ಅಥವಾ

ಒಟ್ಟು 503 ಕಡೆಗಳಲ್ಲಿ , 1 ವಚನಕಾರರು , 503 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆ ಅಕ್ಷರವನು ಆರೈದು ತೋರಿರಿ ಓರಂತೆ ಎನ್ನ ಸದುಹೃದಯನೆನಿಸಿ ನಾದ ಕಳೆಗಳನೆನ್ನ ಆಕರದೊಳಗಿಟ್ಟು ಅಭೇದ್ಯ ಪರಮಾನಂದ ಸತ್ಯರೂಪ ನಿತ್ಯಾನಂದ ಶ್ರೀ ಗುರು ಚೆನ್ನಬಸವಣ್ಣನುನ್ನತವನಾರು ಬಲ್ಲರು ಹೇಳಾ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಆನೆತ್ತಲಯ್ಯಾ, ಕ್ರಿಮಿಕೀಟಕನಾಗಿ ಹುಟ್ಟುವನ ಹುಟ್ಟ ಕೆಡಿಸಿದೆ. ಇನ್ನಹುದಾನೇನರಿದು ಹೇಳಾ, ಎಲೆ ಅಯ್ಯಾ. ಶುದ್ಧಸಿದ್ಧಪ್ರಸಿದ್ಧವನು ತೋರಿ ಪ್ರಾಪ್ತಭೋಕ್ತಭುಕ್ತಿಯೆಂಬುದಕ್ಕೆ ಹೊರಗು ಮಾಡಿದೆ. ಇನ್ನು ನಾನಿನಪ್ಪುದೇನರಿದೈ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಶ್ರೀಕರ ಬ್ರಹ್ಮಾದಿಗಳೇನು ಕಾರಣ ಯೋನಿ, ನಾನಾ ಭವಂಗಳಲಿ ಬಂದರಯ್ಯ. ಧ್ಯಾನ ಮೌನ ಸಮಾದ್ಥಿಕಾರಣದ ಸಮತೆಯನು ಭೇದಿಸಲು ಅರಿಯದೆ, ನಾನಾ ಭವಂಗಳ ಮಗ್ನವಾಗಿ, ಅನಾದಿ ಸಂಸಿದ್ಧ ಕಪಿಲಸಿದ್ಧಮಲ್ಲಿಕಾರ್ಜುನ ಆದಿಯಕ್ಷರ ಸಮತೆ ಸಮಗೂಡದು
--------------
ಸಿದ್ಧರಾಮೇಶ್ವರ
ತನುವೆಂಬ ಹೇಳಿಗೆಗೆ ಮನಸರ್ಪನಾವರಿಸಿ, ಇನಿದು ಬಂದಡೆ ಅದಕ್ಕಿಂಬುಗೊಡದೆ, ಇರುತಿರ್ಪ ಸರ್ಪವನು ತೆಗೆದು ಶಿವಲಿಂಗವನು ನೆಲೆಗೊಳಿಸಿದ ಶ್ರೀ ಗುರುವೆ ಶರಣು ಶರಣೆಂಬ, ವಾಕ್ಯಂಗಳ್ಲ ಆಕಾರ ಚತುಷ್ಟಯಮಾನಂದದದಲ್ಲಿರಿಸಿದ ಏಕೋ ರುದ್ರ ಶಿಷ್ಟ ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಕೈಯಲ್ಲಿ ಹಿಡಿದು ಕಾಬುದು ಕರ್ಮಪೂಜೆಯಲ್ಲವೆ? ಮನದಲ್ಲಿ ನೆನೆದು ಮಾಡುವುದೆಲ್ಲವು ಕಾಯದ ಕರ್ಮವಲ್ಲವೆ? ಭಾವಶುದ್ಧವನರಿವ ಪರಿ ಇನ್ನಾವುದು? ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಅಪ್ಪಿನಲಾದ ಘಟವು ಅರ್ಪಿ[ತದ]ಲೆ ಲೀಯ, ಇಪ್ಪತ್ತೈದೆಂದು ಕುರುಹಿಡುವೆ ಏಕೆಲೆ ಮನುಜಾ. ತಾ ಹುಟ್ಟಿ ತಮ್ಮವ್ವೆ ಬಂಜೆಯೆಂಬ ನ್ಯಾಯದಲ್ಲಿ ಬೇರೆ ವಿವರಿಸಿ ತೋರಬಲ್ಲಡದು ಯೋಗ. ಅಭ್ಯಾಸಸಮಾದ್ಥಿಯಿಂ ಅನುಭವಿಗಳೆಲ್ಲರಿಗೆ ಬಯಲ ಸಮಾದ್ಥಿಯಾಗದಯ್ಯಾ ಕಪಿಲಸಿದ್ಧಮಲ್ಲಿಕಾರ್ಜುನ
--------------
ಸಿದ್ಧರಾಮೇಶ್ವರ
ನಿಜವ ನಂಬಿದ ಬ್ರಹ್ಮ ಅಜಲೋಕದಲ್ಲಿಪ್ಪ. ಭಜನಾಕ್ಷರದ್ವಯದ ಸಿಂಹಾಸನದ ನೆಲೆಯ ಮೇಟ್ಟು ಕುರುಹುಗೆಡಬಲ್ಲಡೆ, ತೆರಹಿಲ್ಲ ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಕ್ರಿಯೆಯದು ಚೆನ್ನಬಸವಣ್ಣನ ಎಡಪಾದ, ಜಾÕನವದು ಚೆನ್ನಬಸವಣ್ಣನ ಬಲಪಾದ, ನಾನವರ ಚಮ್ಮಾವುಗೆ, ನೀನವರ ಮನೆದಾಸ, ನೋಡಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಗುರು ತೋರಿದನು ಲಿಂಗ- ಜಂಗಮವ. ಪಾದೋದಕ-ಪ್ರಸಾದವ ಕೊಳಹೇಳಿದನಲ್ಲದೆ ಇವ ತೊರೆಯ ಹೇಳಿದನೆ? ಅಹಮ್ಮೆಂದು ಪ್ರಸಾದದ್ರೋಹಿಗಳಾಗಿ, ನಾನೆ ಎಂದು ಲಿಂಗದ್ರೋಹಿಗಳಾಗಿ, ವಿಭೂತಿ-ರುದ್ರಾಕ್ಷಿ ಸಾಕ್ಷಾತ್ ಶಿವನೆಂದರಿಯದೆ, ಅವರಾಚರಣೆಯ ನೋಡಿ ನಿಂದಿಸಿ ಜಂಗಮದ್ರೋಹಿಗಳಾಗ ಹೇಳಿದನೆ? ಜಂಗಮದಲ್ಲಿ ಜಾತಿಯ, ಪ್ರಸಾದದಲ್ಲಿ ರುಚಿಯ, ಂಗದ್ಲ ಮೃದುವನರಸುವ, ಸಮಯದ್ಲ ವಿಶ್ವಾಸವಿಲ್ಲದ ಮಿಟ್ಟಿಯ ಭಂಡರ ತೋರರಯ್ಯಾ ಎನಗೆ ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಎನ್ನ ಹೊತ್ತಿಪ್ಪವಳ ನೆತ್ತಿಯ ಕಣ್ಣಿನಲ್ಲಿಪ್ಪ ಂಗವ ನಾನೆಚ್ಚತ್ತು ನೋಡುವ ತೆರನೆಂತಯ್ಯಾ. ನೋಡ ಹೋದಡೆ ನೆತ್ತಿ ಒಡೆದು ಕಣ್ಣಾಯಿತ್ತು. ನೋಡರ್ದಡೆ ಎನಗವಳು ತೋರಳು. ಎನಗೆ ಕಾಬ ತೆರನ ತೋರಾ, ಕಪಿಲಸಿದ್ಧಮಲ್ಲಿಕಾರ್ಜುನ ಪ್ರಭುವೆ.
--------------
ಸಿದ್ಧರಾಮೇಶ್ವರ
ಇಂದಿಗೆ ನಿಮಿಷಕ್ಕೆ ಬರ್ದುಂಕದೆ ಹೋಗೆಯ ಅನಂತಕಾಲ ಬರ್ದುಂಕುಗೆಯ; ಬರ್ದುಂಕಿದಡೆ ಮನ ವಿಚ್ಛಂದವಾಗದೊಂದೆಯಂದದ್ಲಪ್ಪಂತಪ್ಪ ನಿಮ್ಮದೊಂದು ಸಮತಾಗುಣ ಎನ್ನನೆಂದು ಬಂದು ಪೊದ್ದಿಪ್ಪುದು ಹೇಳಾ ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಕಾಮವಿಕಾರಕ್ಕೆ ಕಳವಳಿಸಿ ಮನವು ಹೇಮದಿಚ್ಛೆಗೆ ಹೆಚ್ಚಿ ಹೆಚ್ಚಿ ಕಾಮಾರಿ ನಿಮ್ಮುವ ನೆನೆಯದೀಮನವು ಓರಂತೆ ನರಕಕ್ಕಿಳಿದೆನೆಂಬುದು. ಕಾರುಣ್ಯಾಕರ ಎನ್ನುವನಾರೈದು ಓರಂತೆ ಮಾಡು, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಅಕಾರಪ್ರಣವದಿಂದ ಸ್ಥೂಲದೇಹ ದಗ್ಧವಾಯಿತ್ತು; ಉಕಾರಪ್ರಣವದಿಂದ ಸೂಕ್ಷ್ಮದೇಹ ನಿರ್ಮಲವಾಯಿತ್ತು; ಮಕಾರಪ್ರಣವದಿಂದ ಕಾರಣದೇಹ ಕರ್ಮ [ಬೀಜ]ವಳಿಯಿತ್ತು. ಅಕಾರದಲ್ಲಿ ಜಾಗೃತಿ, ಉಕಾರದಲ್ಲಿ ಸ್ವಪ್ನದಲ್ಲಿ ಮಕಾರದಲ್ಲಿ ಸುಷಪ್ತ್ವಿ.] [ಜಾಗ್ರ] ಸ್ವಪ್ನದಲ್ಲಿದ್ದ ರೂಹು ಸುಷುಪ್ತಿಯಲ್ಲಿಲ್ಲ. ತ್ರಿವಿಧಾವಸ್ಥೆಯಲ್ಲೊಂದಾಗದ ಮಾತ್ರ ಪ್ರಾಣಲಿಂಗಿ ಆತನಲ್ಲ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಕಾಯ ಸೊನೆಯರತಲ್ಲದೆ ಹಣ್ಣಿನ ರಸ ಚಿಹ್ನದೋರದು. ಕಾಯ ಕರ್ಮವ ಮಾಡಿ, ಜೀವ ಜ್ಞಾನವನರಿದು, ವಿವಿಧಭಾವ ಶುದ್ಧಿಯಾದಲ್ಲದೆ ಮೇಲೆ ಕಾಣಲಿಲ್ಲ, ಕಪಿಲಸಿದ್ಧಮಲ್ಲಿಕಾರ್ಜುನ ಲಿಂಗª
--------------
ಸಿದ್ಧರಾಮೇಶ್ವರ
ದಿಟ್ಟ ಲಿಂಗವ ತನ್ನ ಇಷ್ಟ ಕರಸ್ಥಳದಲ್ಲಿಟ್ಟು ಬಟ್ಟೆಗಟ್ಟಿದನೆರಡು ದೆಸೆದೆಸೆಗಾಗಿ, ಅವ್ವ ನೀನೊಳಗಾಗಿ ಸೀಮೆ ಸಾಯುಜ್ಯದಲ್ಲಿ ಸೊಲ್ಲನಿಟ್ಟಾತ ಗುರುವವ್ವಾ ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಇನ್ನಷ್ಟು ... -->