ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದುಷ್ಟರಿಗಂಜಿ ಕಟ್ಟಿಕೊಳ್ಳಬಹುದೆ ಕಡ್ಡಾಯದ ವ್ರತವ ! ಆ ವ್ರತದ ವಿಚಾರವೆಂತೆಂದಡೆ ; ಅಲಗಿನ ತುಪ್ಪದ ಸವಿಗೆ ಲಲ್ಲೆಯಿಂದ ನೆಕ್ಕಿದಡೆ ಅಲಗಿನ ಧಾರೆ ನಾಲಗೆಯ ತಾಗಿ, ಆ ಜೀವ ಹಲುಬುವ ತೆರದಂತೆ. ಒಲವರವಿಲ್ಲದ ಭಕ್ತಿ, ಛಲವಿಲ್ಲದ ನಿಷ್ಠೆ, ಎಲವದ ಮರನ ಕಾಯ್ದ ವಿಹಂಗನಂತೆ. ಇಂತೀ ಸಲೆನೆಲೆಯನರಿಯದವನ ವ್ರತಾಚಾರ ಕೊಲೆ ಹೊಲೆ ಸೂತಕಕ್ಕೊಡಲಾಯಿತ್ತು. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ಹೊರಗಾದ ನೇಮ
--------------
ಅಕ್ಕಮ್ಮ
-->