ಅಥವಾ

ಒಟ್ಟು 4 ಕಡೆಗಳಲ್ಲಿ , 3 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಓಡ ಕುದುರೆಯ ಮೇಲೆ ಮಸಿಯ ಹಲ್ಲಣವ ಹಾಕಿ, ಬಸಲೆಯ ಹಂಬ ಬಾಯಿಗೆ ಕಟ್ಟಿ, ದೆಸೆವರಿವ ಅಸುರಾವುತ ಚೊಲ್ಲೆಹದ ಬಲ್ಲೆಹವ ಹಿಡಿದು, ಮುಗುಳುನಗೆಯವಳಲ್ಲಿ ಏರಿ ತಿವಿದ. ಚೊಲ್ಲೆಹದ ಬಲ್ಲೆಹ ಮುರಿದು, ಓಡಿನ ಕುದುರೆ ಒಡೆದು, ಮಸಿಯ ಹಲ್ಲಣ ನುಗ್ಗುನುಸಿಯಾಗಿ, ಬಸಲೆಯ ಬಾಯಕಟ್ಟು ಹರಿದು, ಅಸುರಾವುತ ಅವಳ ಕಿಸಲೆಯ ರಸಕ್ಕೊಳಗಾದ. ಅದೇತರಿಂದ ಹಾಗಾದನೆಂಬುದ ನೀನರಿ, ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಅಂಧಕನು ಓಡ ಹಿಡಿದು ಸ್ವರೂಪವ ತಾ ನೋಡುವಂತೆ, ಶೈವ ಗುರುವಿನಲ್ಲಿ ಲಿಂಗ ಸಾಹಿತ್ಯವಾದ ಶಿಷ್ಯನ ವಿಧಿಯ ನೋಡಿರೆ ! ಗುರುವಿಂಗೆ ದೂರಾರ್ಚನೆ ಶಿಷ್ಯಂಗೆ ಇಷ್ಟಲಿಂಗಾರ್ಚನೆ, ಗುರು ವಾಯುಪ್ರಾಣಿ, ಶಿಷ್ಯ ಲಿಂಗಪ್ರಾಣಿ, ಗುರು ಭೂತದೇಹಿ, ಶಿಷ್ಯ ಲಿಂಗದೇಹಿ, ಗುರು ಅನರ್ಪಿತಭುಂಜಕ, ಶಿಷ್ಯ ಲಿಂಗಾರ್ಪಿತಭುಂಜಕ, ಗುರು ಅಗ್ನಿದಹನಸಂಪತ್ತು, ಶಿಷ್ಯ ಸಿದ್ಧಸಮಾಧಿಸಂಪತ್ತು, ಎಂತುಂಟು ಹೇಳಿರಣ್ಣಾ ? ``ಜ್ಞಾನಹೀನಗುgõ್ಞ ಪ್ರಾಪ್ತೇ ಶಿಷ್ಯಜ್ಞಾನಂ ನ ಸಿಧ್ಯತಿ ಮೂಲಚ್ಛಿನ್ನೇ ಯಥಾ ವೃಕ್ಷೇ ಕಥಂ ಪುಷ್ಪಂ ಫಲಂ ಭವೇತ್ ಎಂದುದಾಗಿ ಇವರಿಬ್ಬರ ಗುರುಶಿಷ್ಯಸಂಬಂಧಕ್ಕೆ ನರಕ ತಪ್ಪದು ಕಾಣಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಓಡ ಹಿಡಿದವನ ಕೈ ಮಸಿಯೆಂಬುದ ನಾಡೆಲ್ಲ ಬಲ್ಲರು. ಅವನ ಕೂಡೆ ಆಡಲಾಗದು ಅಯ್ಯಾ, ತನಗಾ ಮಸಿ ಹತ್ತೂದಾಗಿ. ಲಿಂಗವಿರೋಧಿಯ ಕೈವಿಡಿದಾಡುವವ ಮುನ್ನವೆ ವ್ರತಗೇಡಿ. ಅಂಥವನ ಸಂಗ ಬೇಡಯ್ಯಾ, ತನಗಾ ಭಂಗ ಬಂದುದಾಗಿ. ಅದೆಂತೆಂದಡೆ : ಜಗದ ಕರ್ತ ಶಿವನ ವಿರೋಧವ ಮಾಡಿ ದಕ್ಷನೊಬ್ಬ ಯಾಗವನಿಕ್ಕಲು, ತೆತ್ತೀಸಕೋಟಿದೇವರ್ಕಳೆಲ್ಲಾ ತೊತ್ತಳದುಳಿಸಿಕೊಂಡು, ನುಚ್ಚುನುರಿಯಾಗಿ ಹೋದರು ನೋಡಾ, ಅವನಂಗ ಸಂಗದಲ್ಲಿದ ಕಾರಣ. ಗೆಲ್ಲ ಸೋಲಕೆ ಇಕ್ಕು ಮುಂಡಿಗೆ, ಏರು ಮುಂಡಿಗೆಯೆಂಬ ಮಚ್ಚರಕ್ಕೆ ಮುಂದುವಿಡಿದು ಮುಡುಹಿಕ್ಕಿ ಕೆಲದಾಡುವರೆಲ್ಲಾ. ತಮ್ಮ ಮನದಲ್ಲಿ ತಾವರಿದು ಒಯ್ಯನೆ ತೊಲಗುವರು. ಮೇಲೆ ಲಿಂಗ ನಿರೂಪದಿಂದ ಬಂದ ಕಾರ್ಯಕ್ಕೆ ಅಂಜರು, ಏಕಾಂಗವೀರರು. ವಾಯದ ಹರೆಮಾತಿನ ಮಾಲೆಗೆ ಬೆದರಿ ಬೆಚ್ಚಿ ಓಡುವನಲ್ಲ, ಏಕೋಭಾವ ನಿಷೆ* ನಿಬ್ಬೆರಗು ಗಟ್ಟಿಗೊಂಡ ದೃಢಚಿತ್ತವುಳ್ಳ ಸದ್ಭಕ್ತ. ಇಂತಪ್ಪ ಉಲುಹಡಗಿದ ಶರಣರ ಸಂಗದಲ್ಲಿರಿಸಿ ಬದುಕುವಂತಿರಿಸಯ್ಯಾ, ವರದ ಶಂಕರೇಶ್ವರಾ.
--------------
ವರದ ಸಂಕಣ್ಣ
ಮುನ್ನಿನ ಆದ್ಯರ ವಚನ :ಆ ಲಿಂಗದ ನಡೆ, ಆ ಲಿಂಗದ ನುಡಿ, ಆ ಲಿಂಗದಂತೆ, ಮುನ್ನಿನ ಜಂಗಮದ ನಡೆ, ಜಂಗಮದ ನುಡಿ, ಆ ಜಂಗಮದಂತೆ ಮುನ್ನಿನ ಪ್ರಸಾದದ ನಡೆ, ಪ್ರಸಾದದ ನುಡಿ ಆ ಪ್ರಸಾದದಂತೆ. ಇಂತಿವಕ್ಕನುಸಾರಿ ಮಾಡಿಹೆನೆಂಬ ಕರ್ಮಿಯ ಮಾತ ಕೇಳಲಾಗದು ಹೊಂಬಿತ್ತಾಳೆಯ ಕೆಲಸದಂತೆ. ಲಿಂಗಾನುಭಾವಿಗಳು ಕೇಳಿದರೆ ಛಿಃ ಇವನ ಮುಟ್ಟಲಾಗದೆಂಬರು, ಓಡ ಹಿಡಿದಡೆ ಕೈ ಮಸಿಯಾದೂದೆಂದು. ಸಿಂಹದ ನಡುವಿಂಗೆ ನಾಯ ನಡು ಸರಿಯೆಂಬ ಪಂಚಮಹಾಪಾತಕರ ನುಡಿಯ ಕೇಳಲಾಗದು, ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
-->