ಅಥವಾ

ಒಟ್ಟು 4 ಕಡೆಗಳಲ್ಲಿ , 4 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಖ್ಯಾತಿಲಾಭಕ್ಕೆ ಮಾಡೂದು ಎಂಬುದನರಿದು ಭೂತಹಿತ ದಯದಾಕ್ಷಿಣ್ಯಕ್ಕೆ ಇಕ್ಕುವಾತನೆಂಬುದನರಿದು ಮಹಿಮಾಸ್ಪದರಿಂದ ವೀರವೈರಾಗ್ಯಂಗಳಿಂದ ಇಕ್ಕುವಾತನೆಂಬುದನರಿದು ಮಾಡಿಕೊಂಡ ಕೃತ್ಯಕ್ಕೆ ಬಿಟ್ಟಡೆ ನುಡಿದಹರೆಂದು ಗುತ್ತಗೆಯಲ್ಲಿ ಇಕ್ಕುವಾತನೆಂಬುದನರಿದು ಅರ್ತಿ ತಪ್ಪದೆ ಬಾಹ್ಯದ ಭಕ್ತಿ ತಪ್ಪದೆ ಅರ್ಚನೆ ಪೂಜನೆಗಳಲ್ಲಿ ನಿತ್ಯನೇಮ ತಪ್ಪದೆ ಸುಚಿತ್ತ ಧರ್ಮದಲ್ಲಿ ಮಾಡುವವನರಿದು ಇಂತೀ ವರ್ಮಧರ್ಮಂಗಳಲ್ಲಿ ಅರಿದು ಸುಮ್ಮಾನದ ಸುಖತರದಲ್ಲಿ ಮಾಡುವ ವರ್ಮಿಗನನರಿದು ಆರಾರ ಭಾವದ ಕಲೆಯನರಿದು, ಗುಣವೆಂದು ಸಂಪಾದಿಸದೆ ಅವಗುಣವೆಂದು ಭಾವದಲ್ಲಿ ಕಲೆಗೆ ನೋವ ತಾರದೆ ಇಂತೀ ಸರ್ವಗುಣ ಸಂಪನ್ನನಾಗಿ ಪೂಜಿಸಿಕೊಂಬ ಗುರುವಿಂಗೆ ಚರಿಸುವ ಜಂಗಮಕ್ಕೆ ಉಪಾಧಿ ನಷ್ಟವಾದ ವಿರಕ್ತಂಗೆ ಕೂಗಿಂದಿತ್ತ ನಮೋ ಎಂದು ಬದುಕಿದೆ ಮಹಾಮಹಿಮ ಮಾರೇಶ್ವರಾ.
--------------
ಕೂಗಿನ ಮಾರಯ್ಯ
ಖ್ಯಾತಿಲಾಭಕ್ಕೆ ಮಾಡುವಾತನೆಂಬುದನರಿದು, ಭೂತಹಿತ ದಯಾ ದಾಕ್ಷಿಣ್ಯಕ್ಕೆ ಇಕ್ಕುವಾತನೆಂಬುದನರಿದು, ಮಹಿಮಾಸ್ಪದದಿಂದ ವೀರವೈರಾಗ್ಯಗಳಿಂದ ಇಕ್ಕುವಾತನೆಂಬುದನರಿದು, ಮಾಡಿಕೊಂಡ ಕೃತ್ಯಕ್ಕೆ ಬಿಟ್ಟಡೆ ನುಡಿದಿಹರೆಂದು ಗುತ್ತಿಗೆಯಲ್ಲಿ ಇಕ್ಕುವಾತನೆಂಬುದನರಿದು, ಅರ್ತಿ ತಪ್ಪದೆ, ಬಾಹ್ಯದ ಭಕ್ತಿ ತಪ್ಪದೆ, ಅರ್ಚನೆ ಪೂಜನೆಗಳಲ್ಲಿ ನಿತ್ಯನೇಮ ತಪ್ಪದೆ, ಸುಚಿತ್ತ ಧರ್ಮದಲ್ಲಿ ಮಾಡುವಾತನನರಿದು, ಇಂತೀ ವರ್ಮಧರ್ಮಂಗಳಲ್ಲಿ ಅರಿದು, ಸುಮ್ಮಾನದ ಸುಖತರದಲ್ಲಿ ಮಾಡುವ ಧರ್ಮಿಗನನರಿದು, ಆರಾರ ಭಾವದ ಕಲೆಯನರಿದು, ಗುಣವೆಂದು ಸಂಪಾದಿಸದೆ, ಅವಗುಣವೆಂದು ಭಾವದಲ್ಲಿ ಕಲೆಗೆ ನೋವ ತಾರದೆ, ಇಂತೀ ಸರ್ವಗುಣಸಂಪನ್ನನಾಗಿ ಪೂಜಿಸಿಕೊಂಬ ಗುರುವಿಂಗೆ, ಚರಿಸುವ ಜಂಗಮಕ್ಕೆ, ಉಪಾಧಿ ನಷ್ಟವಾದ ವಿರಕ್ತಂಗೆ, ಕೂಗಿಂದ ನಮೋ ನಮೋ ಎಂದು ಬದುಕಿದೆ, ನಿಃಕಳಂಕ ಮಲ್ಲಿಕಾರ್ಜುನಾ
--------------
ಮೋಳಿಗೆ ಮಾರಯ್ಯ
ಸರ್ಪನಲ್ಲಿ ವಿಷ ಇದ್ದಿತ್ತೆಂದಡೆ, ಸರ್ವಾಂಗದಲ್ಲಿ ವಿಷ ತಪ್ಪದಿಪ್ಪುದೆ, ವಿಷವಿಪ್ಪಠಾವು ಒಂದಲ್ಲದೆ ? ಪೃಥ್ವಿಯಲ್ಲಿ ನಿಕ್ಷೇಪವಿದ್ದಿತ್ತೆಂದಡೆ, ಅಲ್ಲಲ್ಲಿ ಎಲ್ಲಾ ಠಾವಿನಲ್ಲಿ ಅಡಗಿಪ್ಪುದೆ ? ಸಮಯಕುಲದಲ್ಲಿ ವಸ್ತು ಪರಿಪೂರ್ಣವೆಂದಡೆ, ದರ್ಶನಪಾಷಂಡಿಗಳಲ್ಲಿ ವಸ್ತುಪರಿಪೂರ್ಣನಾಗಿಪ್ಪನೆ ? ಇಪ್ಪ ಸತ್ಯಸನ್ಮುಕ್ತರಲ್ಲಿಯಲ್ಲದೆ, ಪರಮವಿರಕ್ತನಲ್ಲಿಯಲ್ಲದೆ. ನೆಲದಲ್ಲಿದ್ದ ನಿಧಾನವನರಿದು ಅಗಿವುದು, ವಿಷವಿದ್ದ ಬಾಯ ಮುಚ್ಚಿಹಿಡಿವುದು, ನೆರೆ ವಸ್ತುವಿದದ್ದ ಠಾವನರಿದು ಪೂಜಿಸುವುದು. ಇಂತೀ ಬಯಕೆಗೆ, ಬಯಕೆ ಸಮೂಹಕ್ಕೆ ತ್ರಿವಿಧಮಲ. ಖ್ಯಾತಿಲಾಭಕ್ಕೆ ಭೂತಹಿತ. ಅರಿವುಳ್ಳವರಲ್ಲಿ ಎರವಿಲ್ಲದ ಕೂಟ. ಇಂತಿವು ಜಗದಲ್ಲಿ ಅರಿದು ಮಾಡುವನ ಪರಿತೋಷ ಗಾರುಡೇಶ್ವರಲಿಂಗದಲ್ಲಿ ಎರಡಳಿದವನ ಕೂಟ.
--------------
ಉಪ್ಪರಗುಡಿಯ ಸೋಮಿದೇವಯ್ಯ
ಖ್ಯಾತಿಲಾಭಕ್ಕೆ ಮಾಡುವಾತ ಭಕ್ತನಲ್ಲ. ಡಂಬಕಕ್ಕೆ ಡೊಂಬರಂತೆ ತಿರುಗುವವ ಜಂಗಮವಲ್ಲ. ತನು ತಲೆ ಬತ್ತಲೆಯಾಗಿ, ಮನ ತ್ರಿವಿಧ ಆಸೆ ಉಳ್ಳನ್ನಕ್ಕ ವಿರಕ್ತನಲ್ಲ. ಇಂತೀ ಗುಣವ ಸಂಪಾದಿಸುವನ್ನಕ್ಕ, ಎನಗೆ ಮುಕ್ತಿಯೆಂಬ ಬಟ್ಟೆಯಿಲ್ಲ. ನೀ ಸತ್ತೆ, ನಾ ಕೆಟ್ಟೆ, ಮನಸಂದಿತ್ತು ಮಾರೇಶ್ವರಾ.
--------------
ಮನಸಂದ ಮಾರಿತಂದೆ
-->