ಅಥವಾ

ಒಟ್ಟು 366 ಕಡೆಗಳಲ್ಲಿ , 7 ವಚನಕಾರರು , 245 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಚ್ಚಿದಾನಂದ ಸದ್‍ಗುರು ತೋರಿದರೆ ಕಂಡೆನಯ್ಯಾ ಸತ್ಯಸದಾಚಾರವ. ಸಚ್ಚಿದಾನಂದ ಸದ್‍ಗುರು ತೋರಿದರೆ ಕಂಡೆನಯ್ಯಾ ಭಕ್ತಿ ಜಾÕನ ವೈರಾಗ್ಯವ. ಸಚ್ಚಿದಾನಂದ ಸದ್‍ಗುರು ತೋರಿದರೆ ಕಂಡೆನಯ್ಯ ನಿತ್ಯಲಿಂಗಾಂಗಸಂಗಸಮರಸವ. ಸಚ್ಚಿದಾನಂದ ಸದ್‍ಗುರು ತೋರಿಸಿದರೆ ಕಂಡೆನಯ್ಯಾ ಅಖಂಡೇಶ್ವರಾ ನಿಮ್ಮ ಶ್ರೀಚರಣಕಮಲವ.
--------------
ಷಣ್ಮುಖಸ್ವಾಮಿ
ಬೆಟ್ಟದ ತುದಿಯ ಮೇಲೆ ಮುಟ್ಟಿ ಕೂಗುವ ಕೋಗಿಲೆಯ ಕಂಡೆನಯ್ಯ. ಆ ಕೋಗಿಲೆಯ ಇರುವೆ ನುಂಗಿ, ಆ ಇರುವೆಯ ನಿರ್ವಯಲು ನುಂಗಿ, ಆ ನಿರ್ವಯಲ ತಾನು ತಾನೇ ನುಂಗಿತು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಕರ್ಮವೆಂಬ ಕತ್ತಲೆಯಲ್ಲಿ ಒಬ್ಬ ಮಾನವನು ವರ್ಮಗೆಟ್ಟು ಬಿದ್ದಿರುವುದ ಕಂಡೆನಯ್ಯ. ಧರ್ಮವೆಂಬ ಗುರುವು ನಿರ್ಮಳವೆಂಬ ಚಬಕ ಹಾಕಲು, ಕರ್ಮವೆಂಬ ಕತ್ತಲೆ ಹರಿದು, ವರ್ಮವೆಂಬ ದಾರಿಯನೇರಿ, ಧರ್ಮವೆಂಬ ಗುರುವ ಕೂಡಿ ನಿರವಯವೆಂಬ ಕರಸ್ಥಲದಲ್ಲಿ ನಿಂದಿರುವ ಬೆಡಗ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಅಗ್ನಿಗಿರಿಯ ಪಟ್ಟಣದ ಚಂದ್ರಗಿರಿಯ ಪಟ್ಟಣದ ನಡುವೆ ಎರಡೆಸಳ ಸ್ಥಾವರ ಗದ್ದುಗೆಯ ಕಂಡೆನಯ್ಯ. ಆ ಗದ್ದುಗೆಯ ಮೇಲೆ ಸ್ಫಟಿಕವರ್ಣದ ಮೂರ್ತಿ ನೆಲೆಯಂಗೊಂಡಿರ್ಪನು ನೋಡಾ. ಆ ಸ್ಫಟಿಕವರ್ಣದಮೂರ್ತಿಯ ಕೂಡಿ ಅಗ್ನಿಗಿರಿಯ ಪಟ್ಟಣಮಂ ಹೊಗಲು, ಅಲ್ಲಿ ಆಚಾರಲಿಂಗದೇವರು, ಗುರುಲಿಂಗದೇವರು, ಶಿವಲಿಂಗದೇವರು ನೆಲೆಯಂಗೊಂಡಿರ್ಪರು ನೋಡಾ. ಅವರಿಗೆ ಸೂಚನೆಯ ಮುಟ್ಟಿಸಲು ಆಚಾರಲಿಂಗದೇವರು ನಾಶಿಕಾಗ್ರದಲ್ಲಿ ನೆಲೆಯಂಗೊಂಡರು. ಗುರುಲಿಂಗದೇವರು ಜಿಹ್ವಾಗ್ರದಲ್ಲಿ ನೆಲೆಯಂಗೊಂಡರು. ಶಿವಲಿಂಗದೇವರು ನೇತ್ರಸ್ವಯದಲ್ಲಿ ನೆಲೆಯಂಗೊಂಡರು. ಆ ಸ್ಫಟಿಕವರ್ಣದ ಮೂರ್ತಿಯಂ ಕೂಡಿ ಚಂದ್ರಗಿರಿಯ ಪಟ್ಟಣಮಂ ಪೊಗಲು ಅಲ್ಲಿ ಜಂಗಮಲಿಂಗದೇವರು, ಪ್ರಸಾದಲಿಂಗದೇವರು, ಮಹಾಲಿಂಗದೇವರು ನೆಲೆಯಂಗೊಂಡಿರ್ಪರು ನೋಡಾ. ಅವರಿಂಗೆ ಸೂಚನೆಯಂ ಮುಟ್ಟಿಸಲು, ಜಂಗಮಲಿಂಗದೇವರು ತ್ವಕ್ಕಿನ ಸ್ವಯದಲ್ಲಿ ನೆಲೆಯಂಗೊಂಡಿರ್ಪರು. ಪ್ರಸಾದಲಿಂಗದೇವರು ಶ್ರೋತ್ರಸ್ವಯದಲ್ಲಿ ನೆಲೆಯಂಗೊಂಡಿರ್ಪರು. ಮಹಾಲಿಂಗದೇವರು ಭಾವಸ್ವಯದಲ್ಲಿ ನೆಲೆಯಂಗೊಂಡಿರ್ಪರು. ಆ ಸ್ಫಟಿಕವರ್ಣದ ಮೂರ್ತಿಯಂ ಕೂಡಿ, ಅಗ್ನಿಗಿರಿಯಪಟ್ಟಣ ಚಂದ್ರಗಿರಿಯ ಪಟ್ಟಣದ ಮುಂದಳ ದಿಕ್ಕಿನಲ್ಲಿ ಸಾವಿರೆಸಳಮಂಟಪ ಕಂಡೆನಯ್ಯ. ಆ ಮಂಟಪದೊಳಗೆ ಮಹಾಜ್ಞಾನಪ್ರಕಾಶವು ಹೊಳೆವುತಿರ್ಪುದು ನೋಡಾ. ಆ ಬೆಳಗಿನೊಳು ಕೂಡಿ ತಾನುತಾನಾಗಿರ್ಪನಯ್ಯ ಝೇಂಕಾರ ನಿಜಲಿಂಗಪ್ರಭುವೆ ನಿಮ್ಮ ಶರಣನು.
--------------
ಜಕ್ಕಣಯ್ಯ
ಶಿವಾನುಭಾವಿಗಳ ಸಂಗದಿಂದ ಲಿಂಗಾನುಭಾವವ ಕಂಡೆನಯ್ಯ. ಲಿಂಗಾನುಭಾವದಿಂದ ಪರಮಸುಖವ ಕಂಡೆನಯ್ಯ. ಆ ಪರಮಸುಖದಿಂದ ನಿಮ್ಮ ಕಂಡೆನಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಆಕಾಶದ ಮೇಲೆ ಏಕಾಂತ ಸೂಳೆಯ ಕಂಡೆನಯ್ಯ. ಆ ಸೂಳೆಯ ಗೃಹದಲ್ಲಿ ಸಾಸಿರದಳ ಕಮಲಮಂಟಪವ ಕಂಡೆನಯ್ಯ. ಆದಿಯಲ್ಲಿ ಒಬ್ಬ ವಿಟನು, ಮೂವರು ಗೆಳೆಯರ ಕೂಡಿಕೊಂಡು, ಹೃದಯದಲ್ಲಿರ್ದ ರತ್ನವ ತೆಗೆದು, ಆ ಸೂಳೆಗೆ ಒತ್ತೆಯಂ ಕೊಟ್ಟು, ಸಂಗಸಂಯೋಗಮಂ ಮಾಡುವುದ ಮೂವರು ಗೆಳೆಯರು ಕಂಡು ನಿರ್ವಯಲಾದುದ ಕಂಡೆನಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಐವತ್ತೆರಡೆಸಳಿನ ಸ್ಥಾವರಗದ್ದುಗೆಯ ಮೇಲೆ ಪರಂಜ್ಯೋತಿಲಿಂಗವ ಕಂಡೆನಯ್ಯ. ಆ ಲಿಂಗದೊಳಗೆ ಅನಂತಕೋಟಿ ನೋಮಸೂರ್ಯರ ಬೆಳಗು ನೋಡಾ. ಆ ಬೆಳಗ ನೋಡಹೋಗದ ಮುನ್ನ, ಅದು ಎನ್ನ ನುಂಗಿ, ಬೆಳಗು ತನ್ಮಯವಾಯಿತ್ತು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಕಾಡಾರಣ್ಯದೊಳಗೆ ಒಬ್ಬ ಸೂಳೆ ಕರೆದು ಐವರಿಗೆ ಒತ್ತೆಯಕೊಡುವುದ ಕಂಡೆನಯ್ಯ ! ಊರೊಳಗಣ ಗೊಲ್ಲತಿ ಐವರ ಒಪ್ಪಿಸಿಕೊಟ್ಟು ಸೂಳೆ ಗೊಲ್ಲತಿ ಒಂದಾದುದ ಕಂಡೆ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಪಂಚಮುಖದ ಸರ್ಪನ ತಲೆಯ ಮೇಲೆ ಒಂದು ಮಾಣಿಕ್ಯವ ಕಂಡೆನಯ್ಯ. ಆ ಮಾಣಿಕ್ಯದ ಪ್ರಭೆಯಲ್ಲಿ ನಾನು ನೀನೆಂಬುದ ಮರೆದು ಸ್ವಾನುಭಾವ ಸಿದ್ಧಾಂತವನಳವಟ್ಟು ತಾನು ತಾನಾಗಿಪ್ಪನು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಆಧಾರದೊಳಗಣ ಜ್ಯೋತಿ ಮೂಜಗವ ನುಂಗಿದುದ ಕಂಡೆನಯ್ಯ. ಮೂಜಗ ಸತ್ತು ಮೂಜಗದೊಡೆಯನುಳಿದುದು ಸೋಜಿಗವೆಂದೆಂಬೆನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಗಗನ ಮಂಡಲದಲ್ಲಿ ಹುಟ್ಟಿದ ಶಶಿಕಳೆ ಭೂಮಂಡಲದಲ್ಲಿ ಉದಯವಾದುದ ಕಂಡೆನಯ್ಯ. ಭೂಮಂಡಲದಲುದಯವಾದ ಶಶಿಕಳೆ, ತ್ರೆ ೈಜಗವ ನುಂಗಿತ್ತು ನೋಡ. ನಾರಿಯರ ತಲೆಯ ಮೆಟ್ಟಿ, ಮೇರುವೆಯ ಹೊಕ್ಕಿತ್ತು ನೋಡಾ. ಮೇರುಗಿರಿಯ ಪರ್ವತದಲ್ಲಿಪ್ಪಾತನನೆಯ್ದೆ ನುಂಗಿತ್ತು ನೋಡಾ. ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಪೃಥ್ವಿ ಆಕಾಶದ ಮೇಲೆ ಏಕಾಂತಲಿಂಗವ ಕಂಡೆನಯ್ಯ. ಆ ಲಿಂಗದಲ್ಲಿ ಏಕೋಮನೋಹರನೆಂಬ ಪೂಜಾರಿಯು ಲಿಂಗಾರ್ಚನೆಯ ಮಾಡಿ ನಿಃಪ್ರಿಯವಾದುದ ಕಂಡೆ ನೋಡಾ ಂ್ಞhiೀಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಹಾರುವ ಹಕ್ಕಿಗೆ ಗರಿ ಈರೈದಾದುದ ಕಂಡೆನಯ್ಯ. ಕುಳಿತರೆ ಗೇಣುದ್ಧ, ಎದ್ದರೆ ಮಾರುದ್ದ. ಹಾರುವಲ್ಲಿ ಆರುಗೇಣಾಗಿಪ್ಪುದಯ್ಯ. ಮತ್ತರಿದೆನೆಂದರೆ ಅದೆ ನೋಡಾ. ತನ್ನ ತಿಳಿದರೆ ತಾನು ಅತಿಸೂಕ್ಷ ್ಮ ನೋಡಾ. ತನ್ನ ಪರಿ ವಿಪರೀತ ವಿಸ್ಮಯವಾಗಿದೆ ನೋಡಾ. ಮೂರಾರು ಬಾಗಿಲಲ್ಲಿ ಹಾರಿ ಹಲುಬುವುದಯ್ಯ. ಸರ್ವಬಾಗಿಲಲ್ಲಿ ಪರ್ಬಿ ಪಲ್ಲಯಿಸುವುದು. ಈ ಬಾಗಿಲೆಲ್ಲವು ತನ್ನ ಹಾದಿಯೆಂದರಿಯದು ನೋಡಾ. ತನ್ನ ಹಾದಿಯನರಿದು ಚೆನ್ನಾಗಿ ನಡೆದಾಡಬಲ್ಲರೆ ಮೇಲುಗಿರಿ ಪರ್ವತವ ಓರಂತೆಯ್ದಿ ನಿರ್ವಯಲ ಬೆರಸಿತ್ತೆಂಬೆನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಐದು ಮನೆಯೊಳಗೆ ಏಳುಮಂದಿ ಹೆಂಡರ ಕಂಡೆನಯ್ಯ. ಆ ಏಳುಮಂದಿ ಹೆಂಡರು ಎಂಟುಮಂದಿ ನೆಂಟರ ಸಂಗವ ಮಾಡುತಿಪ್ಪರು ನೋಡಾ. ಕಂಟಕಂಗಳ ಗೆಲಿದ ಪುರುಷನು, ಎಂಟುಮಂದಿ ನೆಂಟರ ಕೊಂದು, ಏಳುಮಂದಿ ಹೆಂಡರ ಹಿಡಿದು, ಐದು ಮನೆಯ ತೊರೆದ ಸೋಜಿಗವ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಇಪ್ಪತ್ತೈದು ನೆಲೆಯ ಮೇಲೆ ಸುಪ್ಪಾಣಿಯ ಕಂಡೆನಯ್ಯ. ಆ ಸುಪ್ಪಾಣಿಯ ಸಂಗದಿಂದ ಕೂಗುವ ಕಪ್ಪೆಯ ಕಂಡೆನಯ್ಯ. ಆ ಕೂಗುವ ಕಪ್ಪೆ ಸರ್ಪನ ನುಂಗಿ ನಿರ್ವಯಲಾದ ವಿಚಿತ್ರವ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಇನ್ನಷ್ಟು ... -->