ್ಲ.
--------------
ದೇಶಿಕೇಂದ್ರ ಸಂಗನಬಸವಯ್ಯ
ವೇದವೆಂಬುದು ವೇದ್ಯರಿಗಲ್ಲದೆ ಸಾಧ್ಯವಲ್ಲ. ಅದೆಂತೆಂದಡೆ : ಬಿಂದು ವ್ಯಂಜನ ಗುರು ಲಘು ಸಮಾಸ ವಿಭಕ್ತಿಯ ನೇಮ ಬೀಜಾಕ್ಷರ ಐವತ್ತೆರಡರ ಭೇದದೊಳಗಲ್ಲದೆ, ಇಂತಿವೆಲ್ಲವೂ ಒಂದರಲ್ಲಿ ಹುಟ್ಟಿ, ಒಂದರಲ್ಲಿ ಬೆಳೆದು, ಒಂದರಲ್ಲಿ ಲಯವಹ ಕಾರಣ, ಇಂತೀ ವೇದಿಗಳೆಲ್ಲರೂ ವೇದಾಂತ ಸಿದ್ಧಾಂತದನುವನರಿಯದೆ, ಯಾಗವ ಮಾಡಿಹೆವೆಂದು ತಿಲ ಘೃತ ಸಮಿದೆ ಮೊದಲಾದ ಅಜಹತ ದಿಗ್ಭಂಧನಂಗಳಲ್ಲಿ ಪ್ರವರ್ತನ ಗ್ರಹಂಗಳಲ್ಲಿ ಕರ್ಮವ ಮಾಡಿ, ಅಗ್ನಿಗಾಹುತಿ ಕೊಟ್ಟಲ್ಲಿ , ಆತ ವೇದಾಂತನೆ ಬಲುರೋಗಾಂತನಲ್ಲದೆ ? ಇನ್ನು ವೇದಾಂತಸಿದ್ಧಿಯ ಕೇಳಿರೊ : ಪೂರ್ವದಲ್ಲಿ ಹುಟ್ಟುವದನರಿದು, ಮಧ್ಯದಲ್ಲಿ ಬೆಳೆವುದ ನಿಧಾನಿಸಿ, ಉತ್ತರದಲ್ಲಿ ಕಟ್ಟಕಡೆ ಎಂಬುದ ವಿಚಾರಿಸಿ ಲಕ್ಷಿಸಿ, ಇಂತೀ ತ್ರಿವಿಧದ ಭೇದವ ಕಿತ್ತುಹಾಕಿ, ಒಂ ಎಂಬ ಅರ್ಥವ ತಿಳಿದು, ನಯೆಂಬ ನಕಾರಮಂ ತಿಳಿದು, ನಾನಾರೆಂಬುದ ಭಾವಿಸಿ, ಮಯೆಂಬ ಮದರೂಪಂ ವರ್ಜಿಸಿ, ಶಿಯೆಂಬ ಶಿಕಾರವ ಸ್ವೀಕರಿಸಿ, ಯಯೆಂಬ ಯಕಾರವ ನಾಲ್ಕರಲ್ಲಿ ಏಕೀಕರಿಸಿದ ಮತ್ತೆ , ವೇದವೇದ್ಯನು ನೋಡಾ, ಲಲಾಮಬ್ಥಿಮಸಂಗಮೇಶ್ವರಲಿಂಗವು.
--------------
ವೇದಮೂರ್ತಿ ಸಂಗಣ್ಣ
ಮಹಾಜ್ಞಾನ ದಿವ್ಯಪರಿಪೂರ್ಣವಸ್ತು ಜಗಹಿತಾರ್ಥವಾಗಿ ಸ್ವಯಂಭುವೆಂಬ ಸ್ವರೂಪವ ಬಿಟ್ಟು, ಲೀಲಾಸಂಭವನಾಗಿ ಉಮಾಪತಿಯಾದಲ್ಲಿ, ಪಂಚವಕ್ತ್ರದಿಂದ ಪಂಚಭೂತಿಕಂಗಳು ಕಲ್ಪಿಸುವಲ್ಲಿ, ಕರ್ಮಶಕ್ತಿ ವಿಷ್ಣುರೂಪಾಯಿತ್ತು. ಭಾವಶಕ್ತಿ ಬ್ರಹ್ಮರೂಪಾಯಿತ್ತು. ಜ್ಞಾನಶಕ್ತಿ ರುದ್ರರೂಪಾಯಿತ್ತು. ಈ ಉಭಯವ ಘಟಿಸಿ ನಿಂದಲ್ಲಿ, ಷಡುದರ್ಶನ ಸಂಭವಿಸಿದ ಠಾವಾವುದು ? ಒಂದು ವೃಕ್ಷದಲ್ಲಿ ಹುಟ್ಟಿದ ಫಲ, ಮೊದಲೆ ಎಳದಾಗಿ, ತದನಂತರ ಮೀರಿ ಬಲಿದಲ್ಲದೆ ಬೀಜಾಂಕುರವಿಲ್ಲ. ಮರದಿಂ ಮೀರಿ ತೋರುವ ಅಂಕುರವಿಲ್ಲ. ವಸ್ತುವ ಮೀರುವ ದರ್ಶನವಿಲ್ಲ. ಅಪ್ಪು ಒಂದರಲ್ಲಿ ಹಲವು ಫಲವನನುಭವಿಸುವಂತೆ, ವಸ್ತು ಒಂದರಲ್ಲಿ ಸಕಲ ಕೃತ್ಯವ ಮಾಡಿ, ತನ್ನ ಚಿತ್ತದ ಕಲೆಯ ಹರಿದುಕೊಂಬವಂಗೆ ಅವನೊಳು ತಥ್ಯಮಿಥ್ಯ. ಕೈಯುಳಿ ಕತ್ತಿ ಅಡಿಗೂಂಡಕ್ಕಡಿಯಾಗಬೇಡ, ಅರಿ ನಿಜಾ[ತ್ಮಾ] ರಾಮ ರಾಮನಾ
--------------
ಮಾದಾರ ಚೆನ್ನಯ್ಯ
ಯೋನಿ ಒಂದರಲ್ಲಿ ಬಂದೆನೆಂದಡೆ ಹಿಂಚುಮುಂಚಿಲ್ಲವೆ? ರತ್ನಕುಲ ಒಂದಾದಡೆ ಕಾಲಿಗೂ ಸರಿ, ಕೈಗೂ ಸರಿಯೆ? ನಾ ನುಡಿದಹೆನೆಂದಡೆ ಕಡೆನಡು ಮೊದಲಿಲ್ಲ. ಅಂಜನವನಿಕ್ಕಿ ನಿಧಾನವ ಕಾಬಂಗೆ ಬರುಬದೊಂದಾಗಿ ಸಂಗವೇತಕ್ಕೆ? ನಾರಾಯಣಪ್ರಿಯ ರಾಮನಾಥಾ.
--------------
ಗುಪ್ತ ಮಂಚಣ್ಣ
ಸನಕ ಸಾನಂದ ಮುನಿಜನಂಗಳು ಅರಿಯರಯ್ಯಾ ನಿಮ್ಮಂತುವನು. ಒಂದರಲ್ಲಿ ಹಲವಾಗಿ, ಹಲವರಲ್ಲಿ ಒಂದಾಗಿ, ಸಾಕಾರ ನಿರಾಕಾರವಾಗಿಪ್ಪ್ಲ ಏಕವಾಗಿಪ್ಪೆ ಕಪಿಲಸಿದ್ಧಮಲ್ಲಿನಾಥ ನೀನೆಯಾಗಿ.
--------------
ಸಿದ್ಧರಾಮೇಶ್ವರ
ಒಂದರಲ್ಲಿ ಓಂಕಾರ ಭವಿಸಿತ್ತು. ಎರಡರಲ್ಲಿ ವ್ಯಾಪ್ತಿ ಭವಿಸಿತ್ತು. ಮೂರರಲ್ಲಿ ಮುಕ್ತ್ಯಂಗನೆಯ ಸಂಗ ಸಮನಿಸಿತ್ತು. ನಾಲ್ಕರಲ್ಲಿ ಆ ಎಂಬ ಅಕ್ಷರದಂತುವನರಿದೆ. ಅಯ್ದರಲ್ಲಿ ಆ ಬ್ರಹ್ಮತಾತ್ಪರ್ಯಶುದ್ಧವ ನಿರೀಕ್ಷಿಸಿದೆ. ಆರರಲ್ಲಿ ಅವ್ಯಯ ಅನಿಮಿಷಸ್ಥಾನವ ಕಂಡೆ. ಮೀರಿದೆ ಮೂವತ್ತಾರ, ಕಪಿಲಸಿದ್ಧಮಲ್ಲಿಕಾರ್ಜುನನೆಂಬ `ತತ್ವಮಸಿ' ಸಂಗಮದಲ್ಲಿ ಸಂಯೋಗಿಯಾದೆ.
--------------
ಸಿದ್ಧರಾಮೇಶ್ವರ
ಪೃಥ್ವಿಯೊಳಗಿದ್ದು ಸಾಯದಿರಬೇಕು, ಅಪ್ಪುವಿನೊಳಗಿದ್ದು ಚರಿಸದಿರಬೇಕು. ತೇಜದೊಳಗಿದ್ದು ಬೇಯದಿರಬೇಕು, ವಾಯುವಿನೊಳಗಿದ್ದು ಸಂಚರಿಸದಿರಬೇಕು. ಆಕಾಶದೊಳಗಿದ್ದು ಬಹುವರ್ಣಕ್ಕೆ ಅಲೇಖವಾಗಿರಬೇಕು. ಸಕಲಸುಖಭೋಗಂಗಳಲ್ಲಿದ್ದು, ವಿರಾಗಿಯಾಗಿರಬಲ್ಲಡೆ ಆರುಸ್ಥಲ ಒಂದಾಯಿತ್ತು. ಒಂದರಲ್ಲಿ ಪಂಚವಿಂಶತಿತತ್ವ ಸಂದನಳಿದವು. ನಾಮ ರೂಪು ಕ್ರೀಯೆಂಬ ಭಾವದ್ವಂದ್ವವಳಿದು, ನಿಜ ಒಂದೆಯೆಂಬುದಕ್ಕೆ ತೆರಪಿಲ್ಲದೆ ಶರಣನಾದೆಯಲ್ಲಾ. ಶರಣ ಸನ್ಮತನಾಗಿ ಐಕ್ಯನಾದೆಯಲ್ಲಾ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಆದಿಲಿಂಗ, ಅನಾದಿ ಶರಣನೆಂಬುದು ತಪ್ಪದು; ಆದಿ ಗುರು, ಅನಾದಿ ಶಿಷ್ಯನೆಂಬುದು ತಪ್ಪದು. ಗುರುವಿಂಗೆ ಶಿಷ್ಯಂಗೆ ಏನು ದೂರ ದೇವಾ ? ಮುಳ್ಳುಗುತ್ತುವಡೆ ತೆರಹಿಲ್ಲದ ಪರಿಪೂರ್ಣ ಘನವು. ಒಬ್ಬರಲ್ಲಿ ಒಂದು ಭಾವವುಂಟೆ ? ಎನ್ನೊಳಗೆ ಬೆಳಗುವ ಜ್ಞಾನ, ನಿನ್ನ ಹೃದಯಕಮಲದೊ?ಗಣ ಆವ್ಯಕ್ತಲಿಂಗ. ನಿನ್ನೊಳು ತೊಳಗಿ ಬೆಳಗುವ ಜ್ಯೋತಿರ್ಲಿಂಗ ಎನ್ನಂತರಂಗದ ಸುಜ್ಞಾನಲಿಂಗ. ಒಂದರಲ್ಲಿ ಒಂದು ಬಿಚ್ಚಿ ಬೇರೆ ಮಾಡಬಾರದಾಗಿ, ಪ್ರಾಣಲಿಂಗ ಒಂದೆ, ಉಪದೇಶ ಒಂದೆ, ಕ್ರಿಯಾಕರ್ಮ ಒಂದೆ. ನೀವಿನ್ನಾವುದ ಬೇರೆಮಾಡಿ ನುಡಿವಿರಯ್ಯಾ ? ಕಾರ್ಯದಲ್ಲಿ ಗುರುವಾಗಿ, ಅಂತರಂಗಕ್ಕೆ ಸುಜ್ಞಾನೋಪದೇಶವ ಮುನ್ನವೆ ಮಾಡಿದ ಬಳಿಕ ಕ್ರೀಯಿಂದ ಮಾಡಲಮ್ಮೆನೆಂದಡೆ ಹೋಹುದೆ ? ಕೂಡಲಚೆನ್ನಸಂಗಮದೇವರು ಸಾಕ್ಷಿಯಾಗಿ ಎನಗೆ ನೀವು ಉಪದೇಶವ ಮಾಡಿದಡೆ ಮರ್ತಲೋಕದ ಮಹಾಗಣಂಗ? ಕೈಯಲ್ಲಿ ಅಹುದಹುದೆನಿಸುವೆ ಕಾಣಾ ಸಂಗನಬಸವಣ
--------------
ಚನ್ನಬಸವಣ್ಣ
ನ ಒಂದರಲ್ಲಿ ವಾರ ಏಳು ನೋಡಾ. ಆ ಏಳು ವಾರಗಳೆಂಬುವುದು ಕಲ್ಪಿತವಲ್ಲದೆ ದೃಷ್ಟಿಯನ್ನಿಟ್ಟು ನೋಡಬಾರದು ನೋಡಾ. ದೇವರೆಂಬುವುದೊಂದು ನೋಡಾ. ಆ ದೇವರೆಂಬುವುದೊಂದರಲ್ಲಿ, ಬ್ರಹ್ಮ ವಿಷ್ಣು ರುದ್ರ ಈಶ್ವರ ಸದಾಶಿವ ವಿರಾಟ್ಪುರುಷರೆಂಬುವುದು; ನೋಡಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ.
--------------
ಸಿದ್ಧರಾಮೇಶ್ವರ
ಪರಶಕ್ತಿ ಅದಿಯೈಯ್ದ ಬೆರೆಸಿ ಬೆರೆಯದೆ ಬ್ರಹ್ಮವನರಿದೆನೆಂಬ ಯೋಗಿ ಕೇಳಾ. ಅದು ಸಗುಣದಲ್ಲಿ ತಾತ್ಪರ್ಯ ಅದು ನಿಷ್ಕಳದಲ್ಲಿ ನಿತ್ಯ ಅರಿದೆನೆಂಬ ಯೋಗಿ ಕೇಳಾ. ಅದು ಅನಾಹತದಲ್ಲಿ ಆನಂದ, ಅದು ಭಕ್ತಿಜ್ಞಾನವೈರಾಗ್ಯವಂ ಕೂಡಿದ ಏಕಮತ ಅದು ಪದ ನಾಲ್ಕು ಮೀರಿದ ಮಹಾಮತ. ಅದು ಉಂಡುದನುಣ್ಣದು, ಅದು ಬಂದಲ್ಲಿ ಬಾರದು, ಅದು ಸಕಳದಲ್ಲಿಯೂ ತಾನೆ ನಿಷ್ಕಳದಲ್ಲಿಯೂ ತಾನೆ, ಅದು ಪ್ರಾಪಂಚಿಕದಲ್ಲಿಯೂ ತಾನೆ, ಅದು ತಾತ್ಪರ್ಯದಲ್ಲಿಯೂ ತಾನೆ. ಅದು ಸಕಲ ಸರ್ವದ ನಿಷ್ಕಳದ ನಿರ್ಮಳದ ಮದದ ಮಾತ್ಸರ್ಯದ ಬಣ್ಣ ಹಲವರಿದ ಅತಿಗಳೆದ ಪರಮಸೀಮೆಯ ಅರಿದೆನೆಂಬ ಯೋಗಿ. ಅದು ಒಂದರಲ್ಲಿ ನಿತ್ಯ, ಎರಡರಲ್ಲಿ ತಾತ್ಪರ್ಯ, ಮೂರರಲ್ಲಿ ಮುಕ್ತ, ನಾಲ್ಕರಲ್ಲಿ ಕ್ರೋದ್ಥಿ, ಐದರಲ್ಲಿ ಆನಂದ, ಆರರಲ್ಲಿ ತಾನೆ, ಇಪ್ಪತ್ತೈದು ಪಟ್ಟಣದ ತಾತ್ಪರ್ಯಂಗಳನ್ನರಿತು ಮೂವತ್ತಾರು ವೃಕ್ಷಂಗಳ ಮೇಲೆ ಹಣ್ಣೊಂದೆ ಆಯಿತ್ತು ಕಾಣಾ. ಆ ಹಣ್ಣು ಹಣಿತು, ತೊಟ್ಟುಬಿಟ್ಟು ನಿರ್ಮಳ ಜ್ಞಾನಾಮೃತಂ ತುಂಬಿ ಭೂಮಿಯ ಮೇಲೆ ಬಿದ್ದಿತು. ಆ ಬಿದ್ದ ಭೂಮಿ ಪರಲೋಕ. ಆ ಹಣ್ಣ ಗುರು ಕರುಣವುಳ್ಳವಂಗಲ್ಲದೆ ಮೆಲಲಿಲ್ಲ. ದೀಕ್ಷತ್ರಯದಲ್ಲಿ ಅನುಮಿಷನಾದಂಗಲ್ಲದೆ ಆ ಲೋಕದಲ್ಲಿರಲಿಲ್ಲ. ಆ ಲೋಕದಲ್ಲಿದ್ದವಂಗೆ ಅಜಲೋಕದ ಅಮೃತವನು ನಿತ್ಯವು ಸೇವಿಸಿ ಸತ್ಯಮುಕ್ತನಾಗಿ ಬೇಡಿದವಕ್ಕೆ ಬೇಡಿದ ಪರಿಯ ಕೇವಲವನಿತ್ತು ತಾನು ಕಾಂಕ್ಷೆಗೆ ಹೊರಗಾಗಿ ಕಾಲನ ಕಮ್ಮಟಕ್ಕೆ ಕಳವಣ್ಣವಾಗಿ ನಿತ್ಯಸಂಗಮಕ್ಕೆ ಸಂಯೋಗವಾಗಿ ಕಪಿಲಸಿದ್ಧ ಮ್ಲಕಾರ್ಜುನಯ್ಯನೆಂಬ ಅನಾಹತ ಮೂಲಗುರುವಾಗಿ, ಎನ್ನನಿಷ್ಟಕ್ಕೆ ಪ್ರಾಪ್ತಿಸಿದನಯ್ಯಾ.
--------------
ಸಿದ್ಧರಾಮೇಶ್ವರ
ಶಿವತತ್ವ ಐದು ಅವಾವೆಂದಡೆ; ಶಿವ, ಶಕ್ತಿ, ಸಾದಾಖ್ಯ, ಈಶ್ವರ, ಶುದ್ಧ ವಿದ್ಯೆ- ಇಂತು ಶಿವತತ್ವ ಐದು. ಇನ್ನು ವಿದ್ಯಾತತ್ತ್ವವೆಂತೆಂದಡೆ: ಕಲೆ, ರಾಗ, ನಿಯತಿ, ವಿದ್ಯೆ, ಪುರುಷ, ಪ್ರಕೃತಿ - ಇಂತು ವಿದ್ಯಾತತ್ತ್ವ ಏಳು. ಇನ್ನು ಕರಣಂಗಳೆಂತೆಂದಡೆ: ಚಿತ್ತ, ಬುದ್ಧಿ, ಅಹಂಕಾರ, ಮನ - ಇವು ಕರಣತತ್ತ್ವ ನಾಲ್ಕು. ಇನ್ನು ಇಂದ್ರಿಯಂಗಳೆಂತೆಂದಡೆ: ಶ್ರೋತ್ರ, ತ್ವಕ್ಕು, ನೇತ್ರ, ಜಿಹ್ವೆ, ಘ್ರಾಣ - ಇಂತು ಬುದ್ಧೀಂದ್ರಯಂಗಳು ಐದು. ಇನ್ನು ಕರ್ಮೇಂ್ರಯಂಗಳೆಂತೆಂದಡೆ: ವಾಕ್ಕು, ಪಾದ, ಪಾಣಿ, ಗುಹ್ಯ, ಪಾಯು - ಇಂತು ಕರ್ಮೇಂ್ರಯಂಗಳು ಐದು. ಇನ್ನು ತನ್ಮಾತ್ರಂಗಳೆಂತೆಂದಡೆ: ಶಬ್ದ, ಸ್ಪರ್ಶ, ರೂಪು, ರಸ ಗಂಧ - ಇಂತು ಜ್ಞಾನೇಂದ್ರಿಯ ವಿಷಯ ಐದು. ಇನ್ನು ಕರ್ಮೇಂ್ರಯ ವಿಷಯವೆಂತೆಂದಡೆ: ವಚನ, ಗಮನ, ಆದಾನ, ಆನಂದ, ವಿಸರ್ಜನ ಇಂತು ಕರ್ಮೇಂ್ರಯ ವಿಷಯ ಐದು. ಇನ್ನು ವಾಕ್ಕುಗಳಾವುವೆಂದಡೆ: ಪರಾ, ಪಶ್ಯಂತಿ, ಮಧ್ಯಮೆ, ವೈಖರಿ - ಇಂತು ವಾಕ್ಕು ನಾಲ್ಕು. ಸಾತ್ಪಿ, ರಾಜಸ, ತಾಮಸ - ಇಂತು ಗುಣ ಮೂರು. ರಾಜಸಹಂಕಾರ, ವೈಖರಿಯಹಂಕಾರ, ಭೂತಾಯಹಂಕಾರ -ಇಂತು ಅಹಂಕಾರ ಮೂರು. ಪೃಥ್ವಿ, ಅಪ್ಪು, ಅಗ್ನಿ, ವಾಯು, ಆಕಾಶ - ಇಂತು ಭೂತಂಗಳು ಐದು. ಭೂತಕಾರ್ಯ ಇಪ್ಪತ್ತೈದು - ಅವಾವೆಂದಡೆ: ಅಸ್ಥಿ, ಮಾಂಸ, ತ್ವಕ್, ನಾಡಿ, ರೋಮ - ಈ ಐದು ಪೃಥ್ವೀಪಂಚಕ. ಲಾಲಾ, ಮೂತ್ರ, ಸ್ವೇದ, ಶುಕ್ಲ, ಶೋಣಿಕ - ಈ ಐದು ಅಪ್ಪುವಿನ ಪಂಚಕ. ಕ್ಷುಧೆ, ತೃಷೆ, ನಿದ್ರೆ, ಆಲಸ್ಯ, ಸ್ತ್ರೀಸಂಗ - ಈ ಐದು ಅಗ್ನಿಪಂಚಕ. ಪರಿವ, ಪಾರುವ, ಸುಳಿವ, ನಿಲುವ, ಅಗಲುವ - ಈ ಐದು ವಾಯುಪಂಚಕ. ರಾಗ, ದ್ವೇಷ, ಭಯ, ಲಜ್ಜೆ, ಮೋಹ - ಈ ಐದು ಆಕಾಶವಂಚಕ. ಇಂತೀ ಇಪ್ಪತ್ತೈದು ಭೂತಕಾರ್ಯ ಪಂಚೀಕೃತಗಳು. ಇನ್ನು ದಶವಾಯುಗಳು: ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯ - ಈ ಹತ್ತು ವಾಯುಗಳು, ಇನ್ನು ದಶನಾಡಿಗಳು: ಇಡಾ, ಪಿಂಗಳಾ, ಸುಷುಮ್ನಾ, ಗಾಂಧಾರಿ, ಹಸ್ತಿ, ಜಿಹ್ವೆ, ಪುಷ್ಕರ, ಪಯಸ್ವಿನಿ, ಆಲಂಬು, ಲಕುಹ, ಶಂಕಿನಿ - ಇಂತೀ ಹತ್ತು ನಾಡಿಗಳು. ಇಂತು ತತ್ವ ತೊಂಬತ್ತಾರು ಕೂಡಿಕೊಂಡು ಆತ್ಮನು ಭೂಮಧ್ಯದಲ್ಲಿರ್ದು ಅವಸ್ಥೆಬಡುವುದನು ಹೇಳಿಹೆನು. ಅದೆಂತೆಂದಡೆ ಅವಸ್ಥೆಯ ಕ್ರಮ: ಪ್ರೇರಕಾವಸ್ಥೆ ಒಂದು, ಅಧೋವಸ್ಥೆ ಐದು, ಊಧ್ರ್ವಾವಸ್ಥೆ ಐದು, ಮಧ್ಯಾವಸ್ಥೆ ಐದು, ಕೇವಲಾವಸ್ಥೆ ಒಂದು, ಸಕಲಾವಸ್ಥೆ ಒಂದು, ಶುದ್ಧಾವಸ್ಥೆ ಒಂದು, ನಿರ್ಮಲಾವಸ್ಥೆ ಐದು, ಅಂತೂ ಅವಸ್ಥೆ ಇಪ್ಪತ್ತನಾಲ್ಕು, ಅವರಲ್ಲಿ ಪ್ರೇರಕಾವಸ್ಥೆಯೆಂತೆಂದಡೆ: ತತ್ತ್ವಸಮೂಹಂಗಳನು ಕೂಡಿಕೊಂಡು ಇರ್ದಲ್ಲಿ ಆ ಪುರುಷನು ಪಂಚೇಂ್ರಯಂಗಳಲ್ಲಿ ವಿಷಯಂಗಳು ಅತಿ ಚಮತ್ಕಾರದಲ್ಲಿ ಅರಿವವೇಳೆ ಪ್ರೇರಕಾವಸ್ಥೆಯೆಂದು. ಅದಕ್ಕೆ ಪ್ರೇರಿಸುವ ತತ್ತ್ವಂಗಳಾವುವೆಂದಡೆ- ಶಿವತತ್ತ್ವ ಐದು, ವಿದ್ಯಾತತ್ತ್ವ ಏಳು, ಕರಣಂಗಳು ನಾಲ್ಕು, ಭೂತಂಗಳಲ್ಲಿ ಒಂದು, ಇಂದ್ರಿಯಂಗಳಲ್ಲಿ ಒಂದು -ಇಂತೀ ಹದಿನೆಂಟು ತತ್ವಂಗಳಲ್ಲಿ ವಿಷಯಂಗಳನರಿವನು. ಅದು ಹೇಗೆಂದಡೆ - ಶಿವತತ್ತ್ವ ಐದು, ವಿದ್ಯಾತತ್ತ್ವ ಏಳು, ಕರಣಂಗಳು ನಾಲ್ಕು - ಇಂತು ಹದಿನಾರು ತತ್ತ್ವ. ಆಕಾಶಭೂತವೂ ಶ್ರೋತ್ರೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಶಬ್ದವನದಲ್ಲಿರಿವ; ವಾಯುಭೂತವೂ ತ್ವಗೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಶಬ್ದವನರಿವ; ವಾಯುಭೂತವೂ ತ್ವಗೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಸೋಂಕನರಿವ; ತೇಜಭೂತವೂ ನಯನೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ರೂಪವನರಿವ; ಅಪ್ಪುಭೂತವೂ ಜಿಹ್ವೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ರಸವನರಿವ; ಪೃಥ್ವಿಭೂತವೂ ಪ್ರಾಣೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಗಂಧವನರಿವ. ಇಂತೀ ವಿಷಯಂಗಳನರಿವುದು. ಇದು ಪ್ರೇರಕಾವಸ್ಥೆಯೆಂದೆನಿಸುವದು. ಇನ್ನು ಅಧೋವಸ್ಥೆ ಐದಕ್ಕೆ ವಿವರ: ಪ್ರಥಮದಲ್ಲಿ ಜಾಗ್ರಾವಸ್ಥೆ ಅದಕ್ಕೆ ಪ್ರೇರಿಸುವ ತತ್ತ್ವಂಗಳು ಬಿಟ್ಟಿಹವಾವುವೆಂದಡೆ: ಶಿವತತ್ತ್ವ ಐದು, ಮಾಯಾತತ್ತ್ವ ಒಂದು, ವಿದ್ಯಾತತ್ತ್ವ ಆರು, ಭೂತಂಗಳು ಐದು ಇಂತು ಹದಿನೇಳು ಬಿಟ್ಟಿಹುದು. ಇನ್ನು ಜಾಗ್ರಾವಸ್ಥೆಯಲ್ಲಿಹ ತತ್ತ್ವಗಳೆಷ್ಟೆಂದಡೆ: ಕರಣ ನಾಲ್ಕು, ಬುದ್ಧೀಂದ್ರಿಯ ಐದು, ಕರ್ಮೇಂದ್ರಿಯ ಐದು, ವಿಷಯ ಹತ್ತು, ವಾಯು ಹತ್ತು. ಇಂತು ಮೂವತ್ತನಾಲ್ಕು ತತ್ತ್ವಂಗಳಲ್ಲಿ ಆ ತನು ಕೇಳದೆ ಕೇಳುವ, ಮಾತಾಡದ ಹಾಂಗೆ ಆಲಸ್ಯದಲ್ಲಿ ಮಾತನಾಡುತ್ತಿಹನು, ಇಂತು ಜಾಗ್ರಾವಸ್ಥೆ. ಇನ್ನು ಸ್ವಪ್ನಾವಸ್ಥೆ. ಅದಕ್ಕೆ ಹತ್ತು ತತ್ತ್ವಂಗಳು ಬಿಟ್ಟಿಹವು. ಅವಾವುವೆಂದಡೆ:ಬುದ್ಧೀಂ್ರಯ ಐದು, ಕರ್ಮೇಂದ್ರಿಯ ಐದು. ಲಲಾಟದಲ್ಲಿ ನಿಲುವು ಕಂಠಸ್ಥಾನದಲ್ಲಿ ಇಪ್ಪತ್ತೈದು ತತ್ತ್ವಂಗಳು ಕೂಡಿಕೊಂಡಿಹುದು. ಅದೆಂತೆಂದಡೆ:ಮಾಯೆ ಒಂದು, ವಾಯು ಹತ್ತು, ವಿಷಯ ಹತ್ತು, ಕರಣ ನಾಲ್ಕು ಇಂತು ಇಪ್ಪತ್ತೈದು ತತ್ತ್ವಂಗಳು ಕೂಡಿಕೊಂಡು ಸ್ವಪ್ನಂಗಳ ಕಾಣುತಿಹನು. ಇದು ಸ್ವಪ್ನಾವಸ್ಥೆ. ಇನ್ನು ಸುಷುಪ್ತಾವಸ್ಥೆಗೆ ಬಹಲ್ಲಿ ಕಂಠಸ್ಥಾನದಲ್ಲಿ ನಿಂದ ತತ್ತ್ವಂಗಳಾವಾವವೆಂದಡೆ- ಮಾಯೆ ಒಂದು, ವಾಯು ಒಂಬತ್ತು ವಿಷಯ ಹತ್ತು, ಕರಣ ಮೂರು- ಇಂತು ಇಪ್ಪತ್ತಮೂರು ತತ್ತ್ವ. ಇನ್ನು ಹೃದಯಸ್ಥಾನದಲ್ಲಿ ಕೂಡಿಹ ತತ್ತ್ವ ಆವಾವೆಂದಡೆ: ಪ್ರಾಣವಾಯು ಒಂದು, ಪ್ರಕೃತಿ ಒಂದು, ಚಿತ್ತ ಒಂದು -ಇಂತು ಸುಷುಪ್ತಾವಸ್ಥೆಯಲ್ಲಿ ತತ್ತ್ವ. ಇನ್ನು ತೂರ್ಯಾವಸ್ಥೆಗೆ ಬಹಾಗ ಹೃದಯದಲ್ಲಿ ನಿಂದ ತತ್ತ್ವ ಚಿತ್ತ ಒಂದು. ನಾಬ್ಥಿಸ್ಥಾನದಲ್ಲಿ ತೂರ್ಯಾವಸ್ಥೆಯಲ್ಲಿಹ ತತ್ತ್ವ ಪ್ರಾಣವಾಯು ಒಂದು, ಪ್ರಕೃತಿ ಒಂದು. ಅತೀತಾವಸ್ಥೆಗೆ ಹೋಹಾಗ ನಾಬ್ಥಿಸ್ಥಾನದಲ್ಲಿ ತೂರ್ಯಾವಸ್ಥೆಯಲ್ಲಿ ಪ್ರಾಣವಾಯುವುಳಿದು ಅತೀತಾವಸ್ಥೆಯಲ್ಲಿ ಪ್ರಕೃತಿಗೂಡಿ ಮೂಲಾಧಾರದಲ್ಲಿ ಆಣವಮಲಯುಕ್ತವಾಗಿ ಏನೆಂದರಿಯದೆ ಇಹುದು, ಇಂತಿದು ಅಧೋವಸ್ಥೆ. ಇನ್ನು ಊಧ್ರ್ವಾವಸ್ಥೆ, ಅತೀತದಲ್ಲಿ ಪ್ರಕೃತಿಕಾರ್ಯಂಗಳೆಲ್ಲವನೂ ಬಿಟ್ಟು, ತತ್ತ್ವಂಗಳೊಂದೂ ಇಲ್ಲದೆ, ಅಣವಮಲಸ್ವರೂಪವಾಗಿ ಮೂಲಾಧಾರದಲ್ಲಿ ಬ್ದಿರ್ದ ಆತ್ಮನಿಗೆ ಪರಮೇಶ್ವರನ ಕರುಣದಿಂದ ಕ್ರಿಯಾಶಕ್ತಿ, ಶಕ್ತಿತತ್ತ್ವಮಂ ಪ್ರೇರಿಸುವುದು. ಆ ಶಕ್ತಿ ಕಲೆ, ಕಾಲ, ನಿಯತಿಗಳಂ ಪ್ರೇರಿಸುವುದು. ಆ ವೇಳೆಯಲ್ಲಿ ಸೂಕ್ಷೆ ್ಮಯೆಂಬ ವಾಕ್ಕು ಕೂಡುವುದು. ಇಂತು ಅತೀತದಲ್ಲಿ ಅರುಹಿಸುವ ತತ್ತ್ವಂಗಳು: ಶಕ್ತಿತತ್ತ್ವ, ಕಲೆ, ಕಾಲ, ನಿಯತಿ, ಸೂಕ್ಷೆ ್ಮ ಇಂತು ತತ್ತ್ವಂಗಳು ಐದು. ಇನ್ನು ತೂರ್ಯಾವಸ್ಥೆಗೆ ಬಹಾಗ ಹಿಂದೆ ಹೇಳಿದ ತತ್ತ್ವ ಐದು, ಪಶ್ಯಂತಿಯೆಂಬ ವಾಕ್ಕು, ಪ್ರಾಣವಾಯು ಕೂಡಿ ತತ್ತ್ವ ಏಳು ತೂರ್ಯಾವಸ್ಥೆಯಲ್ಲಿ ಪ್ರೇರಿಸುವುದು: ಹಿಂದೆ ಹೇಳಿದ ತತ್ತ್ವ ಏಳು ಕೂಡಿ, ಹೃದಯಸ್ಥಾನದಲ್ಲಿ ಮಧ್ಯಮೆ, ಚಿತ್ತ - ಎರಡು ಕೂಡುತ್ತಿಹವು. ಆ ವೇಳೆಯಲ್ಲಿ ಜ್ಞಾನಶಕ್ತಿ ಶುದ್ಧವಿದ್ಯಾತತ್ತ್ವಮಂ ಪ್ರೇರಿಸುವುದು. ಆ ಶುದ್ಧವಿದ್ಯಾತತ್ತ್ವ ಆತ್ಮಂಗೆ ಅರಿವನೆಬ್ಬಿಸುವುದು. ಇಚ್ಛಾಶಕ್ತಿ ಈಶ್ವರತತ್ತ್ವಮಂ ಪ್ರೇರಿಸುವುದು; ಈಶ್ವರತತ್ತ್ವ ರಾಗತತ್ತ್ವಮಂ ಪ್ರೇರಿಸುವುದು; ರಾಗತತ್ತ್ವ ಆತ್ಮಂಗೆ ಇಚ್ಛೆಯನೆಬ್ಬಿಸುವುದು. ಆಶಕ್ತಿ ಸಾದಾಖ್ಯತತ್ತ್ವಮಂ ಪ್ರೇರಿಸುವುದು; ಸಾದಾಖ್ಯತತ್ತ್ವ ಪ್ರಕ್ಕೃತಿತ್ತ್ವಮಂ ಪ್ರೇರಿಸುವುದು; ಪರಾಶಕ್ತಿ ಶಿವತತ್ತ್ವಮಂ ಪ್ರೇರಿಸುವುದು; ಶಿವತತ್ತ್ವ ಗುಣತತ್ತ್ವಮಂ ಪ್ರೇರಿಸುವುದು. ಇಂತು ಹದಿನೆಂಟು ತತ್ತ್ವ ಆವಾವವೆಂದಡೆ: ಪಂಚಶಕ್ತಿ ಹೊರಗಾಗಿ ಶಿವತತ್ತ್ವ ಐದು, ವಿದ್ಯಾತತ್ತ್ವ ಐದು, ಪ್ರಾಣವಾಯು ಒಂದು, ಪ್ರಕೃತಿ ಒಂದು, ಗುಣ ಮೂರು, ಚಿತ್ತ ಒಂದು, ಪುರುಷ ಒಂದು. ಇಂತು ತತ್ತ್ವ ಹದಿನೇಳು ಸುಷುಪ್ತಾವಸ್ಥೆಯಲ್ಲಿ ಅರುಹಿಸುವುವು. ಇನ್ನು ಸ್ವಪ್ನಾವಸ್ಥೆಯ ಕಂಠದಲ್ಲಿಹ ತತ್ತ್ವ: ಜ್ಞಾನೇಂದ್ರಿಯ ವಿಷಯ ಹತ್ತು, ಕರ್ಮೇಂದ್ರಿಯ ವಿಷಯ ಹತ್ತು, ಪ್ರಾಣವಾಯು ಉಳಿಯೆ, ವಾಯುಚಿತ್ತ ಉಳಿಯೆ, ತ್ರಿಕರಣ ಅಹಂಕಾರ ಮೂರು, ವೈಖರಿಯ ವಾಕ್ಕು ಒಂದು ಇಂತು ಇಪ್ಪತ್ತನಾಲ್ಕು ತತ್ತ್ವ. ಸುಷುಪ್ತಾವಸ್ಥೆಯಲ್ಲಿ ಹಿಂದೆ ಹೇಳಿದ ತತ್ತ್ವ ಹದಿನೇಳು ಕೂಡಿ ತತ್ತ್ವ ನಲವತ್ತೊಂದು ಸ್ವಪ್ನಾವಸ್ಥೆಯಲ್ಲಿ ಕೂಡಿಹವು. ಆಗ ತನ್ನೊಳಗೆ ಅರುಹಿಸುವ ಪ್ರಕಾರವೆಂತೆಂದಡೆ: ಚಿತ್ತ, ಬುದ್ಧಿ, ಅಹಂಕಾರ, ಮನ, ಹೃದಯ ಈ ಐದು. ಚಿತ್ತವನು ಆಕಾರ ಪ್ರೇರಿಸುವುದು. ಆ ಅಕಾರವನು ಬ್ರಹ್ಮ ಪ್ರೇರಿಸುವನು, ಬುದ್ಧಿಯನು ಉಕಾರ ಪ್ರೇರಿಸುವುದು; ಉಕಾರವನು ವಿಷ್ಣು ಪ್ರೇರಿಸುವನು, ಅಹಂಕಾರವನು ಮಕಾರ ಪ್ರೇರಿಸುವುದು; ಮಕಾರವನು ರುದ್ರ ಪ್ರೇರಿಸುವನು, ಮನವನು ಬಿಂದು ಪ್ರೇರಿಸುವುದು; ಬಿಂದುವನು ಈಶ್ವರ ಪ್ರೇರಿಸುವನು; ಹೃದಯವನು ನಾದ ಪ್ರೇರಿಸುವುದು; ನಾದವನು ಸದಾಶಿವ ಪ್ರೇರಿಸುವನು. ಈ ಹದಿನೈದು ತನ್ನೊಳಗೆ ಸೂಕ್ಷ ್ಮಶರೀರದಲ್ಲಿಹುದು. ...........ಗೀ(?) ಅಷ್ಟತನುವಿನಿಂದ ಸ್ವರ್ಗನರಕವನರಿವನು. ಮುಂದೆ ಜಾಗ್ರಾವಸ್ಥೆಯಲ್ಲಿ ಅರುಹಿಸುವ ತತ್ತ್ವ ಅವಾವವೆಂದಡೆ- ಭೂತ ಐದು, ಉಭಯೇಂದ್ರಿಯ ಹತ್ತು, ಭೂತಕಾರ್ಯ ಇಪ್ಪತ್ತೈದು, ನಾಡಿ ಹತ್ತು, ಅಂತು ತತ್ತ್ವ ನಲವತ್ತೊಂದು. ಅಂತು ಕೂಡಿ ತತ್ತ್ವ ತೊಂಬತ್ತೊಂದು. ಇಂತಿದು ಊಧ್ರ್ವಾವಸ್ಥೆ. ಇನ್ನು ಸಕಲಾವಸ್ಥೆಯೆಂತೆಂದಡೆ: ತೊಂಬತ್ತೊಂದು ತತ್ತ್ವ ಅವರಲ್ಲಿ ಪ್ರೇರಕತತ್ವವೊಂದು ಪ್ರೇರಿಸುವಲ್ಲಿ ಸಕಲಾವಸ್ಥೆ. ಅದು ಶಿವನನೂ ತನ್ನನೂ ಪಾಶಪಂಚಕವನು ಅರಿಯದೆ ಎಲ್ಲ ವಿಷಯಂಗಳನು ಅರಿವುತ್ತಿಹುದು. ಇನ್ನು ಮಧ್ಯಮಾವಸ್ಥೆಯೆಂತೆಂದಡೆ- ಹಿಂದೆ ಕಂಡವನ ಈಗಲೆಂದು ಅರಿಯಹುದೀಗ ಜಾಗ್ರ ಅತೀತ. ಹಿಂದೆ ಕಂಡವನ ಅರಿದ ಹಾಂಗಿಹುದೀಗ ಜಾಗ್ರ ತುರೀಯ. ಹಿಂದೆ ಕಂಡವನ ಮೆಲ್ಲನೆಚ್ಚತ್ತು ಅರಿವುದು ಜಾಗ್ರದ ಸುಷುಪ್ತಿ. ಹಿಂದೆ ಕಂಡವನ ಕಂಡಾಗಲೆ ಅರಿವುದು ಜಾಗ್ರದ ಸ್ವಪ್ನ. ಹಿಂದೆ ಕಂಡವನ ಹೆಸರು, ಇದ್ದ ಸ್ಥಲ, ಅವನ ಕಾಯಕ ಮುಂತಾಗಿ ಚೆನ್ನಾಗಿ ಅರಿವುದು ಜಾಗ್ರದ ಜಾಗ್ರ. ಅದೆಂತೆಂದಡೆ, ಜಾಗ್ರದಲ್ಲಿ ಪುರುಷತತ್ತ್ವದಲ್ಲಿ ಎಲ್ಲ ತತ್ತ್ವಗಳು ಕೂಡಿದ ಕಾರಣಂದ ತಾನೇನ ನೆನೆದಿದ್ದುದನು ಮರೆವುದು ಜಾಗ್ರ ಅತೀತ. ಆ ಪುರುಷತತ್ತ್ವದಲ್ಲಿ ಪ್ರಾಣವಾಯು ಕೂಡಲು ನೆನೆದುದನು ಹೇಳಿಹೆನೆಂದಡೆ ತೋರುವ ಹಾಂಗೆ ಇಹುದು ತೋರದಿಹುದು ಜಾಗ್ರದ ತುರೀಯ. ಆ ಪುರುಷತತ್ತ್ವದಲ್ಲಿ ಪ್ರಾಣವಾಯು ಚಿತ್ತವು ಕೂಡಲು ನೆನೆದುದನು ಮೆಲ್ಲನೆಚ್ಚತ್ತು ಅರಿದು ಹೇಳುವುದು ಜಾಗ್ರದ ಸುಷುಪ್ತಿ, ಆ ಪುರುಷತತ್ತ್ವದಲ್ಲಿ ಕರಣ ನಾಲ್ಕು, ಇಂದ್ರಿಯ ಹತ್ತು, ವಾಯು ಹತ್ತು, ವಿಷಯ ಹತ್ತು ಅಂತೂ ತತ್ತ್ವ ಮೂವತ್ತನಾಲ್ಕು ಕೂಡಲಾಗಿ, ತಾ ನೆನೆದುದನು ಇದ್ದುದನು ಚೆನ್ನಾಗಿ ಅರಿದು ವಿವರದಿಂದ ಹೇಳುವುದು ಇದು ಜಾಗ್ರದ ಜಾಗ್ರ. ಇಂತಿದು ಮಾಧ್ಯಮಾವಸ್ಥೆ. ಇನ್ನು ಕೇವಲಾವಸ್ಥೆಯೆಂತೆಂದಡೆ: ಶುದ್ಧತತ್ತ್ವ ವಿದ್ಯಾತತ್ತ್ವವನೆಲ್ಲವ ಬಿಟ್ಟು ಆಣವಮಲದಲ್ಲಿ ಆಣವಸ್ವರೂಪಾಗಿ ಕಣ್ಗತ್ತಲೆಯಲ್ಲಿ ಏನೂ ಕಾಣದ ಕಣ್ಣಿನ ಹಾಂಗೆ ಇದ್ದುದೀಗ ಕೇವಲಾವಸ್ಥೆ. ಇನ್ನು ಶುದ್ಧಾವಸ್ಥೆಯೆಂತೆಂದಡೆ: ಕರ್ಮಸಮಾನದಲ್ಲಿ ಶಕ್ತಿಪಾತವಾಗಿ,ತ್ರಿಪದಾರ್ಥಜ್ಞಾನವಾಗಿ, ದಿಟವೆಂಬಂತೆ ತೋರುತ್ತಿಹ ದೇಹಾಪ್ರಪಂಚುವನು ಸಟೆಯೆಂದು ಕಸವ ಕಳೆವ ಹಾಂಗೆ ಕಳೆದು, ತತ್ತ್ವಂಗಳೊಳಗೆ ಇದ್ದು ತತ್ತ್ವಂಗಳಿಗೆ ಅನ್ಯವಾಗಿ, ಆ ತತ್ತ್ವಂಗಳನು ಅರಿದ ಸಕಲಾವಸ್ಥೆಯೆಂಬ ಕೇವಲಾವಸ್ಥೆಯೆಂಬ ಈ ಎರಡು ಅವಸ್ಥೆಗಳೂ ತನ್ನನು ಶಿವನನು ಅರಿವುದಕ್ಕೆ ಪ್ರಯೋಜನವಲ್ಲವೆಂದು ಎರಡವಸ್ಥೆಯನೂ ಬಿಟ್ಟು ಸಕಲವನೂ ಹೊದ್ದದೆ ಕೇವಲವನೂ ಹೊದ್ದದೆ ತ್ರಾಸಿನ ಮುಳ್ಳು ನಿಂದ ಹಾಂಗೆ ನಿಂದುದು ಶುದ್ಧಾವಸ್ಥೆ. ಇದು ಶಿವನ ಶರಣರಿಗಲ್ಲದೆ ಇಲ್ಲ. ಇನ್ನು ನಿರ್ಮಲಾವಸ್ಥೆ ಎಂತೆಂದಡೆ- ಶಿವಜ್ಞಾನದಲ್ಲಿ ಬೋಧವನಳಿದು ಜ್ಞೇಯದೊಳು ಕೂಡಿಹ ಜೀವನ್ಮುಕ್ತರಿಗೆ ಪಂಚಾವಸ್ಥೆಗಳು. ಆ ಅವಸ್ಥೆಗಳಲ್ಲಿ ತತ್ತ್ವಗಳಾವಾವೆಂದಡೆ: ಶಿವತತ್ತ್ವ, ಶಕ್ತಿತತ್ತ್ವ, ಸಾದಾಖ್ಯತತ್ತ್ವ, ಈಶ್ವರತತ್ತ್ವ, ಶುದ್ಧ ವಿದ್ಯಾತತ್ತ್ವ ಈ ಐದು ಮೊದಲಾಗಿ ಪರಾ, ಆದಿ, ಇಚ್ಛೆ, ಜ್ಞಾನ, ಕ್ರಿಯೆಯೆಂಬ ಶಕ್ತಿ ಪಂಚಕಗಳು ಉಸುರಾಗಿ ಜಾಗ್ರಾವಸ್ಥೆಯಲ್ಲಿ ಅರಿವುತ್ತಿಹನು. ಕ್ರಿಯಾಶಕ್ತಿ ಶಕ್ತಿತತ್ತ್ವಮಂ ಬಿಟ್ಟು ಉಳಿದ ಶಕ್ತಿ ನಾಲ್ಕು ಒಡಲುಸುರಾಗಿ ಅರಿಯೆ ಸ್ವಪ್ನಾವಸ್ಥೆ. ಜ್ಞಾನಶಕ್ತಿ ಶುದ್ಧವಿದ್ಯಾತತ್ತ್ವಮಂ ಬಿಟ್ಟು ಕಳೆದು ಉಳಿದ ಶಕ್ತಿ ಮೂರರಲ್ಲಿ ಅರಿಯೆ ಸುಷುಪ್ತಾವಸ್ಥೆ. ಇಚ್ಛಾಶಕ್ತಿ ಈಶ್ವರತತ್ತ್ವಮಂ ಬಿಟ್ಟು ಕಳೆದು ಉಳಿದ ಶಕ್ತಿ ಎರಡರಲ್ಲಿ ಅರಿವುದು ತೂರ್ಯಾವಸ್ಥೆ. ಆಶಕ್ತಿ ಸಾದಾಖ್ಯತತ್ತ್ವವೂ ಬಿಟ್ಟು ಕಳೆದು ಉಳಿದ ಪರಾಶಕ್ತಿ ಒಂದು ಶಿವತತ್ತ್ವ ಒಂದರಲ್ಲಿ ಅರಿಯೆ ನಿರ್ಮಲದ ಅತೀತಾವಸ್ಥೆ. ಇನ್ನು ಈ ಶಕ್ತಿ ಶಿವತತ್ತ್ವಂಗಳೆ ಒಡಲುಸುರಾಗಿ ಇದ್ದಲ್ಲಿ ಶಿವನಲ್ಲದೆ ಮತ್ತೊಂದು ಏನೂ ತೋರದು. ಅಂಥ ಜೀವನ್ಮುಕ್ತರು ನಿರ್ಮಲಜಾಗ್ರದಲ್ಲಿ ಎಂತು ಅರಿವುತ್ತಿಪ್ಪರೆಂದಡೆ ಆ ಪರಮಾವಸ್ಥೆಯನೂ ಅನುಭವದಲ್ಲಿ ಅರಿವುದು, ಮಲಪಂಚಕಗಳನು ಅರುಹಿಸುವ ಸದಮಲ ಶಿವಜ್ಞಾನ ಪರೆ ಮೊದಲಾದ ಪೂರ್ಣ ಬೋಧದಲ್ಲಿ ಕೂಡಿ ತಾನು ಇಲ್ಲದಿರುವಂಧು ಏನೂ ತೋರದ ಪೂರ್ಣ ಬೋಧವಾಗಿ ನಿಂದುದು ನಿರ್ಮಲಜಾಗ್ರ. ಇನ್ನು ಪರಾಶಕ್ತಿಯನೂ ಶಿವತತ್ತ್ವವನೂ ಮೀರಿ, ಪರದಲಿ ಬೆರೆದು, ಅದ್ವೆ ೈತವೂ ಅಲ್ಲದೆ, ದ್ವೆ ೈತವೂ ಅಲ್ಲದೆ, ದ್ವೆ ೈತಾದ್ವೆ ೈತವೂ ಅಲ್ಲದೆ ಇನತೇಜದಲ್ಲಿ ಕಣ್ಣು ತೇಜ ಕೂಡಿದ ಹಾಂಗೆ ಆಣವದ ಅಣುವಿನ ಹಾಂಗೆ ತಾನು ಇಲ್ಲದೆ ಇಹನು. ಇದು ಶಿವಾದ್ವೆ ೈತ. ಇಂತಲ್ಲದೆ ಆತ್ಮ ಆತ್ಮ ಕೆಟ್ಟಡೆ, ಆತ್ಮವರ್ಗ ಮುಕ್ತಿಸುಖವಿಲ್ಲ, ಅಳಿದ ಠಾವಿನಲ್ಲಿ ಹುಟ್ಟುವುದಾಗಿ, ಶಿವ ತಾನೆ ಆತ್ಮನಾಗಿ ಹುಟ್ಟುವನಹುದು: ಶಿವನಲ್ಲಿ ಹುಟ್ಟಿ ಮಲ ಉಳ್ಳದಹುಲ್ಲ. ಶಿವ ತಾನೆ ಹುಟ್ಟಿಸಿ ನರಕ - ಸ್ವರ್ಗದ ಮಾನವನಹನು, ಪಕ್ಷಪ್ಕಾಯಹನು, ನಿಃಕರುಣಿಯಹನು, ವಿಕಾರಿಯಹನು. ಶಿವನ್ಲ ಕೂಡದೆ ಬೇರಾಗಿ ಇಹನೆಂದಡೆ, ಮುಕ್ತಿಯೆಂಬ ಮಾತು ಇಲ್ಲವಹುದು. ಪಂಚಕೃತ್ಯವ ಮಾಡಲು ಕಾರಣವಿಲ್ಲ ಒಂದಾಗೆ! ಎರಡಾಗದೆ ಭೇದಾಭೇದವಾಗಿಹನೆಂದಡೆ ಶಿವಭಕ್ತಿಯನೂ ಶಿವಕ್ರಿಯೆಗಳನೂ ಮಾಡಿ ಶಿವನ ಕೂಡಿಹನೆಂದೆನ್ನಬೇಡ! ಮುನ್ನವೆ ಒಂದಾಗಿ ಇದ್ದನಾಗಿ, ಈ ಭೇದವ ತಿಳಿಯಬಲ್ಲಡೆ ಆತನೆ ಶರಣ ಕಾಣಾ, ಕಪಿಲಸಿದ್ಧಮಲ್ಲಿಕಾರ್ಜುನಾ
--------------
ಸಿದ್ಧರಾಮೇಶ್ವರ
ಬಾರದಿರು ಬ್ರಹ್ಮನ ಅಂಡದಲ್ಲಿ, ಬೆಳೆಯದಿರು ವಿಷ್ಣುವಿನ ಕುಕ್ಷಿಯಲ್ಲಿ, ಸಾಯದಿರು ರುದ್ರನ ಹೊಡೆಗಿಚ್ಚಿನಲ್ಲಿ. ಹುಟ್ಟಿದ ಅಂಡವನೊಡೆ, ಬೆಳೆದ ಕುಕ್ಷಿಯ ಕುಕ್ಕು, ಹೊಯ್ವ ಹೊಡೆಗಿಚ್ಚ ಕೆಡಿಸು. ಮೂರುಬಟ್ಟೆಯ ಮುದಿಡು, ಒಂದರಲ್ಲಿ ನಿಂದು ನೋಡು. ಆ ಒಂದರಲ್ಲಿ ಸಂದಿಲ್ಲದ ಅಂಗವೇ ನೀನಾಗು ಸದಾಶಿವಮೂರ್ತಿಲಿಂಗಕ್ಕೆ.
--------------
ಅರಿವಿನ ಮಾರಿತಂದೆ
ಪ್ರಥಮ ಮೂರು, ಆಶ್ರಯ ನಾಲ್ಕು, ಸ್ಥಲವಾರು, ಯೋಗವೆಂಟು, ಸಂಯೋಗವೆರಡು, ವಿಯೋಗವೊಂದು, ವಿಭೇದವೆರಡು, ಭೇದವೊಂದು, ಅರಿಕೆಯೆರಡು ಅರಿದುದೊಂದು ಆಕಾಶ ಮೂರು ಅವಾಕಾಶವೆರಡು, ಮಹದಾಕಾಶ ನಾಲ್ಕು. ಇಂತಿವೆಲ್ಲವೂ ಮಹಾಪ್ರಕಾಶದ ಪ್ರಭೆ ಪ್ರಜ್ವಲವಾಗಿ ಉಭಯನಾಮರೂಪ ತಾಳ್ದು, ವಂಶ ಮೂರರಲ್ಲಿ ಅಳವಟ್ಟು ಸ್ಥಲವಾರರಲ್ಲಿ ಬೆಳೆದು, ಕುಳವೆಂಟರಲ್ಲಿ ಓಲೈಸಿ ಕುಳ ನಾಲ್ಕರಲ್ಲಿ ಒಕ್ಕಿ, ಫಲ ಮೂರರಲ್ಲಿ ಅಳೆದು ಹಗ ಒಂದರಲ್ಲಿ ತುಂಬಿತ್ತು. ಇಂತೀ ವಿವಿಧ ಸ್ಥಲಂಗಳ ಹೊಲಬನರಿತು ವರ್ತಕಕ್ಕೆ ಕ್ರೀ ಶುದ್ಧ, ಅರಿವಿಂಗೆ ಬಿಡುಗಡೆ ಶುದ್ಧ ಬಿಡುಗಡೆ ಎರಡು ಏಕವಾದಲ್ಲಿ ಸ್ಥಲ ನಿರ್ವಾಹ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ. ಮಾತುಳಂಗ ಮಧುಕೇಶ್ವರನು. || 59 ||
--------------
ದಾಸೋಹದ ಸಂಗಣ್ಣ
ಒಂದ ಬಿಟ್ಟು ಒಂದ ಕಂಡೆಹೆನೆಂದಡೆ, ಅದು ಕಾಣಬಾರದ ಬಯಲು. ಒಂದರಲ್ಲಿ ಸಲೆ ಸಂದು ಹಿಂಗದ ಭಾವ ನೆಲೆಗೊಂಡಲ್ಲಿ ಅಮರೇಶ್ವರಲಿಂಗವು ತಾನೆ.
--------------
ಆಯ್ದಕ್ಕಿ ಮಾರಯ್ಯ
ಕಾಯಿ ಒಂದರಲ್ಲಿ ಶಾಖೆ ಹಲವಹ ತೆರದಂತೆ, ಅರಿವು ಒಂದೆ, ರೂಪು ಭಿನ್ನಂಗಳಾಗಿ ತೋರುವ ತೆರದಂತೆ, ಘಟದ ವಾರಿಯಲ್ಲಿ ತೋರುವ ಇಂದುವಿನಂತೆ, ಅದೊಂದೆ ಭೇದ, ಏಣಾಂಕಧರ ಸೋಮೇಶ್ವರಲಿಂಗದಲ್ಲಿ.
--------------
ಬಿಬ್ಬಿ ಬಾಚಯ್ಯ
ಇನ್ನಷ್ಟು ... -->