ತನುವೆಂಬ ಹುತ್ತದಲ್ಲಿ ಮನವೆಂಬ ಸರ್ಪ ಹೆಡೆಯನುಡುಗಿಕೊಂಡಿರಲು
ಜ್ಞಾನಶಕ್ತಿ ಬಂದು ಎಬ್ಬಿಸಲು,
ಉರಿ ಭುಗಿಲೆನುತ್ತ ಹೆಡೆಯನೆತ್ತಿ ಊರ್ದ್ವಕ್ಕೇರಲು,
ಅಷ್ಟಮದವೆಲ್ಲ ಹಿಟ್ಟುಗುಟ್ಟಿದವು; ಕರಣಂಗಳೆಲ್ಲ ಉರಿದುಹೋದವು.
ಇದ್ದ ಶಕ್ತಿಯನೆ ಕಂಡು, ಮನ ನಿಶ್ಚಯವಾದುದನೆ ನೋಡಿ,
ಪಶ್ಚಿಮದ ಕದವ ತೆಗೆದು, ಬಟ್ಟಬಯಲ ಬೆಳಗಿನೊಳಗೆ ಓಲಾಡಿ
ಸುಖಿಯಾದೆನಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.