ಅಥವಾ

ಒಟ್ಟು 3 ಕಡೆಗಳಲ್ಲಿ , 3 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಿಥ್ಯವನಳಿದುಳಿದ ಸತ್ಯಪ್ರಸಾದಿ, ರಂಜನವಿಲ್ಲದ ನಿರಂಜನ ಪ್ರಸಾದಿ, ದುಃಖವನಳಿದ ಘನಾನಂದಪ್ರಸಾದಿ, ಅನಿತ್ಯವಿಲ್ಲದ ನಿತ್ಯಪ್ರಸಾದಿ, ಖಂಡಿತವಿಲ್ಲದ ಅಖಂಡಿತಪ್ರಸಾದಿ, ಕೂಡಲಸಂಗಮದೇವರಲ್ಲಿ ತಾನೆ ಪ್ರಸಾದಿ.
--------------
ಬಸವಣ್ಣ
ಖಂಡಿತವಿಲ್ಲದ ಅಖಂಡಿತ ನೀನೆ. ನಿಮ್ಮ ಕಂಡವರುಂಟೆ? ಹೇಳಯ್ಯ. ಕಂಡೆನೆಂಬವರೆಲ್ಲ ಬಂಜೆಯ ಮಕ್ಕಳು ನೀ ನಿಂದ ಹಜ್ಜೆಯ ಕೆಳಗೆ ಒಂದು ಬಿಂದು ಹುಟ್ಟಿ ಬೆಳಗುವ ಛಂದವ ಕಂಡು ಕಣ್ದೆರೆದೆ ಕಾಣಾ! ರಾಮನಾಥ.
--------------
ಜೇಡರ ದಾಸಿಮಯ್ಯ
ಖಂಡಿತವಿಲ್ಲದ ಅಖಂಡಿತರೂಪ ನೀನು ಕಂಡಾ ಎಲೆ ಅಯ್ಯಾ. ಮಂಡಲತ್ರಯದ ಮಧ್ಯದಲ್ಲಿ ನಿಂದು ಖಂಡಿತನೆಂಬ ಹಾಂಗೆ ತೋರುತ್ತಿದ್ದೆಯಯ್ಯಾ. ನಿನ್ನ ಬೆಡಗ ನಾ ಬಲ್ಲೆ. ಖಂಡಪತ್ರದಲ್ಲಿ ತೋರುವ ಚಂಡಕಿರಣದಂತೆ ತೋರಿದೆಯಾಗಿ, ಎನ್ನ ಕಂಗಳ ಕೊನೆಯಲ್ಲಿ ನಿಂದು ನೋಡುವಾತ ನೀನೇ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
-->