ಬ್ರಹ್ಮಂಗೆ ಇಚ್ಫಾಶಕ್ತಿಯಾಗಿದ್ದಲ್ಲಿ,
ವಿಷ್ಣುವಿಂಗೆ ಕ್ರಿಯಾಶಕ್ತಿಯಾಗಿದ್ದಲ್ಲಿ,
ರುದ್ರಂಗೆ ಜ್ಞಾನಶಕ್ತಿಯಾಗಿದ್ದಲ್ಲಿ,
ಇಂತಿವರು ದಂಪತಿ ಸಹಜವಾಗಿ
ಯುಗಜುಗಂಗಳ ಜೋಗೈಸುತ್ತಿದ್ದರು.
ಬ್ರಹ್ಮಂಗೆ ಸರಸ್ವತಿಯೆಂದಾರು !
ವಿಷ್ಣುವಿಗೆ ಲಕ್ಷ್ಮೀದೇವಿಯೆಂದಾರು !
ರುದ್ರಂಗೆ ಉಮಾದೇವಿಯೆಂದಾರು !
ಬ್ರಹ್ಮ ಅಂಗವಾಗಿ, ವಿಷ್ಣು ಪ್ರಾಣವಾಗಿ,
ರುದ್ರ ಉಭಯಜ್ಞಾನವಾಗಿ,
ಅಂದು ತಾಳಿದ ಸಾಕಾರದ ಗುಡಿಯ ಐಕ್ಯನಾದ ಕಾರಣ,
ಗುಮ್ಮಟನೆಂಬ ನಾಮವ ತಾಳಿ, ಅಗಮ್ಯೇಶ್ವರಲಿಂಗ ಗುಹೇಶ್ವರನಾದ.