ಅಥವಾ

ಒಟ್ಟು 3 ಕಡೆಗಳಲ್ಲಿ , 3 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವ್ಯವಹಾರವ ಮಾಡಿದಲ್ಲಿ ಲಾಭವ ಕಾಣದಿರ್ದಡೆ ಆ ವ್ಯವಹಾರವೇತಕ್ಕೆ? ಗುರುಲಿಂಗ ಜಂಗಮಕ್ಕೆ ಖ್ಯಾತಿಗೆ ಮಾಡಿದಡೆ ಮೊದಲು ತಪ್ಪಿ ಲಾಭವನರಸುವಂತೆ, ಕಾಮಹರಪ್ರಿಯ ರಾಮನಾಥಾ.
--------------
ತಳವಾರ ಕಾಮಿದೇವಯ್ಯ
ಭಕ್ತನಾದಲ್ಲಿ ದ್ರವ್ಯವ ಸವೆಸಿ ಮರ್ಮವನರಿಯದೆ ವ್ಯರ್ಥವಾಯಿತ್ತು. ಖ್ಯಾತಿಗೆ ಇಕ್ಕಿ ಕೊಟ್ಟು ಮಾಡುವಾತನ ಭಕ್ತನೆಂದಡೆ ವಾಸಿಯ ಮಾತಿಗೆ ಸತ್ತವನ ಪಾಶದಂತೆ ಆತನ ಮಾಟ. ಮಾಟವನರಿದುಣ್ಣಬೇಕು, ಸರ್ವವ ನೇತಿಗಳೆದ ನಿರ್ಮಲಗುರು. ಆತನ ನಿನ್ನ ನೀನರಿ, ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಖ್ಯಾತಿಗೆ ಜೋತು, ಲಾಭಕ್ಕೆ ಲೋಭಿಸಿ, ಪೂಜೆಯ ಮಾಡದೆ ರಾಜದ್ವಾರದಲ್ಲಿ ಸುಳಿದು ಬಳಲುವ ಹಿರಿಯರೆಲ್ಲರೂ ಇತ್ತಿತ್ತಲಲ್ಲದೆ ಅತ್ತತ್ತಲೆಲ್ಲಿಯದೋ? ಸೌರಾಷ್ಟ್ರ ಸೋಮೇಶ್ವರಲಿಂಗದಲ್ಲಿ ತಲ್ಲೀಯವಾದ ಶರಣರತ್ತತ್ತಲಲ್ಲದೆ ಇತ್ತಿತ್ತಲೆಂತಿಹರೋ.
--------------
ಆದಯ್ಯ
-->