>ಶೈವ ಸೈವೆರಗಾದ, ಪಾಶುಪತಿ ಪಥವನರಿಯ ಕಾಳಾಮುಖಿ ಕಂಗೆಟ್ಟ, ಮಹಾವ್ರತಿ
ಮದವೇರಿದ
ಸನ್ಯಾಸಿ ಪಾಷಂಡಿಯಾದ, ಕಾಪಾಲಿ ಮರುಳಾಗಿ ತಿರುಗಿದ. ಈ ಆರು ಭಕ್ತಿಸ್ಥಲಕ್ಕೆ
ಸಲ್ಲವು ಕೇಳಿರಣ್ಣಾ- ಏಳೇಳು ಭವದಲ್ಲಿ ಭವಿಯಾಗಿ ಬಂದು, ಶ್ರೀಗುರುಕಟಾಕ್ಷ
ನಿರೀಕ್ಷಣೆಯಿಂದ ಪ್ರಾಣದಮೇಲೆ ಲಿಂಗಪ್ರತಿಷೆ*ಯಂ ಮಾಡಿಕೊಂಡು ಆರರಿಂದ ಮೀರಿದ
ಸ್ಥಲವಿಟ್ಟು ವೀರಮಾಹೇಶ್ವರತ್ವಮಂ ಪಡೆದು ಮರಳಿ ತನ್ನ ಕುಲವನರಿಸಿದರೆ
ಒಡೆದ ಮಡಕೆಯ ಓಡಿನಂತಹನು ಕೇಳಿರಣ್ಣಾ. ತನ್ನ ಕುಲವೆಂದು ಪ್ರಾಣಸ್ನೇಹ
ಮಾಯಾಮೋಹ ಕಿಂಚಿತ್ ಮಾತ್ರ ಬೆರಸಿದರೆ, ಅವ ಪಂಚಮಹಾಪಾತಕಿ, ರೌರವ
ನಾರಕಿ. ಅವನ ಭಕ್ತನೆಂದು ನೋಡಿದಡೆ, ನುಡಿಸಿದಡೆ, ಸಪಂಕ್ತಿಯಲ್ಲಿ ಕುಳಿತಡೆ,
ಸಂಭಾಷಣೆಯ ಮಾಡಿದಡೆ, ಕೈವೊಡ್ಡಿ ಬೇಡಿದಡೆ ಅವಂಗೆ ಕುಂಭೀಪಾತಕ
ನಾಯಕನರಕ ಕೇಳಿರಣ್ಣಾ.
ಭಕ್ತಂಗೆ ಭವಿನೇಮಸ್ತರು ಸಲಲಾಗದು.
ಭವಿ ಶ್ವಪಚ, ನೇಮಸ್ತ ಸಮ್ಮಗಾರ- ಇವರಿಬ್ಬರನು ಸತಿಸುತ ಮಿತ್ರರೆಂದು
ಮಠಮಂ ಹೊಗಿಸಿದಡೆ ಅನ್ನಮನಿಕ್ಕಿದಡೆ;
ಸುರೆಯ ಮಡಕೆಯಂ ತೊಳೆದು ಘೃತಮಂ ತುಂಬಿ ಶ್ವಾನನಂ ಕರೆದು ತಿನಿಸಿ,
ಮಿಕ್ಕುದನು ತಾನು ಭುಂಜಿಸಿದಂತೆ ಕೇಳಿರಣ್ಣಾ.
ಭಕ್ತ ಲಿಂಗಾರ್ಚನೆಯ ಮಾಡಿದ ಪವಿತ್ರ ಭಾಜನಮಂ ಶ್ವಾನ ಸೂಕರ ಕುಕ್ಕುಟ
ಮಾರ್ಜಾಲಂಗಳು ಮುಟ್ಟಿದಡೆ ಅವರ ಕೂಡೆ ಸಹಭೋಜನವ ಮಾಡಿದಂತೆ.
ಗುರುಲಿಂಗಜಂಗಮಕ್ಕೆ ಅರ್ಪಿತವ ಮಾಡಿ, ಒಕ್ಕುಮಿಕ್ಕ ಪ್ರಸಾದವ ಭೋಗಿಸುವಲ್ಲಿ
ಪದಾರ್ಥವೆಂದು ಭಾವಿಸಿದಡೆ ಪ್ರಸಾದದ್ರೋಹ. ಜಂಗಮದಲ್ಲಿ ಅನೃತ ಅಸ್ಥಿರವಾಕ್ಯ
ಪಂಕ್ತಿಭೇದ ಉದಾಸೀನ, ನಿರ್ದಯೆ, ಇಷ್ಟು (ಇರ್ದಡೆ) ಜಂಗಮದ್ರೋಹ. ಲಿಂಗದಲ್ಲಿ
ತ್ರಿಕಾಲಪೂಜೆ ಪ್ರೀತಿ ಪ್ರೇಮ ಸ್ನೇಹ ಮೋಹ -ಇಂತೀ ಐದು ಇಲ್ಲದಿರುವದೆ
ಲಿಂಗದ್ರೋಹ ಗುರುವಿನಲ್ಲಿ ಅಹಂಕಾರ, ಭಯವಿಲ್ಲದಿಹುದು, ಸಮಪಂಕ್ತಿಯಲ್ಲಿ
ಕುಳ್ಳಿರುವುದು
ಸಂಭಾಷಣೆಯ ಮಾಡುವುದು, ಕೈವೊಡ್ಡಿ ಬೇಡುವುದು- ಇಷ್ಟು
ಗುರುದ್ರೋಹ. ಇದು ಕಾರಣ ಗುರುಲಿಂಗಜಂಗಮಕ್ಕೆ, ತನುಮನಧನವ
ಸಮರ್ಪಿಸಿ ಏಕಲಿಂಗನಿಷಾ*ಪರನಾಗಿ, ಭಕ್ತಕಾಯ ಮಮಕಾಯವೆಂಬ ಶಬ್ದಕ್ಕೆ
ಸಂದು, ಪ್ರಸಾದವೆಂದು ಕೊಂಡು ಎಂಜಲೆಂದು ಕೈತೊಳೆದಡೆ ಅಘೋರನರಕ
ತಪ್ಪದು ಕೂಡಲಚೆನ್ನಸಂಗಮದೇವಯ್ಯಾ.