ಅಥವಾ

ಒಟ್ಟು 42 ಕಡೆಗಳಲ್ಲಿ , 14 ವಚನಕಾರರು , 17 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಿಂದು ಮುಂದು ಸಂದಳಿದ ಬಳಿಕ ಆನು ನೀನೆಂಬ ಭೇದವೇತಕಯ್ಯ? ಆನಂದ ಅಪರಸ್ಥಾನದಲ್ಲಿ ಶುದ್ಧ ಸಂಯೋಗವಾದ ಬಳಿಕ ದಳ ಪ್ರತಿಷ್ಠೆಯ ಮಾಡಿನೆಂದು ಏನೆಂಬೆನಯ್ಯ? ಪೂರ್ವದಳದಲ್ಲಿ ಲಕ್ಷವು ಇಪ್ಪತ್ನಾಲ್ಕುಸಾವಿರ ಎಸಳು, ಅಪರದಳದಲ್ಲಿ ಹದಿನಾಲ್ಕುಸಾವಿರ ಎಸಳು, ನಾನಾ ವರ್ಣ ಆನಂದನೆಂಬ ಅದ್ಥಿದೇವತೆ ಮಧ್ಯಮಸ್ಥಾನದಲ್ಲಿ, ಸಿದ್ಧ ಸಂಯೋಗವೆಂಬ ಸರೋವರದಲ್ಲಿ, ವೈನೈಯೆಂಬ ಕೊಳಂಗಳು ಹನಾರೆಸಳಿನ ಕಮಳ ಬೀಜಾಕ್ಷರಂಗಳೆಂಟು, ಅದ್ಥಿದೇವತೆ ಸಚ್ಚಿದಾನಂದನೆಂಬ ಗಣೇಶ್ವರ ಆನಂದ ಬ್ರಹ್ಮಲೋಕದಲ್ಲಿ ಗುರುವೆಂಬ ಸರೋವರದಲ್ಲಿ ನಿತ್ಯವೆಂಬ ಕೊಳ. ಶುದ್ಥಶ್ವೇತನೆಂಬ ಅಮೃತ ಪ್ರವಾಹ, ದಳವೊಂದು, ಮೂಲ ಮೂರು, ಫಲವಾರು ಕಪಿಲಸಿದ್ಧಮಲ್ಲಿಕಾರ್ಜುನನೆಂಬ ಅದ್ಥಿದೇವತೆ.
--------------
ಸಿದ್ಧರಾಮೇಶ್ವರ
ಕಂಗಳ ಮುಂದಣ ಬಯಲಿನೊಳಗೊಂದು ಪ್ರಕಾಶಾನ್ವಿತವಾದ ಮಹಾಚೋದ್ಯತರವಾದ ಗಗನಕೋಶವುಂಟು. ಅಲ್ಲೊಂದು ದಿವ್ಯತರವಾದ ಕಮಲವುಂಟು. ಆ ಕಮಲದ ಮಧ್ಯದಲ್ಲಿ ಆಣವತ್ರಯಾನ್ವಿತವಾದ ಮಹತ್ಕರ್ಣಿಕೆಯುಂಟು. ಮತ್ತದರಗ್ರದಂತರ್ವರ್ಣತ್ರಯಂಗಳೊಳಗೆ ನೀಲವಿದ್ರುಮರತ್ನ ಚಂದ್ರಪ್ರಕಾಶ ದಿವ್ಯಸಿಂಹಾಸನದ ಮೇಲೆ ಬೆಳಗುತ್ತಿರ್ಪ ಶಿವಲಿಂಗವನನುಸಂಧಾನಿಸಿ ಪೂಜಿಸುವ ಕ್ರಮವೆಂತೆಂದೊಡೆ : ಶ್ರೀಗುರುಕರುಣಕಟಾಕ್ಷವೀಕ್ಷಣಬಲದಿಂದ ಕಲ್ಮಷ ಕಂಟಕಾದಿಗಳಂ ತೊಲಗಿಸಿ, ಶಿವಲೋಕದ ಮಾರ್ಗವಿಡಿದು ಹೋಗಿ, ಆ ಶಿವಲೋಕದ ಸಮೀಪಕ್ಕೆ ಸೇರಿ, ಪರೀಕ್ಷೆಯ ಮಾಡಿ ನೋಡಲು, ಆ ಶಿವಲೋಕದ ಬಹಿರಾವರಣದಲ್ಲಿ ಮೂವತ್ತೆರಡು ಬಹಿರ್ಮುಖರು ಸಂಸ್ಥಿತರಾದ ವಿವರ : ಈಶಾನ್ಯ ಪರ್ಜನ್ಯ ಜಯಂತ ಮಹೇಂದ್ರ ಆದಿತ್ಯ ಸತ್ಯ ಭೃಂಷ ಅಂತರಿಕ್ಷ ಅಗ್ನಿ ವಿಮಾಷ ಥತ ಗ್ರಹಕ್ಷತ ಯಮ ಗಂಧರ್ವ ಭೃಂಗುರಾಜ ಮೃಗ ನಿರುತಿ ದೌವಾರಿಕ ಸುಗ್ರೀವ ಪುಷ್ಪದತ್ತ ವರುಣ ಅಸುರ ಶೇಷ ಋಭು ವಾಯು ನಾಗ ಮುಖ ಪಲಾಟಕ ಸೋಮ ಭೂತ ಅದಿತ ದಿತರೆಂಬುವರೇ ಮೂತ್ತೆರಡು ವಸ್ತುದೇವತೆಯರ ಒಡಂಬಡಿಸಿಕೊಂಡು ಅವರಿಂದೊಳಗಿರ್ಪ ಸೂರ್ಯವೀಥಿಯೆನಿಸುವ ತೃತೀಯವರ್ಣದ ಮೂವತ್ತೆರಡುದಳದಲ್ಲಿ ಎಂಟು ಶೂನ್ಯದಳಗಳನುಳಿದು, ಮಿಕ್ಕ ಇಪ್ಪತ್ತುನಾಲ್ಕುದಳಗಳಲ್ಲಿರುವ ಇಪ್ಪತ್ತುನಾಲ್ಕು ವಿಕಲಾಕ್ಷರಂಗಳೇ ಅಷ್ಟವಿಧೇಶ್ವರರು, ಅಷ್ಟದಿಕ್ಪಾಲಕರು, ಅಷ್ಟವಸುಗಳಾದ ವಿವರ : ಕ ಕಾರವೆ ಅನಂತ, ಖ ಕಾರವೆ ಇಂದ್ರ, ಗಕಾರವೆ ಧರ, ಘಕಾರವೆ ಸೂಕ್ಷ್ಮ , ಓಂಕಾರವೆ ಅಗ್ನಿ, ಚಕಾರವೆ ಧ್ರುವ, ಛಕಾರವೆ ಶಿವೋತ್ತಮ, ಜಕಾರವೆ ಯಮ, ಝಕಾರವೆ ಸೋಮ, ಞಕಾರವೆ ಏಕನೇತ್ರ, ಟಕಾರವೆ ನಿರುತಿ, ಠಕಾರವೆ ಆಪು, ಡಕಾರವೆ ರುದ್ರ, ಢಕಾರವೆ ವರುಣ, ಣಕಾರವೆ ಅನಿಲ, ತಕಾರವೆ ತ್ರಿಮೂರ್ತಿ, ಥಕಾರವೆ ವಾಯು, ದಕಾರವೆ ಅನಲ, ಧಕಾರವೆ ಶ್ರೀಕಂಠ, ನಕಾರವೆ ಕುಬೇರ, ಪಕಾರವೆ ಪ್ರತ್ಯೂಷ, ಫಕಾರವೆ ಶಿಖಂಡಿ, ಬಕಾರವೆ ಈಶಾನ, ಬಕಾರವೆ ಪ್ರಭಾಸ. ಇಂತೀ [ಅಷ್ಟ] ವಿಧೇಶ್ವರಾದಿಗಳಿಗಬ್ಥಿವಂದಿಸಿ, ಅದರಿಂದೊಳಗಿರ್ಪ ಚಂದ್ರವೀಥಿಯೆನಿಪ ದ್ವಿತೀಯಾವರಣದ ಷೋಡಶದಳದಲ್ಲಿರುವ ಷೋಡಶ ಸ್ವರಾಕ್ಷರಂಗಳೆ ಷೋಡಷರುದ್ರರಾದ ವಿವರ : ಅಕಾರವೆ ಉಮೇಶ್ವರ, ಆಕಾರವೆ ಭವ, ಇಕಾರವೆ ಚಂಡೇಶ್ವರ, ಈಕಾರವೆ ಶರ್ವ, ಉಕಾರವೆ ನಂದಿಕೇಶ್ವರ, ಊಕಾರವೆ ರುದ್ರ, ಋಕಾರವೆ ಮಹಾಕಾಳ, Iೂಕಾರವೆ ಉಗ್ರ, ಲೃಕಾರವೆ ಭೃಂಗಿರೀಟಿ, ಲೂೃಕಾರವೆ ಬ್ಥೀಮ, ಏಕಾರವೆ ಗಣೇಶ್ವರ, ಐಕಾರವೆ ಈಶಾನ, ಓಕಾರವೆ ವೃಷಭೇಶ್ವರ, ಔಕಾರವೆ ಪಶುಪತಿ, ಅಂ ಎಂಬುದೆ ಷಣ್ಮುಖಿ, ಅಃ ಎಂಬುದೆ ಮಹಾದೇವನು. ಇಂತಪ್ಪ ಷೋಡಶರುದ್ರರಿಗೆ ಸಾಷ್ಟಾಂಗವೆರಗಿ ಬಿನ್ನವಿಸಿಕೊಂಡು, ಅದರಿಂದೊಳಗಿರ್ಪ ಅಗ್ನಿವೀಥಿಯೆನಿಸುವ ಪ್ರಥಮಾವರಣ ಅಷ್ಟದಳಗಳಲ್ಲಿರ್ಪ ಅಷ್ಟವ್ಯಾಪಕಾಕ್ಷರಂಗಳೆ ಅಷ್ಟಶಕ್ತಿಯರಾದ ವಿವರ : ಸಕಾರವೆ ಉಮೆ, ಷಕಾರವೆ ಜ್ಯೇಷ್ಠೆ, ಶಕಾರವೆ ರೌದ್ರೆ, ವಕಾರವೆ ಕಾಳೆ, ಲಕಾರವೆ ಬಾಲೆ, ರಕಾರವೆ ಬಲಪ್ರಮಥಿನಿ, ಯಕಾರವೆ ಸರ್ವಭೂತದಮನೆ, ಮಕಾರವೆ ಮನೋನ್ಮನಿ. ಇಂತಪ್ಪ ಶಿವಶಕ್ತಿಯರ ಪಾದಪದ್ಮಂಗಳಿಗೆ ಸಾಷ್ಟಾಂಗವೆರಗಿ, ಪೊಡಮಟ್ಟು ಅದರಿಂದೊಳಗಿರ್ಪ ಅತಿರಹಸ್ಯವಾದ ಮೂವತ್ತೆರಡು ಕ್ಲೇಶಂಗಳಿಗಾಶ್ರಯವಾದ ಶಾಂತಿಬಿಂದುಮಯವಾದ ಅಂತರ್ಮಂಡಲದ ಚತುರ್ದಳದಲ್ಲಿರುವ ಚತುರಕ್ಷರಂಗಳೇ ಚತುಃಶಕ್ತಿಯರಾದ ವಿವರ : ಸಂ ಎಂಬುದೆ ಅಂಬಿಕೆ, ಅಂ ಎಂಬುದೆ ಗಣಾನಿ, ಡಿಂ ಎಂಬುದೆ ಈಶ್ವರಿ, ಕ್ಷುಂ ಎಂಬುದೇ ಉಮೆ. ಇಂತಪ್ಪ ಪರಶಕ್ತಿಯರ ಪಾದಾರವಿಂದವನು ಅನೇಕ ಪ್ರಕಾರದಿಂ ಸ್ತುತಿಮಾಡಿ ಬೇಡಿಕೊಂಡು ಅವರಪ್ಪಣೆವಿಡಿದು ಒಳಪೊಕ್ಕು, ಅಲ್ಲಿ ಕದಂಬಗೋಳಕಾಕಾರ ಸ್ಫುರಶಕ್ತಿದೀದ್ಥಿಕಾಯೆಂದುಂಟಾಗಿ ರಹಸ್ಯಕ್ಕೆ ರಹಸ್ಯವಾದ ಷಡಧ್ವಜನ್ಮಭೂಮಿಯಾದ ಶಕ್ತಿಶಿರೋಗ್ರದಲ್ಲಿ ಪಂಚಾಕಾಶ ಷಟ್ತಾರಕ ತ್ರಿವಿಧಲಿಂಗಾಂಗಗಳೆ ಕಕಾರವಾದ ಪರಬ್ರಹ್ಮದ ನೆಲೆಯನರಿಯುವುದೇ ಮುದ್ವೀರಪ್ರಿಯ ಸಂಗಮೇಶ್ವರನಲ್ಲಿ ಬೆರೆವಂಥ ನಿಜಯೋಗ ಕಾಣಿರೊ.
--------------
ಮುದ್ವೀರ ಸ್ವಾಮಿ
ಅಯ್ಯ, ಇಂತು ನಿರಂಜನ ಮಹಾಲಿಂಗಾನುಭಾವಸೂತ್ರವ ಎರಡೆಂಬತ್ತೆಂಟುಕೋಟಿ ಹರಗುರು ವಾಕ್ಯಪ್ರಮಾಣವಚನಾನುಭಾವವ ಪ್ರಕಟಿಸಿ ಈ ಒಂದು ವಚನಾರ್ಥದಲ್ಲಿ ಅತಿಗೋಪ್ಯದಿಂದ ಅನಾದಿ ನಿಃಕಳಂಕ ನಿಶ್ಶೂನ್ಯ ನಿರಂಜನ ನಿರಾವಯ ಶರಣಸೂತ್ರವಿಡಿದು ನಿರಾಯಾಸಂ ಆಯಾಸಂಗಳೇನು ತೋರದೆ ಈ ವಚನಾರ್ಥದ ಆದಿ-ಅಂತ್ಯವನರುಹಿಸಿಕೊಟ್ಟೆವು ನೋಡ. ಆ ವಿಚಾರವೆಂತೆಂದಡೆ : ಶ್ರೀ ಮದ್ಗುರು ಕಾರುಣ್ಯವೇದ್ಯನು, ವಿಭೂತಿ-ರುದ್ರಾಕ್ಷಧಾರಕನು, ಪಂಚಾಕ್ಷರೀ ಭಾಷಾಸಮೇತನು, ಲಿಂಗಾಂಗಸಂಬಂದ್ಥಿ, ನಿತ್ಯಲಿಂಗಾರ್ಚಕನು, ಅರ್ಪಿತದಲ್ಲಿ ಅವಧಾನಿ, ಪಾದೋದಕ-ಪ್ರಸಾದಗ್ರಾಹಕನು, ಗುರುಭಕ್ತಿ ಸಂಪನ್ನನು, ಏಕಲಿಂಗ ನಿಷ್ಠಾಪರನು, ಚರಲಿಂಗ ಲೋಲುಪ್ತನು, ಶರಣ ಸಂಗವೈಶ್ವರ್ಯನು, ತ್ರಿವಿಧಕ್ಕಾಯತನು, ತ್ರಿಕರಣಶುದ್ಧನು, ತ್ರಿವಿಧ ಲಿಂಗಾಂಗಸಂಬಂದ್ಥಿ, ಅನ್ಯದೈವದ ಸ್ಮರಣೆಯ ಹೊದ್ದ, ಭವಿಸಂಗವ ಮಾಡ, ಭವಿಪಾಕವ ಕೊಳ್ಳ, ಪರಸ್ತ್ರೀಯರ ಬೆರಸ, ಪರಧನವನೊಲ್ಲ, ಪರನಿಂದ್ಯವನಾಡ, ಅನೃತವ ನುಡಿಯ, ಹಿಂಸೆಯ ಮಾಡ, ತಾಮಸಭಕ್ತರ ಸಂಗವಮಾಡ, ಗುರುಲಿಂಗಜಂಗಮಕ್ಕೆ ಅರ್ಥಪ್ರಾಣಾಬ್ಥಿಮಾನ ಮುಂತಾದವೆಲ್ಲವ ಸಮರ್ಪಿಸಿ ಪ್ರಸಾದ ಮುಂತಾಗಿ ಭೋಗಿಸುವ, ಜಂಗಮನಿಂದ್ಯವ ಸೈರಿಸ, ಪ್ರಸಾದನಿಂದ್ಯವ ಕೇಳ, ಅನ್ಯರನಾಸೆಗೈಯ್ಯ, ಪಾತ್ರಾಪಾತ್ರವನರಿದೀವ, ಚತುರ್ವಿಧಪದವಿಯ ಹಾರೈಸ, ಅರಿಷಡ್ವರ್ಗಕ್ಕೆ ಅಳುಕ, ಕುಲಾದಿಮದಂಗಳ ಬಗೆಗೊಳ್ಳ, ದ್ವೈತಾದ್ವೈತವ ನುಡಿವನಲ್ಲ, ಸಂಕಲ್ಪ-ವಿಕಲ್ಪವ ಮಾಡುವನಲ್ಲ, ಕಾಲೋಚಿತವ ಬಲ್ಲ, ಕ್ರಮಯುಕ್ತನಾಗಿ ಷಟ್‍ಸ್ಥಲಭರಿತ, ಸರ್ವಾಂಗಲಿಂಗಿ, ದಾಸೋಹಂ ಸಂಪನ್ನ ಇಂತೀ ಭಾವನ್ನದಿರವ ಅಂತರಂಗದಲ್ಲಿ ಒಳಕೊಂಡು ಬಹಿರಂಗದಲ್ಲಿ ನಡೆದಂತೆ ನುಡಿದು, ನುಡಿದಂತೆ ನಡದು, ಸದ್ಭಕ್ತಿ-ಜ್ಞಾನ-ವೈರಾಗ್ಯ ಸಂಪನ್ನತ್ವದಿಂದ ಸಕಲಪ್ರಮಥಗಣಂಗಳಿರುವ ಕೀರ್ತಿಸಿಕೊಳ್ಳುತ್ತ, ಆ ಆದಿಪ್ರಮಥರ ಕೀರ್ತನೆ ವಿಚಾರವೆಂತೆಂದಡೆ : ಶ್ರೀಮದನೇಕಲೋಕ-ವಿಸ್ತಾರಕ ಕಾರಣರೂಪ, ಸತ್ತಿಚಿತ್ತಾನಂದ ನಿತ್ಯಪರಿಪೂರ್ಣ ಅವಿರಳ ಪರಂಜ್ಯೋತಿಸ್ವರೂಪ, ಪರತರ ಪರಬ್ರಹ್ಮಾನುಭಾವ ಸಾರ್ವಭೌಮ, ಷಟ್ಸ್ಥಲಸ್ಥಾಪನಾಚಾರ್ಯ, ಪಂಚಾಚಾರ ಪ್ರಮಥನಾಯಕ ಸರ್ವಾಚಾರ ನಿಷ್ಠಾಗರಿಷ್ಠ, ಲಿಂಗಲೋಲುಪ್ತ, ಲಿಂಗಭೋಗೋಪಭೋಗಿ, ಜಂಗಮಾನುಭಾವ, ಸದ್ಭಕ್ತ ಹೃನ್ಮಂದಿರವಾಸ, ನಿತ್ಯ ಕಲ್ಯಾಣೋತ್ಸಹಪೂರ್ಣಾವತರ್ಯ, ಲಿಂಗಲೀಲಾನಂದ, ಏಕವಿಂಶತಿಯುಗಸ್ಥಾಪನಾಚಾರ್ಯವರ್ಯ, ಮಂಜುಳಾಂತರಂಗ, ಮನುಮುನಿವಂದ್ಯ, ಪ್ರದಾಯಕ ತ್ರೈದಶಪರ್ವತಾದ್ಥೀಶ್ವರ, ಮದನಮರ್ದನ, ಮಾಯಾಕೋಲಾಹಲ, ಅಷ್ಟಾವರಣ ಸ್ವರೂಪ, ತ್ರಿವಿಧಾನುಗ್ರಹ ಪ್ರತಿಪಾದಕ, ತ್ರಿವಿಧ ಪಾದೋದಕ ಪ್ರಸಾದಲೋಲುಪ್ತ, ತ್ರಿವಿಧಾಚಾರಸನ್ಮೋಹಿ, ತ್ರಿಗುಣಾನಂದಭರಿತ, ತ್ರಿಮಲದೂರ, ನಿರ್ಮಲ-ನಿಃಕಳಂಕ-ನಿಃಶೂನ್ಯ-ನಿರಂಜನ, ಅನುಮಿಷಾರಾಧ್ಯ, ತ್ರಿವಿಧ ಲಿಂಗಾನುಭಾವ ಅಖಿಳಾಂಡ ಪ್ರತಿಷ್ಠಾಪ್ರದಾಯಕ, ಸದ್ಧರ್ಮಸ್ವರೂಪ, ಸತ್ಕ್ರಿಯಾ ಸಮ್ಯಜ್ಞಾನ ಸದಾಭರಿತ, ನಿತ್ಯ ತೃಪ್ತಾನಂದಮಂತ್ರಸ್ವರೂಪ, ಅನಂತಸೂರ್ಯಚಂದ್ರಾಗ್ನಿಪ್ರಕಾಶ, ಅಜ್ಞಾನ ತಿಮಿರಾಂಧಸ್ಯ, ಕಾರಣಾವತಾರ ಸರ್ವಜ್ಞ ಪ್ರದಾಯಕ, ಕಾಮಧೇನು-ಕಲ್ಪವೃಕ್ಷ, ಚಿಂತಾಮಣಿಗೆ ಮಾತೃಸ್ವರೂಪ, ವಾಚಾತೀತ-ವರ್ಣಾತೀತ-ಭಾವಾತೀತ-ಜ್ಞಾನಾತೀತ, ಚಿತ್ಕಲಾಸ್ವರೂಪ, ಅಯೋನಿಸಂಭವ, ಅಜಡಸ್ವರೂಪ, ಬತ್ತೀಶಕಳಾಮೂರ್ತಿ, ಜರೆಮರಣ ಸಂಸ್ಕøತಿದೂರ, ವರವೀರಶೈವಮತ ಸ್ಥಾಪನಾಚಾರ್ಯ, ನಿಜ ಶಿವಯೋಗಭರಿತಾನಂದಮೂರ್ತಿ, ಗುರುಮಾರ್ಗಾಚಾರ ಪ್ರತಿಷ್ಠಾಪ್ರದಾಯಕ, ಅನಾಚಾರ ಸಂಹಾರ, ಮಹಿಮಾಸ್ವರೂಪ, ಸದ್ಭಕ್ತಜಿಹ್ವಾಗ್ರ ಹೃನ್ಮಂದಿರಾವಾಸ. ಏಕವಿಂಶತಿ ದೀಕ್ಷಾಬೋಧಸ್ವರೂಪ, ಷಡ್ಗುಣೈಶ್ವರ್ಯ ಸಂಪತ್ಕರವನುಳ್ಳ ಮುಕ್ತಿಪ್ರದಾಯಕ, ಮೂಲಮಂತ್ರಮೂರ್ತಿ ಲೋಕಪಾವನಾರ್ಥ ಕೂಡಲಸಂಗಮೇಶ್ವರನ ಚಿದ್ಗರ್ಭೋದಯ ಬಸವದಂಡನಾಥ ಪ್ರಮಥಗಣಂಗಳ ಭಕ್ತಿಹಿತಾರ್ಥವಾಗಿ, ಅವತರಿಸಿದಂಥ ವಿರಾಣ್ಮೂರ್ತಿ! ಅನಾದಿಗಣೇಶ್ವರ, ಅನಾದಿಗಣೇಶ್ವರನ ಶಿಷ್ಯರು ಆದಿಗಣೇಶ್ವರ, ಆದಿಗಣೇಶ್ವರನ ಶಿಷ್ಯರು ನಿರ್ಮಾಯವೆಂಬ ಗಣೇಶ್ವರ, ನಿರ್ಮಾಯನೆಂಬ ಗಣೇಶ್ವರನ ಶಿಷ್ಯರು ನಿರಂಜನನೆಂಬ ಗಣೇಶ್ವರ, ನಿರಂಜನನೆಂಬ ಗಣೇಶ್ವರನ ಶಿಷ್ಯರು ಜ್ಞಾನಾನಂದನೆಂಬ ಗಣೇಶ್ವರ, ಜ್ಞಾನಾನಂದನೆಂಬ ಗಣೇಶ್ವರನ ಶಿಷ್ಯರು ಆತ್ಮ ಗಣೇಶ್ವರ, ಆತ್ಮಗಣೇಶ್ವರನ ಶಿಷ್ಯರು ಆಧ್ಯಾತ್ಮ ಗಣೇಶ್ವರ, ಆಧ್ಯಾತ್ಮಗಣೇಶ್ವರನ ಶಿಷ್ಯರು ರುದ್ರನೆಂಬ ಗಣೇಶ್ವರ, ರುದ್ರನೆಂಬ ಗಣೇಶ್ವರನ ಶಿಷ್ಯರು ಬಸವಪ್ರಭುದೇವರು, ಬಸವಪ್ರಭುದೇವರ ಶಿಷ್ಯರು ಆದಿಲಿಂಗದೇವರು, ಆದಿಲಿಂಗದೇವರ ಶಿಷ್ಯರು ಚೆನ್ನವೀರೇಶ್ವರದೇವರು, ಚೆನ್ನವೀರೇಶ್ವರದೇವರ ಶಿಷ್ಯರು ಹರದನಹಳ್ಳಿ ಗೋಸಲದೇವರು, ಹರದನಹಳ್ಳಿ ಗೋಸಲದೇವರ ಶಿಷ್ಯರು ಶಂಕರದೇವರು, ಶಂಕರದೇವರ ಶಿಷ್ಯರು ದಿವ್ಯಲಿಂಗದೇವರು, ದಿವ್ಯಲಿಂಗದೇವರ ಶಿಷ್ಯರು ಚೆನ್ನಬಸವೇಶ್ವರದೇವರು, ಚೆನ್ನಬಸವೇಶ್ವರದೇವರ ಶಿಷ್ಯರು ತೋಂಟದ ಸಿದ್ಧೇಶ್ವರಸ್ವಾಮಿಗಳು, ತೋಂಟದ ಶಿದ್ಧೇಶ್ವರಸ್ವಾಮಿಗಳ ಸಿಷ್ಯರು ಮರುಳಸಿದ್ಧೇಶ್ವರಸ್ವಾಮಿಗಳು, ಮರುಳಸಿದ್ಧೇಶ್ವರಸ್ವಾಮಿಗಳ ಶಿಷ್ಯರು ರೇವಣಸಿದ್ಧೇಶ್ವರಸ್ವಾಮಿಗಳು, ರೇವಣಸಿದ್ಧೇಶ್ವರಸ್ವಾಮಿಗಳ ಶಿಷ್ಯರು ಶಿವಲಿಂಗೇಶ್ವರಸ್ವಾಮಿಗಳು, ಶಿವಲಿಂಗೇಶ್ವರಸ್ವಾಮಿಗಳ ಶಿಷ್ಯರು ನಿರಂಜನೇಶ್ವರಸ್ವಾಮಿಗಳು, ನಿರಂರನೇಶ್ವರಸ್ವಾಮಿಗಳ ಶಿಷ್ಯರು ಮರಿಬಸವಲಿಂಗೇಶ್ವರಸ್ವಾಮಿಗಳು, ಮರಿಬಸವಲಿಂಗೇಶ್ವರಸ್ವಾಮಿಗಳ ಶಿಷ್ಯರು ಸ್ವತಂತ್ರಸಿದ್ಧಲಿಂಗೇಶ್ವರಸ್ವಾಮಿಗಳು, ಸ್ವತಂತ್ರಸಿದ್ಧಲಿಂಗೇಶ್ವರಸ್ವಾಮಿಗಳ ಶಿಷ್ಯರು ಚೆನ್ನಮಲ್ಲೇಶ್ವರಸ್ವಾಮಿಗಳು ಚೆನ್ನಮಲ್ಲೇಶ್ವರಸ್ವಾಮಿಗಳ ಶಿಷ್ಯರು ಚೆನ್ನಂಜೇಶ್ವರಸ್ವಾಮಿಗಳು, ಚೆನ್ನಂಜೇಶ್ವರಸ್ವಾಮಿಗಳ ಶಿಷ್ಯರು ಗುರುಶಾಂತೇಶ್ವರಸ್ವಾಮಿಗಳು, ಗುರುಶಾಂತೇಶ್ವರಸ್ವಾಮಿಗಳ ಶಿಷ್ಯರು ಶಾಂತಮಲ್ಲಸ್ವಾಮಿಗಳು ಶಾಂತಮಲ್ಲಸ್ವಾಮಿಗಳ ಕರ-ಮನ-ಭಾವದಲ್ಲುದಯವಾದ ಗುರುಸಿದ್ಧಲಿಂಗ ನಾನಯ್ಯ. ಆ ಗುರುಸಿದ್ಧಲಿಂಗನ ಕರ-ಮನ-ಸುಭಾವದಲ್ಲಿ ಶರಣಗಣಂಗಳ ಶುದ್ಧಸಿದ್ಧಪ್ರಸಿದ್ಧ ಪ್ರಸಾದವಾಗಿ ಅಷ್ಟವಿಧಾರ್ಚನೆ-ಷೋಡಶೋಪಚಾರ-ಮಂತ್ರ-ಧ್ಯಾನ- ಜಪ-ಸ್ತೋತ್ರ-ಮನೋರ್ಲಯ-ನಿರಂಜನ ಪೂಜೆಯ ಕೈಕೊಂಡು ಪ್ರಮಥಗಣಂಗಳ ಸ್ವಾನುಭಾವಸೂತ್ರವನೊಳಕೊಂಡು ಒಳಗು ಬೆಳಗನೆ ನುಂಗಿ ಬೆಳಗು ಒಳಗನೆ ನುಂಗಿ, ಛಳಿ ಮೋಹಕದ ಮಂಜು ನುಂಗಿದಂತೆ ಹಲವು ದೀಪವ ಬಯಲ ಗಾಳಿ ನುಂಗಿದ ತೆರದಿ ಕಳೆಯಳಿದ ಕೂಡಲಚೆನ್ನಸಂಗಯ್ಯನು. ಇಂತು ಚಿಕ್ಕದಂಡನಾಥ ಚೆನ್ನಬಸವೇಶ್ವರಸ್ವಾಮಿಗಳ ಪ್ರಸನ್ನಪ್ರಸಾದಕ್ಕೆ ಒಪ್ಪಿಗೆಯಾಗಿ ಈ ವಚನಾನುಭಾವಶಾಸ್ತ್ರವ ಕೈಕೊಂಡು ಸದ್ಭಕ್ತಶರಣಗಣಂಗಳಿಗೆ ಬೋದ್ಥಿಸಿ ಸಂಪೂರ್ಣವಮಾಡುವುದಕ್ಕೆ ಕರ್ತುಗಳಾಗಿ ಒಪ್ಪುತಿರ್ಪಿರಿ ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಲೋಕಹಿತಾರ್ಥವಾಗಿ, ಪ್ರಾಣಿಗಳೆಲ್ಲ ಕೆಟ್ಟಹರೆಂದು ಶರಣ ಲಿಂಗವಾಗಿ, ಲಿಂಗಭರಿತ ಶರಣನಾಗಿ ಬದುಕಿಸಿದನು ಕೇಳಿರಣ್ಣಾ. ಯೇ ರುದ್ರಲೋಕಾದವತೀರ್ಯ ರುದ್ರಾ ಮಾನುಷ್ಯಮಾಶ್ರಿತ್ಯ ಜಗದ್ಧಿತಾಯ ಚರಂತಿ ನಾನಾವಿಧಚಾರುಚೇಷ್ಟಾಸ್ತೇಭ್ಯೋ ನಮಸ್ತ್ರ್ಯಂಬಕಪೂಜಕೇಭ್ಯಃ ಎಂದುದಾಗಿ, ಶರಣರೂಪಾಗಿ ಬಂದು ಶ್ರೀಮೂರ್ತಿಯ ತೋರಿ ಪಾಪವ ಕಳೆದನು. ಉಪಪಾತಕಕೋಟೀನಾಂ ಬ್ರಹ್ಮಹತ್ಯಶತಾನಿ ಚ ದಹಂತ್ಯಶೇಷಪಾಪಾನಿ ಶಿವಭಕ್ತಸ್ಯ ದರ್ಶನಾತ್ ಭಕ್ತಜನಂಗಳ ಕೂಡೆ ಸಂಭಾಷಣೆಯ ಮಾಡಿ ಮಹಾಪಾತಕಂಗಳ ಕಳೆದನು. ಮಹಾಪಾತಕಕೋಟಿಘ್ನಃ ಶ್ವಪಚೋ[s]ಪಿ ಲಿಂಗಪೂಜಕಃ ತತ್ಸಂಭಾಷಣಾನ್ಮುಕ್ತಿರ್ಗಣಮುಖ್ಯಗಣೇಶ್ವರಃ ಶ್ರೀಗುರುಮೂರ್ತಿಯ ತೋರಿ ಸಂಭಾಷಣೆಯಂ ಮಾಡಿ ಪಾದೋದಕ ಪ್ರಸಾದವನಿತ್ತು ಸಲಹಿ ರಕ್ಷಿಸಲು ಬಂದನು ಕಾಣಿರಣ್ಣಾ. ಇದನರಿಯದೆ, ಶರಣರು ದ್ರವ್ಯಾರ್ಥಿಗಳಾಗಿ ಬಂದರೆಂಬಿರಿ, ನಾನು ಮಾಡಿದೆನು ಶರಣರು ಮಾಡಿಸಿಕೊಂಡಹರೆಂದೆಂಬಿರಿ, ಉಂಟೆಂದಿರಿ, ಇಲ್ಲೆಂದಿರಿ, ಈ ಪರಿ ಅಜ್ಞಾನದಲ್ಲಿ ಕಂಡು, ನುಡಿದು, ದೋಷಿಗಳಹಿರಿ. ಶರಣರ ಶಿವನೆಂದು ನಂಬಿಮಾಡಲು ಸಿರಿಯಾಳನು ಮಗನ ಕೊಟ್ಟಡೆ ಕೈಲಾಸವ ಕೊಟ್ಟನು. ದಾಸ ವಸ್ತ್ರನಿತ್ತಡೆ ಮಹಾವಸ್ತು ತವನಿದ್ಥಿಯ ಕೊಟ್ಟನು. ಬಲ್ಲಾಳ ವಧುವನಿತ್ತಡೆ, ತನ್ನನೇ ಕೊಟ್ಟನು. ಈ ಪರಿ ಅಣುವಿಂಗೆ ಅಣು, ಮಹತ್ತಿಂಗೆ ಮಹತ್ತವನೆ ಕೊಟ್ಟನು. ಸಕೃತ್ ಲಿಂಗಾರ್ಚಕೇ ದತ್ವಾ ಸುವರ್ಣಂ ಚಾಣುಮಾತ್ರಕಂ ದೇವಸಂಪೂಜ್ಯಮಾನೇಷು ಗಣಮುಖ್ಯೋ ಗಣೇಶ್ವರಃ ಭಕ್ತಿಯಿಂ ನಂಬಿ ಮಾಡಿರೆ, ದುಭಾರ್ವಿಸಿ ಕೆಡಬೇಡ. ಶರಣರೇ ಶಿವನೆಂದು ನಂಬಿ ಮಾಡಿರಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನ ಕೂಡುವುದಯ್ಯಾ.
--------------
ಉರಿಲಿಂಗಪೆದ್ದಿ
ಅನಾದಿಪರಶಿವನ ಶಿಷ್ಯ ಆದಿಶಂಭುವೆಂಬ ಗಣೇಶ್ವರ. ಆದಿಗಣೇಶ್ವರನ ಶಿಷ್ಯರು ನಿರಂಜನನೆಂಬ ಗಣೇಶ್ವರ. ನಿರಂಜನನೆಂಬ ಗಣೇಶ್ವರನ ಶಿಷ್ಯರು ಆದಿ ಪಡುವಿಡಿ, ಅನಾದಿ ಪಡುವಿಡಿ, ಶಿವಸಿದ್ಧಪಡುವಿಡಿಯಪ್ರಭುವೆಂಬ ಗಣೇಶ್ವರ. ಪ್ರಭುವೆಂಬ ಗಣೇಶ್ವರನ ಶಿಷ್ಯರು ಮಹಾಂತಮಲ್ಲಿಕಾರ್ಜುನನೆಂಬ ಗಣೇಶ್ವರ. [ಮಹಾಂತ ಮಲ್ಲಿಕಾರ್ಜುನನ] ಶಿಷ್ಯರು ಜಾಲಹಳ್ಳಿಯ ಶಾಂತದೇವರು. ಜಾಲಹಳ್ಳಿಯ ಶಾಂತದೇವರ ಶಿಷ್ಯರು ಸಿದ್ಧಮಲ್ಲಿನಾಥೇಶ್ವರ. ಸಿದ್ಧಮಲ್ಲಿನಾಥೇಶ್ವರನ ಶಿಷ್ಯರು ಪಡುವಿಡಿಯ ರಾಚೇಶ್ವರ. ಪಡುವಿಡಿಯ ರಾಚೇಶ್ವರನ ಕರಕಮಲದಲ್ಲಿ ಉತ್ಪತ್ಯವಾದ ಶಿಶುವು ಹೇಮಗಲ್ಲ ಹಂಪ ನಾನಯ್ಯ. ಹೀಗೆ, ಅನಾದಿವಿಡಿದು ಬಂದ ಗುರು-ಶಿಷ್ಯ ಸಂಬಂಧ, ಅನಾದಿವಿಡಿದು ಬಂದ ಲಿಂಗ-ಜಂಗಮ, ಅನಾದಿವಿಡು ಬಂದ ಭಕ್ತಿ-ಜ್ಞಾನ-ವೈರಾಗ್ಯ. ಇದು ಸತ್ಯ, ಇದು ಸತ್ಯ ಎನ್ನಾಳ್ದ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಮುಕ್ತಿಗೆ ಸದಾ ಸಂಧಾನವಾದ ಮಹಾಜ್ಞಾನ ಶಿವಕ್ಷೇತ್ರವೆಂಬ ಶಾಂಭವಿಯಚಕ್ರವಿವರವೆಂತೆಂದೊಡೆ: ಅಗ್ನಿಮಂಡಲದ ಪೂರ್ವದಿಕ್ಕಿನ ಸಕಾರವೇ ವಾಮೆ, ಷಕಾರವೇ ಜೇಷೆ*, ಶಕಾರವೇ ರೌದ್ರಿ, ವಕಾರವೇ ಕಾಳಿ. ಅಗ್ನಿಮಂಡಲದ ನೈಋತ್ಯದಳಕ್ಕೆ ಆಧಾರಚಕ್ರಸಂಬಂಧವು. ಅದರ ಮುಂದಣ ಲಕಾರವೇ ಬಾಲೆ, ರಕಾರವೇ ಬಲಪ್ರಮಥಿನಿ, ಯಕಾರವೇ ಸರ್ವಭೂತದಮನಿ, ಮಕಾರವೇ ಮನೋನ್ಮನಿ. ಇನ್ನು ಸೂರ್ಯಮಂಡಲದ ಬಕಾರ ಭಕಾರಗಳೆರಡು ಕೂಡಿ ಅಗ್ನಿಮಂಡಲದ ಈಶಾನ್ಯದಳಕ್ಕೆ ಸ್ವಾಧಿಷಾ*ನಚಕ್ರಸಂಬಂಧವು. ಮುಂದೆ ಚಂದ್ರಮಂಡಲದ ವಿವರವೆಂತೆಂದೊಡೆ: ಅಃ ಎಂಬುದೇ ಷಣ್ಮುಖಿ, ಅಂ ಎಂಬುದೇ ಭವ, ಔಕಾರವೇ ಶರ್ವ, ಓಕಾರವೇ ರುದ್ರ, ಐಕಾರವೇ ಮಹಾದೇವ, ಏಕಾರವೇ ಸೋಮ, ಲೂೃಕಾರವೇ ಭೀಮ, ಲೃಕಾರವೇ ಉಗ್ರ, Iೂಕಾರವೇ ಪಶುಪತಿ, ಋಕಾರವೇ ಉಮೇಶ್ವರ, ಊಕಾರವೇ ಚಂಡೇಶ್ವರ, ಉಕಾರವೇ ನಂದೀಶ್ವರ, ಈಕಾರವೇ ಮಹಾಕಾಳ, ಇಕಾರವೇ ಭೃಂಗಿರಿಟಿ, ಆಕಾರವೇ ಗಣೇಶ್ವರ, ಅಕಾರವೇ ವೃಷಭೇಶ್ವರ, ಚಂದ್ರಮಂಡಲದಲ್ಲಿ ವಿಶುದ್ಧಿಚಕ್ರಸಂಬಂಧವು. ಇನ್ನು ಮುಂದೆ ಸೂರ್ಯಮಂಡಲವೆಂತೆಂದೊಡೆ: ಪೂರ್ವದಳದ ಕಕಾರವೇ ಅನಂತ, ಖಕಾರವೇ ಸೂಕ್ಷ್ಮ, ಗಕಾರವೇ ಶಿವೋತ್ತಮ, ಘಕಾರವೇ ಏಕನೇತ್ರ, ಙಕಾರವೇ ಏಕರುದ್ರ. ಚಕಾರವೇ ತ್ರಿಮೂರ್ತಿ, ಛಕಾರವೇ ಶ್ರೀಕಂಠ, ಜಕಾರವೇ ಶಿಖಂಡಿ, ಝಕಾರವೇ ಇಂದ್ರ, ಞಕಾರವೇ ಅಗ್ನಿ. ಟಕಾರವೇ ಯಮ, ಠಕಾರವೇ ನೈಋತ್ಯ. ಸೂರ್ಯಮಂಡಲದ ನೈಋತ್ಯದಳಕ್ಕೆ ಅನಾಹತಚಕ್ರಸಂಬಂಧವು. ಡಕಾರವೇ ವರುಣ, ಢಕಾರವೇ ವಾಯುವ್ಯ, ಣಕಾರವೇ ಕುಬೇರ, ತಕಾರವೇ ಈಶಾನ್ಯ, ಥಕಾರವೇ ಧರಾ, ದಕಾರವೇ ಧ್ರುವ, ಧಕಾರವೇ ಸೋಮ, ನಕಾರವೇ ಅಪ್ಪು, ಪಕಾರವೇ ಅನಿಲ, ಫಕಾರವೇ ಅನಲ, ಸೂರ್ಯಮಂಡಲದ ವರುಣದಳದಿಂದೆ ಈಶಾನ್ಯದಳಕ್ಕೆ ಮಣಿಪೂರಕಚಕ್ರ ಸಂಬಂಧವು. ಈಶಾನ್ಯ ಇಂದ್ರ ಮಧ್ಯದ ಬಕಾರ ಭಕಾರಂಗಳ ಪೆಸರು, ಬಕಾರವೇ ಪ್ರತ್ಯೇಶ, ಭಕಾರವೇ ಪ್ರಭವ, ಇವೆರಡು ಸ್ವಾಧಿಷಾ*ನಚಕ್ರದವು. ಇನ್ನು ಅಕಾರ ಹಕಾರಂಗಳಿಗೆ ಭೇದವಿಲ್ಲದ ಕಾರಣ ಚಂದ್ರಮಂಡಲದ ಅ ಎಂಬಕ್ಷರವು ಅಗ್ನಿಮಂಡಲದ ಲಂಬಕ್ಷರವು ಇವೆರಡು ಆಜ್ಞಾಚಕ್ರಸಂಬಂಧವಾಗಿಹವು. ಈ ಷಟ್‍ಚಕ್ರಂಗಳು ಶಾಂಭವಿಚಕ್ರದಲ್ಲಿ ಸಂಬಂಧವಾಗಿಹವು. ಇನ್ನು ಅಷ್ಟದಳಂಗಳಿಗೆ ಹಂಚಿಹಾಕುವ ವಿವರವೆಂತೆಂದೊಡೆ: ವಾಮ, ಗಣೇಶ್ವರ, ವೃಷಭೇಶ್ವರ, ಅನಂತ, ಸೂಕ್ಷ್ಮ, ಶಿವೋತ್ತಮ, ಇಂದ್ರ, ಸತ್ಯ, ಭೃಂಗಿ, ಅಂತರ್ಲಕ್ಷ ಈ ಹತ್ತು ಇಂದ್ರದಳದಲ್ಲಿ ಸಂಬಂಧವು. ಜೇಷ*, ಮಹಾಕಾಳ, ಭೃಂಗರೀಟಿ, ಏಕನೇತ್ರ, ಏಕರುದ್ರ, ತ್ರಿಮೂರ್ತಿ, ಅಗ್ನಿ, ಪೂಷನ್, ವಿಧಿ, ದಮ ಈ ಹತ್ತು ಅಗ್ನಿದಳದಲ್ಲಿ ಸಂಬಂಧವು. ರೌದ್ರಿ, ನಂದೀಶ್ವರ, ಚಂಡೇಶ್ವರ, ಶ್ರೀಕಂಠ, ಶಿಖಂಡಿ, ಇಂದ್ರ ಯಮ, ಭಾಸ್ಕರ, ಪುಷ್ಪದತ್ತ , ಬಲಾಟ ಈ ಹತ್ತು ಯಮದಳದಲ್ಲಿ ಸಂಬಂಧವು. ಕಾಳಿ, ಉಮೇಶ್ವರ, ಪಶುಪತಿ, ಅಗ್ನಿ, ಯಮ, ನೈಋತ್ಯ, ದೌವಾರಿಕ, ಸುಗ್ರೀವ, ಆವರಣ ಈ ಹತ್ತು ನೈಋತ್ಯದಳದಲ್ಲಿ ಸಂಬಂಧವು. ಬಾಲೆ, ಉಗ್ರ, ಭೀಮ, ವರುಣ, ಏಕನೇತ್ರ, ಕುಬೇರ, ಅರುಣ, ಅಸುರ, ಗಂಹ್ವರ, ವೇಗ, ಈ ಹತ್ತು ವರುಣದಳದಲ್ಲಿ ಸಂಬಂಧವು. ಬಲಪ್ರಮಥಿನಿ, ಸೋಮ, ಅಪನಿಲ, ಮಹಾದೇವ, ಈಶಾನ್ಯ, ಧರಾ, ಧ್ರುವ, ವಾಯು, ನಾಗಮುಖ, ಸೋಮ, ಈ ಹತ್ತು ವಾಯುವ್ಯದಳದಲ್ಲಿ ಸಂಬಂಧವು. ಸರ್ವಭೂತದಮನಿ, ರುದ್ರ, ಶರ್ವ, ಸೋಮ, ಅಪ್ಪು, ನೀಲ, ಕುಬೇರ, ಅಘೋರ, ದಿತಿ, ಅದಿತಿ, ಈ ಹತ್ತು ಕುಬೇರದಳದಲ್ಲಿ ಸಂಬಂಧವು. ಮನೋನ್ಮನಿ, ಭವ, ಷಣ್ಮುಖಿ, ನಳ, ಪ್ರತ್ಯೇಶ, ಪ್ರಭವ, ಈಶಾನ್ಯ, ಪರ್ಜನ್ಯ, ಜಯಂತ, ಸಂಕರ, ಈ ಹತ್ತು ಈಶಾನ್ಯದಳದಲ್ಲಿ ಸಂಬಂಧವು. ಇಲ್ಲಿಗೆ ಅಷ್ಟದಳದ ವಿವರ ಮುಗಿಯಿತು. ಇನ್ನು ಮುಂದೆ ಚೌದಳದ ವಿವರವೆಂತೆಂದೊಡೆ : ಇಂತಪ್ಪ ಅಷ್ಟದಳವನೊಳಕೊಂಡು ಅಂಬಿಕೆ, ಗಣಾನಿ, ಈಶ್ವರಿ, ಮನೋನ್ಮನಿ ಎಂಬ ಚತುರ್ದಳ ಶಕ್ತಿಯರಿರ್ಪರು. ಪೂರ್ವದಳದ ಸಕಾರವೇ ಅಂಬಿಕೆ. ದಕ್ಷಿಣದಳದ ಅಕಅರವೇ ಗಣಾನಿ. ಪಶ್ಚಿಮದಳದ ವಿಕಾರವೇ ಈಶ್ವರಿ. ಉತ್ತರದಳದ ಕ್ಷಕಾರವೇ ಮನೋನ್ಮನಿ. ಇಂತೀ ಚತುರ್ವಿಧಶಕ್ತಿಯನೊಳಕೊಂಡಿರ್ಪಳು ಹ್ರೀಂಕಾರಶಕ್ತಿ. ಹ್ರೀಂಕಾರಶಕ್ತಿ ಎಂದಡೂ ಮೂಲಜ್ಞಾನ ಚಿತ್ತು ಎಂದಡೂ ಚಿದಾತ್ಮ ಎಂದಡೂ ಪರ್ಯಾಯ ನಾಮವು. ಇಂತಪ್ಪ ಹ್ರೀಂಕಾರಶಕ್ತಿಗೆ ಆಶ್ರಯವಾಗಿರ್ಪುದು ನಿಷ್ಕಲಲಿಂಗವು. ನಿಷ್ಕಲಲಿಂಗವೆಂದಡೂ ಶುದ್ಧಪ್ರಸಾದವೆಂದಡೂ ಹಕಾರಪ್ರಣವವೆಂದಡೂ ಪರ್ಯಾಯ ನಾಮಂಗಳು. ಇಂತಪ್ಪ ನಾಮಂಗಳನೊಳಕೊಂಡು ಪಿಂಡ ಬ್ರಹ್ಮಾಂಡಗಳೊಳಹೊರಗೆ ಪರಿಪೂರ್ಣವಾಗಿ ತುಂಬಿ ತೊಳಗಿ ಬೆಳಗುತಿರ್ಪುದು ನೋಡಾ ನಿಷ್ಕಲಲಿಂಗವು. ಇಂತಪ್ಪ ಅನಾದಿ ನಿಷ್ಕಲ ಪರಶಿವಬ್ರಹ್ಮದ ನಿಜದ ನಿಲವನು ಶ್ರುತಿಗುರುವಚನ ಸ್ವಾನುಭಾವಂಗಳಿಂದರಿದು ತನ್ನೊಳಗೆ ಗರ್ಭೀಕರಿಸಿಕೊಂಡು ಸುಳಿವ ಮಹಾಶರಣರ ಶ್ರೀಚರಣಕ್ಕೆ ನಮೋ ನಮೋ ಎಂಬೆನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಮತ್ತೆ, ಎರಡನೆಯ ಚಂದ್ರಮಂಡಲದ ಪದಿನಾರೆಸಳ್ಗಳಲ್ಲಿ, ಉಮೇಶ್ವರ ಚಂಡೇಶ್ವರ ನಂದಿಕೇಶ್ವರ ಮಹಾಕಾಳ ಭೃಂಗಿರಿಟಿ ಗಣೇಶ್ವರ ವೃಷಭೇಶ್ವರ ಷಣ್ಮುಖರೆಂಬಷ್ಟ ಗಣೇಶ್ವರರನುತ್ತರಂ ಮೊದಲಾದಷ್ಟದಳಂಗಳಲ್ಲಿ ಪೂಜಿಪುದುಳಿದಷ್ಟದಳಂಗಳಲ್ಲಿ ಭವ ಶರ್ವ ರುದ್ರ ಮಹಾದೇವ ಸೋಮ ಭೀಮೋಗ್ರ ಪಶುಪತಿಗಳೆಂಬಷ್ಟಮೂರ್ತಿಗಳನಾರಾಧಿಪುದೆಂದು ನಿರವಿಸಿದೆಯಯ್ಯಾ, ಪರಮ ಶಿವಲಿಂಗೇಶ್ವರ[ಪ್ರ]ತಿಪದಾರ್ಥ ಭಾಸ್ವರ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಕೃತಯುಗದಲ್ಲಿ ನಾನು ಭಕ್ತಿ ಕಾರಣ ಸ್ಥೂಲಕಾಯನೆಂಬ ಗಣೇಶ್ವರನಾಗಿರ್ದೆನಯ್ಯಾ. ತ್ರೇತಾಯುಗದಲ್ಲಿ ನಾನು ಭಕ್ತಿ ಕಾರಣ ಶೂನ್ಯಕಾಯನೆಂಬ ಗಣೇಶ್ವರನಾಗಿರ್ದೆನಯ್ಯಾ. ದ್ವಾಪರದಲ್ಲಿ ನಾನು ಭಕ್ತಿ ಕಾರಣ ಅನಿಮಿಷನೆಂಬ ಗಣೇಶ್ವರನಾಗಿರ್ದೆನಯ್ಯಾ. ಕಲಿಯುಗದಲ್ಲಿ ನಾನು ಭಕ್ತಿ ಕಾರಣ ಅಲ್ಲಮಪ್ರಭುವೆಂಬ ಗಣೇಶ್ವರ (ಜಂಗಮ ?)ನಾಗಿರ್ದೆ ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ವಿತ್ತಂ ಚ ರಾಜವಿತ್ತಂ ಚ ಕಾಮಿನೀ ಕಾಮಕಾವಶಾ ಪೃಥಿವೀ ವೀರಭೋಜ್ಯಾ ಚ ಸ್ವಧನಂ ಧರ್ಮ ಏವ ಚ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ ಧನ ಕೆಡದ ಹಾಂಗೆ. ಅಧರ್ಮಾತ್ ಜಾಯತೇ ಕಾಮಃ ಕ್ರೋಧೋ[s] ಧರ್ಮಾಚ್ಚ ಜಾಯತೇ ಧರ್ಮಾತ್ ಸಂಜಾಯತೇ ಮೋಕ್ಷಃ ತಸ್ಮಾದ್ಧರ್ಮಂ ಸಮಾಚರೇತ್ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ ಧನ ಕೆಡದ ಹಾಂಗೆ. ಕ್ಷಣಂ ಚಿತ್ತಂ ಕ್ಷಣಂ ವಿತ್ತಂ ಕ್ಷಣಂ ಜೀವನಮೇವ ಚ ಯಮಸ್ಯ ಕರುಣೋ ನಾಸ್ತಿ ಧರ್ಮಸ್ಯ ತ್ವರಿತಾ ಗತಿಃ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ. ಇಂತು, ನಾನಾ ವೇದ ಶಾಸಸ್ತ್ರ ಪುರಾಣಾಗಮಂಗಳಲ್ಲಿ ವಿಚಾರಿಸಿ ನೋಡಿದರೆ ಸತ್ಪಾತ್ರಕ್ಕೆ ಮಾಡಿ ಧನ ಕೆಡದ ಹಾಂಗೆ. ಪಾತ್ರಪರೀಕ್ಷೆಗಳಲ್ಲಿ ಸತ್ಪಾತ್ರರು ಮಾಹೇಶ್ವರರು. ಅಲ್ಲಿ ಪ್ರೇಮ ಪ್ರೀತಿ ಕಿಂಕರತೆಯಿಂದ ದಾಸೋಹವ ಮಾಡಿ ಬದುಕಿರೆ. ನ ಮೇ ಪ್ರಿಯಶ್ಚತುರ್ವೆದೀ ಮದ್ಭಕ್ತ ಶ್ವಪಚೋಪಿ ವಾ ತಸ್ಮೈ ದೇಯಂ ತತೋ ಗ್ರಾಹ್ಯಂ ಯಥಾ ಪೂಜ್ಯಸ್ತಧಾಹಿ ಸಃ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ. ನಿಕೃಷ್ಟಚಾರಜನ್ಮಾನೋ ವಿರುದ್ಧಾ ಲೋಕವೃತ್ತಿಷು ಕೋಟಿಭ್ಯೋ ವೇದವಿದುಷಾಂ ಶ್ರೇಷಾ* ಮದ್ಭಾವಭಾವಿತಾಃ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ. ಚತುರ್ವೇದಧರೋ ವಿಪ್ರಃ ಶಿವಭಕ್ತಿವಿವರ್ಜಿತಃ ದುಷ್ಟಚಾಂಡಾಲಭಾಂಡಸ್ಥಂ ಯಥಾ ಭಾಗೀರಥೀಜಲಂ ಚುರ್ವೇದಧರೋ ವಿಪ್ರಃ ಶಿವದೀಕ್ಷಾವಿವರ್ಜಿತಃ ತಸ್ಯ ಭೋಜನದಾನೇನ ದಾತಾ ಚ ನರಕಂ ವ್ರಜೇತ್ ಚದುರ್ವೇದಧರೋ ವಿಪ್ರಃ ಸರ್ವಶಾಸ್ತ್ರವಿಶಾರದಃ ಶಿವಜ್ಞಾನಂ [ನ]ಜಾನಾತಿ ದರ್ವೀ ಪಾಕರಸಂ ಯಥಾ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ. ಇಂತು ನಾನಾವೇದಶಾಸ್ತ್ರಪುರಾಣಾಗಮಂಗಳಲ್ಲಿ ವಿಚಾರಿಸಿ ನೋಡಿ, ಮಾಡಿ ಮಾಡಿ, ಮಾಹೇಶ್ವರರಿಗೆ. ಫಲವ ಬಯಸಲು ಫಲವಹುದು. ಮುಕ್ತಿಯ ಬಯಸಲು ಮುಕ್ತಿಯಹುದು. ಅನಿಮಿತ್ತಂ ನಿಮಿತ್ತಂ ಚ ಉಪಾಧಿರ್ನಿರುಪಾಧಿಕಂ ದಾಸೋಹಯುಕ್ತ ಕರ್ಮಾ ಚ ಯಥಾ ಕರ್ಮ ತಥಾ ಫಲಂ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ. ಅನಾದರಾದಹಂಕಾರಾತ್ ಮೋಹಾದ್ಭೀತಿರುಪಾಧಿಕಾ ಕೀರ್ತಿಶ್ಚ ಷಡ್ಗುಣೋ ನಾಸ್ತಿ ದಾಸೋಹಶ್ಚ ಸ್ವಯಂ ಶಿವಃ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ. ಕೆಡಬೇಡ ಕೆಡಬೇಡ. ಸಾಲೋಕ್ಯಾದಪಿ ಸಾಮೀಪ್ಯಾತ್ ಸಾರೂಪ್ಯಾಚ್ಚ ಸಯುಜ್ಯಕಾತ್ ಶಿವತತ್ತ್ವಾದಿಶೇಷಶ್ಚ ಸ್ವಯಂ ದಾಸೋಹ ಉತ್ತಮಃ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ. ಸಕೃಲ್ಲಿಂಗಾರ್ಚಕೇ ದತ್ವಾ ವಸ್ತ್ರಮಾತ್ರಂ ಯಥೇಪ್ಸಿತಂ ಏಕತಂತ್ರಂ ಲಭೇದ್ರಾಜ್ಯಂ ಶಿವಸಾಯುಜ್ಯಮಾಪ್ನುಯಾತ್ ಸಕೃಲ್ಲಿಂಗಾರ್ಚಕೇ ದತ್ವಾ ಗೋಷ್ಟದಂ ಭೂಮಿಮಾತ್ರಕಂ ಭೂಲೋಕಾಧಿಪತಿರ್ಭೂತ್ವಾ ಶಿವೇನ ಸಹ ಮೋದತೇ ಸಕೃಲ್ಲಿಂಗಾರ್ಚಕೇ ದತ್ವಾ ಸುವರ್ಣಂ ಚಾಣುಮಾತ್ರಕಂ ದೇವೈಶ್ಚ ಪೂಜ್ಯಮಾನಸ್ತು ಗಣಮುಖ್ಯೋ ಗಣೇಶ್ವರಃ ಸಕೃಲ್ಲಿಂಗಾರ್ಚಕೇ ದತ್ವಾ ಭಿಕ್ಷಾಮಾತ್ರಂ ಚ ಸಾದರಂ ಪದ್ಮಾನಿ ದಶಸಾಹಸ್ರಂ ಪಿತ್ರೂಣಾಂ ದತ್ತಮಕ್ಷಯಂ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ. ಸಾವು, ದಿಟ ದಿಟ. ದಾಸೋಹವ ಮಾಡಲು ತನು ಕೆಡದ ಹಾಂಗೆ ಸತ್ಪಾತ್ರದತ್ತವಿತ್ತಂ ಚ ತದ್ದಾನಾದಸುಖಂ ಭವೇತ್ ಅಪಾತ್ರದತ್ತವಿತ್ತಂ ಚ ತದ್ದಾನಾದಸುಖಂ ಭವೇತ್ ಎಂಬುದನರಿದುದಕ್ಕೆ ಸತ್ಪಾತ್ರವಾವುದೆಂದಡೆ: ಕಿಂಚಿದ್ವೇದಮಯಂ ಪಾತ್ರಂ ಕಿಂಚಿತ್ಪಾತ್ರಂ ತಪೋಮಯಂ ಆಗಮಿಷ್ಯತಿ ಯತ್ಪಾತ್ರಂ ತತ್ಪಾತ್ರಂ ತಾರಯಿಷ್ಯತಿ ಸರ್ವೇಷಾಮೇವ ಪಾತ್ರಾಣಮತಿಪಾತ್ರಂ ಮಹೇಶ್ವರಃ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ, ನಿತ್ಯಂ ಲಿಂಗಾರ್ಚನಂ ಯಸ್ಯ ನಿತ್ಯಂ ಜಂಗಮಪೂಜನಂ ನಿತ್ಯಂ ಗುರುಪದಧ್ಯಾನಂ ನಿತ್ಯಂ ನಿತ್ಯಂ ಸಂಶಯಃ ಇಂತೆಂದುದಾಗಿ, ಅರಿದು ಇದು ಕಾರಣ, ಅರಿವನೇ ಅರಿದು, ಮರವೆಯನೇ ಮರದು, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನ[ನ]ರಿದು, ಪೂಜಿಸಲು ಇಹಪರಸಿದ್ಧಿ ಸದ್ಯೋನ್ಮುಕ್ತಿ ಕೇಳಿರಣ್ಣಾ.
--------------
ಉರಿಲಿಂಗಪೆದ್ದಿ
ಪ್ರಥಮದಲ್ಲಿ ವಾಙ್ಮನಕ್ಕೆ ಬಾರದ ಸಚ್ಚಿದಾನಂದ ನಿತ್ಯಪರಿಪೂರ್ಣ ಲಕ್ಷಣವನುಳ್ಳ ನಿಃಕಲದೇವರು. ದ್ವಿತೀಯದಲ್ಲಿ `ಪರಂ ಗೂಢಂ ಶರೀರಸ್ಥಂ ಲಿಂಗಕ್ಷೇತ್ರಮನಾದಿವತ್' ಎಂಬ ಪಂಚಸಂಜ್ಞೆಯನ್ನುಳ್ಳ ಮಹಾಲಿಂಗದೇವರು. ತೃತೀಯದಲ್ಲಿ ಕರ್ಮ ಕರ್ತೃ ಮೂರ್ತಿ ಅಮೂರ್ತಿ ಶಿವಸಾದಾಖ್ಯವನುಳ್ಳ ಸದಾಶಿವದೇವರು. ಚತುರ್ಥದಲ್ಲಿ ಭವ ಶರ್ವ ರುದ್ರ ಭೀಮ ಸದಾಶಿವ ಉಗ್ರ ಸೋಮ ಪಶುಪತಿ ಎಂಬ ಎಂಟು ಪ್ರಕಾರವನುಳ್ಳ ಈಶ್ವರದೇವರು. ಪಂಚಮದಲ್ಲಿ ಶರ್ವ ಶಿವ ಮಹಾದೇವರು ನೀಲಕಂಠ ವೃಷಭದ್ವಜ ಈಶಾನ ಶಂಕರ ಭೀಮ ಪಿನಾಕಿ ಚಂದ್ರಶೇಖರ ಕಪರ್ದಿ ವಿರೂಪಾಕ್ಷ ವಾಮದೇವ ಮೃಡ ಭೂತೇಶ ಶೂಲಿ ಸರ್ವಜ್ಞ ಸ್ಥಾಣು ಪಾರ್ವತಿಪ್ರಿಯ ಮಹಾಂಕಾಳ ಮಹಾದೀರ್ಘ ಮಹಾತಾಂಡವ ಗಂಗಾಧರ ಗಣೇಶ್ವರ ಗಜಧ್ವಂಸಿ ಎಂಬ ಇಪ್ಪತ್ತೆ ೈದು ಪ್ರಕಾರವನುಳ್ಳ ಮಾಹೇಶ್ವರದೇವರು. ಷಷ*ಮದಲ್ಲಿ ಶಿವ ಮಾಹೇಶ್ವರ ರುದ್ರ ಶ್ರೀಕಂಠ ಶಂಭು ಈಶ್ವರ ಮಹಾದೇವರು ಪಶುಪತಿ ನೀಲಕಂಠ ವೃಷಭಧ್ವಜ ಪರಮೇಶ್ವರನೆಂಬ ಹನ್ನೊಂದು ಪ್ರಕಾರವನುಳ್ಳ ರುದ್ರದೇವರು. ಸಪ್ತಮದಲ್ಲಿ ಭವ ಮೃಡ ಹರನೆಂಬ ಮೂರು ಪ್ರಕಾರವನುಳ್ಳ ತ್ರಯಾವಯದೇವರು. ಅಷ್ಟಮದಲ್ಲಿ ಭಯಂಕರವನುಳ್ಳ ವಿರಾಟಮೂರ್ತಿದೇವರು. ನವಮದಲ್ಲಿ ಸರ್ವಚೈತನ್ಯಾತ್ಮಕವನುಳ್ಳ ಹಿರಣ್ಯದೇವರು. ದಶಮದಲ್ಲಿ ಸುಷುಪ್ತಾವಸ್ಥೆಯನುಳ್ಳ ಪ್ರಾಜ್ಞದೇವರು. ದ್ವಾದಶದಲ್ಲಿ ಜಾಗ್ರಾವಸ್ಥೆಯನುಳ್ಳ ವಿಶೇಶ್ವರದೇವರು. ಇಂತೀ ನಾಮ ಪರಿಯಾಯಂಗಳನೆಲ್ಲವನು ಬಸವೇಶ್ವರನೆ ಅಲಂಕರಿಸಿ `ಏಕಮೂರ್ತಿಸ್ತ್ರಯೋರ್ಭಾಗಂ' ಎಂಬ ಶ್ರುತಿ ಪ್ರಮಾಣದಿಂದ ಎನ್ನ ಸಾಕಾರ ಮೂರು ಮೂರು ನವವಿಂಶತಿ ನವವಿಂಶತಿ ಸ್ವರೂಪವನೊಳಕೊಂಡು ಎನ್ನ ಬಹಿರಂಗದಲ್ಲಿ ಮೂರ್ತಿಗೊಂಡನಯ್ಯ ಬಸವಣ್ಣ. ಎನ್ನ ನಿರಾಕಾರ ಮೂರು ಮೂರು ವಿಂಶತಿ ವಿಂಶತಿ ಸ್ವರೂಪವನೊಳಕೊಂಡು ಎನ್ನ ಅಂತರಂಗದಲ್ಲಿ ಮೂರ್ತಿಗೊಂಡನಯ್ಯ ಬಸವಣ್ಣ. ನಾಮ ರೂಪು ಕ್ರೀ ಏನೂ ಏನೂ ಇಲ್ಲದ ಸಚ್ಚಿದಾನಂದ ಲಕ್ಷಣವನುಳ್ಳ ಬ್ರಹ್ಮವೇ ಉಭಯಸಂಗದಲ್ಲಿ ಸನ್ನಿಹಿತವಾದನಯ್ಯ ಪ್ರಭುದೇವರು. ಇಂತೀ ಪಿಂಡಾದಿ ಜ್ಞಾನಶೂನ್ಯಾಂತ ಸ್ಥಲ ಕುಳ ಭೇದವನು ಸಿದ್ಧೇಶ್ವರನೆನಗೆ ಅರುಹಿ ತನ್ನ ನಿಜಪದದೊಳಗೆ ಇಂಬಿಟ್ಟುಕೊಂಡ ಕಾರಣ ಪರಂಜ್ಯೋತಿ ಮಹಾಲಿಂಗಗುರು ಸಿದ್ಧಲಿಂಗಪ್ರಭುವಿನಲ್ಲಿ ಸಿದ್ಧೇಶ್ವರನ ಘನವು ಎನಗೆ ವಾರಿಕಲ್ಲ ಪುತ್ಥಳಿಯನಪ್ಪಿಕೊಂಡಂತಾಯಿತ್ತಯ್ಯಾ, ಬೋಳಬಸವೇಶ್ವರ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಗುಮ್ಮಳಾಪುರದ ಸಿದ್ಧಲಿಂಗ
ಆದಿನಿರಾಳ, ಮಧ್ಯನಿರಾಳ, ಊಧ್ರ್ವನಿರಾಳ ಅಂತೆ ನಿನ್ನ ಪರಿಯಯ್ಯಾ. ಅನಾಮಯಶೂನ್ಯನೆಂದು ಹೊಗಳುತ್ತೈದಾರೆ ನಿನ್ನ ಹಲಬರು, ನೀನು ಭಕ್ತಕಾರಣ ಪರಶಿವಮೂರ್ತಿಯೆಂಬುದನರಿಯರಾಗಿ. ಎಲೆ ಅಯ್ಯಾ, ಸುಚಿತ್ತವಾದ ಲೋಕಂಗಳಲ್ಲಿ ನೀನು ಉರುತರ ನಿತ್ಯನೆಂಬುದನರಿಯರು ಕಾಣಾ ಎಲೆ ಅಯ್ಯಾ, ಅಯ್ಯ ನಿನ್ನ ಅನಾಹತ ಪಟ್ಟಣದಲ್ಲಿ ಶೂನ್ಯಕಾಯನೆಂಬ ಮಹಾಗಣೇಶ್ವರನ ಮನೆಯಲ್ಲಿ ಪದನಾಶನೆಂಬ ಯೋಗಿಯಾಗಿ ಬಂದು, ಫಲಕ್ಕೆ ಬಿತ್ತಲಿದ್ದ ಬೀಜಂಗಳ ನೀನು ಸಂಗ್ರಹಿಸಿ ಸ್ವಯಂಪಾಕವ ಮಾಡಿ, ಆತ ಕಿಂಕಿಲದಿಂ ಸದ್ಭಾವವೆಂದೆಂಬ ಪರಿಯಾಣದಲ್ಲಿ ಅಷ್ಟಪಾದಂಗಳನುಳ್ಳ ಆಧಾರವಂ ತಂದಿಟ್ಟು ಮಥಿತ ಮರ್ಧನ, ಸುಚಿತ್ತ ಸುಗುಣಂಗಳೆಂಬ ಓಗರವಂ ತಂದು ಎನಗೆ ಬಡಿಸಲಾಗಿ, ನಿತ್ಯವೆಂಬ ದೀಪ್ತಿಯ ಬೆಳಗಿನಲ್ಲಿ ಸುಚಿತ್ತಂ ಆರೋಗಣೆಯಂ ಮಾಡಿ, ರೇತೋದಾರನೆಂಬ ಗಣೇಶ್ವರ ಲೆಕ್ಕ ಮೂವತ್ತಾರು ಸಾವಿರ ಪಟ್ಟಣಂಗಳಲ್ಲಿ ಪ್ರವೇಶಿಸಿ ಬಂದ ಕಾಲದಲ್ಲಿ, ನಿನ್ನ ಸುಮತಿ ಪ್ರಸನ್ನತೆ ಪರಿಣಾಮ ಪ್ರಯೋಗವೆಂಬ ಪ್ರಸಾದ ಸ್ವೀಕಾರಂ ಮಾಡಲ್ಕಾಗಿ, ಆತನ ಮೂರರಿಂ ಮೇಲೆ ಹತ್ತರಿಂದೊಳಗೆ ಇದ್ದಂಥ ಹಲವೆಲ್ಲವೂ ಏಕೀಭವಿಸಿದವು. ಆತ ನಿತ್ಯನಾದ, ಆತ ಫಲಕ್ಕೆ ಪದಕ್ಕೆ ಭವಕ್ಕೆ ತುರೀಯ ಸಿದ್ಧ ತ್ವಮಸಿಯನೆಯ್ದಿ ಸಂದು ಹರಿದ, ಹಂಗು ಹರಿದ, ಆನಂದವೆಂಬ ಶ್ವೇತಜಲದಲ್ಲಿ ಚಂದ್ರಕಾಂತದ ಮಂಟಪವನಿಕ್ಕಿ, ಅರ್ಚನೆ ಪೂಜನೆ ವ್ಯವಹರಣೆಯೆಂಬವನತಿಗಳೆದು ಸದ್ಧಲಿಂಗಾರ್ಚನೆಯ ಮಾಡಿ ಸುಖಸಂಯೋಗದಲ್ಲಿ ಎರಡಿಲ್ಲದೆ ಮೂರ್ಚಿತವೋಗೈದಾನೆ ಕಾಣಾ ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಅಂಧಕಾಸುರನ ಕೊಲುವಲ್ಲಿ ನೀಲಲೋಹಿತನೆಂಬ ಗಣೇಶ್ವರ, ತ್ರಿಪುರವ ದಹನವ ಮಾಡುವಲ್ಲಿ ಸ್ಕಂದನೆಂಬ ಗಣೇಶ್ವರ, ಗಜಾಸುರನ ಕೊಂದು ಚರ್ಮವ ಹೊದೆವಲ್ಲಿ ಉಗ್ರನೆಂಬ ಗಣೇಶ್ವರ, ಬ್ರಹ್ಮಕಪಾಲವಿಡಿದು ವಿಷ್ಣು ಕಂಕಾಳವನಿಕ್ಕಿದಲ್ಲಿ, ನೀಲಕÀಂಠನೆಂಬ ಗಣೇಶ್ವರ, ಪ್ರಾಣಲಿಂಗಸಂಗದಲ್ಲಿ ವೃಷಭನೆಂಬ ಗಣೇಶ್ವರ, ಜಂಗಮದ ಪೂರ್ವಾಶ್ರಯವ ಕಳೆದು ಪುನರ್ಜಾತನೆನಿಸಿ ಪ್ರಾಣಲಿಂಗವಾದ ಬಳಿಕ ಕೂಡಲಚೆನ್ನಸಂಗನಲ್ಲಿ ಬಸವನೆಂಬ ಗಣೇಶ್ವರ.
--------------
ಚನ್ನಬಸವಣ್ಣ
ನಿರವಯನೆಂಬ ಗಣೇಶ್ವರನ ಶಿಷ್ಯ ನಿರಾಮಯನೆಂಬ ಗಣೇಶ್ವರ. ನಿರಾಮಯನೆಂಬ ಗಣೇಶ್ವರನ ಶಿಷ್ಯ ನಿರಾಕುಳನೆಂಬ ಗಣೇಶ್ವರ. ನಿರಾಕುಳನೆಂಬ ಗಣೇಶ್ವರನ ಶಿಷ್ಯ ನಿರ್ಭೇದ್ಯನೆಂಬ ಗಣೇಶ್ವರ. ನಿರ್ಭೇದ್ಯನೆಂಬ ಗಣೇಶ್ವರನ ಶಿಷ್ಯ ನಿರ್ಮಳ ನಿಜೈಕ್ಯನೆಂಬ ಗಣೇಶ್ವರ. ನಿರ್ಮಳ ನಿಜೈಕ್ಯನೆಂಬ ಗಣೇಶ್ವರನ ಶಿಷ್ಯ ನಿರ್ಭಾವ ನಿಃಪುರುಷ ನಿರಂಜನನೆಂಬ ಗಣೇಶ್ವರ. ನಿರ್ಭಾವ ನಿಃಪುರುಷ ನಿರಂಜನನೆಂಬ ಗಣೇಶ್ವರನ ಶಿಷ್ಯ ನಿರಾಕಾರ ನಿರಾವರಣನೆಂಬ ಗಣೇಶ್ವರ. ನಿರಾಕಾರ ನಿರಾವರಣನೆಂಬ ಗಣೇಶ್ವರನ ಶಿಷ್ಯ ನಿರುಪಮನೆಂಬ ಗಣೇಶ್ವರ. ನಿರುಪಮನೆಂಬ ಗಣೇಶ್ವರನ ಶಿಷ್ಯ ನಿರ್ಗುಣ ನಿರಾಧಾರ ನಿರಾಲಂಬನೆಂಬ ಗಣೇಶ್ವರ. ನಿರ್ಗುಣ ನಿರಾಧಾರ ನಿರಾಲಂಬನೆಂಬ ಗಣೇಶ್ವರನ ಶಿಷ್ಯ ಸರ್ವಾಧಾರ ಸದಾಶಿವನೆಂಬ ಗಣೇಶ್ವರ. ಸರ್ವಾಧಾರ ಸದಾಶಿವನೆಂಬ ಗಣೇಶ್ವರರ ಸ್ವರೂಪರಾದಂಥ ಆದಿನಾಥೇಶ್ವರದೇವರು. ಆದಿನಾಥೇಶ್ವರದೇವರ ಶಿಷ್ಯರು ಸತ್ಯೇಶ್ವರದೇವರು. ಸತ್ಯೇಶ್ವರದೇವರ ಶಿಷ್ಯರು ಘಟಯಂತ್ರದೇವರು. ಘಟಯಂತ್ರದೇವರ ಶಿಷ್ಯರು ಭೃಕುಟೇಶ್ವರದೇವರು. ಭೃಕುಟೇಶ್ವರದೇವರ ಶಿಷ್ಯರು ವಿಶ್ವೇಶ್ವರದೇವರು. ವಿಶ್ವೇಶ್ವರದೇವರ ಶಿಷ್ಯರು ಮುಕ್ತೇಶ್ವರದೇವರು. ಮುಕ್ತೇಶ್ವರದೇವರ ಶಿಷ್ಯರು ಬ್ರಹ್ಮೇಶ್ವರದೇವರು. ಬ್ರಹ್ಮೇಶ್ವರದೇವರ ಶಿಷ್ಯರು ಶಿವದೇವಯ್ಯನವರು. ಶಿವದೇವಯ್ಯನವರ ಶಿಷ್ಯರು ಶಿವಜ್ಞಾನೇಶ್ವರದೇವರು. ಶಿವಜ್ಞಾನೇಶ್ವರದೇವರ ಶಿಷ್ಯರು ಓಂಕಾರದೇವರು. ಓಂಕಾರದೇವರ ಶಿಷ್ಯರು ಸೋಮಲಿಂಗದೇವರು. ಸೋಮಲಿಂಗದೇವರ ಶಿಷ್ಯರು ಸಂಗಮೇಶ್ವರದೇವರು. ಸಂಗಮೇಶ್ವರದೇವರ ಕರಕಮಲದಲ್ಲಿ ಉತ್ಪತ್ಯವಾದ ಶಿಶುವು ಕಾಡಸಿದ್ಧ ನಾನಯ್ಯ. ಹಾಂಗೆಂದು ಅನಾದಿವಿಡಿದು ಬಂದ ಗುರುಶಿಷ್ಯಸಂಬಂಧ, ಹಾಂಗೆ ಅನಾದಿವಿಡಿದು ಬಂದ ಲಿಂಗ, ಅನಾದಿವಿಡಿದು ಬಂದ ಜಂಗಮ, ಅನಾದಿವಿಡಿದು ಬಂದ ಪಾದೋದಕ-ಪ್ರಸಾದ, ಅನಾದಿವಿಡಿದು ಬಂದ ವಿಭೂತಿ-ರುದ್ರಾಕ್ಷಿ-ಮಂತ್ರ, ಅನಾದಿವಿಡಿದು ಬಂದ ಭಕ್ತಿ-ಜ್ಞಾನ-ವೈರಾಗ್ಯ. ಅನಾದಿವಿಡಿದು ಬಂದ ವೀರಶೈವಷಟ್‍ಸ್ಥಲದ ಆಚಾರವು. ಕಾಡನೊಳಗಾದ ಶಂಕರಪ್ರಿಯ ಚೆನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಕರ್ಮವೆಂಬ ಕತ್ತಲೆಯಲ್ಲಿ ವರ್ಮಗೆಟ್ಟು ಮೂವರು ಬಿದ್ದಿರ್ಪರು ನೋಡಾ. ಅವರಿಂಗೆ ಐವರು ಹೆಂಡರು, ಏಳು ಮಂದಿ ಮಕ್ಕಳು, ಎಂಟು ಮಂದಿ ನೆಂಟರು, ಹತ್ತು ಮಂದಿ ಬಾಂಧವರು ಇಪ್ಪರು ನೋಡಾ. ಒಬ್ಬ ಸತಿಯಳು ಅಂಗಡಿ ಬೀದಿಯನಿಕ್ಕಿ, ಭವಭಾರಂಗಳ ಮಾರುತಿಪ್ಪಳು ನೋಡಾ. ಇದು ಕಾರಣ, ಮೇಲಣ ದೇಶದಿಂದ ನಿರಂಜನ ಗಣೇಶ್ವರ ಬಂದು, ಅಂಗಡಿ ಬೀದಿಯ ಕೆಡಿಸಿ, ಕರ್ಮವೆಂಬ ಕತ್ತಲೆಯ ಹರಿದು, ಪ್ರಾಣಲಿಂಗಸಂಬಂಧಿಯಾಗಿ, ಆತ್ಮನಿರಾತ್ಮನೆಂಬ ಬೆಳಗಿನೊಳು ನಿಂದು ಪರಕೆಪರವ ತೋರುತಿಪ್ಪನು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಬ್ರಹ್ಮದೇವರಾದಡೆ ಬ್ರಹ್ಮನವಾಹನ ಹಂಸ ಹಂಸನಲ್ಲಿ ಹರ[ಗಿ] ಬೆಳದುಂಡನೆ ? ವಿಷ್ಣು ದೇವರಾದಡೆ ವಿಷ್ಣುವಿನ ವಾಹನ ಗರುಡ ಗರುಡನಲ್ಲಿ ಹರ[ಗಿ] ಬೆಳದುಂಡನೆ ? ಇಂದ್ರ ದೇವರಾದಡೆ ಇಂದ್ರನ ವಾಹನ ಆನೆ ಆನೆಯಲ್ಲಿ ಬಿತ್ತಿ ಬೆಳದುಂಡನೆ ? ಮೈಲಾರ ದೇವರಾದಡೆ ಮೈಲಾರನ ವಾಹನ ಕುದುರೆ ಕುದುರೆಯಲ್ಲಿ ಬಿತ್ತಿ ಬೆಳದುಂಡನೆ ? ಜಿನ್ನ ದೇವರಾದಡೆ ಜಿನ್ನನ ವಾಹನ ಕತ್ತೆ ಕತ್ತೆಯಲ್ಲಿ ಬಿತ್ತಿ ಬೆಳದುಂಡನೆ ? ಭೈರವ ದೇವರಾದಡೆ ಭೈರವನ ವಾಹನ ಚೇಳು ಚೇಳಿನಲ್ಲಿ ಬಿತ್ತಿ ಬೆಳದುಂಡನೆ ? ಗಣೇಶ್ವರ ದೇವರಾದಡೆ ಗಣೇಶ್ವರನ ವಾಹನ ಇಲಿ ಇಲಿಯಲ್ಲಿ ಬಿತ್ತಿ ಬೆಳದುಂಡನೆ ? ದೇವರಲ್ಲವೆನಲಾರೆನು ಮತ್ತೆ ದೇವರೆಂಬುದು ಸತ್ಯ. ಅದೆಂತೆಂದಡೆ ಗಣೇಶಗೆ ಈಶ್ವರನ ಹೆಸರುಂಟು, ಅದು ಹೇಗೆ ಗಣೇಶ್ವರ ? ಮತ್ತೆ ಅದೆಲ್ಲದೆ ಪಾರ್ವತಿಗೆ ಮೋಹದ ಕುಮಾರ. ಅದಲ್ಲದೆ ಜಿತೇಂದ್ರಿ. ಸರ್ವಜಗಕೆ ವಿದ್ಯೆ ಬುದ್ಧಿಯಂ ಕೊಡುವನು, ಅದರಿಂದ ಸತ್ಯನು. ಒಂಕಾರ ವಸ್ತುವೆ ಸಾಕ್ಷಿಯಾಗಿ ಮತ್ತಂ ನಮ್ಮ ಸದಾಶಿವನ ವಾಹನ ಬಸವಣ್ಣ. ಬಸವಣ್ಣನ ಬಿರಿದೆಂತೆಂದರೆ ಸಪ್ತಸಮುದ್ರ ಜಲಪ್ರಳಯಕ್ಕೆ ಹೆಪ್ಪಕೊಟ್ಟ ಕಾರುಣ್ಯದಲ್ಲಿ ಎತ್ತೆಂಬ ಶಬ್ದಾಯಿತ್ತು. ಎತ್ತ ನೋಡಿದಡತ್ತ ತನ್ನಲಿಂದುತ್ಪತ್ಯವಾಯಿತೆಂಬ ಶಬವೆತ್ತಾಯಿತ್ತು. ತನ್ನಿಂದ ಹರಗಿ ಬಿತ್ತಿ ಬೆಳೆಯಲಿಕೆ ಪವಿತ್ರಸ್ವಾಮಿಗೆ ನೈವೇದ್ಯವಾಯಿತ್ತು . ಹಸ್ತಪರುಷವ ಮಾಡಲಿಕೆ ಘನವರುಷ ಪ್ರಸಾದವಾಯಿತ್ತು. ಇಂತಿರ್ದ ನಮ್ಮ ಬಸವನ ಪ್ರಸಾದವನುಂಡು ನನ್ನ ದೇವರು ಹೆಚ್ಚು ತನ್ನ ದೇವರು ಹೆಚ್ಚು ಎಂದು ಕಚ್ಚಾಡುವ ಕುನ್ನಿ ಮೂಕೊರೆ ಮೂಳ ಹೊಲೆಯರಿಗೆ ಏನೆಂಬೆನಯ್ಯಾ ಗುರು ವಿಶ್ವೇಶ್ವರಾ.
--------------
ವರದ ಸೋಮನಾಥ
ಇನ್ನಷ್ಟು ... -->