ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಣ್ಣವನರಿಯದ ಬಯಲಿನಂತೆ, ಬ್ಥಿನ್ನ ಅಬ್ಥಿನ್ನವನರಿಯದ ಬೆಳಗಿನಂತೆ, ಛಿನ್ನ ವಿಚ್ಫಿನ್ನವನರಿಯದ ಪರಿಪೂರ್ಣದಂತೆ, ಅವದ್ಥಿಗೊಡಲಿಲ್ಲದ ಭಾವವಿರಹಿತನಾದೆಯಲ್ಲಾ. ಸುಳುಹುಗೆಟ್ಟು ಸೂಕ್ಷ್ಮವರತು, ಬೆಳಗೆಂಬ ಕಳೆನಾಮ ನಷ್ಟವಾಗಿ, ಅದೆಂತೆಯಿದ್ದಿತ್ತು, ಅಂತೆ ಆದೆಯಲ್ಲಾ ಕಾಮಧೂಮ ಧೂಳೇಶ್ವರಾ.
--------------
ಮಾದಾರ ಧೂಳಯ್ಯ
ಲಿಂಗ ಛಿನ್ನ ಭಿನ್ನವಾದಡೆ ಸ್ಥೂಲಸೂಕ್ಷ್ಮವನರಿಯಬೇಕು. ಸ್ಥೂಲವಾವುದು ಸೂಕ್ಷ್ಮವಾವುದು ಎಂದಡೆ : ಲಿಂಗದ ಶಕ್ತಿಪೀಠದಲ್ಲಿ ಅಕ್ಕಿಯ ತೂಕ ಮೇಣವನೊತ್ತಿ ನೋಡಿದಲ್ಲಿ ಆ ಮೇಣ ಒಳಗಾದಡೆ ಸ್ಥೂಲ, ಆ ಮೇಣ ಹೆಚ್ಚಾದಡೆ ಸೂಕ್ಷ್ಮ ಮತ್ತಂ, ಲಿಂಗದ ಕಟಿಯಲ್ಲಿ ಅರ್ಧ ಅಕ್ಕಿಯ ತೂಕ ಮೇಣವನು ಒತ್ತಿ ನೋಡಿದಲ್ಲಿ ಆ ಮೇಣ ಒಳಗಾದಡೆ ಸ್ಥೂಲ, ಆ ಮೇಣ ಹೆಚ್ಚಾದಡೆ ಸೂಕ್ಷ್ಮ. ಮತ್ತಂ, ಲಿಂಗದ ವರ್ತುಳ ಗೋಮುಖದಲ್ಲಿ ಅರ್ಧ ಅಕ್ಕಿಯ ಸರಿಭಾಗವ ಮಾಡಿದಲ್ಲಿ ಗಿರ್ದವೆನಿಸಿತ್ತು. ಆ ಗಿರ್ದ ಅಕ್ಕಿಯ ತೂಕ ಮೇಣವನ್ನು ಒತ್ತಿ ನೋಡಿದಲ್ಲಿ ಆ ಮೇಣ ಒಳಗಾದಡೆ ಸ್ಥೂಲ, ಆ ಮೇಣ ಹೆಚ್ಚಾದಡೆ ಸೂಕ್ಷ್ಮ. ಮತ್ತಂ, ಲಿಂಗದ ನಾಳ ಗೋಳಕದಲ್ಲಿ ಎಳ್ಳಿನ ತೂಕ ಮೇಣವನ್ನು ಒತ್ತಿ ನೋಡಿದಲ್ಲಿ ಆ ಮೇಣ ಒಳಗಾದಡೆ ಸ್ಥೂಲ, ಆ ಮೇಣ ಹೊರಗಾದಡೆ ಸೂಕ್ಷ್ಮ. ಮತ್ತಂ, ಲಿಂಗದ ಮಸ್ತಕದಿಂದೆ ಕೆಳಗಣ ಪೀಠಪರಿಯಂತರವಾಗಿ ಕೂದಲು ಮುಳುಗುವಷ್ಟು ಸೀಳಿದಡೆ ಸ್ಥೂಲ, ಆ ಕೂದಲು ಹೆಚ್ಚಾದಡೆ ಸೂಕ್ಷ್ಮ. ಈ ಉಭಯಾರ್ಥವ ತಿಳಿದು ಸೂಕ್ಷ್ಮವಾದಡೆ ಮುನ್ನಿನಂತೆ ಧರಿಸಿಕೊಳ್ಳಬೇಕು. ಸ್ಥೂಲವಾದಡೆ ಆ ಲಿಂಗದಲ್ಲಿ ಐಕ್ಯವಾಗಬೇಕು. ಅದೆಂತೆಂದೊಡೆ: ``ವ್ರೀಹಿ ವ್ರೀಹ್ಯರ್ಧ ವಿಚ್ಛಿನ್ನಂ ಕೇಶಗ್ರಾಹ್ಯಂ ಪ್ರಮಾದತಃ | ಪೀಠಾದಿ ಲಿಂಗಪರ್ಯಂತಂ ತ್ಯಜೇತ್ ಪ್ರಾಣಾನ್ ನಗಾತ್ಮಜೇ ||'' ಮತ್ತಂ; ``ತಂಡುಲಾರ್ಧಂ ಪೀಠಮಧ್ಯಂ ತದರ್ಧಂ ವೃತ್ತಗೋಮುಖಂ | ತಿಲಮಾತ್ರ ಯೋನಿಲಿಂಗಂ ತದಾಧಿಕ್ಯಂ ತ್ಯಜೇದಸೂನ್ ||'' ಎಂದುದಾಗಿ, ಇಂತಪ್ಪ ಲಿಂಗೈಕ್ಯರಾದ ಮಹಾಶರಣರು ಮೂರುಲೋಕಕ್ಕೆ ಅಧಿಕರು ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
-->