ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಹಭೋಜನವ ಮಾಡುವನ ಇರವು ಹೇಗೆಂದಡೆ: ದಗ್ಧಪಟದಂತೆ, ಮಂಜಿನ ರಂಜನೆಯ ವಾರಿಯ ಧೂಮದಂತೆ, ಒಡಲಿನ ಆತ್ಮನ ಭೇದದಂತಿರಬೇಕು. ಆಕಾಶದ ಸಾಕಾರದಲ್ಲಿ ತೋರುವ ನಾನಾ ಛಾಯದಂತೆ, ಒಂದು ವರ್ಣದಲ್ಲಿ ನಿಲ್ಲದೆ ತೋರುವ ತೋರಿಕೆಯಂತೆ, ಕಾಯದ ಛಾಯವ ತೊಟ್ಟಿದ್ದಲ್ಲಿ ಲಿಂಗಕ್ಕೂ ತನಗೂ ಸಹಭೋಜನ ಸಲವುದೆಂದೆ. ಅದು ಉರಿಯೊಳಗಳ ಕರ್ಪುರದಂತೆ, ಕರ್ಪುರದೊಳಗಳ ಉರಿಯಂತೆ. ಅನ್ಯಬ್ಥಿನ್ನವಿಲ್ಲದಿರಬೇಕು, ಸದಾಶಿವಮೂರ್ತಿಲಿಂಗದಲ್ಲಿ.
--------------
ಅರಿವಿನ ಮಾರಿತಂದೆ
ಕಂಡೆಯಾ ಬಸವಣ್ಣಾ, ಕಣ್ಣಿನೊಳಗಣ ಬೊಂಬೆಯ ಸೂತ್ರದ ಇರವಿನಂತೆ, ಕುಂದಣದೊಳಗಡೆಗೆ ತೋರುವ ಮೃದು ಛಾಯದಂತೆ, ನವನೀತದೊಳಗಡಗಿದ ಸಾರದ ಸವಿಯಂತೆ ಅಂಗವಿಲ್ಲದ ಕುರುಹು, ಭಾವವಿಲ್ಲದ ಬಯಲು, ಬೆಳಗನರಿಯದ ಜ್ಯೋತಿಯ ಕಂಡೆಯಾ ಸಂಗನಬಸವಣ್ಣಾ, ಗುಹೇಶ್ವರಲಿಂಗದಲ್ಲಿ ಮರುಳು ಶಂಕರದೇವರ ?
--------------
ಅಲ್ಲಮಪ್ರಭುದೇವರು
-->