ಅಥವಾ

ಒಟ್ಟು 35 ಕಡೆಗಳಲ್ಲಿ , 23 ವಚನಕಾರರು , 32 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಘಟದ ಮಧ್ಯದಲ್ಲಿ ನಿಂದವನ, ಆತ್ಮನ ಚಿತ್ತದಲ್ಲಿ ಅರಿದವನ, ಅಲ್ಲ ಆಹುದೆಂದು ಗೆಲ್ಲ ಸೋಲಕ್ಕೆ ಹೋರದವನ, ಎಲ್ಲಾ ಜೀವಂಗಳಲ್ಲಿ ದಯವುಳ್ಳವನ, ಆತನೆಲ್ಲಿಯೂ ಸುಖಿಯೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಪೂರ್ವದಿಂದ ಉತ್ತರಕ್ಕೆ ಬಂದ ಸೂರ್ಯನು ಅಸ್ತಮಯವಾಯಿತ್ತೆಂದು ಜಾಹ್ಯಗೆ ಒಡಲಾಗಿ, ಮತ್ತಾ ವರುಣಪ್ರದಕ್ಷಿಣದಿಂದ ಬಂದು ಪೂರ್ವದಲ್ಲಿ ಹುಟ್ಟಲಿಕ್ಕೆ ನಿನ್ನಿಂಗೆ ಇಂದಿಂಗೆಯೆಂಬುದು ಒಂದೊ ಎರಡೊ ? ಅಂದಿಗೆ ಜಾÕನ, ಇಂದಿಗೆ ಮರವೆ, ಎಂಬುದು ಒಂದೊ ಎರಡೊ ? ಅದು ಘಟದ ಪ್ರವೇಶದಿಂದ. ಪೂರ್ವ ಉತ್ತರಕ್ಕೆ ಬಂದಾತ್ಮನನರಿದು ಉಭಯವ ತಿಳಿದು ಸಂದು ನಾಶನವಾದಲ್ಲಿ ಸದ್ಯೋಜಾತಲಿಂಗವು ವಿನಾಶವಾದ.
--------------
ಅವಸರದ ರೇಕಣ್ಣ
ಕಯ್ಯೊಳಗಳ ಸಂಚ ಕಣ್ಣಿಗೆ ಮರೆಯಾದಂತೆ, ಎಲ್ಲರಿಗೆ ಚೋದ್ಯವಾಗಿ ತೋರುತ್ತಿಹುದು. ಆ ಪರಿಯಲ್ಲಿ ಅಸು ಘಟದ ಸಂಚವನರಿವ ಸಂಚಿತಾರ್ಥಿಗಳಂಗ, ಮಿಕ್ಕಾದ ಅಸು ಲೆಂಕರಿಗಿಲ್ಲ, ನಿಸ್ಸೀಮರಿಗಲ್ಲದೆ ಸದಾಶಿವಮೂರ್ತಿಲಿಂಗವಿಲ್ಲ.
--------------
ಅರಿವಿನ ಮಾರಿತಂದೆ
ಆತ್ಮ ತೇಜಕ್ಕೆ ಬೀಗಿ ಬೆರೆದು, ಶಾಸ್ತ್ರದ ಸಂತೋಷಕ್ಕೆ ಸಾಧ್ಯವಾದಿಹಿತೆಂದು, ವಚನದ ರಚನೆಗೆ ರಚಿಸಿದೆನೆಂದು, ತರ್ಕಕ್ಕೆ ಹೊತ್ತು ಹೋರುವನ್ನಕ್ಕರ ಗುರುವೆಂತಾದಿರೊ? ಘಟದ ಮಧ್ಯದಲ್ಲಿ ಪೂಜಿಸಿಕೊಂಬವನಾರೆಂದು ಅರಿಯದೆ, ಫಲವ ಹೊತ್ತಿರ್ಪ ಮರನಂತೆ, ಕ್ಷೀರವ ಹೊತ್ತಿರ್ಪ ಕೆಚ್ಚಲಂತೆ, ನಿನ್ನ ನೀನೆ ತಿಳಿದು ನೋಡಾ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಸ್ಥಲಂಗಳ ಭೇದ ವಿವರ: ವೇಣು ವೀಣೆ ಮೌರಿ ವಾದ್ಯಂಗಳಲ್ಲಿ ವಾಯು ಅಂಗುಲಿಯ ಭೇದದಿಂದ ರಚನೆಗಳ ತೋರುವಂತೆ ಘಟದ ಸ್ಥೂಲ ಸೂಕ್ಷ್ಮಂಗಳಲ್ಲಿ ತ್ರಾಣ ತತ್ರಾಣವಾದಂತೆ ಅದು ಭಾವಜ್ಞಾನ ಷಟ್‍ಸ್ಥಲ ಕ್ರಿಯಾಭೇದದ ವಾಸ. ಇಂತೀ ಉಭಯದೃಷ್ಟ ನಾಶವಹನ್ನಕ್ಕ ಐಕ್ಯಲೇಪನಲ್ಲಿ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.
--------------
ಪ್ರಸಾದಿ ಭೋಗಣ್ಣ
ದಿಟದ ಚಂದ್ರನು ಅನೇಕ ಘಟದ ಜಲದೊಳಗೆ ಜನಿಸಿ ಅನೇಕ ವ್ಯವಹಾರವಾದಂತೆ ಜೀವನೆ ಜಗ, ಜಗವೆ ಜೀವನಾದ. ಆದಿ ಅನಾದಿ ವಿಚಿತ್ರತರವಾದ ಮಾಯೆ. ಈ ಮಾಯೆಯಿಂದ ತನಗೆ ತಾನೇ ಪ್ರತಿಬಿಂಬ. ಆ ಮಾಯಾ ಪ್ರತಿಬಿಂಬವೆ ತನಗೆ ಸಂಸಾರ. ಆ ಸಂಸಾರವನು ಆ ಪರಮಾತ್ಮನು ಕೂಡಿಯೂ ಕೂಡದೆ ಆ ಘಟ ಜಲ ಚಂದ್ರಮನ ಹಾಂಗೆ ವರ್ತಿಸುತ್ತಿಹನು. ಅದೆಂತೆಂದಡೆ: ``ಏಕ ಏವ ಹಿ ಭೂತಾತ್ಮಾಭೂತೇ ಭೂತೇ ವ್ಯವಸ್ಥಿತಃ| ಏಕಧಾ ಬಹುಧಾಚೈವ ದೃಶ್ಯತೇ ಜಲಚಂದ್ರವತ್||' ಎಂದುದಾಗಿ, ಸಟೆಯ ಮಾಯೆಯ ಸಟೆಯೆಂದು ಕಳೆದುಳಿದ ದ್ಥೀರ ನೀನೇ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ವಟವೃಕ್ಷದ ಘಟದ ಮಧ್ಯದಲ್ಲಿ ಒಂದು ಮಠವಿಪ್ಪುದು. ಆ ಮಠಕ್ಕೆ ಹಿಂದೆಸೆಯಿಂದ ಬಂದು, ಮುಂದಳ ಬಾಗಿಲ ತೆಗೆದು, ವಿಚ್ಛಂದದ ಕೋಣೆಯ ಕಂಡು, ಕಿಡಿ ನಂದದೆ ದೀಪವ ಕೊಂಡು ಹೊಕ್ಕು, ನಿಜದಂಗದ ಓಗರದ ಕುಂಭವ ಕಂಡು, ಬಂಧವಿಲ್ಲದ ಓಗರವನುಂಡು, ಸದಮಲಲಿಂಗವೆ ತಾನಾದ, ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವು ಸ್ವಯಂಭುವಾದ.
--------------
ಶಿವಲೆಂಕ ಮಂಚಣ್ಣ
ತರು, ನೀರು, ಕಲ್ಲಿನ ಘಟದ ಮಧ್ಯದಲ್ಲಿ ತೋರುವ ಅಗ್ನಿ ಕೆಡದೆ ಉರಿಯದೆ ಅಡಗಿಪ್ಪ ಭೇದವನರಿತಡೆ ಪ್ರಸಾದಲಿಂಗಿಯೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಅಂಗಕ್ಕೆ ಲಿಂಗ, ಮನಕ್ಕೆ ಅರಿವಾಗಬೇಕೆಂದು ಸಂದೇಹಗೊಂಬುದು ಅರಿವೋ, ಆತ್ಮನೋ ? ಅಂಗಕ್ಕೆ ಅರಿವೆಂಬುದೊಂದು ಜೀವ, ಜೀವಕ್ಕೆ ಕೊಡುವುದೊಂದು ಬೆಳಗು. ತನ್ನಲ್ಲಿ ತೋರುವ ಘಟಬಿಂಬದ bs್ಞಯೆ ಹಲವು ತೆರನಾದಂತೆ, ಸ್ಥೂಲಕ್ಕೆ ಸ್ಥೂಲ, ಸೂಕ್ಷ್ಮಕ್ಕೆ ಸೂಕ್ಷ್ಮವಾಗಿ ಹೆಚ್ಚು ಕುಂದಿಲ್ಲದೆ ತೋರುವ ತೋರಿಕೆ, ಘಟದ ಗುಣವೋ, ಬಿಂಬದ ಗುಣವೋ ? ಎಂಬುದ ತಾನರಿತಲ್ಲಿ, ಉಭಯದ ಸೂತಕಕ್ಕೆ ಹೊರಗು. ಹೊರಗೆಂಬ ಭಾವವ ಅರಿದಲ್ಲಿ, ಕಾಮಧೂಮ ಧೂಳೇಶ್ವರನೆಲ್ಲಿಯೂ ತಾನೆ.
--------------
ಮಾದಾರ ಧೂಳಯ್ಯ
ಕಾಯಿ ಒಂದರಲ್ಲಿ ಶಾಖೆ ಹಲವಹ ತೆರದಂತೆ, ಅರಿವು ಒಂದೆ, ರೂಪು ಭಿನ್ನಂಗಳಾಗಿ ತೋರುವ ತೆರದಂತೆ, ಘಟದ ವಾರಿಯಲ್ಲಿ ತೋರುವ ಇಂದುವಿನಂತೆ, ಅದೊಂದೆ ಭೇದ, ಏಣಾಂಕಧರ ಸೋಮೇಶ್ವರಲಿಂಗದಲ್ಲಿ.
--------------
ಬಿಬ್ಬಿ ಬಾಚಯ್ಯ
ಘಟದ ಮರೆಯಲ್ಲಿ ಅಸುವಿಪ್ಪಂತೆ, ಫಲದ ಮರೆಯಲ್ಲಿ ರಸವಿಪ್ಪಂತೆ, ಶಿಲೆಯ ಮರೆಯಲ್ಲಿ ಕಾಲ ಲಯನ ಲೀಲೆ ತೋರುತ್ತದೆ. ಲೀಲೆ ನಿರ್ವಯಲಾಗಿ, ಆ ಬಯಲ ಬಂಧನವನರಿ, ಅರ್ಕೇಶ್ವರಲಿಂಗವನರಿವುದಕ್ಕೆ.
--------------
ಮಧುವಯ್ಯ
ಗುರು ಭಕ್ತನಾದಲ್ಲಿ ಗುರುವಳಿದು ತಾನುಳಿದಡೆ ಗುರು ಭಕ್ತನಲ್ಲ. ಲಿಂಗ ಭಕ್ತನಾದಡೆ ಜಾಗ್ರಜಾಹೆಗಳಲ್ಲಿ ತನ್ನಂಗವ ಬಿಟ್ಟು ಲಿಂಗ ಹಿಂಗಿದಲ್ಲಿಯೆ, ಆತ್ಮ ಒಡಗೂಡಿದಲ್ಲಿಯೆ ಲಿಂಗ ಭಕ್ತನಲ್ಲ. ಜಂಗಮ ಭಕ್ತನಾದಡೆ ಕಳವು ಹಾದರ ದುರ್ಗುಣದಿಂದ ಕಡಿಯಿಸಿಕೊಂಬಲ್ಲಿ, ಬಿಡಿಸದೆ ತಾನಡಗಿ ಅರಿಯದಂತಿದ್ದಾಗವೆ ಜಂಗಮ ಭಕ್ತನಲ್ಲ. ಇಂತೀ ತ್ರಿವಿಧ ಭಾವಂಗಳಲ್ಲಿ ಘಟದ ಸಂದನಳಿದವಂಗಲ್ಲದೆ ತ್ರಿವಿಧಭಕ್ತಿಯಿಲ್ಲ. ಈ ಗುಣ ಸಂಗನಬಸವಣ್ಣಂಗಲ್ಲದೆ ಸಾಧ್ಯವಿಲ್ಲ. ಬ್ರಹ್ಮೇಶ್ವರಲಿಂಗವನರಿದವರಿಗೂ ಅಸಾಧ್ಯ ನೋಡಾ.
--------------
ಬಾಹೂರ ಬೊಮ್ಮಣ್ಣ
ಸರ್ವಘಟಂಗಳಲ್ಲಿ ಸುಖದುಃಖ ಅನುಭವಿಸುವ ಆ ಆತ್ಮ ಒಂದೋ, ಎರಡೋ? ಸರ್ವಯೋನಿಗಳಲ್ಲಿ ಕೂಡುವ ಶಿಶ್ನೆಯ ಸುಖ ಒಂದೋ, ಎರಡೋ ? ಆತ್ಮ ಒಂದೆಂದಡೆ ಘಟಭೇದಕ್ಕೆ ಭಿನ್ನವಾಗಿಪ್ಪುದು. ಆತ್ಮ ಹಲವೆಂದಡೆ ಚೇತನ ಸ್ವಭಾವ ಏಕವಾಗಿಪ್ಪುದು. ಆ ಘಟ ಆತ್ಮನ ಕೂಟ ಎಂತೆಯಿದ್ದಿತ್ತು ಅಂತೆ ಸುಖವಿದ್ದಿತ್ತು. ಯೋನಿಯ ಘಟ ಸಾಕಾರ ಎಂತೆಯಿದ್ದಿತ್ತು ಅಂತೆಯಿದ್ದಿತ್ತು ಶಿಶ್ನೆಯ ಯೋಗ. ಆತ್ಮನ ಘಟಸಂಗ ಜಾತಿಯ ಸುಜಾತಿಯ ಕೂಟಸ್ಥ ವಿಶ್ವಾಸದ ಭ್ರಾಂತಿಯ ಭ್ರಾಮಕಯೆಂತಿದ್ದಿತ್ತು ಅಂತೆಯಿದ್ದಿತ್ತು ಆತ್ಮ. ಇಂತೀ ಘಟದ ಸಾಕಾರವಡಗಿ ತೋರುವ ಆತ್ಮನ ಪರಿ. ಭಿನ್ನ ಇಂದ್ರಿಯಂಗಳ ಹಲವು ಸಂಚಿನ ಯೋನಿ. ಅದ ಸಂಧಿಸಿ ಕೂಡಿಹೆನೆಂಬ ಅರಿಕೆಯ ತೃಷ್ಣೆಯ ಶಿಶ್ನೆ ತಲಹಗೆಟ್ಟಲ್ಲಿ, ಭ್ರಾಂತಿನ ಭ್ರಮೆಯ ಸೂತಕ ಹೋಯಿತ್ತು, ಕಾಮಧೂಮ ಧೂಳೇಶ್ವರನ ತಾನು ತಾನಾದ ಕಾರಣ.
--------------
ಮಾದಾರ ಧೂಳಯ್ಯ
ಭರಿತಾರ್ಪಣವೆಂದು ಲಿಂಗಕ್ಕೆ ಸಮರ್ಪಿಸಿದ ಮತ್ತೆ ಪ್ರತಿಪ್ರಸಾದವೆಂದು ಕೊಂಬಲ್ಲಿ ಭರಿತಾರ್ಪಣವೆಂತುಟಾಯಿತ್ತು ? ತನ್ನಯ ಘಟದ ಹೆಚ್ಚುಗೆಯೊ ? ಅಲ್ಲಾ, ಭರಿತಾರ್ಪಣದ ವ್ರತದ ನಿಶ್ಚಯವೊ ? ಕಟ್ಟಿನ ವ್ರತಕ್ಕೆ ಪುನರಪಿ ಕ್ರೀಯುಂಟೆ ? ಸತ್ಯ ಜಾರಿದ ಮತ್ತೆ ಮುಕ್ತಿಯ ಪಥ ಅವಂಗುಂಟೆ ? ಇಂತೀ ಕಂಡವರ ಕಂಡು, ಕೈಕೊಂಡು, ಅವರೊಂದಾಗಿ ಆಡಿ, ಅವರ ಸಂಸರ್ಗದಿಂದವ ಕಲಿತು, ಅವರು ಹಿಂಗಿದ ಮತ್ತೆ ತಾನೆಂದಿನಂತಹ ಕ್ರಿಯಾಭಂಡನ ಭರಿತಾರ್ಪಣಲಂಡನ ಮತ್ತಾವ ಕ್ರೀಯಲ್ಲಿಯೂ ತಪ್ಪಿ, ಆ ತಪ್ಪಿಗೆ ವ್ರತವ ಹೆಚ್ಚಿಸಿಕೊಂಡಹೆನೆಂಬ ದುರ್ಮತ್ತ ಸುರಾಪಾ[ನಿಯಿಂ]ದತ್ತ ಕಾಣದಿರ್ದಡೆ ಭಕ್ತಿಗೆ ಸಲ್ಲ, ಮುಕ್ತಿಯವಂಗಿಲ್ಲ, ಸದ್ಭಕ್ತರೊಳಗಲ್ಲ, ಮಿಕ್ಕಾದ ಕೃತ್ಯ ಅವಂಗಿಲ್ಲ, ಇದು ಸತ್ಯ, ಭೋಗಬಂಕೇಶ್ವರಲಿಂಗ ಸಾಕ್ಷಿಯಾಗಿ.
--------------
ಶ್ರೀ ಮುಕ್ತಿರಾಮೇಶ್ವರ
ಉತ್ಪತ್ಯ ಪಿಂಡವೆಲ್ಲಕ್ಕೂ ಜನನವೊಂದೆ ಭೇದ. ಲಯವಹ ಘಟಕ್ಕೆ ಹಲವು ತೆರನುಂಟು. ಹಲವು ತೆರದ ಲಯವ ಬಲ್ಲಡೆ, ಬೇರೊಂದು ಕುಲಹೊಲೆಸೂತಕವೆಂಬುದುಂಟೆ ? ಬಂದ ಯೋನಿಯ ಹೊಂದುವ ಘಟದ ಉಭಯಸಂಧಿಯಲ್ಲಿ ಸಿಕ್ಕದೆ, ನಿಂದ ನಿಜವೆ ತಾನಾದವಂಗೆ ಬೇರೊಂದು ಇಲ್ಲಾ ಎಂದೆ, ಕಾಮಧೂಮ ಧೂಳೇಶ್ವರಾ.
--------------
ಮಾದಾರ ಧೂಳಯ್ಯ
ಇನ್ನಷ್ಟು ... -->