ಶ್ರೀ ಪಂಚಾಕ್ಷರಿಯುಳ್ಳ ಅಗ್ರಜ ವಿಪ್ರನಿಂದಧಿಕ ನೋಡಾ !
ಶ್ರೀ ಪಂಚಾಕ್ಷರಿಯುಳ್ಳ ಅಂತ್ಯಜ ವಿಪ್ರನಿಂದಧಿಕ ನೋಡಾ !
ಶ್ರೀ ಪಂಚಾಕ್ಷರಿಯನಾವಾತನಾದರೂ ನೆನೆದರೆ
ರುದ್ರನಪ್ಪುದು ತಪ್ಪದು ನೋಡಾ ಅಯ್ಯಾ !
ಅದೆಂತೆಂದರೆ :
ಸಾಕ್ಷಿ : ``ಅಗ್ರಜೋ ಅಂತ್ಯಜೋ ವಾಪಿ ಮೂರ್ಖೋವಾ ಪಂಡಿತೋý
ಪಿವಾ |
ಜಪೇತ್ ಪಂಚಾಕ್ಷರೀಂ ನಿತ್ಯಂ ಸ ರುದ್ರೋ ನಾತ್ರ ಸಂಶಯಃ ||''
ಎಂದಿತ್ತು ದೃಷ್ಟ.
`ಓಂ ನಮಃ ಶಿವಾಯಃ' ಯೆಂಬ ಆರಕ್ಷರವ ನೆನೆಯಲರಿಯದೆ
ಜಪ ತಪ ನೇಮ ನಿತ್ಯ ಅನುಷಾ*ನ ಪೂಜೆಗಳೆಲ್ಲ
ನಿಷ್ಫಲವೆಂದಿತ್ತು ರಹಸ್ಯದಲ್ಲಿ.
ಸಾಕ್ಷಿ :``ಷಡಕ್ಷರಮಿದಂ ಖ್ಯಾತಂ ಷಡಾನನಂ ಷಡನ್ವಿತಂ |
ಷಡ್ವಿಧಂಯೋನ ಜಾನಾತಿ ಪೂಜಾಯಾಂ ನಿಃಫಲಂ [ಭವೇತ್]''
ಎಂಬ ಷಡಕ್ಷರಿಯ ಸಂಭ್ರಮದಲ್ಲಿ ನೆನೆದು, ಭವಾಂಬೋಧಿಯ ದಾಂಟಿ,
ಸ್ವಯಂಭುವಾಗಿದ್ದೆನು ಕಾಣಾ
ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.