ಅಥವಾ

ಒಟ್ಟು 22 ಕಡೆಗಳಲ್ಲಿ , 15 ವಚನಕಾರರು , 19 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೋಣೆಯ ಕೋಹಿನಲ್ಲಿ ಮೂರು ಬಾಗಿಲುಂಟೆಂಬರು ಯೋಗಿಗಳು. ಅವು ದ್ವಾರಗಳಲ್ಲದೆ ಬಾಗಿಲ ನಾವರಿಯೆವು. ಪ್ರದಕ್ಷಿಣದ ಒಳಗಾದ ಬಾಗಿಲು ಮುಚ್ಚಿದಲ್ಲಿ ಸಿಕ್ಕಿದ ದ್ವಾರಂಗಳಿಗೆ ಕುರುಹಿಲ್ಲ. ಊಧ್ರ್ವನಾಮ ಯೋಗ ಸಂಬಂಧವಾದ ಒಂದು ಬಾಗಿಲು ಕಟ್ಟಿ ಒಂಬತ್ತು ಮುಚ್ಚಿದ ಸಂದಿಗಳೆಲ್ಲವು ಅದರೊಳಗೆ ಸಲೆಸಂದ ಮತ್ತೆ ಹೋಹುದೊಂದೆ ಬಾಗಿಲು ನಾರಾಯಣಪ್ರಿಯ ರಾಮನಾಥಾ.
--------------
ಗುಪ್ತ ಮಂಚಣ್ಣ
ಕ್ರೋಧವೆಂಬ ಹೊಲಗೇರಿಯ ಹೊರವಂಟು, ಭೇದವೆಂಬೈವರನತಿಗಳೆದನು. ನಾದಬಿಂದುವೆಂಬ ತೀರ್ಥವನು ಮಿಂದು, ಆದಿ ಎಂಬ ಅಷ್ಟದಳವಂ ಕಿತ್ತೆತ್ತಿ ಹೋದನು. ನಾದ ಬಿಂದು ಆದಿ ಬೋಧೆಗೆ ಒಳಗಾದ ಘನವನು ಸಾಧಿಸಿದಂ ಭೋ ಎನ್ನ ಅಜಗಣ್ಣತಂದೆ
--------------
ಮುಕ್ತಾಯಕ್ಕ
ಊರ ಹೊರಗಳ ಹೊಲತಿಯ ಹಾರುವ ನೆರೆದು ತನ್ನಯ ಸೂತಕ ಹೋಯಿತ್ತು. ಹೊಲತಿಯ ಕುಲ ಹರಿದು ಹಾರುವ ಹೊಲೆಯನಾಗಿ, ಆ ಹಾರುವ ಹಾರದೆ ಸದಾಶಿವಮೂರ್ತಿಲಿಂಗಕ್ಕೆ ಒಳಗಾದ.
--------------
ಅರಿವಿನ ಮಾರಿತಂದೆ
ಒಳಗರಿದ ಭಕ್ತನ ಒಳಗಾದ ಲಿಂಗವು ಒಳಗಾದ ಲಿಂಗದೊಳಗಾದ ಭಕ್ತನ ಹೊರಗಾದ ಲಿಂಗವ ಒಳಗೆ ತಂದಿರಿಸಿ ಆ ಭಕ್ತನ ತನುವಿನ ವಳೆಯವನಿನ್ನೇನ ಹೇಳುವೆ! ರಾಮನಾಥ.
--------------
ಜೇಡರ ದಾಸಿಮಯ್ಯ
ಬ್ರಹ್ಮನ ಹುಟ್ಟು, ವಿಷ್ಣುವಿನ ಸ್ಥಿತಿ, ರುದ್ರನ ಲಯಕ್ಕೆ ಒಳಗಾದ ಮನುಜರೆಲ್ಲ ತಾವು ಪ್ರಸಾದಿ, ಪ್ರಾಣಲಿಂಗಿಗಳೆಂದು ನುಡಿದುಕೊಂಬಿರಿ. ಪ್ರಸಾದಿಸ್ಥಲ ಎಲ್ಲರಿಗೆಂತಾದುದಣ್ಣಾ ? ಪ್ರಸಾದಿಸ್ಥಲ ಪರಮಸುಖ ಪರಿಣಾಮ. ಮನ ಮೇರೆದಪ್ಪಿ ತನುವನೆ ಪ್ರಸಾದವ ಮಾಡುವದೀಗ ಪ್ರಸಾದ. ಇದನರಿಯದೆ ಸದಮದವಾಗಿ ಮುಡಿ ನೋಡಿ ಒಡಲ ಕೆಡಿಸಿಕೊಂಬ ಜಡಮನುಜರ ನುಡಿಯ ಕೇಳಲಾಗದು, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಅಯ್ಯಾ, ಗುರುಶಿಷ್ಯರಿಬ್ಬರು ಪುಣ್ಯಪಾಪ, ಇಹಪರಂಗಳಿಗೆ ಒಳಗಾದ ವಿಚಾರವೆಂತೆಂದಡೆ ಸತ್ಯಸದಾಚಾರಸಂಪತ್ತೆಂಬ ಶಿವಭಕ್ತರ ಹೃದಯದಲ್ಲಿ ಜನಿತನಾಗಿ ಸತ್ಯನಡೆ ನಡೆಯದೆ, ಲೋಕದ ಜಡಜೀವಿಯಂತೆ ಪಂಚಮಹಾಪಾತಕಂಗಳಲ್ಲಿ ವರ್ತಿಸುವುದ ಕಂಡು ಅದ ಪರಿಹರಿಸದೆ, ದ್ರವ್ಯದಭಿಲಾಷೆಯಿಂದ ತ್ರಿವಿಧದೀಕ್ಷೆಯ ಮಾಡುವನೊಬ್ಬ ಗುರು ಹುಟ್ಟಂಧಕನೆಂಬೆನಯ್ಯಾ. ಅಂತಪ್ಪ ಪರಮಪಾತಕಂಗೆ ಜಪವ ಹೇಳಿ, ಪಾದೋದಕದಲ್ಲೇಕಭಾಜನವ ಮಾಡಿ, ಪ್ರಸಾದವ ಕೊಟ್ಟು, ಷಟ್‍ಸ್ಥಲವ ಹೇಳುವನೊಬ್ಬ ಜಂಗಮ ಕೆಟ್ಟಗಣ್ಣವನೆಂಬೆನಯ್ಯಾ. ಇಂತೀ ಅಧಮ ಗುರುಶಿಷ್ಯಜಂಗಮಕ್ಕೆ ಭವಬಂಧನ ತಪ್ಪದು ನೋಡಾ, ಶಂಭುಕೇಶ್ವರದೇವಾ, ನೀನೊಲಿಯದೆ ಕೆಟ್ಟಿತ್ತೀ ಜಗವೆಲ್ಲ.
--------------
ಸತ್ಯಕ್ಕ
ಶರೀರವೆಂಬ ಆಲಯದೊಳಗೆ ಮೂವರು ಭಾಮಿನಿಯರ ಕಂಡೆನಯ್ಯ. ಒಂದು ಭಾಮಿನಿಯ ಹಿಡಿದಾತ ಮತ್ರ್ಯಕೆ ಒಳಗಾದ. ಒಂದು ಭಾಮಿನಿಯ ಹಿಡಿದಾತ ಮತ್ರ್ಯಾತೀತನಾದ. ಒಂದು ಭಾಮಿನಿಯ ಹಿಡಿದಾತ ನಿರ್ವಯಲವೆರಸಿ ನಿಶ್ಚಿಂತ ನಿರಾಳವಾದ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಶ್ರೀಪತಿ ಶಿವಲೆಂಕ ಪಂಡಿತಾರಾಧ್ಯ ಏಕಾಂತದರಾಮ ಇಂತೀ ಪ್ರಥಮದ ಆಚಾರ್ಯರು ಇಟ್ಟ ಮತಂಗಳಿಂದ ಗುರುಸ್ಥಲ ಲಿಂಗಸ್ಥಲ ಉಭಯಮಾರ್ಗ ಆಚಾರ್ಯಸ್ಥಲ ಷಡುಸ್ಥಲ ಒಳಗಾದ ನಾನಾಸ್ಥಲಜ್ಞರುಗಳಲ್ಲಿ ವರಪ್ರಸಾದಿ ಚನ್ನಬಸವಣ್ಣ ಅವರ ಕಾರುಣ್ಯಪ್ರಸಾದ ಎನಗಾಯಿತ್ತು. ಸಂಚಿತ ಪ್ರಾರಬ್ಧ ಆಗಾಮಿಗಳಲ್ಲಿ ಉಪಚಕ್ಷು ನೀನಾಗಿ ಸಲಹಿದೆಯಲ್ಲಾ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.
--------------
ಪ್ರಸಾದಿ ಭೋಗಣ್ಣ
ಭಕ್ತಿ ಒಳಗಾದ ಕ್ರೀ, ಕ್ರೀಯೊಳಗಾದ ಆಚಾರ, ಆಚಾರದೊಳಗಾದ ಅನುವು, ಅನುವಿನೊಳಗಾದ ಭಾವಲಿಂಗವನರಿದು, ಉಭಯದ ಬೆಸುಗೆಯ ನಿಶ್ಚಯಿಸಿದಲ್ಲಿ, ಪ್ರಾಣಲಿಂಗ ಸಂಬಂಧ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಆಚಾರ ಪ್ರಾಣವಾದ ಬಳಿಕ ಅನ್ಯಕ್ಕೆರಗದಿರಬೇಕು. ಅರಿಷಡ್ವರ್ಗಂಗಳು ಒಳಗಾದ ಕರಣಂಗಳ ಕರವಾಗಿ ಅರ್ಚಿಸಬೇಕು. ಆತನೀಗ ಲಿಂಗೈಕ್ಯ. ಆತನೀಗ ಪಾದೋದಕ ಪ್ರಮಾಣನರಿದಾತ. ಭಕ್ತಿಯ ತಾತ್ಪರಿಯವನರಿದಾತ. ಕಪಿಲಸಿದ್ಧಮಲ್ಲಿಕಾರ್ಜುನಯ್ಯನ ಕೂಡಿ ತಾತ್ಪರ್ಯವಾದಾತ
--------------
ಸಿದ್ಧರಾಮೇಶ್ವರ
ಆರಾರ ಭಾವಕ್ಕೆ ಒಳಗಾದ ವಸ್ತು, ಆರಾರ ಭ್ರಮೆಗೆ ಹೊರಗಾದ ವಸ್ತು, ಆರಾರ ಆಚಾರಕ್ಕೆ ಒಳಗಾದ ವಸ್ತು, ಆರಾರ ಅನಾಚಾರಕ್ಕೆ ಹೊರಗಾದ ವಸ್ತು, ಆಚಾರ ಶ್ರದ್ಧೆ ಇದ್ದಲ್ಲಿ ನೀನೆಂಬೆ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಾ, ಆ ಗುಣ ಇಲ್ಲದಿರ್ದಡೆ ನೀನು ಎನ್ನವನಲ್ಲಾ ಎಂಬೆ.
--------------
ಅಕ್ಕಮ್ಮ
ಮಹಾಘನವಪ್ಪ ಬೋನವನು ಒಂದನುವಿನ ಪರಿಯಾಣದಲ್ಲಿ ಹಿಡಿದು ಗುರುಲಿಂಗವು ಒಳಗಾದ ಲಿಂಗವಾರೋಗಣೆಯ ಮಾಡಿ ಮಿಕ್ಕುದು ಪ್ರಸಾದವೆ? ಅಲ್ಲಲ್ಲ. ಮಹಾಘನವಪ್ಪ ಲಿಂಗವ ಒಂದನುವಿನಲ್ಲಿ ತಂದಿರಿಸಿದ ಆತನ ಮನವೆ ಪ್ರಸಾದ ಕಾಣಾ! ರಾಮನಾಥ.
--------------
ಜೇಡರ ದಾಸಿಮಯ್ಯ
ನಾನಾ ಚಿತ್ರ ವಿಚಿತ್ರ, ನಾನಾ ದೃಷ್ಟವಿದ್ಯಂಗಳಲ್ಲಿ ಕಾಯಸಿಧ್ಧಿ ಲೋಹಸಿದ್ದಿ ಅಂಜನಸಿದ್ಧಿ ಒಳಗಾದ ಸಂದೇಹಸಿದ್ಧಿವುಳ್ಳವರುಂಟು. ಭಾವ ನಿರ್ಭಾವಸಿದ್ಧಿವಂತರನಾರನೂ ಕಾಣೆ. ಅವರು ಕಂಡಲ್ಲಿಯೆ ನಾನೆಂಬ ಪ್ರತಿರೂಪು, ಆ ಭಾವದಲ್ಲಿಯೆ ಲೇಪವಾಯಿತ್ತು, ಕಾಮಧೂಮ ಧೂಳೇಶ್ವರನೆಂಬುದು ಭಾವ ಲೇಪವಾದಲ್ಲಿ.
--------------
ಮಾದಾರ ಧೂಳಯ್ಯ
ನಿಂದ ನೆಲೆಯ ನೀರಿನಂತೆ ಮರ ಶಿಲೆಯಲ್ಲಿ ಸಂಧಿಸಿ ನಿಂದ ಪಾವಕನಂತೆ ಕರಂಡದಲ್ಲಿ ಬಂಧಿಸಿ ನಿಂದ ಸುವಾಸನೆಯಂತೆ ಈ ಅಂಗದಲ್ಲಿ ನಿಂದ ನಿಜಲಿಂಗಾಂಗಸಂಗಸಂಬಂಧ. ಈ ಗುಣ ಸಂಗನಬಸವಣ್ಣಂಗೆ ಸಂಬಂಧವಾಯಿತ್ತು. ಬ್ರಹ್ಮೇಶ್ವರಲಿಂಗವು ಅವರಿಗೆ ಒಳಗಾದ.
--------------
ಬಾಹೂರ ಬೊಮ್ಮಣ್ಣ
ಮಹಾಮನೆಯೊಳಗೊಂದು ಮಂದಿರವಾಡ: ಅದರೊಳಗೆ ಹದಿನಾರು ಕೋಣೆ, ಒಂಬತ್ತು ಬಾಗಿಲು ಮುಚ್ಚಿ, ಒಂದು ಬಾಗಿಲು ತೆಗೆದಿಹುದು. ತೆಗೆದ ಬಾಗಿಲಲ್ಲಿ ಮೂರು ಮುಖದ ಸರ್ಪ, ಊಧ್ರ್ವಮುಖವಾಗಿ ತಿರುಗಾಡುತ್ತಿಹುದು. ಮಿಕ್ಕ ಆರು ಬಾಗಿಲಲ್ಲಿ ಮೂರು ಬಾಗಿಲು ಕೀಳಾಗಿ, ಕೀಳಿನೊಳಗೆ ಅಧೋಮುಖದ ಸರ್ಪವುಡುಗಿಹುದು. ಮೇಲಣ ಮೂರು ಬಾಗಿಲು ಊಧ್ರ್ವದ ತ್ರಿಗುಣದ ಸರ್ಪ ಬಾಲ ಮೊದಲು ತಲೆ ಕಡೆಯಾಗಿ ಎದ್ದು ನಿಂದಾಡುತ್ತಿರಲಾಗಿ, ವಿಶ್ವಮಯವೆಂಬ ಆಕಾಶದ ಹದ್ದು ಹೊಯಿದು ಎತ್ತಿತ್ತು, ಅದರೊಳಗೆ ಎರಡು ತಲೆಯ ಮರೆದು, ಒಂದು ತಲೆಯೆಚ್ಚತ್ತು, ಹದ್ದಿನ ಕೊಕ್ಕ ತಪ್ಪಿ, ಕಾಲುಗುರ ಹೆಜ್ಜೆಯ ಘಾಯವ ತಪ್ಪಿ ಗರಿಯ ಅಡುಹ ತೊಲಗಿಸಿ ಹಿಡಿಯಿತ್ತು. ಅಡಿಹೊಟ್ಟೆಯ ನೋಡಿಯೇರಿತ್ತು, ವಿಷ ಹದ್ದಿನ ಅಸುವ ಬಿಡಿಸಿತ್ತು, ಹದ್ದು ಹಾವು ಕೂಡಿ ಘಟಕರ್ಮಕ್ಕೊಳಗಾಯಿತ್ತು. ಕರ್ಮದ ಒಳಗಾದ ಜ್ಞಾನ ಸದಾಶಿವಮೂರ್ತಿಲಿಂಗವ ಮುಟ್ಟಿದುದಿಲ್ಲ.
--------------
ಅರಿವಿನ ಮಾರಿತಂದೆ
ಇನ್ನಷ್ಟು ... -->