ಒಟ್ಟು 178 ಕಡೆಗಳಲ್ಲಿ , 2 ವಚನಕಾರರು , 178 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಕುಂಡಲಿಗನೊಂದು ಕೀಡೆಯ ತಂದುತನ್ನಂತೆ ಮಾಡಿತಲ್ಲಾ, ಎಲೆ ಮಾನವಾ,ಕೇಳಿ ನಂಬಯ್ಯಾ, ನೋಡಿ ನಂಬಯ್ಯಾ,ಎಲೆ ಮಾನವಾ.ತ್ವಚ್ಚಿಂತಯಾ ಮಹಾದೇವ ತ್ವಾಮೇವೈತಿ ನ ಸಂಶಯಃಭ್ರಮದ್ಭ್ರಮರಚಿಂತಾಯಾಂ ಕೀಟೋಡಿಪಿ ಭ್ರಮರಾಯತೇಕೂಡಲಸಂಗನ ಶರಣರ ಅನುಭಾವಇದರಿಂದ ಕಿರುಕುಳವೆ,ಎಲೆ ಮಾನವಾ
ಅಡವಿಯಲೊಬ್ಬ ಕಡು ನೀರಡಿಸಿ,ಎಡೆಯಲ್ಲಿ ನೀರ ಕಂಡಂತಾುತ್ತಯ್ಯಾ.ಕುರುಡ ಕಣ್ಣ ಪಡೆದಂತೆ,ಬಡವ ನಿಧಾನವ ಹಡೆದಂತಾುತ್ತಯ್ಯಾ.ನಮ್ಮ ಕೂಡಲಸಂಗನ ಶರಣರ ಬರವೆನ್ನ ಪ್ರಾಣ ಕಂಡಯ್ಯಾ. 376
ಮನಕ್ಕೆ ನಾಚದ ವಚನ, ವಚನಕ್ಕೆ ನಾಚದ ಮನ !ಕುಂದು-ಹೆಚ್ಚ ನುಡಿವೆ.ಒಂದು ಮಾತಿನ ಗೆಲ್ಲಕ್ಕೆ ಹಿಡಿದು ಹೋರುವೆ,ಕೂಡಲಸಂಗನ ಶರಣರ ಎನ್ನಾಳ್ದರೆಂಬೆ. 256
ಆಡಿ ಅಳುಪದಿರಾ, ಲೇಸಮಾಡಿ ಮರುಗದಿರಾ, ಎಲೆ ಮನವೆ.ಕೂಡಿ ತಪ್ಪದಿರಾ, ಬೇಡಿದವರಿಗಿಲ್ಲೆನ್ನದಿರು ಕಂಡಾ.ನಾಡ ಮಾತು ಬೇಡ, ಸೆರಗೊಡ್ಡಿ ಬೇಡುಕೂಡಲಸಂಗನ ಶರಣರ. 279
ಭಕ್ತಿಯೆಂಬ ನಿಧಾನವ ಸಾದ್ಥಿಸುವಡೆಶಿವಪ್ರೇಮವೆಂಬ ಅನಂಜನವನೆಚ್ಚಿಕೊಂಬುದು,ಭಕ್ತನಾದವಂಗೆ ಇದೇ ಪಥವಾಗಿರಬೇಕು.ನಮ್ಮ ಕೂಡಲಸಂಗನ ಶರಣರ ಅನುಭಾವ ಗಜವೈದ್ಯ. 243
ವಿಷ್ಣುವ ಪೂಜಿಸಿ ಮುಡುಹ ಸುಡಿಸಿಕೊಂಬುದ ಕಂಡೆ,ಜಿನನ ಪೂಜಿಸಿ ಬತ್ತಲೆಯಿಪ್ಪುದ ಕಂಡೆ,ಮೈಲಾರನ ಪೂಜಿಸಿ ನಾಯಾಗಿ ಬಗಳುವುದ ಕಂಡೆ,ನಮ್ಮ ಕೂಡಲಸಂಗನ ಪೂಜಿಸಿ ದೇವಾ,ಭಕ್ತರೆನಿಸಿಕೂಂಬುದ ಕಂಡೆ.
ಸೂರ್ಯನ ಉದಯ ತಾವರೆಗೆ ಜೀವಾಳ,ಚಂದ್ರಮನುದಯ ನೆ್ದುಲೆಗೆ ಜೀವಾಳ.ಕೂಪರಠಾವಿನಲ್ಲಿ ಕೂಟ ಜೀವಾಳವಯ್ಯಾ,ಒಲಿದ ರಾವಿನಲ್ಲಿ ನೋಟ ಜೀವಾಳವಯ್ಯಾ.ಕೂಡಲಸಂಗನ ಶರಣರಬರವೆನಗೆ ಪ್ರಾಣ ಜೀವಾಳವಯ್ಯಾ. 367
ದೂಷಕನವನೊಬ್ಬ ದೇಶವ ಕೊಟ್ಟಡೆ,ಆಸೆಮಾಡಿ ಅವನ ಹೊರೆಯಲಿರಬೇಡ.ಮಾದಾರ ಶಿವಭಕ್ತನಾದಡೆ,ಆತನ ಹೊರೆಯಲು ಭೃತ್ಯನಾಗಿಪ್ಪುದು ಕರ ಲೇಸಯ್ಯಾ,ತೊತ್ತಾಗಿಪ್ಪುದು ಕರ ಲೇಸಯ್ಯಾ.ಕಾಡ ಸೊಪ್ಪು ತಂದು ಓಡಿನಲ್ಲಿ ಹುರಿದಿಟ್ಟು,ಕೂಡಿಕೊಂಡಿಪ್ಪುದು ನಮ್ಮ ಕೂಡಲಸಂಗನ ಶರಣರ. 136
ಬಲಿಯ ಭೂಮಿ, ಕರ್ಣನ ಕವಚ, ಖಚರನ ಆಸ್ಥಿ,ಶಿಬಿಯ ಮಾಂಸ ವೃಥಾ ಹೋುತ್ತಲ್ಲಾ,ಶಿವಭಕ್ತಿಮತಿಕ್ರಮ್ಯ ಯದ್ದಾನಂ ಚ ವಿದ್ಥೀಯತೇನಿಷ್ಫಲಂ ತು ಭವೇದ್ದಾನಂ ರೌರವಂ ನರಕಂ ವ್ರಜೇತ್ಇಂತೆಂದುದಾಗಿ, ಕೂಡಲಸಂಗನ ಶರಣರನರಿಯದೆಕೀರ್ತಿವಾರ್ತೆಗೆ ಮಾಡಿದವನ ಧನವು ವೃಥಾ ಹೋುತ್ತಲ್ಲಾ. 224
ಒಕ್ಕುದ ಮಿಕ್ಕುದನುಂಡು ಕಿವಿಕಿವಿದಾಡುವೆ.ಶರಣರ ಮನೆಯ ಲೆಂಗಿಯ ಡಿಂಗರಿಗ ನಾನು,ಕೂಡಲಸಂಗನ ಶರಣರ ಮನೆಯಭಕ್ತಿಯ ಮರುಳ ನಾನು. 461
ನೆಲ್ಲ ಗಿಡುವಿನೊಳಗೆ ನಾನೊಂದು ಹುಲ್ಲಾಗಿ ಹುಟ್ಟಿದೆನಯ್ಯಾ.ಆನು ಭಕ್ತನೆಂದೆಂಬೆನೆ, ಆನು ಯುಕ್ತನೆಂದೆಂಬೆನೆಆನು ಕೂಡಲಸಂಗನ ಶರಣರೊಕ್ಕುದನುಂಡಡೆ,ಪಾದರಕ್ಷೆಗೆ ಸರಿಯಹೆನೆ
ಉರೆ ತಾಗಿದ ಮೃಗವು ಒಂದಡಿಯನಿಡುವುದೆತನುವ ತಾಗಿದ ಸುಖವು ಅಗಲುವುದೆಕೂಡಲಸಂಗನ ಶರಣರ ಅನುಭಾವವರಿದವರಮರಳಿ ಮತ್ರ್ಯರೆಂದೆನಬಹುದೆ
ಕರ್ತನನರಿಯದವನು ವಿಪ್ರನಾದಡೇನು ! ಚತುರ್ವೇದಿಯಾದಡೇನುಭುಕ್ತಿಕಾರಣ ಲೋಕದ ಇಚ್ಛೆಗೆ ನುಡಿದು ನಡೆವರಯ್ಯಾ !ಭವಿಮಾಡಿದ ಪಾಕವ ತಂದು,ಲಿಂಗಕ್ಕರ್ಪಿಸುವ ಕಷ್ಟರ ಕಂಡು ನಾಚಿತ್ತೆನ್ನ ಮನವು,ಕೂಡಲಸಂಗನ ಶರಣರ ಒಕ್ಕುದ ಕೊಂಡುಅನ್ಯವನಾಚರಿಸಿದಡೆ ತಪ್ಪದುಸೂಕರ ಶುಚಿರ್ಭೂತತೆಯ ಪ್ರಾಣಿಯಂತೆ.
ಕರಿಯಂಜುವುದು ಅಂಕುಶಕ್ಕಯ್ಯಾ,ಗಿರಿಯಂಜÅವುದು ಕುಲಿಶಕ್ಕಯ್ಯಾ,ತಮಂಧವಂಜುವುದು ಜ್ಯೋತಿಗಯ್ಯಾ,ಕಾನನವಂಜುವುದು ಬೇಗೆಗಯ್ಯಾ,ಪಂಚಮಹಾಪಾತಕವಂಜುವುದುಕೂಡಲಸಂಗನ ನಾಮಕ್ಕಯ್ಯಾ. 75
ಮಾರಂಕನಿರಿವಲ್ಲಿ ಘಾಯಖಂಡೆಯ ತೋರಿದಾತನೆ ತೆತ್ತಿಗ,ಕೈಯ ಕೈದು ಬಿದ್ದಲ್ಲಿ ಎತ್ತಿಕೊಟ್ಟಾತನೆ ಹಿತವ.ಕೂಡಲಸಂಗನ ಶರಣ ಸೊಡ್ಡಳ ಬಾಚರಸರ ಕರುಣವುಳ್ಳನ್ನಕ್ಕರಇನ್ನು ನಾನು ಅಂಜುವನಲ್ಲ ಕಾಣಾ, ಚೆನ್ನಬಸವಣ್ಣಾ.