ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಂಗಮಭಕ್ತನು, ಚಿನ್ನದಂತೆ ಕಬ್ಬಿನಂತೆ ಶ್ರೀಗಂಧದಂತೆ ಇರಬೇಕು. ಅದು ಹೇಂಗೆ ? ಆ ಚಿನ್ನವ ಕಾಸಿದಡೆ ಕರಗಿಸಿದಡೆ ಕಡಿದಡೆ ನಿಗುಚಿದಡೆ ಬಣ್ಣ ಅಧಿಕವಲ್ಲದೆ ಕಿರಿದಾಗದು, ಇವರು ನನ್ನನೇಕೆ ಘಾಸಿ ಮಾಡಿದರೆನ್ನದು. ಆ ಕಬ್ಬ ಕಡಿದಡೆ ಖಂಡಿಸಿದಡೆ ಗಾಣದಲಿಕ್ಕಿ ಹಿಂಡಿ, ಹಿಳಿದು, ಬಂದ ರಸವನಟ್ಟಡೆ, ನಾನಾ ಪ್ರಕಾರದಲ್ಲಿ ಸಾಯಸಗೊಳಿಸಿದಡೆಯೂ ಮಿಗೆ ಮಿಗೆ ಮಧುರವಾಗಿಪ್ಪುದಲ್ಲದೆ ವಿಷವಾಗದು, ನನ್ನನೇಕೆ ನೋಯಿಸಿದರೆಂದೆನ್ನದು. ಆ ಶ್ರೀಗಂಧವು ಕೊರೆದಡೆ ತೇದಡೆ ಹೂಸಿದಡೆ ಬೆಂಕಿಯೊಳಗೆ ಹಾಯಿಕಿದಡೆ ಪರಿಮಳ ಘನವಾಯಿತ್ತಲ್ಲದೆ ದುರ್ಗಂಧವಾಗದು, ತನ್ನಲ್ಲಿ ದುಃಖಗೊಳ್ಳದು. ಈ ತ್ರಿವಿಧದ ಗುಣದ ಪರಿಯಲ್ಲಿ; ಭಕ್ತನು ತನ್ನ ಸುಗುಣವ ಬಿಡದ ಕಾರಣ ಸದ್ಭಕ್ತನಹ ಮಾಹೇಶ್ವರನಹ ಪ್ರಸಾದಿಯಹ ಪ್ರಾಣಲಿಂಗಿಯಹ ಶರಣನಹ ಐಕ್ಯನಹ. ಇಂತು ಷಟ್‍ಸ್ಥಲದಲ್ಲಿ ಸಂಪನ್ನನಹಡೆ ಇಂತಪ್ಪ ಜಂಗಮಭಕ್ತಿಯೆ ಮೂಲವಯ್ಯ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಹೃದಯಕಮಲದೊಳಗೊಂದು ಮರಿದುಂಬಿ ಹುಟ್ಟಿತ್ತು, ಹಾರಿಹೋಗಿ ಆಕಾಶವ ನುಂಗಿತ್ತಯ್ಯಾ ! ಆ ತುಂಬಿಯ ಗರಿಯ ಗಾಳಿಯಲ್ಲಿ, ಮೂರು ಲೋಕವೆಲ್ಲವೂ ತಲೆಕೆಳಗಾಯಿತ್ತು ! ಪಂಚ ವರ್ಣದ ಹಂಸೆಯ ಪಂಜರವ ಖಂಡಿಸಿದಡೆ, ಗರಿ ಮುರಿದು, ತುಂಬಿ ನೆಲಕ್ಕುರುಳಿತ್ತು! ನಿಜದುದಯದ ಬೆಡಗಿನ ಕೀಲ , ಗುಹೇಶ್ವರಾ, ನಿಮ್ಮ ಶರಣರ ಅನುಭವಸಂಗದಲ್ಲಿರ್ದು ಕಂಡೆನಯ್ಯಾ.
--------------
ಅಲ್ಲಮಪ್ರಭುದೇವರು
-->