ಖ್ಯಾತಿಯ ಲಾಭಕ್ಕೆ ವ್ರತವ ಮಾಡಿಕೊಂಡವನ ನೇಮವ ನೋಡಾ !
ಊರಿಗೆ ಬಲುಗಯ್ಯ ಬಂದುಣ್ಣಬೇಕೆಂದು ದಾರಿದಾರಿಯ ಕಾಯ್ದು
ಮತ್ತಾರನು ಏನೆಂದರಿಯದೆ.
ಮತ್ತಾರು ಆರೈಕೆಗೊಂಡಡೆ ದೇವರೆಂದು, ಬಂದವರ ದಾರಿಗರೆಂದು ಕಾಣುತ್ತ
ಇಂತೀ ಗಾರಾದ ಮನಕ್ಕೆ ಇನ್ನಾರು ಹೇಳುವರಯ್ಯಾ !
ಮುಂದೆ ಬಸುರಾಗಿ ಹೆರುವಾಗ ಊರೆಲ್ಲರು ಅವಳಂಗವ ಕಂಡಂತೆ
ಜಗಭಂಡ ಶೀಲವಂತನಾಗಿ, ತನ್ನ ಕೊಂಡಾಡುವ
ಸತ್ತ ಮತ್ತೆ ಮೂರು ಹೆಂಡಗುಡಿ ಹೇಯಶೀಲ ಕಂಡವರಿಗೆ ನಗೆಯಾಯಿತ್ತು
ಇದರಂದಕಂಜಿ, ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವು ಕಂಡೂ ಕಾಣದಂತಿದ್ದ.