ಅಕಾಯದ ಕಣ್ಣಿನಲ್ಲಿ ನೋಡಿ ವಿಕಾರವಳಿದು
ಸುಖಪಟ್ಟಣವ ಕಂಡೆ.
ಆ ಪಟ್ಟಣದರಸಿಂಗೆ ಭಾವ ಕಾಲಿಲ್ಲ.
ಪ್ರಧಾನಂಗೆ ಪಾರುಪತ್ಯಕ್ಕೆ ನುಡಿವಡೆ ಬಾಯಿಲ್ಲ.
ತಳವಾರ ತಿರುಗುವುದಕ್ಕೆ ಕಣ್ಣಿಲ್ಲ.
ಆ ಪಟ್ಟಣದಲ್ಲಿ ಮೂವರಿಗೆ ಕರ್ತನೊಬ್ಬ ಅರಸು.
ಆ ಅರಸ ಕಣ್ಣಿನಲ್ಲಿ ಕಾಣಲಿಲ್ಲ, ಎಲ್ಲಿದ್ದಹರೆಂದು ಕೇಳಲಿಲ್ಲ.
ಇದ್ದ ಠಾವಿಂಗೆ ಒಬ್ಬರೂ ಹೊದ್ದಲಿಲ್ಲ.
ಅರಸಿನ ಆಜ್ಞೆ, ಬಲುಹ, ಓಲಗಕ್ಕೆ ತೆರಪಿಲ್ಲ.
ಜೀವಿತಕ್ಕೆ ಅಡಹಿಲ್ಲ, ಎನ್ನ ಬಡತನವ ಇನ್ನಾರಿಗೆ ಹೇಳುವೆ?
ಬಂಟರು ಸತ್ತರು, ಅರಸು ನಷ್ಟವಾದ.
ಆ ಉಭಯದ ಬೇಧವ ನಾನರಿಯೆ, ನೀ ಹೇಳು.
ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.