ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಖೇಚರರಾಗಲಿ ಭೂಚರರಾಗಲಿ ಲಾಂಛನಧಾರಿಯಾಗಲಿ, ಮರಣವಾರಿಗೂ ಮನ್ನಣೆಯಿಲ್ಲ! ಸನಕ ಸನಂದಾದಿಗಳಿಗೂ ಮರಣ ಮನ್ನಣೆಯಿಲ್ಲ. ಇದು ಕಾರಣ _ ಗುಹೇಶ್ವರಾ ನಿಮ್ಮ ಶರಣರು ಕಾಲನ ಬಾರಿಗೆ ಕಲ್ಪಿತರಾಗರು !
--------------
ಅಲ್ಲಮಪ್ರಭುದೇವರು
ಖೇಚರರಾಗಲಿ, ಭೂಚರರಾಗಿಲಿ, ಪುರಹರರಾಗಲಿ, ಮಧ್ಯಸ್ಥರಾಗಲಿ, ಪವನನುಂಡುಂಡು ದಣಿಯದವರಾಗಲಿ, ಅಗ್ನಿ ಪರಿಹರರಾಗಲಿ, ಖೇಚರರೊಳು ಬಸವಾಜ್ಞೆ, ಭೂಚರರೊಳು ಬಸವಾಜ್ಞೆ. ಪುರಹರರೊಳು ಬಸವನ ಮಹಾರತಿ. ಮಧ್ಯಸ್ಥರೊಳು ಬಸವನೇಕಾಂತವಾಸಿ. ಪವನದೊಳು ಬಸವ ಹೇಳಿತ್ತ ಕೇಳುವೆ. ಅಗ್ನಿಯೊಳು ಬಸವಂಗೆ ದಾಸೋಹವ ಮಾಡುವೆ. ಎನ್ನನೀ ಪರಿಯಲ್ಲಿ ಸಲಹಿದಾತ ಬಸವಣ್ಣ ಕಾಣಾ ಕಲಿದೇವರದೇವಯ್ಯಾ.
--------------
ಮಡಿವಾಳ ಮಾಚಿದೇವ
-->