ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚರಲಿಂಗ ಗುರುಹಿರಿಯರ ಜರಿಯಬಾರದೆಂದು ಹೇಳುವಿರಿ. ಬಾಳೆಯೆಲೆಯಮೇಲೆ ತುಪ್ಪವತೊಡದಂತೆ, ನಿಮ್ಮ ಔದುಂಬಫಳ ಛಾಯ ನುಡಿಯ ತೆಗೆದಿಡಿರಿ. ಜಂಗಮಲಿಂಗ ಗುರುಹಿರಿಯರನರಸುವರೆ ಜ್ಞಾನಿಗಳು? ಅವರ ಕಾಯ್ದಿಪ್ಪ ತನು ಮನ ಭಾವ ವಿಕೃತಿಯನರಸುವರಲ್ಲದೆ. ಅದೇನು ಕಾರಣವೆಂದೊಡೆ: ತನು ಮನ ಭಾವವಿಡಿದಿರ್ಪ ಜನರನ್ನು ಒಂದು ವೇಳೆ ತಿಳಿಸಿಕೊಳ್ಳಬಹುದು; ಅಳಿದುಳಿದಂಗಲಿಂಗಸಂಬಂಧಿಗಳೆಂದು ನುಡಿದು ಅಳಿದಲ್ಲಿ ಉಳಿದರೆ ಅದು ಮಲದೇಹಿ, ಮರಳಿ ಶುದ್ಧವಾಗದು ನೋಡಾ. ಹೇಮ ಮೌಕ್ತಿಕದಂತೆ ಅರಿದಾಚರಿಸುವುದು ಗುರುನಿರಂಜನ ಚನ್ನಬಸವಲಿಂಗ ಪ್ರಸಾದಿಯಾಗಬೇಕಾದರೆ.
--------------
ದೇಶಿಕೇಂದ್ರ ಸಂಗನಬಸವಯ್ಯ
-->