ಅಥವಾ

ಒಟ್ಟು 24 ಕಡೆಗಳಲ್ಲಿ , 12 ವಚನಕಾರರು , 15 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಒಬ್ಬರು ನಡೆದಾಚರಣೆಯಲ್ಲಿ ನಡೆಯರು. ಒಬ್ಬರು ಹಿಡಿದ ಶೀಲವ ಹಿಡಿಯರು. ಒಬ್ಬರು ನುಡಿದ ಭಾಷೆಯ ನುಡಿಯರು. ಅದೇನು ಕಾರಣವೆಂದೊಡೆ : ತಮ್ಮ ಲಿಂಗಮಚ್ಚಿ ನಡೆವರು. ತಮ್ಮ ಲಿಂಗಮಚ್ಚಿ ಹಿಡಿವರು. ತಮ್ಮ ಲಿಂಗಮಚ್ಚಿ ನುಡಿವರು. ಇದು ಕಾರಣ. ಅಖಂಡೇಶ್ವರಾ, ನಿಮ್ಮ ಶರಣರು ಪರಮ ಸ್ವತಂತ್ರಶೀಲರು.
--------------
ಷಣ್ಮುಖಸ್ವಾಮಿ
ಕಾಶಿಯಲ್ಲಿಪ್ಪ ಈಶನನರಿಯದ ಮೂವರ ಕೊರಳು ಕೈಗಳು ಮುರಿದು ಬಿದ್ದವು. ಕೈಲಾಸದಲ್ಲಿಪ್ಪ ಈಶನನರಿಯದ ಮೂವರ ದೇಹ ಕಾಲು ಕೈಗಳು ಮುರಿದುಬಿದ್ದವು. ಶ್ರೀಶೈಲದಲ್ಲಿಪ್ಪ ಈಶನನರಿಯದ ಮೂವರ ದೇಹ ಕರುಳು ತೊಗಲುಗಳು ಉದುರಿಬಿದ್ದವು. ಸಮುದ್ರದಲ್ಲಿಪ್ಪ ಈಶನನರಿಯದಿಬ್ಬರು ಒಬ್ಬರ ಹೊಟ್ಟೆಯ ಒಬ್ಬರು ಹೊಕ್ಕು ಬಿದ್ದರು. ಇಂತೀ ದೇವ ದಾನವ ಮಾನವರು ಮೊದಲಾದ ಸಕಲರೂ ಮಹಾದಾನಿ ಸೊಡ್ಡಳನನರಿಯದೆ ತರ್ಕಿಸಿ, ಕೆಟ್ಟುಹೋದರು.
--------------
ಸೊಡ್ಡಳ ಬಾಚರಸ
ಒಬ್ಬರುತ್ತಮರೆಂಬರು. ಒಬ್ಬರು ಕನಿಷ್ಠರೆಂಬರು. ಒಬ್ಬರು ಅಧಮರೆಂಬರು. ಒಬ್ಬರು ಕಷ್ಟನಿಷ್ಠೂರಿಯೆಂಬರು. ಅಂದರದಕೇನು ಯೋಗ್ಯ? ವಿನಯಕಂಪಿತ ಪರಮಾರ್ಥಕ್ಕೂ ಲೌಕಿಕಕ್ಕೂ ವಿರುದ್ಭ ಕಾಣಾ ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.
--------------
ಕುಷ್ಟಗಿ ಕರಿಬಸವೇಶ್ವರ
ಲೌಕಿಕದಲ್ಲಿ ಒಬ್ಬ ಪುರುಷಂಗೆ ಸ್ತ್ರೀಯರು ಒಬ್ಬರು, ಇಬ್ಬರು, ಮೂವರು, ನಾಲ್ವರು, ಐವರು ಪರಿಯಂತರ ಸತಿಯರುಂಟು. ಒಬ್ಬ ಸ್ತ್ರೀಯಳಿಗೆ ಐವರು ಪುರುಷರುಂಟೆ? ಇಲ್ಲೆಂಬ ಹಾಗೆ, ಎನಗೆ ಎನ್ನ ತಾಯಿತಂದೆಗಳು ಮೂರಾರು ಗಂಡರ ಮದುವೆ ಮಾಡಿ ಒಗತನ ಮಾಡೆಂದು ಸಕಲಗಣಂಗಳ ಸಾಕ್ಷಿಯಾಗಿ ಎನಗೆ ಕೊಟ್ಟರು. ಆ ನಿರೂಪವ ಕೈಕೊಂಡು ಗಂಡನ ಸಂಗವ ಮಾಡದೆ ಅವರ ಸಂಗವ ಬಿಡದೆ ರಂಗಮಂಟಪದಲ್ಲಿ ಒಬ್ಬನ ಕುಳ್ಳಿರಿಸಿ, ನಡುಮನೆಯಲ್ಲಿ ಒಬ್ಬನ ಕುಳ್ಳಿರಿಸಿ, ಒಬ್ಬನ ಹಿರಿಮನೆಯಲ್ಲಿ ಕುಳ್ಳಿರಿಸಿ, ಷಡ್ವಿಧಸ್ಥಾನಗಳಲ್ಲಿ ಷಡ್ವಿಧರ ಕುಳ್ಳಿರಿಸಿ, ಇಂತೀ ಪುರುಷರ ಕೂಡಿ ಒಗತನವ ಮಾಡಿ, ಇವರಿಗೆ ಸಿಕ್ಕದೆ ಹೊಲೆಯನ ಕೂಡಿ ಕುಲಗೆಟ್ಟು ನಾಯೆತ್ತ ಹೋದೆನೆಂದರಿಯನಯ್ಯ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಶಿವಶಿವಾ, ಈ ಮರುಳಮಾನವರ ಮರುಳತನವ ನಾನೇನೆಂಬೆನಯ್ಯಾ. ಹೊನ್ನು ತನ್ನದೆಂಬರು, ಹೊನ್ನು ರುದ್ರನದು. ಹೆಣ್ಣು ತನ್ನದೆಂಬರು, ಹೆಣ್ಣು ವಿಷ್ಣುವಿನದು. ಮಣ್ಣು ತನ್ನದೆಂಬರು, ಮಣ್ಣು ಬ್ರಹ್ಮನದು. ಇಂತೀ ತ್ರಿವಿಧವು ನಿಮ್ಮವೆಂಬಿರಿ- ನಿಮ್ಮವು ಅಲ್ಲ ಕಾಣಿರೋ ಎಲಾ ದಡ್ಡ ಪ್ರಾಣಿಗಳಿರಾ. ಇದಕ್ಕೆ ದೃಷ್ಟಾಂತ: ಗಗನದಲ್ಲಿ ಚಂದ್ರೋದಯವಾಗಲು ಭೂಮಂಡಲದಲ್ಲಿ ಕ್ಷೀರಸಮುದ್ರ ಹೆಚ್ಚುವದು. ಹೆಚ್ಚಿದರೇನು ? ಆ ಚಂದ್ರನ ವ್ಯಾಳ್ಯಕ್ಕೆ ಸಮುದ್ರವಿಲ್ಲ; ಸಮುದ್ರದ ವ್ಯಾಳ್ಯಕ್ಕೆ ಚಂದ್ರನಿಲ್ಲ. ಮತ್ತೆ ಆಕಾಶದಲ್ಲಿ ಮೋಡ ಬಂದು ಸುಳಿಗಾಳಿ ಬೀಸಲು ಗಿರಿಯೊಳಗಿರ್ದ ನವಿಲು ತನ್ನ ಪಕ್ಕವ ಬಿಚ್ಚಿ ಹರುಷಾನಂದದಲ್ಲಿ ಆಡುವದು ; ಪ್ರೇಮದಿಂದಲಿ ಕುಣಿಯವದು. ಕುಣಿದರೇನು ? ಚಂಡವಾಯುವಿನಿಂದ ಆಕಾಶದೊಳಗಣ ಕಾರಮುಗಿಲು ಹಾರಿಹೋಹಾಗ ನವಿಲು ಅಡ್ಡಬಂದಿತ್ತೆ ? ಇಲ್ಲ. ಗಿರಿಯೊಳಗಣ ಮಯೂರನನ್ನು ವ್ಯಾಧನು ಬಂದು ಬಲಿಹಾಕಿ ಕೊಲ್ಲುವಾಗ ಆ ಮೋಡ ಅಡ್ಡಬಂದಿತ್ತೆ ? ಇಲ್ಲ. ಇದರ ಹಾಂಗೆ, ನಿಮಗೆ ಬಾಲಪ್ರಾಯದಲ್ಲಿ ಮಾತಾಪಿತರ ಮೋಹ ಯೌವ್ವನಪ್ರಾಯದಲ್ಲಿ ಸ್ತ್ರೀ, ಪುತ್ರಮೋಹ. ಮಧ್ಯಪ್ರಾಯದಲ್ಲಿ ಧನಧಾನ್ಯದ ಮೋಹ. ಈ ಪರಿಯಲ್ಲಿ ಸಕಲವು ನೀವು ಇರುವ ಪರ್ಯಂತರದಲ್ಲಿ ಮಾಯಾ ಮಮಕಾರವಲ್ಲದೆ ಅಳಲಿ ಬಳಲಿ, ಕುಸಿದು ಕುಗ್ಗಿ ಮುಪ್ಪುವರಿದು, ಮರಣಕಾಲಕ್ಕೆ ಯಮದೂತರು ಬಂದು ಹಿಂಡಿ ಹಿಪ್ಪಿಯ ಮಾಡಿ ಒಯ್ಯುವಾಗ, ಮೂವರೊಳಗೆ ಒಬ್ಬರು ಅಡ್ಡಬಂದರೆ ? ಬಂದುದಿಲ್ಲ. ಅವರ ಸಂಕಟಕ್ಕೆ ನೀವಿಲ್ಲ, ನಿಮ್ಮ ಸಂಕಟಕ್ಕೆ ಅವರಿಲ್ಲ. ನಿನ್ನ ಪುಣ್ಯಪಾಪಕ್ಕೆ ಅವರಿಲ್ಲ, ಅವರ ಪುಣ್ಯಪಾಪಕ್ಕೆ ನೀನಿಲ್ಲ. ನಿನ್ನ ಸುಖದುಃಖಕ್ಕೆ ಅವರಿಲ್ಲ, ಅವರ ಸುಖದುಃಖಕ್ಕೆ ನೀನಿಲ್ಲ. ನಿನಗವರಿಲ್ಲ, ಅವರಿಗೆ ನೀನಿಲ್ಲ. ಇಂತಿದನು ಕಂಡು ಕೇಳಿ ಮತ್ತಂ ಹಿತ್ತಲಕ್ಕೆ ಹಳೆಯೆಮ್ಮಿ ಮನಸೋತ ಹಾಗೆ, ಹಾಳಕೇರಿಗೆ ಹಂದಿ ಜಪ ಇಟ್ಟ ಹಾಗೆ, ಹಡಕಿಗೆ ಶ್ವಾನ ಮೆಚ್ಚಿದ ಹಾಗೆ, ಮತ್ತಂ, ಮಾನವರೊಳಗೆ ಹಂದಿ, ನಾಯಿ, ಹಳೆಯೆಮ್ಮಿಯೆಂದರೆ- ಜೀವನಬುದ್ಭಿಯುಳ್ಳವನೇ ಹಂದಿ. ಕರಣಬುದ್ಧಿಯುಳ್ಳವನೇ ನಾಯಿ. ಮಾಯಾಪ್ರಕೃತಿಯುಳ್ಳವನೇ ಹಳೆಯೆಮ್ಮಿ. ಇವಕ್ಕೆ ಮೂರು ಮಲವಾವೆಂದಡೆ: ಆಣವಮಲ, ಮಾಯಾಮಲ, ಕಾರ್ಮಿಕಮಲವೆಂಬ ಮಲತ್ರಯವನು, ಕಚ್ಚಿ ಮೆಚ್ಚಿ ಮರುಳಾಗಿ ಬಿಡಲಾರದೆ ಕಂಡು ಕೇಳಿ ಮೋಹಿಸಿ, ಇದನು ಬಿಟ್ಟು ವೈರಾಗ್ಯಹೊಂದಿದರೆ ಮೋಕ್ಷವಿಲ್ಲೆಂದು ಪ್ರಪಂಚವಿಡಿದು ಪಾರಮಾರ್ಥ ಸಾಧಿಸಬೇಕೆಂದು ಹೇಳುವವರ, ಹೀಂಗೆ ಮಾಡಬೇಕೆಂಬುವರ ಬುದ್ಧಿಯೆಂತಾಯಿತಯ್ಯಾ ಎಂದಡೆ: ಗಿಳಿ ಓದಬಲ್ಲುದು; ಬಲ್ಲರೇನು ತನ್ನ ಮಲವ ತಾನು ತಿಂದ ಹಾಗೆ. ವಿಹಂಗ ಹನ್ನೆರಡುಯೋಜನದಮೇಲೆ ಅಮೃತಫಲವಿಪ್ಪುದ ಬಲ್ಲದು. ಬಲ್ಲರೇನು, ಅದು ಬಾಯಿಲಿ ತಿಂದು ಬಾಯಿಲೆ ಕಾರುವದು. ಹಾಂಗೆ ಈ ಮಾನವರು ತ್ರಿವಿಧಮಲಸಮಾನವೆಂಬುದ ಬಲ್ಲರು, ಬಲ್ಲರೇನು ? ಬಿಡಲಾರರು. ಇಂತೀ ಪರಿಪರಿಯಲ್ಲಿ ಕೇಳಿ ಕೇಳಿ ಕಂಡು ಬಿಡಲಾರದೆ ಇದ್ದರೆ ಇಂಥ ಹೊಲೆಸೂಳೆಯ ಮಕ್ಕಳ ಶರೀರವ ಖಡ್ಗದಿಂದ ಕಡಿದು ಕರಗಸದಿಂದ ಕೊರೆದು ಛಿದ್ರಚಿನಿಪಾಲವ ಮಾಡಿ, ಹದ್ದು ಕಾಗೆ ನಾಯಿಗಳಿಗೆ ಹಾಕಿದರೆ ಎನ್ನ ಸಿಟ್ಟು ಮಾಣದು. ಕಡೆಯಲ್ಲಿ ಚಂದ್ರಸೂರ್ಯರು ಇರುವ ಪರ್ಯಂತರ ಮಹಾ ಅಘೋರ ನರಕದಲ್ಲಿ ಕಲ್ಪಕಲ್ಪಾಂತರದಲ್ಲಿ ಹಾಕದೆ ಬಿಡನೆಂದಾತನು ವೀರಾಧಿವೀರ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಪರಮಪವಿತ್ರ ಹರಗಣಸಾಕ್ಷಿಯಾಗಿ, ಸೂತ್ರ ಗೋತ್ರ ಪರಿಪೂಜ್ಯತ್ವವುಳ್ಳಂಥ ಕ್ರಿಯಾಶಕ್ತಿಯ ಸರ್ವೇಂದ್ರಿಮುಖದವಯವಂಗಳನು ಕೂನಗಳ ವಿಚಾರಕತ್ವದಿಂ ಘನಲಿಂಗಮೂರ್ತಿ ಶ್ರೀಗುರುವಿನ ಕರುಣಕಟಾಕ್ಷ ಶಿವದೀಕ್ಷೆಗಳಿಂದ ಪವಿತ್ರಕಾಯವೆನಿಸಿ, ಶಿವಧರ್ಮಾಂತರಾಳವೆಂಬ ದಂಡಕಮಂಡಲಗಳೆ ಕಂಭ ಕುಂಭ ಹಂದರ ಮುತ್ತೈದೆ ಬಾಸಿಂಗದೆ ಸಾಕ್ಷಿಯಾಗಿ, ಪಂಚಕಳಸ ಆರಾಧ್ಯಗಣಸಮೂಹವೆಲ್ಲ ಸಂತೋಷಂಗೈದು, ಇಷ್ಟಲಿಂಗವೆಂಬ ರಮಣಂಗೆ ಪ್ರಾಣಲಿಂಗವೆಂಬ ರಮಣಿಗೆ ಸುಹಸ್ತಗಳ ಕೂಡಿಸಿ, ಅರ್ಚಿಸಿ, ನವಸೂತ್ರವೆಂಬ ಕಂಕಣವ ಕಟ್ಟಿ, ಸ್ಥಿರಸೇಸೆಯನೆರೆದು, ಭಾವಭರಿತವಾಗಿ, ಸಮರಸಾಚರಣೆಗಳಿಂದ ಪರತತ್ವಲಿಂಗಲೋಲುಪ್ತರಾಗಿ, ಜಂಗಮಾರಾಧನೆ ದಾಸೋಹಂಭಾವದಿಂದ ಶಿವಯೋಗಸಂಪನ್ನರಾಗಿರಿಯೆಂದು ಅಭಯಕರವಿತ್ತು ಶರಣಮಹಾರುದ್ರ ಗಂಟೆಹೊಡೆದಂಥ ಕ್ರಿಯಾಶಕ್ತಿಗಳೆಷ್ಟಾದರೂ ರತಿವಿರತಿಗಳೊಳ್ ಬಳಸಿಬ್ರಹ್ಮವಾಗಿರ್ಪುದೆ ಸತ್ಯಸದ್ಧರ್ಮಿಗಳ ಸನ್ಮಾರ್ಗವು. ಈ ಸನ್ಮಾರ್ಗವನುಳಿದು, ವಿಷಯಾತುರ ಹೆಚ್ಚಿ, ಒಬ್ಬರು ಭೋಗಿಸಿದ ಎಂಜಲಸ್ತ್ರೀಯರ ಆಲಿಂಗಿಸಿ, ತನ್ನ ರಾಣಿಯೆಂದು ನುಡಿಗಣದಿಂದ ಭಾವಿಸುವುದೊಂದು ದುರಾಚಾರ. ಜಿಹ್ವೆಯಿಂದ ಮಾತುಮಾತಿಗೆ ಹೆಂಡತಿ ಅಕ್ಕ ಅವ್ವ ತಂಗಿಯೆಂದು ಬೊಗಳುವುದೊಂದು ದುರಾಚಾರ. ಪರಪುರಷಂಗೆ ರಾಣಿಯಾದ ಸ್ತ್ರೀಯಳ ಹಾವಭಾವ ವಿಲಾಸಗಳ ನೋಡಿ, ವಿಭ್ರಮಣೆಗೊಂಡು, ಅಂತರಂಗದಲ್ಲಿ ಕಳವಳಿಸಿ, ಹಾಸ್ಯರಹಸ್ಯವ ಮಾಡಬೇಕೆಂಬುದೊಂದು ದುರಾಚಾರ. ಇಂತು ತ್ರಿವಿಧರತಿಗಳಿಂದ ವರ್ತಿಸುವುದೆ ದ್ವಿತೀಯಪಾತಕ. ಇದಕ್ಕೆ ಹರನಿರೂಪ ಸಾಕ್ಷಿ : ``ಪರಸ್ತ್ರೀಣಾಂ ಚ ಸಂಸರ್ಗಾತ್ ಮೋಕ್ಷೋ ನಾಸ್ತಿ ವರಾನನೇ | ಜಪಹಾನಿಃ ತಪೋಹಾನಿಃ ರೌರವಂ ನರಕಂ ವ್ರಜೇತ್ ||'' ``ಹರಿಣಪಾದಮಾತ್ರೇಣ ಬಂಧಿತಂ ಚ ಜಗತ್ರಯಂ | ತತ್ಸುಖಂ ಬಿಂದುಮಾತ್ರೇಣ ದುಃಖಂ ಪರ್ವತಮೇವ ಚ ||'' ಇಂತೆಂಬ ಹರಗುರುವಾಕ್ಯ ಪ್ರಮಾಣವಾಗಿ, ಸದ್ಭಕ್ತ ಮಹೇಶ್ವರರು ಪರರೆಂಜಲಸ್ತ್ರೀಯಳ ಭೋಗಿಸಿದಡೆ ಹಿಂದಣ ಭವಪಾಶ ಬೆನ್ನಬಿಡದುಯೆಂದು ದ್ವಿತೀಯ ಪಾತಕಂಗಳ ನಿರಸನಂಗೈದು, ತ್ರಿಕರಣಶುದ್ಧವಾಗಿ, ನಡೆದಂತೆ ನುಡಿದು, ನುಡಿದಂತೆ ನಡೆದು, ದೃಢಚಿತ್ತರಾಗಿ, ಜಾಗ್ರ ಜಾಗ್ರ ಇನ್ನು ತಿರುಗಿ ಭವಕ್ಕೆ ಬಂದಡೆ ನಿಮ್ಮಾಣೆ, ನಿಮ್ಮ ಪ್ರಮಥರಾಣೆಯೆಂದು ತ್ರಿವಿಧಬಿಂದುಗಳ ತಡೆದು, ಸಾಕ್ಷಿ : ``ಕಾಮಃ ಕ್ರೋಧಶ್ಚ ಲೋಭಶ್ಚ ದೇಹೇ ತಿಷ*ಂತಿ ತಸ್ಕರಾಃ | ಜ್ಞಾನರತ್ನಾಪಹಾರಾಯ ತಸ್ಮಾತ್ತ್ವಂ ಜಾಗೃತೋ ಭವ ||'' ಎಂದರಿದು, ಅರುವಿನ ಮಹಾಜ್ಞಾನರತ್ನವ ಕಳೆದು, ಮತಿಭ್ರಷ್ಟ ಕ್ರಿಮಿಕೀಟ ಜನ್ಮಕ್ಕೆ ಬೀಳದಂತೆ ನಿಜೇಷ್ಟಲಿಂಗಾಂಗಸಮರತಿಯುಳ್ಳ ನಿಷ್ಟನಾಗಿ, ಪರರ ಸಂಗವ ಭವಸಂಗವೆಂದರಿದಾನಂದದಿಂದ ಸತ್ಯಶುದ್ಧನಾಗಿ, ಗುರುಹಿರಿಯರಿಗೆ ಖೊಟ್ಟಿಯಾಗದೆ, ಕಾಲಕಾಮರಟ್ಟುಳಿಯ ಕಾಡಾರಣ್ಯಕ್ಕೆ ಮಹಾಜ್ಞಾನವೆಂಬ ಕಿಚ್ಚನಿಕ್ಕಿ, ಚಿತ್ಪ್ರಭಾಬೆಳಗಿಂಗೆ ಮಹಾಬೆಳಗಾಗಿರ್ಪುದು ಕಾಣಾ ನಿರವಯಪ್ರಭು ಮಹಾಂತ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಹರಗಣಂಗಳೆಲ್ಲ ನರಗಣಂಗಳಾಗಿ ಒಬ್ಬರ ಆಗಿಂಗೆ ನೆರೆದು ಒಬ್ಬರ ಚೇಗಿಂಗೆ ನೆರೆದು ನುಡಿವರು. ಒಬ್ಬರು ಒಳ್ಳಿಹರು, ಒಬ್ಬರು ಹೊಲ್ಲಹರು ಎಂದು ತಮತಮಗೆಲ್ಲ ನುಡಿವರು, ಇದೇನು ಪಂಚಾಕ್ಷರಿ ಮಂತ್ರವೇ? ಇದೇನು ಮಹಾನುಭಾವದ ನುಡಿಯೇ? ಹೊತ್ತು ಹೋಕಿನ ಮಾತ ಕಲಿತವರೆಲ್ಲ, ಮೃತ್ಯುವಿನ ಬಾಯತುತ್ತಾದುದ ಕಂಡು ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ, ನಮ್ಮ ಶರಣ ನೋಡಿ ನಗುತಿರ್ದನು.
--------------
ಸ್ವತಂತ್ರ ಸಿದ್ಧಲಿಂಗ
ಕಾಯಕ್ಕೆ ಜೀವಕ್ಕೆ ಸಂದು ಮುನ್ನುಳ್ಳಡೆ, ಅದು ಪ್ರಾಣಲಿಂಗವಲ್ಲ ಕಾಣಿರೆ. ಲೋಕಾಚಾರದ ಕೂಳನುಂಡು, ಲೀಲೆಯೊಳಾಡುತಿಹರಲ್ಲದೆ ಸಲೆ ಸಂದವರಪ್ಪರೆ ? ಈ ಕಲ್ಲ ಹಿಡಿದಾತ ಆ ಕಲ್ಲನೆತ್ತ ಬಲ್ಲ ? ಇವರೊಬ್ಬರ ಕರೆದಡೆ ಒಬ್ಬರು (ಇಬ್ಬರು ?) `ಓ' ಎಂಬಂತೆ. ಇವರಿಬ್ಬರ ಭಾವ ಹುರುಳಿಲ್ಲ ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಮಾನಸ ವಾಚಕ ಉಪಾಂಶಿಕವೆಂದು ಪ್ರಣವ ಪಂಚಾಕ್ಷರಿಯ ಜಪ ಮೂರು ತೆರನಾಗಿಪ್ಪುದು. ಮನಸಿನಲ್ಲಿಯೆ ಪ್ರಣವಮಂತ್ರವ ಸ್ಮರಿಸುವುದು ಮಾನಸ. ವಾಕ್ಯದಿಂದ `ಶಿವಾಯ ಹರಾಯ ಭವಾಯ ಮೃಡಾಯ ಮೃತ್ಯುಂಜಯಾಯ ಸೋಮಶೇಖರ ಪ್ರಭವೇ ವಿಭವೇ ಶಿವಶಿವಾ ಶರಣು ಶರಣೆ'ಂಬುದೇ ವಾಚಕ. ಕ್ರಿಯಾಕಾಲದಲ್ಲಿ ಇತರವಾಗಿ ಒಬ್ಬರು ಕೇಳದ ಹಾಗೆ ತನ್ನ ಕಿವಿ ಕೇಳುವ ಹಾಗೆ ಶಿವ ಮಂತ್ರದಲ್ಲಿ ಸುಯಿಧಾನಿಯಾಗಿ ಪುನಃಶ್ಚರಣೆಯಾಗಿ ತ್ರಿಸಂಧ್ಯಾಕಾಲದಲ್ಲಿ ಬಿಡದೆ ಉಚ್ಚರಿಸುವುದೀಗ ಉಪಾಂಶಿಕ. ಈ ಮೂರು ಪ್ರಕಾರದಲ್ಲಿ ಶಿವಮಂತ್ರವ ಜಪಿಸಬೇಕು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ರುದ್ರದೇವ ಮಹಾದೇವ ಇವರಿಬ್ಬರೂ ಬೀಗರಯ್ಯಾ. ಒಬ್ಬರು ಹೆಣ್ಣಿನವರು, ಒಬ್ಬರು ಗಂಡಿನವರು. ಹಂದರವಿಕ್ಕಿತ್ತು, ಮದುವೆ ನೆರೆಯಿತ್ತು, ಶೋಬನವೆಂದಲ್ಲಿಯೇ ಅಳಿಯಿತ್ತು. ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ಎಂದನು.
--------------
ಘಟ್ಟಿವಾಳಯ್ಯ
ಎಲ್ಲರ ಪರಿಯಲ್ಲ ಎಮ್ಮ ಗಂಡನ ಪರಿ. ಒಬ್ಬರು ಬಲ್ಲುದ ತಾನರಿಯ, ತಾ ಬಲ್ಲುದನೊಬ್ಬರರಿಯರು. ತವಕ ಬಂದಲ್ಲಿ ಕೂಡುವ, ಅಲ್ಲದಡೊಲ್ಲದ ಹಾಂಗಿರ್ಪ, ಕಪಿಲಸಿದ್ಧಮಲ್ಲಿಕಾರ್ಜುನಯ್ಯನು
--------------
ಸಿದ್ಧರಾಮೇಶ್ವರ
ಒಬ್ಬರುತ್ತಮರೆಂಬರು. ಒಬ್ಬರು ಮಧ್ಯಮರೆಂಬರು. ಒಬ್ಬರು ಕನಿಷ*ರೆಂಬರು. ಒಬ್ಬರಧಮರೆಂಬರು. ಒಬ್ಬರು ಕಷ್ಟ ನಿಷೂ*ರಿಗಳೆಂಬರು. ಎಂದರದಕೇನು ಯೋಗಿಗೆ ವಿನಯ ಕಂಟಕವಲ್ಲದೆ. ಲೋಕಾರ್ಥಕ್ಕೂ ಪರಮಾರ್ಥಕ್ಕೂ ವಿರುದ್ಧ ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಲೌಕಿಕದ ಮಧ್ಯದಲ್ಲಿ ಬಾಗಿಣವನಿಕ್ಕಿದ ಸ್ತ್ರೀಯರ ಪುರುಷರು ಮೃತವಾದಡೆ ಮರಳಿ ಬಾಗಿಣವನಿಕ್ಕಿ ವಿವಾಹವ ಮಾಡುವರು. ವಿವಾಹವಾದ ಸ್ತ್ರೀಯರ ಪುರುಷರು ಮೃತವಾದಡೆ ಮರಳಿ ಹಳದಿಯ ಪೂಸಿ ವಿವಾಹವ ಮಾಡುವರೆ ? ಮಾಡಲಾಗದು. ಅದರೊಳಗೊಬ್ಬ ಪತಿವ್ರತಾಸ್ತ್ರೀಯಳು ಎನ್ನ ಪ್ರಾಣವಲ್ಲಭನು ಮೃತವಾದನೆಂದು ಆ ಪುರುಷಂಗೆ ತನ್ನ ಪ್ರಾಣತ್ಯಾಗ ಮಾಡುವಳು. ಒಬ್ಬರು ಮಂಡಿಬೋಳಾಗಿ ಮೈ ಬತ್ತಲೆಯಿರ್ಪರು. ಒಬ್ಬರು ಮರಳಿ ಒಬ್ಬ ಪುರುಷನ ಕೈ ಹಿಡಿದು ಪೋಗುವದ ಕಂಡು ಬೆರಗಾದೆನಯ್ಯಾ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಅಶನ ವ್ಯಸನಾದಿಗಳನಂತನಂತ. ಕಾಶಾಂಬರಧಾರಿಗಳನಂತನಂತ. ಸಕಳೇಶ್ವರದೇವಾ, ನೀನಲ್ಲದೆ ಪೆರತನರಿಯದವರು ಎತ್ತಾನು ಒಬ್ಬರು
--------------
ಸಕಳೇಶ ಮಾದರಸ
ಒಮ್ಮೆ ಶಿವನೆಯೆಂದು ನೆನೆದರೆ, ಕಳ್ಳಸುಳ್ಳರಿಗೆಲ್ಲ ಕೈಲಾಸವಾಯಿತೆಂದು ಹೇಳುವ ಅಣ್ಣಗಳಿರಾ, ಕೈಲಾಸಪದವಿ ಆದದ್ದು ಸಹಜ, ಅದೆಂತೆಂದಡೆ : ಒಬ್ಬ ಕಳವು ಮಾಡಿ ಸತ್ತರೆ, ಶಿವ ಮೆಚ್ಚಿ ಕೈಲಾಸಕ್ಕೆ ತಕ್ಕೊಂಡು ಒಯ್ಯಬೇಕೆಂದು ಅವಗೆ ಬ್ರಹ್ಮ ಬರೆದ ಕಲ್ಪನೆಯಲ್ಲಿತ್ತು . ಅವರಿಗೆ ಕೈಲಾಸಪದವಿ ಆಯಿತು ಕಾಣಿರೊ. ನೀವು ಕಳ್ಳರಲ್ಲ ಸುಳ್ಳರಲ್ಲ , ಒಳ್ಳೆಯ ಜನರು. ಶಿಲ್ಪಕಾರನ ಕೈಯಲ್ಲಿ ಹುಟ್ಟೆದ ಶಿಲೆಯ ಲಿಂಗವನು ತಂದು, ಶಿರದಲ್ಲಿ ಕಟ್ಟಿಕೊಂಡು ಉಂಬುವಲ್ಲಿ ಶಿವ, ಉಡುವಲ್ಲಿ ಶಿವ, ಕೊಂಬುವಲ್ಲಿ ಶಿವ, ಕೊಡುವಲ್ಲಿ ಶಿವ, ನಡೆವಲ್ಲಿ ಶಿವ, ನುಡಿವಲ್ಲಿ ಶಿವ. ಸರ್ವಾಂಗವೆಲ್ಲ ಶಿವಮಯವಾದ ಮೇಲೆ ನಿಮಗೆ ಶಿವ ಮೆಚ್ಚಿ, ಕೈಲಾಸಕ್ಕೆ ತಕ್ಕೊಂಡು ಹೋದನೆ ? ಹೋಗಲಿಲ್ಲ. ಕಾಲಚಕ್ರದ ಪ್ರಳಯಕ್ಕೆ ಒಳಗಾಗಿ, ಕಾಲ ಬಾಧೆಯೊಳಗೆ ಬಿದ್ದು ಬಳಲುತಿಪ್ಪಿರಿ. ಒಂದು ಅನಂತಕೋಟಿ. ಅದು ಎಂತೆಂದರೆ : ನೆಲುವಿನ ಮೇಲೆ ಇಟ್ಟಿದ್ದ ಹಾಲು ಬೆಣ್ಣೆಯನು ತಕ್ಕೊಂಡು ಸವಿದು ಉಣಲಾರದೆ, ಆಕಾಶವೆಂಬ ಬಯಲಿಗೆ ಬಾಯಿ ತೆರಕೊಂಡು ಕುಳಿತರೆ ಹಾಲು ಕರೆದೀತೆ ? ಕರೆಯಲರಿಯದು. ಅದು ಎಂತೆಂದರೆ :ನಿಮ್ಮ ಅಂತರಂಗವೆಂಬುದ ಅಡಿವಿಡಿದು ಅಳೆದರೆ, ಒಡನೆ ಮೂರಗೇಣಿನ ಒಳಗೆ ಹೊರಗೆ ಕೈಲಾಸವಾಗಿತ್ತು. ಆ ಕೈಲಾಸದಲ್ಲಿ ಬ್ರಹ್ಮ ವಿಷ್ಣು ರುದ್ರ ಈಶ್ವರ ಸದಾಶಿವ ಈ ಐದುಮಂದಿ ಮಕ್ಕಳನ್ನು ಹಡೆದ ಒಂಕಾರ ಪರಬ್ರಹ್ಮ ದೇವರಿಂದೆ ಆರುಮಂದಿ ದೇವರಾದಲ್ಲಿ ಆಕಾರಾವಂ(?) ಕೋಟಿ ರುದ್ರ ನವಕೋಟಿ ವಿಷ್ಣುಗಳು ಇಂದ್ರಸಭೆ ದೇವಸಭೆ ಶಿವಸಭೆ ನಂದಿನಾಥ ಭೃಂಗಿನಾಥ ಮೊದಲಾದ ಗರುಡ ಗಂಧರ್ವ ಸಿದ್ಧರು ವಿದ್ಯಾಧರರು ಸಮಸ್ತ ಮುನಿಜನಂಗಳೆಲ್ಲ ಇದ್ದರು ಕಾಣಿರೊ. ಇಂತೀ ತಮ್ಮ ಅಂತರಂಗದಲ್ಲಿ ತಿಳಿದು ನೋಡಬಲ್ಲಾತಗೆ ಪಿಂಡಾಂಡವೆಂಬ ಕೈಲಾಸದಲ್ಲಿ ಇದ್ದಂತೆ, ಬ್ರಹ್ಮಾಂಡವೆಂಬ ಕೈಲಾಸದಲ್ಲಿ ಇದ್ದಂತೆ, ಬ್ರಹ್ಮಾಂಡವೆಂಬ ಕೈಲಾಸವಲ್ಲಿಯಿತ್ತು , ಪಿಂಡಾಂಡವೆಂಬ ಕೈಲಾಸವಲ್ಲಿಯಿತ್ತು ಕಾಣಿರೊ. ಅದು ಎಂತೆಂದರೆ : ಕೃತಯುಗದಲ್ಲಿ , ಬ್ರಹ್ಮರಾಕ್ಷಸರು ಪೃಥ್ವಿಯ ಆಧಾರದಲ್ಲಿ ನಿಂದು, ಕೈಲಾಸಕ್ಕೆ ದಾಳಿಯನಿಕ್ಕಿ ಕೋಳು ತಕ್ಕೊಂಡು ಬರುವರು. ಅವರಿಗೆ ಕೈಲಾಸಪದವು ದೊಡ್ಡದಾಗಿತ್ತೆ ? ದೊಡ್ಡದಾಗಿ ಇದ್ದಿಲ್ಲ. ತ್ರೇತಾಯುಗದಲ್ಲಿ, ಕ್ಷತ್ರಿಯರು [ಪೃಥ್ವಿಯ ಆಧಾರದಲ್ಲಿ ನಿಂದು], [ಕೈಲಾಸಕ್ಕೆ ದಾಳಿಯನಿಕ್ಕಲು], ಕೈಲಾಸದೊಡೆಯ ಮರೆಯ ಹೊಕ್ಕ, ಕಾಮುಕ ಋಷಿಯು ಕಣ್ಣು ತೆಗೆದು, ಗರಿಯ ಅಂಬಿಗ ತಲೆಗೆ ಕಟ್ಟಿದರು. ಈಶ್ವರನ ಜಡೆಯೊಳಗಿನ ಗಂಗೆಯನು ಸುಟ್ಟುರುಹಿದ ಮೇಲೆ ಹಾಸಿತ ಮಾಂಸವನು ಹುಟ್ಟಿಸಿಯಿದ್ದರು. ಅವರಿಗೆ ಕೈಲಾಸಪದವು ದೊಡ್ಡದಾಗಿ ಇತ್ತೆ ? ದೊಡ್ಡದಾಗಿ ಇದ್ದಿಲ್ಲ. ದ್ವಾಪರಯುಗದಲ್ಲಿ , ಸೋಮಕ್ಷತ್ರಿಯರು ಪೃಥ್ವಿಯ ಆಧಾರದಲ್ಲಿ ನಿಂದು, ಇಂದ್ರಪದದಲ್ಲಿ ಇದ್ದಂಥ ಶ್ವೇತವರ್ಣದ ಆನೆಯನು ತಂದು, ತಾಯಿಗೆ ನೋಂಪಿಯ ನುತಿಸಿದರೆ, ಅವರಿಗೆ ಕೈಲಾಸಪದವಿ ದೊಡ್ಡದಾಗಿ ಇತ್ತೆ ? ದೊಡ್ಡದಾಗಿ ಇದ್ದಿಲ್ಲ. ಕಲಿಯುಗದಲ್ಲಿ ಹುಟ್ಟಿದ ಮನುಜರನು ಕೈಲಾಸಕೆ ಅಟ್ಟಿದರೇನು ಒಮ್ಮೆ ಶಿವನೆಯೆಂದು ನೆನೆದರೆ, ಕೈಲಾಸಪದವಿ ಆದೀತೆಂದು ಬಹಿರಂಗದಲ್ಲಿ ಹೇಳುವ ಮಾತುಗಳೇ ಬಹಳ. ಅಂತರಂಗವಿಡಿದು ಹೋದವರು ಒಬ್ಬರು ಇಬ್ಬರು ಕಾಣಿರೊ. ಅದು ಎಂತೆಂದರೆ : ಬ್ರಹ್ಮ ಬರೆದ ಕಲ್ಪನೆಯಿಂದ ಕೈಲಾಸಪದವಿಯಾಗಬೇಕೆಂದು ಇದ್ದರೆ, ಎಂದೆಂದೂ ಶಿವನೆಯೆಂದು ನೆನೆಯದೆ, ಜಟ್ಟಿಂಗ ಮೈಲಾರ ಜಿನ ಭೈರವವೆಂಬ ಕೆಟ್ಟದೇವರ ಪೂಜೆಯ ಮಾಡಿದರೇನು ಅವನೂ ಬ್ರಹ್ಮ ಬರೆದ ಕಲ್ಪನೆಯಿದ್ದು, ಸತ್ತುಹೋಗುವಾಗ, ಅವನ ಶಿವ ಮೆಚ್ಚಿ ಕೈಲಾಸಕ್ಕೆ ತಕ್ಕೊಂಡು ಹೋದನು. ಬ್ರಹ್ಮ ಬರೆದ ಕಲ್ಪನೆಯಲ್ಲಿ ಅವಗೆ ಕೈಲಾಸಪದವು ಇಲ್ಲದಿದ್ದರೆ, ಜಟ್ಟಿಂಗ ಮೈಲಾರ ಜಿನ ಭೈರವ ದೇವರುಗಳೆಂಬ ಕೆಟ್ಟದೇವರ ಪೂಜೆಯ ಬಿಟ್ಟು, ಎಷ್ಟುದಿನ ಶಿವನೆಯೆಂದು ನೆನೆದರೇನು, ಅವನು ಬ್ರಹ್ಮ ಬರೆದ ಕಲ್ಪನೆಯಲ್ಲಿದ್ದು, ಸತ್ತುಹೋಗುವಾಗ ಅವನನು ಶಿವ ಮೆಚ್ಚಿ ಕೈಲಾಸಕ್ಕೆ ತಕ್ಕೊಂಡು ಹೋದನೆ ? ಹೋಗಲಿಲ್ಲ. ಅದು ಎಂತೆಂದರೆ : ಕಾಲಚಕ್ರವೆಂಬ ಪ್ರಳಯಕ್ಕೊಳಗಾಗಿ, ಕಾಲನ ಬಾಧೆಯಲ್ಲಿ ಬಿದ್ದು ಹೊರಳಾಡುತ್ತಿದ್ದರು ಕಾಣಿರೊ. ಅದು ಎಂತೆಂದರೆ : ಬ್ರಹ್ಮ ಬರೆದ ಕಲ್ಪನೆ ಹೊರತಾಗಿ, ಶಿವನನು ನೆನೆದು ಕೈಲಾಸ ಕಂಡೆವೆಂದು ಕಲೆ ಕೆಳಗಾಗಿ ಕಾಲು ಮೇಲ್ಮಾಡಿ ತಪವ ಮಾಡಿದರೆ, ಕೈಲಾಸ ಪದ ಆಗದೆಂದು ಇಕ್ಕುವೆನು ಮುಂಡಿಗೆಯ. ಇದನು ಎತ್ತುವರುಂಟೆ, ದೇವಧ್ವಜ ಮೃತ್ಯುಂಜಯನ ಭಾವದೊಲ್ಲಭ ಮುದ್ದನೂರೇಶಾ ?
--------------
ಸರ್ವೇಶ್ವರಲಿಂಗ
-->