ಅಥವಾ

ಒಟ್ಟು 63 ಕಡೆಗಳಲ್ಲಿ , 23 ವಚನಕಾರರು , 50 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕ್ರೀವಿಡಿದು ಗುರುಸಂಬಂದ್ಥಿಯಾಗಿ, ಜಾÕನವಿಡಿದು ಲಿಂಗಸಂಬಂದ್ಥಿಯಾಗಿ. ಘನವಿಡಿದು ಮಹಾಜಾÕನಿಯಾಗಿ, ಅರಿವು ಆಚರಣೆಯ ಕಂಡು, ಜಾÕನ ಮುಕುರವೆಂಬ ಮುಂದಣ ಶ್ರೀಸಂಬಂದ್ಥಿಯಾಗಿ, ಆಚಾರದಲ್ಲಿ ಸಂಪನ್ನನಾಗಿ, ಮಹೇಶ್ವರಸ್ಥಲವನರಿದು, ಅದೇ ಜಂಗಮವಾದ ಬಳಿಕ ನಿರಾಕುಳನಾಗಿ ಆಚರಿಸಿದರೆ ಅನಾದಿ ಜಂಗಮವೆಂಬೆ. ಸಾಮವೇದೇ- ವಿವಚಾಸೋವಿಚಾ ಲಿಂಗಾಲಿಂಗಿ ಚ ಫಲಾದಿ ಬ್ರಹ್ಮರಾಕ್ಷಸ ಸೋವಿಸಂಗಶ್ಚ | ಸೂಕರ ಶತಕೋಟಿ ಜನ್ಮ ಚ ಸೋಪಿ ಕ್ರೀಡಾಲಿಂಗ ಮಲಮೂತ್ರ ಮಾಂಸ ಭುಂಜಿತಃ | ಬ್ರಹ್ಮೇನ ಕೋಟಿ ರಾಕ್ಷಸಃ ಸೋಸಂಗೇನ ಶತಕೋಟಿಗಾರ್ದಭ ಜನ್ಮ ಚ | ಅದೇ ದಾಸಿ ದಾಸೇ ಸೂಕರ ಸಂಗಶಃ ಚ ನಾಃ | ಸೋವ ಮಾತ್ರವೆಂದು ತಂದ ಸ್ತ್ರೀಗಳನು ಶಿಷ್ಯಾದಿ ಪುತ್ರರ ಕೈಯ ಗುರು ತಾಯಿ ಎಂಬ ನಾಮಕರಣಂಗಳನುಂಟುಮಾಡಿ, ತನ್ನ ಅಂಗವಿಕಾರಕ್ಕೆ ತಂದ ಸಂತೆಯ ಡೊಂಬಿತಿಯ ತಂದು, ಹಿರಿಯರಲ್ಲಿ ಸರಿಮಾಡುವ ಜಂಗಮವೆ ಗುರುವೆ? ಅಜಾÕನ ಪುರುಷನಲ್ಲ, ಅವ ಹಿರಿಯತನಕ್ಕೆ ಸಲ್ಲ, ಅವಂಗೆ ಗುರುವಿಲ್ಲ ಲಿಂಗವಿಲ್ಲ, ಜಂಗಮ ಮುನ್ನವೆಯಿಲ್ಲ. ಅವ ಘಟಾತ್ಮನು ಸೋವಿಯ ಸಂಗ ಬೇಡ ಬಿಡಿರಣ್ಣಾ, ಸೋವಿಯ ಸಂಗವ ಮಾಡಿದರೆ ಶತಕೋಟಿ ದಾಸಿಯ ಬಸುರಲ್ಲಿ ಬಂದು, ಹೇಸಿಕೆಯಿಲ್ಲದೆ ಮಲಮೂತ್ರವನು ಹೇಗೆ ಸೂಕರ ಭುಂಜಿಸುವುದೊ ಹಾಂಗೆ ಭುಂಜಿಪನು. ನಾನಾ ಯೋನಿಯ ನರಕುವದು. ಸೋವಿ ಮಾತ್ರೇಣ ಆ ಲಿಂಗನಂ ಗುರು ತಾಯ ಅಪಮಾನ ಸಾಮಾನ್ಯವೆಂದು ಸೋವಿಯ ಸಂಗವ ಮಾಡಿದಡೆ ಎಪ್ಪತ್ತೇಳುಕೋಟಿ ಶ್ವಪಚಯೋನಿ ತಪ್ಪದಯ್ಯ. ಹನ್ನೆರಡು ಕಂಬ ಸಾಕ್ಷಿಯಾಗಿ, ಕಳಕನ್ನಡಿ ಸಾಕ್ಷಿಯಾಗಿ, ತೆಳೆಮಲು ಕಟ್ಟಿ ಸಾಕ್ಷಿಯಾಗಿ, ಆಯಿರಣೆಕೋಲು ಸಾಕ್ಷಿಯಾಗಿ, ಮುತ್ತೈದೆತನದಲ್ಲಿ ಶ್ರೇಷ್ಠಯಾಗಿ, ಜಾÕನ ದೃಕ್ಕಿನಿಂ ತಿಳಿದು, ಅನುಭಾವದ ಮುಖವನರಿದಂತೆ, ಆ ಜಾÕನನೇತ್ರವ ಅರಿದು ಧಾರೆಯನೆರೆಸಿಕೊಂಡು, ಅರಿವಿನಲ್ಲಿ ಇರದೆ ಕುರಿಯ ಹೇಲ ತಿಂಬಂತೆ, ಬಾಯಿಗೆ ಬಂದಂತೆ ಸೋವಿಯ ಸಂಗವ ಮಾಡುವವರ ಸರ್ವಾಂಗವೆಲ್ಲ ಗಣಿಕೆಯ ಯೋನಿಯ ಬಸುರ ನೋಡಾ. ಧಾರೆಯನೆರೆಸಿಕೊಂಡು ಕ್ರೀವಿಡಿದು ನಡೆಯದೆ, ತೊತ್ತಿನ ಮಗನಿಗೆ ಪಟ್ಟ ಕಟ್ಟಿದರೆ ಹಾದಿಯ ಎಲುವ ಕಂಡು ಓಡಿಹೋಗಿ ಗಡಗಡನೆ ಕಡಿವಂತೆ, ಸೋವಿಯ ಎಂಜಲ ತಿಂದವಂಗೆ ಗುರುವಿಲ್ಲ. ಅವ ದೇವಲೋಕ ಮತ್ರ್ಯಲೋಕ ಎರಡಕ್ಕೆ ಸಲ್ಲ. ಆವಾಗಮದಲ್ಲಿ ಉಂಟು, ಗಳಹಿ ಹೇಳಿರೊ, ಮಕ್ಕಳಿರಾ. ನೀವು ಬಲ್ಲರೆ ಕಾಳನಾಯ ಹೇಲ ತಿಂಬಂಗೆ ಹಿರಿಯನೆಂದು, ಹೋತನಂತೆ ಗಡ್ಡವ ಬೆಳಸಿಕೊಂಡು ಗುಡರಗುಮ್ಮನಂತೆ ಸುಮ್ಮನಿರುವಿರಿ. ಗರ್ವತನಕ್ಕೆ ಬಂದು ಹಿರಿಯರೆಂದು ಆಚರಣೆ ನ್ಯಾಯವ ಬಗಳುವಿರಿ. ಸೋವಿಸಂಗದಿಂದ ಕನಿಷ್ಠ ನರಕ ಕಾಣಿರಣ್ಣಾ. ಸೋವಿಯ ಸಂಗವ ಬಿಟ್ಟು ಧಾರೆಯ ಸ್ತ್ರೀಯಳ ನೆರದರೆ, ಆಚಾರವಿಡಿದು ನಡೆದು ಆಚರಣೆಯ ನುಡಿದರೆ ಶುದ್ಧವಾಗುವದಲ್ಲದೆ ತೊತ್ತಿನ ಮಗನಾಗಿ ಎಡೆಯ ಸಮಗಡಣವ ಬೇಡುವ ಪಾತಕರ, ಅವರ ಜಂಗಮವೆಂಬೆನೆ? ಸೋವಿಯ ಸಂಗದಿಂದ ಬಂದುದು ಬ್ರಹ್ಮೇತಿ. ಅಥರ್ವಣ ಸಾಮವೇದ ಯಜುರ್ವೇದ ಋಗ್ವೇದ ಇಂತಪ್ಪ ನಾಲ್ಕು ವೇದದಲ್ಲಿ ಶ್ರುತಿ ಸ್ಮøತಿಗಳಲ್ಲಿ ಆಗಮ ಪುರಾಣಂಗಳಲ್ಲಿ ಸೋವಿಯ ವಾಚ್ಯವೆಂಬುದುಂಟೆ ಪರಮಪಾತಕರಿರಾ? ನೂತನವ ಗಂಟಿಕ್ಕಿ ಜಗಲಿಯೆನ್ನದೆ ಪಟ್ಟಶಾಲೆಯೆಂಬಿಂ ತೊಂಡರಿರಾ. ತೊತ್ತನೊಯ್ದು ತೊತ್ತೆದಾಸಿ ಬಾಯೆನ್ನದೆ ಹೋವಿಯೆಂದು ಬಗಳುವಿರಿ. ಕಲಿಯುಗದಲ್ಲಿ ನೂತನದ ಸೂಳೆಯ ಮಕ್ಕಳು ನೀವು. ಸೋವಿಯ ಸಂಗವ ಮಾಡಿದವನು ಅರಿವುಳ್ಳ ಪುರುಷನಾದರೂ ಆಗಲಿ, ಅರಿದು ಮತ್ತೆ ಅರೆಮರುಳಾದ ಹಿರಿಯರನೇನೆಂಬೆನಯ್ಯಾ. ಅವನು ಪಾತಕನಘೋರಿಗಳು. ಅವರು ಇವರುವನರಿಯದ ಅಘೋರಿಗಳೆಂಬ ಇಂತಪ್ಪ ಸೋವಿಯ ಸಂಗವ ಮಾಡುವ ಬ್ರಹ್ಮೇತಿಕಾರ ಪಂಚಮಹಾಪಾತಕರು ಇಹಪರಕ್ಕೆ ಸಲ್ಲರೆಂದುದು. ನಿಮ್ಮಾಣೆ ನಿಮ್ಮ ಪ್ರಮಥರಾಣೆ, ಇಹವಿಲ್ಲ ಪರವಿಲ್ಲ, ಮುಕ್ತಿಯ ಫಲವಿಲ್ಲ, ಅಘೋರವಲ್ಲದೆ ಮತ್ತೇನೂ ಇಲ್ಲ. ನಿಮ್ಮಾಣೆ ಬ್ಥೀಮಬಂಕೇಶ್ವರಾ.
--------------
ಭೀಮಬಂಕೇಶ್ವರ
ನಿರಾಳದಿಂದ ಸಹಜವಾಯಿತ್ತು. ಸಹಜದಿಂದ ಸೃಷ್ಟಿಯಾಯಿತ್ತು. ಸೃಷ್ಟಿಯಿಂದ ಸಂಸಾರವಾಯಿತ್ತು. ಸಂಸಾರದಿಂದ ಅಜಾÕನವಾಯಿತ್ತು. ಆಜಾÕನದಿಂದ ಬಳಲುವ ಜೀವರ, ಬಳಲಿಕೆಯ ತೊಲಗಿಸಲು ಜಾÕನವಾಯಿತ್ತು. ಜಾÕನದಿಂದಲಾಯಿತ್ತು ಗುರುಕರುಣ. ಗುರುಕರುಣದಿಂದಲಾಯಿತ್ತು ಸುಮನ. ಸುಮನದಿಂದಲಾಯಿತ್ತು ಶಿವಧ್ಯಾನ. ಶಿವಧ್ಯಾನದಿಂದಲಾಯಿತ್ತು ನಿರ್ದೇಹ ನಿರ್ದೇಹದಿಂದಲಾಯಿತ್ತು ಸಾಯುಜ್ಯ. ಸಾಯುಜ್ಯದಿಂದಲಾಯಿತ್ತು ಸರ್ವಶೂನ್ಯ. ಆ ಸರ್ವಶೂನ್ಯದಲ್ಲೊಡಗೂಡಿ ನಿಂದಾತಂಗೆ, ಮರಳಿ ಜನ್ಮ ಉಂಟೆ ಹೇಳಾ?, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಕರ್ಮಿಯ ಕರ್ಮ ನಿಷ್ಕರ್ಮವಲ್ಲೆಂದು ನಂಬಬಾರದಯ್ಯಾ. ಮುಮುಕ್ಷುವಿನ ಮೋಕ್ಷ ಮೂರರಲ್ಲೆಂದು ನಂಬಬಾರದಯ್ಯಾ. ಅಭ್ಯಾಸಿಯ ಮೋಕ್ಷ ಜನ್ಮದ್ವಯದಲ್ಲೆಂದು ನಂಬಬಾರದಯ್ಯಾ. ಅನುಭಾವಿಯ ಮೋಕ್ಷ ಜನ್ಮ ಒಂದರಲ್ಲೆಂದು ನಂಬಬಹುದೆ ಅಯ್ಯಾ? ಆರೂಢನ ಜನ್ಮ ಕಪಿಲಸಿದ್ಧಮಲ್ಲಿಕಾರ್ಜುನನ ಜನ್ಮವೆಂದು ನಂಬಲೇಬೇಕು, ಹಾವಿನಹಾಳ ಕಲ್ಲಯ್ಯಾ.
--------------
ಸಿದ್ಧರಾಮೇಶ್ವರ
ಸಂಸಾರ ಸಂಸಾರ, ಕಾಳಗತ್ತಲೆ ಕಾಳಗತ್ತಲೆ. ಕರ ಹಿರಿದು ಕರ ಹಿರಿದು, ಎಚ್ಚತ್ತಿರು ಎಚ್ಚತ್ತಿರು ಜ್ಞಾನಧನಕ್ಕೆ. ಎಚ್ಚತ್ತಿರು ಎಚ್ಚತ್ತಿರು ಇಂದ್ರಿಯಗಳ್ಳರಿಗೆ. ಕಾಮಃ ಕ್ರೋಧಶ್ಚ ಲೋಭಶ್ಚ ದೇಹೇ ತಿಷ್ಠಂತಿ ತಸ್ಕರಾಃ | ಜ್ಞಾನರತ್ನಾಪಹಾರಾಯ ತಸ್ಮಾತ್ ಜಾಗ್ರತ ಜಾಗ್ರತ. ಜನ್ಮ ದುಃಖಂ ಜರಾ ದುಃಖಂ ನಿತ್ಯಂ ದುಃಖಂ ಪುನಃ ಪುನಃ | ಸಂಸಾರಸಾಗರೋ ದುಃಖಂ ತಸ್ಮಾತ್ ಜಾಗ್ರತ ಜಾಗ್ರತ || ಎಂದುದಾಗಿ, ಸಲೆ ಜೀವಿತಗೊಂಡ ಸೊಡ್ಡಳ ಆಳು ಭಲಾ ಭಲಾ ಎನ್ನುತ್ತಿರಾ.
--------------
ಸೊಡ್ಡಳ ಬಾಚರಸ
ನವಮಾಸಕ್ಕೆ ಶ್ರೋತ್ರಾದಿಗಳೈದು, ಶಬ್ದಾದಿಗಳೈದು, ಮಂಡಲಮೂರು, ಗುಣಮೂರು, ವ್ಯಾದ್ಥಿಮೂರು, ಈಷಣಮೂರು, ನಾಡಿಹತ್ತು, ವಾಯುಹದಿನಾಲ್ಕು, ಕ್ಲೇಷಂಗಳೈದು, ಧಾತುಗಳೇಳು, ಮದವೆಂಟು, ಸುಖದುಃಖಂಗಳೆರಡು, ಎಪ್ಪತ್ತೆರಡುಸಾವಿರ ನಾಡಿಗಳು, ಎಂಬತ್ತೆಂಟುಕೋಟಿ ರೋಮದ್ವಾರಂಗಳು, ಎಂಬತ್ನಾಲ್ಕುನೂರುಸಾವಿರ ಸಂದುಗಳು, ಇಪ್ಪತ್ತೊಂದುಸಾವಿರದಾರುನೂರು ಶ್ವಾಸಂಗಳು, ಮೂವತ್ತೆರಡು ಲಕ್ಷಣಂಗಳು, ಐವತ್ತಾರಕ್ಷರಂಗಳು, ಅರುವತ್ನಾಲ್ಕು ಕಲೆ, ಜ್ಞಾನಂಗಳು ಕೂಡಿ ಸುಜ್ಞಾನಸಂಪನ್ನನಾಗಿ ಪೂರ್ವಜನ್ಮದಲ್ಲಿ ಎಂಬತ್ನಾಲ್ಕುನೂರುಸಾವಿರ ಜನ್ಮದಲ್ಲಿ ಬಂದ ಜನ್ಮವ ವಿವೇಕಿಸುತ್ತಿಹುದು ನೋಡಾ. ಅದೆಂತೆಂದಡೆ: ಮಾನವಜನ್ಮ ಒಂಬತ್ತುಸಾವಿರ ಜನ್ಮ. ಉರುವ ಜೀವಜನ್ಮ ಹನ್ನೊಂದುಸಾವಿರಜನ್ಮ. ಜಲಚರ ಜೀವಜನ್ಮದಲ್ಲಿ ಎಂಬತ್ನಾಲ್ಕುನೂರುಸಾವಿರಜನ್ಮದಲ್ಲಿ ಹತ್ತುಸಾವಿರ ಜನ್ಮ. ಹಾರುವ ಪಕ್ಷಿಗಳ ಜೀವಜನ್ಮದಲ್ಲಿ ಹತ್ತುಸಾವಿರಜನ್ಮ. ಚತುಷ್ಪಾದಜೀವರಾಶಿಗಳ ಜನ್ಮದಲ್ಲಿ ಹತ್ತುಸಾವಿರಜನ್ಮ. ದೈತ್ಯ ಜೀವಜನ್ಮದಲ್ಲಿ ಹದಿನಾರುಸಾವಿರಜನ್ಮ. ಸ್ಥಾವರಂಗಳ ಜನ್ಮದಲ್ಲಿ ಹದಿನೆಂಟುಸಾವಿರಜನ್ಮ. ಇಂತು ಎಂಬತ್ನಾಲ್ಕುನೂರುಜನ್ಮ ಅಂಡಜ ಸ್ವೇದಜ ಉದ್ಬಿಜ ಜರಾಯುಜವೆಂಬ ನಾಲ್ಕು ಯೋನಿಯಲ್ಲಿ ಜನಿಸಿದನು. ಇನ್ನು ಹುಟ್ಟಿದಾಕ್ಷಣದಲ್ಲಿಯೆ ಮರಣ, ಮರಣದಾಕ್ಷಣದಲ್ಲಿಯೇ ಜನನವೆಂದರಿದು ಸ್ಮರಿಸುತ್ತಿಹುದು ನೋಡಾ. ಇದಕ್ಕೆ ಈಶ್ವರ ಉವಾಚ : ``ಮಾಸೇಕಂ ನವಮೇ ಪ್ರಾಪ್ತೇ ಗರ್ಭೇತ ತತ್‍ಸ್ಮರತಿ ಸ್ವಯಂ | ಮೃತಸ್ಯಾಹಂ ಪುನರ್ಜಾತಃ ಜಾತಸ್ಯಾಹಂ ಮೃತಃ ಪುನಃ | ನಾನಾಯೋನಿಸಹಸ್ರೇಷು ಮಯಾ ದೃಷ್ಟಮನೇಕಶಃ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಆವ ಜಾತಿಯಾದಡೂ ಆಗಲಿ; ಪುರಾತನ ಚಾರಿತ್ರದಲ್ಲಿ ನಡೆದು, ಗುರುಲಿಂಗಜಂಗಮಕ್ಕೆ ಅರ್ಥಪ್ರಾಣಾಭಿಮಾನಮಂ ಕೊಟ್ಟು, ಅಹಂಕಾರವಳಿದಿಹಂತಹ ಮಹಾತ್ಮರ ಬಾಯ ತಂಬುಲವ ಮೆಲುವೆ, ಬೀಳುಡಿಗೆಯ ಹೊದಿವೆ. ಅವರ ಪಾದರಕ್ಷೆಗಳೆರಡನೂ, ಮಂಡೆಯ ಮೇಲೆ ಹೊತ್ತುಕೊಂಡು ಬದುಕುವೆನಯ್ಯಾ. ಆ ಗಣಂಗಳ ದಾಸನ ದಾಸ ನಾನು, ಜನ್ಮ ಜನ್ಮದಲ್ಲಿ ಆಗುವೆ ಕಾಣಾ ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ಶಿವಲಿಂಗ ಸಂಸಾರಸಂಪನ್ನ ಶರಣನು ಲಿಂಗಮುಖದಲ್ಲಿ ಭೋಗಿಸುತ್ತಿಹನು ಮುಟ್ಟಿದ ಸುಖಂಗಳನೆಲ್ಲ. ಲಿಂಗ ಬೇರೆ ಶರಣ ಬೇರೆ ಎಂದು ನುಡಿವ ಅಸಂಸ್ಕಾರಿ ಭೂತದೇಹಿಗಳು ಭಕ್ತ ಜಂಗಮರೆಂದು ಮುಖವ ನೋಡಿದರೆ ಹಂದಿಯ ಜನ್ಮ ತಪ್ಪದೆಂದು ಶ್ರುತಿ ಸಾರುತಿದೆ : 'ಪ್ರೇತಲಿಂಗ ಸಂಸ್ಕಾರಿಣಾಂ ಭೂತಪ್ರಾಣಿ ನಜಾಯತೇ | ಪ್ರಭುತೇ ಮುಖಂ ದೃಷ್ಟ್ವಾ ಕೋಟಿಜನ್ಮನಿ ಸೂಕರಃ||' ಇಂತು ಪ್ರೇತಲಿಂಗ ಸವಳು ಭುಂಜಿಸುವುದಲ್ಲದೆ ದ್ವಯವಲ್ಲದೆ ಪ್ರಸಾದವಲ್ಲವೆಂದ ನಿಮ್ಮ ಶರಣ ಚೆನ್ನಯ್ಯಪ್ರಿಯ ನಿರ್ಮಾಯಪ್ರಭುವೆ.
--------------
ಚೆನ್ನಯ್ಯ
ದೀಪದಂತಿಹ ಜನ್ಮ ಬಂದುದು ತಿಳಿಯಬಾರದು, ಹೋಹುದು ತಿಳಿಯಬಾರದು. ಮೇಘದಂತಿಹ ಜನ್ಮ ಬಂದುದು ತಿಳಿಯಬಾರದು, ಹೋಹುದು ತಿಳಿಯಬಾರದು. ಶಿಶುವಿನಂತಹ ಜನ್ಮ ಬದುಕುವುದು ್ಕಳಿಯದು, ಬದುಕಿ ಬಾಳೀತೆಂಬುದು ತಿಳಿಯಬಾರದು ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಬ್ರಹ್ಮಸಭೆ ನೆರೆದಲ್ಲಿ ಬ್ರಹ್ಮವಿತ್ತುಗಳು ಬ್ರಹ್ಮತ್ವವಡೆದು, ತಮ್ಮ ವಚನಬ್ರಹ್ಮರೆನಿಸಿಕೊಂಡು ನೆಮ್ಮುವರು ವಿಷ್ಣುವನು- ತಮ್ಮ ದೈವವ ಬಿಡುವುದಾವುದುಚಿತ ವಿಷ್ಣು ಶಿವಭಕ್ತನಾಗಿ ನಿಷ್ಠೆಯಿಂದ ಕಣ್ಣನಿತ್ತು ಹಡೆದನು ಶಿವಭಕ್ತಿಯಿಂದ. ಕಷ್ಟಜಾತಿ ಜೀವಿಗಳಿಗೆ ಮಟ್ಟಿ ಎಂತು ಬಂದತ್ತೊ ! ಮುಟ್ಟರೊಂದುವನು ಮೂವಿಧಿಬಟ್ಟರೊ ! ಹುಸಿವನೆ ಹೊಲೆಯನೆಂದು ವಚನವುಂಟು ಲೋಕದಲ್ಲಿ. ಹುಸಿದಜನ ಶಿರ ಹೋಯಿತ್ತಾದಿಯಲ್ಲಿ, ಎಸವೋದ ಕಿರುಪಶುವನುಸರಲೀಯದೆ ವಿ[ದಾರಿ]ಸಿ ತಿಂಬ ಜನ್ಮ ಅದಾವ ಫಲವೋ. ದಕ್ಷ ಯಾಗವ ಮಾಡಿ ನಿಕ್ಷೇತ್ರ ನೆರೆದ ಅಕಟಕಟಾ, ಕೇಳಿಯೂ ಏಕೆ ಮಾಣಿರೊ ಮಮಕರ್ತ ಕೂಡಲಸಂಗನ ಶರಣರು ಅಕ್ಷಯರದ್ಥಿಕರು, ವಿಪ್ರರು ಕೀಳು ಜಗವೆಲ್ಲರಿಯಲು !
--------------
ಬಸವಣ್ಣ
ಲಿಂಗವಂತರ ಲಿಂಗಾಚಾರಿಗಳ ಅಂಗಳಕ್ಕೆ ಹೋಗಿ ಲಿಂಗಾರ್ಪಿತವ ಮಾಡುವಲ್ಲಿ ಸಂದೇಹವಿಲ್ಲದಿರಬೇಕು. ಅದೆಂತೆಂದಡೆ: 'ಭಿಕ್ಷಲಿಂಗಾರ್ಪಿತಂ ಗತ್ವಾ | ಭಕ್ತಸ್ಯ ಮಂದಿರಂ ತಥಾ | ಜಾತಿ ಜನ್ಮ ರಜೋಚ್ಫಿಷ್ಟಂ | ಪ್ರೇತಸ್ಯ ವಿವರ್ಜಿತಃ || ' ಇಂತೆಂದುದಾಗಿ, ಕಾಣದುದನೆ ಚರಿಸದೆ, ಕಂಡುದನು ನುಡಿಯದೆ. ಕಾಣದುದನು ಕಂಡುದನು ಒಂದೆಸಮವೆಂದು ಅರಿಯಬಲ್ಲರೆ ಕುಂಭೇಶ್ವರಲಿಂಗವೆಂಬೆನು.
--------------
ಗುಂಡಯ್ಯಗಳ ಪುಣ್ಯಸ್ತ್ರೀ ಕೇತಲದೇವಿ
ಅಯ್ಯಾ, ಗುರುದ್ರವ್ಯ, ಗಣದ್ರವ್ಯ, ಭಕ್ತದ್ರವ್ಯ, ಚರದ್ರವ್ಯ, ಪರದ್ರವ್ಯ, ರಾಜದ್ರವ್ಯ, ತಂದೆ-ತಾಯಿ ಬಂಧು-ಬಳಗ ಭಾವ-ಮೈದುನ ನಂಟುತನದ ದ್ರವ್ಯ, ಕುಂತ ನಿಂತ ಸಹಾಸದ್ರವ್ಯ, ನೋಡಕೊಟ್ಟದ್ರವ್ಯ, ನೂರೊಂದುಕುಲ ಹದಿನೆಂಟು ಜಾತಿಯ ದ್ರವ್ಯ, ಬೀದಿ ಬಾಜಾರದಲ್ಲಿ ಬಿದ್ದ ದ್ರವ್ಯ, ಹಾದಿಪಥದಲ್ಲಿ ಬಿದ್ದ ದ್ರವ್ಯ, ಹಕ್ಕಿಪಕ್ಕಿ ತಂದಿಟ್ಟ ದ್ರವ್ಯ, ಮದುವೆ ಶುಭಶೋಭನದಾಸೋಹದ ದ್ರವ್ಯ ಮೊದಲಾಗಿ ಕಳ್ಳಕಾಕರ ಸಂಗದಿಂದ ಚೋರತನದಿಂದಪಹರಿಸಿ, ಜನ್ಮ ಜನ್ಮಾಂತರದಲ್ಲಿ ಭವಪಾತಕಕ್ಕೆ ಗುರಿಯಾಯಿತಯ್ಯ ಎನ್ನ ಪಾಣೇಂದ್ರಿಯವು. ಇಂಥ ಅಜ್ಞಾನದಿಂದ ತೊಳಲುವ ಜನ್ಮ ಜಡತ್ವವನಳಿದುಳಿದು ನಿಮ್ಮ ಸದ್ಭಕ್ತ ನಿಜಶರಣ ದೇವರದಾಸಿಮಯ್ಯನ ದಾಸಿಯ ಪಾದವನೊರಸಿ ಬಾಳುವಂತೆ ಮಾಡಯ್ಯ ಕರುಣಾಳಿ ಎನ್ನಾಧಾರಮೂರ್ತಿ ಶ್ರೀಗುರುಲಿಂಗಜಂಗಮವೆ ಹರಹರ ಶಿವಶಿವ ಜಯಜಯ ಕರುಣಾಕರ, ಮತ್ಪ್ರಾಣನಾಥ ಮಹಾ ಶ್ರೀಗುರುಸಿದ್ಧಲಿಂಗೇಶ್ವರ.
--------------
ಬಸವಲಿಂಗದೇವ
ಅಂಗದ ಮೇಲೆ ಲಿಂಗವಿಪ್ಪ ಶಿವಭಕ್ತನ ಕಂಡರೆ ಸಂಗಯ್ಯನ ಸಮವೆಂಬೆನಯ್ಯಾ. ಲಿಂಗವಿಲ್ಲದೆ ನಾಲ್ಕು ವೇದವನೋದುವ ವಿಪ್ರನಾದರೂ ಆಗಲಿ, ಹೊಲೆಮಾದಿಗರೇಳು ಜಾತಿಗಿಂತ ಕಡೆಯೆಂಬೆನಯ್ಯಾ. ತಾಯಿಲ್ಲದ ಮಕ್ಕಳಂತೆ, ಗಂಡನಿಲ್ಲದ ಮುಂಡೆಗೆ ಮುತ್ತೈದೆತನವುಂಟೇನಯ್ಯಾ ? ಲಿಂಗವಿಲ್ಲದ ಭವಿ ಏನನೋದಿ ಏನ ಹಾಡಿದರೂ ವ್ಯರ್ಥ. ಸಾಕ್ಷಿ :``ಮಾತಾ ನಾಸ್ತಿ ಯಥಾ ಸುತಂ ಪತಿರ್ನಾಸ್ತಿ ಯಥಾ ನಾರೀ | ಲಿಂಗಂ ನಾಸ್ತಿ ಯಥಾ ಪ್ರಾಣಂ ತಸ್ಯ ಜನ್ಮ ನಿರರ್ಥಕಂ ||'' ಇಂತೆಂಬುದನರಿಯದೆ ವಾಗದ್ವೈತದಿಂದ ತನುಲಿಂಗ ಮನಲಿಂಗ ಪ್ರಾಣಲಿಂಗವೆಂಬ ಹೊಲೆಯರ ಮುಖವನೆನಗೊಮ್ಮೆ ತೋರದಿರಯ್ಯಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಕೇಳಾ ಹೇಳುವೆನು: ಮಹಾಘನಲಿಂಗಭಕ್ತನು ಆಚರಿಸುವ ಸದ್ವರ್ತನನಿರ್ಣಯವ, ಅದು ಪರಶಿವಲಿಂಗದ ನಿತ್ಯಪದದ ಮಾರ್ಗ: ಗೌರವಂ ಲೈಂಗಿಕಂ ಚಾರಂ ಪ್ರಸಾದಂ ಚರಣಾಂಬುಕಂ ಭೌಕ್ತಿಕಂ ಚ ಮಯಾ ಪ್ರೋಕ್ತಂ ಷಡ್ವಿಧಂ ವ್ರತಮಾಚರೇತ್ ಗುರುದೇವಃ ಶಿವಃ ಸಾಕ್ಷಾತ್ ತಚ್ಚಿಷ್ಯೋ ಜ್ಞಾನಸಾರವಿತ್ ತ್ರಿವಿಧಂ ಹೃದಿ ಸಂಭಾವ್ಯ, ಕೀರ್ತಿತಂ ಗೌರವಂ ವ್ರತಂ ಗುರುಣಾ ಚಾರ್ಪಿತಂ ಲಿಂಗಂ ಪ್ರಾಣಲಿಂಗಂ ಪ್ರಕಥ್ಯತೇ ತಥೈವ ಭಾವನಾದ್ವೈತಂ ತದ್ವ್ರತಂ ಲೈಂಗಿಕಂ ಸ್ಮøತಂ ಗುರುಲಿಂಗಚರಾಧೀನಂ ನಿರ್ಮಾಲ್ಯಂ ಭೋಜನಾದಿಕಂ ತಸ್ಯಾನುಭಾವನಂ ದೇವಿ ತತ್ಪರಂ ವ್ರತಮುತ್ತಮಂ ಗುರುಪಾದಾಬ್ಜಸಂಭೂತಂ ಉಜ್ಜಲಂ ಲೋಕಪಾವನಂ ತಜ್ಜಲಸ್ನಾನಪಾನಾದಿ ತದ್ವ್ರತಂ Z್ಪರಣಾಂಬುಕಂ|| ಗುರುಲಿಂಗಚರಾಣಾಂ ಚ ಪ್ರಸಾದಂ ಪಾದವಾರುಣಂ| ಪರ್ಯಾಯಭಜನಂ ಭಕ್ತ್ಯಾ ತದ್ವ್ರತಂ ಸ್ಮøತಂ|| ಕ್ರಿಯಾದ್ವೈತಂ ನ ಕರ್ತವ್ಯಂ ಭಾವಾದ್ವೈತಂ ಸಮಾಚರೇತ್| ಕ್ರಿಯಾಂ ನಿರ್ವಹತೇ ಯಸ್ತು ಭಾವಶುದ್ದಂ ತು ಶಾಂಕರಿ|| ಎಚಿದುದಾಗಿ, ಪೂಜಿತೈಃ ಶಿವಭಕ್ತೈಶ್ಚ ಪರಕರ್ಮ ಪ್ರಪಚಿಚಿತಂ| ಪುಣ್ಯಸ್ಸಶಿವಧರ್ಮಃ ಸ್ಯಾತ್ ವಜ್ರಸ್ರಚಿಸ್ಸಮಬ್ರವೀತ್|| ಪಾತ್ರಶಾಸನಯೋರ್ಮಧ್ಯೇ ಶಾಸನಂ ತು ವಿಶಿಷ್ಯತೇ| ತಸ್ಮಾತ್ ಶಾಸನಮೇವಾದೌ ಪೂಜ್ಯತೇ ಚ ಶವೋ ಯಥಾ|| ಗುಣವತ್ಪಾತ್ರಪ್ರಜಾಯಾಂ ವರಂ ಶಾಸನಪೂಜನಂ| ಶಾಸನಂ ಪೂಜಾಯೇತ್ತಸ್ಮಾಸವಿZ್ಫರಂ ಶಿವಾಜÐಯಾ|| ಸ ನರೋ ಭೃತ್ಯಸದ್ಭಕ್ತಃ ಪತಿಕರ್ಮಾ ಚ ಜಂಗಮಃ| ರೂಪಂ ಚ ಗುಣಶೀಲಂ ಚ ಅವಿZ್ಫರಂ ಶುಭಂ ಭವೇತ್|| ಗುಣೋಗುಣಶ್ಚ ರೂಪಂ ಚ ಅರೂಪಂ ಚ ನ ವಿದ್ಯತೇ ಪಶ್ಶತ್ಯಮೋಹಭಾವೇನ ಸ ನರಃ ಸುಖಮೇಧತೇ ದುಶ್ಶೀಲಃ ಶೀಲಸರ್ವಜ್ಞಂ ಮೂರ್ಖಭಾವೇನ ಪಶ್ಯತಿ ಪಶ್ಯಂತಿ ಲಿಂಗಭಾವೇನ ಸದ್ಭಕ್ತಾ ಮೋಕ್ಷಭಾವನಾಃ ಯಥಾ ಲಿಂಗಂ ತಥಾ ಭಾವಃ ಸತ್ಯಂ ಸತ್ಯಂ ನ ಸಂಶಯಃ ಯಥಾ ಭಕ್ತಿಸ್ತಥಾ ಸಿದ್ಧಿಃ ಸತ್ಯಂ ಸತ್ಯಂ ನ ಸಂಶಯಃ ಸತ್ಯಭಾವಿ ಮಹಾಸತ್ಯಂ ಸತ್ಯಂ ಸ್ಯಾಚ್ಚಿವಲಕ್ಷಣಂ ಮಿಥ್ಯಭಾವೀತ್ವಹಂ ಮಿಥ್ಯಾ ಸತ್ಯಂ ಸ್ಯಾಚ್ಚಿವಲಕ್ಷಣಂ ದಕ್ಷಿಣೇ ತು ಮಹಾದೇವೇ ಪದಾರ್ಥೇ ಕಿಂ ಪ್ರಯೋಜನಂ ಅದಕ್ಷೇ ತು ಮಹಾದೇವೇ ಪದಾರ್ಥೇ ಕಿಂ ಪ್ರಯೋಜನಂ ಅರಿರ್ಮಿತ್ರಂ ವಿಷಂ ಪಥ್ಯಂ ಅಧರ್ಮೋ ಧರ್ಮವದ್ಭವೇತ್ ಪ್ರಸನ್ನ ಏವ ದೇವೇ ತು ವಿಪರೀತಂ ಭವೇದ್ಧೃವಂ ಸ್ಥಾವರಂ ಜಂಗಮಶ್ಚೈವ ದ್ವಿವಿಧಂ ಲಿಂಗಮುಚ್ಚ್ಯತೆ ಜಂಗಮಸ್ಯಾವಮಾನೇನ ಸ್ಥಾವರಂ ನಿಷ್ಪಲಂ ಭವೇತ್ ನ ಮೇ ಪ್ರಿಯಶ್ಚತುರ್ವೇದೀ ಮದ್ಭಕ್ತಃ ಶ್ವಪಚೋ[s]ಪಿ ವಾ ತಸ್ಮೈ ದೇಯಂ ತತೋ ಗ್ರಾಹ್ಯಂ ಸಃ ಪೂಜ್ಯಶ್ಚ ಯಥಾ ಹ್ಯಹಂ ಸದ್ಗುರುರ್ಭಾವಲಿಂಗಂ ಚ ತಲ್ಲಿಂಗಂ ಚಿತ್ಸ್ವರೂಪಕಂ ತದ್ಭಾವಶುದ್ಧಿಸಿದ್ಧಸ್ಯ ಸದ್ಯೋನ್ಮುಕ್ತಿಃ ಸುಖಂ ಭವೇತ್ ಗುರುಃ ಪರಶಿವಶ್ಚೈವ ಜಂಗಮೋ ಲಿಂಗಮೇವ ಚ ತದ್ಭಾವಶುದ್ಧಿಸಿದ್ಧಸ್ಯ ಸದ್ಯೋನ್ಮುಕ್ತಿಃ ಸುಖಂ ಭವೇತ್ ಲಿಂಗಾಂಗೀ ಗುರುರ್ಲಿಂಗಂ ತ್ರಿವಿಧಂ ಲಿಂಗಮುಚ್ಯತೇ .................................................................. ತತ್ತ್ವದೀಪಿಕಾಯಾಂ ಪ್ರಸಾದೋ ಮುಕ್ತಿಮೂಲಂ ಚ ತತ್ಪ್ರಸಾದಸ್ತ್ರಿಧಾ ಮತಃ ಶಿವಃ ಸರ್ವಾಧಿದೇವಃ ಸ್ಯಾತ್ ಸರ್ವಕರ್ಮ ಶಿವಾಜ್ಞಯಾ ತತ್ತ್ವದೀಪಿಕಾಯಾಂ ಮಾಹೇಶ್ವರಸ್ಯ ಸಂಗಾದ್ಧಿ ಶಿವಯೋಗಂ ಲಭೇನ್ನರಃ ಪ್ರಸಾದಂ ತ್ರಿವಿಧಂ ಗ್ರಾಹ್ಯಂ ಮಹಾಪಾಪವಿನಾಶಕಂ ತತ್ತ್ವದೀಪಿಕಾಯಾಂ ಧನಪುತ್ರಕಲತ್ರಾದಿಮೋಹಂ ಸಂತ್ಯಜ್ಯ ಯೋ ನರಃ ಶಿವಭಾವೇನ ವರ್ತೇತ ಸದ್ಯೋನ್ಮುಕ್ತಸ್ಸುಖೀ ಭವೇತ್ ಪ್ರಾಣಲಿಂಗೇತ್ವವಿಶ್ವಾಸಾತ್ ಭಕ್ತಿಮುಕ್ತಿದ್ವಯಂ ನ ಚ ಪ್ರಾಣಲಿಂಗಸ್ಯ ವಿಶ್ವಾಸಾತ್ ಸಿದ್ದಿಃ ಸ್ಯಾತ್ ಭಕ್ತಿಮುಕ್ತಿದಾ ಪ್ರಾಣಲಿಂಗಮವಿಶ್ವಸ್ಯ ತೀರ್ಥಲಿಂಗಮುಪಾಸತೇ ಸ ನರಃ ಸ್ವರ್ಗಮಾಪ್ನೋತಿ ಗಣತ್ವಂ ನ ಪ್ರಯುಜ್ಯತೇ ಪ್ರಾಣಲಿಂಗಸಮಾಯುಕ್ತಃ ಪರಹಸ್ತಸಮರ್ಚನಾತ್ ತತ್ಪೂಜಾ ನಿಷ್ಫಲಾ ದೇವಿ ರೌರವಂ ನರಕಂ ವ್ರಜೇತ್ ಪ್ರಾಣಲಿಂಗಸಮಾಯುಕ್ತಃ ಪರಹಸ್ತೇ ದದಾತಿ ಚೇತ್ ನಿಮಿಷಾರ್ಧವಿಯೋಗೇನ ವಿಶೇಷಂ ಪಾತಕಂ ಭವೇತ್ ಪ್ರಾಣಲಿಂಗಸಮಾಯುಕ್ತ ಏಕಭುಕ್ತೋಪವಾಸತಃ ಗುರುಲಂಘನಮಾತ್ರೇಣ ಪೂಜಾ ಯಾ ನಿಷ್ಪಲಾ ಭವೇತ್ ಇಷ್ಟಲಿಂಗಂ ಸಮುತ್ಸೃಜ್ಯ ಅನ್ಯಲಿಂಗಸ್ಯ ಪೂಜನಾತ್ ಸ್ವೇಷ್ಟಂ ನ ಲಭತೇ ಮತ್ರ್ಯಃ ಪರಂ ತತ್ತ್ವಂ ನಿಹತ್ಯಸೌ ಅತ್ಯಂತಮಹಿಮಾರೂಢಂ ಶಿವಮಾಹಾತ್ಮ್ಯವಿಸ್ತರಂ ಯೋ[s]ಪಿ ದೃಷ್ಟ್ವಾಪ್ಯವಿಶ್ವಾಸೀ ಸ ಭಕ್ತೋ ನರಕಂ ವ್ರಜೇತ್ ಅಥ ಯೋ ಯಾದವ ಶ್ಚೈವ ರಾಜಾನಶ್ಯವೋ ಗ್ರಹಾ ನೈವ ಪೀಡ್ಯಸ್ತು ಯತ್ಕೃತ್ವಾ ನರಂ ಹಾರಪರಾಯಣಂ ಹಿರಣ್ಯರೂಪದೇಹಸ್ತಂ ಹಿರಣ್ಯಪತಿಪ್ರಾಣಿನಾಂ ಆಶಾದನ್ಯಂ ಹಿರಣ್ಯಂ ಚ ತದ್ದೇಹಂ ಲಿಂಗವರ್ಜಯೇತ್ ಘೃಣಾಮೂರ್ತಿರ್ಮಹಾದೇವೋ ಹಿರಣ್ಯೋದ್ಭಾಹು ಶಂಕರಃ ವರದಾಭಯ ಮತ್ಸ್ವಾಮಿನ್ ಯೇ ಆಶಾದನ್ಯಂ ವಿವರ್ಜಯೇತ್ ಆಶಾ ಚ ನರಕಂ ಚೈವ ನಿರಾಶಾ ಮುಕ್ತಿರೇವ ಹಿ ಆಶಾನಿರಾಶಯೋರ್ನಾಸ್ತಿ ತತ್ಸುಖಸ್ಯ ಸಮಂ ಪರಂ ಶಿವರಹಸ್ಯೇ ಜಪಶ್ರಾಂತಃ ಪುನಧ್ರ್ಯಾಯೇತ್ ಧ್ಯಾನಶ್ರಾಂತಃ ಪುನರ್ಜಪೇತ್ ಜಪಧ್ಯಾನಾದಿಯೋಗೇನ ಶಿವಃ ಕ್ಷಿಪ್ರಂ ಪ್ರಸೀದತಿ ಗಚ್ಚನ್ ತಿಷ*ನ್ ಸ್ವಪನ್ ಜಾಗ್ರನ್ ಉನ್ಮಿಷನ್ ನಿಮಿಷನ್ನಪಿ ಶುಚಿರ್ವಾಪ್ಯಶುಚಿರ್ವಾಪಿ ಶಿವಂ ಸರ್ವತ್ರ ಚಿಂತಯೇತ್ ಅಪವಿತ್ರಃ ಪವಿತ್ರೋ ವಾ ಸರ್ವಾವಸ್ಥಾಂ ಗತೋ[s]ಪಿ ವಾ ಯಸ್ಸ್ಮರೇತ್ ಸತತಂ ರುದ್ರಂ ಸ ಬಾಹ್ಯಾಭ್ಯಂತರಃ ಶುಚಿಃ ದುರ್ಲಭಂ ಮಾನುಷಂ ಜನ್ಮ ವಿವೇಕಸ್ತ್ವತಿದುರ್ಲಭಃ ದುರ್ಲಭಾ ಚ ಶಿವೇ ಭಕ್ತಿಃ ಶಿವಜ್ಞಾನಂ ತು ದುರ್ಲಭಂ ಇಂ್ರಯಪ್ರೀತಿದಾತಾರಃ ಪುಮಾಂಸೋ ಬಹವಃ ಕಿಲ ಶಿವಜ್ಞಾನಾರ್ಥದಾತಾರಃ ಪುಮಾಂಸೋ ಲೋಕದುರ್ಲಭಾಃ ಲಿಂಗಭಕ್ತ್ಯಾ ಮನಃ ಪೂತಂ ಅಂಗಂ ಪೂತಂ ತು ದೇಶಿಕಾತ್ ಭಾವಸ್ತು ಜಂಗಮಾತ್ ಪೂತಸ್ತ್ರಿವಿಧಾ ಭಕ್ತಿರುತ್ತಮಾ ಅಷ್ಟವಿಧಾರ್ಚನಂ ಲಿಂಗೇ ಅಷ್ಟಭೋಗಸ್ತು ಜಂಗಮೇ ಲಿಂಗೇ ಷೋಡಶೋಪಚಾರಾಃ ಸರ್ವೇ ತಾತ್ಪರ್ಯಜಂಗಮೇ ಮನೋ ಲೀನಂ ಮಹಾಲಿಂಗೇ ದ್ರವ್ಯಂ ಲೀನಂ ತು ಜಂಗಮೇ ತನುರ್ಲೀನೋ ಗುರೌ ಲಿಂಗೇ ಇತಿ ಭಕ್ತಸ್ಯ ವೈ ಧೃವಂ ಸಕಲಂ ಭಕ್ತರೂಪಂ ಚ ನಿಷ್ಕಲಂ ಶಿವರೂಪಕಂ ಸಕಲಂ ನಿಷ್ಕಲಂ ಮಿಶ್ರಂ ಚರರೂಪಂ ವಿಧೀಯತೇ ಸತ್ಕ್ರಿಯಾಂ ಪೂಜಯೇತ್ಪ್ರಾತರ್ಮಧ್ಯಾಹ್ನೇ ಭೋಜನಾವಧಿಂ ಸಾಯಂಕಾಲೇ ಮಹಾಪೂಜಾಂ ತತ್ಕ್ರಮಸ್ತು ವಿಶಿಷ್ಯತೇ ಮನಃಪೂತಾರ್ಚನಂ ಭಕ್ತ್ಯಾ ಪ್ರಾತಃಕಾಲವಿಧಿಕ್ರಮಃ ಸುಜಲಂ ಸುರಸಂ ಚೈವ ಯಥಾಸಂಭವದ್ರವ್ಯಕಂ ಅರ್ಪಯೇಚ್ಚರಲಿಂಗಾಯ ಮಧ್ಯಾಹ್ನೇ ಪೂಜನಕ್ರಮಃ ಗಂಧಂ ಪುಷ್ಪಂ ಚ ಕರ್ಪೂರಂ ಚಂದನಂ ಲೇಪನಂ ತಥಾ ಅರ್ಪಯೇತ್ ಫಲತಾಂಬೂಲಂ ಸಂಧ್ಯಾಪೂಜಾರ್ಚನಾವಿಧಿಕ್ರಮಃ ಧೂಪಮುಷ್ಣಾಧಿಕಂ ಸರ್ವಂ ಪ್ರಾತಃಕಾಲಾರ್ಚನಾವಿಧಿಃ ಪೂಜೋಪಚಾರಸ್ಸರ್ವೇಷಾಂ ಶೈತ್ಯಂ ಮಧ್ಯಾಹ್ನಸಂಧಿಷು ತ್ರಿಸಂಧ್ಯಾ ತ್ರಿಷು ಕಾಲೇಷು ಉಷ್ಣಂ ನೈವೇದ್ಯಮುತ್ತಮಂ ಯಥಾಸಂಭವಂ ಸಂಧ್ಯಾಯಾಂ ನಾದಾದೀನಿ ವಿಧಿಕ್ರಮಾತ್ ಶರಸಂಯುಕ್ತಪೂಜಾಯಾಂ ಕೇವಲಂ ನರಕಂ ಭವೇತ್ ನಿಶ್ಶಠಃ ಪೂಜಕಶ್ಚೈವ ಕೇವಲಂ ಮುಕ್ತಿಕಾರಣಂ ಅಷ್ಟಾದಶಾನಾಂ ಜಾತೀನಾಂ ಶಠಕರ್ಮಸ್ವಭಾವತಃ ನಿಶ್ಯಠಾಃ ಕುಲಮರ್ಯಾದಾಃ ಸದ್ಭಕ್ತಾಶ್ಚ ಶಿವಪ್ರಿಯಾಃ ಲಿಂಗಧಾರೀ ಮಹಾಲಿಂಗಂ ನ ಭೇದೋ ತತ್ರ ದೃಶ್ಯತೇ ಸದ್ವೈತ್ತೋ ಭೃತ್ಯರೂಪಶ್ಚ ಸತ್ಯಂ ಸತ್ಯಂ ಸಮೋ ನ ಚ ಕರ್ತೃಭೃತ್ಯಸ್ಯ ಸನ್ಮಾರ್ಗದುರ್ಮಾರ್ಗಸಮಭಾವತಃ ಅಹಂಕಾರೋ ಮಹಾಪಾಪಂ..... ಜನ್ಮಾಂತರಸಹಸ್ರೇಷು ತಪೋಧ್ಯಾನಪರಾಯಣೈಃ ನರಾಣಾಂ ಕ್ಷೀಣಪಾಪಾನಾಂ ಶಿವೇ ಭಕ್ತಿಃ ಪ್ರಜಾಯತೇ ತತೋ ವಿಷಯವೈರಾಗ್ಯಂ ವೈರಾಗ್ಯಾತ್ ಜ್ಞಾನಸಂಭವಃ ಜ್ಞಾನೇನ ತು ಪರಾ ಭಕ್ತಿಃ ಪ್ರಸಾದಸ್ತದನಂತರಂ ಪ್ರಸಾದಾನ್ಮುಚ್ಯತೇ ಜಂತುರ್ಮುಕ್ತಃ ಶಿವಸಮೋ ಭವೇತ್ ಅಸಾರೇ ದಗ್ಧಸಂಸಾರೇ ಸಾರಂ ದೇವಿ ಶಿವಾರ್ಚನಂ ಸತ್ಯಂ ವಚ್ಮಿ ಹಿತಂ ವಚ್ಮಿ ವಚ್ಮಿ ಪಥ್ಯಂ ಪುನಃ ಪುನಃ ಉಪಾಧಿಃ ಸ್ಯಾನ್ಮಹಾಭಕ್ತಿರುಪಾಧಿಸ್ಯಾತ್ಪ್ರಸಾದಕಃ ಉಪಾಧಿಃ ಸ್ಯಾತ್ಕ್ರಿಯಾಸ್ಸರ್ವಾಶ್ಯಿವಸ್ಯಾಸ್ಯಾ[s] ಪ್ರಸಾದತಃ ನಿುಪಾಧಿಕಮದ್ಭಕ್ತಿರ್ನಿರುಪಾಧಿಕಪ್ರಸಾದತಃ ನಿರೂಪಾಧಿಕ್ರಿಯಾಸ್ಸರ್ವಾಃ ಶಿವಃ ಶೀಘ್ರಂ ಪ್ರಸೀದತಿ ದಿನೇ ದಿನೇ ವಿಶೇಷಂ ಚ ಮಾಸೇ ಮಾಸೇ ಮಹಾದ್ಭುತಂ ವತ್ಸರೇ ವತ್ಸರೇ ಚೋದ್ಯಂ ಸದ್ಭಕ್ತಸ್ಯಾಭಿವರ್ಧನಂ ದಿನೇ ದಿನೇ ವಿಶೇಷಂ ಚ ಮಾಸೇ ಮಾಸೇ ಹಿ ದೃಶ್ಯತಾಂ ವತ್ಸರೇ ವತ್ಸರೇ ನಷ್ಟಾ ಮಹಾವಾಸಕ್ರಿಯಾಸ್ತಥಾ ದಾಸೋ[s]ಹಂ ಚ ಮಹಾಖ್ಯಾತಿರ್ದಾಸೋ[s]ಹಂ ಲಾಭ ಏವ ಚ ದಾಸೋ[s]ಹಂ ಚ ಮಹತ್ಪೂಜ್ಯಂ ದಾಸೋ[s]ಹಂ ಸತ್ಯಮುಕ್ತಿದಂ ಸದ್ಭಕ್ತಸಂಗಸಿದ್ಧಿಃ ಸ್ಯಾತ್ ಸರ್ವಸಿದ್ಧಿರ್ನ ಸಂಶಯಃ ಭಕ್ತಿಜ್ರ್ಞಾನಂ ಚ ವೈರಾಗ್ಯಂ ವರ್ಧತಾಂ ಚ ದಿನೇ ದಿನೇ ಮಹತ್ಸುಖಂ ಮಹಾತೋಷೋ ಲಿಂಗಭಕ್ತ್ಯಾ ಯಥಾ ಶಿವೇ ಪ್ರಾಣಲಿಂಗಪ್ರತೀಕಾರಂ ಕುರ್ವಂತೀಹ ದುರಾತ್ಮನಃ ಅತ್ಯುಗ್ರನರಕಂ ಯಾಂತಿ ಯುಗಾನಾಂ ಸಪ್ತವಿಂಶತಿ ಹುತಭುಗ್ಪತಿತಾಂಭೋಜಗತಿಃ ಪಾತಕಿನಾಂ ಭವೇತ್ ಸುಜ್ಞಾನ ಸದ್ಭಕ್ತಿ ಪರಮವೈರಾಗ್ಯಕ್ಕೆ ಶಿವನೊಲಿವನಲ್ಲದೆ ಸಾಮಾನ್ಯ ತಟ್ಟು ಮುಟ್ಟು ತಾಗು ನಿರೋಧದಲ್ಲಿ ಅನುಸರಿಸಿದಡೆ ಶಿವ ಮೆಚ್ಚುವನೆ ? ಸತ್ಯಶುದ್ಧ ನಿತ್ಯಮುಕ್ತ ಶರಣರು ಮೆಚ್ಚುವರೆ? ಶಿವನೊಲವು ಶರಣರೊಲವು ಸೂರೆಯೇ? ದೇವದಾನವ ಮಾನವರಂತೆ ಶಿವನಲ್ಲಿ ಭಕ್ತಿಯನು ಅನುಸರಿಸಿ ನಡೆವುದು ಭಕ್ತಿಯೇ ಅಲ್ಲ. ತಾಮಸ ರಾಜಸ ಉಳ್ಳುದು ಭಕ್ತಿಯ ಕುಳವಲ್ಲ, ಸದ್ಭಕ್ತಿಗೆ ಸಲ್ಲದು. ಗುರು ಲಿಂಗ ಜಂಗಮಕ್ಕೆ ಮರುಗಿ ತ್ರಿವಿಧಪದಾರ್ಥವ ಮನೋವಾಕ್ಕಾಯದಲ್ಲಿ ವಂಚನೆಯಿಲ್ಲದೆ ಮನ ಧನವನರ್ಪಿಸಿ ಮನ ಮುಟ್ಟಿದಡೆ ಗುರು ಲಿಂಗ ಜಂಗಮದ ಘನಮಹಿಮೆಯ ವೇದಪುರಾಣಾಗಮಂಗಳಿಂ ಗುರುವಾಕ್ಯದಿಂ ಪುರಾತನರ ಮತದಿಂದರಿದು ಮರೆವುದು ಜ್ಞಾನವಲ್ಲ. ಅರಿದು ಮರೆವುದು ಶ್ವಾನಜ್ಞಾನವಲ್ಲದೆ ಇಂತಪ್ಪ ಅಜ್ಞಾನಕ್ಕೆ ಒಲಿವನೇ ಶಿವನು? ಮೆಚ್ಚುವರೇ ಶರಣರು? ಶ್ರೀಗುರುಲಿಂಗಜಂಗಮವೊಂದೆಂಬರಿವು ಕರಿಗೊಂಡು ಸದ್ಭಾವದಿಂ ಭಾವಿಸಿ ಭಾವಶುದ್ಧಿಯಾದುದು ಸುಜ್ಞಾನ. ಗುರುಲಿಂಗಜಂಗಮದ ಅರ್ಚನೆ ಪೂಜನೆ ಅರ್ಪಿತ ದಾಸೋಹಕ್ರೀವಿಡಿದು ಸಂಸಾರಕ್ರೀ ಪರಧನ ಪರಸ್ತ್ರೀ ಅನ್ಯದೈವ ಭವಿಯನು ಅನುಸರಿಸಿ ಹಿಡಿದುದು ವೈರಾಗ್ಯವೇ ? ಅಲ್ಲ, ಅದು ಮರ್ಕಟ ವೈರಾಗ್ಯ. ಇವ ಬಿಟ್ಟು ಸದ್ಭಕ್ತಿ ಸಮ್ಯಗ್‍ಜ್ಞಾನ ಪರಮವೈರಾಗ್ಯಯುತನಾಗಿ ಗುರುಲಿಂಗಜಂಗಮಕ್ಕೊಲಿದು ಒಲಿಸುವುದು, ಸದ್ಭಕ್ತಿಪ್ರಸಾದಮುಕ್ತಿಯ ಹಡೆವುದು. ಈ ಸತ್ಕ್ರಿಯಾಭಕ್ತಿಯುಳ್ಳಡೆ ಲೇಸು, ಅಲ್ಲದಿದ್ದಡೆ ಸಾವುದೇ ಲೇಸಯ್ಯ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಭಿನ್ನಪ್ರಾಣವಳಿದು ನಿರ್ಮಳಚಿತ್ತವ ಮಾಡಿ ಕಣ್ಣಾಲಿ ಉರೆ ನಟ್ಟು ಹೊರ ಸೂಸದೆ (ಕ)ಣ್ಣ ಬಣ್ಣವ ಕಳೆದು, ಉಣ್ಣನು ಉಣ್ಣದೆ ಇರನು, ತನ್ನ ನಿಲವನರಿತು ತಾನೊಬ್ಬನೆ ಇರನು. ಜನ್ಮ ಮೃತ್ಯುಗಳಲ್ಲಿ ಕಾಳು ಬೆಳುದಿಂಗಳಲ್ಲಿ, ತನ್ನ ಪ್ರಾಣ ತನಗೆ ಪ್ರಕಾಶವು. ತನ್ನೊಳಗೆ ಹೊಣೆ ಹೊಕ್ಕು, ಕುಂಬಳದ ಸೂಚಿಯ ಸುಮ್ಮಾನಿ ಶರಣನ ನಿಲವ ನೋಡಾ ! ಅಳಲಲಿಲ್ಲ ಬಳಲಲಿಲ್ಲ ಅಳಿಯಲಿಲ್ಲ ಉಳಿಯಲಿಲ್ಲ,_ಎರಡಳಿದ ನಿಲವು. ಉಭಯ ಮಧ್ಯದ ಕೊರಡಿಂಗೆ ಕುಂಟಿಯನಿಕ್ಕಿ ಕೆಡಿಸುವನು ತಾನಲ್ಲ. ಹೊರಳಲರಿಯನು ಕೊಳಚಿಯ ಉದಕದೊಳಗೆ. ಕಳಾಕಳಾ ಭೇದದಿಂದ ತೊಳತೊಳಗುವನು. ದಳಭ್ರೂಮಧ್ಯದ ಧ್ರುವಮಂಡಲವ ಮೀರಿ ಕಳೆದು ದಾಂಟಿ ಕೂಡಲಚೆನ್ನಸಂಗಯ್ಯನೊಳಗೆ ಶರಣಕಾಂತಿಯ ನಿಲವಿಂಗೆ ಶರಣು ಶರಣು !
--------------
ಚನ್ನಬಸವಣ್ಣ
ಒಂದಲ್ಲ ಎರಡಲ್ಲ ಮೂರಲ್ಲ ನಾಲ್ಕಲ್ಲ ಎಂಬತ್ತುನಾಲ್ಕುಲಕ್ಷಯೋನಿಯೊಳಗೆ ಬಾರದ ಭವಂಗಳಲ್ಲಿ ಬಂದೆ ಬಂದೆ. ಉಂಡೆ ಉಂಡೆ ಸುಖಾಸುಖಂಗಳ. ಹಿಂದಣ ಜನ್ಮ ತಾನೇನಾದಡೆಯೂ ಆಗಲಿ ಮುಂದೆ ನೀ ಕರುಣಿಸಾ, ಚೆನ್ನಮಲ್ಲಿಕಾರ್ಜುನಾ.
--------------
ಅಕ್ಕಮಹಾದೇವಿ
ಇನ್ನಷ್ಟು ... -->