ಅಥವಾ

ಒಟ್ಟು 6 ಕಡೆಗಳಲ್ಲಿ , 5 ವಚನಕಾರರು , 6 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮೂರ ಬಿಟ್ಟವಂಗಲ್ಲದೆ ಸತ್ಯವ ಸಾದ್ಥಿಸಬಾರದು. ಆರ ಬಿಟ್ಟವಂಗಲ್ಲದೆ ಆದರಿಸಬಾರದು. ಎಂಟ ಬಿಟ್ಟವಂಗಲ್ಲದೆ ಸಾಕಾರದ ಕಂಟಕವನರಿಯಬಾರದು. ರಣದಲ್ಲಿ ಓಡಿ ಮನೆಯಲ್ಲಿ ಬಂಟತನವನಾಡುವನಂತೆ. ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ, ನಿಲ್ಲು ಮಾಣು.
--------------
ಘಟ್ಟಿವಾಳಯ್ಯ
ಯಜಮಾನಂ ಸಾಜ ಜೋಯಿಸಕಾರ ತಾನೆಯಾಗಿ ಲಗುನವೆ? ತಿಟ್ಟವಿಟ್ಟಂತೆ ಕುಂದದಿಕ್ಕಿ ಆಕಾಶ ಆಕಾಶಲಿಂಗವಾಗುತ್ತಿಕ್ಕೆಲನ ಸಿಂಹಾಸನಗೊಂಡು ನಡುವೆ ನಿಂದಾ ಪಶುರೂಪುಗೊಂಡು ಸಲಕ್ಷಣವಿಡಿದು ಎಲ್ಲ ಲಿಂಗಮಯವಾಗಲು ಓಡಿ ನಡೆವೆ ಕಪಿಲಸಿದ್ಧಮಲ್ಲಿನಾಥನಾದ!
--------------
ಸಿದ್ಧರಾಮೇಶ್ವರ
ಪರಮಾತ್ಮನು ಸ್ವಲೀಲಾನಿಮಿತ್ತ ಸಾಕಾರಸ್ವರೂಪನಾಗಿ, ಪಂಚವಕ್ತ್ರ ದಶಭುಜಂಗಳನು ಧರಿಸಿ, ತನ್ನ ನಿಜಧರ್ಮವನೆ ತನಗಾಧಾರಮಪ್ಪ ವಾಹನಮಂ ಮಾಡಿಕೊಂಡು, ಪಂಚಮುಖಂಗಳಲ್ಲಿ ಪಂಚಭೂತಂಗಳಂ ಸೃಷ್ಟಿಸಿ, ಅವನೇ ಬಂದು ಬ್ರಹ್ಮಾಂಡವಂ ಮಾಡಿಕೊಂಡು, ತನ್ನ ಲೀಲಾಶಕ್ತಿಯ ಸಂಗದಿಂದ ಅನಂತಕೋಟಿ ಜೀವಂಗಳಂ ಸೃಷ್ಟಿಸಿ, ತನ್ನ ಗೂಢಮಪ್ಪ ಮನೋಭಂಡಾರವಂ ತೆಗೆದು, ಆ ಜೀವಂಗಳಿಗದನೇ ಜೀವನವಂ ಮಾಡಿ, ಈ ಬ್ರಹ್ಮಾಂಡವೆಂಬ ತನ್ನ ಪಟ್ಟಣಕ್ಕೂ ಈ ಜೀವಜಾಲಕ್ಕೂ ನಿಜಮನೋಭಂಡಾರವನೆ ಆಧಾರಮಂ ಮಾಡಿ, ತಾನೇ ಸೇವ್ಯನಾಗಿ, ಜೀವಂಗಳೇ ಸೇವಕರಾಗಿ ಕ್ರೀಡಿಸುತ್ತಿರಲಾ ಪರಮಾತ್ಮನಿಂದ ಸಲಿಗೆವಡೆದ ಕೆಲವು ಜೀವಂಗಳು ಅಹಂಕರಿಸಿ, ಆ ಪರಶಿವನಲ್ಲಿರ್ಪ ಮನೋಭಂಡಾರದಲ್ಲಿ ತಮ್ಮ ಶಕ್ತಿಗೆ ತಕ್ಕಷ್ಟು ಸತ್ಕರಿಸಿಕೊಂಡು, ತದ್ವಂಚನಾಮನದಿಂ ಪಂಚಭೂತಂಗಳನ್ನು ಸಾದ್ಥಿಸಿ, ಅದರಿಂದ ಒಂದು ಪಿಂಡಾಂಡವೆಂಬ ಪಟ್ಟಣಮಂ ಮಾಡಿಕೊಂಡು, ಇಂದ್ರಿಯಂಗಳೆಂಬ ಕೊತ್ತಲಂಗಳಂ ನಿರ್ಮಿಸಿ, ನವದ್ವಾರಂಗಳೆಂಬ ಹುಲಿಮುಖಂಗಳಿಂದ ಅಜ್ಞಾನವೆಂಬತಿ ಘಾತಮಾದಗಳಂ ಕಲ್ಪಿಸಿ, ಆಶೆಯೆಂಬಾಳ್ವೇರಿಯಂ ಸೃಜಿಸಿ, ತನ್ಮಧ್ಯದಲ್ಲಿ ಅಂತರಂಗವೆಂಬುದೊಂದು ಅರಮನೆಯಂ ಕಟ್ಟಿ, ಅಲ್ಲಿದ್ದುಕೊಂಡು, ಜೀವನು ತನ್ನ ಮನೋವಂಚನಾಭಂಡಾರವಂ ವೆಚ್ಚಿಸುತ್ತಾ, ವಿಷಯಂಗಳೆಂಬ ಮನ್ನೆಯರಂ ಸಂಪಾದಿಸಿ, ನಿಜಪುರದ್ವಾರಂಗಳಲ್ಲಿ ಕಾಹನಿಟ್ಟು, ಅಂತಃಕರಣಚತುಷ್ಟಯವೆಂಬ ಶಿರಃಪ್ರಧಾನರಂ ಸಂಪಾದಿಸಿ, ತನ್ಮಂತ್ರಾಲೋಚನೆಯಿಂ ಸಾಮ, ಭೇದ, ದಾನ, ದಂಡವೆಂಬ ಕರಿ, ತುರಗ, ರಥ, ಪದಾತಿಗಳಂ ಕೂಡಲಿಟ್ಟು, ಕರ್ಮವೆಂಬ ಸೇನಾನಿಗೆ ಪಟ್ಟಮಂ ಕಟ್ಟಿ, ತನ್ನಲ್ಲಿರ್ಪ ನಾನಾ ದಳಂಗಳಂ ಸೇನಾಪತಿಯ ವಶಮಂ ಮಾಡಿ, ನಾದ ಬಿಂದು ಕಳೆಗಳೆಂಬ ಶಕ್ತಿಗಳಂ ಪರಿಣಯಮಾಗಿ, ಜಾಗ್ರತ್ಸ್ವಪ್ನಸುಷುಪ್ತಿಗಳೆಂಬರಮನೆಗಳೊಳಗೆ ಕಳೆಯ ನಾದದಲ್ಲಿ ಕೆಲವುತ್ತಂ, ಬಿಂದುವಿನಲ್ಲಿ ಫಲಿಸಿ ಫಲಸುಖಂಗಳನನುಭವಿಸುತಿರ್ಪ ಜೀವನೆಂಬರಸಿನನುಮತವಿಡಿದು, ಕರ್ಮಸೇನಾನಿಯು ಸಕಲದಳಂಗಳೊಳಗೆ ಕೂಡಿ, ವಿಷಯಂಗಳೆಂಬ ಮನ್ನೆಯರಂ ಮುಂದುಮಾಡಿಕೊಂಡು, ಪ್ರಪಂಚವೆಂಬ ರಾಜ್ಯವಂ ಸಾದ್ಥಿಸಿ, ತದ್ರಾಜ್ಯದಲ್ಲಿ ಬಂದ ಪುತ್ರ ಮಿತ್ರ ಕಳತ್ರ ಧನ ಧಾನ್ಯ ವಸ್ತುವಾಹನಾಲಂಕಾರಾದಿಗಳನ್ನು ಕಾಯಪುರಕ್ಕೆ ತಂದು, ಜೀವನೆಂಬರಸಿಗೆ ಒಪ್ಪಯಿಸುತ್ತಿರಲು, ಜೀವನು ಸಂತೋಷಿಸಿ, ತಾನು ಸಂಪಾದಿಸಿದ ಸಕಲದ್ರವ್ಯವನ್ನು ತನ್ನ ಮೂಲಮನೋಭಂಡಾರದಲ್ಲಿ ಬೆರಸಿ, ಬಚ್ಚಿಟ್ಟು, ಅಹಂಕರಿಸಿ, ಸಕಲಕ್ಕೂ ತಾನೇ ಕರ್ತೃವೆಂದು ಬೆರತು, ಪರಮಾತ್ಮನಂ ಮರೆತು, ಸೇವ್ಯಸೇವಕರೆಂಬ ವಿವೇಕವರತು, ಅಧರ್ಮ ವಾಹನಾರೂಢನಾಗಿ, ತನ್ನ ತಾನರಿಯದೆ, ಕಾಮವಶನಾಗಿ ಸಂಚರಿಸುತಿರ್ಪ ಈ ಜೀವನ ಅಹಂಕಾರಮಂ ಸಂಹರಿಸುವ ನಿಮಿತ್ತವಾಗಿ ಪರಮಾತ್ಮನು ಕಾಲನೆಂಬ ಸುಬೇದಾರನಂ ಸೃಷ್ಟಿಸಿ, ವ್ಯಾದ್ಥಿಪೀಡನಗಳೆಂಬ ಬಲಂಗಳಂ ಕೂಡಲಿಟ್ಟು, ದುಃಖವೆಂಬ ಸಾಮಗ್ರಿಯಂ ಒದಗಿಸಿಕೊಟ್ಟು, ಕ್ರೋಧವೆಂದು ಮನೆಯಾಳಿಂಗೆ ತಮೋಗುಣಂಗಳೆಂಬ ಬಲುಗಾರರಂ ಕೂಡಿಕೊಟ್ಟು, ಈ ಕಾಯಪುರಮಂ ಸಾದ್ಥಿಸೆಂದು ಕಳುಹಲು, ಆ ಸದಾಶಿವನಾಜ್ಞಾಶಕ್ತಿಯಿಂದ ಕಾಲಸುಭೇದಾರನು ಸಕಲ ಬಲಸಮೇತವಾಗಿ ಬಂದು, ಕಾಯಪುರಕ್ಕೆ ಸಲುವ ಪ್ರಪಂಚರಾಜ್ಯವಂ ನೆರೆಸೂರೆಮಾಡಲು, ಕರಣಂಗಳೆಂಬ ಪ್ರಜೆಗಳು ಕೆಟ್ಟೋಡಿಬಂದು, ಜೀವನೆಂಬ ಅರಸಿಗೆ ಮೊರೆಯಿಡಲು, ಅದಂ ಕೇಳಿ, ಆಗ್ರಹಪಟ್ಟು, ಕರ್ಮಸೇನಾನಿಗೆ ನಿರೂಪಿಸಲು, ತತ್ಸೇನಾನಿಯು ಕಾಯಪುರದಲ್ಲಿರ್ಪ ಸಕಲದಳ ಸಮೇತಮಾಗಿ ಬಂದು ಕಾಲಸುಬೇದಾರನೊಡನೆ ಯುದ್ಧವಂ ಮಾಡಿ, ಜಯಿಸಲಾರದೆ ವಿಮುಖನಾಗಿ ಉಪಭೋಗಾದಿ ಸಕಲ ಸುಖಂಗಳಂ ಕೋಳುಕೊಟ್ಟು ಬಂದು ಕೋಟೆಯಂ ಹೊಗಲು, ಜೀವನು ಪಶ್ಚಾತ್ತಾಪದಿಂ ಸಂಶಯಯುಕ್ತನಾಗಿ ಕಳವಳಿಸುತ್ತಿರಲು, ಆ ಕಾಲಸುಬೇದಾರನು ಕಾಯಪುರಮಂ ಒತ್ತರಿಸಿ ಮುತ್ತಿಗೆಯಂ ಹಾಕಿ, ವಿಷಯಮನ್ನೆಯರಂ ಹಸಗೆಡಿಸಿ ಕೊಂದು, ಕರ್ಮವಂ ನಿರ್ಮೂಲವಂ ಮಾಡಿ, ಅಂತರಂಗ ಮನೆಯಂ ಕೊಳ್ಳೆಯವಂ ಮಾಡಿ, ನಾದಬಿಂದುಕಳಾಶಕ್ತಿಯಂ ಸೆರೆವಿಡಿದು, ಕಾಯಪುರಮಂ ಕಟ್ಟಿಕೊಳ್ಳಲು, ಜೀವನು ಭಯಭ್ರಾಂತನಾಗಿ, ಆ ಮೂಲಮನೋಭಂಡಾರಮಾತ್ರಮಂ ಕೊಂಡು, ತತ್ಪುರಮಂ ಬಿಟ್ಟು, ಅನೇಕ ಯಾತನೆಪಟ್ಟು ಓಡಿ, ಮರಳಿಮರಳಿ ಜೀವನು ಪುರಂಗಳಂ ಸಂಪಾದಿಸಲು, ತತ್ಸಂಪಾದಿತಪುರಂಗಳಂ ಕಾಲನು ಸಾದ್ಥಿಸುತ್ತಿರಲು, ಜೀವನು ಅಹಂಕಾರವಳಿದು, ಆಸ್ಪದವಿಲ್ಲದೆ, ತನಗೆ ಕರ್ತೃವಾರೆಂಬುದಂ ಕಾಣದೆ, ವಿಚಾರಪಟ್ಟು ದುಃಖಿಸುತಿರ್ಪ ಜೀವನಿಗೆ ಕರುಣದಿಂ ಪರಮಾತ್ಮನು ಜ್ಞಾನದೃಷ್ಟಿಯಂ ಕೊಡಲು, ತದ್ಬಲದಿಂ ಶಿವನೇ ಕರ್ತೃ ತಾನೇ ಭೃತ್ಯನೆಂಬುದಂ ತಿಳಿದು, ಶಿವಧ್ಯಾನಪರಾಯಣನಾಗಿ, ಶಿವಧಾರಣ ಧರ್ಮಪದಮಂ ಪಿಡಿದು ಪಲುಗುತ್ತಿರಲು, ತದ್ಧರ್ಮಮೇ ಗುರುರೂಪಮಾಗಿ, ತನ್ನಲ್ಲಿರ್ಪ ಶಿವನಂ ಜೀವಂಗೆ ತೋರಿಸಲು, ಜೀವಂ ಹಿಗ್ಗಿ, ತಾನು ಸಂಪಾದಿಸಿದ ಪುರವನೆ ಶಿವಪುರಮಂ ಮಾಡಿ, ಧರ್ಮಾದಿ ಸಕಲವಿಷಯಬಲಂಗಳಂ ಶಿವನ ವಶಮಂ ಮಾಡಿ, ಆ ಪಟ್ಟಣದೊಳಯಿಂಕೆ ಬಿಜಯಂಗೈಸಿಕೊಂಡು ಹೋಗಿ, ಅಂತರಂಗದ ಅರಮನೆಯೊಳಗೆ ಜ್ಞಾನಸಿಂಹಾಸನದ ಮೇಲೆ ಕುಳ್ಳಿರಿಸಿ, ಪಟ್ಟಮಂ ಕಟ್ಟಿ, ತನ್ನ ಸರ್ವಸ್ವಮಂ ಶಿವನಿಗೆ ಸಮರ್ಪಿಸಿ, ತಾನು ಸತ್ಕರಿಸಿಕೊಂಡುಬಂದ ಮನೋಭಂಡಾರಮಂ ಶಿವನಡಿಯಂ ಸೇರಿಸಲು, ಸದಾಶಿವನು ಪ್ರಸನ್ನಮುಖನಾಗಿ, ದಯೆಯಿಂ ಪರಿಗ್ರಹಿಸಿ, ಜೀವನನು ಸಜ್ಜೀವನನಮಾಡಿ ಕೂಡಿಕೊಂಡುದೆ ಲಿಂಗೈಕ್ಯ ಕಾಣಾ | ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಮನ್ಯ ಓಡಿ ಆಹಾ! ಮನ್ಯ ನಿಂದು ಸರಹೆತ್ತ ಮನಕ್ಕೆ ಸರಾದಿವೊಡೆಯನಾಗಿ ಸರಶಬ್ದದಾ ಮಥನದಾ ಮಥಂತಿ ಮಥನದಾಸರ ಮಥನದಿಂದ ಲಿಂಗ ಉತ್ಪತ್ಯ, ಜಂಗಮ ಉತ್ಪತ್ಯ,ಅನುಭಾವ ಉತ್ಪತ್ಯ. ಸರದಿಂದ ನಿರವಯ, ನಿರವಯದಿಂದ ಸರ. ಸರವಯದಿಂದೆರಡರನ್ವಯದ ಆಧಾರವನು ತನ್ನ ಹೃದಯಕ್ಕೆ ತಂದು ನಿಂದಿತ್ತೆ ನಿರವಯವು. ಇಂತೆಂದಿತ್ತೆ ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ.
--------------
ಘಟ್ಟಿವಾಳಯ್ಯ
`ಇಕ್ಕಿದ ಹರಿಗೆ ತೊಲದ ಕಂಭ'ವೆಂದು ಬಿರಿದನಿಕ್ಕಿ ಹುಯ್ಯಲ ಕಂಡು ಓಡಿ ಬರುವಂಗೆ ಆ ಬಿರಿದೇತಕಯ್ಯ? ಬತ್ತೀಸಾಯುಧದ ಸಾಧನೆಯ ಕಲಿತು ಕಾಳಗದಲ್ಲಿ ಕೈಮರೆದು ಘಾಯವಡೆದಂಗೆ ಆ ಸಾಧನೆ ಏತಕಯ್ಯ? ಕತ್ತಲೆಗಂಜಿ ಕರದಲ್ಲಿ ಜ್ಯೋತಿಯಂ ಪಿಡಿದು ಹಾಳುಗುಳಿಯಲ್ಲಿ ಬೀಳುವಂಗೆ ಆ ಜ್ಯೋತಿಯೇತಕಯ್ಯ? ಆದ್ಯರ ವಚನಂಗಳ ಸದಾಕಾಲದಲ್ಲಿ ಓದಿ ಶಿವತತ್ವ ಆತ್ಮತತ್ವ ವಿದ್ಯಾತತ್ವವನರಿದು ಆರಕ್ಕೆ ಆರ ನೆಲೆಮಾಡಿ ಮೂರಕ್ಕೆ ಮೂರ ಸಂಬಂಧಿಸಿ ಐದಕ್ಕೆ ಇನ್ನು ಪ್ರತಿಯಿಲ್ಲವೆಂದು ಅರಿದ ವಿರಕ್ತರು ಪುರಾತನರಂತೆ ಸಮ್ಯಜ್ಞಾನ ಕ್ರೀಯಿಂದಲೆ ಆದರಿಸುವುದು, ಭಕ್ತ ವಿರಕ್ತರ ಆಚರಣೆಯೆಲ್ಲಾ ಒಂದೇ. ಅದು ಹೇಗೆಂದರೆ ಭಕ್ತಂಗೆ ಬಹಿರಂಗದ ದಾಸೋಹ. ವಿರಕ್ತಂಗೆ ಅಂತರಂಗದ ದಾಸೋಹ. ಈ ಆಚರಣೆಯನತಿಗಳೆದು ಮನ ಬಂದ ಪರಿಯಲ್ಲಿ ನಡೆದು ಕೆಡುವಂಗೆ ಆದ್ಯರ ವಚನವೇತಕಯ್ಯ? ಆದ್ಯರ ವಚನವೆಂಬುದು ಸಂತೆಯಮಾತೆ? ಪುಂಡರ ಪುರಾಣವೇ? ಲೋಕದ ಜನರ ಮೆಚ್ಚಿಸುವ ಬೀದಿಯ ಮಾತೆ? ಶಿವ ಶಿವ ನೀವು ಶಿವಶರಣರ ಕೂಡಾಡಿ ವಚನಂಗಳ ಕಲಿತು ಆ ವಚನಂಗಳ ನಿಮ್ಮ ಊಟದ ವೆಚ್ಚಕ್ಕೆ ಈಡು ಮಾಡಿಕೊಂಡಿರಲ್ಲದೆ ಮುಂದಣ ಮುಕ್ತಿಯ ಪದವ ಕಾಣದೇ ಹೋದಿರಲ್ಲಾ? ಇದು ಕಾರಣ- ಶಿವಜ್ಞಾನೋದಯವಾದ ಲಿಂಗಾಂಗಿಗಳಿಗೆ ಎನ್ನ ನುಡಿ ಮೈಗಂದೆಯಂ ತುರಿಸಿದಂತೆ ಹಾಲು ಸಕ್ಕರೆಯನುಂಡಂತೆ ಸವಿದೋರುತ್ತದೆ. ವೇಷಧಾರಿ ವಿಶ್ವಾಸಘಾತುಕರಿಗೆ ಎನ್ನ ನುಡಿ ಅಲಗಿನ ಮೊನೆಯಂತೆ ಇರಿಯುತ್ತಿದೆಯಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಕರ್ಮಕಾಂಡಿ[ಗಳಿ]ಗೆ ಕತ್ತಲೆಕರ್ಮಿಗಳೆಂದು ನುಡಿವರು ನೋಡಾ. ಅವರು ಮಾಯಾಮೋಹಕ್ಕೆ ಸಿಲ್ಕಿ ಕೆಟ್ಟರು ಕಾಣಾ ಎಂದು ನುಡಿವರು ಕೇಳಾ. ಸಗುಣಸ್ಥಲದ ಮನೋಜ್ಞಾನಿಗಳವರು ಕೆಟ್ಟಂತೆ ನಾವು ಕೆಡಬಾರದು. ತಮ್ಮ ಮನಕ್ಕೆ ಬುದ್ಧಿಯಂ ಕೊಟ್ಟು ಆಸೆಯಂ ಬಿಟ್ಟು ತನುವೆಂಬ ಬಿಲ್ಲಿಗೆ ಮನವೆಂಬ [ಹೆದೆ]ಯನೇರಿಸಿ, ಉರಿನರಿಯಂಬ ಅಳವಡಿಸಿ ವಾರಿ ಮೋರೆಯನೆ ತಿದ್ದಿಕೊಂಡು ಗುರುಕೊಟ್ಟ ಬಿಲ್ಲ ದೃಢವಾಗಿ ಹಿಡಿದು ಶ್ರೀಗಿರಿಯೆಂಬ ಗುರಿಯ ನೋಡಿ ಎಸೆವಾಗ, ಭವ ಹರಿಯಿತ್ತು, ಕಾಲಕರ್ಮವೆಂಬ ಶಿರ ಹರಿಯಿತ್ತು. ಅರಸು ಪ್ರಧಾನಿ ಪ್ರಜೆ ಪರಿವಾರ ಓಡಿ ಹೋಯಿತ್ತು. ಪೃಥ್ವಿ ಅಪ್ಪು ತೇಜ ವಾಯು ಆಕಾಶ ಅಂದೇ ಬೆಳಗಾಯಿತ್ತು. ಇಂತಪ್ಪ ಪ್ರಸಾದ ಆ ಗುರು ಲಿಂಗ ಜಂಗಮ ತಮ್ಮೊಳಗಾಯಿತ್ತು. ಇಂತಪ್ಪ ಪ್ರಸಾದವು ಯಾರಿಗೂ ಅಳವಡದು. ಪ್ರಭುವಿನೊಳ್ ಐಕ್ಯವಾದ ಬಸವಸಂಪತ್ತಿಗಲ್ಲದೆ ಮಿಕ್ಕ ಪ್ರಪಂಚಿಗಳಿಗೆ ಅಳವಡದೆಂದು ಹೇಳುವ ಸಗುಣದ ಭ್ರಮಿತರು ಅವರು ಕೆಟ್ಟ ಕೇಡಿಂಗೆ ಕಡೆಯಿಲ್ಲ ಮೊದಲಿಲ್ಲ ನೋಡಾ. ಮುಂದೆ ಇಷ್ಟವ ಕಂಡು ಮುಳುಗಿದವರಿಗೆ ಮುಕ್ತಿ ಎಂದೆಂದಿಗೂ ಇಲ್ಲ ಕಾಣಾ. ಇನ್ನು ಕೈವಲ್ಯಾನ್ವಯ ಪ್ರವರ್ತಕ ನಿಸ್ಸೀಮಾಂಬುಧಿ ನಿರ್ಲೇಪ ತಾನಾದಂಥ ದೇವ ವರನಾಗನ ಗುರುವೀರನೆ ಪರಂಜ್ಯೋತಿ ಮಹಾವಿರಕ್ತಿ.
--------------
ಪರಂಜ್ಯೋತಿ
-->