ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಹದ ಪೂರ್ವವ ಜರೆದು, ಪರದ ಪೂರ್ವವನರಿದು, ಗುರುಕಾರುಣ್ಯವ ಪಡೆದು, ಅಂತರ್ಬಾಹ್ಯದ ಭವಿಯ ತೊರೆದು ಭಕ್ತಿಪರಾಯಣರಾಗಿ ನಿಂದುದೆ ಲಿಂಗದ ನಿಜದಂಗ. ಅದೆಂತೆಂದಡೆ; ತ್ರಿಗುಣಂ ಪಂಚಕಂ ಚೈವ ಚತ್ವಾರಿ ಷಡ್ವಿಧೈವ ಚ ಸಘಾತಂ ವ್ಯಸನಂ ಚೈವ ಇತ್ಯಾದಿ ಭವಿಮಿಶ್ರಿತಂ ಎಂದುದಾಗಿ, ಅಂತರಂಗದ ಭವಿಯನು ಹಿಂಗಿ, ಅನೃತಮಸ್ಥಿರಂ ವಾಕ್ಯಂ ವಂಚನಂ ಪಙ್ತಭೇದನಂ ಔದಾಸೀನಂ ನಿರ್ದಯತ್ವಂ ಷಡ್ವಿಧಂ ಭವಿಮಿಶ್ರಿತಂ ಎಂಬೀ ಮಾನವರಂಗದ ಭವಿಯನು ಕಳೆದು, ಅರ್ಚನಾದಿ ಕ್ರಿಯಾಕಾಲೇ ಪ್ರಚ್ಛನ್ನಂ ಪಟಮುತ್ತಮಂ ಪಾಪೀ ಕೋಪೀ ಪರಿಭ್ರಷ್ಟೋನಾಸ್ತಿಕೋ ವ್ರತದೂಷಕಃ ದುರ್ಜನಶ್ಚ ದುರಾಚಾರೀ ದುರ್ಮುಖಶ್ಚಾಪ್ಯದೀಕ್ಷಿತಃ ಪ್ರಮಾದಾದ್ದೃಶ್ಯತೇ ಯೇನ ತಸ್ಯ ಪೂಜಾ ತು ನಿಷ್ಫಲಂ ಎಂಬೀ ಬಹಿರಂಗದ ಭವಿಯನ್ನು ತೊಲಗಿಸಿ, ಇಂತೀ ತ್ರಿವಿಧಭವಿಯನು ದೂರಮಾಡಿ, ಶಿವಭಕ್ತಿಯೆ ಅಂಗವಾದ ಲಿಂಗೈಕ್ಯ ಲಿಂಗಪೂಜಕರಿಗೆ ಪೂರ್ವವರ್ಣಾಶ್ರಮಾದಿ ಸೂತಕವಿಲ್ಲ, ಕೂಡಲಸಂಗಯ್ಯಾ.
--------------
ಬಸವಣ್ಣ
-->