ಅಥವಾ

ಒಟ್ಟು 52 ಕಡೆಗಳಲ್ಲಿ , 1 ವಚನಕಾರರು , 52 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯವೆಂಬ ಕಲ್ಪಿತವ ಕಳೆದು, ಪ್ರಾಣವೆಂಬ ಸೂತಕವ ಹರಿದು, ನಿಜಭಕ್ತಿ ಸಾಧ್ಯವಾದಲ್ಲದೆ ಲಿಂಗಪರಿಣಾಮವನೆಯ್ದಿಸಬಾರದು (ವೇಧಿಸಬಾರದು ?) ಅನು ಮಾಡಿದೆ, ನೀವು ಕೈಕೊಳ್ಳಿ ಎಂದಡೆ ಅದೇ ಅಜಾÕನ. ನಮ್ಮ ಗುಹೇಶ್ವರಲಿಂಗಕ್ಕೆ ಕುರುಹಳಿದು ನಿಜ ಉಳಿದವಂಗಲ್ಲದೆ ಪದಾರ್ಥವ ನೀಡಬಾರದು ಕಾಣಾ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ದೇವನೊಲಿದ, ನೀನೊಲಿದೆ_ಎಂಬುದು ಅದಾವುದಕ್ಕಾ ? ಭಾವಶುದ್ಧವಾದಲ್ಲಿ ಸೀರೆಯನಳಿದು ಕೂದಲು ಮರೆಸಲೇತಕ್ಕೆ ? ಅದು ಅಂತರಂಗದ ನಾಚಿಕೆ ಬಾಹ್ಯದಲ್ಲಿ ತೋರಿತ್ತು. ಅದು ಗುಹೇಶ್ವರಲಿಂಗಕ್ಕೆ ಒಲವರವಲ್ಲ.
--------------
ಅಲ್ಲಮಪ್ರಭುದೇವರು
ಕಂಗಳೇಕೆ `ನೋಡಬೇಡಾ' ಎಂದರೆ ಮಾಣವು ? ಶ್ರೋತ್ರಂಗಳೇಕೆ `ಆಲಿಸಬೇಡಾ' ಎಂದರೆ ಮಾಣವು ? ಜಿಹ್ವೆ ಏಕೆ `ರುಚಿಸಬೇಡಾ' ಎಂದರೆ ಮಾಣವು (ದು ?) ನಾಸಿಕವೇಕೆ `ವಾಸಿಸಬೇಡಾ' ಎಂದರೆ ಮಾಣವು ? (ದು ?) ತ್ವಕ್ಕು ಏಕೆ `ಸೋಂಕಬೇಡಾ' ಎಂದರೆ ಮಾಣವು ? (ದು ?)_ ಈ ಭೇದವನರಿದು ನುಡಿಯಲು ಸಮಧಾತುವಾಯಿತ್ತು! ಗುಹೇಶ್ವರಲಿಂಗಕ್ಕೆ ಒಲಿದ ಕಾರಣ, ಅಭಿಮಾನ ಲಜ್ಜೆ ಬೇಸತ್ತು ಹೋಯಿತ್ತು.
--------------
ಅಲ್ಲಮಪ್ರಭುದೇವರು
ತನುವರ್ಪಿತವೆಂದಡೆ ಗುರುದ್ರೋಹ. ಮನವರ್ಪಿತವೆಂದಡೆ ಲಿಂಗದ್ರೋಹ. ಧನವರ್ಪಿತವೆಂದಡೆ ಜಂಗಮದ್ರೋಹ_ ಇಂತೀ ತನುಮನಧನಗಳೆಂಬ ಅನಿತ್ಯವನು ನಿತ್ಯಕ್ಕರ್ಪಿಸಿ ಭಕ್ತನಾದೆನೆಂದಡೆ, ಅದು ಅಜ್ಞಾನ ನೋಡಾ. ಒಡೆಯರಿಗೆ ಉಂಡೆಯ ಮುರಿದಿಕ್ಕಿ ನಾ ಭಕ್ತನೆಂಬ ಮಾತ ಸಮ್ಯಕ್ ಶರಣರು ಮೆಚ್ಚುವರೆ ? ನಮ್ಮ ಗುಹೇಶ್ವರಲಿಂಗಕ್ಕೆ, ನೀನು ಆವುದರಲ್ಲಿ ಏನನರ್ಪಿಸಿ ಭಕ್ತನಾದೆ ಹೇಳಾ ಸಂಗನಬಸವಣ್ಣಾ ?
--------------
ಅಲ್ಲಮಪ್ರಭುದೇವರು
ಇದು ಎನಗೆ ಆಶ್ಚರ್ಯ; ಹೇಳವ್ವಾ ! ಕಾಯವಿಲ್ಲದ ಸುಖವ ಜೀವವಿಲ್ಲದ ಭವವ ! ಆಠಾವ ಹೇಳಾ ಗುಹೇಶ್ವರಲಿಂಗಕ್ಕೆ ?
--------------
ಅಲ್ಲಮಪ್ರಭುದೇವರು
ಕಾಮದಿಂದ ಕಂಡ, ಕ್ರೋಧದಿಂದ ಅಸ್ಥಿ, ಲೋಭದಿಂದ ಸಕಲ ವಿಷಯಂಗಳು. ಮೋಹದಿಂದ ನೋಡಿಹೆನೆಂಬುದೆಲ್ಲವು ಕಾಮನ ಬಲೆಯೊಳಗು. ಕಾಮನ ಗೆದ್ದಠಾವಾವುದು ಹೇಳಾ ಗುಹೇಶ್ವರಲಿಂಗಕ್ಕೆ ?
--------------
ಅಲ್ಲಮಪ್ರಭುದೇವರು
ಗತಿಗೆಟ್ಟೆ ಧೃತಿಗೆಟ್ಟೆ ಮತಿಗೆಟ್ಟೆ ನಾನಯ್ಯಾ. ನಡೆವಡೆ ಶಕ್ತಿಯಿಲ್ಲ ನುಡಿವಡೆ ಜಿಹ್ವೆಯಿಲ್ಲ. ಇದಿರಲೊಬ್ಬರ ಉಪಚಾರ ಸೇರದು ನೋಡಾ ಎಮಗೆ. ಬಂದ ಬರವನರಿದು ನಿಂದ ನಿಲವನರಿದು ಕೂಡಬಲ್ಲ ಶರಣಂಗೆ, ಬೇರೊಂದು ಏಕಾಂತವೆಂಬ ಸಂದೇಹ ಉಂಟೆ ? ತೆರಹಿಲ್ಲದ ಘನವನೊಳಕೊಂಡ ಬಳಿಕ ಬರಲೆಡೆಯುಂಟೆ ನಮ್ಮ ಗುಹೇಶ್ವರಲಿಂಗಕ್ಕೆ ?
--------------
ಅಲ್ಲಮಪ್ರಭುದೇವರು
ತನ್ನ ತಾನರಿದಡೆ ನುಡಿಯೆಲ್ಲ ತತ್ವ ನೋಡಾ ! ತನ್ನ ತಾ ಮರೆದಡೆ ನುಡಿಯೆಲ್ಲ ಮಾಯೆ ನೋಡಾ ! ಅರಿದು ಮರೆದ ಶಿವಯೋಗಿಯ ಶಬ್ದವೆಲ್ಲವು ಉಪದೇಶವಲ್ಲದೆ ಭಿನ್ನವುಂಟೆ ? ನಿನ್ನ ಮನದ ಕಳವಳವ ತಿಳುಹಲೆಂದು ಮಾತನಾಡಿಸಿ ನೋಡಿದಡೆ, ಎನ್ನ ಮನದೊಳಗೆ ಕಂದು ಕಲೆ ಎಂಬುದಿಲ್ಲ ನೋಡಾ ! ನಮ್ಮ ಗುಹೇಶ್ವರಲಿಂಗಕ್ಕೆ ನೀನು ಕರುಣದ ಶಿಶುವಾದ ಕಾರಣ ಬಾಯ್ದೆಗೆದೆನಲ್ಲದೆ, ಭಿನ್ನವುಂಟೆ ಹೇಳಾ ಮರುಳೆ ?
--------------
ಅಲ್ಲಮಪ್ರಭುದೇವರು
ಕಾಯವೆಂಬ ದೇಗುಲದಲ್ಲಿ ಜೀವವೆಂಬ ದೇವರು, ಕರಣೇಂದ್ರಿಯಂಗಳೆಂಬ ಸ್ಥಾನಿಕರ ಕೈಯಲ್ಲಿ ಪೂಜಿಸಿಕೊಂಬುದು ಗುಹೇಶ್ವರಲಿಂಗಕ್ಕೆ ದೂರ !
--------------
ಅಲ್ಲಮಪ್ರಭುದೇವರು
ಕೆಳಗೇಳು ಲೋಕಂಗಳಿಲ್ಲದ ಮುನ್ನ, ಮೇಲೇಳು ಲೋಕಂಗಳಿಲ್ಲದ ಮುನ್ನ ಸಹಸ್ರ (ಸಮಸ್ತ ?) ಬ್ರಹ್ಮಾಂಡಗಳಿಲ್ಲದ ಮುನ್ನ, ಅಲ್ಲಿಂದತ್ತತ್ತ; ಬಸವಣ್ಣಾ ನೀನು ಲಿಂಗಭಕ್ತ, ಜಂಗಮಪ್ರಾಣಿ ! ಶಶಿಧರನ ಶರಣಂಗೆ ವೃಷಧರ ಸ್ವಾಯತವಾಗಿ, ನಮ್ಮ ಗುಹೇಶ್ವರಲಿಂಗಕ್ಕೆ ಸಂಗನಬಸವಣ್ಣನೆ ಭಕ್ತನೆಂದರಿದು ನಾನು ಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು.
--------------
ಅಲ್ಲಮಪ್ರಭುದೇವರು
ಉಭಯದೃಷ್ಟಿ ಏಕದೃಷ್ಟಿಯಲ್ಲಿ ಕಾಬಂತೆ ದಂಪತಿ ಏಕಭಾವವಾಗಿ ನಿಂದಲ್ಲಿ, ಗುಹೇಶ್ವರಲಿಂಗಕ್ಕೆ ಅರ್ಪಿತವಾಯಿತ್ತು,_ಸಂಗನಬಸವಣ್ಣ.
--------------
ಅಲ್ಲಮಪ್ರಭುದೇವರು
ತನು ಶುದ್ಧವಾಯಿತ್ತು ಬಸವಾ ಇಂದೆನ್ನ. ಮನ ಶುದ್ಧವಾಯಿತ್ತು ಬಸವಾ ಇಂದೆನ್ನ. ಭಕ್ತಿ ಯುಕ್ತಿ ಮುಕ್ತಿ ಶುದ್ಧವಾಯಿತ್ತು ಬಸವಾ ಇಂದೆನ್ನ. ಇಂತೀ ಸರ್ವವೂ ಶುದ್ಧವಾಯಿತ್ತು ಬಸವಾ ಇಂದೆನ್ನ. ನಮ್ಮ ಗುಹೇಶ್ವರಲಿಂಗಕ್ಕೆ ಆದಿಯಾಧಾರವಾದೆಯೆಲ್ಲಾ ಬಸವಣ್ಣಾ ನೀನಿಂದು.
--------------
ಅಲ್ಲಮಪ್ರಭುದೇವರು
ಎನ್ನ ಹೃದಯಕಮಲ ಮಧ್ಯದಲ್ಲಿ ಮೂರ್ತಿಗೊಂಡಿಪ್ಪ ಎನ್ನ ಪ್ರಾಣೇಶ್ವರಂಗೆ_ ಎನ್ನ ಕ್ಷಮೆಯೆ ಅಭಿಷೇಕ, ಎನ್ನ ಪರಮವೈರಾಗ್ಯವೆ ಪುಷ್ಪದಮಾಲೆ ಎನ್ನ ಸಮಾಧಿಸಂಪತ್ತೆ ಗಂಧ, ಎನ್ನ ನಿರಹಂಕಾರವೆ ಅಕ್ಷತೆ, ಎನ್ನ ಸದ್ವಿವೇಕವೆ ವಸ್ತ್ರ, ಎನ್ನ ಸತ್ಯವೆ ದಿವ್ಯಾಭರಣ ಎನ್ನ ವಿಶ್ವಾಸವೆ ಧೂಪ, ಎನ್ನ ದಿವ್ಯಜ್ಞಾನವೆ ದೀಪ, ಎನ್ನ ನಿಭ್ರಾಂತಿಯೆ ನೈವೇದ್ಯ, ಎನ್ನ ನಿರ್ವಿಷಯವೆ ತಾಂಬೂಲ ಎನ್ನ ವರಿõ್ಞನವೆ ಘಂಟೆ, ಎನ್ನ ನಿರ್ವಿಕಲ್ಪತೆಯೆ ಪ್ರದಕ್ಷಿಣೆ, ಎನ್ನ ಶುದ್ಧಿಯೆ ನಮಸ್ಕಾರ, ಎನ್ನ ಅಂತಃಕರಣದಿಂದ ಮಾಡುವ ಸೇವೆಯೆ ಉಪಚಾರಂಗಳು_ ಈ ಪರಿಯಲ್ಲಿ ಎಮ್ಮ ಗುಹೇಶ್ವರಲಿಂಗಕ್ಕೆ ಪ್ರಾಣ (ಲಿಂಗ) ಪೂಜೆಯೆ ಮಾಡಿ ಬಾಹ್ಯಕ್ರೀಯ ಮರೆದನು ಕಾಣಾ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ನಾನೆಂಬ ಅಹಂಕಾರದಲ್ಲಿ ನಾನುಂಡೆನಾದಡೆ, ಎನಗದೆ ಭಂಗ. ಸ್ತುತಿ_ನಿಂದೆಗೆ ನೊಂದೆನಾದಡೆ ಅಂಗೈಯಲ್ಲಿರ್ದ ಗುಹೇಶ್ವರಲಿಂಗಕ್ಕೆ ದೂರ ಕಾಣಾ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ಅಂಗದ ಕಳೆಯಲೊಂದು ಲಿಂಗವ ಕಂಡೆ. ಲಿಂಗದ ಕಳೆಯಲೊಂದು ಅಂಗವ ಕಂಡೆ. ಅಂಗ ಲಿಂಗ[ದ]ಸಂದಣಿಯನರಸಿ ಕಂಡೆ, ನೋಡಿರೆ. ಇಲ್ಲಿಯೆ ಇದಾನೆ ಶಿವನು ! ಬಲ್ಲಡೆ ಇರಿಸಿಕೊಳ್ಳಿರೆ; ಕಾಯವಳಿಯದ ಮುನ್ನ ನೋಡಬಲ್ಲಡೆ. ಗುಹೇಶ್ವರಲಿಂಗಕ್ಕೆ ಬೇರೆಠಾವುಂಟೆ ಹೇಳಿರೆ ?
--------------
ಅಲ್ಲಮಪ್ರಭುದೇವರು
ಇನ್ನಷ್ಟು ... -->