ಅಥವಾ

ಒಟ್ಟು 52 ಕಡೆಗಳಲ್ಲಿ , 29 ವಚನಕಾರರು , 43 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಿಟದ ಚಂದ್ರನು ಅನೇಕ ಘಟದ ಜಲದೊಳಗೆ ಜನಿಸಿ ಅನೇಕ ವ್ಯವಹಾರವಾದಂತೆ ಜೀವನೆ ಜಗ, ಜಗವೆ ಜೀವನಾದ. ಆದಿ ಅನಾದಿ ವಿಚಿತ್ರತರವಾದ ಮಾಯೆ. ಈ ಮಾಯೆಯಿಂದ ತನಗೆ ತಾನೇ ಪ್ರತಿಬಿಂಬ. ಆ ಮಾಯಾ ಪ್ರತಿಬಿಂಬವೆ ತನಗೆ ಸಂಸಾರ. ಆ ಸಂಸಾರವನು ಆ ಪರಮಾತ್ಮನು ಕೂಡಿಯೂ ಕೂಡದೆ ಆ ಘಟ ಜಲ ಚಂದ್ರಮನ ಹಾಂಗೆ ವರ್ತಿಸುತ್ತಿಹನು. ಅದೆಂತೆಂದಡೆ: ``ಏಕ ಏವ ಹಿ ಭೂತಾತ್ಮಾಭೂತೇ ಭೂತೇ ವ್ಯವಸ್ಥಿತಃ| ಏಕಧಾ ಬಹುಧಾಚೈವ ದೃಶ್ಯತೇ ಜಲಚಂದ್ರವತ್||' ಎಂದುದಾಗಿ, ಸಟೆಯ ಮಾಯೆಯ ಸಟೆಯೆಂದು ಕಳೆದುಳಿದ ದ್ಥೀರ ನೀನೇ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ಜಗವೊಂದೆಸೆ, ತಾನೊಂದೆಸೆ, ಮತ್ತಾ ಜಗದೊಳಗೆ ತಾ, ತನ್ನೊಳಗೆ ಜಗ. ಆಗಮವೊಂದೆಸೆ, ತಾನೊಂದೆಸೆ, ಮತ್ತಾ ಆಗಮದೊಳಗೆ ತಾ, ತನ್ನೊಳಗೆ ಆಗಮ. ವಿದ್ಥಿಯೊಂದೆಸೆ, ತಾನೊಂದೆಸೆ, ಮತ್ತಾ ವಿದ್ಥಿಯೊಳಗೆ ತಾ, ತನ್ನೊಳಗೆ ವಿದ್ಥಿ. ಕ್ರೀಯೊಂದೆಸೆ, ತಾನೊಂದೆಸೆ, ಮತ್ತಾ ಕ್ರೀಯೊಳಗೆ ತಾ, ತನ್ನೊಳಗೆ ಕ್ರೀ. ಇಂತೀ ಜಗ, ಆಗಮ, ವಿದ್ಥಿ, ಕ್ರೀ ನಿಷೇಧವಾಗಿ, ಹೊದ್ದಿಯೂ ಹೊದ್ದನು, ನೀರ ತಾವರೆಯಂತೆ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಗೋಳಕಾಕಾರ ಗೋರಕ್ಷನೆಂಬ ಪಟ್ಟಣದಲ್ಲಿ, ಗೋಮಯವೆಂಬ ಪರಶಕ್ತಿ ಅಪರ ಪ್ರಸೂತಕವಾಗಲಾಗಿ, ಅದರಂಡದಲ್ಲಿ ಆಡು ಹುಟ್ಟಿತ್ತು. ಆಡಿನ ಅಂಡದಲ್ಲಿ ಕೋಡಗ ಹುಟ್ಟಿತ್ತು. ಕೋಡಗದ ಕುಂಡಿಯಲ್ಲಿ ಸಿರಿಯಕ್ಕ ಹುಟ್ಟಿದಳು. ಸಿರಿಯಕ್ಕನ ಆತುರಿಯದಲ್ಲಿ ಮೂದೇವಿ ಉರಿಯಕ್ಕ ಹುಟ್ಟಿದಳು. ಉರಿಯಕ್ಕನ ಉರವಣೆಯಲ್ಲಿ ಜಗ ಹುಟ್ಟಿ, ಜಗದ ಸಿರಿಯಲ್ಲಿ ಹೋದರು ಹಿರಿಯರೆಲ್ಲರು, ಬಂಕೇಶ್ವರಲಿಂಗವನರಿಯದೆ.
--------------
ಸುಂಕದ ಬಂಕಣ್ಣ
ಬ್ರಹ್ಮ ಸೋರೆಯಾಗಿ, ವಿಷ್ಣು ದಂಡವಾಗಿ, ಸಕಲದೇವತಾಕುಲ ದಾರವಾಗಿ, ಶ್ರುತಿನಾದ ವಸ್ತುವಾಗಿ ತೋರುತ್ತಿರೆ, ತನ್ನ ಲೀಲೆಯಿಂದ, ಜಗಕ್ರೀಡಾಭಾವದಿಂದ ಒಂದಕ್ಕೊಂದು ಸೇರಿಸಿ, ಉತ್ತಮ ಕನಿಷ್ಠ ಮಧ್ಯಮವೆಂಬ ತ್ರಿವಿಧಮೂರ್ತಿಯಾಗಿ, ಕಲ್ಪಿಸಿದ ಜಗ ಹಾಹೆಯಿಂದ ಎಂಬುದನರಿಯದೆ, ಮಲಕ್ಕೂ ನಿರ್ಮಲಕ್ಕೂ ಸರಿಯೆನಬಹುದೆ? ವಾದಕ್ಕೆ ಈ ತೆರ ಅರಿದಡೆ ಆ ತೆರ. ಸದಾಶಿವಮೂರ್ತಿಲಿಂಗವು ಅತ್ಯತಿಷ್ಠದ್ದಶಾಂಗುಲವು.
--------------
ಅರಿವಿನ ಮಾರಿತಂದೆ
ವಂದಿಸಿ ನಿಂದಿಸಿ ಮತ್ತೆ ಅದಾರಿಂಗೆ ಕೇಡೆಂಬುದನರಿತು ತಾ ನೋಯಲೇತಕೆ? ಕಟ್ಟಿದ ತಟಾಕವನೊಡೆಯ ಕುಕ್ಕಿದ ಮತ್ತೆ ಆರನುಭವದ ನಷ್ಟ ಅದಾರಿಗೆ ಹೇಳಾ? ಭೂಮಿಯ ಬಡತನಕ್ಕೆ ಬೀಜವಿಲ್ಲ ಪತ್ರಭಾಜನ ಹಸಿಯಿತ್ತೆಂದು ಓಗರವಿಲ್ಲ. ಮಾಟಕೂಟದಲ್ಲಿ ಇಕ್ಕಿ ಎರೆದು ಕೊಟ್ಟು ಕೊಂಡು ಚಿತ್ತ ಶುದ್ಧವಿಲ್ಲಾಯೆಂದು ನುಡಿಯಲೇತಕ್ಕೆ? ಬೆಳೆದ ಬೆಳಸ ಕಳದಲ್ಲಿ ಕಡೆಗಾಣಿಸಿದ ಮತ್ತೆ ಹೋದ ಹೊಲಬ ಬಳಸಲೇತಕ್ಕೆ ತನ್ನ ತಾನರಿದು? ಜಗ ತನಗನ್ಯವಿಲ್ಲೆಂದು ಅರಿದ ಮತ್ತೆ ಪ್ರತಿಮೂದಲೆಗೊಡಲಿಲ್ಲ. ಆತ ಉಭಯ ಶುದ್ಧಾತ್ಮನು. ತ್ರಿಗುಣರಹಿತನು, ತ್ರಿಗುಣಾತ್ಮಭರಿತನು. ಆತ ಕೂಗಿನ ದನಿಗೆ ಹೊರಗು ಮಹಾಮಹಿಮ ಮಾರೇಶ್ವರಾ.
--------------
ಕೂಗಿನ ಮಾರಯ್ಯ
ಕುಟಿಲಕ್ಕಲ್ಲದೆ ಜಗ ಸಿಕ್ಕದು. ವಾಚಕಂಗಲ್ಲದೆ ಭೋಗವಿಲ್ಲ. ಘಟಧರ್ಮಕ್ಕೆ ಹೊರಗು, ಐಘಟದೂರ ರಾಮೇಶ್ವರಲಿಂಗವನರಿವುದಕ್ಕೆ.
--------------
ಮೆರೆಮಿಂಡಯ್ಯ
ಅಯ್ಯಾ, ನಾನೀಜಗ ಹುಟ್ಟುವಂದು ಹುಟ್ಟಿದವನಲ್ಲ. ನಾನೀಜಗ ಬೆಳೆವಲ್ಲಿ ಬೆಳೆದವನಲ್ಲ. ನಾನೀಜಗವಳಿವಲ್ಲಿ ಅಳಿವವನಲ್ಲ. ಆಗು ಹೋಗಿನ ಜಗಕ್ಕೆ ಸಾಕ್ಷಿ ಚೈತನ್ಯನು, ನನ್ನಾಧಾರದಲ್ಲಿ ಜಗವಿದೆ. ಈ ಜಗದುತ್ಪತ್ತಿ ಸ್ಥಿತಿಲಯಕ್ಕೆ ನಾನಾಶ್ರಯನು. ಅಯ್ಯಾ, ನನಗೂ ನಿನಗೂ ಸಂಬಂಧವಲ್ಲದೆ ಜಗಕ್ಕೂ ಎನಗೂ ಸಂಬಂಧವಿಲ್ಲ. ನಾ ನಿಮ್ಮಲ್ಲಿ ಹುಟ್ಟಿದ ಕಾರಣ, ನಾ ನಿಮ್ಮಂತೆ ತೋರುವೆನು. ಜಗ ಮಾಯೆಯಲ್ಲಿ ಹುಟ್ಟಿದ ಕಾರಣ, ಜಗ ಮಾಯೆಯಂತೆ ತೋರುವುದು. ಅದು ಕಾರಣ ಈ ದೇಹೇಂದ್ರಿಯಗಳು ನನ್ನವಲ್ಲ. ನಿನ್ನವಲ್ಲವೆಂದರಿದ ಕಾರಣ ಬೇರಾದವು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ನೋಡುವ ದೃಷ್ಟಿಯು ಮುಟ್ಟಿದ ಮತ್ತೆ, ಇದಿರೆಡೆಯ ಕಾಬುದಿನ್ನೇನೊ ? ಕ್ರಿಯ ಸಂಪದಂಗಳ ಮರೆದು, ಅರಿವ ಅರಿವಿನ ತೆರನಿನ್ನೆಂತು ? ಸಕಲವೆಂದಲ್ಲಿ ಜಗ, ನಿಃಕಲವೆಂದಲ್ಲಿ ಕಾಬ ಲಕ್ಷ. ಕಂಡು ನಿಶ್ಚೆ ೈಸಿದಲ್ಲಿ ಕಂಡೆಹೆನೆಂಬ ಭ್ರಾಂತು ಕಾಣಿಸಿಕೊಂಡು ಇದಿರೆಡೆಗೊಟ್ಟುವದು, ಲಲಾಮಭೀಮಸಂಗಮೇಶ್ವರಲಿಂಗವನರಿದ ಶರಣ.
--------------
ವೇದಮೂರ್ತಿ ಸಂಗಣ್ಣ
ಈಶ್ವರರೂಪ ತಾಳಿ ಜಗ ಜೀವಾಳರುಗಳ ಬಾಗಿಲಲ್ಲಿ ಬೆಳುಗರೆವನ್ನಬರ ಹೋಯಿತ್ತು, ವೇಷವಾಟದಲ್ಲಿ . ಈ ಆಸೆಯ ಬಿಟ್ಟು, ಈಶನ ರೂಪ ತಾಳಿದ ವಸ್ತು, ಆತ ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವು ತಾನೆ.
--------------
ಶಿವಲೆಂಕ ಮಂಚಣ್ಣ
`ಲಿಂಗಮಧ್ಯೇ ಜಗತ್‍ಸರ್ವಂ' ಎಂದುದಾಗಿ- ಜಗವ ಹೊರಗಿರಿಸಿ, ಲಿಂಗವನೊಳಗಿರಿಸಿಕೊಂಡು ಲಿಂಗ ಪ್ರೇಮಿಯಾದ ನಿರುತನು ಜಗ ತೋರುವಲ್ಲಿಯೂ ಅಡಗುವಲ್ಲಿಯೂ ತೋರಿಯಡದಗದೆ ಅನುಪಮಮಹಿಮನಯ್ಯ, ಮಹೇಶ್ವರನು. ಜಗದ ಒಳಹೊರಗೆ ಸರ್ವ ವ್ಯಾಪಕನಾದ ಪರಿಪೂರ್ಣ ಸರ್ವಗತನಯ್ಯ ಲಿಂಗೈಕ್ಯನು, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಬೆಟ್ಟದ ಮೇಲಣ ಗುಂಡು, ಬೆಟ್ಟವ ನುಂಗಿತ್ತು. ಸೃಷ್ಟಿಯ ಮೇಲಣ ಜಗ, ಪೃಥ್ವಿಯ ನುಂಗಿತ್ತು. ಹಸುವಿನ ಗರ್ಭದ ವತ್ಸ, ಹಸುವ ನುಂಗಿತ್ತು. ಹೆಸರಿಡುವುದಿನ್ನೇನೊ ? ಕಣ್ಣೊಳಗಣ ಎರಳೆ ಬಣ್ಣವ ನುಂಗಿದ ಮತ್ತೆ ಬಣ್ಣಿಸಿ ಪೂಜಿಸಿಕೊಂಬುದಿನ್ನೇನೊ ? ಕಣ್ಣಾವಗಾಲದ ಹೊಳೆಯಲ್ಲಿ ಮುಳುಗಿ ಚೆನ್ನುಗೆಟ್ಟಿರಲ್ಲಾ. ಅಣ್ಣಗಳೆಲ್ಲರೂ ಮುಕ್ಕಣ್ಣನ ಪೂಜಿಸಿ ಮೂರುಬಟ್ಟೆಯ ಸುತ್ತಿ, ಊರ ಹೊಕ್ಕು ಆರೈದಿರಯ್ಯಾ, ನೀವಾರಾಧಿಸುವ ಲಿಂಗವ. ಆ ಲಿಂಗದಲ್ಲಿ ಲೀಯವಾದರೆ ಸಂಗಕ್ಕೆ ಒಳಗಾದರು. ನಮ್ಮ ನಿಸ್ಸಂಗಿ ನಿಃಕಳಂಕ ಮಲ್ಲಿಕಾರ್ಜುನನಲ್ಲಿ ದಿಕ್ಕುಗೆಟ್ಟೆನಯ್ಯಾ.
--------------
ಮೋಳಿಗೆ ಮಾರಯ್ಯ
ನಿಜ ಬೋಳಿಂಗೆ ಲೋಚು ಮಾಡಲೇತಕ್ಕೆ? ಚಿದ್ಘನ ಬೋಳಿಂಗೆ ವೈಭವದ ಮದನನ ಶೃಂಗಾರದ ಹಾರವೇತಕ್ಕೆ? ಸಕಲಸುಖ ಬೋಳಿಂಗೆ ಅಖಿಳ ಸುಖಗೋಷಿ* ಏತಕ್ಕೆ? ಸರ್ವಸಂಗಪರಿತ್ಯಾಗ ನಿರ್ಮಲ ಪರಮನಿರ್ವಾಣಿಗೆ ತ್ರಿಬಂಧದಲ್ಲಿ ಸಿಲುಕಿ ಕಂಡವರಿಗೆ ಕಾರ್ಪಣ್ಯಬಡಲೇತಕ್ಕೆ? ಇಂತೀ ಗುಣದಲ್ಲಿ ತಾವು ತಾವು ಬಂದುದನರಿಯದೆ ತಮಗೆ ವಂದಿಸಿ ನಿಂದಿಸುವರಂಗವನರಿಯದೆ ಮತ್ತೆ ಲಿಂಗಾಂಗಿಗಳೆಂದು ನುಡಿವ ಜಗ ಸರ್ವಾಂಗ ಭಂಡರ ಕಂಡು ನುಡಿದಡೆ ಸಮಯಕ್ಕೆ ಹಾನಿ. ಸುಮ್ಮನಿದ್ದಡೆ ಜ್ಞಾನಕ್ಕೆ ಭಂಗ. ಉಭಯವನೂ ಪ್ರತಿಪಾದಿಸದಿದ್ದಡೆ, ತನ್ನಯ ಭಕ್ತಿಗೆ ಇದಿರೆಡೆಗೇಡು. ಇದು ಚುನ್ನವಲ್ಲ, ಎನ್ನಯ ಕೇಡು. ಈ ಗುಣ ಚೆನ್ನಬಸವಣ್ಣಪ್ರಿಯ ಕಮಳೇಶ್ವಲಿಂಗ ಸಾಕ್ಷಿಯಾಗಿ.
--------------
ಶ್ರೀಗುರು ಪ್ರಭುನ್ಮುನೀಶ್ವರ
ಗುರುಪ್ರಸಾದಕ್ಕೆ ಹೇಸುವರು, ಲಿಂಗಪ್ರಸಾದಕ್ಕೆ ಹೇಸುವರು, ಜಂಗಮ ಪ್ರಸಾದಕ್ಕೆ ಹೇಸುರರು, ಭಕ್ತಪ್ರಸಾದಕ್ಕೆ ಹೇಸುವರು. ಹೊಲತಿ ಮಾದಿಗಿತ್ತಿ ಬಲ್ಲವಳಾದರೆ, ಹಲವು ಪರಿಯಲ್ಲಿ ಅವಳೆಂಜಲ ತಿನುತಿಪ್ಪರು ನೋಡಾ ಜಗ. ಹದಿನೆಂಟು ಜಾತಿಯ ಎಂಜಲ ಹೇಹವಿಲ್ಲದೆ ತಿಂಬ ಭವಜಾತಿಗಳಿಗೆ ಪ್ರಸಾದ ದೊರಕೊಂಬುದೆ? ದೊರಕೊಳ್ಳದು. ಆದೇನುಕಾರಣವೆಂದಡೆ: ಭವಭವದಲ್ಲಿ ಯೋನಿಚಕ್ರದಲ್ಲಿ ತಿರುಗುತ್ತಿಪ್ಪರಾಗಿ. ಈ ಅಶುದ್ಧಜೀವಿಗಳಿಗೆ ಶುದ್ಧವಹ ಶಿವಪ್ರಸಾದದಲ್ಲಿ ಸಂಬಂಧ ಸಮನಿಸದು ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ತನ್ನ ಸತಿ, ತನ್ನ ಧನ ಉನ್ನತಿಯಲಿರಬೇಕು. ಅನ್ಯ ಸತಿ, ಅನ್ಯ ಧನದಾಸೆಯನ್ನು ಬಿಡಬೇಕೆಂಬುದು ನೋಡ, ಜಗ. ತನ್ನ ಸತಿಯಾರು ಅನ್ಯಸತಿಯಾರೆಂದು ಬಲ್ಲವರುಂಟೆ ಹೇಳ ಮರುಳೆ, ಬಲ್ಲವರುಂಟುಂಟು ಶಿವಶರಣರು. ತನ್ನ ಶಕ್ತಿಯೆ ಶಿವಶಕ್ತಿ; ಅನ್ಯಶಕ್ತಿಯು ಮಾಯಾಶಕ್ತಿ ಕಾಣ ಮರುಳೆ. ಇದು ಕಾರಣ, ಮಾಯಾಶಕ್ತಿಯ ಸಂಗ ಭಂಗವೆಂದು ನಿವೃತ್ತಿಯ ಮಾಡಿ ಶಿವಶಕ್ತಿಸಂಪನ್ನರಾಗಿ ಶಿವಲಿಂಗವ ನೆರೆವರಯ್ಯ ನಿಮ್ಮ ಶರಣರು. ಇದು ಕಾರಣ, ಶರಣಂಗೆ ಅನ್ಯಸ್ತ್ರೀಯ ಸಂಗ ಅಘೋರನರಕ ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಭಕ್ತಿಯುಳ್ಳನ್ನಕ್ಕ ಇಷ್ಟಲಿಂಗದ ಹಂಗು ಬೇಕು. ಆತ್ಮನುಳ್ಳನ್ನಕ್ಕ ಅರಿವೆಂಬುದ ವಿಚಾರಿಸಬೇಕು. ಮತ್ರ್ಯವೆಂಬುದು ನಾ ಬಲ್ಲನ್ನಕ್ಕ ಕರ್ಕಶದ ಜಗ. ಇದು ಕಾರಣದಲ್ಲಿ, ಕೈಲಾಸವೆಂಬ ಬಟ್ಟೆಯನರಸಬೇಕು. ಎನ್ನ ಸತ್ಯಕ್ಕೆ, ಎನ್ನ ಭಕ್ತಿಗೆ, ಎನ್ನ ಮನಕ್ಕೆ ಎನ್ನ ಮುಕ್ತ್ಯಂಗನೆ, ಎನ್ನ ನಿಶ್ಚಯಕ್ಕೆ ಒಂದು ಗೊತ್ತು ತೋರಾ. ನಿಃಕಳಂಕ ಮಲ್ಲಿಕಾರ್ಜುನ ಎಲ್ಲಿ ಇದ್ದಹನು ಹೇಳಾ ?
--------------
ಮೋಳಿಗೆ ಮಾರಯ್ಯ
ಇನ್ನಷ್ಟು ... -->