ಒಟ್ಟು 9 ಕಡೆಗಳಲ್ಲಿ , 6 ವಚನಕಾರರು , 9 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಬಳಿಕಾ ಧ್ಯಾನಕ್ರಮದಲ್ಲಿ ಮಂತ್ರಾದ್ಥಿದೇವತೆಗೆ ಅಘೋರಾದಿ ಘೋರ ಮೂರ್ತಿ ಎಂದು,ಸದಾಶಿವಾದಿ ಮಿಶ್ರಮೂರ್ತಿ ಎಂದು, ಸಾಂಬಶಿವಾದಿ ಶಾಂತ ಮೂರ್ತಿ ಎಂದುತ್ರಿವಿಧಮೂರ್ತಿಗಳುಂಟವರಲ್ಲಿ ಘೋರಮೂರ್ತಿಧ್ಯಾನದಿಂ ಚಿರಕಾಲಕ್ಕೆ ಸಕಲಸಿದ್ಧ್ಯಾದಿಗಳಹವು. ಶಾಂತಮೂರ್ತಿ ಧಾನ್ಯನದಿಂದ ಶೀಘ್ರ ಚಿರಕಾವವಲ್ಲದೆಪ್ರಚಾದಿಗಳ ಹವೆಂದರಿದು ಧ್ಯಾನಿಸೂದಾ ಧ್ಯಾನರಹಿತವಾಗಿ ಮಾಳ್ಪುದೆಅಗರ್ಭಜಪವಾ ಧ್ಯಾನ ಯುಕ್ತಮಾಗಿ ಮಾಳ್ಪುದೆ ಸಗರ್ಭಜಪವವ ರೊಳಗೆಅಗರ್ಭಕ್ಕೆ ಸಗರ್ಭವೆ ಕೋಟಿ ಮಡಿ ಮಿಗಿಲೆಂದು ಸಂಧ್ಯಾನಿಸೂದಯ್ಯಶಾಂತವೀರೇಶ್ವರಾ.
ನೀರೊಳಗಣ ಜ್ಯೋತಿ ಮೇರುವ ನುಂಗಿತ್ತು.ದೂರ[ದ] ಧಾತು ಸಾರಾಯದೊಳಡಗಿತ್ತು.ಪುರದೊಳಗೈವರ ಶಿರವರಿದು, ಪರಿಮಳದೋಕುಳಿಯನಾಡಿತ್ತ ಕಂಡೆ.ಸಾರಿರ್ದ ಬ್ರಹ್ಮನ ಓಲಗ ಹರೆಯಿತ್ತು,ಘೋರ ರುದ್ರನ ದಳ ಮುರಿಯಿತ್ತು_ಗುಹೇಶ್ವರಾ.
ಪಲ್ಲ :ಬಂಧನ ಸಂಸಾರದಂದುಗದ ದಾಳಿಯಲ್ಲಿನೊಂದು ಬೆಂದೆನೊ ಎನ್ನ ಹುಯ್ಲುತಂಬಿಸು ಗುರುವೆ ಭವಹರ ನಿತ್ಯನಿರ್ಮಳಾತ್ಮಕ ಶಂಭುವೆ.ಪದ :ಹಲವು ಜನ್ಮದಿ ಹುಟ್ಟಿ ಹಲವಾಹಾರವನುಂಡುಹಲವು ಭೂಮಿಯ ಮೆಟ್ಟಿ ಹಲವು ಕರ್ಮವ ಕಂಡುಹಲವು ಭವಕೀಡಾಗಿ ಹಲವು ಹಂಬಲಿಸುತಿರುವಹೊಲೆಜನ್ಮ ಸಂಸಾರ ಮಾಯಾರಕ್ಕಸಿ ತುಡುರೆನಿಲ್ಲಲಾರದಲಿ ನಿಮ್ಮ ಮರೆಹೊಕ್ಕೆ ಎನ್ನ ಕೊಡದೆಗೆಲಿದುಕೊ ದುರಿತಹರ ಕರುಣಾಳು ಪರಮಗುರುವೆ. | 1 |ಸಟೆ ಠಕ್ಕು ಠೌಳಿ ಅಟಮಟದ ಬಂಧನದಕುಟಿಲಸಂಸಾರಸಾಗರದ ತೊರೆನೆರೆಗಳೊಳುಪುಟನೆಗೆದು ತಲೆ ಮುಣುಗುತಲಿರುವನ ಕಂಡುನಿಟಿಲಾಕ್ಷ ಕೃಪೆಯೆಂಬ ಹಡಗವನು ತಂದೊಲಿತಟಕೆನ್ನನೆಳೆದು ತಗೆದೀಗ ಇನಿತಾತ್ಮಘಟದೊಳಗೆ ಜ್ಞಾನಜ್ಯೋತಿಯ ತೀವು ಪರಮಗುರುವೆ. | 2 |ರಸವಿಷಯ ಮೋಹನದ ಕೂಪಜಲದೊಳು ಮುಳುಗಿದೆಸೆದೆಸೆಗೆ ಚಾಲಿವರಿವನ ಕಂಡು ಬೇಗದಲಿವಿಷಕಂಠ ದುರಿತಸಂಹರ ಕರುಣಾಕರ ತೊಟ್ಟಿಲಿಗೆಎಸೆವ ಹಗ್ಗವ ಕಟ್ಟಿ ಎಳೆದು ತಗೆಯೆನ್ನ ರಂಬಿಸುತ ಸಂತೈಸಿ ದುಃಖದಲ್ಲಿ ಭೋರ್ಗರೆದಳುವಶಿಶುವ ಬೋಳೈಸುವಂದದಲೆನ್ನ ಬೋಳೈಸು ಅಸಮಾಕ್ಷ ಪರಮಗುರುವೆ.| 3|ತೆರಣಿಯ ಹುಳು ನೂಲು ಸುತ್ತಿಕೊಂಡು ಎಸೆವತೆರದಿ ಈ ಸಂಸಾರ ಸುಖದುಃಖ ಎನ್ನನು ಸುತ್ತಿಪರಿಭವಕ್ಕೆ ಗುರಿಯಾಗಿ ಯೋನಿಯಂತ್ರದೆತಿರುಗಿಯೆ ಬರುತಲಿರ್ದೆನು ಘೋರ ಅರಣ್ಯದೊಳು ಸುತ್ತಿಹರಹರ ನಿಮ್ಮ ಸ್ಮರಣೆಯ ಮರೆದ ಕಾರಣದಿದುರಿತನ್ಯಾಯದ ಬಂಧನಕೆ ಗುರಿಯಾಗಿದ್ದೆನಯ್ಯಾ ಶಿವನೆ. | 4 |ಮಾಯಾಸಂಸಾರಸರ್ಪನ ವಿಷವು ತಲೆಗೇರಿನೋಯುತಿದ್ದೆನು ಹಲವುವಿಧದಾಸೆಪಾಶದಲಿಬೇಯುವವನ ಕಂಡು ನೀ ಬೇಗಲೊಯಿದ್ಯವ ಮಾಡಿಯೆಶವವನುಳುವಿಕೋ ಭವರೋಗವೈದ್ಯನಿತ್ಯ ಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭು ನೀವಲ್ಲದೆನಗನ್ಯವಿಲ್ಲ ಕಾಯೋಕಾಯೋ ದೇವಾ. | 5 |
ವೀರನಾದಡೆ ವೈರಿಗಳ ಕಾಟ ಬಹಳವಯ್ಯಾ,ದಾನಶೂರನಾದಡೆ ಯಾಚಕರ ಗೋಳು ಬಹಳವಯ್ಯಾ.ಅತಿರೂಪನಾದಡೆ ಅಂಗನೆಯರ ಕಾಟ ವಿಶೇಷವಯ್ಯಾ.ಮೂರರಲ್ಲಿ ನಿಂತಡೆ ಮಲತ್ರಯಂಗಳ ಘೋರ ಹೆಚ್ಚಾಯಿತಯ್ಯಾ.ಅಂಗದಲ್ಲಿ ಲಿಂಗಸಂಬಂಧವಾಗಬಾರದು;ಆದ ಬಳಿಕ ವೀರನಾಗಿ ವಿಷಯಂಗಳನಳಿವುದು,ಬಹುಘೋರವು ಬಹುಘೋರವು ನೋಡಯ್ಯಾ,ಎಲೆ ಕಪಿಲಸಿದ್ಧಮಲ್ಲಿಕಾರ್ಜುನಾ.
ಊರೊಳಗಣ ಘನಹೇರಡವಿಯೊಳೊಂದುಬೇರು ಮೇಲು, ಕೊನೆ ಕೆಳಗಾಗಿ ಸಸಿ [ಹುಟ್ಟಿತ್ತು]ಆರೈದು ನೀರನೆರೆದು ಸಲುಹಲಿಕ್ಕೆ,ಅದು ಸಾರಾಯದ ಫಲವಾಯಿತ್ತಲ್ಲಾ !ಬಾರುಗೊಂಬಿನಲುದುರಿದ ಹಣ್ಣ ಮೆಲಿದವಘೋರ ಸಂಸಾರಭವಕ್ಕೆ ಸಿಕ್ಕಿದ.ಬೇರಿಂದಲಾದ ಫಲವ ದಣಿದುಂಡವ, ಊರಿಂದ ಹೊರಗಾದಕಾಣಾ ಗುಹೇಶ್ವರಾ.
ತೋಹಿನ ಶಬರನಂತೆ, ಲಾಗಿನ ವ್ಯಾಘ್ರನಂತೆ,ಆಡುವ ವಿಧಾಂತನಂತೆ, ಇಂತೀ ವೇಷ ಸಹಜವೆ ?ದೊರೆವನ್ನಬರ ಭಕ್ತ, ದೊರೆವನ್ನಬರ ವಿರಕ್ತ.ಇಂತೀ ಇವರಿರವ ಕಂಡು ಬೆರಸಿದೆನಾದಡೆ,ಎನಗೆ ಘೋರ ನರಕ, ನಿಮಗೆ ಎಕ್ಕಲ ತಪ್ಪದು.ಇದಕ್ಕೆ ಮುಂಡಿಗೆಯ ಹಾಕಿದೆ, ಎತ್ತಿ ಶುದ್ಧರಾಗಿ,ನಿಃಕಳಂಕ ಮಲ್ಲಿಕಾರ್ಜುನಾ.
ಸಂಸಾರವೆಂಬ ಘೋರ ಕಾಂತಾರದೊಳಗೆನ್ನನಾಸುರ ಬಿಡದಿರಾ ಬೊಪ್ಪ.ಎನ್ನ ಬೆಂಬಳಿಯೊಳಿರ್ದು ಸಾಕಾ ಬೊಪ್ಪ.ಎನ್ನ ಹೊರೆಯೊಳಿರ್ದು ಸಾಕಾ ಬೊಪ್ಪ.ಈ ಪ್ರಿಯ ನಾಯಿ ತೋಡಿ ತಿನ್ನುತ್ತಿದೆ,ಕಾಮನೆಂಬ ವೈರಿಗೊಪ್ಪಿಸರೆನ್ನ ಬೊಪ್ಪ.ಅವ್ವೆಯ ಮನೋನಾಥಾ, ನಿರಂಜನ ನಿರ್ಮಾಯ ನಿರವಯ,ನಿಶ್ಶೂನ್ಯ ನಿರಾಲಂಬ ನಿರಾಭಾರಿ ನಿವ್ರ್ಯಸನಿ.ಮುಕ್ತಿಸಾಮ್ರಾಜ್ಯಕ್ಕೊಡೆಯ ನೀನೆಯಯ್ಯಾ.ನಿನ್ನನಗಲದಂತೆ ನಿನ್ನ ಶ್ರೀಪಾದದೊಳಿಂಬಿಡಯ್ಯಾ,ಕಪಿಲಸಿದ್ಧಮಲ್ಲಿನಾಥಯ್ಯಾ.
ಸಂಕಲ್ಪ ವಿಕಲ್ಪವೆಂಬ ಉದಯಾಸ್ತಮಾನಗಳಿಗೆ ದೂರವಾದಶಿವಶರಣರ ಅಕುಲಜರೆಂದು ಗಳಹುತಿಪ್ಪರು ನೋಡಾ ಈ ಮರುಳ ವಿಪ್ರರುತಾವು ಮಾತಂಗಿಯ ಗರ್ಭಸಂಭವ ಜೇಷ*ಪುತ್ರರೆಂಬುದನರಿಯದೆ.ನಮ್ಮ ಶಿವಭಕ್ತರು ಅಂತಹ ಕುಲ ಇಂತಹ ಕುಲದವರೆಂದು ನಿಂದಿಸಿನುಡಿವ ವಿಪ್ರಹೊಲೆಯರು ನೀವು ಕೇಳಿ ಭೋ ಅದೆಂತೆಂದಡೆ_ಸ್ತ್ರೀವಾದಪುರುಷಃ ಷಂಡಶ್ಚಂಡಾಲೋ ದ್ವಿಜವಂಶಜಃನಜಾತಿಭೇದೋ ಲಿಂಗಾರ್ಚೇ ರುದ್ರಗಣಾಃ ಸ್ಮೃತಾಃಇಂತೆಂಬ ಪುರಾಣವಾಕ್ಯವನರಿದುನಮ್ಮ ಶಿವಭಕ್ತನು ಹೊಲೆಯ ಮಾದಿಗ ಕಬ್ಬಿಲ ಕಮ್ಮಾರಕಂಚುಗಾರ ಅಕ್ಕಸಾಲೆ ಕುಂಬಾರ ಅಗಸ ನಾವಿಂದಜೇಡ ಬೇಡನೆಂದು ನುಡಿಯುತಿಪ್ಪರು.ನಿಮ್ಮ ಉತ್ತಮ ಸತ್ಕುಲಂಗಳ ನಾವು ಎತ್ತಿ ನುಡಿಯಬಹುದೇಮಾರ್ಕಂಡೇಯ ಮಾದಿಗನೆಂದು ಸಾಂಖ್ಯ ಶ್ವಪಚನೆಂದುಕಾಶ್ಯಪ ಕಮ್ಮಾರನೆಂದು ರೋಮಜ ಕಂಚುಗಾರನೆಂದುಅಗಸ್ತ್ಯ ಕಬ್ಬಿಲನೆಂದು ನಾರದ ಅಗಸನೆಂದುವ್ಯಾಸ ಬೇಡನೆಂದು ವಶಿಷ* ಡೊಂಬನೆಂದುದುರ್ವಾಸ ಮಚ್ಚಿಗನೆಂದು ಕೌಂಡಿಲ್ಯ ನಾವಿಂದನೆಂದುಅದೆಂತೆಂದಡೆ ವಾಸಿಷ*ದಲ್ಲಿ_ವಾಲ್ಮಿಕೀ ಚ ವಶಿಷ*ಶ್ಚ ಗಾಗ್ರ್ಯಮಾಂಡವ್ಯಗೌತಮಾಃಪೂರ್ವಾಶ್ರಯೇ ಕನಿಷಾ*ಸ್ಯುರ್ದೀಕ್ಷಯಾ ಸ್ವರ್ಗಗಾಮಿನಃಎಂದುದಾಗಿ ಇದನರಿದು ಮರೆದಿರಿ ನಿಮ್ಮ ಕುಲವನುಇನ್ನು ನಿಮ್ಮ ಕುಲದಲ್ಲಿ ಹಿರಿಯರುಳ್ಳರೆ ನೀವು ಹೇಳಿ ಭೋನಿಮ್ಮ ಗೋತ್ರವ ನೋಡಿ ನಿಮ್ಮ ಹಮ್ಮು ಬಿಡಿ ಭೋಎಮ್ಮ ಸದ್ಭಕ್ತರೇ ಕುಲಜರು.ಇದ ನಂಬಿದಿರ್ದಡೆ ಓದಿ ನೋಡಿರಣ್ಣಾ ನಿಮ್ಮ ವೇದವರ್ಗಂಗಳೊಳಗೆಅದೆಂತೆಂದಡೆ ಅಥರ್ವವೇದದಲ್ಲಿ_ಮಾತಂಗೀ ರೇಣುಕಾ ಗರ್ಭಸಂಭವಾತ್ ಇತಿ ಕಾರುಣ್ಯಂಮೇಧಾವೀ ರುದ್ರಾಕ್ಷಿಣಾ ಲಿಂಗಧಾರಣಸ್ಯ ಪ್ರಸಾದಂ ಸ್ವೀಕುರ್ವನ್ಋಷೀಣಾಂ ವರ್ಣಶ್ರೇಷೊ*ೀs ಘೋರ ಋಷಿಃ ಸಂಕರ್ಷಣಾತ್ಇತ್ಯಾದಿ ವೇದ ವಚನ ಶ್ರುತಿಮಾರ್ಗೇಷು ಎಂದುದಾಗಿಮತ್ತಂ ವಾಯವೀಯಸಂಹಿತಾಯಾವಮ್_ಬಾಹ್ಮಣೋ ವಾಪಿ ಚಾಂಡಾಲೋ ದುರ್ಗುಣಃ ಸುಗುಣೋsಪಿ ವಾಭಸ್ಮ ರುದ್ರಾಕ್ಷಕಕಂಠೂೀ ವಾ ದೇಹಾಂತೇ ಸ ಶಿವಂ ವ್ರಜೇತ್ಎಂದುದಾಗಿ ಮತ್ತಂ ಶಿವರಹಸ್ಯದಲ್ಲಿ_ಗ್ರಾಮೇಣ ಮಲಿನಂ ತೋಯಂ ಯಥಾ ಸಾಗರಸಂಗತವರಿïಶಿವಸಂಸ್ಕಾರಸಂಪನ್ನೆ ಜಾತಿಭೇದಂ ನ ಕಾರಯೇತ್ಎಂದುದಾಗಿ ಇವರೆಲ್ಲರ ವರ್ಣಂಗಳು ಲಿಂಗಧಾರಣೆಯಿಂದಮರೆಸಿಹೋದವು ಕೇಳಿರಣ್ಣಾ.ಇಂತಪ್ಪ ಋಷಿ ಜನಂಗಳೆಲ್ಲ ಶ್ರೀಗುರುವಿನ ಕಾರುಣ್ಯವಂ ಪಡೆದುವಿಭೂತಿ ರುದ್ರಾಕ್ಷಿಯಂ ಧರಿಸಿ ಶಿವಲಿಂಗಾರ್ಚನೆಯಂ ಮಾಡಿಪಾದತೀರ್ಥ ಪ್ರಸಾದವಂ ಕೊಂಡುಉತ್ತಮ ವರ್ಣಶ್ರೇಷ*ರಾದರು ಕಾಣಿರೇಇದು ಕಾರಣ ನಮ್ಮ ಕೂಡಲಚೆನ್ನಸಂಗಯ್ಯನಅರಿದು ಪೂಜಿಸುವಾತನೇ ಉತ್ತಮ ಸದ್ಭಕ್ತ ಬ್ರಾಹ್ಮಣನು.ಅರಿಯದವನೀಗಲೇ ಕೆಟ್ಟ ಹೊಲೆಯ ಕಾಣಿರಣ್ಣಾ.
.......................ನುಂಗಿತ್ತು.ದೂರ ಧಾತು ಸಾರಾಯದೊಳಡಗಿತ್ತು.ಪುರದೊಳಗೈವರ ಶಿರ ಹರಿದು............ಮಳದೋಕುಳಿಯಾಗಿತ್ತ ಕಂಡೆ.ಸಾರಿದ್ದ ಬ್ರಹ್ಮನ ಓಲಗ ಸೂರೆಯಾಯಿತ್ತು.ಘೋರ ರುದ್ರನ ದಳ ಮುರಿಯಿತ್ತು ಗುಹೇಶ್ವರಾ