ಅರ್ಹನ್, ಬುದ್ಧ, ಚಾರ್ವಾಕ, ಮೀಮಾಂಸಕ, ನೀಲಪಟರೆಂಬವರು
ಕಾಯದರುಶನಂಗಳಲ್ಲಿ ದೀಕ್ಷಿತರಾಗಿ
¸õ್ಞರ ಶಾಕ್ತೇಯ ವೈಷ್ಣವ ಗಾಣಾಪತ್ಯ ದರುಶನಂಗಳಂ ಹೊಕ್ಕು,
ಒಡಲ ಮುಡುಹಂ ಸುಟ್ಟು, ಮುಟ್ಟಿಯನಿಟ್ಟು
ಉಭಯಗೆಟ್ಟು ಶಿವಧ್ಯಾನವಿಲ್ಲದೆ ನರಕಕ್ಕಿಳಿದು
ಅಧಮರಾಗಿ ಹೋಗಿ ಎಂದು ಹೇಳಿತ್ತೆಯಾ ವೇದ ?
`ಶಿವಾರ್ಚನವಿಹೀನಂ ತು ಜನ್ಮಮೃತ್ಯೂನ ಮುಂಚತಃ' ಎಂದುದಾಗಿ
ಮರಳಿ ಮರಳಿ ಜನ್ಮಕ್ಕೆ ಬಂದು
ಮಾಡಿದ ಕರ್ಮದಿಂದ ನರಕಕ್ಕಿಳಿದು ಮಗ್ನರಾಗಹೇಳಿತ್ತೆಯಾ ವೇದ ?
`ಓಂ ಅಪ್ರಶಿಖಾಯಾಂ ತ್ವಾಮಯಾಧನ್ಯ ಜೀವಾಗಮತ್ (?)'
ಎಂದು ಹೇಳಿದ ಶ್ರುತ್ಯರ್ಥವನರಿಯದೆ
ಹೋತನಂ ಕೊಂದು ಹೋಮಂಗಿಕ್ಕಿ
ಚಾಂಡಾಲರಾಗ ಹೇಳಿತ್ತೆಯಾ ವೇದ ?
ಶಿವಾರ್ಚಕಪದದ್ವಂದ್ವಯಜನಾದ್ಧಾರಣಾದಪಿ
ಶಿವನಾಮ್ನಸ್ಸದಾಕಾಲಂ ಜಪಾದ್ವಿಪ್ರೋ ಭವಿಷ್ಯತಿ
ಎಂಬರ್ಥವನರಿದು ಅರಿಯದೆ
ನರಕಕ್ಕಿಳಿಯ ಹೇಳಿತ್ತೆಯಾ ವೇದ ?
`ಏವಂ ರುದ್ರಾಯ ವಿಶ್ವದೇವಾಯ
ರುದ್ರಪಾದಾಯ ದತ್ತಮಸ್ತು' ಎಂದುದಲ್ಲದೆ
`ವಿಷ್ಣುಪಾದಾಯ ದತ್ತಮಸ್ತು' ಎಂದು ಹೇಳುವ ವೇದ ಉಳ್ಳರೆ ಹೇಳಿ ?
ಅದಂತಿರಲಿ,
ಕಾಶಿಕಾಂಡದಲ್ಲಿ ಹೇಳಿದ ಪುರಾಣಾರ್ಥದ ಹಾಗೆ
ವ್ಯಾಧನ ಕೈಯಿಂದ ವಿಷ್ಣು ಹತವಾದನೆಂದಡೆ ಪರಿಣಾಮಿಸುವರು,
ವೀರಭದ್ರನ ಕೈಯಿಂದ ವಿಷ್ಣು ಹತವಾದನೆಂದಡೆ ಅದು ಮಿಥ್ಯವೆಂಬರು.
ಮಹಾಭಾರತದಲ್ಲಿ ವಿಷ್ಣು ಈಶ್ವರಂಗೆ ಬಿನ್ನಹಂ ಮಾಡಿದುದು:
ಮನ್ನಾಥೋ ಲೋಕನಾಥಶ್ಚ ಅದ್ಯಕ್ಷರಸಮಾಯುತಃ
ಏಕ ಏವ ಮಹಾದೇವೋ ಮಹೇಶಾನಃ ಪರಸ್ಥಿತಃ
ಈಶ್ವರಸ್ಯ ಸಮೋ ನಾಸ್ತಿ ಬ್ರಹ್ಮಾ ವಿಷ್ಣುಶ್ಚ ಕಿಂಕರಃ
ಶಿವವಾಕ್ಯಸಮೋ ನಾಸ್ತಿ ವೇದಶಾಸ್ತ್ರಾಗಮೇಷು ಚ
ಎಂಬ ಮಹಾವಿಷ್ಣುವಿನ ಮಹಾಭಾಷ್ಯವ ಕೇಳರಿಯಿರೇ,
ಓದಿದ ವೇದದ ಮಾತು ತಥ್ಯವೇ ? ಅಲ್ಲ.
ನಿಮ್ಮಧಿದೇವತೆಯಾಗುತಂ ಇಹ ವಿಷ್ಣುವಿನ ಮಾತು ಮಿಥ್ಯವೆಂದರೆ ಬಿಡಿ,
ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಯ್ಯನ
ಜಾತನೆಂದಿಕ್ಕಿದೆ ಮುಂಡಿಗೆಯನಾರ್ಪವರೆತ್ತಿಕೊಳ್ಳಿರೆ.