ಒಟ್ಟು 6 ಕಡೆಗಳಲ್ಲಿ , 4 ವಚನಕಾರರು , 6 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಹೊನ್ನಬಿಟ್ಟಡೇನು, ಹೆಣ್ಣಬಿಟ್ಟಡೇನು, ಮಣ್ಣಬಿಟ್ಟಡೇನು, ವಿರಕ್ತನಾಗಬಲ್ಲನೆ ? ಆದ್ಯರ ವಚನಂಗಳ ಹತ್ತುಸಾವಿರವ ಲೆಕ್ಕವಿಲ್ಲದೆ ಓದಿದಡೇನು, ನಿತ್ಯರಾಗಬಲ್ಲರೆ ? ಮಂಡೆಯ ಬೋಳಿಸಿಕೊಂಡು ಅಂದಚಂದಕೆ ತಿರುಗುವ ಜಗಭಂಡರ ಮೆಚ್ಚುವನೆ, ಅಮುಗೇಶ್ವರಲಿಂಗವು ?
ನೈಷಿ*ಕಭಾವ ನಂಬುಗೆ ಇಲ್ಲದ ಬಳಿಕ,ಎಷ್ಟು ಓದಿದಡೇನು ? ಎಷ್ಟು ಕೇಳಿದಡೇನು ?ಎಷ್ಟು ಪೂಜೆಯ ಮಾಡಿದಡೇನು ?ಅದು ನಷ್ಟವಲ್ಲದೆ ದೃಷ್ಟಕ್ಕೆ ಸಂಧಾನವಲ್ಲ ನೋಡಾ.ಇದು ಕಾರಣ, ನೈಷೆ* ಬಲಿದು ಭಾವತುಂಬಿನಂಬುಗೆ ಇಂಬುಗೊಂಡು ಮಾಡುವುದೆ ದೇವರಪೂಜೆ.ಅದೇ ನಮ್ಮ ಅಖಂಡೇಶ್ವರಲಿಂಗದ ಒಲುಮೆ.
ಆಡಿದಡೇನು, ಹಾಡಿದಡೇನು, ಓದಿದಡೇನು ತ್ರಿವಿಧದಾಸೋಹವಿಲ್ಲದನ್ನಕ್ಕರಿಆಡದೆ ನವಿಲು ಹಾಡದೆ ತಂತಿ ಓದದೆ ಗಿಳಿಭಕ್ತಿುಲ್ಲದವರನೊಲ್ಲ ಕೂಡಲಸಂಗಮದೇವ. 207
ಓದಿದಡೇನು, ಕೇಳಿದಡೇನು, ಶಿವಪಥವನರಿಯದನ್ನಕ್ಕಓದಿತ್ತು ಕಾಣಿರೋ ಶುಕನು, ಶಿವಜ್ಞಾನವನರಿಯದನ್ನಕ್ಕ.ಓದಿದ ಫಲವು ಮಾದಾರ ಚೆನ್ನಯ್ಯಂಗಾುತ್ತುಕೂಡಲಸಂಗಮದೇವಾ. 143
ಕೊಂಬಿನಕುರಿಯಂತೆ ಕೂಗಿದಡೇನು, ಲಿಂಗೈಕ್ಯರಾಗಬಲ್ಲರೆ ? ಕೋಟ್ಯಾನುಕೋಟಿಯನೋದಿದಡೇನು, ಸಾತ್ವಿಕರಾಗಬಲ್ಲರೆ ? ಬೆನ್ನುಹುಳಿತ ಕೋಣನಂತೆ ಮನೆಮನೆಯ ತಿರಿದುಂಡಡೇನು, ಮಹಾಜ್ಞಾನಿಯಾಗಬಲ್ಲರೆ ? ಅಮುಗೇಶ್ವರಲಿಂಗವನರಿಯದವರು ಓದಿದಡೇನು ? ಕತ್ತೆ ಬೂದಿಯಲ್ಲಿ ಬಿದ್ದಂತಾಯಿತು.
ವೇದ ನಾಲ್ಕನು ಓದಿದಡೇನು ? ಶಾಸ್ತ್ರವ ನೆರೆ ಕೇಳಿದಡೇನು ?ಶಿವಜ್ಞಾನಹೀನರು ಬಲ್ಲರೆ ಭಕ್ತಿಯ ಪಥವನು ?ಅಲೋಡ್ಯಂ ಚ ಚತುರ್ವೇದೀ ಸರ್ವಶಾಸ್ತ್ರವಿಶಾರದಃ |ಶಿವತತ್ವಂ ನ ಜಾನಾತಿ ದರ್ವೀ ಪಾಕರಸಂ ಯಥಾ ||ಕ್ಷೀರದೊಳಗಣ ಸಟ್ಟುಗ ಸವಿಸ್ವಾದುಗಳ ಬಲ್ಲುದೆ ?ಓದಿದ ನಿರ್ಣಯವ ನಮ್ಮ ಮಾದಾರ ಚೆನ್ನಯ್ಯ,ಮಡಿವಾಳಯ್ಯ, ಡೋಹರ ಕಕ್ಕಯ್ಯನವರು ಬಲ್ಲರು,ಬಸವಪ್ರಿಯ ಕೂಡಲಚೆನ್ನಸಂಗಮದೇವಾ.