ಅಥವಾ

ಒಟ್ಟು 4 ಕಡೆಗಳಲ್ಲಿ , 4 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾಲತ್ವದಲ್ಲಿ ತನ್ನ ಮಲಮೂತ್ರದೊಡನೆ ಹೊರಳಾಡಿ, ಯೌವನಪ್ರಾಯದಲ್ಲಿ ಮದಮತ್ಸರದಿಂದ ಹೋರಾಡಿ, ಕಾಮದಲ್ಲಿ ಕರಗಿ, ಕ್ರೋಧದಲ್ಲಿ ಕೊರದು, ಲೋಭ ಮೋಹದಿಂದ ಮಗ್ನರಾಗಿ, ಯೌವನಬಲಗುಂದಿ ಮುಪ್ಪುವರಿದು ಹಲ್ಲು ಬಿದ್ದು, ಕಣ್ಣು ಒಳನಟ್ಟು, ಬೆನ್ನು ಬಾಗಿ, ದಮ್ಮು ಹತ್ತಿ, ಗುರುಗೂರಿ ಗರಹತ್ತಿ, ಸಾಯುವ ಮನುಜರಿಗೆ, ವಿಭೂತಿ ವೀಳ್ಯೆ ಎಂದು ಮಾಡಿ, ಅವನ ಪಣೆಯಲ್ಲಿ ವಿಭೂತಿಯ ಧರಿಸಿ, ಸರ್ವಾಂಗದಲ್ಲಿ ವಿಭೂತಿ ಲೇಪನ ಮಾಡಿ, ಸ್ಥಾನಸ್ಥಾನಂಗಳಲ್ಲಿ ರುದ್ರಾಕ್ಷಿಯ ಧರಿಸಿ, ಅವನ ಮನೆಯಲ್ಲಿ ಶಿವಗಣಂಗಳು ಸಲಿಸಿ, ಅವನ ಮಸ್ತಕದ ಮೇಲೆ ಸಕಲ ಗಣಂಗಳು ತಮ್ಮ ಪಾದವನಿಟ್ಟು ಅವನ ಕೈಯಲ್ಲಿ ವಿಭೂತಿ ರುದ್ರಾಕ್ಷಿ ಬಿಲ್ವಪತ್ರಿ ಸುವರ್ಣ ಮೊದಲಾದ ಕಾಂಚನವ ಬ್ಥಿಕ್ಷವ ಕೊಂಡು ಅವನು ಸತ್ತುಹೋದ ಮೇಲೆ ಊರ ಹೊರಗಾಗಲಿ, ಊರೊಳಗಾಗಲಿ, ಲಿಂಗಸ್ಥಾಪನೆಯಿದ್ದ ಮಠಮಾನ್ಯದಲ್ಲಿ ಏಳುಪಾದ ನಿಡಿದು, ಏಳುಪಾದ ಉದ್ದ ಭೂಮಿಯ ಒಳಗೆ, ಐದುಪಾದ ಚೌಕು, ಮೂರುಪಾದ ಅಡ್ಡಗಲ, ಮೂರುಪಾದ ಒಳಯಕ್ಕೆ ತ್ರಿಕೋಣೆ. ಇಂತೀ ಕ್ರಮದಲ್ಲಿ ಕ್ರಿಯಾಸಮಾದ್ಥಿಯ ಮಾಡಿ, ಸುಣ್ಣ ಕೆಂಪುಮಣ್ಣಿನ ಸಾರಣೆಯ ಮಾಡಿ ರಂಗವಾಲಿಯ ತುಂಬಿ, ತಳಿರುತೋರಣವ ಕಟ್ಟಿ, ಕೋಣಿ ಕೋಣಿ ಸ್ಥಾನಕ್ಕೆ ಓಲೆಯ ಮೇಲೆ ಪ್ರಣಮವಂ ಬರೆದು ಆ ಸಮಾದ್ಥಿಯಲ್ಲಿ ಸಂಬಂದ್ಥಿಸಿ, ಮತ್ತಂ, ಅವನ ಶವಕ್ಕೆ ಹಾಗೆ ಪ್ರಣಮವಂ ಬರೆದು ಸಂಬಂದ್ಥಿಸಿ, ಸಂಚರಿಸಿ ಮೇಲೆ ಮೋಕ್ಷವಾಯಿತು ಎಂಬರಯ್ಯಾ; ಮೋಕ್ಷವಾಗಲರಿಯದು. ಅದೆಂತೆಂದಡೆ, ಇಂತಿವೆಲ್ಲವು ಹೊರಗಣ ಉಪಚಾರವು. ಈ ಉಪಚಾರದಿಂದ ಕರ್ಮದೋಷಗಳು ಹರಿದು ಪಿಶಾಚಿಯಾಗನು, ಭವ ಹಿಂಗದು. ಇಂತೀ ಕ್ರಮದಲ್ಲಿ, ಅಂತರಂಗದಲ್ಲಿ ಲಿಂಗಾಂಗಕ್ಕೆ ಸ್ವಾನುಭಾವಜ್ಞಾನಸೂತ್ರದಿಂ ಪ್ರಣವಸಂಬಂಧ ಮಾಡಿಕೊಂಡಡೆ ಅದೇ ಕ್ರಿಯಾಸಮಾದ್ಥಿ, ಗೋಮುಖಸಮಾದ್ಥಿ, ಮಹಾನಿಜ ಅಖಂಡ ಚಿದ್ಬಯಲಸಮಾದ್ಥಿ. ಇಂತಪ್ಪ ಸಮಾದ್ಥಿ ಉಳ್ಳವರಿಗೆ ಭವಬಂಧನ ಹಿಂಗಿ ಮುಂದೆ ಮೋಕ್ಷವಾಗುವದು ನೋಡೆಂದನಯ್ಯ ನಿಮ್ಮ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಓಲೆಯನಿಕ್ಕಿದ ಬಾಲೆಯ ಓಲೆಗಳೆಯದಿದೆಂತೊ ? ಓಲೆಯಿದ್ದು [ಓಲೆ]ಗಾಯತವಾಯಿತ್ತೆಲ್ಲರಿಗೆಯೂ, ಓಲೆಯೂ ಹೋಯಿತ್ತೆನಗೆ, ಬಾಲೆಯೂ ಹೋಯಿತ್ತೆನಗೆ, ಓಲೆಯ ಬಾಲೆಯ ಕೀಲಬಲ್ಲವರ ಕೂಡಲಚೆನ್ನಸಂಗನೆಂಬೆನು.
--------------
ಚನ್ನಬಸವಣ್ಣ
ಕಾಗೆ ಕುಟುಕುವ ಕೊಂಬಾಗ ಗೂಗೆ ಕಣ್ಣು ತೆರೆಯಿತ್ತು. ಗೂಗೆ ಕಣ್ಣು ತೆರೆವಾಗ ಆದಿಯ ಹಕ್ಕಿ ಬಾಯಿಬಿಟ್ಟಿತ್ತು, ಆದಿಯ ಹಕ್ಕಿ ಬಾಯಿಬಿಡುವಾಗ ಮೂದೇವರೊಡೆಯ ಮೂದೇವನಾದ. ಮೂದೇವಗೆ ಮುಂದೆ ಓಲೆಯ ತೆಗೆವಾಗ ಕೋಡಗ ಏಡಿಸುತ್ತಿದ್ದಿತ್ತು. ಕೋಡಗ ಏಡಿಸುವಾಗ ಬಳ್ಳು ತಲೆದೂಗುತ್ತಿದ್ದಿತ್ತು. ಬಳ್ಳು ತಲೆದೂಗುವಾಗ ಒಳ್ಳೆಗೆ ದಳ್ಳುರಿ ಹೊಡೆಬಂದು, ಜಗವೆಲ್ಲರ ಕೊಂದಿತ್ತು, ಆತುರವೈರಿ ಮಾರೇಶ್ವರಾ.
--------------
ನಗೆಯ ಮಾರಿತಂದೆ
ಗಂಗಾದೇವಿ ಮುಂಡೆಯಾದಳು, Uõ್ಞರೀದೇವಿ ಓಲೆಯ ಕಳೆದಳು. ಚಂದ್ರಸೂರ್ಯರಿಬ್ಬರೂ ನೀರಿಳಿದರು. ವಾಯುದೇವ ವಿಮಾನವ ಹೊತ್ತ, ವಾಸುದೇವ ತಲೆಗೂಳ್ಳಿಯನಿರಿದ. ಅಲ್ಲಿಂದತ್ತ ಗುಹೇಶ್ವರ ಸತ್ತನೆಂಬ ಸುದ್ದಿ !
--------------
ಅಲ್ಲಮಪ್ರಭುದೇವರು
-->